ಸಿನಿ ಸುದ್ದಿ
‘ಪುಟ್ಟಣ್ಣ ಕಣಗಾಲ್’ ನಮ್ಮ ನಾಡು ಕಂಡ ಸಾಮಾಜಿಕ ಕಳಕಳಿಯುಳ್ಳ ಶ್ರೇಷ್ಠ ಚಲನಚಿತ್ರ ನಿರ್ದೇಶಕ
- ಕ್ರಾಂತಿರಾಜ್ ಒಡೆಯರ್ ಎಂ,ಪ್ರಾಧ್ಯಾಪಕರು, ಮೈಸೂರು
1970 ರ ಸಂದರ್ಭದಲ್ಲಿ, ಕನ್ನಡ ಚಿತ್ರರಂಗದಲ್ಲಿ, ಬರೀ ಪೌರಾಣಿಕ ಚಲನಚಿತ್ರಗಳು ತಯಾರಾಗುತ್ತಿದ್ದುದ್ದು ಒಂದೆಡೆಯಾದರೆ, ಮತ್ತೊಂದೆಡೆ ಸಾಮಾಜಿಕ ಪಿಡುಗುಗಳ ಆಚರಣೆಯಲ್ಲಿ ತಲ್ಲೀನವಾಗಿ, ಬುದ್ದಿಗೆ ಜಡ್ಡು ಹಿಡಿಸಿಕೊಂಡಿದ್ದ ಸಮಾಜ. ಈ ಸಂದರ್ಭದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಥೆಗಳನ್ನು ಹುಡುಕಿ, ಚಿತ್ರಗಳನ್ನು ಮಾಡಿ, ಚಿತ್ರರಂಗಕ್ಕೆ ಹೊಸತನ್ನು ಕಲಿಸಿಕೊಟ್ಟದ್ದೂ ಅಲ್ಲದೇ, ತಮ್ಮ ಚಿತ್ರಗಳನ್ನೇ ಸಮಾಜಕ್ಕೆ ಕನ್ನಡಿಯ ಹಾಗೆ ಹಿಡಿದು, ಸಮಾಜವೇ ತನ್ನ ಬಗ್ಗೆ ಅಸಯ್ಯ ಪಡುವಂತೆ ಮಾಡಿದ ಶ್ರೇಯಸ್ಸು ಚಲನಚಿತ್ರ ಇತಿಹಾಸ ಕಂಡ ಶ್ರೇಷ್ಠ ನಿರ್ದೇಶಕ ದಿವಂಗತ ಪುಟ್ಟಣ್ಣ ಕಣಗಾಲ್ ಅವರಿಗೆ ಸಲ್ಲುತ್ತದೆ.
ಅಂದಿನ ವಸಾಹತುಶಾಯಿ ಮನಸ್ಥಿತಿಯ, ಸಾಮಾಜಿಕ ಬದಲಾವಣೆಯನ್ನೇ ಒಪ್ಪಿಕೊಳ್ಳದ ಸಾಮಾಜಿಕ ವ್ಯವಸ್ಥೆಯಲ್ಲಿ, ಸಾಮಾಜಿಕ ಕ್ರಾಂತಿ ಆಧಾರಿತ ಚಿತ್ರಗಳನ್ನು ತಯಾರಿಸಿ, ಹೆಚ್ಚು ಹೆಚ್ಚು ಜನ ಆ ಚಿತ್ರಗಳನ್ನು ನೋಡುವಂತೆ ಮಾಡಿದವರು ಪುಟ್ಟಣ್ಣ ಕಣಗಾಲ್. ತುಂಬ ಚಿಕ್ಕ ವಯಸ್ಸಿಗೆ ಸಾವಿಗೀಡಾದ ಪುಟ್ಟಣ್ಣ, ಹಲವಾರು ಪ್ರಯೋಗಗಳ ಮೂಲಕ ಕನ್ನಡ ಚಲನಚಿತ್ರ ಇತಿಹಾಸದಲ್ಲೇ ಅದ್ಬುತ ಹೆಸರನ್ನು ಮಾಡಿ ತಮ್ಮ ಛಾಪನ್ನು ಮೂಡಿಸಿದರು.
ಜಾತಿ ಧರ್ಮಗಳೇ ಉಸಿರಾಗಿದ್ದ 70 ರ ದಶಕದಲ್ಲಿ, ಅಂತರಧರ್ಮೀಯ ಪ್ರೀತಿಯನ್ನು ಸಾರುವ ನಾಗರಹಾವು ಚಿತ್ರವನ್ನು ಸಮಾಜಕ್ಕೆ ಕೊಟ್ಟವರು ಪುಟ್ಟಣ್ಣ.
ತಮ್ಮ ಪಡುವಾರಹಳ್ಳಿ ಪಾಂಡವರು ಚಿತ್ರದಲ್ಲಿ, ಜಮೀನ್ದಾರಿ ಪದ್ಧತಿ ಹಾಗು ಸಾಮಾಜಿಕ ಅನ್ಯಾಯಗಳ ವಿರುದ್ಧ ಗ್ರಾಮದ ಯುವಕರು ಸಿಡಿದು ಬೀಳುವ ವಿಷಯವನ್ನು ತೆಗೆದುಕೊಂಡು, ಅಂದಿನ ಕಾಲದಲ್ಲಿ ಪ್ರಚಲಿತದಲ್ಲಿದ್ದ ಸಮಾಜವಾದಿ ಸಿದ್ದಾಂತದ ಕಡೆಗೆ ಯುವಕರು ವಾಲುವಂತೆ ಮಾಡಿದವರು ಪುಟ್ಟಣ್ಣ.
1981 ರಲ್ಲಿ ಅಷ್ಟು ಯಶಸ್ಸು ಕಾಣದ ರಂಗನಾಯಕಿ ಚಿತ್ರದಲ್ಲಿ, ಮಗನೇ ತಾಯಿಯನ್ನು ಬಯಸುವ ಕಥೆಯುಳ್ಳ ಚಿತ್ರವನ್ನು ನೋಡಿದರೆ, “ಈಡಿಪಸ್” ಕಥೆ ನೆನಪಾಗುತ್ತದೆ. ಇಂದಿಗೂ ಕೂಡ ರಂಗನಾಯಕಿ ಚಿತ್ರವನ್ನು ಎಷ್ಟು ಬಾರಿ ನೋಡಿದರೂ, ಮತ್ತೆ ಮತ್ತೆ ನೋಡಬೇಕೆನಿಸುತ್ತದೆ.
ಹೆಣ್ಣು ತನ್ನ ಸ್ವತಂತ್ರ ಚಿಂತನೆಯಿಂದ ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವುದನ್ನು ಎಂದಿಗೂ ಬಯಸದ ಸಮಾಜಕ್ಕೆ, ಒಂದು ಗಂಡು, ಹೆಣ್ಣಿನ ಸ್ವಾತಂತ್ರ ಹಾಗು ಸ್ವಾವಲಂಬನೆಯನ್ನು ಇಷ್ಟಪಡುವುದೂ ಅಲ್ಲದೇ, ಅದನ್ನು ಪ್ರೇರೇಪಿಸುವ ವಿಷಯವನ್ನು ಇಟ್ಟುಕೊಂಡು ಶುಭಮಂಗಳ ಚಿತ್ರವನ್ನ ಕೊಟ್ಟವರು ಪುಟ್ಟಣ್ಣ ಕಣಗಾಲ್.
ಹಣ ಹಾಗು ಅಧಿಕಾರದ ಮದದಲ್ಲಿ ಬದುಕುವ ಶ್ರೀಮಂತ ಮನೆತನದ ಮಕ್ಕಳು, ಕಷ್ಟ ಪಟ್ಟು ದುಡಿದು ತಿನ್ನುವುದನ್ನ ಮೈಗೂಡಿಸಿಕೊಳ್ಳುವುದೂ ಅಲ್ಲದೇ, ಬಡ ಕುಟುಂಬದ ಹೆಣ್ಣು ಮಕ್ಕಳನ್ನು ಪ್ರೀತಿಸಿ ಮದುವೆ ಮಾಡಿಕೊಳ್ಳುವ ವಿಭಿನ್ನ ಚಿಂತನೆಯ ಕಥೆಯನ್ನು ಧರಣಿಮಂಡಲ ಮಧ್ಯದೊಳಗೆ ಚಿತ್ರದ ಮೂಲಕ ಕೊಟ್ಟವರು ಪುಟ್ಟಣ್ಣ.
ಶ್ರೀಮಂತ ಸ್ನೇಹಿತನಿಂದ ಶೋಷಣೆಗೆ ಒಳಗಾಗಿದ್ದ ಒಂದು ಹೆಣ್ಣನ್ನು, ಅವಳಿಗೆ ಸಮಾಜದಲ್ಲಿ ಕೆಟ್ಟ ಹೆಸರು ಬರಬಾರದೆಂದು, ಅವಳನ್ನು ಮದುವೆಯಾಗಿ, ಶ್ರೇಷ್ಠ ಬಾಂಧವ್ಯವನ್ನು ತೋರಿಸುವ ಯುವಕನ ಕತೆಯುಳ್ಳ ಅಮೃತ ಗಳಿಗೆಯಂತಹ ಚಿತ್ರ ಕೊಟ್ಟರು ಪುಟ್ಟಣ್ಣ. ಅವರ ಮಾನಸ ಸರೋವರ ಚಿತ್ರವಂತೂ, ಎಲ್ಲ ಪೀಳಿಗೆಯ ಭಗ್ನ ಪ್ರೇಮಿಗಳು ನೋಡಿ ಕಣ್ಣೀರಾಕುವ ಚಿತ್ರ.
ಹೀಗೆ ತಮ್ಮ ಚಿತ್ರಗಳ ಮೂಲಕ ಚಲನಚಿತ್ರ ರಂಗಕ್ಕೆ ಹೊಸ ಹೊಸ ನಟ ನಟಿಯರನ್ನು ಪರಿಚಯಿಸುವುದೂ ಅಲ್ಲದೇ, ಚಲನಚಿತ್ರಗಳ ಮೂಲಕ ಸಾಮಾಜಿಕ ಬದಲಾವಣೆಗೆ ಸಾಕ್ಷಿಯಾದ ಪುಟ್ಟಣ್ಣನವರು, ಹಲವು ಹಳೆ ಹಾಗು ಹೊಸ ತಲೆಮಾರಿನ ಚಿತ್ರ ನಿರ್ದೇಶಕರಿಗೆ ಒಂಥರಾ ಮೇಷ್ಟ್ರು. ಇವರ ಚಿತ್ರಗಳು ಹಲವು ಭಾಷೆಗಳಿಗೆ ರಿಮೇಕ್ ಆಗಿದ್ದು, ಇವರನ್ನು ಪಡೆದ ಕನ್ನಡ ಚಲನಚಿತ್ರ ರಂಗ ಹಾಗು ನಮ್ಮ ನಾಡು ಧನ್ಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ
ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ವಿಜಯನಗರ | ನಿಲ್ಲದ ಅಕ್ರಮ ಕಲ್ಲು ಗಣಿಗಾರಿಕೆ ; ಕಣ್ಣುಮುಚ್ಚಿಕುಳಿತ ಅಧಿಕಾರಿಗಳು
-
ದಿನದ ಸುದ್ದಿ5 days ago
ಸಂತೇಬೆನ್ನೂರು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ವಮಾನವ ದಿನಾಚರಣೆ’
-
ದಿನದ ಸುದ್ದಿ2 days ago
ನಾಳೆಯಿಂದ ಜಗಳೂರಿನಲ್ಲಿ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ
-
ದಿನದ ಸುದ್ದಿ6 hours ago
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ
-
ದಿನದ ಸುದ್ದಿ6 hours ago
ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ