ದಿನದ ಸುದ್ದಿ

ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

Published

on

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್‌ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version