ದಿನದ ಸುದ್ದಿ
ಜುಲೈ 1 ಕನ್ನಡ ಪತ್ರಿಕ್ಯೋದ್ಯಮದ ಐತಿಹಾಸಿಕ ದಿನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2024/07/Patrika_dina_suddidina-1000x600.jpg&description=ಜುಲೈ 1 ಕನ್ನಡ ಪತ್ರಿಕ್ಯೋದ್ಯಮದ ಐತಿಹಾಸಿಕ ದಿನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2024/07/Patrika_dina_suddidina-1000x600.jpg&description=ಜುಲೈ 1 ಕನ್ನಡ ಪತ್ರಿಕ್ಯೋದ್ಯಮದ ಐತಿಹಾಸಿಕ ದಿನ', 'pinterestShare', 'width=750,height=350'); return false;" title="Pin This Post">
ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಈ ದಿನ ಕರ್ನಾಟದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತದೆ.
ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ 1843 ರ ಜುಲೈ 1 ರಂದು ಮಂಗಳೂರಿನಲ್ಲಿ ಬಾಸೆಲ್ ಮಿಷನ್ನವರ ಮುದ್ರಣಾಲಯದಿಂದ ಪ್ರಕಟವಾಯಿತು. ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರು ಸಂಪಾದಕರಾಗಿದ್ದರು. ಜರ್ಮನ್ನ ಮತ ಪ್ರಚಾರಕರಾದ ಮೋಗ್ಲಿಂಗ್ ಅವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ, ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂದು ಅವರನ್ನು ಕರೆಯಲಾಗುತ್ತದೆ.
ಮಂಗಳೂರು ಸಮಾಚಾರ ಪತ್ರಿಕೆ 8 ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವರ್ತಮಾನಗಳು, ಸರಕಾರಿ ನಿರೂಪಗಳು ಕಾನೂನು, ಸುಬುದ್ಧಿಯನ್ನು ಹೇಳುವ ಸಾಮತಿಗಳು, ಹಾಡುಗಳು, ಕತೆಗಳು, ಅಂತರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣಗಳಾಗಿದ್ದವೆಂದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕನ್ನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು.
ಮಂಗಳೂರ ಸಮಾಚಾರ ಪತ್ರಿಕೆ: ಮೋಗ್ಲಿಂಗ್ ಅವರು ಯುರೋಪಿಯನ್ ಪತ್ರಿಕೆಯ ಕುರಿತು ಅಪಾರ ಜ್ಞಾನ ಹೊಂದಿದ್ದರಿಂದ ಕನ್ನಡದ ಮೊದಲ ಪತ್ರಿಕೆಯು ವೃತ್ತಿಪರ ಸ್ಪರ್ಶವನ್ನು ಪಡೆಯಿತು. ಅವರು ಹಲವಾರು ಯುರೋಪಿಯನ್ ಭಾμÉಗಳ ಮೇಲೆ ಪಾಂಡಿತ್ಯವನ್ನು ಹೊಂದಿದ್ದರು. 1840 ರಲ್ಲಿ ಮಂಗಳೂರಿಗೆ ಬಂದಿಳಿದ ಕೂಡಲೇ ತುಳು, ಕೊಂಕಣಿ, ಕನ್ನಡ ಕಲಿತರು. ಅವರು ಮಿಷನರಿಯಾಗಿದ್ದರೂ, ಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದರು.
ಮಂಗಳೂರ ಸಮಾಚಾರ ಓದುಗರ ಮೇಲೆ ಪ್ರಭಾವ ಬೀರಿತು. ಹೆಚ್ಚಿನ ಸುದ್ದಿಗಳನ್ನು ವಿದೇಶಿ ಮತ್ತು ಭಾರತೀಯ ಪತ್ರಿಕೆಗಳಿಂದ ಸಂಗ್ರಹಿಸಲಾಗುತ್ತಿತ್ತು. ಇದು ಕಲ್ಲಚ್ಚಿನಲ್ಲಿ ಹದಿನೈದು ದಿನಗಳಿಗೊಮ್ಮೆ ಮಂಗಳೂರಿನಿಂದ ಪ್ರಕಟವಾಗುತ್ತಿತ್ತು. ನಾಲ್ಕು ಪುಟಗಳನ್ನೊಳಗೊಂಡ ಪತ್ರಿಕೆಯ ಬೆಲೆ ಒಂದು ಪೈಸೆ ನಿಗದಿ ಮಾಡಲಾಗಿತ್ತು. ಸಂಪಾದಕರಾಗಿ, ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಇದರಲ್ಲಿ ಸ್ಥಳೀಯ ಸುದ್ದಿಗಳು, ಸರ್ಕಾರಿ ಅಧಿಸೂಚನೆಗಳು, ಕಾನೂನು ವಿಷಯಗಳು, ಹಾಡುಗಳು, ಕಥೆಗಳು ಮತ್ತು ಇತರ ರಾಜ್ಯಗಳ ಸುದ್ದಿಗಳು ಪ್ರಕಟವಾಗುತ್ತಿತ್ತು. ಭಾರತದ ವಿವಿಧ ಭಾಗಗಳನ್ನು ವಶಪಡಿಸಿಕೊಳ್ಳಲು ಬ್ರಿಟಿಷರು ಮಾಡುತ್ತಿದ್ದ ಪ್ರಯತ್ನಗಳ ಕುರಿತು ಅವರು ವ್ಯಾಪಕವಾಗಿ ಪ್ರಕಟಿಸಿದರು. ಜೊತೆಗೆ ಅಪರಾಧಗಳನ್ನು ಮಾಡಿದರೆ ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂಬ ತಿಳಿವಳಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಕೋರ್ಟಿನ ಪ್ರಕರಣಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು.
:ಮೋಗ್ಲಿಂಗ್ ಅವರು ಒಬ್ಬ ಮಿಷನರಿಯಾಗಿದ್ದರೂ, ಕೂಡ ಶಿಕ್ಷಣ, ಸಾಹಿತ್ಯಿಕ ಚಟುವಟಿಕೆಗಳು ಮತ್ತು ಪತ್ರಿಕೆ ಪ್ರಕಟಣೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕಾಗಿ ಅವರು ಮಾಡಿದ ಶ್ಲಾಘನೀಯ ಕೆಲಸಕ್ಕಾಗಿ, ಟ್ಯೂಬಿಂಗೆನ್ನ ಎಬರ್ಹಾರ್ಡ್ ಕಾಲ್ರ್ಸ್ ವಿಶ್ವವಿದ್ಯಾನಿಲಯವು 1858 ರಲ್ಲಿ ಮೋಗ್ಲಿಂಗ್ಗೆ ಗೌರವ ಡಾಕ್ಟರೇಟ್ ಅನ್ನು ನೀಡಿದ್ದು ಕನ್ನಡಕ್ಕಾಗಿ ಮಾಡಿದ ಕಾರ್ಯಕ್ಕಾಗಿ ಅಂತಹ ಗೌರವವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
ಆಗಿನ ಬರಹದ ವ್ಯಾಕರಣ – ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು 8 ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಅಧುನಿಕ ತಂತ್ರಜ್ಞಾನದೊಂದಿಗೆ ಬೆಳೆದಿದ್ದು ಈಗ ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್ಗಳು, ಆನ್ಲೈನ್ ಆವೃತ್ತಿಗಳು, ವೆಬ್ಸೈಟ್ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್ಬುಕ್- ವಾಟ್ಸ್ಪ್ಪ್ ಮಾಹಿತಿ- ಇಂಟರ್ನೆಟ್ ವಿನಿಮಯ ಗ್ರೂಪ್ಗಳು, ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳು… ಹೀಗೆ ಮಾಧ್ಯಮದ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಒಂದಾಗಿದೆ. ಪತ್ರಿಕ್ಯೋದಮದಲ್ಲಿ ಉದ್ಯೋಗ ಅವಕಾಶವೂ ಸೃಷ್ಠಿಯಾಗಿ ಅನೇಕ ಪತ್ರಕರ್ತರು ರಾಜ್ಯ- ದೇಶ – ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.
ಕನ್ನಡದ ಪತ್ರಿಕ್ಯೋದ್ಯಮದ ವಿಷಯದಲ್ಲಿ ಇಂದು ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ವೃತ್ತಪರ ಕೋರ್ಸ್ ರೂಪದಲ್ಲಿ ಪತ್ರಿಕ್ಯೊದ್ಯಮ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್ಡಿ ಸೇರಿದಂತೆ ಪಿಜಿ ಡಿಪ್ಲೋಮಾ ಕೋಸ್ರ್ಗಳನ್ನು ಸಹ ಆರಂಭಿಸಲಾಗಿದ್ದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿ ಪತ್ರಿಕೋದ್ಯಮದಲ್ಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದು, ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದೆ. (ಬರಹ-ರಘು ಆರ್.
ಅಪ್ರೆಂಟಿಸ್, ವಾರ್ತಾ ಇಲಾಖೆ ಶಿವಮೊಗ್ಗ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


