ಸಿನಿ ಸುದ್ದಿ
ಕರುನಾಡ ಚಕ್ರವರ್ತಿ ಶಿವಣ್ಣನ ಬಗ್ಗೆ ನಿಮಗೆಷ್ಟು ಗೊತ್ತು ?

ಸುದ್ದಿದಿನ ವಿಶೇಷ: ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೊ ಶಿವಕುಮಾರ್ ತಮ್ಮ ಅಭಿನಯದ ಮೂಲಕ ನಾಡಿನಾದ್ಯಂತ ಲಕ್ಷಾಂತರ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ಸದ್ಯ ನಟ ಶಿವಕುಮಾರ್ ಅವರು ತಮ್ಮ 56ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರ ಕುರಿತ ಸ್ವಾರಸ್ಯಕರ ಮಾಹಿತಿ ಇಲ್ಲಿವೆ ಓದಿ.
ಕರುನಾಡ ಚಕ್ರವರ್ತಿ ಶಿವಕುಮಾರ್ ಕುರಿತು ನಿಮಗೆಷ್ಟು ಗೊತ್ತು
- ಶಿವಣ್ಣ ಅವರ ಮೂಲ ಹೆಸರು ನಾಗರಾಜು ಶಿವ ಪುಟ್ಟಸ್ವಾಮಿ
- ಶಿವರಾಜ್ ಕುಮಾರ್ ಅವರು ಹುಟ್ಟಿದ್ದು ಮದ್ರಾಸ್ನಲ್ಲಿ
- ಓದಿದ್ದು ಚೆನ್ನೈನ ದಿ ನ್ಯೂ ಕಾಲೇಜ್ನಲ್ಲಿ
- ತೆರೆ ಮೇಲೆ ನಾಯಕಿ ಜತೆ ಶಿವಣ್ಣ ಕೆಮಿಸ್ಟ್ರಿ ಚೆನ್ನಾಗಿದೆ ಅನ್ನೋರೇ ಜಾಸ್ತಿ. ಒಂದು ವಿಷಯ ಗೊತ್ತಿರಲಿ, ಶಿವಣ್ಣಗೆ ಕೆಮಿಸ್ಟ್ರಿ ಅಂದ್ರೆ ಇಷ್ಟ. ಅವರು ಓದಿದ್ದು ಬಿಎಸ್ಸಿ.
- ಖ್ಯಾತ ನಿರ್ದೇಶಕ ಬಾಲ ಚಂದರ್ ಅವರೊಟ್ಟಿಗೆ ಎಂಜಿಆರ್ ಸರಕಾರಿ ನಟನಾ ತರಬೇತಿ ಸಂಸ್ಥೆಯಲ್ಲಿ ಶಿವಣ್ಣ ನಟನೆ ಕಲಿತರು.
- ಶಿವಣ್ಣ ಅವರು ತಮ್ಮ ಮೊದಲ ಚಿತ್ರ ಆನಂದ್ನಲ್ಲಿ ನಟಿಸುವ ಮುನ್ನ ಚೆನ್ನೈನ ವೆಂಪಟ್ಟಿ ಚಿನ್ನಿ ಸತ್ಯಂ ಎಂಬಲ್ಲಿ ಕುಚುಪುಡಿ ಕಲಿತಿದ್ದರು.
- ಶಿವರಾಜ್ ಕುಮಾರ್ ಅವರಿಗೆ ಕಮಲ್ ಹಾಸನ್ ಅಂದ್ರೆ ಅಚ್ಚುಮೆಚ್ಚು. ಕಮಲ್ ಅವರ ಯಾವುದೇ ಸಿನಿಮಾ ಮೊದಲ ಶೋ ನೋಡಿದ್ರೆನೇ ಶಿವಣ್ಣ ಅವರಿಗೆ ಸಮಾಧಾನ
- ಈ ವರ್ಷದ ಫೋರ್ಬ್ಸ್ ಪಟ್ಟಿಯ ಪ್ರಕಾರ ಶಿವರಾಜ್ ಕುಮಾರ್ ಅವರ ಆಸ್ತಿ 641 ಕೋಟಿ ರೂ.
- ಶಿವಣ್ಣ ಅವರ ಮೂರು ಚಿತ್ರಗಳು ಸತತವಾಗಿ ಹಿಟ್ ಆದ ನಂತರ ಮಾಧ್ಯಮಗಳು ಹಾಗೂ ಅಭಿಮಾನಿಗಳು ಪ್ರೀತಿಯಿಂದ ಹ್ಯಾಟ್ರಿಕ್ ಹೀರೊ ಎಂಬ ಬಿರುದು ನೀಡಿದರು.
- ಶಿವಣ್ಣ ಅವರಿಗೆ ಡಾಕ್ಟರೇಟ್ ನೀಡಿದ್ದು ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯ
- ಸುಗ್ರೀವ ಸಿನಿಮಾದ ಶೂಟಿಂಗ್ ಮುಗಿದದ್ದು ಕೇವಲ 18 ಗಂಟೆಗಳಲ್ಲಿ.
- ಶಿವಣ್ಣ ನಟನೆಯ ಚೆಲುವೆಯೇ ನಿನ್ನ ನೋಡಲು ಸಿನಿಮಾವನ್ನು ಜಗತ್ತಿನ ಎಂಟು ಅದ್ಭುತಗಳ ಎದುರು ಶೂಟ್ ಮಾಡಲಾಗಿದೆ.
- ಶಿವಣ್ಣ ತಮ್ಮ ತಲೆಕೂದಲಿಗೆ ಕೈ ಹಾಕುವ ಅವಕಾಶ ಯಾವ ಮೇಕಪ್ ಕಲಾವಿದರಿಗೂ ಕೊಟ್ಟಿಲ್ಲ. ಆದರೆ, ಓಂ ಸಿನಿಮಾ ಚಿತ್ರೀಕರಣದ ವೇಳೆ ಉಪೇಂದ್ರ ಅವರೇ ಶಿವಣ್ಣಗೆ ತಲೆ ಬಾಚಿದ್ದರಂತೆ.
https://m.facebook.com/story.php?story_fbid=371453633381288&id=299499370576715

ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.
ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂ.ಇ.ಎಸ್ ಗ್ರೌಂಡ್ ನಲ್ಲಿ ‘ಘೋಸ್ಟ್’ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.
ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ‘ಘೋಸ್ಟ್’ ಚಿತ್ರವನ್ನು ಆರ್.ಜೆ. ಶ್ರೀನಿ ಬರೆದು, ನಿರ್ದೇಶಿಸಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ. ಶಿವರಾಜಕುಮಾರ್ ಜೊತೆ ಮಲಯಾಳಂ ನಟ ಜಯರಾಮ್, ಹಿಂದಿ ನಟ ಅನುಪಮ್ ಖೇರ್, ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ನಿರ್ದೇಶಕ ಎಂಜಿ ಶ್ರೀನಿವಾಸ್ ಹಾಗೂ ಇನ್ನಿತರರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ7 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ3 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ2 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ5 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು