Connect with us

ದಿನದ ಸುದ್ದಿ

ಜುಲೈ 1 ಕನ್ನಡ ಪತ್ರಿಕ್ಯೋದ್ಯಮದ ಐತಿಹಾಸಿಕ ದಿನ

Published

on

ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಈ ದಿನ ಕರ್ನಾಟದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತದೆ.

ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ 1843 ರ ಜುಲೈ 1 ರಂದು ಮಂಗಳೂರಿನಲ್ಲಿ ಬಾಸೆಲ್ ಮಿಷನ್‍ನವರ ಮುದ್ರಣಾಲಯದಿಂದ ಪ್ರಕಟವಾಯಿತು. ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರು ಸಂಪಾದಕರಾಗಿದ್ದರು. ಜರ್ಮನ್‍ನ ಮತ ಪ್ರಚಾರಕರಾದ ಮೋಗ್ಲಿಂಗ್ ಅವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ, ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂದು ಅವರನ್ನು ಕರೆಯಲಾಗುತ್ತದೆ.

ಮಂಗಳೂರು ಸಮಾಚಾರ ಪತ್ರಿಕೆ 8 ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವರ್ತಮಾನಗಳು, ಸರಕಾರಿ ನಿರೂಪಗಳು ಕಾನೂನು, ಸುಬುದ್ಧಿಯನ್ನು ಹೇಳುವ ಸಾಮತಿಗಳು, ಹಾಡುಗಳು, ಕತೆಗಳು, ಅಂತರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣಗಳಾಗಿದ್ದವೆಂದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕನ್ನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು.

ಮಂಗಳೂರ ಸಮಾಚಾರ ಪತ್ರಿಕೆ: ಮೋಗ್ಲಿಂಗ್ ಅವರು ಯುರೋಪಿಯನ್ ಪತ್ರಿಕೆಯ ಕುರಿತು ಅಪಾರ ಜ್ಞಾನ ಹೊಂದಿದ್ದರಿಂದ ಕನ್ನಡದ ಮೊದಲ ಪತ್ರಿಕೆಯು ವೃತ್ತಿಪರ ಸ್ಪರ್ಶವನ್ನು ಪಡೆಯಿತು. ಅವರು ಹಲವಾರು ಯುರೋಪಿಯನ್ ಭಾμÉಗಳ ಮೇಲೆ ಪಾಂಡಿತ್ಯವನ್ನು ಹೊಂದಿದ್ದರು. 1840 ರಲ್ಲಿ ಮಂಗಳೂರಿಗೆ ಬಂದಿಳಿದ ಕೂಡಲೇ ತುಳು, ಕೊಂಕಣಿ, ಕನ್ನಡ ಕಲಿತರು. ಅವರು ಮಿಷನರಿಯಾಗಿದ್ದರೂ, ಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದರು.

ಮಂಗಳೂರ ಸಮಾಚಾರ ಓದುಗರ ಮೇಲೆ ಪ್ರಭಾವ ಬೀರಿತು. ಹೆಚ್ಚಿನ ಸುದ್ದಿಗಳನ್ನು ವಿದೇಶಿ ಮತ್ತು ಭಾರತೀಯ ಪತ್ರಿಕೆಗಳಿಂದ ಸಂಗ್ರಹಿಸಲಾಗುತ್ತಿತ್ತು. ಇದು ಕಲ್ಲಚ್ಚಿನಲ್ಲಿ ಹದಿನೈದು ದಿನಗಳಿಗೊಮ್ಮೆ ಮಂಗಳೂರಿನಿಂದ ಪ್ರಕಟವಾಗುತ್ತಿತ್ತು. ನಾಲ್ಕು ಪುಟಗಳನ್ನೊಳಗೊಂಡ ಪತ್ರಿಕೆಯ ಬೆಲೆ ಒಂದು ಪೈಸೆ ನಿಗದಿ ಮಾಡಲಾಗಿತ್ತು. ಸಂಪಾದಕರಾಗಿ, ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಇದರಲ್ಲಿ ಸ್ಥಳೀಯ ಸುದ್ದಿಗಳು, ಸರ್ಕಾರಿ ಅಧಿಸೂಚನೆಗಳು, ಕಾನೂನು ವಿಷಯಗಳು, ಹಾಡುಗಳು, ಕಥೆಗಳು ಮತ್ತು ಇತರ ರಾಜ್ಯಗಳ ಸುದ್ದಿಗಳು ಪ್ರಕಟವಾಗುತ್ತಿತ್ತು. ಭಾರತದ ವಿವಿಧ ಭಾಗಗಳನ್ನು ವಶಪಡಿಸಿಕೊಳ್ಳಲು ಬ್ರಿಟಿಷರು ಮಾಡುತ್ತಿದ್ದ ಪ್ರಯತ್ನಗಳ ಕುರಿತು ಅವರು ವ್ಯಾಪಕವಾಗಿ ಪ್ರಕಟಿಸಿದರು. ಜೊತೆಗೆ ಅಪರಾಧಗಳನ್ನು ಮಾಡಿದರೆ ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂಬ ತಿಳಿವಳಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಕೋರ್ಟಿನ ಪ್ರಕರಣಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು.
:ಮೋಗ್ಲಿಂಗ್ ಅವರು ಒಬ್ಬ ಮಿಷನರಿಯಾಗಿದ್ದರೂ, ಕೂಡ ಶಿಕ್ಷಣ, ಸಾಹಿತ್ಯಿಕ ಚಟುವಟಿಕೆಗಳು ಮತ್ತು ಪತ್ರಿಕೆ ಪ್ರಕಟಣೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕಾಗಿ ಅವರು ಮಾಡಿದ ಶ್ಲಾಘನೀಯ ಕೆಲಸಕ್ಕಾಗಿ, ಟ್ಯೂಬಿಂಗೆನ್‍ನ ಎಬರ್‍ಹಾರ್ಡ್ ಕಾಲ್ರ್ಸ್ ವಿಶ್ವವಿದ್ಯಾನಿಲಯವು 1858 ರಲ್ಲಿ ಮೋಗ್ಲಿಂಗ್‍ಗೆ ಗೌರವ ಡಾಕ್ಟರೇಟ್ ಅನ್ನು ನೀಡಿದ್ದು ಕನ್ನಡಕ್ಕಾಗಿ ಮಾಡಿದ ಕಾರ್ಯಕ್ಕಾಗಿ ಅಂತಹ ಗೌರವವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.

ಆಗಿನ ಬರಹದ ವ್ಯಾಕರಣ – ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು 8 ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಅಧುನಿಕ ತಂತ್ರಜ್ಞಾನದೊಂದಿಗೆ ಬೆಳೆದಿದ್ದು ಈಗ ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್‍ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್‍ಗಳು, ಆನ್‍ಲೈನ್ ಆವೃತ್ತಿಗಳು, ವೆಬ್‍ಸೈಟ್‍ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್‍ಬುಕ್- ವಾಟ್ಸ್ಪ್‍ಪ್ ಮಾಹಿತಿ- ಇಂಟರ್‍ನೆಟ್ ವಿನಿಮಯ ಗ್ರೂಪ್‍ಗಳು, ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳು… ಹೀಗೆ ಮಾಧ್ಯಮದ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಒಂದಾಗಿದೆ. ಪತ್ರಿಕ್ಯೋದಮದಲ್ಲಿ ಉದ್ಯೋಗ ಅವಕಾಶವೂ ಸೃಷ್ಠಿಯಾಗಿ ಅನೇಕ ಪತ್ರಕರ್ತರು ರಾಜ್ಯ- ದೇಶ – ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಕನ್ನಡದ ಪತ್ರಿಕ್ಯೋದ್ಯಮದ ವಿಷಯದಲ್ಲಿ ಇಂದು ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ವೃತ್ತಪರ ಕೋರ್ಸ್ ರೂಪದಲ್ಲಿ ಪತ್ರಿಕ್ಯೊದ್ಯಮ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಸೇರಿದಂತೆ ಪಿಜಿ ಡಿಪ್ಲೋಮಾ ಕೋಸ್ರ್ಗಳನ್ನು ಸಹ ಆರಂಭಿಸಲಾಗಿದ್ದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿ ಪತ್ರಿಕೋದ್ಯಮದಲ್ಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದು, ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದೆ. (ಬರಹ-ರಘು ಆರ್.
ಅಪ್ರೆಂಟಿಸ್, ವಾರ್ತಾ ಇಲಾಖೆ ಶಿವಮೊಗ್ಗ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending