ದಿನದ ಸುದ್ದಿ
ಭಾಷಿಕ ಮೂಲಭೂತವಾದ ಹೆಚ್ಚು ಅಪಾಯಕಾರಿ : ಡಾ.ಎ.ಬಿ. ರಾಮಚಂದ್ರಪ್ಪ
ಸುದ್ದಿದಿನ, ದಾವಣಗೆರೆ:ಕನ್ನಡ ಆಡಳಿತ ಭಾಷೆಯಾಗಬೇಕು ಎಂಬುದು ನಮ್ಮೆಲ್ಲರ ಬಹುಕಾಲದ ಬೇಡಿಕೆ. ಆದರೆ ಇವತ್ತಿಗೂ ಕನ್ನಡವನ್ನು ಆಡಳಿತ ಭಾಷೆಯಾಗಿ ಪರಿಪೂರ್ಣವಾಗಿ ತಂದುಕೊಳ್ಳ ಲಕ್ಕೆ ಆಗಿಲ್ಲ ಎಂಬ ಆತಂಕದಲ್ಲಿ ನಾವಿದ್ದೇವೆ ಎಂದು ಪ್ರಾಧ್ಯಾಪಕ ಡಾ.ಎ.ಬಿ ರಾಮಚಂದ್ರಪ್ಪನವರು ಎಚ್ಚರಿಸಿದರು.
ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿರುವ10 ನೇ ದಿನದ ಅಂತರ್ಜಾಲ ಮೂಲಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಡಳಿತ ಭಾಷೆಯಾಗಿ ಕನ್ನಡವನ್ನು ತರಬೇಕು ಎಂದು 1963 ರಿಂದ 2002 ರವರೆಗೂ ಒಟ್ಟು 25 ಸುತೋಲೆಗಳು ಸರ್ಕಾರದಿಂದ ಹೊರಬಿದ್ದಿವೆ. ಆದರೂ ಕೂಡ ಆಡಳಿತ ಭಾಷೆಯಾಗಿ ಕನ್ನಡವನ್ನು ಸಂಪೂರ್ಣವಾಗಿ ಇನ್ನೂ ಒಪ್ಪಿಕೊಂಡಿಲ್ಲ ಕಾರಣಗಳೇನು ಎಂದು ನೋಡಿದಾಗ ಕನ್ನಡ ನೆಲದಲ್ಲೇ ಕನ್ನಡವನ್ನು ಆಡಳಿತ ಭಾಷೆಯಾಗಿ ಮಾಡಲು ಇಷ್ಟೆಲ್ಲಾ ಹೋರಾಟಗಳನ್ನು ಮಾಡಬೇಕಾದ ಸಂದರ್ಭ ಬಂದೊದಗಿದೆ ಎಂದರು.
ಕನ್ನಡ ಇಂದು ಬೇರೆ ಬೇರೆ ಆಯಾಮಗಳ ಗೆ ಎದುರಿಸುತ್ತಿರುವ ಸವಾಲುಗಳು ಏನು ಎಂಬುದನ್ನು ನೋಡಿದಾಗ, ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದು. ಪ್ರಾಚೀನ ಕವಿಗಳು ಕನ್ನಡವನ್ನು ಸಂಭ್ರಮದಿಂದ ಹಾಡಿಹೊಗಳಿದ್ದಾರೆ. ಆಧುನಿಕ ಕನ್ನಡ ಸಾಹಿತ್ಯ ಕೂಡ ಆರಂಭಕ್ಕೆ ಅರುಣೋದಯ ಮತ್ತು ನವೋದಯ ಕಾಲಕ್ಕೆ ಅಭಿಮಾನದ ಸಾಧ್ಯತೆಗಳನ್ನು ಪ್ರಧಾನವಾಗಿ ಅಭಿವ್ಯಕ್ತಿಸಿದಂತಹ ಸಾಧ್ಯತೆಯನ್ನು ಗಮನಿಸಬಹುದು ಎಂದು ಹೇಳಿದರು.
ಇವತ್ತು ಕನ್ನಡ ಎದುರಿಸುತ್ತಿರುವ ಸವಾಲುಗಳೇನು?
ವಾಸ್ತವಿಕವಾಗಿ ಜಗತ್ತಿನ ಯಾವುದೇ ಭಾಷೆಗೂ, ಧರ್ಮಕ್ಕೂ ಸಂಬಂಧವಿಲ್ಲ. ಇರಬಾರದು. ಆದ್ದರಿಂದ ಕನ್ನಡವನ್ನು ಒಂದು ಜಾತ್ಯಾತೀತ ಧರ್ಮದಿಂದ ನೋಡುವಂತಹ ಒಂದು ಮನೋಧರ್ಮ ರೂಪಗೊಳ್ಳ ಬೇಕಾಗಿರುವುದು ಬಹಳ ಮುಖ್ಯವಾದುದಾಗಿದೆ.
ಕನ್ನಡವನ್ನು ಯಾವುದೋ ಒಂದು ಜನವರ್ಗಕ್ಕೆ ಕಟ್ಟಾಕಿ ನೋಡುವಂತಹ ಪರಿಕಲ್ಪನೆ ನಮ್ಮ ನಡುವೆ ಇದೆ. ಇದು ಒಂದು ಕಡೆಯಾದರೆ, ಇನ್ನೊಂದೆಡೆ ಕನ್ನಡ ಭಾಷೆಯೆಂದರೆ ರಾಜಕೀಯ ಗಡಿಗೆ ಸೀಮಿತಗೊಳಿಸುವಂತ ಮನಸ್ಸು ನಮ್ಮಗಳ ನಡುವೆ ರೂಪಗೊಳ್ಳುತ್ತಿದೆ. ಹಾಗಾಗಿ ಭಾಷೆಗೂ ರಾಜಕೀಯ ಗಡಿಗೂ ಸಂಬಂಧಗಳನ್ನು ಕಲ್ಪಿಸಬಾರದು ನಮ್ಮ ಕನ್ನಡವನ್ನು ನಾವುಅಭಿವೃದ್ಧಿಗೊಳಿಸಬೇಕಾಗುತ್ತದೆ. ಬೆಳೆಸಬೇಕಾಗುತ್ತದೆ ಎಂಬ ಸವಾಲುಗಳು ನಮ್ಮ ಮುಂದಿವೆ.
ಕನ್ನಡವನ್ನು ಯಾವುದೇ ಧರ್ಮದ ಮೂಲದಿಂದ ನೋಡುವ ಪರಿಕಲ್ಪನೆಯಿಂದ ನಾವು ಬಿಡುಗಡೆಹೊಂದಿ ಬೇಕಾಗಿದೆ. ಇಂದು ನಾವೂ ಬಹು ದೊಡ್ಡ ಸವಾಲನ್ನು ನಾವು ಎದುರಿಸುತ್ತಿದ್ದೇವೆ. ಅದೆಂದರೆ ಮಾಧ್ಯಮದ್ದು. ಕನ್ನಡ ಮಾಧ್ಯಮವಾಗಿ ನಾವು ಇವತ್ತಿಗೂ ಕೂಡಾ ಅದನ್ನು ಸಕ್ರಿಯವಾಗಿ ಜನಮಾನಸದಲ್ಲಿ ಬಿತ್ತಲಿಕ್ಕೆ ಸಾಧ್ಯವಾಗುತ್ತಿಲ್ಲವೆಂಬ ಆತಂಕ ಇತ್ತೀಚಿನ ದಶಮಾನಗಳಲ್ಲಿ ಆರಂಭವಾಗಿದೆ.
ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದ ಇಂಗ್ಲಿಷ್ ಮಾಧ್ಯಮ ಶಾಲೆಗಳೇ ಹೆಚ್ಚಾಗುತ್ತಾ ಇವೆ. ಸರ್ಕಾರಗಳೂ ಕೂಡಾ ಪರೋಕ್ಷವಾಗಿ ಅದಕ್ಕೆ ಸಹಕಾರ ನೀಡುತ್ತಿದ್ದವೆಂದರೆ ತಪ್ಪಾಗಲಿಕ್ಕಿಲ್ಲ.
ಯಾವುದೇ ಭಾಷೆಯ ತಿಳುವಳಿಕೆ ನಮಗೆ ಬೇಕೆಂದಲ್ಲಿ ಇಂಗ್ಲೀಷು ಬೇಕು, ಇನ್ನೊಂದು ಭಾಷೆಯೂ ಬೇಕು. ಅದನ್ನು ಭಾಷೆಯಾಗಿ ಓದಬೇಕೇ ವಿನಃ ಮಾಧ್ಯಮವಾಗಿ ಓದುವುದಲ್ಲ.ಮಾಧ್ಯಮ ಕನ್ನಡದಲ್ಲೇ ಇರಬೇಕು.
ಪ್ರಜಾಪ್ರಭುತ್ವದ ಆಶಯಗಳು ಜನಮನಕ್ಕೆ ತಲುಪಬೇಕಾದರೆ ಶಿಕ್ಷಣ ಕೂಡ ಆಯಾ ಪ್ರದೇಶದ ಮಾತೃಭಾಷೆಯಲ್ಲಿ ಇರಬೇಕು. ಜನರಿಗೆ ಅದು ಅರಿವಿಗೆ ಬರಬೇಕು. ಆ ಕಾರಣಕ್ಕೆ ಕನ್ನಡ ಮಾಧ್ಯಮ ಎನ್ನುವುದು ಹೆಚ್ಚು ಹೆಚ್ಚಾಗಿ ನಮ್ಮಲ್ಲಿ ಸಾಧ್ಯವಾಗಿದೆ ಎಂದರೆ ಅಷ್ಟರ ಮಟ್ಟಿಗೆ ನಾವು ಪ್ರಜಾಪ್ರಭುತ್ವದ ಸಾಧ್ಯತೆಗಳನ್ನು ಯಶಸ್ವಿಗೊಳಿಸುತ್ತಿದ್ದೇವೆಂದೇ ಅರ್ಥ.
ಕನ್ನಡ ಮಾಧ್ಯಮವನ್ನು ನಾವು ಜನರ ನಡುವೆ ಹೊತ್ತೊಯ್ಯುವ ಕ್ರಮ ಹೇಗೆ ಎನ್ನುವುದನ್ನು ನಮ್ಮ ಆಡಳಿತಾರೂಢ ಸರ್ಕಾರಗಳು ಗಂಭೀರವಾಗಿ ಆಲೋಚನೆ ಮಾಡಬೇಕಾದ ಸಂದರ್ಭ ಇವತ್ತು ನಮ್ಮ ಕಣ್ಣೆದುರಿಗೆ ಇದೆ.
ಪ್ರಾದೇಶಿಕ ಭಾಷೆಗಳ ಮತ್ತು ನಮ್ಮ ನಡುವೆ ಒಂದು ದೊಡ್ಡ ತೊಡಕೆಂದರೆ, ಕನ್ನಡ ಎಂದರೆ ಒಂದೇ ಕನ್ನಡವಿಲ್ಲ. ಕನ್ನಡದೊಂದಿಗೆ ಹಲವು ಕನ್ನಡಗಳಿವೆ. ಧಾರವಾಡ ಕನ್ನಡ, ಮಂಗಳೂರು ಕನ್ನಡ, ಮೈಸೂರು ಕನ್ನಡ ಇರಬಹುದು ಇವುಗಳ ನಡುವೆ ಯಾವ ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಪ್ರಮಾಣಿಕೃತ ಭಾಷೆಯಾಗಿ ಸ್ವೀಕರಿಸಿದ್ದೇವೆ. ಪ್ರಮಾಣಿಕೃತ ಭಾಷೆಯೆಂದರೆ ಎಲ್ಲಾ ಜನರಿಗೆ ಯಾವ ಭಾಷೆ ಸರಳವಾಗಿ ಸಂವಹನವಾಗಬಲ್ಲದೋ ಅಂತಹದ್ದೊಂದು ಭಾಷೆಯನ್ನು ನಾವು ಪ್ರಮಾಣಿಕೃತ ಭಾಷೆಯೆಂದು ಸ್ವೀಕರಿಸಿದ್ದೇವೆ.
ಇದಕ್ಕಿಂತಲೂ ವಾಸ್ತವವಾಗಿ ಯಾವ ಪ್ರದೇಶದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಂಡಿರುವರೋ ಅವರ ಭಾಷೆಗೆ ಮಾನ್ಯತೆ ಇರುವಂತಹ ಸಾಧ್ಯತಯು ಕೂಡ ಹೆಚ್ಚಾಗಿದೆ. ನಮ್ಮಲ್ಲಿ ಹಲವು ಉಪ ಭಾಷೆಗಳು ಹಲವು ಸಾಮಾಜಿಕ ಭಾಷೆಗಳು ಅವಘನಗೊಳಗಾಗಿದ್ದವೆ. ಯಾವ ಜನಸಮುದಾಯ ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಗೊಂಡಿದ್ದವೊ ಅವರ ಭಾಷೆಯನ್ನು ಆಸ್ವಾದಿಸುವಂತಹ, ಅದನ್ನೇ ಆಡಳಿತ ಕನ್ನಡವಾಗಿ ಸ್ವೀಕರಿಸುವ ಅಥವಾ ಅದನ್ನು ಪ್ರಮಾಣಿಕೃತ ಕನ್ನಡವಾಗಿ ಸ್ವೀಕರಿಸುವ ರಾಜಕೀಯ ಹುನ್ನಾರವೇ ನಮ್ಮ ನಡುವೆ ಇದೆ.
ಸಾಮಾಜಿಕ ಅಸಮಾನತೆಗಳು, ಆರ್ಥಿಕ ಅಸಮಾನತೆಗಳು, ಪ್ರಾದೇಶಿಕ ಅಸಮಾನತೆಗಳು ಇವು ಭಾಷಿಕ ನೆಲೆಗಳೊಳಗೂ ವ್ಯಕ್ತವಾಗುತ್ತಿರುತ್ತದೆ. ಹಾಗಾಗಿ ಭಾಷಿಕ ನೆಲೆಯ ತಾರತಮ್ಯತೆ ನಮ್ಮಲ್ಲಿ ಇಲ್ಲವಾಗಬೇಕಾದರೆ ನಮ್ಮ ನಡುವಿನ ತಾರತಮ್ಯಗಳನ್ನೂ ನಾವು ಹೋಗಲಾಡಿಸಬೇಕಾಗಿದೆ.
ಭಾಷಿಕ ಮೂಲಭೂತವಾದ ಹೆಚ್ಚು ಅಪಾಯಕಾರಿ. ಭಾಷಿಕ ಮೂಲಭೂತವಾದದ ಬೋನಿನಲ್ಲಿ ಇವತ್ತು ಕನ್ನಡ ನರಳುತ್ತಾ ಇದೆ ಆದ್ರಿಂದ ಬಿಡುಗಡೆಗೊಳಿಸಬೇಕಾದ್ದು ನಮ್ಮೆಲ್ಲರ ಮುಂದಿರುವ ಸವಾಲು.ವಿಶ್ವದ ಜ್ಞಾನವನ್ನು ಕನ್ನಡಕ್ಕೆ ತರುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಕನ್ನಡವನ್ನು ಒಂದು ಭಾಷೆಯಾಗಿ ಮಾಡಬೇಕಾದರೆ ನಾವು ಭಾಷಿಕ ಮೂಲಭೂತವಾದದಿಂದ ಹೊರಬಂದು ಜಗತ್ತಿನ ಎಲ್ಲಾ ಭಾಷೆಗಳನ್ನು ದಕ್ಕಿಸಿಕೊಳ್ಳಬೇಕಾಗಿದೆ. ಅಲ್ಲಿನ ಅರಿವನ್ನು ನಮ್ಮದಾಗಿ ಮಾಡಿಕೊಳ್ಳಬೇಕಾಗಿದೆ. ಆ ಮುಖೇನ ಕನ್ನಡವನ್ನು ನಾವು ನೀವು ಅಭಿವೃದ್ಧಿಗೊಳಿಸಲು ಸಾಧ್ಯ ಎಂದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ ವಾಮದೇವಪ್ಪ ನವರು ಕನ್ನಡಕ್ಕೆ ಕುತ್ತು ತಂದೊಡ್ಡುತ್ತಿರುವ ಅನ್ಯ ಭಾಷಿಕರ ಮಧ್ಯೆ ಕನ್ನಡ ಸಿಡಿದೇಳುತ್ತದೆ. ಕನ್ನಡ ನಾಡು ವೈಭವದ ನಾಡು. ನಿನ್ನೆಯನು ಮರೆತವನು ಇಂದು ಬದುಕಲಾರ.ನಾಳೆಯನ್ನು ಕಟ್ಟಲಾರ. ನಮ್ಮ ನಾಡು ನುಡಿಯ ಇತಿಹಾಸ ತಿಳಿಯಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಏಕೆಂದರೆ ಕನ್ನಡ ಕಟ್ಟುವ ಕೆಲಸ ನಮ್ಮಿಂದ ಆಗಬೇಕಾಗಿದೆ. ವಿವಿಧತೆಯಲ್ಲಿ ಏಕತೆ ಸಾಧಿಸುವ ನಾವು ಸುಂದರ ಭವ್ಯ ಕನ್ನಡದ ಬೆಳವಣಿಗೆಗೆ ಕಂಕಣಕಟ್ಟಿ ದುಡಿಯೋಣ ಎಂದು ಕರೆಕೊಟ್ಟರು.
ಆರಂಭದಲ್ಲಿ ಎಚ್ಕೆ ಸತ್ಯಭಾಮ ಇವರು ಸರ್ವರನ್ನು ಸ್ವಾಗತಿಸಿದರು ವೇದಿಕೆಯ ಶಾರದಾ ತಂಡದವರು ಸುಗಮ ಸಂಗೀತ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ38 minutes agoಆಯುರ್ವೇದ ಆರೋಗ್ಯಕರ ಜೀವನ ಶೈಲಿ

