Connect with us

ಸಿನಿ ಸುದ್ದಿ

ಹೀರೋ ತರಾನಾ? ಛಾನ್ಸೇ ಇಲ್ಲ, ನೋ ವೇ ; ನಾನ್ ಹೀರೋನೇ..! ಅಮರ್ ಟೀಸರ್ ಔಟ್ : ಡಿ ಬಾಸ್ ಏನಂದ್ರು ಗೊತ್ತಾ..?

Published

on

ಸುದ್ದಿದಿನ ಡೆಸ್ಕ್ : ಯಂಗ್ ರೆಬೆಲ್ ಸ್ಟಾರ್ ಅಭಿನಯದ ಕನ್ನಡದ ಬಹು ನಿರೀಕ್ಷಿತ ಸಿನೆಮಾ ‘ಅಮರ್’ ಸಿನೆಮಾದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಅಮರ್ ಡೈಲಾಗ್ ಮತ್ತು ಲುಕ್ ಅಭಿಮಾನಿಗಳ ಮನಗೆಲ್ಲುವುದರಲ್ಲಿ ಯಾವುದೇ ಡೌಟಿಲ್ಲ.

ಅಭಿಷೇಕ್ ಅವರ ಖಡಕ್ ವಾಯ್ಸ್ ನೋಡುಗರನ್ನ ಮೋಡಿ ಮಾಡುವುದರಲ್ಲಿ ಯಾವ ಅನುಮಾನವೂ ಇಲ್ಲ. ಅಂದಹಾಗೆ ಈ ಸಿನೆಮಾದ ನಿರ್ದೇಶನದ ಹೊಣೆ ಹೊತ್ತಿರುವವರು ನಾಗಶೇಖರ್. ನಿರ್ಮಾಪಕರು ಸಂದೇಶ್ ನಾಗರಾಜ್.

ಟೀಸರ್ ನೋಡಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾರೈಕೆ

ನನ್ನ ಪ್ರೀತಿಯ ತಮ್ಮ ಅಭಿ ಅಂಬರೀಷ್ ‘ಅಮರ್’ ಚಿತ್ರದ ಮೂಲಕ ಯಂಗ್ ರೆಬೆಲ್ ಸ್ಟಾರ್ ಆಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ….

Posted by Darshan Thoogudeepa Srinivas on Wednesday, 13 February 2019

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ19 hours ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

ದಿನದ ಸುದ್ದಿ20 hours ago

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ...

ದಿನದ ಸುದ್ದಿ20 hours ago

ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ...

ದಿನದ ಸುದ್ದಿ22 hours ago

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ

ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ...

ದಿನದ ಸುದ್ದಿ2 days ago

ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್

ಸುದ್ದಿದಿನ,ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಇಂದು ತಿಳಿಸಿದರು....

ದಿನದ ಸುದ್ದಿ3 days ago

ಕವಿತೆ | ಮತ್ತಿನ ಕುಣಿಕೆ

ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ...

ದಿನದ ಸುದ್ದಿ4 days ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ5 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ6 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

Trending