Connect with us

ದಿನದ ಸುದ್ದಿ

ಕನ್ನಡ ಭಾಷೆ ಅಳಿದುಹೋಗುವ ಭಾಷೆಗಳಲ್ಲಿ ಒಂದು ಎಂಬ ಮಾತು ಶುದ್ಧ ಸುಳ್ಳು : ಡಾ. ಪ್ರಕಾಶ ಹಲಗೇರಿ

Published

on

ಸುದ್ದಿದಿನ, ದಾವಣಗೆರೆ: “ಕನ್ನಡ” ಎನ್ನುವುದು ಒಂದು ಸಂಸ್ಕೃತಿ, ಬದುಕು, ಅದರಾಚೆಗೆ ಧ್ಯಾನ, ಯೋಗ, ಅನ್ನುವ ವ್ಯಾಖ್ಯಾನ ಗಳು ಕೂಡ ಮೂಡಿಬರುತ್ತಿವೆ. ಅಂದಿನ ಬಹುದೊಡ್ಡ ಚಿಂತಕರಾದ ದಂಢಿ ಹೇಳುವಂತೆ ಭಾಷೆ ಎನ್ನುವುದು ಒಂದು ಬೆಳಕು, ಭಾವ ಸಂಕೇತ, ಸನ್ನೆಗಳ ಮೂರ್ತಾಭಿವ್ಯಕ್ತಿಯೇ ಭಾಷೆ.

ಆದರೆ ಭಾಷಾತಜ್ಞ ಈಸ್ಲರ್ ಹೇಳುವಂತೆ ಆತ್ಮ ಇರುವ ಎಲ್ಲಾ ಪ್ರಾಣಿಗಳ ಅನುಭವದ ಅಭಿವ್ಯಕ್ತಿಯೇ ಭಾಷೆ. ಎಂದು ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಂತರ್ಜಾಲದ ಮೂಲಕ ಏರ್ಪಡಿಸಿರುವ ಕನ್ನಡ ನುಡಿಹಬ್ಬ ಕಾರ್ಯಕ್ರಮದ ಎಂಟನೇ ದಿನದ ಉಪನ್ಯಾಸವನ್ನು ನೀಡುತ್ತಾ ಡಾ. ಪ್ರಕಾಶ ಹಲಗೇರಿ ಯವರು ಮಾತನಾಡಿದರು.

ಗ್ಲೋಬಲೈಸೇಶನ್ ಅಂತಹ ಸಂದರ್ಭದಲ್ಲಿ ಯಾವುದೇ ಒಂದು ದೇಶಿ ಭಾಷೆ ತನ್ನ ಕಸುವನ್ನು ಮೀರಿ ಅದು ವಿಶ್ವ ಭಾಷೆ ಆಗುತ್ತಾ ದಾಪುಗಾಲಿಡ ಬೇಕಾಗಿದೆ. ದೇಶೀ ಭಾಷೆಗಳಿಗೆ ಅಸ್ಮಿತೆ ಇದೆ. ಈ ಭಾಷೆಗಳಿಗೆ ನಿಜವಾದ ಆತ್ಮಾಭಿಮಾನದ, ಸ್ವಾಭಿಮಾನದ ಸಂಕೇತ ಎನ್ನುವ ತಿಳುವಳಿಕೆಗಳು ಜರೂರಾಗಿ ಮೂಡಬೇಕಾಗಿದೆ.

ಸುಮಾರು 2000 ವರ್ಷಗಳ ಇತಿಹಾಸವುಳ್ಳ ನನ್ನ ಕನ್ನಡ ಭಾಷೆ ಅದು ಕೇವಲ ಚಿನ್ನದ ಭಾಷೆಯಲ್ಲ, ಪ್ರೊ. ಬರಗೂರು ರಾಮಚಂದ್ರಪ್ಪ ನವರು ಹೇಳುವಂತೆ ನನ್ನ ಕನ್ನಡ ಭಾಷೆ ಅನ್ನದ ಭಾಷೆಯೂ ಹೌದು ಅದು ಆಗಬೇಕು. ಇದಕ್ಕೆ ಸರ್ಕಾರದ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇನ್ನೂ ಅನೇಕ ಕನ್ನಡಪರ ಸಂಸ್ಥೆಗಳು ಹೆಚ್ಚು ಹೆಚ್ಚು ಜನಮುಖಿಯಾಗಿ ಸಾಗಬೇಕು.

ಕೆಲವು ಜನರ ಅಭಿಪ್ರಾಯದಂತೆ ಕನ್ನಡ ಭಾಷೆ ಅಳಿದುಹೋಗುವ ಭಾಷೆಗಳಲ್ಲಿ ಒಂದು. ಅದು ಒಪ್ಪತಕ್ಕಂತಹ ಮಾತಲ್ಲ. ಶುದ್ಧ ಸುಳ್ಳು. ಒಂದು ಭಾಷೆ ಅಳಿದು ಹೋಗಬೇಕಾದರೆ ಆ ಭಾಷೆ ಯಾಡುವ ಮನುಷ್ಯ ಅಳಿದು ಹೋಗಬೇಕು. ಅದು ಆಗದ ಮಾತು.

ಡಾಕ್ಟರ್ ಪೂರ್ಣಚಂದ್ರತೇಜಸ್ವಿ, ಡಾಕ್ಟರ್ ಚಂದ್ರಶೇಖರ ಕಂಬಾರರು ಕನ್ನಡದ ತಾಂತ್ರಿಕ ಅಂಶಗಳನ್ನು ಕುರಿತಾದ ಯೂನಿಕೋಡ್ ಬಗ್ಗೆ ಮಾತನಾಡಿದ್ದರು. ಮುಂದುವರೆದು ಎಲ್. ಹನುಮಂತಯ್ಯನವರು ಅಭಿಪ್ರಾಯದಂತೆ ಕನ್ನಡಕ್ಕೆ ಯೂನಿಕೋಡ್ ಶಿಷ್ಟತೆ ಅಳವಡಿಸುವ ಕೆಲಸಕ್ಕೆ ಮತ್ತಷ್ಟು ವೇಗ ನೀಡಲಾಗುವುದು. ತಾಂತ್ರಿಕ ಕ್ಷೇತ್ರಗಳಲ್ಲಿ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಜಾಲತಾಣಗಳಾದ ಫೇಸ್ಬುಕ್, ಟ್ವಿಟರ್, ಯೂಟ್ಯೂಬ್ ಇತ್ಯಾದಿ ಕಡೆ ಹೆಚ್ಚು ಕನ್ನಡವನ್ನು ಬಳಸುವ ಹಾಗೆ ಮಾಡಲಾಗುವುದು. ಈ ಮಾತು ಕನ್ನಡ ಭಾಷಾ ಬೆಳವಣಿಗೆ ಮತ್ತು ಅಸ್ಮಿತೆ ವಿಚಾರದಲ್ಲಿ ಒಂದು ಆಶಾವಾದ ಹುಟ್ಟು ಹಾಕುವಂತಿದೆ.

ಕನ್ನಡ ಒಂದು ಕೇವಲ ಭಾಷೆಯಲ್ಲ, ಅದು ನುಡಿ ಬೆಳಕು, ಅದೊಂದು ಸೊಬಗಿನ ಸೋನೆ, ಬೆಡಗಿನ ಬೇನೆ, ಬೆಳಕಿನ ಖಜಾನೆಯಾಗಿದೆ ಎಂದು ಹೇಳುತ್ತಾ, ನಾವು ನಮ್ಮಲ್ಲಿರುವ ಮಡಿವಂತಿಕೆ ಬಿಟ್ಟು ಮತಿವಂತರಾಗಬೇಕು ಹಾಗೂ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರಕವಿ ಕುವೆಂಪು ರವರ ಪ್ರಕಾರ ಕನ್ನಡ ಭಾಷೆ ಭಾವೋಪಯೋಗಿ, ಜೀವನೋಪಯೋಗಿ ಲೋಕೋಪಯೋಗಿಯೂ ಹೌದು. ಹಾಗಾಗಿ ಕನ್ನಡ ಭಾಷೆ ಒಂದು ಅಗಾಧತೆಯನ್ನು ಹೊಂದಿದೆ.
ಕಲಿಯೋಕೆ ಕೋಟಿ ಭಾಷೆ, ಹಾಡೋಕೆ ಒಂದೇ ಭಾಷೆ, ಕನ್ನಡ ಕನ್ನಡ ಕನ್ನಡ ಎಂದು ತಮ್ಮ ಕನ್ನಡ ಅಭಿಮಾನದ ಮಾತುಗಳನ್ನು ಉಪನ್ಯಾಸದ ಮೂಲಕ ಡಾ ಪ್ರಕಾಶ ಹಲಗೇರಿಯವರು ನುಡಿದರು.

ಅಧ್ಯಕ್ಷೀಯ ನುಡಿಗಳನ್ನಾಡುತ್ತಾ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರು ಮಾತನಾಡಿ,ಕನ್ನಡ ನಾಡ ಅಸ್ಮಿತೆ ಪ್ರಶ್ನೆ ಬಂದಾಗ ನಮ್ಮ ನಾಡು ಎಂಬುದು ಬೂಟಾಟಿಕೆಯ ನಾಟಕವಸ್ಟೇ ಅಲ್ಲ, ಇದು ಇಂದು ನಿರ್ಮಿಸಿ ನಾಳೆ ಕಿತ್ತು ಬಿಸಾಡುವಂತಹ ಸರ್ಕಾರ ಗಳಲ್ಲ, ಇದಕ್ಕೆ ಪರಂಪರೆಯಿದೆ ಕನ್ನಡ ಸಾಂಸ್ಕೃತಿಕ ಪರಂಪರೆಯು ತನ್ನದೇ ಆದ ಇತಿಹಾಸ ಹೊಂದಿದೆ.

ಎಂದು ಕುವೆಂಪುರವರ ಮಾತನ್ನು ಸರಿಸುತ್ತಾ ಇಲ್ಲಿ ನೃಪತುಂಗನೇ ಚಕ್ರವರ್ತಿ, ಪಂಪನೇ ಮುಖ್ಯಮಂತ್ರಿ, ರನ್ನ ಜನ್ನ ನಾಗವರ್ಮ, ರಾಘವಾಂಕ, ಹರಿಹರ ಬಸವೇಶ್ವರ, ನಾರಾಯಣಪ್ಪ, ಸರ್ವಜ್ಞ, ಷಡಕ್ಷರಿ ಮೊದಲಾದವರೆಲ್ಲ ಮಂತ್ರಿಮಂಡಲದ ಸದಸ್ಯರಾಗಿದ್ದಾರೆ. ಇದು ನಮ್ಮ ಸರಸ್ವತಿ ರಚಿಸಿದ ಸಚಿವ ಸಂಪುಟದ ಮಂಡಲವೆಂದು ಉದ್ಗರಿಸಿರು ವುದು ಕನ್ನಡ ಸಾಹಿತ್ಯಕ್ಕೆ ಕೊಟ್ಟ ಬಹುದೊಡ್ಡ ಕೊಡುಗೆ ಎಂದೇ ಭಾವಿಸಿದ್ದೇನೆ ಎಂದರು.

ಕವಿ ಕುವೆಂಪುರವರು ಮುಂದುವರೆದು ಹೇಳಿರುವಂತೆ ಕರ್ನಾಟಕವೆಂಬುದು ಬರೀ ಒಂದು ಭೂಪ್ರದೇಶ ವಲ್ಲ, ಮಣ್ಣಿನ ಹೆಸರಲ್ಲ, ಕನ್ನಡಿಗರಿಗೆ ಕನ್ನಡಿಗರ ಪಾಲಿಗೆ ಅದು ಮಂತ್ರ, ಶಕ್ತಿ, ತಾಯಿ, ದೇವಿ, ಬೆಂಕಿ, ಸಿಡಿಲು, ಎಲ್ಲವೂ ಆಗಿದೆ. ಕನ್ನಡ ಒಲಿದವರಿಗೆ ದೇವಿಯೂ ಕೆಣಕಿದವರಿಗೆ ಕಾಳಿಯೂ ಆಗುತ್ತಾಳೆ.

ಇದನ್ನು ಅರಿಯುವ ಕಣ್ಣು ನಮ್ಮ ಕನ್ನಡಿಗರದ್ದಾಗಿ ಇರಬೇಕು ಎಂಬುದಾಗಿ ಸೊಗಸಾಗಿ ರಾಷ್ಟ್ರಕವಿ ಕುವೆಂಪುರವರು ಹೇಳಿದ ವಾಣಿಯನ್ನು ಸ್ಮರಿಸುತ್ತಾ ನಾವು ಕನ್ನಡಿಗರಾಗಿ ಹುಟ್ಟಿರುವುದೇ ನಮ್ಮೆಲ್ಲರ ಸುದೈವ, ಕನ್ನಡಿಗರ ಅಸ್ಮಿತೆಗೆ ಧಕ್ಕೆ ಬಂದಾಗ ನಾವು-ನೀವೆಲ್ಲರೂ ಸಿಡಿದೇಳಬೇಕು ತಮ್ಮ ಅಧ್ಯಕ್ಷೀಯ ಮಾತುಗಳ ಮೂಲಕ ಎಂದು ಕರೆಕೊಟ್ಟರು.

ಆರಂಭದಲ್ಲಿ ಎಲ್ ಜಿ ಮಧು ಕುಮಾರ್ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರು ಇವರು ಸರ್ವರನ್ನು ಸ್ವಾಗತಿಸುತ್ತಾ ಉಪನ್ಯಾಸಕರ ಕಿರು ಪರಿಚಯ ಮಾಡಿಕೊಟ್ಟರು.ಕಾರ್ಯಕ್ರಮದಲ್ಲಿ ದಾವಣಗೆರೆ ವಿದ್ಯಾನಗರ ದ ಸುಶ್ರಾವ್ಯ ಸಂಗೀತ ವಿದ್ಯಾಲಯದ ಮುಖ್ಯಸ್ಥೆ ಯಾದ ಶ್ರೀಮತಿ ಯಶಾ ದಿನೇಶ್ ಮತ್ತು ರಕ್ಷಾ ಸರಳಾಯ ಇವರು ಸುಗಮ ಸಂಗೀತವನ್ನು ನಡೆಸಿಕೊಟ್ಟರು.

ವಿಡಿಯೋ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending