ದಿನದ ಸುದ್ದಿ
ಪ್ರಾಚೀನ ಇತಿಹಾಸವಿರುವ ಕನ್ನಡಕ್ಕೆಂದು ಅಳಿವಿಲ್ಲ : ಪ್ರೊ. ಬಾತಿ ಬಸವರಾಜ್
ಸುದ್ದಿದಿನ,ದಾವಣಗೆರೆ : ನಾಲ್ಕಾರು ಶತಮಾನಗಳ ಪ್ರಾಚೀನ ಇತಿಹಾಸ ಹೊಂದಿರುವ ದ್ರಾವಿಡ ಭಾಷೆಯಾದ ಕನ್ನಡಕ್ಕೆ ಎಂದಿಗೂ ಅಳಿವಿಲ್ಲ. ಅಚ್ಛ ಕನ್ನಡ ಭಾಷೆ ಮಾತನಾಡುವ ನಮ್ಮ ಗ್ರಾಮ, ಹಳ್ಳಿಗಳು ಮತ್ತು ಹಳ್ಳಿಗರು ಇರುವವರೆಗೂ ಕನ್ನಡ ಅಮರ ಎಂದು ಸಾಹಿತಿ, ಚಿಂತಕರಾದ ಪ್ರೊ. ಬಾತಿ ಬಸವರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸಮೀಪದ ದೊಡ್ಡಬಾತಿ ಗ್ರಾಮದ ಗುಡ್ಡದ ಮೇಲಿನ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ದೊಡ್ಡಬಾತಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಮಿತಿ., ಸ್ಫೂರ್ತಿ ಪ್ರಕಾಶನ ತೆಲಗಿ – ದಾವಣಗೆರೆ., ಚುಟುಕು ಸಾಹಿತ್ಯ ಪರಿಷತ್ನ ದಾವಣಗೆರೆ ಜಿಲ್ಲಾ ಘಟಕ., ಸಿರಿಗನ್ನಡ ವೇದಿಕೆಯ ಹರಿಹರ ತಾಲ್ಲೂಕು ಮತ್ತು ದಾವಣಗೆರೆ ಜಿಲ್ಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯೋತ್ಸವ ಸಂಭ್ರಮ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭವ್ಯ ಪರಂಪರೆ, ಸಂಸ್ಕøತಿ, ವಿಪುಲ ಸಾಹಿತ್ಯಿಕ ಮತ್ತು ಸಾಂಸ್ಕøತಿಕ ಕೊಡುಗೆಗಳಿಂದ ಶ್ರೀಮಂತಗೊಂಡಿರುವ ನಮ್ಮ ಕನ್ನಡ ಭಾಷೆ ಗ್ರಾಮೀಣ ಸೊಗಡು ಇರುವವರೆಗೂ ಚಿರಸ್ಥಾಯಿಯಾಗಿರುತ್ತದೆ ಎಂದರು.
ಪ್ರಸ್ತುತ ಹಲವು ಕೊರತೆ ಮತ್ತು ಸಮಸ್ಯೆಗಳನ್ನು ಎದುರಿಸುತ್ತಿರುವ ನಮ್ಮ ಕನ್ನಡ ಭಾಷೆಯ ಬಗ್ಗೆ ಕನ್ನಡಿಗರ ಅಭಿಮಾನ ಗಟ್ಟಿಯಾದಲ್ಲಿ ಕರ್ನಾಟಕ ಮತ್ತು ಕನ್ನಡ ಇತರರಿಗೆ ಎಂದೆಂದಿಗೂ ಮಾದರಿಯಾಗಿಯೇ ಉಳಿಯುವುದರಲ್ಲಿ ಸಂಶಯವಿಲ್ಲ ಎಂದರು.
ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ದೊಡ್ಡಬಾತಿ ಪ.ಪೂ ಕಾಲೇಜಿನ ಪ್ರಾಚಾರ್ಯಿಣಿ ಶ್ರೀಮತಿ ಉಷಾ ಮಾತನಾಡಿ, ನರಕಕ್ಕಿಳ್ಸಿ ನಾಲಿಗೆ ಸೀಳಿ, ಬಾಯಿ ಹೊಲಿದ್ರುನೂ ಮೂಗ್ನಲ್ಲಿ ಕನ್ನಡ ಪದವಾಡ್ತಿನಿ ಎಂಬ ರತ್ನನ ಪದ ಕನ್ನಡಿಗರಿಗೆ ಪ್ರೇರಕ ಶಕ್ತಿಯಾಗಬೇಕು. ಕನ್ನಡ ನಾಡು – ನುಡಿಗೆ ಬಹುದೊಡ್ಡ ಕೊಡುಗೆ ಕೊಟ್ಟಿರುವ ಕನ್ನಡ ಸಾಹಿತಿಗಳು ಮತ್ತು ಕಲಾವಿದರು ಮಾದರಿಯಾಗಬೇಕು ಎಂದು ನುಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಂಗಾಧರ ಬಿ.ಎಲ್ ನಿಟ್ಟೂರ್ ಮಾತನಾಡಿ, ಇತಿಹಾಸ ಅರಿತವರು ಮಾತ್ರ ಹೊಸ ಇತಿಹಾಸ ನಿರ್ಮಿಸಬಲ್ಲರು. ಆ ಹಿನ್ನಲೆಯಲ್ಲಿ ಕನ್ನಡಿಗರಾದ ನಮಗೆಲ್ಲಾ ಆಶ್ರಯ ನೀಡಿ ಬದುಕನ್ನು ಹಸನಾಗಿಸಿಕೊಳ್ಳಲು ಇಂಬು ನೀಡಿರುವ ನಮ್ಮ ನಾಡಿನ ಪ್ರಾಗೈತಿಹಾಸದ ಜೊತೆ ಪ್ರಚಲಿತ ವಿದ್ಯಮಾನಗಳ ಅರಿವು ಸಹ ಇರಬೇಕು. ಅಲ್ಲದೆ ತಾಯ್ನಾಡಿನ ಋಣ ತೀರಿಸುವುದು ನಮ್ಮ ಕರ್ತವ್ಯವಾಗಬೇಕು ಎಂದರು.
ಚುಸಾಪ ಜಿಲ್ಲಾಧ್ಯಕ್ಷರಾದ ರಾಜಶೇಖರ್ ಗುಂಡಗಟ್ಟಿ ಹಾಗೂ ಸ್ಫೂರ್ತಿ ಪ್ರಕಾಶನದ ದಾವಣಗೆರೆ ಅಧ್ಯಕ್ಷರಾದ ಎಂ.ಬಸವರಾಜ್ ಹಾಗೂ ಸಾಹಿತಿ ಸುಬ್ರಹ್ಮಣ್ಯ ನಾಡಿಗೇರ್, ವೇದಿಕೆಯಲ್ಲಿದ್ದರು. ಹಿರಿಯ ಕವಿ ಹೆಚ್ ರೇವಣಸಿದ್ದಪ್ಪ ದೊಡ್ಡಬಾತಿ ಪ್ರಾಸ್ತಾವಿಕ ನುಡಿಯಾಡಿದರು. ರಾಜ್ಯೋತ್ಸವ ಸಮಿತಿಯ ಕಾರ್ಯದರ್ಶಿ ಎಸ್.ಕೃಷ್ಣ ದೊಡ್ಡಬಾತಿ ಸರ್ವರನ್ನು ವಂದಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಾದ ಕೆ.ಜೆ ರೇವಣಸಿದ್ದಪ್ಪ, ಹನುಮಂತಪ್ಪ, ಶಾಂತಪ್ಪ, ಮುಕ್ತೇನಹಳ್ಳಿ ಕರಿಬಸಪ್ಪ, ಡಾ.ಹನುಮಂತಪ್ಪ ಅವರಿಗೆ ಸನ್ಮಾನಿಸಲಾಯಿತು. 2017-18ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ತರುಣ್, ಶಾಲಿನಿ, ಅನಿಲ್, ಶಿಲ್ಪಾ, ರೇಖಾ, ಅನಿತಾ, ಸಂಪ್ರೀತ, ನಿವೇದಿತ ಅವರಿಗೆ ಪ್ರತಿಭಾ ಪುರಸ್ಕಾರದೊಂದಿಗೆ ಪ್ರೋತ್ಸಾಹಿಸಲಾಯಿತು.
ಮಧ್ಯಾಹ್ನ 2 ಗಂಟೆಗೆ ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷ ಶಿವಯೋಗಿ ಹಿರೇಮಠ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಕವಿಗೋಷ್ಠಿಯ ಅತಿಥಿಗಳಾಗಿ ಬಳ್ಳಾರಿ ರೇವಣ್ಣ, ಕುಂದೂರು ಮಂಜಪ್ಪ ಭಾಗವಹಿಸಿದ್ದರು.
ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು 35ಕ್ಕೂ ಹೆಚ್ಚು ಕವಿ – ಕವಯಿತ್ರಿಯರು ತಮ್ಮ ಸ್ವರಚಿತ ಕವನ ವಾಚಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!