Connect with us

ದಿನದ ಸುದ್ದಿ

ಕಠಿಣ ಸಮಸ್ಯೆಗಳಿಗೆ ಇಲ್ಲಿದೆ ಸೂಕ್ತ ಪರಿಹಾರ : ಕರೆಮಾಡಿ

Published

on

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಕ್ರಿಯಾಶೀಲತೆಯಿಂದ ಈ ದಿನ ಕೆಲಸಗಳನ್ನು ಆರಂಭಿಸಲಿದ್ದೀರಿ. ಹಳೆಯ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಮಾಡುವ ಕೆಲಸದಿಂದ ಪ್ರಶಂಸೆ ಸಿಗಲಿದೆ. ನಿಮ್ಮ ಸಹಕಾರವನ್ನು ಹಲವರು ಬಯಸಿ ಬರಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಜಾಗೃತೆ ಇರಲಿ. ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡಬೇಕಾಗಿದೆ. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಕೆಲಸಗಳಿಗೆ ಸಹಾಯದ ಹಸ್ತ ನೀಡಲಿದ್ದಾರೆ. ಸೌಂದರ್ಯದ ಆರಾಧನೆಯನ್ನು ಮಾಡುವ ತವಕ ನಿಮ್ಮಲ್ಲಿ ಕಾಣಬಹುದು. ಯೋಜನೆಯ ವಿಷಯವಾಗಿ ಉತ್ತಮ ವಾದ ಮಂಡನೆ ಮಾಡಲಿದ್ದೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ನಿಮ್ಮ ವಿಷಯದಲ್ಲಿ ಅನಗತ್ಯ ತೊಂದರೆ ನೀಡುವವರನ್ನು ಈ ದಿನ ನಿಮ್ಮಿಂದಲೇ ಮೆಚ್ಚುಗೆ ಮಾತನಾಡಿ ಇದು ನಿಮ್ಮ ಸಮಸ್ಯೆ ನಿವಾರಣೆ ಮಾಡುತ್ತದೆ. ಪ್ರವಾಸದ ಚಿಂತನೆ ಮಾಡುವ ಸಾಧ್ಯತೆ ಇದೆ. ನಿಮ್ಮ ನಯವಾದ ವ್ಯಕ್ತಿತ್ವದಿಂದ ಸಮಸ್ಯೆಗಳನ್ನು ಪರಿಹಾರ ಮಾಡುವಿರಿ. ಪ್ರೇಮದ ಬಗ್ಗೆ ಆಸಕ್ತಿ ನಿಮ್ಮಲ್ಲಿ ಮೂಡುವುದು ಕಂಡುಬರುತ್ತದೆ. ದೈನಂದಿನ ಜೀವನಕ್ಕೆ ಅಗತ್ಯವಿರುವ ಕೆಲವು ಶೈಕ್ಷಣಿಕ ತರಬೇತಿಗಳನ್ನು ಪಡೆಯಲು ಮುಂದಾಗುತ್ತೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಹೊಸದಾಗಿ ಬರುವ ಕೆಲಸಕ್ಕೆ ನೀವು ಆತುರದಿಂದ ವರ್ತಿಸುವುದು ಬೇಡ ಯೋಜನೆಯ ಸಮಗ್ರವಾಗಿ ಅಧ್ಯಯನ ಮಾಡಿ ಮತ್ತು ವಿಳಂಬಮಾಡದೆ ಪಡೆದುಕೊಳ್ಳಿ. ಈ ದಿನ ನಿಮ್ಮಿಂದ ಗೃಹ ಕಾರ್ಯಗಳು ನಡೆಯಲಿದೆ, ಇದು ಮಡದಿಯ ಮನಸ್ಸಿಗೆ ಸಂತೋಷ ನೀಡುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ. ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending