Connect with us

ದಿನದ ಸುದ್ದಿ

ಕನ್ನಡ ರಾಜ್ಯೋತ್ಸವ ಮತ್ತು ಅಂಬೇಡ್ಕರ್

Published

on

  • ರಘೋತ್ತಮ ಹೊ.ಬ

ರ್ನಾಟಕ 1956 ನವೆಂಬರ್ 1 ರಂದು ಕನ್ನಡ ಮಾತಾಡುವ ಜನರನ್ನೊಳಗೊಂಡ ಪ್ರತ್ಯೇಕ ಭಾಷಾವಾರು ರಾಜ್ಯವಾದದ್ದು ಎಲ್ಲರಿಗೂ ತಿಳಿದದ್ದೆ. ಆ ಕಾರಣಕ್ಕೆ ಪ್ರತಿ ವರ್ಷ ನವೆಂಬರ್ 1 ರಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತೇವೆ. ಹಾಗಿದ್ದರೆ ಇಲ್ಲಿ ಅಂಬೇಡ್ಕರ್ ಹೇಗೆ ಪ್ರಾಮುಖ್ಯತೆ ಪಡೆಯುತ್ತಾರೆ ಎಂದು ಕೆಲವರಿಗಾದರೂ ಆಶ್ಚರ್ಯವಾಗಬಹುದು. ಆದರೆ ಅಂಬೇಡ್ಕರ್ ಪ್ರಾಮುಖ್ಯತೆ ಪಡೆಯುತ್ತಾರೆ.

ಏಕೆಂದರೆ ರಾಜ್ಯಗಳ ಪುನರ್ರಚನೆಗೆ ಸಂಬಂಧಿಸಿದಂತೆ 1955 ರಲ್ಲಿ ರಚನೆಯಾಗಿದ್ದ ಆಯೋಗದ ಮುಂದೆ ಬಾಬಾಸಾಹೇಬರು ತಮ್ಮ ಚಿಂತನೆಗಳನ್ನು ಪ್ರಸ್ತಾಪಿಸಿದ್ದಾರೆ. ಆ ಮೂಲಕ ಭಾಷಾವಾರು ರಾಜ್ಯಗಳ ರಚನೆಗೆ ಅಂಬೇಡ್ಕರರು ತಮ್ಮ ಪ್ರಬಲ ವಾದ ಮಂಡಿಸಿದ್ದಾರೆ.

ಈ ನಿಟ್ಟಿನಲ್ಲಿ ಅಂಬೇಡ್ಕರ್ ರವರ ಮತ್ತು ಅವರ ಹಾಗೆಯೇ ವಾದ ಮಂಡಿಸಿದ ಇತರರ ವಾದದ ಆಧಾರದ ಮೇಲೆ ರಾಜ್ಯ ಪುನರ್ ವಿಂಗಡಣಾ ಆಯೋಗ ಭಾಷಾವಾರು ರಾಜ್ಯಗಳ ರಚನೆಗೆ ಶಿಫಾರಸ್ಸು ಮಾಡುತ್ತದೆ. ಅಂದಹಾಗೆ ಹಾಗೆ ಶಿಫಾರಸ್ಸುಗೊಂಡು ರಚಿತವಾದ ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಮತ್ತು ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವದ ಈ ಹಿನ್ನೆಲೆಯಲ್ಲಿ ಅಂಬೇಡ್ಕರರು ಕೂಡ ಪ್ರಾಮುಖ್ಯತೆ ಪಡೆಯುತ್ತಾರೆ ಎಂಬುದು ಗಮನಿಸತಕ್ಕ ಅಂಶ.

ಅಂದಹಾಗೆ ಈ ದಿಸೆಯಲ್ಲಿ, ಕರ್ನಾಟಕ ಮತ್ತು ಆ ತರಹದ ಅನೇಕ ಭಾಷಾವಾರು ರಾಜ್ಯಗಳ ರಚನೆಯ ಹಿನ್ನೆಲೆಯಲ್ಲಿ ಅಂಬೇಡ್ಕರರ ವಿಚಾರಗಳೇನು? ನೇರ ದಾಖಲಿಸುವುದಾದರೆ, ಅಂಬೇಡ್ಕರರು ಬರೆಯುತ್ತಾರೆ “ಒಂದು ಭಾಷೆ- ಒಂದು ರಾಜ್ಯ ಎಂಬುದು ಬಹುತೇಕ ಆಡಳಿತ ವ್ಯವಸ್ಥೆಯ ಸರ್ವ ಸಾಮಾನ್ಯ ಲಕ್ಷಣವಾಗಿದೆ.

ಉದಾಹರಣೆಗೆ ಜರ್ಮನಿಯ ಸಂವಿಧಾನವನ್ನು ಗಮನಿಸಿ, ಪ್ರಾನ್ಸ್ ನ ಸಂವಿಧಾನವನ್ನು ಗಮನಿಸಿ, ಇಟಲಿಯ ಸಂವಿಧಾನ, ಇಂಗ್ಲೆಂಡ್ ನ ಸಂವಿಧಾನ ಮತ್ತು ಅಮೆರಿಕದ ಸಂವಿಧಾನ ಹೀಗೆ ಸಂವಿಧಾನಗಳನ್ನು ಗಮನಿಸಿ “ಒಂದು ಭಾಷೆ- ಒಂದು ರಾಜ್ಯ” ಎಂಬುದು ಕಡ್ಡಾಯ ನಿಯಮವಾಗಿದೆ ಮತ್ತು ಈ ನಿಯಮದಿಂದ ಎಲ್ಲೆಲ್ಲಿ ವಿಮುಖತೆಯು ನಡೆದಿದೆಯೋ ಅಲ್ಲೆಲ್ಲ ಆಡಳಿತ ವ್ಯವಸ್ಥೆಗೆ ಅಪಾಯ ಒದಗಿದೆ.

ಅಂದಹಾಗೆ ಹಳೆಯ ಟರ್ಕಿಷ್ ಸಾಮ್ರಾಜ್ಯ ಮತ್ತು ಆಸ್ಟ್ರಿಯನ್ ಸಾಮ್ರಾಜ್ಯಗಳಲ್ಲಿ ನಾವು ಇಂತಹ ಮಿಶ್ರ ಭಾಷಾ ರಾಜ್ಯಗಳನ್ನು ಕಾಣಬಹುದು. ಈ ನಿಟ್ಟಿನಲ್ಲಿ ಬಹುಭಾಷಾ ರಾಜ್ಯಗಳು ಎಂಬುದರ ಅರ್ಥವನ್ನು ನಾವು ಹುಡುಕುವುದಾದರೆ ಸದರಿ ರಾಜ್ಯಗಳು (ಹಳೆಯ ಟರ್ಕಿ ಮತ್ತು ಆಸ್ಟ್ರಿಯಾ ರಾಜ್ಯ ಗಳು) ಬಹುಭಾಷೆಯ ತಮ್ಮ ಕಾರಣಕ್ಕಾಗಿಯೇ ಛಿದ್ರಗೊಂಡು ನಾಶವಾದವು.

ಭಾರತವೂ ಕೂಡ ಹೀಗೆ ಮಿಶ್ರ ಭಾಷೆಗಳ ರಾಜ್ಯಗಳ ಸಮುದಾಯವಾಗಿಯೇ ಮುಂದುವರೆದರೆ ಅದೂ ಕೂಡ (ಆಸ್ಟ್ರಿಯಾ ಮತ್ತು ಟರ್ಕಿ ದೇಶಗಳು ಅನುಭವಿಸಿದ) ಅಂತಹ ದುರಂತ ಪರಿಸ್ಥಿತಿ ತಪ್ಪಿಸಿಕೊಳ್ಳುವುದು ಅಸಾಧ್ಯ.” ಬಾಬಾಸಾಹೇಬರು ಸ್ಪಷ್ಟ ಪಡಿಸುತ್ತಾರೆ. ಅವರು ಇಂಗ್ಲೆಂಡ್, ಅಮೆರಿಕ, ಫ್ರಾನ್ಸ್, ಇಟಲಿ ಸಂವಿಧಾನ ಗಳ ಉದಾಹರಣೆ ಕೊಡುತ್ತಾರೆ ಹಾಗೆಯೇ ಬಹುಭಾಷೆಗಳ ರಾಜ್ಯ ವಾಗಿ ಆಸ್ಟ್ರಿಯಾ ಮತ್ತು ಟರ್ಕಿ ನಾಶವಾದದ್ದನ್ನು ಕೂಡ ಉಲ್ಲೇಖಿಸುತ್ತಾರೆ.

ಹಾಗಿದ್ದರೆ ಬಹು ಭಾಷೆಗಳ ರಾಜ್ಯ ಏಕೆ ಅಸ್ಥಿರ ಮತ್ತು ಏಕ ಭಾಷೆಯ ರಾಜ್ಯ ಏಕೆ ಸ್ಥಿರ? ಈ ಪ್ರಶ್ನೆಗೆ ಅಂಬೇಡ್ಕರರು ನೀಡುವ ಉತ್ತರ, “ರಾಜ್ಯ ಎಂಬುದು ನಾವು ಮತ್ತು ನಮ್ಮವರು ಎಂಬ ಸಹ ಭಾವನೆಯ ಆಧಾರದ ಮೇಲೆ ಕಟ್ಟಲ್ಪಟ್ಟಿದೆ” ಎಂದು. ಹಾಗಿದ್ದರೆ “ನಾವು ಮತ್ತು ನಮ್ಮವರು, ಈ ಭಾವನೆ ಹಾಗೆಂದರೇನು?” ಹೀಗೆ ಪ್ರಶ್ನಿಸುತ್ತಾ ಅಂಬೇಡ್ಕರರು ಹೇಳುವುದು “ಸಂಕ್ಷಿಪ್ತವಾಗಿ ಹೇಳುವುದಾದರೆ ಅದೊಂದು ರೀತಿ ನಾವೆಲ್ಲ ಒಂದೇ ಎಂಬ ಸಾಂಸ್ಥಿಕ ಭಾವನೆಯನ್ನು ಅನುಭವಿಸುವುದು ಮತ್ತು ಅಂತಹ ಅನುಭವ ಅಥವಾ ಭಾವ ಅವರಲ್ಲಿ ತಾವು ಪರಸ್ಪರ ಬಂಧುಗಳು ಎಂಬ ಭಾವವನ್ನು ಸೃಜಿಸುತ್ತದೆ.

ಈ ನಿಟ್ಟಿನಲ್ಲಿ ಈ ಭಾವ ಇದೊಂದು ರೀತಿ ಎರಡು ಅಲಗಿನ ಕತ್ತಿಯ ಮಾದರಿಯದು. ಯಾಕೆಂದರೆ ಒಂದೆಡೆ ಇದು ತನ್ನ ಬಂಧು ಬಳಗದವರೆಡೆ ಒಂದು ರೀತಿಯ ತನ್ನವರು ಭಾವ ಎಂಬ ಸೃಜಿಸುತ್ತದೆ ಮತ್ತೊಂದೆಡೆ ತನ್ನ ಬಂಧು ಬಳಗದವರಲ್ಲದವರೆಡೆ ತನ್ನವರಲ್ಲ ಎಂಬ ಭಾವ ಸೃಜಿಸುತ್ತದೆ. ಈ ಕಾರಣಕ್ಕಾಗಿ ಇದೊಂದು ರೀತಿ ನಾವೆಲ್ಲ ಒಂದೇ ಎಂಬ ಭಾವ. ಈ ದಿಸೆಯಲ್ಲಿ ಇಂತಹ ಭಾವ ಹಾಗೆ ಪರಸ್ಪರ ಪ್ರಬಲ ಭಾವನೆಯುಳ್ಳವರನ್ನು ಅದು
ಸಾಮಾಜಿಕ ತಾರತಮ್ಯ ಮತ್ತು ಆರ್ಥಿಕ ಸಂಕಷ್ಟಗಳ ಹೊರತಾಗಿಯೂ ಪರಸ್ಪರ ಕಟ್ಟುತ್ತದೆ ಮತ್ತು ತಮ್ಮವರಲ್ಲದವರನ್ನು ಅದು ದೂರ ತಳ್ಳುತ್ತದೆ.

ಒಟ್ಟಾರೆ ಅದು ಒಂದು ಜನ ಸಮೂಹ ಬೇರೆ ಯಾವುದೇ ಗುಂಪುಗಳಿಗೆ ಸೇರದೆ
ಪರಸ್ಪರ ಬೆರೆಯಲು ಹಾತೊರೆಯುವುದಾಗಿದೆ”. ಹೀಗೆ ಅಂಬೇಡ್ಕರರು ಭಾಷಾವಾರು ರಾಜ್ಯಗಳು ಮತ್ತು ಅಂತಹ ರಾಜ್ಯ ಗಳಲ್ಲಿ ಒಂದೇ ಭಾಷೆಯವರು ಒಂದೇ ಎಂಬ ಭಾವದಲ್ಲಿ ಬರೆಯುವುದನ್ನು ತಮ್ಮ ಉತ್ಕೃಷ್ಟ ಬರವಣಿಗೆಯಲ್ಲಿ ಉಪಮೆಗಳಲ್ಲಿ‌ ಹಿಡಿದಿರುತ್ತಾರೆ. ಹಾಗಿದ್ದರೆ “ನಾವು ನಮ್ಮ ವರು” ಎಂಬ ಈ ಭಾವ ತಪ್ಪಲ್ಲವೆ? ಯಾಕೆಂದರೆ ಅಂಬೇಡ್ಕರರ ಈ ಮಾತಿನಂತೆ “ನಾವು ಕನ್ನಡಿಗರು, ಅವರು ತಮಿಳಿನವರು” ಎಂದು ನಾವು ಈಗಲೂ ಹೇಳುತ್ತೇವಲ್ಲ ಅದು ತಪ್ಪು ಎಂಬುದಲ್ಲವೆ ಎನ್ನುವುದಾದರೆ ಇದಕ್ಕೆ ಬಾಬಾಸಾಹೇಬರು ಹೇಳುವುದು “ನಾವು ನಮ್ಮವರು ಎಂಬ ಈ ಭಾವದ ಅಸ್ತಿತ್ವವೇ
ಸ್ಥಿರ ಮತ್ತು ಪ್ರಜಾಪ್ರಭುತ್ವ ಮಾದರಿಯ ರಾಜ್ಯದ ಪ್ರಮುಖ ಲಕ್ಷಣ” ಎಂದು. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.1, ಪು.143 ಮತ್ತು 144)

ಹೌದು, ಪ್ರಜಾಪ್ರಭುತ್ವದ ಪ್ರಬಲ ಪ್ರತಿಪಾದಕರಾದ ಬಾಬಾಸಾಹೇಬರು ಹೇಳುವುದು ಅಥವಾ ಏಕಭಾಷೆಯ ರಾಜ್ಯಗಳ ಅಸ್ತಿತ್ವಕ್ಕೆ ಅವರು ನೀಡುವ ಎರಡು ಕಾರಣಗಳಲ್ಲಿ ಪ್ರಮುಖವಾದದ್ದು ಅಥವಾ ಮೊದಲನೆಯದು ಪ್ರಜಾಪ್ರಭುತ್ವ. ಅಂದರೆ ಬಾಬಾಸಾಹೇಬರು ಹೇಳುವುದು “ಘರ್ಷಣೆ ಇಲ್ಲದೆ ಪ್ರಜಾಪ್ರಭುತ್ವವಿಲ್ಲ. ಆದ್ದರಿಂದ ನಾವು ನಮ್ಮವರು ಎಂಬ ಭಾವವಿಲ್ಲದೆ ಪ್ರಜಾಪ್ರಭುತ್ವ ಕಾರ್ಯ ನಿರ್ವಹಿಸಲು ಸಾಧ್ಯವಿಲ್ಲ” ಎಂದು. ಇನ್ನು ಎರಡನೆಯ ಕಾರಣ ಅವರು ನೀಡುವುದು “ಜನಾಂಗೀಯ ಮತ್ತು ಸಾಂಸ್ಕೃತಿಕ ಸಿಕ್ಕುಗಳನ್ನು ಪರಿಹರಿಸಲು ಏಕ ಭಾಷೆ ರಾಜ್ಯ ಅಗತ್ಯ” ಎಂದು.

ಯಾಕೆಂದರೆ ಇದಕ್ಕೆ ಬಾಬಾಸಾಹೇಬರೇ ಉದಾಹರಣೆ ನೀಡುತ್ತಾರೆ ಅದೆಂದರೆ “ಆಂಧ್ರ ಮತ್ತು ತಮಿಳಿಗರ ಕಚ್ಚಾಟ, ಆಂಧ್ರ ಮತ್ತು ಮಹಾರಾಷ್ಟ್ರಿಗರ ಕಚ್ಚಾಟ, ಗುಜರಾತ್ ಮತ್ತು ಮಹಾರಾಷ್ಟ್ರಿಗರ ಕಚ್ಚಾಟ… ಇತ್ಯಾದಿ” (ಗಮನಿಸಿ, ಅಂಬೇಡ್ಕರರು ತಮಿಳಿಗರು ಮತ್ತು ಕನ್ನಡಿಗರ ಕಚ್ಚಾಟ ಪ್ರಸ್ತಾಪಿಸಿಲ್ಲ! ಯಾಕೆಂದರೆ ಆಗಿನ್ನೂ ಸಮಗ್ರ ಕರ್ನಾಟಕ ಅಸ್ತಿತ್ವಕ್ಕೆ ಬಂದಿರಲಿಲ್ಲವಲ್ಲ!)
ಒಟ್ಟಾರೆ ಬಾಬಾಸಾಹೇಬ್ ಅಂಬೇಡ್ಕರ್ ರವರು “ಒಂದೇ ಭಾಷೆ – ಒಂದೇ ರಾಜ್ಯ” ಹಿನ್ನೆಲೆಯಲ್ಲಿ ಪ್ರತ್ಯೇಕ ಭಾಷಾವಾರು ರಾಜ್ಯಗಳ ರಚನೆಯನ್ನು ಪ್ರತಿಪಾದಿಸಿದ್ದಾರೆ.

ಅಂದಹಾಗೆ ಅಂಬೇಡ್ಕರರು ಅಂದು ಪ್ರಸ್ತಾಪಿಸಿದ ಕರ್ನಾಟಕ ರಾಜ್ಯದಲ್ಲಿ ಅಂದು 1.90 ಕೋಟಿ ಜನರಿದ್ದರು (1951 ರ ಗಣತಿ) ಮತ್ತು ಕರ್ನಾಟಕದ ಪ್ರಸ್ತಾಪಿತ ವಿಸ್ತೀರ್ಣ 72,730 ಚ.ಮೈಲುಗಳು ಇತ್ತು. ಅದರ ಆಧಾರದಲ್ಲಿ ಕರ್ನಾಟಕ ರಾಜ್ಯ 1956 ನವೆಂಬರ್ 1 ರಂದು ಅಸ್ತಿತ್ವಕ್ಕೆ ಬಂತು. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವದ ಈ ದಿನ ಕನ್ನಡಿಗರು ಬಾಬಾಸಾಹೇಬರನ್ನು ಸ್ಮರಿಸಿಕೊಳ್ಳಬೇಕು‌. ಭಾಷಾ ಆಧಾರದಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಉದಯಕ್ಕೆ “ಭಾಷಾವಾರು ರಾಜ್ಯ ರಚನೆಯ ಉದ್ದೇಶದ ಅವರ ಚಿಂತನೆಗಳು ಕಾರಣ” ಎಂಬುದನ್ನು ಅರಿಯಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending