ನೆಲದನಿ
ಕರ್ನಾಟಕವೆಂದರೆ ಕರುಣೆಯಿಲ್ಲವೇ..? ಕನ್ನಡವೆಂದರೆ ಹೆಮ್ಮೆಯಲ್ಲವೇ..?
“ಉದಯವಾಗಲಿ ಚಲುವ ಕನ್ನಡನಾಡು
ಬದುಕು ಬಲಹೀನ ನಿಧಿಯು ಸದಭಿಮಾನದ ಗೂಡು”
ಅಂದು 1924 ನೇ ಇಸವಿ ಬೆಳಗಾವಿಯಲ್ಲಿ ಗಾಂಧೀಜಿಯವರು ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸಂಗೀತ ವಿದೂಷಿ ಗಂಗೂಬಾಯಿ ಹಾನಗಲ್ ರವರು ಬಾಲಕಿಯಾಗಿದ್ದಾಗ ಹಾಡಿದಂಥ ಹಾಡಿದು. ಇದನ್ನು ಹುಯಿಲಗೋಳ ನಾರಾಯಣರಾಯರು ಬರೆದಂಥ ರಾಷ್ಟ್ರಗೀತೆ. ಹೌದು ಅಂದಿನ ಕಾಲಕ್ಕೆ ಇದು ಕನ್ನಡ ಭಾಷೆಗೆ ರಾಷ್ಟ್ರಗೀತೆಯೇ ಸರಿ. ಮೊದಲಿನಿಂದಲೂ ಭಾಷಾತೀತ ರಾಷ್ಟವಾಗಿರುವ ಭಾರತದಲ್ಲಿ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವೂ ದ್ರಾವಿಡಭಾಷೆಗಳಲ್ಲಿ ಒಂದು. ಇಂಥಾ ಭಾಷಾಪ್ರೇಮ ಹೊತ್ತ ಹುಯಿಲಗೋಳ ನಾರಾಯಣರಾಯರು ಕನ್ನಡಕ್ಕಾಗಿಯೇ ಬರೆದಂಥ ಅದ್ಭುತ ಅರ್ಥಗಳುಳ್ಳ ಸಾಲಿನ ಪದಗಳು. ಸ್ವತಂತ್ರ ಪೂರ್ವದಲ್ಲೇ ಭಾಷಾಭಿಮಾನದಿಂದ ಒಗ್ಗೂಡುವ ಪ್ರಯತ್ನಕ್ಕೆ ನಾಂದಿಯಾಯಿತೇನೋ ಇವರ ಬರಹದ ಹಾಡು. ಹುಯಿಲಗೋಳ ನಾರಾಯಣರಾಯರು ಕನ್ನಡಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು.
ಏಕೀಕರಣಗೊಂಡ ಕರ್ನಾಟಕ 60 ವಸಂತಗಳನ್ನ ಪೂರೈಸಿ ವಜ್ರಮಹೋತ್ಸವವನ್ನೂ ಆಚರಿಸಿಕೊಂಡಿದೆ. ಕನ್ನಡ ಭಾಷಿಕರು ವಾಸಿಸುವ ಬಹುತೇಕ ಪ್ರದೇಶಗಳೆಲ್ಲಾ ಪ್ರಥಮವಾಗಿ ಒಂದಾದ ಈ ಉತ್ಸವಕ್ಕೆ ಏನಿಲ್ಲವೆಂದರೂ ಒಂದೂವರೆ ಶತಮಾನದ ಹಿನ್ನೆಲೆ ಇದೆ. ಹಿಂದೆ ಒಂದು ಭೂಭಾಗಕ್ಕೆ ಕರ್ನಾಟಕವೆಂಬ ಹೆಸರು ಇರಲಿಲ್ಲ. ಕನ್ನಡ ಭಾಷೆ ಮಾತನಾಡುವ ಸ್ಥಳಗಳಲ್ಲಿ ಕನ್ನಡಿಗರೆ ಆಳ್ವಿಕೆ ನಡೆಸಿದರು. ಕದಂಬರು ಕನ್ನಡ ಮಾತೃಭಾಷೆಯ ರಾಜಮನೆತನಗಳಲ್ಲಿ ಮೊದಲಿಗರು. ಇವರ ಬಳಿಕ ಹಲವಾರು ರಾಜವಂಶಗಳು ನೂರಾರು ವರ್ಷಗಳ ಕಾಲ ವಿವಿಧ ಭಾಗಗಳಲ್ಲಿ ಆಡಳಿತ ನಡೆಸಿದರು. ಕನ್ನಡ ಭಾಷೆಗೆ ಆಗ ಮಾನ್ಯತೆ ಇತ್ತು.
ಬ್ರಿಟಿಷರು ಭಾರತಕ್ಕೆ ಬಂದು ಭಾರತವನ್ನೇ ತಮ್ಮ ಅಂಕೆಗೆ ತೆಗೆದುಕೊಳ್ಳಲು ಆರಂಭಿಸಿದರು. ಅನೇಕ ದೌರ್ಬಲ್ಯಗಳಿಂದ ನಮ್ಮ ನೂರೆಂಟು ಸಂಸ್ಥಾನಗಳು ಅವರ ವಶಕ್ಕೆ ಹೋದವು. ಬೆರಳೆನಿಕೆಯಷ್ಟು ರಾಜರು ಮಾತ್ರ ಬಿಳಿಯರ ವಿರುದ್ಧ ಸೆಟೆದು ನಿಂತರು. ಅಂಥವರಲ್ಲಿ ಮೈಸೂರು ಸಂಸ್ಥಾನದ ಟಿಪ್ಪು ಸುಲ್ತಾನ್ ಕೂಡ ಒಬ್ಬರು. ಕೊನೆಯ ಮೈಸೂರು ಯುದ್ಧದಲ್ಲಿ ಟಿಪ್ಪು ಸುಲ್ತಾನ್ ಪತನಗೊಂಡಿದ್ದು 1799ರಲ್ಲಿ. ಆ ಹೊತ್ತಿಗಾಗಲೇ ದೇಶದೆಲ್ಲೆಡೆ ಬ್ರಿಟಿಷರ ಆಡಳಿತ ಶುರುವಾಗಿತ್ತು. ಗೆದ್ದ ಪ್ರಾಂತ್ಯಗಳನ್ನೆಲ್ಲಾ ಅವರಿಷ್ಟಕ್ಕೆ ಬಂದಂತೆ ಹಂಚಿಕೆ ಮಾಡಲು ಆರಂಭಿಸಿದರು. ಇಂಥಹ ವಿಭಜನೆ ಒಳಪಟ್ಟವರಲ್ಲಿ ಕನ್ನಡಿಗರೂ ಸೇರಿದ್ದರು. ಕನ್ನಡ ಮಾತನಾಡುವ ಪ್ರದೇಶಗಳನ್ನು ಸುಮಾರು 20 ಕ್ಕೂ ಹೆಚ್ಚು ಭಾಗಗಳಾಗಿ ವಿಂಗಡಿಸಿದರು. ಕೆಲವು ಪ್ರದೇಶಗಳನ್ನು ತಾವೇ ಇಟ್ಟುಕೊಂಡರೆ ಇನ್ನೂ ಹಲವು ಪ್ರದೇಶಗಳನ್ನು ತಮಗೆ ಬೆಂಬಲಿಸುತ್ತಿದ್ದ ಸಂಸ್ಥಾನಗಳಿಗೆ ಬಿಟ್ಟುಕೊಟ್ಟರು. ದುರಾದೃಷ್ಟವೆಂದರೆ ಅವರು ಅನ್ಯ ಭಾಷಿಕರಾಗಿದ್ದರು. ಅವರ ಆಳ್ವಕೆಯಲ್ಲಿ ಕನ್ನಡ ಮಾತನಾಡುವವರು ಅಕ್ಷರಶಃ ಅನಾಥರಾದರು.
ಮರಾಠಿ, ಉರ್ದು, ತಮಿಳು, ತೆಲುಗು ಭಾಷಿಕರ ನಡುವೆ ಕನ್ನಡಿಗರು ಇರಲೇಬೇಕಾದ ಅನಿವಾರ್ಯ ಸಂದರ್ಭ ಸೃಷ್ಟಿಯಾಯಿತು. ಆಡಳಿತಗಾರರು ಕನ್ನಡಿಗರ ಆತಂಕ ದೂರ ಮಾಡುವ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿರಲಿಲ್ಲ. ನಮಗೆ ಅನ್ಯಾಯವಾಗುತ್ತಿದೆ, ನಮ್ಮ ಭಾಷೆಗೆ ತೊಂದರೆಯಾಗುತ್ತಿದೆ ಎಂದು ಒಗ್ಗಟ್ಟಾಗಿ ಹೇಳುವ ಪರಿಸ್ಥಿತಿಯೂ ಕನ್ನಡಿಗರಿಗೆ ಇರಲಿಲ್ಲ. ನಮ್ಮದೇ ನೆಲದಲ್ಲಿ ನಾವೇ ಅಲ್ಪ ಸಂಖ್ಯಾತರೆನ್ನಿಸಿಕೊಂಡು ಬವಣೆ ಪಡುವ ಗೋಳು ನಮ್ಮದಾಗಿತ್ತು. ಸಾವಿರಾರು ವರ್ಷಗಳಿಂದ ಉಳಿದುಕೊಂಡಿದ್ದ, ಕನ್ನಡಿಗರ ಸಂಸ್ಕೃತಿಗೆ ಧಕ್ಕೆ ಉಂಟಾಯಿತು. ಇಪ್ಪತ್ತಕ್ಕೂ ಹೆಚ್ಚು ದ್ವೀಪಗಳಾಗಿ ಹಂಚಿ ಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಕನ್ನಡತನ ಉಳಿಸಿ ಕೊಳ್ಳುವುದು ಅಸಾಧ್ಯವಾಗಿತ್ತು.ಅಚ್ಚ ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಅನ್ಯಭಾಷಿಕರು ಅವರ ಭಾಷೆಯನ್ನು ಸುಕಾ ಸುಮ್ಮನೆ ಹೇರುತ್ತಿದ್ದರು. ಆಡಳಿತ ಅವರ ಕೈಯಲ್ಲಿದ್ದರಿಂದ ಕನ್ನಡಿಗರು ಮಣಿಯಲೇಬೇಕಾದ ಅನಿವಾರ್ಯ ಸ್ಥಿತಿ ಅದು. ಭಾಷೆ ಕಳೆದುಕೊಳ್ಳುತ್ತಿರುವ ಭೀತಿ ಒಂದೆಡೆಯಾದರೆ ಅನ್ಯಭಾಷಿಕರ ದಬ್ಬಾಳಿಕೆಗೆ ಕನ್ನಡಿಗರು ಗುರಿಯಾದರು. ಇಂಥಹ ಯಾತನಾಮಯ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕವಾಗಿ, ಪ್ರಾದೇಶಿಕವಾಗಿ ಕನ್ನಡಿಗರೆಲ್ಲಾ ಒಂದಾಗಬೇಕೆಂಬ ಕೂಗು ಎದ್ದಿತು. ತಾತ್ವಿಕ ತಳಹದಿಯ ಮೇಲೆ ಕನ್ನಡ ಸಂಸ್ಕೃತಿ-ಕನ್ನಡಿಗರು ಒಂದುಗೂಡಲು ಆರಂಭವಾದ ಆಂದೋಲನವೇ ಕನ್ನಡ ಏಕೀಕರಣ ಚಳುವಳಿ. ಕನ್ನಡಕ್ಕೆ, ಕನ್ನಡಿಗರಿಗೆ ನಾವೆಲ್ಲಾ ಒಂದಾಗಬೇಕೆಂದು ಮೊದ ಮೊದಲಿಗೆ ಪ್ರೇರಣೆ ಕೊಟ್ಟವರು ಅಭಿವ್ಯಕ್ತಿ ಮಾಡಲು ಅವಕಾಶವಿದ್ದ ಕವಿಗಳು, ಸಾಹಿತಿಗಳು, ಕಲಾವಿದರು.ಕಥೆ-ಕವನ-ಕಾದಂಬರಿ-ಚಿತ್ರ, ಬರಹಗಳಲ್ಲಿ ಕನ್ನಡತ್ವ ಕಾಣಿಸಿಕೊಳ್ಳತೊಡಗಿತು.
ಆ ಕಾಲಘಟ್ಟದಲ್ಲಿ ಕನ್ನಡಿಗರೆಲ್ಲರೂ ಒಂದಾಗಿ ಹೋರಾಟ ನಡೆಸುವ ವಾತಾವರಣ ಇರಲಿಲ್ಲ. ಇಂಗ್ಲೆಂಡ್ ನ ವ್ಯಾಪಾರಿ ಸಂಸ್ಥೆಯೊಂದು ಭಾರತದಲ್ಲಿ ಅಂದಾದುಂದಿ ಆಡಳಿತ ನಡೆಸುತ್ತಿತ್ತು. ಇದರಿಂದ ಇಂಗ್ಲೆಂಡ್ ನ ಪ್ರತಿಷ್ಟೆಗೆ ಪೆಟ್ಟು ಬಿದ್ದಾಗ ಸ್ವತಃ ಬ್ರಿಟನ್ ರಾಣಿಯೇ ಭಾರತದ ಆಡಳಿತವನ್ನು ನೇರವಾಗಿ ಕೈಗೆತ್ತಿಕೊಂಡರು. ಆಗ ಅಲ್ಲಿದ್ದ ಬಿಗಿವಾತಾವರಣ ಕಡಿಮೆಯಾಯಿತು. ಆಗ ಆಡಳಿತ ನಡೆಸಲು ಬಂದ ಕೆಲವು ಅಧಿಕಾರಿಗಳು ಕನ್ನಡಿಗರ ಪರಿಪಾಟಲುಗಳನ್ನ ನೋಡಿ ವಾಸ್ತವತೆ ಸ್ಥಿತಿಯನ್ನು ಮೇಲಾಧಿಕಾರಿಗಳಿಗೆ ವರದಿ ನೀಡಿದರು. ಆ ಸಮಯದಲ್ಲಿ ಕನ್ನಡಿಗರ ಬಗೆಗೆ ಸಹಾನುಭೂತಿ ಸಿಕ್ಕಿತು. ಆದರೆ ತಾವು ಇಷ್ಟೂ ವರ್ಷ ಕಳೆದುಕೊಂಡಿದ್ದನ್ನು ಮತ್ತೆ ಪಡೆಯಬೇಕಾದರೆ ಒಗ್ಗಟ್ಟಾಗಬೇಕೆಂಬ ಅಭಿಲಾಷೆ ಕನ್ನಡಿಗರಲ್ಲಿ ಮೂಡಿತು.ಅದಕ್ಕೆ ಬ್ರಿಟಿಷ್ ಅಧಿಕಾರಿಗಳು-ಸಂಶೋಧಕರು ಬೆಂಬಲ ಕೊಟ್ಟರು. ಕೇವಲ ಅನುಕೂಲಕ್ಕೆ ತಕ್ಕಂತೆ ಪ್ರದೇಶಗಳನ್ನು ತುಂಡು ತುಂಡು ಮಾಡಿದ್ದ ಬ್ರಿಟಿಷ್ ಸರ್ಕಾರದ ನೀತಿಯನ್ನು ದೇಶದ ಕೆಲವೆಡೆ ವಿರೋಧಿಸುವ ಕಾರ್ಯ ನಡೆಯಿತು.ವಾಸ್ತವಾಂಶ ಗೊತ್ತಿದ್ದ ಕೆಲ ಇಂಗ್ಲೀಷ್ ಅಧಿಕಾರಿಗಳೂ “ಭಾಷೆ”ಯ ಆಧಾರದ ಮೇಲೆ ಪ್ರಾಂತ್ಯಗಳನ್ನು ವಿಂಗಡಿಸಲು ಸೂಚಿಸಿದರು. ಆದರೆ ಇದರಿಂದ ಹೆಚ್ಚಿನ ಪ್ರಗತಿಯೇನೂ ಆಗಲಿಲ್ಲ. ಯಥಾಸ್ಥಿತಿ ಮುಂದುವರಿಯಿತು. ಕರ್ನಾಟಕದಲ್ಲಿ ಕನ್ನಡಕ್ಕೆ ಶಾಲೆಗಳಲ್ಲಿ ಹೆಚ್ವಿನ ಮಾನ್ಯತೆ ಸಿಕ್ಕಿತು. ಕೆಲವು ಕನ್ನಡ ಶಾಲೆಗಳು ಪ್ರಾರಂಭವಾದವು.
19 ನೇ ಶತಮಾನದ ಕೊನೆ ವೇಳೆಗೆ ಭಾರತ ಸ್ವತಂತ್ರವಾಗಬೇಕೆಂಬ ಕೂಗು ಎಲ್ಲೆಡೆ ಕೇಳಿಬಂತು. ಆಡಳಿತದ ಅನುಕೂಲಕ್ಕಾಗಿ ವಿಭಜನೆಯಾದ ಭಾಷಿಕರೂ ಸ್ವಾತಂತ್ರ್ಯ ಚಳುವಳಿಗೆ ದೊಡ್ಡ ಪ್ರಮಾಣದಲ್ಲಿಯೇ ಕೈ ಜೋಡಿಸಿದರು. ಭಾಷಾವಾರು ಪ್ರಾಂತ್ಯಗಳು ರಚನೆಗೊಳ್ಳಬೇಕೆಂಬ ಒಳಷರತ್ತಿನೊಡನೆ ಹೋರಾಟ ಮೊದಲಾಯಿತು. ಅದಕ್ಕೆ ಕನ್ನಡ ನಾಡು ಸೇರಿತು, ಕರ್ನಾಟಕ ಏಕೀಕರಣದ ಆಗ್ರಹವೂ ಅದರಲ್ಲಿತ್ತು. ಕನ್ನಡ ಮಾತನಾಡುವ. ಪ್ರದೇಶಗಳಲ್ಲಿ ಮುಂಬೈ ಭಾಗ ಹಾಗೂ ನಿಜಾಮ್ ಆಡಳಿತದ ಪ್ರಾಂತ್ಯಗಳು ಕನ್ನಡಿಗರಿಗೆ ತೊಂದರೆ ಒಡ್ಡಿದ್ದವು. ಒಂದೆಡೆ ಮರಾಠಿ ಪ್ರಾಬಲ್ಯ ಇನ್ನೊಂದೆಡೆ ಉರ್ದು ಹೇರಿಕೆ. ಕನ್ನಡಿಗರದು ಉಸಿರು ಕಟ್ಟಿದಂತ ಪರಿಸ್ಥಿತಿ. ಮುಂಬೈ ವಲಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳೆಸಲು ಹೆಚ್ಚಿನ ಒತ್ತಾಸೆಗಳು ಆರಂಭಗೊಂಡರು. ಇದಕ್ಕೆ ಶಾಂತ ಕವಿಗಳು, ಡೆಪ್ಯೂಟಿ ಚೆನ್ನಪ್ಪನವರು ಭದ್ರ ಬುನಾದಿಯನ್ನು ಒದಗಿಸಿಕೊಟ್ಟರು. ಕನ್ನಡದ ಚಟುವಟಿಕೆಗಳು ಶಾಲೆಗಳ ಹೊರಗೂ ಪ್ರಾರಂಭಗೊಂಡವು. ರಾ.ಹ ದೇಶಪಾಂಡೆ ಅವರು ಸಮಾನ ಮನಸ್ಕರೊಂದಿಗೆ ಸ್ಥಾಪಿಸಿದ ‘ಕರ್ನಾಟಕ ವಿದ್ಯಾವರ್ಧಕ ಸಂಘ’ ಕನ್ನಡ ಪರದನಿ ಎತ್ತಲು ಸಾಂಸ್ಥಿಕ ರೂಪಕೊಟ್ಟಿತು. ಕನ್ನಡ ‘ವಾಗ್ಭೂಷಣ’ ಪತ್ರಿಕೆ ಏಕೀಕರಣದ ಅಗತ್ಯತೆಯನ್ನು ಸ್ಪಷ್ಟವಾಗಿ ಪ್ರಕಟಿಸಿತು. ಅಸ್ಸಾಂ, ಬಂಗಾಲ, ಗುಜರಾತ್ ಮೊದಲಾದ ಕಡೆಗಳಲ್ಲಿ ಸ್ಥಳೀಯ ಭಾಷೆಗಳ ನೆಲೆಯಲ್ಲಿ ನಡೆಸಿದ ಚಳುವಳಿಗಳನ್ನು ಗಮನಿಸುತ್ತಿದ್ದ ಮುಂಬಯಿ ಭಾಗದ ಕನ್ನಡಿಗರು ಕನ್ನಡ ಏಕೀಕರಣದ ಧ್ವನಿಯನ್ನು ನಿರಂತರವಾಗಿ ಉಳಿಸಿಕೊಂಡು ಬಂದರು. ಇದೇ ಹಾದಿಯಲ್ಲಿ ಅಖಿಲ ಕರ್ನಾಟಕ ಗ್ರಂಥಕರ ಸಮ್ಮೇಳನವೂ ನಡೆಯಿತು.ಎಲ್ಲವೂ ಏಕೀಕರಣಕ್ಕೆ ಪೂರಕವಾದ ವಾತಾವರಣವನ್ನು ಹುಟ್ಟುಹಾಕಿದವು. ಮೈಸೂರು ಪ್ರಾಂತ್ಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು 1915 ರಲ್ಲಿ ಜನ್ಮತಾಳಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಕನ್ನಡ ಮಾತನಾಡುವ ಪ್ರದೇಶಗಳಲ್ಲಿ ಏರ್ಪಡಿಸಿ ಅಲ್ಲಿ ಕನ್ನಡಪರ, ಕರ್ನಾಟಕಪರ ಚಿಂತನೆಗಳು ಹೊರ ಹೊಮ್ಮುವಂತೆ ಮಾಡಿತು.
ಕರ್ನಾಟಕದ ಭವ್ಯ ಇತಿಹಾಸ, ಕನ್ನಡ ಸಾಹಿತ್ಯದ ಶ್ರೀಮಂತಿಕೆ , ಕನ್ನಡ ನೆಲದ ವೈಶಿಷ್ಟ್ಯ ಮುಂತಾದ ವಿಷಯಗಳನ್ನು ಒಳಗೊಂಡ ಹಲವಾರು ಕೃತಿಗಳು ಕನ್ನಡಿಗರ ಕೈ ತಲುಪಿದವು. ಎಲ್ಲವೂ ಕರ್ನಾಟಕತ್ವವನ್ನು ಪ್ರತಿಪಾದಿಸುತ್ತಿದ್ದವು. ರಾಷ್ಟೀಯ ಹೋರಾಟದ ಜೊತೆ ಜೊತೆಗೆ ಕರ್ನಾಟಕ ಏಕೀಕರಣ ಚಳುವಳಿಯೂ ಹೆಜ್ಜೆ ಹಾಕಿತು.ಭಾರತದಲ್ಲಿ ಭಾಷಾವಾರು ಪ್ರಾಂತ್ಯಗಳು ಅಗತ್ಯವೆಂಬ ಮುಂದಾಲೋಚನೆಯಿಂದ ಕಾಂಗ್ರೆಸ್ ಪಕ್ಷ ಸಮಿತಿಗಳು ಭಾಷೆಯ ಆಧಾರದ ಘಟಕಗಳಾಗುವಂತೆ ಶ್ರಮಿಸಿದ್ದವು. ಮಹಾತ್ಮಗಾಂಧಿ ಅವರು ಅಖಿಲ ಭಾರತ ಕಾಂಗ್ರೆಸ್ ವಾರ್ಷಿಕ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಅದರ ಇತಿಹಾಸದಲ್ಲಿ ಒಮ್ಮೆ ಮಾತ್ರ. ಅದು ನಡೆದದ್ದು ಕನ್ನಡದ ನೆಲ ಬೆಳಗಾವಿಯಲ್ಲಿ (1924). ಇದೇ ಸಮ್ಮೇಳನ ಕರ್ನಾಟಕ ಏಕೀಕರಣದ ಮುನ್ನುಡಿ ಬರೆಯಲು ಪ್ರೇರೇಪಿಸಿತು. ಕರ್ನಾಟಕ ಏಕೀಕರಣ ಚಳುವಳಿ ಜೀವಂತವಾಗಿಯೇ ಇತ್ತು.ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಅಗ್ರಗಣ್ಯ ನಾಯಕರಲ್ಲೊಭ್ಬರಾದ ಎಸ್.ನಿಜಲಿಂಗಪ್ಪ ಎಡಬಿಡದೇ ಆಗಿನ ಪ್ರಧಾನಿ ಸೆಹರೂ ಅವರನ್ನು ಏಕೀಕರಣಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ನೆನಪು ಮಾಡುತ್ತಲೇ ಇದ್ದರು. ಸ್ವಾತಂತ್ರ್ಯಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಆಶ್ವಾಸನೆಗಳನ್ನು ಒಪ್ಪಿಕೊಳ್ಳಲು ಕೇಂದ್ರ ಸರ್ಕಾರ ಹಿಂದೇಟು ಹಾಕಿತು. ಆಂಧ್ರ ಉದಯದ ಸಮಯದಲ್ಲಿ ಬಳ್ಳಾರಿ ಮೈಸೂರಿಗೆ ಸೇರ್ಪಡೆಯಾದ ಸಂಭ್ರಮದ ಗಳಿಗೆಯಲ್ಲಿ ಯುವಕ ರಂಜಾನ್ ಸಾಬ್ ಅಸುನೀಗಿದರು. ಈ ಪ್ರಾಣಿಬಲಿ ಹಿಂದೆಯೇ ಕನ್ನಡಿಗರು ಅಮರಾಣಾಂತ ಉಪವಾಸ, ಸತ್ಯಾಗ್ರಹ ಅಸ್ತ್ರಪ್ರಯೋಗಿಸಿದರು.ದೊಡ್ಡ ಮೇಟಿ ಹಾಗೂ ಅದರ ಗುಂಚಿ ಶಂಕರಕಲ್ಲನ ಗೌಡ ಪಾಟೀಲರು ಉಪವಾಸ ಕೂತರು. ಪರಿಸ್ಥಿತಿ ಬಿಗಡಾಯಿಸಿತು. ಅಧಿಕಾರರೂಢ ಕಾಂಗ್ರೆಸ್ ಕೈಚೆಲ್ಲಿ ಕುಳಿತಾಗ ಕಾಂಗ್ರೆಸೇತರ ಪಕ್ಷಗಳು ಚಳುವಳಿ ಕೈಗೆತ್ತಿಕೊಂಡವು. ಅದರಲ್ಲಿ ಕಮ್ಯುನಿಷ್ಟ್ ಹಾಗೂ ಪ್ರಜಾ ಸಮಾಜವಾದಿ ಪಕ್ಷವಾದಿ ಮುಖ್ಯವಾದವು.
ಆ ವೇಳೆಗೆ ಅಸ್ತಿತ್ವಕ್ಕೆ ಬಂದಿದ್ದ ಅಖಿಲ ಕರ್ನಾಟಕ ರಾಜ್ಯ ನಿರ್ಮಾಣ ಪರಿಷತ್ತು ಏಕೀಕರಣಕ್ಕಾಗಿ ಹೋರಾಟಕ್ಕೆ ಇಳಿಯಿತು. ಪ್ರತಿಭಟನೆ-ಮೆರವಣಿಗೆ ಉಪವಾಸ, ಸಮ್ಮೇಳನ ಇವೆಲ್ಲ ಅವ್ಯಾಹತವಾಗಿ ನಡೆಯಲಾರಂಭಿಸಿದ್ದರಿಂದ ಅನ್ಯಮಾರ್ಗವಿಲ್ಲದೆ ಕೇಂದ್ರ ಸರ್ಕಾರ ನಾ!! ಫಜಲ್ ಆಲಿ ಅವರ ನೇತೃತ್ವದಲ್ಲಿ ಇನ್ನೊಂದು ಆಯೋಗವನ್ನು ನೇಮಿಸಿತು. ಜವಾಹರಲಾಲ ನೆಹರೂ ಅವರಿಗೆ ಕರ್ನಾಟಕ ಏಕೀಕರಣ ಮಾಡಬೇಕಾದ ಅನಿವಾರ್ಯತೆ ಅರ್ಥವಾಗಿತ್ತು. ರಾಜ್ಯ ವಿಂಗಡನಾ ಆಯೋಗವೆಂದು ಉಲ್ಲೇಖಿಸಲ್ಪಟ್ಟ ಈ ಸಮಿತಿಯಲ್ಕಿ ಎಚ್.ಎನ್. ಕುಂಜ್ರು ಹಾಗೂ ಕೆ.ಎಂ. ಫಣಿಕ್ಕರ್ ಸದಸ್ಯರಾಗಿದ್ದರು. ಈ ಮೂವರ ಸಮಿತಿ ಕರ್ನಾಟಕ ಏಕೀಕರಣದ ಎಲ್ಲಾ ಮಗ್ಗುಲುಗಳನ್ನು ಪರಿಶೀಲಿಸಿತು. ಕೊನೆಗೆ ಕನ್ನಡ ರಾಜ್ಯ ಏಕೀಕರಣಗೊಳ್ಳಲು ಪಕ್ವವಾಗಿದೆ ಎಂಬ ವರದಿಯನ್ನು 1955 ರ ಸೆಪ್ಟಂಬರ್ 30 ರಂದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿತು. ಏಕೀಕರಣಕ್ಕೆ ಲೋಕಸಭೆ, ರಾಜ್ಯಸಭೆಗಳೂ ಒಪ್ಪಿಗೆ ಕೊಟ್ಟ ನಂತರ ರಾಷ್ಟ್ರಪತಿಗಳ ಅಂಕಿತ ಬಿತ್ತು. ಶತಕಗಳಷ್ಟು ಚರಿತ್ರೆ ಇದ್ದರೂ ಎಂದೂ ಏಕಾಡಳಿತಕ್ಕೆ ಒಳಪಡದಿದ್ದ ಕನ್ನಡಿಗರು 1956 ರ ನವೆಂಬರ್ 1 ರಂದು ಒಂದು ರಾಜ್ಯದ ಆಡಳಿತಕ್ಕೆ ಒಂದಾದರು. ಕರ್ನಾಟಕ ರಾಜ್ಯ ರಚನೆಗೆ ಅಂತಿಮ ಅಂಕಿತ ಹಾಕಿದ್ದ ಆಗಿನ ರಾಷ್ಟ್ರಪತಿಗಳಾದ ಬಾಬು ರಾಜೇಂದ್ರಪ್ರಸಾದ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜು ಆವರಣದಲ್ಲಿ ವಿಧ್ಯುಕ್ತವಾಗಿ ಮೈಸೂರು (ಕರ್ನಾಟಕ) ರಾಜ್ಯ ಉದಯವನ್ನು ಘೋಷಿಸಿದರು. ವಿಪರ್ಯಾಸವೆಂದರೆ ಬಹುತೇಕ ಕನ್ನಡ ಮಾತನಾಡುವ ಪ್ರದೇಶಗಳು ಆಂಧ್ರ , ತಮಿಳುನಾಡು, ಮಹಾರಾಷ್ಟ್ರ, ಕೇರಳಗಳಲ್ಲಿಯೇ ಉಳಿದು ಬಿಟ್ಟವು. ಕನ್ನಡಿಗರ ಹೊಸ ರಾಜ್ಯಕ್ಕೆ ಮೈಸೂರು ಎಂದು ಕರೆದಿದ್ದು ಅಸಮಾಧಾನಕ್ಕೆ ಕಾರಣವಾಯಿತು. ಇದು ನಡೆದ 17 ವರ್ಷಗಳ ತರುವಾಯ ಸಿ. ದೇವರಾಜ ಅರಸು ಮುಖ್ಯಮಂತ್ರಿಗಳಾಗಿದ್ದಾಗ ಏಕೀಕೃತ ರಾಜ್ಯಕ್ಕೆ ಕರ್ನಾಟಕವೆಂದು ಮರು ನಾಮಕರಣವಾಗಿ ತೃಪ್ತಿಗೆ ಹಾದಿ ಮಾಡಿಕೊಟ್ಟಿತು.
ಈ ಮೇಲೆ ಹೇಳಿರುವುದೆಲ್ಲಾ ಕಥೆಯಲ್ಲ , ಬದಲಾಗಿ ನಡೆದ ಇತಿಹಾಸದ ಒಂದೊಂದು ಅಕ್ಷರಗಳ ಮುತ್ತುಗಳು. ಅಷ್ಟೊಂದು ಮಹನೀಯರುಗಳ ಪರಿಶ್ರಮದ ಫಲವಾಗಿಯೇ ಇಂದು ಅಖಂಡ ಕರ್ನಾಟಕದಲ್ಲಿ ನಾವೆಲ್ಲಾ ಅತ್ಯಂತ ಸಂತೋಷದಿಂದ ಜೀವಿಸುತ್ತಿದ್ದೇವೆ. ಜೇನಿನಂಥ ಸಂಸಾರದಲ್ಲಿ ಹುಳಿ ಹಿಂಡುವ ಕೆಲಸವನ್ನು ಕೆಲ ನಾಯಕರುಗಳು ಅನಾವಶ್ಯಕವಾಗಿ ಮಾಡುತ್ತಿದ್ದಾರೆ. ಜನರು ಮುಗ್ಧರೇ, ಆದರೆ ಜನಗಳನ್ನಾಳುವ ಜನಪ್ರತಿನಿಧಿಗಳು ಮುಗ್ಧರಲ್ಲ.ಚಾಟಿ ಇಲ್ಲದೇ ಬುಗುರಿ ತಿರುಗಿಸುವ ಪ್ರವೀಣರು. ವಾಸ್ತವದಲ್ಲಿ ಅಖಂಡ ಕರ್ನಾಟಕವನ್ನ ಹಿಬ್ಬಾಗ ಮಾಡಲು ಪ್ರಯತ್ನಿಸುತ್ತಿರುವವರಿಗೆಲ್ಲಾ ಏನು ಸಿಗುವುದಿಲ್ಲ ಮತ್ತು ಅದರಿಂದ ಏನೂ ಲಾಭವಾಗುವುದಿಲ್ಲ. ಬದಲಾಗಿ ರಾಜಕಾರಣಿಗಳು ಲಾಭ ಪಡೆದುಕೊಳ್ಳುತ್ತಾರೆ. ಅಭಿವೃದ್ಧಿಯಾಗಲಿಲ್ಲ ಎಂಬ ಒಂದೇ ಕಾರಣ ಇಟ್ಟುಕೊಂಡು ರಾಜ್ಯವನ್ನು ವಿಭಜನೆ ಮಾಡಲು ಹೊರಟಿರುವ ಮುಗ್ಧಜನರಿಗೇನು ಗೊತ್ತು ಇದು ರಾಜಕೀಯದ ದೊಂಬರಾಟವೆಂದು. ಹೈದರಾಬಾದ್ ಕರ್ನಾಟಕ ಮತ್ತು ಮುಂಬೈ ಕರ್ನಾಟಕ ಎಂದು ಅವರೇ ಹೇಳಿಕೊಳ್ಳುತ್ತಿರುವ ಮಾತುಗಳು. ಇಲ್ಲಿ ಯಾವ ಸರ್ಕಾರಗಳಾಗಲೀ , ಮೀಡಿಯಾದವರಾಗಲೀ ಹೇಳುತ್ತಿಲ್ಲ. ಹೈದರಾಬಾದ್ ಕರ್ನಾಟಕಕ್ಕೆ 371J ಎಂಬ ಸಂವಿಧಾನಾತ್ಮಕ ವಿಶೇಷ ಸ್ಥಾನಮಾನವನ್ನು ನೀಡಿ ಆ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಅದಕ್ಕೆ ಪೂರಕವಾದ ಸವಲತ್ತುಗಳನ್ನು ನೀಡಲಾಗುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕಾಗಿರುವುದು ರಾಜಕಾರಣಿಗಳು ಮತ್ತು ಆಯಾ ಕ್ಷೇತ್ರದ ಎಂ.ಎಲ್.ಎ ಮತ್ತು ಎಂ.ಪಿಗಳದ್ದು. ಅಭಿವೃದ್ದಿ ಎಂಬ ಮಂತ್ರದ ಮೂಲಕ ಹುಳಿ ಹಿಂಡುವ ಕೆಲಸ ಮಾಡುತ್ತಿರುವ ವ್ಯಕ್ತಿಗಳು ಅಥವಾ ನಾಯಕರುಗಳು ಜನಪ್ರತಿನಿಧಿಗಳ ಕೊರಳಪಟ್ಟಿ ಹಿಡಿದು ಕೇಳಬೇಕು. ಸ್ವಾತಂತ್ರ್ಯಾ ನಂತರ ಅಥವಾ ಕರ್ನಾಟಕ ಏಕೀಕರಣವಾದ ನಂತರ ಹೈದರಾಬಾದ್ ಕರ್ನಾಟಕಕ್ಕೆ ಅಥವಾ ಉತ್ತರ ಕರ್ನಾಟಕಕ್ಕೆ ಎಷ್ಟು ಅನುಧಾನ ನೀಡಿದ್ದಾರೆಂದು ಅಂಕಿ ಅಂಶಗಳನ್ನು ನೋಡಿದರೆ ತಿಳಿಯುತ್ತದೆ.
ಹಾಗೆ ನೆನ್ನೆಯ ದಿನ ದಿನಾಂಕ 05.08.2018 ರ ಪ್ರಜಾವಾಣಿ ಪತ್ರಿಕೆಯ ಕಡೆ ಕಣ್ಣಾಯಿಸಿದೆ. ಈ ಸಲದ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಎಷ್ಟು ಅನುಧಾನವನ್ನು ನೀಡಿದ್ದಾರೆ ಎಂದು ಬರೆದಿತ್ತು.ಅದನ್ನು ನೋಡಿ ಆಶ್ಚರ್ಯವಾಯಿತು. 13 ಜಿಲ್ಲೆಗಳಿಗೆ ಬರೋಬರಿ 7241 ಕೋಟಿ ರೂ.ಗಳು ಮತ್ತು ಮಿಕ್ಕ ದಕ್ಷಿಣ ಜಿಲ್ಲೆಗಳಿಗೆ 7238 ಕೋಟಿ ರೂ.ಗಳು ನೀಡಿದ್ದಾರೆ. ಇದರಿಂದಲೇ ತಿಳಿಯುತ್ತದೆ ಕುಮಾರಸ್ವಾಮಿಯವರ ನೇತೃತ್ವದ ಸಮ್ಮಿಶ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತದೆಯೋ ಇಲ್ಲಾ ತಾಯಿ ಮಮತೆ ತೋರುತ್ತದೆಯೋ ಎಂದು. ಅವರು ಹೇಳಿದಂತೆ ಮಾಡಲು ಹೊರಟೇವೆಂದರೆ ಒಂದು ರಾಜ್ಯವನ್ನು ಕಟ್ಟುವುದು, ಬೆಳೆಸುವುದು ಅಷ್ಟೊಂದು ಸುಲಭದ ಮಾತಲ್ಲ. ಒಂದು ರಾಜ್ಯವನ್ನು ಹೊಸದಾಗಿ ಸೃಷ್ಟಿಸಲು ಹೋದರೆ ಸಂವಿಧಾನಾತ್ಮಕವಾಗಿ ಒಪ್ಪಿಗೆ ಇದ್ದರೂ ಆರ್ಥಿಕವಾಗಿ, ನೈಸರ್ಗಿಕವಾಗಿ, ಸ್ವಾಭಾವಿಕ ಸೌಕರ್ಯಾದಿಗಳಾಗಿ ನೋಡಕೊಳ್ಳಬೇಕಾಗುತ್ತದೆ. ಒಂದು ರಾಜ್ಯವನ್ನು ನಡೆಸಲು ಸಾಲ ತರುವುದೊಂದೇ ಮಾರ್ಗವಲ್ಲ, ಅದನ್ನು ತೀರಿಸಲು ಆದಾಯ ಬೇಕಲ್ಲವೇ? . ಆದಾಯದ ಮೂಲ ಯಾವುದಿದೆ ಉತ್ತರ ಭಾಗಕ್ಕೆ ?. ಪಕ್ಕದ ಆಂಧ್ರಪ್ರದೇಶವನ್ನು ನೋಡಿಯಾದರೂ ಬುದ್ದಿ ಕಲಿಯಬಹುದು. ಆದಾಯದ ಭಾಗವೆಲ್ಲಾ ತೆಲಾಂಗಣ ಭಾಗಕ್ಕೆ ಸೇರ್ಪಡೆಯಾಗಿ ಆಂಧ್ರಪ್ರದೇಶ ರಾಜ್ಯ ಅಭಿವೃದ್ಧಿಗೆ ಹೆಣಗಾಡುತ್ತಿದೆ. ಅದಕ್ಕಾಗಿ ಬಿಜೆಪಿಯ ಮೈತ್ರಿ ಪಕ್ಷವಾಗಿ ಚಂದ್ರಬಾಬುನಾಯ್ಡು ಸರ್ಕಾರ ಗುರುತಿಸಿಕೊಂಡರೂ ಅದರಿಂದ ಏನೂ ಪ್ರಯೋಜನವಾಗದೇ ಮೈತ್ರಿಯಿಂದ ಹೊರಬಂದದ್ದು ಈಗ ಇತಿಹಾಸ. ಹೊಸ ರಾಜಧಾನಿ ಸೃಷ್ಠಿಸಲು ಹರಸಾಹಸ ಪಡುತ್ತಿದೆ. ಅದರಂತೆಯೇ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಪ್ರಸ್ತುತವಾಗಿ ಇರುವಂತ ಅಖಂಡ ಕರ್ನಾಟಕಕ್ಕೆ ಆದಾಯವೆಂದರೆ ಸಾಫ್ಟ್ ವೇರ್ ಮತ್ತು ಕೈಗಾರಿಕ ವಲಯಗಳು.ಇವೆರಡೂ ದಕ್ಷಿಣ ಭಾಗದಲ್ಲಿ ಇರುವುದರಿಂದ ಉತ್ತರಕ್ಕೆ ಅನಾನುಕೂಲವಾಗುವುದರಲ್ಲಿ ಸಂದೇಹವಿಲ್ಲ. ನೈಸರ್ಗಿಕವಾಗಿಯೂ ಕೂಡ ದಕ್ಷಿಣ ಕರ್ನಾಟಕ ಬಹಳ ಆದಾಯದಲ್ಲಿದೆ.
ದಕ್ಷಿಣದವರು ನಮಗೆ ಯಾವ ರೀತಿಯ ಬೆಂಬಲವನ್ನು ನೀಡುತ್ತಿಲ್ಲ ಎಂಬ ಆರೋಪ ಎಷ್ಟು ಸರಿ ?.ಕಳಸಾ ಬಂಡೂರಿ ವಿಚಾರದಲ್ಲಿ ಎಲ್ಲರೂ ಅವರ ಬೆಂಬಲಕ್ಕೆ ನಿಂತಿಲ್ಲವೇ? .ಇತ್ತೀಚಿಗಷ್ಟೇ ಕೇಂದ್ರದ ಪ್ರತಿಷ್ಟಿತ ವಿದ್ಯಾಕೇಂದ್ರ ಐ.ಐ.ಟಿ ಯನ್ನು ಧಾರವಾಡಕ್ಕೆ ನೀಡಲಿಲ್ಲವೇ? . ಕರ್ನಾಟಕ ಏಕೀಕರಣಕ್ಕೆ ಅರವತ್ತು ತುಂಬಿದ ಸಂಭ್ರಮದಲ್ಲಿ ಸುವರ್ಣ ಕರ್ನಾಟಕದ ನೆನಪಿಗಾಗಿ ಅವರ ಇಚ್ಛೆಯಂತೆ ಸುಮಾರು 594 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆಡಳಿದ ಶಕ್ತಿಕೇಂದ್ರವಾದ ವಿಧಾನ ಸೌಧದ ತದ್ರೂಪು ಎಂಬಂತೆ “ಸುವರ್ಣ ಸೌಧ” ವನ್ನು ಬೆಳಗಾವಿಯಲ್ಲಿ ನಿರ್ಮಾಣ ಮಾಡಿಲ್ಲವೇ?. ದೂರದಿಂದ ಬರಲಾಗದು ಎಂಬ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಸಂಚಾರಿ ಉಚ್ಚನ್ಯಾಯಾಲಯವನ್ನು ಸ್ಥಾಪಿಸಲಾಯಿತು. ಇನ್ನು ಹಲವು ಪ್ರತಿಷ್ಟಿತ ಯೋಜನೆಗಳನ್ನು ಉತ್ತರ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನದ ಅಭಿಮಾನದ ಮೇಲೆ ನೀಡಲಾಗಿದೆ. ಹೀಗಿರುವಾಗ ಇಲ್ಲಿ ಅಭಿವೃದ್ಧಿ ಆಗಿಲ್ಲವೆಂಬ ಅನುಮಾನವೇಕೆ? . ಲೋಕಸಭೆಯಲ್ಲಿ, ವಿಧಾನಸಭೆಯಲ್ಲಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅರಿವು ಮೂಡಿಸು ಅನುದಾನವನ್ನು ಬಿಡುಗಡೆಗೊಳಿಸಿಕೊಂಡು ಮಾದರಿ ಕ್ಷೇತ್ರಗಳಾಗಿ ಮಾಡಿ ಜನರ ವಿಶ್ವಾಸವನ್ನು ಗೆಲ್ಲಬೇಕಾದದ್ದು ಜನಪ್ರತಿನಿಧಿಗಳ ಕೆಲಸ. ಹೋರಾಟ ಮಾಡಲೆಂದು ಹಳ್ಳಿಯ ಜನಗಳಿಗೆ 100/- ಅಥವಾ 200/- ರೂ.ಗಳ ಕೊಟ್ಟು ಪ್ರತಿಭಟನೆ ಮಾಡಿಸಿದರೆ ಪಾಪ ಅವರಿಗೆ ಸಿಗುವುದಾದರೂ ಏನು ?.
ಮೊದಲೇ ಹೇಳಿದಂತೆ ಒಂದು ರಾಜ್ಯಕ್ಕೆ ಆದಾಯದ ಮೂಲ ಎಂದರೆ ತೆರಿಗೆ. ತೆರಿಗೆ ವಸೂಲಿ ಮಾಡಬೇಕೆಂದರೆ ಅವರಿಗೆ ಪೂರಕವಾದ ಮೂಲಸೌಲಭ್ಯಗಳ ಒದಗಿಸಬೇಕು. ಬಂಡವಾಳ ಶಾಹಿಗಳಿಂದ ಬಂಡವಾಳ ಹೂಡಿಕೆ ಮಾಡಿದಾಗ ಮಾತ್ರ ತೆರಿಗೆ ಬಂದು ಒಂದು ಸರ್ಕಾರನ್ನು ನಡೆಸಲು ಆಗುವುದು. ಈಗಿನ ಪರಿಸ್ಥಿತಿಯನ್ನು ಗಮನಿಸಿದಾಗ ಕೇಂದ್ರ ಸರ್ಕಾರ ಎಷ್ಟರ ಮಟ್ಟಿಗೆ ಬೆಂಬಲವಾಗಿ ನಿಲ್ಲುತ್ತದೆ ತಿಳಿದಿಲ್ಲ. ಒಮ್ಮತವಾದ ಸರ್ಕಾರ ಒಮ್ಮೆಯೂ ಬಂದಿಲ್ಲ. ಕೇಂದ್ರದಲ್ಲಿ ಒಂದು ಪಕ್ಷವಾದರೆ, ರಾಜ್ಯದಲ್ಲಿ ಇನ್ನೊಂದು ಪಕ್ಷ. ಯಾವಾಗಲೂ ದಾಯಾದಿಯ ಹಗೆಯಂತೆಯೇ ಮಲತಾಯಿ ಧೋರಣೆ ತೋರಿಸುತ್ತಾ ಬಂದಿವೆ. ಅನುದಾನವನ್ನೂ ಸಹ ನಮ್ಮ ರಾಜ್ಯಕ್ಕೆ ಸರಿಯಾಗಿ ವಿತರಣೆ ಮಾಡುವುದಿಲ್ಲ. ಇದು ನಮ್ಮ ಕರ್ನಾಟಕದ ದುರಾದೃಷ್ಟ ಎನ್ನಬಹುದು. ಇನ್ನು ರಾಜ್ಯ ಹೋಳಾದರೆ ಖಂಡಿತವಾಗಿಯೂ ಸಹಾಯ ಮಾಡುತ್ತದೆ ಎಂಬ ಯಾವ ನಂಬಿಕೆಯೂ ಇಲ್ಲ. ಮೊದಲೆ ಉತ್ತರ ಕರ್ನಾಟಕ ಬಯಲು ಸೀಮೆ, ಬಿಸಿಲನಾಡು ಎಂದೆಲ್ಲಾ ಖ್ಯಾತಿಗಳಿಸಿದೆ. ಹೀಗಿರುವಾಗ ವಿಭಜನೆಯಾಗಿ ಸಿಗುವ ಸವಲತ್ತಿನಿಂದಲೂ ವಂಚಿತವಾಗಬೇಕಾಗುತ್ತದೆ. ಅಖಂಡ ಕರ್ನಾಟಕದಲ್ಲಿ ಆರು ಕೋಟಿ ಜನರಿದ್ದರೂ ಪಕ್ಕದ ತಮಿಳುನಾಡು ಕಾವೇರಿ ನೀರಿನ ವಿಚಾರಕ್ಕೆ ಬಂದಾಗ ಅವರ ಹಿಡಿತಕ್ಕೆ ಒಳಗಾಗುತ್ತೇವೆ. ಇನ್ನು ಇಬ್ಭಾಗವಾದರೆ ಖಂಡಿತವಾಗಿಯೂ ಅದರ ಬೆರಳ ತುದಿಯಲ್ಲಿ ಆಡಿಸಿಬಿಡುತ್ತಾರೆ.
ಅಷ್ಟಕ್ಕೂ ಇಲ್ಲಿ ನಡೆಯುತ್ತಿರುವುದು ಬರೀ ಪ್ರದೇಶಗಳ ಹಂಚಲಾಟವಲ್ಲ. ರಾಜಕೀಯದ ಚದುರಂಗದಾಟ, ಜಾತಿರಾಜಕಾರಣದ ದೊಂಬರಾಟ. ರಾಜಕಾರಣಿಗಳ ಪ್ರಕಾರ ಜಾತಿ ಆಧಾರದಲ್ಲಿ ಜನಸಂಖ್ಯೆಯನ್ನು ನೋಡಿದಾಗ ಲಿಂಗಾಯಿತರೇ ಪ್ರಾಬಲ್ಯ ಹೊಂದಿದ್ದಾರೆ ಎಂದು ತಿಳಿದು ಹೇಗಿದ್ದರೂ ಲಿಂಗಾಯಿತರು ಬಿಜೆಪಿ ಸಾರಥ್ಯ ವಹಿಸಿರುವ ಬಿ.ಎಸ್.ಯಡಿಯೂರಪ್ಪ ನವರ ಮೇಲೆ ವಿಶ್ವಾಸ ಹೊಂದಿರುತ್ತಾರೆ. ರಾಜ್ಯ ವಿಭಜನೆಯಾದರೆ ಖಂಡಿತವಾಗಿಯೂ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಏಕಚಕ್ರಾಧಿಪತ್ಯವನ್ನು ಸಾಧಿಸಬಹುದು ಎಂಬ ದೂರಾಲೋಚನೆ. ನಿಜ ಹೇಳಬೇಕೆಂದರೆ ಇದು ದೂರಾಲೋಚನೆಯಲ್ಲ ದುರಾಲೋಚನೆ ಎಂದೇ ಹೇಳಬಹುದು. ಆದರೆ ಕಾಂಗ್ರೆಸ್ ನಲ್ಲೂ ಲಿಂಗಾಯಿತ ಘಟಾನುಘಟಿ ನಾಯಕರುಗಳಿರುವುದರಿಂದ ಬಿಜೆಪಿಗೆ ಸ್ವಲ್ಪ ಕಷ್ಟವೆಂದೇ ಹೇಳಬಹುದು. ರಾಜ್ಯ ವಿಭಜನೆ ವಿಷಯವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೋವನ್ನು ಸಂಪೂರ್ಣವಾಗಿ ಕೇಳಿದ ಮೇಲೆ ಒಂದು ಸ್ಪಷ್ಟವಾಯಿತು. ಅವರು ಅಲ್ಲಿ ಬಹಳ ನೋವಿನಿಂದ, ಒತ್ತಡದಿಂದ , ಹತಾಶೆಯಿಂದ “ಬೇರೆ ರಾಜ್ಯ ಬೇಕು ಎಂದು ಕೇಳುತ್ತಿದ್ದೀರಿ ಎಂಗೋ ತಗೋಳ್ರಪ್ಪಾ” ಎಂದು ಹೇಳಿದ್ದಾರೆ. ಇದರಲ್ಲಿ ತಪ್ಪೇನಿದೆ ಒಬ್ಬ ವ್ಯಕ್ತಿಯನ್ನು ಎಡೆಬಿಡದೆ ತಿಣುಕುತ್ತಿದ್ದರೆ ಮನಸ್ಸು ಹುಚ್ಚೇಳುವುದು ಸಹಜ. ಅದರಂತೆಯೇ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ. ಅವರೂ ಕೂಡ ಮನುಷ್ಯರಲ್ಲವೇ? ಅವರಿಗೂ ಕೂಡ ಭಾವನೆಗಳು, ಆತ್ಮಗೌರವ, ರೋಷವೇಷ ಎಲ್ಲವೂ ಇದೆ. ಬೀದಿಗಳಲ್ಲಿ ನಾಯಿಗಳಂತೆ ವಿರೋಧ ಪಕ್ಷದ ನಾಯಕರು ಸಿಕ್ಕಸಿಕ್ಕ ಕಡೆ ಮೀಡಿಯಾ ಮುಂದೆ ಸ್ಟೇಟ್ಮೆಂಟ್ ಕೊಟ್ಟರೆ ಹೇಗೆ. ನಿಜವಾಗಿಯೂ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಇದ್ದರೆ ಕೂತು ಚರ್ಚಿಸಿ ಮಾಡಬೇಕು. ಅವತಿಗೆ ಬೇಕಾಗಿರುವುದು ಅಧಿಕಾರ, ಅಭಿವೃದ್ಧಿಯಲ್ಲ.
ಸನ್ಮಾನ್ಯ ಕುಮಾರಸ್ವಾಮಿಯವರು ಟಿವಿ ಮಾಧ್ಯಮದವರ ಬಗ್ಗೆ ಮಾತನಾಡಿದ್ದಾರೆನ್ನಲಾದ ವಿಷಯವನ್ನಿಟ್ಟುಕೊಂಡು ಅವರ ತೇಜೋವಧೆ ಮಾಡಲಿಕ್ಕೆ ಹೊರಟಿರುವುದು ಎಷ್ಟು ಸರಿ. ಹೌದು ಟಿವಿ ಮಾಧ್ಯಮದವರಿಂದಲೇ ಅಖಂಡ ಕರ್ನಾಟಕ ಹೋಳಾಗಬೇಕೆಂಬ ಕೂಗು ಎದ್ದಿರುವುದು. ಕೆಲಸಕ್ಕೆ ಬಾರದ ಅದೂ ರಾಜಕಾರಣಿಗಳನ್ನೇ ಕೂರಿಸಿಕೊಂಡು ಪಬ್ಲಿಕ್ ಟಿವಿಯಲ್ಲಿ ಪ್ರತಿದಿನ ರಾತ್ರಿ 8 ಗಂಟೆಗೆ ಚರ್ಚೆ ನಡೆಯುತ್ತದೆ. ಅದು ರಾಜ್ಯದ ಹಿತವನ್ನ ಕಾಪಾಡುವ ಚರ್ಚೆಯಾಗಿರುವುದಿಲ್ಲ, ಬದಲಾಗಿ ಅವರವರ ಪಕ್ಷದವರ ಘನತೆಯನ್ನು ಬಿಂಬಿಸಿಕೊಳ್ಳುವ ಚರ್ಚೆಗಳಾಗಿರುತ್ತದೆ ಮತ್ತು ಅಕ್ಷರ ಸಹ ಬೀದಿ ನಾಯಿಗಳ ಜಗಳದಂತಿರುತ್ತದೆ.ಅದರ ಹೊರತಾಗಿ ಸಾಹಿತಿಗಳನ್ನೋ, ಚಿಂತಕರನ್ನೋ ಕರೆಸಿ ಮಾತನಾಡಬಹುದಲ್ಲ. ಅರುಣ್ ಬಡಿಗೇರ್ ಎಂಬ ನಿರೂಪಕ ತಾನೇ ಮೇಧಾವಿ ಎಂದು ತಿಳಿದುಕೊಂಡಿದ್ದಾನೆ ಮತ್ತು ವಯಸ್ಸಿಗೆ, ಹುದ್ದೆಗೆ ಮರ್ಯಾದೆ ನೀಡದೇ ಮಾತನಾಡುತ್ತಾನೆ. ಮೀಡಿಯಾದವರು ತೋರಿಸುವ ಮತ್ತು ಮಾತನಾಡುವ ವಿಷಯದಿಂದ ದೇಶಕ್ಕೆ ಅಥವಾ ರಾಜ್ಯಕ್ಕೆ ಒಳ್ಳೆಯದಾಗಬೇಕೇ ಹೊರತು ಕೆಡುಕಾಗಬಾರದು. ಇನ್ನಾದರೂ ರಾಜಕಾರಣಿಗಳು, ಸಂಘಟನೆಗಳು ಮತ್ತು ಮೀಡಿಯಾದವರು ಅನಾವಶ್ಯಕ ವಿಚಾರಗಳನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಿ ಅಖಂಡ ಕರ್ನಾಟಕಕ್ಕೆ ದುಡಿಯಿರಿ ಎಂದು ಆಶಿಸುತ್ತೇನೆ.
ಜೈ ಕರ್ನಾಟಕ ಜೈ ಭಾರತ
–ಮಹದೇವ್ ಬಿಳುಗಲಿ
9611339024
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.
ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.
ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.
ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.
ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.
ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.
ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.
ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

- ಡಾ. ಸಿ ಬಿ ಅನ್ನಪೂರ್ಣ ಜೋಗೇಶ್, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.
ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.
ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.
ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.
ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.
ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.
ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.
ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.
ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.
ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.
ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

- ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ
ಕರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.
ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.
ಬಾಲ್ಯ ಮತ್ತು ಶಿಕ್ಷಣ
ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.
ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.
ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ
ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ
ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.
ರಂಗಭೂಮಿ ಮತ್ತುಈಶ್ವರಪ್ಪ
ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್ಆಫ್ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.
ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.
1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.
1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.
1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಸಾಹಿತ್ಯ ಸೇವೆ
ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.
ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಸಂದ ಪ್ರಶಸ್ತಿಗಳು
ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
- 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
- 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
- 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
- 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
- 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ
2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ
- 2014ಮಹಲಿಂಗರಂಗ ಪ್ರಶಸ್ತಿ
- 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ
ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.
ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.
[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ7 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ3 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ2 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ5 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು