ರಾಜಕೀಯ
ಸ್ನೇಹದ ಹಸ್ತ ತಿರಸ್ಕರಿಸಿದ್ದ ಪಾಕಿಸ್ತಾನಕ್ಕೆ ಕಾರ್ಗಿಲ್ ನಲ್ಲಿ ತಕ್ಕ ಉತ್ತರ ನೀಡಿದ್ದ ಅಜಾತಶತ್ರು !

ಸುದ್ದಿದಿನ ವಿಶೇಷ: ಅದು 1999 ನೇ ವರ್ಷ. ಭಾರತದ ಶಕ್ತಿ ಜಗತ್ತಿಗೆ ಪರಿಚಯವಾದ ವರ್ಷ. ಗಡಿಯಲ್ಲಿ ಅನಗತ್ಯ ಕಿರುಕುಳ ನೀಡುತ್ತಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ದಿನಗಳು ಅವು. ಇದಕ್ಕೆಲ್ಲ ಕಾರಣವಾಗಿದ್ದು, ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜಾಣ್ಮೆ ಹಾಗೂ ಸೂಕ್ತ ನಿರ್ಧಾರ.
ಹೌದು, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಪ್ರದೇಶದಲ್ಲಿ ಪಾಕಿಸ್ತಾನದ ಸೈನಿಕರು ನುಸುಳುವ ಪ್ರಯತ್ನ ಮುಂದುವರಿಸಿದ್ದರು. 1999ರಲ್ಲಿ ಪಾಕಿಸ್ತಾನದ ಸೈನಿಕರು ಕಾಶ್ಮೀರ ಕಣಿವೆಗಳ ಮುಖಾಂತರ ದೇಶದ ಒಳಗೆ ನುಸುಳುವುದು ಹೆಚ್ಚಾಯಿತು. ಇದರಿಂದಾಗಿ ಯುದ್ಧ ಘೋಷಿಸಿಸುವ ಅನಿವಾರ್ಯತೆ ಭಾರತಕ್ಕೆ ಎದುರಾಯಿತು.
ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ತಮ್ಮbಚಾಣಾಕ್ಷತನದಿಂದ ಯುದ್ಧಕ್ಕೆ ಸಿದ್ಧತೆ ನಡೆಸಿದರು ಇಡೀ ದೇಶ ಪ್ರಧಾನಿ ಬಿನ್ನಿಗೆ ನಿಂತಿತು. ಅದರ ಫಲವಾಗಿ ನಮ್ಮ ದೇಶದ ಸೈನಿಕರು ವಿರೋಚಿತವಾಗಿ ಹೋರಾಟ ನಡೆಸಿದ ವಿಜಯದ ಮಾಲೆ ಧರಿಸಿದರು. ಇದಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರ ಸಮಯೋಚಿತ ನಿರ್ಧಾರ ಕಾರಣವಾಯಿತು.
ಸ್ನೇಹದ ಹಸ್ತ ಚಾಚಿದ್ದ ಅಜಾತಶತ್ರು !
ಯುದ್ದಕ್ಕೂ ಮೊದಲು ಪಾಕಿಸ್ತಾನದ ಜತೆ ಸ್ನೇಹಕ್ಕೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸ್ನೇಹದ ಹಸ್ತ ಚಾಚಿದ್ದರು. ಆದರೆ ಪಾಕಿಸ್ತಾನ ಅದನ್ನು ಅರ್ಥ ಮಾಡಿಕೊಳ್ಳದೇ ತನ್ನ ಪ್ರವೃತ್ತಿ ಮುಂದುವೆರಿಸಿತ್ತು. ಕೊನೆಗೆ ಯುದ್ಧಕ್ಕೆ ಮುಂದಾಗಲಾಯಿತು. ಕೊನೆಗೆ ಯುದ್ದದಲ್ಲಿ ಸೋತ ಪಾಕಿಸ್ತಾನ ಭಾರತದ ಮೇಲೆ ಅಣುಬಾಂಬ್ ಹಾಕುವ ಬೆದರಿಕೆ ಹಾಕಿತು. ಇದಕ್ಕೆ ಭಾರತ ಸೊಪ್ಪು ಹಾಕಲಿಲ್ಲ. ಅಮೆರಿಕ, ಚೀನಾ ದೇಶಗಳು ಕೂಡ ಪಾಕಿಸ್ತಾನಕ್ಕೆ ಮಾನ್ಯತೆ ನೀಡಲಿಲ್ಲ. ಸ್ವಾಭಿಮಾನದ ಮೂಲಕ ಯುದ್ಧ ಗೆದ್ದ ಭಾರತ ತನ್ನ ಸಾಮರ್ಥ್ಯವನ್ನು ವಿಶ್ವಕ್ಕೆ ಪರಿಚಯಿಸಿತು. ಇದಕ್ಕೆ ಅಟಲ್ ಬಿಹಾರಿ ವಾಜಪೇಯಿ ಅವರು ಕೈಗೊಂಡ ನಿರ್ಧಾರ ಕಾರಣವಾಯಿತು ಎಂದು ಸ್ಮರಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್ |9986715401

ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್6 days ago
ಏನಿದು ? ಗಡಿಮಾರಿ..!
-
ದಿನದ ಸುದ್ದಿ7 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ರಾಜಕೀಯ5 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ದಿನದ ಸುದ್ದಿ7 days ago
ಚನ್ನಗಿರಿ | ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಜೈಲು
-
ದಿನದ ಸುದ್ದಿ7 days ago
ಉತ್ತರ ಪ್ರದೇಶ ಬಜೆಟ್ 2021-22 | ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 2,000 ಕೋಟಿ ಹಣ ; ಉದ್ಯೋಗಾವಕಾಶ ಹೆಚ್ಚಿಸಲು ಎಲೆಕ್ಟ್ರಾನಿಕ್ ಸಿಟಿ ನಿರ್ಮಾಣ
-
ಬಹಿರಂಗ6 days ago
ಕ್ರಾಂತಿಕಾರಿ ರೈತ ಹೋರಾಟದ ಸ್ಫೂರ್ತಿಯ ಚಿಲುಮೆ `ಅಜಿತ್ ಸಿಂಗ್’
-
ನೆಲದನಿ6 days ago
ರೈತ ಹೋರಾಟಗಾರ `ಸಹಜಾನಂದ ಸರಸ್ವತಿ’
-
ರಾಜಕೀಯ4 days ago
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್