ದಿನದ ಸುದ್ದಿ
ಭಾಷಿಕ ಮೂಲಭೂತವಾದ ಹೆಚ್ಚು ಅಪಾಯಕಾರಿ : ಡಾ.ಎ.ಬಿ. ರಾಮಚಂದ್ರಪ್ಪ
ಸುದ್ದಿದಿನ, ದಾವಣಗೆರೆ:ಕನ್ನಡ ಆಡಳಿತ ಭಾಷೆಯಾಗಬೇಕು ಎಂಬುದು ನಮ್ಮೆಲ್ಲರ ಬಹುಕಾಲದ ಬೇಡಿಕೆ. ಆದರೆ ಇವತ್ತಿಗೂ ಕನ್ನಡವನ್ನು ಆಡಳಿತ ಭಾಷೆಯಾಗಿ ಪರಿಪೂರ್ಣವಾಗಿ ತಂದುಕೊಳ್ಳ ಲಕ್ಕೆ ಆಗಿಲ್ಲ ಎಂಬ ಆತಂಕದಲ್ಲಿ ನಾವಿದ್ದೇವೆ ಎಂದು ಪ್ರಾಧ್ಯಾಪಕ ಡಾ.ಎ.ಬಿ ರಾಮಚಂದ್ರಪ್ಪನವರು ಎಚ್ಚರಿಸಿದರು.
ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿರುವ10 ನೇ ದಿನದ ಅಂತರ್ಜಾಲ ಮೂಲಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತ ಭಾಷೆಯಾಗಿ ಕನ್ನಡವನ್ನು ತರಬೇಕು ಎಂದು 1963 ರಿಂದ 2002 ರವರೆಗೂ ಒಟ್ಟು 25 ಸುತೋಲೆಗಳು ಸರ್ಕಾರದಿಂದ ಹೊರಬಿದ್ದಿವೆ. ಆದರೂ ಕೂಡ ಆಡಳಿತ ಭಾಷೆಯಾಗಿ ಕನ್ನಡವನ್ನು ಸಂಪೂರ್ಣವಾಗಿ ಇನ್ನೂ ಒಪ್ಪಿಕೊಂಡಿಲ್ಲ ಕಾರಣಗಳೇನು ಎಂದು ನೋಡಿದಾಗ ಕನ್ನಡ ನೆಲದಲ್ಲೇ ಕನ್ನಡವನ್ನು ಆಡಳಿತ ಭಾಷೆಯಾಗಿ ಮಾಡಲು ಇಷ್ಟೆಲ್ಲಾ ಹೋರಾಟಗಳನ್ನು ಮಾಡಬೇಕಾದ ಸಂದರ್ಭ ಬಂದೊದಗಿದೆ ಎಂದರು.
ಕನ್ನಡ ಇಂದು ಬೇರೆ ಬೇರೆ ಆಯಾಮಗಳ ಗೆ ಎದುರಿಸುತ್ತಿರುವ ಸವಾಲುಗಳು ಏನು ಎಂಬುದನ್ನು ನೋಡಿದಾಗ, ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದು. ಪ್ರಾಚೀನ ಕವಿಗಳು ಕನ್ನಡವನ್ನು ಸಂಭ್ರಮದಿಂದ ಹಾಡಿಹೊಗಳಿದ್ದಾರೆ. ಆಧುನಿಕ ಕನ್ನಡ ಸಾಹಿತ್ಯ ಕೂಡ ಆರಂಭಕ್ಕೆ ಅರುಣೋದಯ ಮತ್ತು ನವೋದಯ ಕಾಲಕ್ಕೆ ಅಭಿಮಾನದ ಸಾಧ್ಯತೆಗಳನ್ನು ಪ್ರಧಾನವಾಗಿ ಅಭಿವ್ಯಕ್ತಿಸಿದಂತಹ ಸಾಧ್ಯತೆಯನ್ನು ಗಮನಿಸಬಹುದು ಎಂದು ಹೇಳಿದರು.
ಇವತ್ತು ಕನ್ನಡ ಎದುರಿಸುತ್ತಿರುವ ಸವಾಲುಗಳೇನು?
ವಾಸ್ತವಿಕವಾಗಿ ಜಗತ್ತಿನ ಯಾವುದೇ ಭಾಷೆಗೂ, ಧರ್ಮಕ್ಕೂ ಸಂಬಂಧವಿಲ್ಲ. ಇರಬಾರದು. ಆದ್ದರಿಂದ ಕನ್ನಡವನ್ನು ಒಂದು ಜಾತ್ಯಾತೀತ ಧರ್ಮದಿಂದ ನೋಡುವಂತಹ ಒಂದು ಮನೋಧರ್ಮ ರೂಪಗೊಳ್ಳ ಬೇಕಾಗಿರುವುದು ಬಹಳ ಮುಖ್ಯವಾದುದಾಗಿದೆ.
ಕನ್ನಡವನ್ನು ಯಾವುದೋ ಒಂದು ಜನವರ್ಗಕ್ಕೆ ಕಟ್ಟಾಕಿ ನೋಡುವಂತಹ ಪರಿಕಲ್ಪನೆ ನಮ್ಮ ನಡುವೆ ಇದೆ. ಇದು ಒಂದು ಕಡೆಯಾದರೆ, ಇನ್ನೊಂದೆಡೆ ಕನ್ನಡ ಭಾಷೆಯೆಂದರೆ ರಾಜಕೀಯ ಗಡಿಗೆ ಸೀಮಿತಗೊಳಿಸುವಂತ ಮನಸ್ಸು ನಮ್ಮಗಳ ನಡುವೆ ರೂಪಗೊಳ್ಳುತ್ತಿದೆ. ಹಾಗಾಗಿ ಭಾಷೆಗೂ ರಾಜಕೀಯ ಗಡಿಗೂ ಸಂಬಂಧಗಳನ್ನು ಕಲ್ಪಿಸಬಾರದು ನಮ್ಮ ಕನ್ನಡವನ್ನು ನಾವುಅಭಿವೃದ್ಧಿಗೊಳಿಸಬೇಕಾಗುತ್ತದೆ. ಬೆಳೆಸಬೇಕಾಗುತ್ತದೆ ಎಂಬ ಸವಾಲುಗಳು ನಮ್ಮ ಮುಂದಿವೆ.
ಕನ್ನಡವನ್ನು ಯಾವುದೇ ಧರ್ಮದ ಮೂಲದಿಂದ ನೋಡುವ ಪರಿಕಲ್ಪನೆಯಿಂದ ನಾವು ಬಿಡುಗಡೆಹೊಂದಿ ಬೇಕಾಗಿದೆ. ಇಂದು ನಾವೂ ಬಹು ದೊಡ್ಡ ಸವಾಲನ್ನು ನಾವು ಎದುರಿಸುತ್ತಿದ್ದೇವೆ. ಅದೆಂದರೆ ಮಾಧ್ಯಮದ್ದು. ಕನ್ನಡ ಮಾಧ್ಯಮವಾಗಿ ನಾವು ಇವತ್ತಿಗೂ ಕೂಡಾ ಅದನ್ನು ಸಕ್ರಿಯವಾಗಿ ಜನಮಾನಸದಲ್ಲಿ ಬಿತ್ತಲಿಕ್ಕೆ ಸಾಧ್ಯವಾಗುತ್ತಿಲ್ಲವೆಂಬ ಆತಂಕ ಇತ್ತೀಚಿನ ದಶಮಾನಗಳಲ್ಲಿ ಆರಂಭವಾಗಿದೆ.
ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದ ಇಂಗ್ಲಿಷ್ ಮಾಧ್ಯಮ ಶಾಲೆಗಳೇ ಹೆಚ್ಚಾಗುತ್ತಾ ಇವೆ. ಸರ್ಕಾರಗಳೂ ಕೂಡಾ ಪರೋಕ್ಷವಾಗಿ ಅದಕ್ಕೆ ಸಹಕಾರ ನೀಡುತ್ತಿದ್ದವೆಂದರೆ ತಪ್ಪಾಗಲಿಕ್ಕಿಲ್ಲ.
ಯಾವುದೇ ಭಾಷೆಯ ತಿಳುವಳಿಕೆ ನಮಗೆ ಬೇಕೆಂದಲ್ಲಿ ಇಂಗ್ಲೀಷು ಬೇಕು, ಇನ್ನೊಂದು ಭಾಷೆಯೂ ಬೇಕು. ಅದನ್ನು ಭಾಷೆಯಾಗಿ ಓದಬೇಕೇ ವಿನಃ ಮಾಧ್ಯಮವಾಗಿ ಓದುವುದಲ್ಲ.ಮಾಧ್ಯಮ ಕನ್ನಡದಲ್ಲೇ ಇರಬೇಕು.
ಪ್ರಜಾಪ್ರಭುತ್ವದ ಆಶಯಗಳು ಜನಮನಕ್ಕೆ ತಲುಪಬೇಕಾದರೆ ಶಿಕ್ಷಣ ಕೂಡ ಆಯಾ ಪ್ರದೇಶದ ಮಾತೃಭಾಷೆಯಲ್ಲಿ ಇರಬೇಕು. ಜನರಿಗೆ ಅದು ಅರಿವಿಗೆ ಬರಬೇಕು. ಆ ಕಾರಣಕ್ಕೆ ಕನ್ನಡ ಮಾಧ್ಯಮ ಎನ್ನುವುದು ಹೆಚ್ಚು ಹೆಚ್ಚಾಗಿ ನಮ್ಮಲ್ಲಿ ಸಾಧ್ಯವಾಗಿದೆ ಎಂದರೆ ಅಷ್ಟರ ಮಟ್ಟಿಗೆ ನಾವು ಪ್ರಜಾಪ್ರಭುತ್ವದ ಸಾಧ್ಯತೆಗಳನ್ನು ಯಶಸ್ವಿಗೊಳಿಸುತ್ತಿದ್ದೇವೆಂದೇ ಅರ್ಥ.
ಕನ್ನಡ ಮಾಧ್ಯಮವನ್ನು ನಾವು ಜನರ ನಡುವೆ ಹೊತ್ತೊಯ್ಯುವ ಕ್ರಮ ಹೇಗೆ ಎನ್ನುವುದನ್ನು ನಮ್ಮ ಆಡಳಿತಾರೂಢ ಸರ್ಕಾರಗಳು ಗಂಭೀರವಾಗಿ ಆಲೋಚನೆ ಮಾಡಬೇಕಾದ ಸಂದರ್ಭ ಇವತ್ತು ನಮ್ಮ ಕಣ್ಣೆದುರಿಗೆ ಇದೆ.
ಪ್ರಾದೇಶಿಕ ಭಾಷೆಗಳ ಮತ್ತು ನಮ್ಮ ನಡುವೆ ಒಂದು ದೊಡ್ಡ ತೊಡಕೆಂದರೆ, ಕನ್ನಡ ಎಂದರೆ ಒಂದೇ ಕನ್ನಡವಿಲ್ಲ. ಕನ್ನಡದೊಂದಿಗೆ ಹಲವು ಕನ್ನಡಗಳಿವೆ. ಧಾರವಾಡ ಕನ್ನಡ, ಮಂಗಳೂರು ಕನ್ನಡ, ಮೈಸೂರು ಕನ್ನಡ ಇರಬಹುದು ಇವುಗಳ ನಡುವೆ ಯಾವ ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಪ್ರಮಾಣಿಕೃತ ಭಾಷೆಯಾಗಿ ಸ್ವೀಕರಿಸಿದ್ದೇವೆ. ಪ್ರಮಾಣಿಕೃತ ಭಾಷೆಯೆಂದರೆ ಎಲ್ಲಾ ಜನರಿಗೆ ಯಾವ ಭಾಷೆ ಸರಳವಾಗಿ ಸಂವಹನವಾಗಬಲ್ಲದೋ ಅಂತಹದ್ದೊಂದು ಭಾಷೆಯನ್ನು ನಾವು ಪ್ರಮಾಣಿಕೃತ ಭಾಷೆಯೆಂದು ಸ್ವೀಕರಿಸಿದ್ದೇವೆ.
ಇದಕ್ಕಿಂತಲೂ ವಾಸ್ತವವಾಗಿ ಯಾವ ಪ್ರದೇಶದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಂಡಿರುವರೋ ಅವರ ಭಾಷೆಗೆ ಮಾನ್ಯತೆ ಇರುವಂತಹ ಸಾಧ್ಯತಯು ಕೂಡ ಹೆಚ್ಚಾಗಿದೆ. ನಮ್ಮಲ್ಲಿ ಹಲವು ಉಪ ಭಾಷೆಗಳು ಹಲವು ಸಾಮಾಜಿಕ ಭಾಷೆಗಳು ಅವಘನಗೊಳಗಾಗಿದ್ದವೆ. ಯಾವ ಜನಸಮುದಾಯ ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಗೊಂಡಿದ್ದವೊ ಅವರ ಭಾಷೆಯನ್ನು ಆಸ್ವಾದಿಸುವಂತಹ, ಅದನ್ನೇ ಆಡಳಿತ ಕನ್ನಡವಾಗಿ ಸ್ವೀಕರಿಸುವ ಅಥವಾ ಅದನ್ನು ಪ್ರಮಾಣಿಕೃತ ಕನ್ನಡವಾಗಿ ಸ್ವೀಕರಿಸುವ ರಾಜಕೀಯ ಹುನ್ನಾರವೇ ನಮ್ಮ ನಡುವೆ ಇದೆ.
ಸಾಮಾಜಿಕ ಅಸಮಾನತೆಗಳು, ಆರ್ಥಿಕ ಅಸಮಾನತೆಗಳು, ಪ್ರಾದೇಶಿಕ ಅಸಮಾನತೆಗಳು ಇವು ಭಾಷಿಕ ನೆಲೆಗಳೊಳಗೂ ವ್ಯಕ್ತವಾಗುತ್ತಿರುತ್ತದೆ. ಹಾಗಾಗಿ ಭಾಷಿಕ ನೆಲೆಯ ತಾರತಮ್ಯತೆ ನಮ್ಮಲ್ಲಿ ಇಲ್ಲವಾಗಬೇಕಾದರೆ ನಮ್ಮ ನಡುವಿನ ತಾರತಮ್ಯಗಳನ್ನೂ ನಾವು ಹೋಗಲಾಡಿಸಬೇಕಾಗಿದೆ.
ಭಾಷಿಕ ಮೂಲಭೂತವಾದ ಹೆಚ್ಚು ಅಪಾಯಕಾರಿ. ಭಾಷಿಕ ಮೂಲಭೂತವಾದದ ಬೋನಿನಲ್ಲಿ ಇವತ್ತು ಕನ್ನಡ ನರಳುತ್ತಾ ಇದೆ ಆದ್ರಿಂದ ಬಿಡುಗಡೆಗೊಳಿಸಬೇಕಾದ್ದು ನಮ್ಮೆಲ್ಲರ ಮುಂದಿರುವ ಸವಾಲು.ವಿಶ್ವದ ಜ್ಞಾನವನ್ನು ಕನ್ನಡಕ್ಕೆ ತರುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಕನ್ನಡವನ್ನು ಒಂದು ಭಾಷೆಯಾಗಿ ಮಾಡಬೇಕಾದರೆ ನಾವು ಭಾಷಿಕ ಮೂಲಭೂತವಾದದಿಂದ ಹೊರಬಂದು ಜಗತ್ತಿನ ಎಲ್ಲಾ ಭಾಷೆಗಳನ್ನು ದಕ್ಕಿಸಿಕೊಳ್ಳಬೇಕಾಗಿದೆ. ಅಲ್ಲಿನ ಅರಿವನ್ನು ನಮ್ಮದಾಗಿ ಮಾಡಿಕೊಳ್ಳಬೇಕಾಗಿದೆ. ಆ ಮುಖೇನ ಕನ್ನಡವನ್ನು ನಾವು ನೀವು ಅಭಿವೃದ್ಧಿಗೊಳಿಸಲು ಸಾಧ್ಯ ಎಂದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು ಕನ್ನಡಕ್ಕೆ ಕುತ್ತು ತಂದೊಡ್ಡುತ್ತಿರುವ ಅನ್ಯ ಭಾಷಿಕರ ಮಧ್ಯೆ ಕನ್ನಡ ಸಿಡಿದೇಳುತ್ತದೆ. ಕನ್ನಡ ನಾಡು ವೈಭವದ ನಾಡು. ನಿನ್ನೆಯನು ಮರೆತವನು ಇಂದು ಬದುಕಲಾರ.ನಾಳೆಯನ್ನು ಕಟ್ಟಲಾರ. ನಮ್ಮ ನಾಡು ನುಡಿಯ ಇತಿಹಾಸ ತಿಳಿಯಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಏಕೆಂದರೆ ಕನ್ನಡ ಕಟ್ಟುವ ಕೆಲಸ ನಮ್ಮಿಂದ ಆಗಬೇಕಾಗಿದೆ. ವಿವಿಧತೆಯಲ್ಲಿ ಏಕತೆ ಸಾಧಿಸುವ ನಾವು ಸುಂದರ ಭವ್ಯ ಕನ್ನಡದ ಬೆಳವಣಿಗೆಗೆ ಕಂಕಣಕಟ್ಟಿ ದುಡಿಯೋಣ ಎಂದು ಕರೆಕೊಟ್ಟರು.
ಆರಂಭದಲ್ಲಿ ಎಚ್ಕೆ ಸತ್ಯಭಾಮ ಇವರು ಸರ್ವರನ್ನು ಸ್ವಾಗತಿಸಿದರು ವೇದಿಕೆಯ ಶಾರದಾ ತಂಡದವರು ಸುಗಮ ಸಂಗೀತ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.
ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.
ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.
ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.
COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.
ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.
‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
-
ದಿನದ ಸುದ್ದಿ4 days agoಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ
-
ದಿನದ ಸುದ್ದಿ2 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

