Connect with us

ಸಿನಿ ಸುದ್ದಿ

‘ಬೆಕ್ಕಿಗೊಂದು ಮೂಗುತಿ’ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ

Published

on

ಮಾಯಾ ಮೂವಿ ಮೇಕರ್ಸ್ ಲಾಂಛನದಲ್ಲಿ ಜಿ.ಕೆ. ಮಾಧುರಿ ಉಮೇಶ್ ನಿರ್ಮಿಸಿರುವ ಬೆಕ್ಕಿಗೊಂದು ಮೂಗುತಿ ಚಿತ್ರವು ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಆಸ್ಲಿ ಚಾಕೋ ನಿರ್ದೇಶಿಸಿರುವ ಈ ಚಿತ್ರಕ್ಕೆ ಛಾಯಾಗ್ರಹಣ – ರುದ್ರಮುನಿ, ಸಂಗೀತ – ವಿಶಾಖ್ ವಸಿಷ್ಠ, ಸಹ ಸಾಹ – ಹ್ಯಾರಿಸ್ ಜಾನಿ, ಸಂಕಲನ-ಶ್ರೀನಿವಾಸನ್, ಅರುಣ್, ನೃತ್ಯ – ಚಂದ್ರಕಲಾ, ಕಪಿಲ್, ಸಹನಿರ್ದೇಶನ ಮುತ್ತುರಾಜ್, ಕಲೆ-ಮಣಿ ಅರುಣ್, ತಾರಾಗಣದಲ್ಲಿ – ಸುಷ್ಮಾ, ರಮೇಶ್ ಭಟ್, ಬೆಂಗಳೂರು ನಾಗೇಶ್, ಮುನಿ, ವಿವಿನ್, ಉಮೇಶ್ ಮುಂತಾದವರಿದ್ದಾರೆ.

ಈ ಚಿತ್ರಕ್ಕೆ ಬೆಂಗಳೂರು, ತುಮಕೂರು, ದೇವರಾಯನದುರ್ಗ, ಕನಕಪುರ, ಮೇಕೆದಾಟು ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರ ಕಥಾವಸ್ತು ‘ಏಲಿಯನ್ ಲವ್ ಇನ್ ದಿಸ್ ವಲ್ರ್ಡ್’.

ಚಿತ್ರದ ನಾಯಕ ತಿಲಕ್‌ ಮಾತನಾಡಿ, “ಈ ಚಿತ್ರದಲ್ಲಿ ಸೇನಾ ಅಧಿಕಾರಿಯಾಗಿ ಅಭಿನಯಿಸಿದ್ದೇನೆ. ಏಲಿಯನ್‌ ಗುಣವನ್ನು ಬದಲಿಸುವ ಅಪರೂಪದ ಪಾತ್ರ ಈ ಚಿತ್ರದಲ್ಲಿ ನನಗೆ ಸಿಕ್ಕಿದೆ. ಭೂಮಿಗೆ ಬರುವ ಏಲಿಯನ್‌ಗೂ, ನನಗೂ ಯಾವ ರೀತಿಯ ಸಂಬಂಧ ಎನ್ನುವುದನ್ನು ತಿಳಿಯಲು ಸಿನಿಮಾ ನೋಡಬೇಕು’ ಎಂದರು.

ಪ್ರೀತಿ, ನಂಬಿಕೆ, ವಿಶ್ವಾಸ ಯಾವುದರಲ್ಲೂ ಅರ್ಥವಿಲ್ಲ ಎಂದು ತಿಳಿದುಕೊಂಡಿರುವ ಪಾತ್ರದಲ್ಲಿ ನಾಯಕಿ ಸುಷ್ಮಾ ರಾಜ್‌ ಕಾಣಿಸಿಕೊಂಡಿದ್ದಾರೆ. “ಪ್ರಾಣಿ ರೂಪದಲ್ಲಿ ಭೂಮಿಗೆ ಬಂದು, ಕೊನೆಗೆ ಮನುಷ್ಯಳಾಗಿ ರೂಪುಗೊಳ್ಳುತ್ತೇನೆ. ಪ್ರೀತಿ ಎಂದರೆ ಅದೊಂದು ಆಯುಧವಲ್ಲ. ಭಾವನೆಗಳು ತುಂಬಿಕೊಂಡಿದ್ದರೇನೆ ಬದುಕು ಎಂದು ನಾಯಕ ನನಗೆ ಅರಿವು ಮೂಡಿಸುತ್ತಾನೆ. ಅದರಿಂದ ಜೀವನದಲ್ಲಿ ಬದಲಾಗುತ್ತೇನೆ’ ಎಂದು ಸುಷ್ಮಾ ರಾಜ್‌ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

Published

on

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂ.ಇ.ಎಸ್ ಗ್ರೌಂಡ್ ನಲ್ಲಿ ‘ಘೋಸ್ಟ್’ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.

ಸಂದೇಶ್‍ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಘೋಸ್ಟ್’ ಚಿತ್ರವನ್ನು ಆರ್‍.ಜೆ. ಶ್ರೀನಿ ಬರೆದು, ನಿರ್ದೇಶಿಸಿದ್ದು, ಅರ್ಜುನ್‌ ಜನ್ಯಾ ಸಂಗೀತವಿದೆ. ಶಿವರಾಜಕುಮಾರ್ ಜೊತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಹಾಗೂ ಇನ್ನಿತರರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending