Connect with us

ದಿನದ ಸುದ್ದಿ

ಕನ್ನಡ ರಾಜ್ಯೋತ್ಸವ ಮತ್ತು ಅಂಬೇಡ್ಕರ್

Published

on

  • ರಘೋತ್ತಮ ಹೊ.ಬ

ರ್ನಾಟಕ 1956 ನವೆಂಬರ್ 1 ರಂದು ಕನ್ನಡ ಮಾತಾಡುವ ಜನರನ್ನೊಳಗೊಂಡ ಪ್ರತ್ಯೇಕ ಭಾಷಾವಾರು ರಾಜ್ಯವಾದದ್ದು ಎಲ್ಲರಿಗೂ ತಿಳಿದದ್ದೆ. ಆ ಕಾರಣಕ್ಕೆ ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತೇವೆ. ಹಾಗಿದ್ದರೆ ಇಲ್ಲಿ ಅಂಬೇಡ್ಕರ್ ಹೇಗೆ ಪ್ರಾಮುಖ್ಯತೆ ಪಡೆಯುತ್ತಾರೆ ಎಂದು ಕೆಲವರಿಗಾದರೂ ಆಶ್ಚರ್ಯವಾಗಬಹುದು. ಆದರೆ ಅಂಬೇಡ್ಕರ್ ಪ್ರಾಮುಖ್ಯತೆ ಪಡೆಯುತ್ತಾರೆ.

ಏಕೆಂದರೆ ರಾಜ್ಯಗಳ ಪುನರ್ರಚನೆಗೆ ಸಂಬಂಧಿಸಿದಂತೆ 1955 ರಲ್ಲಿ ರಚನೆಯಾಗಿದ್ದ ಆಯೋಗದ ಮುಂದೆ ಬಾಬಾಸಾಹೇಬರು ತಮ್ಮ ಚಿಂತನೆಗಳನ್ನು ಪ್ರಸ್ತಾಪಿಸಿದ್ದಾರೆ. ಆ ಮೂಲಕ ಭಾಷಾವಾರು ರಾಜ್ಯಗಳ ರಚನೆಗೆ ಅಂಬೇಡ್ಕರರು ತಮ್ಮ ಪ್ರಬಲ ವಾದ ಮಂಡಿಸಿದ್ದಾರೆ.

ಈ ನಿಟ್ಟಿನಲ್ಲಿ ಅಂಬೇಡ್ಕರ್ ರವರ ಮತ್ತು ಅವರ ಹಾಗೆಯೇ ವಾದ ಮಂಡಿಸಿದ ಇತರರ ವಾದದ ಆಧಾರದ ಮೇಲೆ ರಾಜ್ಯ ಪುನರ್ ವಿಂಗಡಣಾ ಆಯೋಗ ಭಾಷಾವಾರು ರಾಜ್ಯಗಳ ರಚನೆಗೆ ಶಿಫಾರಸ್ಸು ಮಾಡುತ್ತದೆ. ಅಂದಹಾಗೆ ಹಾಗೆ ಶಿಫಾರಸ್ಸುಗೊಂಡು ರಚಿತವಾದ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಮತ್ತು ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಈ ಹಿನ್ನೆಲೆಯಲ್ಲಿ ಅಂಬೇಡ್ಕರರು ಕೂಡ ಪ್ರಾಮುಖ್ಯತೆ ಪಡೆಯುತ್ತಾರೆ ಎಂಬುದು ಗಮನಿಸತಕ್ಕ ಅಂಶ.

ಅಂದಹಾಗೆ ಈ ದಿಸೆಯಲ್ಲಿ, ಕರ್ನಾಟಕ ಮತ್ತು ಆ ತರಹದ ಅನೇಕ ಭಾಷಾವಾರು ರಾಜ್ಯಗಳ ರಚನೆಯ ಹಿನ್ನೆಲೆಯಲ್ಲಿ ಅಂಬೇಡ್ಕರರ ವಿಚಾರಗಳೇನು? ನೇರ ದಾಖಲಿಸುವುದಾದರೆ, ಅಂಬೇಡ್ಕರರು ಬರೆಯುತ್ತಾರೆ “ಒಂದು ಭಾಷೆ- ಒಂದು ರಾಜ್ಯ ಎಂಬುದು ಬಹುತೇಕ ಆಡಳಿತ ವ್ಯವಸ್ಥೆಯ ಸರ್ವ ಸಾಮಾನ್ಯ ಲಕ್ಷಣವಾಗಿದೆ.

ಉದಾಹರಣೆಗೆ ಜರ್ಮನಿಯ ಸಂವಿಧಾನವನ್ನು ಗಮನಿಸಿ, ಪ್ರಾನ್ಸ್ ನ ಸಂವಿಧಾನವನ್ನು ಗಮನಿಸಿ, ಇಟಲಿಯ ಸಂವಿಧಾನ, ಇಂಗ್ಲೆಂಡ್ ನ ಸಂವಿಧಾನ ಮತ್ತು ಅಮೆರಿಕದ ಸಂವಿಧಾನ ಹೀಗೆ ಸಂವಿಧಾನಗಳನ್ನು ಗಮನಿಸಿ “ಒಂದು ಭಾಷೆ- ಒಂದು ರಾಜ್ಯ” ಎಂಬುದು ಕಡ್ಡಾಯ ನಿಯಮವಾಗಿದೆ ಮತ್ತು ಈ ನಿಯಮದಿಂದ ಎಲ್ಲೆಲ್ಲಿ ವಿಮುಖತೆಯು ನಡೆದಿದೆಯೋ ಅಲ್ಲೆಲ್ಲ ಆಡಳಿತ ವ್ಯವಸ್ಥೆಗೆ ಅಪಾಯ ಒದಗಿದೆ.

ಅಂದಹಾಗೆ ಹಳೆಯ ಟರ್ಕಿಷ್ ಸಾಮ್ರಾಜ್ಯ ಮತ್ತು ಆಸ್ಟ್ರಿಯನ್ ಸಾಮ್ರಾಜ್ಯಗಳಲ್ಲಿ ನಾವು ಇಂತಹ ಮಿಶ್ರ ಭಾಷಾ ರಾಜ್ಯಗಳನ್ನು ಕಾಣಬಹುದು. ಈ ನಿಟ್ಟಿನಲ್ಲಿ ಬಹುಭಾಷಾ ರಾಜ್ಯಗಳು ಎಂಬುದರ ಅರ್ಥವನ್ನು ನಾವು ಹುಡುಕುವುದಾದರೆ ಸದರಿ ರಾಜ್ಯಗಳು (ಹಳೆಯ ಟರ್ಕಿ ಮತ್ತು ಆಸ್ಟ್ರಿಯಾ ರಾಜ್ಯ ಗಳು) ಬಹುಭಾಷೆಯ ತಮ್ಮ ಕಾರಣಕ್ಕಾಗಿಯೇ ಛಿದ್ರಗೊಂಡು ನಾಶವಾದವು.

ಭಾರತವೂ ಕೂಡ ಹೀಗೆ ಮಿಶ್ರ ಭಾಷೆಗಳ ರಾಜ್ಯಗಳ ಸಮುದಾಯವಾಗಿಯೇ ಮುಂದುವರೆದರೆ ಅದೂ ಕೂಡ (ಆಸ್ಟ್ರಿಯಾ ಮತ್ತು ಟರ್ಕಿ ದೇಶಗಳು ಅನುಭವಿಸಿದ) ಅಂತಹ ದುರಂತ ಪರಿಸ್ಥಿತಿ ತಪ್ಪಿಸಿಕೊಳ್ಳುವುದು ಅಸಾಧ್ಯ.” ಬಾಬಾಸಾಹೇಬರು ಸ್ಪಷ್ಟ ಪಡಿಸುತ್ತಾರೆ. ಅವರು ಇಂಗ್ಲೆಂಡ್, ಅಮೆರಿಕ, ಫ್ರಾನ್ಸ್, ಇಟಲಿ ಸಂವಿಧಾನ ಗಳ ಉದಾಹರಣೆ ಕೊಡುತ್ತಾರೆ ಹಾಗೆಯೇ ಬಹುಭಾಷೆಗಳ ರಾಜ್ಯ ವಾಗಿ ಆಸ್ಟ್ರಿಯಾ ಮತ್ತು ಟರ್ಕಿ ನಾಶವಾದದ್ದನ್ನು ಕೂಡ ಉಲ್ಲೇಖಿಸುತ್ತಾರೆ.

ಹಾಗಿದ್ದರೆ ಬಹು ಭಾಷೆಗಳ ರಾಜ್ಯ ಏಕೆ ಅಸ್ಥಿರ ಮತ್ತು ಏಕ ಭಾಷೆಯ ರಾಜ್ಯ ಏಕೆ ಸ್ಥಿರ? ಈ ಪ್ರಶ್ನೆಗೆ ಅಂಬೇಡ್ಕರರು ನೀಡುವ ಉತ್ತರ, “ರಾಜ್ಯ ಎಂಬುದು ನಾವು ಮತ್ತು ನಮ್ಮವರು ಎಂಬ ಸಹ ಭಾವನೆಯ ಆಧಾರದ ಮೇಲೆ ಕಟ್ಟಲ್ಪಟ್ಟಿದೆ” ಎಂದು. ಹಾಗಿದ್ದರೆ “ನಾವು ಮತ್ತು ನಮ್ಮವರು, ಈ ಭಾವನೆ ಹಾಗೆಂದರೇನು?” ಹೀಗೆ ಪ್ರಶ್ನಿಸುತ್ತಾ ಅಂಬೇಡ್ಕರರು ಹೇಳುವುದು “ಸಂಕ್ಷಿಪ್ತವಾಗಿ ಹೇಳುವುದಾದರೆ ಅದೊಂದು ರೀತಿ ನಾವೆಲ್ಲ ಒಂದೇ ಎಂಬ ಸಾಂಸ್ಥಿಕ ಭಾವನೆಯನ್ನು ಅನುಭವಿಸುವುದು ಮತ್ತು ಅಂತಹ ಅನುಭವ ಅಥವಾ ಭಾವ ಅವರಲ್ಲಿ ತಾವು ಪರಸ್ಪರ ಬಂಧುಗಳು ಎಂಬ ಭಾವವನ್ನು ಸೃಜಿಸುತ್ತದೆ.

ಈ ನಿಟ್ಟಿನಲ್ಲಿ ಈ ಭಾವ ಇದೊಂದು ರೀತಿ ಎರಡು ಅಲಗಿನ ಕತ್ತಿಯ ಮಾದರಿಯದು. ಯಾಕೆಂದರೆ ಒಂದೆಡೆ ಇದು ತನ್ನ ಬಂಧು ಬಳಗದವರೆಡೆ ಒಂದು ರೀತಿಯ ತನ್ನವರು ಭಾವ ಎಂಬ ಸೃಜಿಸುತ್ತದೆ ಮತ್ತೊಂದೆಡೆ ತನ್ನ ಬಂಧು ಬಳಗದವರಲ್ಲದವರೆಡೆ ತನ್ನವರಲ್ಲ ಎಂಬ ಭಾವ ಸೃಜಿಸುತ್ತದೆ. ಈ ಕಾರಣಕ್ಕಾಗಿ ಇದೊಂದು ರೀತಿ ನಾವೆಲ್ಲ ಒಂದೇ ಎಂಬ ಭಾವ. ಈ ದಿಸೆಯಲ್ಲಿ ಇಂತಹ ಭಾವ ಹಾಗೆ ಪರಸ್ಪರ ಪ್ರಬಲ ಭಾವನೆಯುಳ್ಳವರನ್ನು ಅದು
ಸಾಮಾಜಿಕ ತಾರತಮ್ಯ ಮತ್ತು ಆರ್ಥಿಕ ಸಂಕಷ್ಟಗಳ ಹೊರತಾಗಿಯೂ ಪರಸ್ಪರ ಕಟ್ಟುತ್ತದೆ ಮತ್ತು ತಮ್ಮವರಲ್ಲದವರನ್ನು ಅದು ದೂರ ತಳ್ಳುತ್ತದೆ.

ಒಟ್ಟಾರೆ ಅದು ಒಂದು ಜನ ಸಮೂಹ ಬೇರೆ ಯಾವುದೇ ಗುಂಪುಗಳಿಗೆ ಸೇರದೆ
ಪರಸ್ಪರ ಬೆರೆಯಲು ಹಾತೊರೆಯುವುದಾಗಿದೆ”. ಹೀಗೆ ಅಂಬೇಡ್ಕರರು ಭಾಷಾವಾರು ರಾಜ್ಯಗಳು ಮತ್ತು ಅಂತಹ ರಾಜ್ಯ ಗಳಲ್ಲಿ ಒಂದೇ ಭಾಷೆಯವರು ಒಂದೇ ಎಂಬ ಭಾವದಲ್ಲಿ ಬರೆಯುವುದನ್ನು ತಮ್ಮ ಉತ್ಕೃಷ್ಟ ಬರವಣಿಗೆಯಲ್ಲಿ ಉಪಮೆಗಳಲ್ಲಿ‌ ಹಿಡಿದಿರುತ್ತಾರೆ. ಹಾಗಿದ್ದರೆ “ನಾವು ನಮ್ಮ ವರು” ಎಂಬ ಈ ಭಾವ ತಪ್ಪಲ್ಲವೆ? ಯಾಕೆಂದರೆ ಅಂಬೇಡ್ಕರರ ಈ ಮಾತಿನಂತೆ “ನಾವು ಕನ್ನಡಿಗರು, ಅವರು ತಮಿಳಿನವರು” ಎಂದು ನಾವು ಈಗಲೂ ಹೇಳುತ್ತೇವಲ್ಲ ಅದು ತಪ್ಪು ಎಂಬುದಲ್ಲವೆ ಎನ್ನುವುದಾದರೆ ಇದಕ್ಕೆ ಬಾಬಾಸಾಹೇಬರು ಹೇಳುವುದು “ನಾವು ನಮ್ಮವರು ಎಂಬ ಈ ಭಾವದ ಅಸ್ತಿತ್ವವೇ
ಸ್ಥಿರ ಮತ್ತು ಪ್ರಜಾಪ್ರಭುತ್ವ ಮಾದರಿಯ ರಾಜ್ಯದ ಪ್ರಮುಖ ಲಕ್ಷಣ” ಎಂದು. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.1, ಪು.143 ಮತ್ತು 144)

ಹೌದು, ಪ್ರಜಾಪ್ರಭುತ್ವದ ಪ್ರಬಲ ಪ್ರತಿಪಾದಕರಾದ ಬಾಬಾಸಾಹೇಬರು ಹೇಳುವುದು ಅಥವಾ ಏಕಭಾಷೆಯ ರಾಜ್ಯಗಳ ಅಸ್ತಿತ್ವಕ್ಕೆ ಅವರು ನೀಡುವ ಎರಡು ಕಾರಣಗಳಲ್ಲಿ ಪ್ರಮುಖವಾದದ್ದು ಅಥವಾ ಮೊದಲನೆಯದು ಪ್ರಜಾಪ್ರಭುತ್ವ. ಅಂದರೆ ಬಾಬಾಸಾಹೇಬರು ಹೇಳುವುದು “ಘರ್ಷಣೆ ಇಲ್ಲದೆ ಪ್ರಜಾಪ್ರಭುತ್ವವಿಲ್ಲ. ಆದ್ದರಿಂದ ನಾವು ನಮ್ಮವರು ಎಂಬ ಭಾವವಿಲ್ಲದೆ ಪ್ರಜಾಪ್ರಭುತ್ವ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ” ಎಂದು. ಇನ್ನು ಎರಡನೆಯ ಕಾರಣ ಅವರು ನೀಡುವುದು “ಜನಾಂಗೀಯ ಮತ್ತು ಸಾಂಸ್ಕೃತಿಕ ಸಿಕ್ಕುಗಳನ್ನು ಪರಿಹರಿಸಲು ಏಕ ಭಾಷೆ ರಾಜ್ಯ ಅಗತ್ಯ” ಎಂದು.

ಯಾಕೆಂದರೆ ಇದಕ್ಕೆ ಬಾಬಾಸಾಹೇಬರೇ ಉದಾಹರಣೆ ನೀಡುತ್ತಾರೆ ಅದೆಂದರೆ “ಆಂಧ್ರ ಮತ್ತು ತಮಿಳಿಗರ ಕಚ್ಚಾಟ, ಆಂಧ್ರ ಮತ್ತು ಮಹಾರಾಷ್ಟ್ರಿಗರ ಕಚ್ಚಾಟ, ಗುಜರಾತ್ ಮತ್ತು ಮಹಾರಾಷ್ಟ್ರಿಗರ ಕಚ್ಚಾಟ… ಇತ್ಯಾದಿ” (ಗಮನಿಸಿ, ಅಂಬೇಡ್ಕರರು ತಮಿಳಿಗರು ಮತ್ತು ಕನ್ನಡಿಗರ ಕಚ್ಚಾಟ ಪ್ರಸ್ತಾಪಿಸಿಲ್ಲ! ಯಾಕೆಂದರೆ ಆಗಿನ್ನೂ ಸಮಗ್ರ ಕರ್ನಾಟಕ ಅಸ್ತಿತ್ವಕ್ಕೆ ಬಂದಿರಲಿಲ್ಲವಲ್ಲ!)
ಒಟ್ಟಾರೆ ಬಾಬಾಸಾಹೇಬ್ ಅಂಬೇಡ್ಕರ್ ರವರು “ಒಂದೇ ಭಾಷೆ – ಒಂದೇ ರಾಜ್ಯ” ಹಿನ್ನೆಲೆಯಲ್ಲಿ ಪ್ರತ್ಯೇಕ ಭಾಷಾವಾರು ರಾಜ್ಯಗಳ ರಚನೆಯನ್ನು ಪ್ರತಿಪಾದಿಸಿದ್ದಾರೆ.

ಅಂದಹಾಗೆ ಅಂಬೇಡ್ಕರರು ಅಂದು ಪ್ರಸ್ತಾಪಿಸಿದ ಕರ್ನಾಟಕ ರಾಜ್ಯದಲ್ಲಿ ಅಂದು 1.90 ಕೋಟಿ ಜನರಿದ್ದರು (1951 ರ ಗಣತಿ) ಮತ್ತು ಕರ್ನಾಟಕದ ಪ್ರಸ್ತಾಪಿತ ವಿಸ್ತೀರ್ಣ 72,730 ಚ.ಮೈಲುಗಳು ಇತ್ತು. ಅದರ ಆಧಾರದಲ್ಲಿ ಕರ್ನಾಟಕ ರಾಜ್ಯ 1956 ನವೆಂಬರ್ 1 ರಂದು ಅಸ್ತಿತ್ವಕ್ಕೆ ಬಂತು. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಈ ದಿನ ಕನ್ನಡಿಗರು ಬಾಬಾಸಾಹೇಬರನ್ನು ಸ್ಮರಿಸಿಕೊಳ್ಳಬೇಕು‌. ಭಾಷಾ ಆಧಾರದಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉದಯಕ್ಕೆ “ಭಾಷಾವಾರು ರಾಜ್ಯ ರಚನೆಯ ಉದ್ದೇಶದ ಅವರ ಚಿಂತನೆಗಳು ಕಾರಣ” ಎಂಬುದನ್ನು ಅರಿಯಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending