Connect with us

ದಿನದ ಸುದ್ದಿ

ಮಾನ್ಯ ಮುಖ್ಯಮಂತ್ರಿಗಳೇ “ವಿಥೌಟ್ ಲಾಠಿ ಡ್ಯೂಟಿ” ಎಂಬ ಕಾನೂನು ಜಾರಿ ಮಾಡಿ

Published

on

  • ಕಾವ್ಯ ಪ್ರಿಯ ಶಿವು

ನಸೇವೆಯೇ ಜನಾರ್ದನ ಸೇವೆ ಸರಕಾರದ ಕೆಲಸ ದೇವರ ಕೆಲಸವೆಂದು ನಮ್ಮ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಪೂರ್ವದಿಕ್ಕಿನ ಪ್ರವೇಶದ್ವಾರದ ಗೋಡೆಯ ಮೇಲೆ ಬರೆದಿರುವ ಉಕ್ತಿ. ದೇಶ ಸಂವಿಧಾನ ಕಾನೂನು ಸುವ್ಯವಸ್ಥೆ ರಕ್ಷಣೆ ಆಡಳಿತ ಅಧಿಕಾರ ಯಾರಿಗಾಗಿ ಜನಸೇವೆಗಾಗಿ ದೇಶದ ಅಭಿವೃದ್ಧಿಗಾಗಿ ದೇಶದ ಒಕ್ಕೂಟ ವ್ಯವಸ್ಥೆಯನ್ನು ಆಡಳಿತದ ಅನುಕೂಲಕ್ಕಾಗಿ ಅಧಿಕಾರವನ್ನು ವಿಭಜಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮನ್ನು ಅಳುತ್ತಾವೆ.

ಆಳುವ ದೊರೆ ದೇಶದ ಮತ್ತು ರಾಜ್ಯದ ಪ್ರಜೆಗಳನ್ನು ತನ್ನ ಮನೆಯ ಸದಸ್ಯರಂತೆ ಸ್ವಂತ ಮಕ್ಕಳಂತೆ ಸೋದರ ಸೋದರಿಯರಂತೆ ಜಾತಿಭೇದವಿಲ್ಲದೆ ಲಿಂಗಬೇಧವಿಲ್ಲದೆ ವರ್ಗಭೇದವಿಲ್ಲದೆ ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ಐಕ್ಯತೆ ಮನೋಭಾವದಿಂದ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮೌಲ್ಯವನ್ನು ಎತ್ತಿ ಹಿಡಿದು ಮತ್ತು ಅವನ ತಪ್ಪುಗಳನ್ನು ತಿದ್ದುವ ಮೂಲಕ ವಿಚಾರ ವಿನಿಮಯಳಲ್ಲಿ ಆದ ತಪ್ಪುಗಳನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳಬೇಕು. ಕಾಪಾಡುವ ನೈತಿಕತೆ ಇಲ್ಲದವನಿಗೆ ಶಿಕ್ಷ ಕೊಡುವ ನೈತಿಕತೆಯು ಕೂಡ ಇರುವುದಿಲ್ಲ. ಇಡೀ ದೇಶ ಕರೋನ ಎಂಬ ಕಾಯಿಲೆಗೆ ತತ್ತರಿಸಿಹೋಗಿದೆ.

ಜನಸಾಮಾನ್ಯರು ಮೂಲಭೂತ ಅಗತ್ಯತೆಗಳನ್ನು ಹುಡುಕಿಕೊಂಡು ಅನಿವಾರ್ಯವಾಗಿ ರೋಡಿಗೆ ಬರುವಂತಾಗಿದೆ. ಬಂದ ನಾಗರಿಕರನ್ನು ಕರ್ತವ್ಯ ನಿರತ ಪೊಲೀಸರು ಆತ್ಮೀಯವಾಗಿ ಅವರ ಜೊತೆಗೆ ಚರ್ಚಿಸಿ ಸತ್ಯಾಸತ್ಯತೆಗಳ ಬಗ್ಗೆ ಅವಲೋಕನ ಮಾಡಿ ಸರಿಯಾದ ರೀತಿಯಲ್ಲಿ ಸರಕಾರ ಕೈಗೊಂಡಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು. ಹಾಗೂ ಒಂದು ವೇಳೆ ಒಬ್ಬ ಪ್ರಜೆ ತಪ್ಪು ಮಾಡಿದ್ದೆ ಆದರೆ ಅವನನ್ನು ಕೂಡಲೇ ಬಂಧಿಸಿ ಕಾನೂನಿನ ರೀತಿಯಲ್ಲಿ ಕ್ರಮಕೈಗೊಂಡು ತಪ್ಪಿಗೆ ಶಿಕ್ಷೆಯನ್ನು ವಿಧಿಸಲು ನ್ಯಾಯಾಂಗಕ್ಕೆ ಒಪ್ಪಿಸಬೇಕು. ತಪ್ಪು ಮಾಡಿದ ಅಪರಾಧಿಯ ಮೇಲೆ ಯಾವುದೇ ಕಾರಣಕ್ಕೂ ಕೈ ಮಾಡುವಂತಿಲ್ಲ.

ಬಂಧಿಸಿದ 24 ಗಂಟೆ ಒಳಗಡೆ ಅವನನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ಹೀಗಿರುವಾಗ ಒಬ್ಬ ಅಮಾಯಕನ ಮೇಲೆ ನಾಲ್ಕು ಐದು ಜನ ಪೊಲೀಸರು ಸೇರಿಕೊಂಡು ಜೀವ ಹೋಗುವರೆಗೆ ಹೊಡೆದು ಸಾಯಿಸುವುದು ಎಂದರೆ ಎಂಥ ಅಮಾನವೀಯ ಕೃತ್ಯ. ನಮ್ಮ ದೇಶ ಪ್ರಪಂಚದ ಇತರೆ ರಾಷ್ಟ್ರಗಳಿಗೆ ಮಾದರಿ ರಾಷ್ಟ್ರ. ಉತ್ತರ ಕೊರಿಯಾ ಜಪಾನ್ ಜರ್ಮನಿ ಫ್ರಾನ್ಸ್ ಇಟಲಿ ಇತರೆ ಸರ್ವಾಧಿಕಾರಿ ಧೋರಣೆ ರಾಷ್ಟ್ರಗಳಂತೆ ನಮ್ಮಲ್ಲಿ ಅರಸೊತ್ತಿಗೆ ಆಳ್ವಿಕೆ ಇಲ್ಲ. ಇಲ್ಲಿ ಪ್ರಜೆಗಳೇ ಪ್ರಭುಗಳು ಪ್ರಜೆಗಳಿಂದ ಪ್ರಭು. ಅಧಿಕಾರ ಎಂಬುದು ದೇಶದ ಪ್ರಜೆಗಳು ರೂಪಿಸಿದ ಶಕ್ತಿಯೆಂದು ಸಂವಿಧಾನದ ಪಿತಾಮ ವಿಶ್ವರತ್ನ ಮಹಾಜ್ಞಾನಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ವ್ಯಾಖ್ಯಾನಿಸುತ್ತಾರೆ.

ಪ್ರತಿಯೊಂದಕ್ಕೂ ಕಾನೂನು ಇದೆ ಆ ಕಾನೂನನ್ನು ಯಾರು ಕೂಡ ಕೈಗೆತ್ತಿಕೊಳ್ಳಬಾರದು. ಒಂದು ವೇಳೆ ಅಂತ ದುಸ್ಸಾಹಸಕ್ಕೆ ಕೈ ಹಾಕಿದರೆ ಆ ವ್ಯಕ್ತಿ ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನಿನ ಸೂಕ್ತ ಕ್ರಮಗಳನ್ನು ಜರುಗಿಸಿ ತಪ್ಪಿಗೆ ತಕ್ಕ ಶಿಕ್ಷೆಯನ್ನು ವಿಧಿಸಬೇಕು. ಪೊಲೀಸರಲ್ಲಿ ಮಾನಸಿಕ ಸಾಮರ್ಥ್ಯದ ಶಕ್ತಿ ಅತ್ಯಂತ ಕಡಿಮೆ ಪ್ರಮಾಣದಲ್ಲಿರುತ್ತದೆ. ಅವರಿಗೆ ಮಾನವೀಯತೆ ಮನುಷ್ಯತ್ವ ಭ್ರಾತೃತ್ವ ಜೀವನದ ಮೌಲ್ಯ ಎತ್ತಿಹಿಡಿಯುವ ನೈತಿಕ ಮೌಲ್ಯದ ಪಾಠ ಮಾಡಿಸಬೇಕು. ಬಾಯಿಬಿಟ್ಟರೆ ವೇದ ಉಪನಿಷತ್ತು ಭಗವದ್ಗೀತೆಯ ಸಂಸ್ಕೃತ ವಾಕ್ಯವನ್ನು ನಾಲಿಗೆ ಮೇಲೆ ಹರಿದಾಡುತ್ತವೆ.

ಇವರೇನು ತಾಯಿ ಗರ್ಭದಿಂದ ಜನಿಸಿ ಬಂದವರಲ್ಲವೇ. ಇವರಿಗೆ ಅಕ್ಕ-ತಂಗಿ ಅಣ್ಣ-ತಮ್ಮ ಹೆಂಡತಿ ಮಕ್ಕಳು ಬಂಧು ಭಗಿನಿಯರು ಇಲ್ಲದ ಅನಾಥರೇ. ಅವಾಚ್ಯ ಶಬ್ದಗಳನ್ನು ಬಳಸಿದರೆ ಅಂಥವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ ರಿಟ್ ಅರ್ಜಿಯ ಮೂಲಕ ಪರಿಹಾರವನ್ನು ಪಡೆದುಕೊಳ್ಳುವ ಅವಕಾಶ ನಮ್ಮ ನ್ಯಾಯಾಂಗದಲ್ಲಿ ಇದೆ. ನಮ್ಮ ದೇಶ ಸುಸಂಸ್ಕೃತವಾದ ದೇಶ ಇಲ್ಲಿ ಯಹೂದಿಗಳು ತತ್ವಜ್ಞಾನಿಗಳು ಚಿಂತಕರು ಸಾಹಿತಿಗಳು ಧಾರ್ಮಿಕ ಸುಧಾರಕರು ಸಾಮಾಜಿಕ ಚಿಂತಕರು ವಚನಕಾರರು ಕೀರ್ತನಕಾರರು ದಾಸರು ಸಂತರು ಶರಣರು ಸೂಫಿಗಳು ಕಾಲಜ್ಞಾನಿಗಳು ಹುಟ್ಟಿ ತಮ್ಮ ಜ್ಞಾನದ ಬೆಳಕನ್ನು ನೀಡಿ ಹೋಗಿದ್ದಾರೆ.

ಶಾಂತಿ ಸುವ್ಯವಸ್ಥೆ ಸಹಬಾಳ್ವೆ ಸೌಹಾರ್ದತೆ ಬ್ರಾತುತ್ವ ಮನುಷ್ಯ ಪ್ರೇಮ ಸಾಮರಸ್ಯ ಐಕ್ಯತೆಯ ಮನೋಭಾವನ್ನು ಬಿತ್ತಿ ಹೋಗಿದ್ದಾರೆ. ಇಂಥ ಮಹನೀಯರ ಜೀವನದ ಆದರ್ಶಗಳು ವಾರದಲ್ಲಿ ಒಂದು ದಿನವಾದರೂ ಉತ್ತರಕುಮಾರನ ಪೌರುಷತ್ವದ ಪೊಲೀಸರಿಗೆ ಪಾಠ ಮಾಡಬೇಕಾಗಿದೆ. ಏಕೆಂದರೆ ಇವರ ದರ್ಪ ದೌರ್ಜನ್ಯ ದಬ್ಬಾಳಿಕೆ ಆಡಳಿತ ಅಧಿಕಾರ ಚಲಾಯಿಸುವುದು ಹೇನ್ನಿದ್ದರೂ ನಿರ್ಗತಿಕರ ಮೇಲೆ ಬಡವರ ಮೇಲೆ ಶೋಷಿತರ ಮೇಲೆ ಕೂಲಿಕಾರ್ಮಿಕರ ಮೇಲೆ ಅನಾಥರ ಮೇಲೆ ಬಡವನ ಸಿಟ್ಟು ದವಡೆಗೆ ಮೂಲ ಎಂಬ ಗಾದೆಯಂತೆ ಶಕ್ತಿ ಹೀನರೇ ಇಲ್ಲಿ ಬಲಿಪಶುವಾಗಿದ್ದಾರೆ.

ಒಬ್ಬ ರಾಜಕಾರಣಿಯ ಮಗ ಉದ್ಯಮಿಯ ಮಗ ಒಬ್ಬ ಎಸ್ಪಿ ಅಥವಾ ಜಿಲ್ಲಾಧಿಕಾರಿಯ ಮಗ ಸಿನಿಮಾ ನಟರ ಮಗ ಅನ್ಯಾಯ ಕೊಲೆ ಸುಲಿಗೆ ಶೋಷಣೆ ಅತ್ಯಾಚಾರ ಕೋಮು ಸಂಘರ್ಷ ಗದ್ದಲಗಳು ಉಂಟು ಮಾಡಿದರೂ ಕಂಡರೂ ಕಾಣದಂತೆ ಬಾಲ ಮುದುರಿಕೊಂಡು ಹುಲ್ಲು ಕಿತ್ತಿದ ಹಾವಿನಂತೆ ತಲೆಯಾಡಿಸುವ ನಪುಂಸಕ ಪೊಲೀಸರ ವರ್ತನೆ ಹೆಚ್ಚಾಗುತ್ತಿದೆ. ಹಾಗಂತ ಎಲ್ಲಾ ಪೊಲೀಸರು ಕೆಟ್ಟವರಲ್ಲ ಹಾಗೆಯೇ ಎಲ್ಲಾ ಪೊಲೀಸರು ಒಳ್ಳೆಯವರು ಅಲ್ಲ. ಅಲ್ಪಬುದ್ಧಿ ವಿನಾಶಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಪೊಲೀಸರೇ ಜೀವಂತ ಉದಾಹರಣೆ. ಲಾಕ್ ಡೌನ್ ಎಂಬ ನೆಪದಲ್ಲಿ ಪೋಲಿಸ್ ಗೂಂಡಾ ವರ್ತನೆ ದೇಶದ್ಯಾಂತ ಕ್ರೂರ ಪ್ರವೃತ್ತಿಯ ನರ್ತನೆ ತಾಂಡವಾಡುತ್ತಿದೆ.

ಇಂಥ ಅವಹೇಳನಕಾರಿ ದುರ್ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸುತ್ತಿವೆ ನಾಡಿನ ಮತ್ತು ದೇಶದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ದೃಶ್ಯಗಳು ಕಂಡರೂ ಕಾಣದಂತೆ ಆಡಳಿತವರ್ಗದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಷಂಡರಂತೆ ಸಂಬಂಧವಿಲ್ಲದಂತೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಬೀದಿಗಳಲ್ಲಿ ಗಲ್ಲಿಗಳಲ್ಲಿ ಲಾಠಿಯೇಟು ತಿಂದವರು ಗಂಜಿಗೆ ಗತಿಯಿಲ್ಲದ ನಿರ್ಗತಿಕರು.

ದಿನನಿತ್ಯದ ಜೀವನಕ್ಕೆ ಅತ್ಯಗತ್ಯ ವಸ್ತುಗಳನ್ನು ಸಿಗದೇ ಇದ್ದ ಸಂದರ್ಭದಲ್ಲಿ ಅನಿವಾರ್ಯವಾಗಿ ಅವುಗಳನ್ನು ಹುಡುಕಿಕೊಂಡು ಬಂದ ಅಮಾಯಕರ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡುವುದು ಯಾವ ಪುರುಷಾರ್ಥ. ಇದನ್ನು ನೋಡಿಕೊಂಡು ಸುಮ್ಮನೆ ಕುಳಿತಿರುವ ಮಂತ್ರಿ ಮಹನೀಯರು ಪುರುಷ ಹೀನರು ಸಂಬಂಧಪಟ್ಟ ಮಂತ್ರಿಗಳು ಕೂಡಲೇ ಗೂಂಡಾ ಪ್ರವೃತ್ತಿಯ ಪೊಲೀಸ್ ವ್ಯಕ್ತಿಯ ಮೇಲೆ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಂಡು ಅವನನ್ನು ಶಿಕ್ಷೆಗೆ ಒಳಪಡಿಸಿ ಸೇವೆಯಿಂದ ಖಾಯಂ ಆಗಿ ವಜಾಗೊಳಿಸಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್

Published

on

ಸುದ್ದಿದಿನ,ಚನ್ನಗಿರಿ:ಶತಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನ ಮೀರಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಹೊಂದಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಹಾಗೂ ಹೋರಾಟವನ್ನು ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ ಎಂದು ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ (ಏ.14ರಂದು) ಭಾರತದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು.

ಈಗಲೂ ಜಾರಿಯಲ್ಲಿರುವ ಅಸ್ಪೃಶ್ಯತೆ ಮತ್ತು ಜಾತಿ ವ್ಯವಸ್ಥೆಯಿಂದ ನಡೆಯುತ್ತಿರುವ ಅಮಾನವೀಯವಾದ ಕೃತ್ಯಗಳು ಹಾಗೂ ದೇಶದಲ್ಲಿ ಅನುಸೂಚಿತ ಜಾತಿಗಳು, ಬುಡಕಟ್ಟುಗಳು, ಆದಿವಾಸಿಗಳು ಎದುರಿಸುತ್ತಿರುವ ಸವಾಲುಗಳು, ಹಿಂದುಳಿದ ವರ್ಗದ ಜನರ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿರುವಿಕೆಯ ಬಗ್ಗೆ ಚರ್ಚೆ ಆಗಬೇಕಾಗಿದೆ ಎಂದರು.

ಭಾರತ ದೇಶ ಸ್ವಾತಂತ್ರ್ಯಗೊಂಡು 76 ವರ್ಷಗಳು ಕಳೆದರೂ ಗ್ರಾಮೀಣ ಹಾಗೂ ನಗರ ಪ್ರದೇಶದ ಕೊಳಗೇರಿಗಳಲ್ಲಿ ಇಂದಿಗೂ ಕೂಡ ಶೈಕ್ಷಣಿಕ ಅಭಿವೃದ್ಧಿ ಸಾಧಿಸಲು ಆಗದೇ ಇರುವುದು ಒಂದು ವಿಪರ್ಯಾಸವೇ ಸರಿ. ಈ ಕಾರಣದಿಂದಲೇ ಇಂದಿಗೂ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಸಂಪೂರ್ಣವಾಗಿ ಸಾಧಿಸಲು ಸಾಧ್ಯವಾಗಿಲ್ಲ. ದೇಶದಲ್ಲಿನ ಎಲ್ಲಾ ಸರ್ಕಾರಗಳು ಈ ನಿಟ್ಟಿನಲ್ಲಿ ತಾವು ರೂಪಿಸುವ ಯೋಜನೆಗಳು ಮತ್ತು ಕಾರ್ಯಕ್ರಮಗಳು ಅನುಷ್ಠಾನಗೊಳಿಸಿದಾಗ ಮಾತ್ರ ಅಂಬೇಡ್ಕರ್ ಅವರ ಆಶಯವನ್ನು ಈಡೇರಿಸಿದಂತಾಗುತ್ತದೆ ಹಾಗೂ ಪ್ರಗತಿಪರ ದೇಶವಾಗುತ್ತದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ

ಪ್ರಾಂಶುಪಾಲರಾದ ಅಮೃತೇಶ್ವರ್ ಬಿಜಿ ಅವರು
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಹಾಯಕ ಪ್ರಾಧ್ಯಾಪಕ ಪ್ರಸನ್ನ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.‌‌‌ ಸಹಾಯಕ ಪ್ರಾಧ್ಯಾಪಕ ದೇವರಾಜು ಸ್ವಾಗತಿಸಿದರು. ವಿದ್ಯಾರ್ಥಿ ಸಂಜಯ್ ಟಿಪಿ ಆಶಯ ಗೀತೆ ಹಾಡಿದರು. ಪವನ್ ಕುಮಾರ್ ನಿರೂಪಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ

Published

on

ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ವಿವಾಹೇತರ ಸಂಬಂಧದ ಆರೋಪದ ಮೇಲೆ ಜಾಮಿಯಾ ಮಸೀದಿಯ ಹೊರಗೆ ಮುಸ್ಲಿಂ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಬಂಧಿತರನ್ನು ಮೊಹಮ್ಮದ್ ನಯಾಜ್ (32), ಮೊಹಮ್ಮದ್ ಗೌಸ್ ಪೀರ್ (45), ಚಾಂದ್ ಬಾಷಾ (35), ಇನಾಯತ್ ಉಲ್ಲಾ (51), ದಸ್ತಗೀರ್ (24), ಮತ್ತು ರಸೂಲ್ ಟಿಆರ್ (42) ಎಂದು ಗುರುತಿಸಲಾಗಿದೆ. ಅವರು ತಾವರೆಕೆರೆ ಗ್ರಾಮದಲ್ಲಿ ಸಣ್ಣ ಅಂಗಡಿಗಳನ್ನು ನಡೆಸುತ್ತಿದ್ದರು.

ಈ ಜನರು ಜಮೀಲ್ ಅಹ್ಮದ್ ಅವರ ಪತ್ನಿ ಶಬೀನಾ ಬಾನು ಅವರ ಮೇಲೆ ವಿವಾಹೇತರ ಸಂಬಂಧದ ಆರೋಪದ ಮೇಲೆ ಹಲ್ಲೆ ನಡೆಸಿದರು. ಏಪ್ರಿಲ್ 7 ರಂದು ಶಬೀನಾ ಬಾನು (38) ತನ್ನ ಮಕ್ಕಳು ಮತ್ತು ಸ್ನೇಹಿತೆ ನಸ್ರೀನ್ ಜೊತೆ ಒಂದು ಸಣ್ಣ ಬೆಟ್ಟಕ್ಕೆ ಹೋಗಿ ಅದೇ ದಿನ ಮನೆಗೆ ಮರಳಿದ್ದರು ಎಂದು ಹೇಳಲಾಗುತ್ತದೆ. ವೈದ್ಯರ ನಿರ್ದೇಶನದಂತೆ ಮಾತ್ರೆ ತೆಗೆದುಕೊಂಡು ಮಲಗಿದ್ದರು.

ಈ ಮಧ್ಯೆ, ಆಕೆಯ ಸ್ನೇಹಿತೆ ನಸ್ರೀನ್, ತಾನು ಮನೆಗೆ ಹೋಗುವುದಾಗಿ ಹೇಳಿದ್ದರೂ, ಯಾವುದೋ ಕಾರಣಕ್ಕೆ ಅಲ್ಲಿಯೇ ಉಳಿದಳು. ನಂತರ, ನಸ್ರೀನ್ ಸಂಬಂಧಿ ಫ್ಜಯಾಜ್ ಎಂಬ ವ್ಯಕ್ತಿ ಶಬೀನಾ ಬಾನು ನಿವಾಸಕ್ಕೆ ಬಂದ. ಜಮೀಲ್ ತನ್ನ ಮನೆಗೆ ಬಂದು ನಸ್ರೀನ್ ಮತ್ತು ಫಯಾಜ್ ರನ್ನು ನೋಡಿದಾಗ, ತನ್ನ ಹೆಂಡತಿಗೆ ವಿವಾಹೇತರ ಸಂಬಂಧವಿದೆ ಎಂದು ಅನುಮಾನಿಸಿದನು. ನಂತರ, ಅವರು ಮಸೀದಿಯಲ್ಲಿ ಧಾರ್ಮಿಕ ಮುಖಂಡರಿಗೆ ದೂರು ನೀಡಿದರು. ಶಬೀನಾ ಬಾನು ಮತ್ತು ಅವರ ಸ್ನೇಹಿತೆ ನಸ್ರೀನ್ ಮತ್ತು ಅವರ ಸಂಬಂಧಿ ಫಯಾಜ್ ಅವರನ್ನು ಏಪ್ರಿಲ್ 9 ರಂದು ತಾವರೆಕೆರೆ ಮಸೀದಿಯೊಳಗೆ ಕರೆದೊಯ್ಯಲಾಯಿತು. ಅಂದು ಮಹಿಳೆಯ ಮೇಲೆ ಹಲ್ಲೆ ನಡೆಸಲಾಯಿತು. ಎ.11 ರಂದು ಠಾಣೆಗೆ ಬಂದು ಮಹಿಳೆ ದೂರು ನೀಡಿದ್ದರು. ಈ ಸಂಬಂಧ ವಿಡಿಯೋ ಭಾರೀ ವೈರಲ್ ಆಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗೇಟ್ ಗೆ ಡಿಕ್ಕಿ ಹೊಡೆದು ಟನ್ ಗಟ್ಟಲೇ ಹೆಚ್ಚಿನ ಕಬ್ಬಿಣ ಬಿಸಾಕಿ ಓಡಿ ಹೋಗಿದ್ದಾರೆ ಪ್ರಭಾವಿ ರಾಜಕೀಯ ನಾಯಕನ ಹಿಂಬಾಲಕರು ಎನ್ನುವ ಮಾಹಿತಿ ಲಭ್ಯವಾಗಿದೆ.

ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕಿನ ಡಿಸಿ ನಗರದ ಹತ್ತಿರ ತುಂಗಭದ್ರಾ ಬೋರ್ಡ್ ಗೆ ಸಂಭಂದಿಸಿದ ಸೇತುವೆ ನಿರ್ಮಾಣ ಮಾಡಲು ಕಬ್ಬಿಣ ಹಾಕಿದ್ದರೆ ಅದನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ದುರ್ಘಟನ ನಡೆದಿತ್ತು. ಆದರೆ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಠಾಣೆಯ ಮುಂದೆ ಅಧಿಕಾರಿಗಳು ಕೇಸ್ ಮಾಡಲು ಸಿದ್ದರಾಗಿದ್ದರು, ಆದರೆ ಈ ಕಬ್ಬಿಣವನ್ನು ಪ್ರಭಾವಿ ರಾಜಕೀಯ ಹಿಂಬಾಲಕರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ವಿಚಾರ ಸುದ್ದಿಯಾಗುತ್ತೇ ರಾತ್ರೋರಾತ್ರಿ ಕಳ್ಳತನ ಮಾಡಿದ ವ್ಯಕ್ತಿ ವಾಟರ್ ಹೌಸ್ ನಲ್ಲಿ ಹಾಕಿ ಓಡಿ
ಹೋಗಿದ್ದಾರೆ.

ಮಹಾದೇವತತಾನ ಮಠದ ಎದುರುಗಡೆ ಇರುವ ವಾಟರ್ ಹೌಸ್ ನಲ್ಲಿ ರಾತ್ರಿ 1 ಗಂಟೆ 22 ನಿಮಿಷಕ್ಕೆ ಒಂದು ಲಾರಿ ಮತ್ತು ಕ್ರೇನ್ ಉಪಯೋಗಿ ಕೊಂಡು 10 ರಿಂದ 15 ನಿಮಿಷದ ಒಳಗೆ ಉಳಿಸಿ ಪರಾಯಿಯಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯ ಸಿಬ್ಬಂದಿಗಳು ತಿಳಿಸಿದ್ದಾರೆ.

ಇನ್ನು ಈ ಕಬ್ಬಿಣ ಹಾಕಲು ಬಂದವರಲ್ಲಿ ಈ ವ್ಯಕ್ತಿಗಳು ಮೈಮೇಲೆ ದಪ್ಪ ದಪ್ಪ ಬಂಗಾರದ ಆಭರಣಗಳನ್ನು ಹಾಕಿಕೊಂಡು ಕಾರುಗಳಲ್ಲಿ ಬಂದಿದ್ದಾರೆ. ಅಧಿಕಾರಿಗಳು ಹೇಳಿದ್ದಾರೆ ಯಾವ ಅಧಿಕಾರಿ ? ಎನ್ನುವ ಮಾಹಿತಿಯನ್ನು ಇಲ್ಲಿಯ ಸಿಬ್ಬಂದಿಗೆ ನೀಡದೇ ಕಾಲು ಕಿತ್ತಿದ್ದಾರೆ. ಈ ಲಾರಿ ಹಾಗೂ ಕ್ರೇನ್ ಬಂದಿರುವುದು ಮಹಾದೇವ ತಾತನ ಮಠದ ಹೊರಗಡೆ ಇರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಅದರಲ್ಲಿ ತುಂಗಭದ್ರಾ ಬೋರ್ಡ್ ನಲ್ಲಿ ಕಳ್ಳತನ ಮಾಡಿದ ಕಬ್ಬಿಣವನ್ನು ಭಯದ ವಾತಾವರಣದಲ್ಲಿ ವಾಟರ್ ಬೋಸ್ಟ್ ನಲ್ಲಿ ಹಾಕು ಓಡಿಹೋಗಿದ್ದಾರೆ.

ವಾಟರ್ ಬೂಸ್ಟ್ ನ ಗೇಟ್ ಗೆ ಡಿಕ್ಕಿ ಹೊಡೆದು ಗೇಟ್ ಮುರಿದು ಮೂರು ತಾಸುಗಳಲ್ಲಿ ಇಳಿಸಬೇಕಾದ ಕಬ್ಬಿಣ ಬರಿ 10 ರಿಂದ 15 ನಿಮಿಷದಲ್ಲಿ ಬಿಸಾಕಿ ಓಡಿಹೋಗಿದ್ದಾರೆ. ಇನ್ನು ತುಂಗಭದ್ರಾ ಬೋರ್ಡ್ ಸಿಬ್ಬಂದಿಗೆ ಕೇಳಿದ್ರೇ ಇಲ್ಲ ನನಗೆ ಏನು ? ಗೊತ್ತಿಲ್ಲ ನಮ್ಮ ಅಧಿಕಾರಿ ಕೆಂಚಪ್ಪ ಕಬ್ಬಿಣ ಕಳ್ಳತನ ಅವರಿಗೆ ಗೊತ್ತಿದೆ ಎನ್ನುವ ಮಾಹಿತಿ ನೀಡಿದರು. ಆದರೆ ಕಬ್ಬಿಣಕ್ಕೆ ತುಂಗಭದ್ರಾ ಬೋರ್ಡ್ ಎನ್ನುವ ಬರಹವನ್ನು ಹಳದಿ ಬಣ್ಣದಿಂದ ಬರದ ವ್ಯಕ್ತಿ ನಾನು ಎಂದರು.

ಭರತ್ ರೆಡ್ಡಿ ಆಪ್ತ ಸಿಂಧನೂರಿನ ಶಶಿ

ಕಾಂಗ್ರೇಸ್ ಮುಖಂಡ ಶಶಿ ಎನ್ನುವ ವ್ಯಕ್ತಿ ಕಾಂಗ್ರೆಸ್ ಪಕ್ಷದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಎನ್ನುವ ಅಂಶ ದೊರೆತಿದೆ. ಇನ್ನು ಈ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸರ್ಕಾರ ನೀಡುವ ಅನ್ನ ಭಾಗ್ಯದ ಸಾರ್ವಜನಿಕರಿಗೆ ಉಚಿತವಾಗಿ ನೀಡಿದರೇ, ಶಶಿ ಎನ್ನುವ ಕಾಂಗ್ರೇಸ್ ಮುಖಂಡ ಶಶಿ ಅಕ್ಕಿ ದಂದೆಯಲ್ಲಿ ನಿಂತು ಶಾಸಕ ಹೆಸರು ಹೇಳಿಕೊಂಡು ಹಗಲು ದರೋಡೆ ಮಾಡುತ್ತಿದ್ದಾನೆ.

ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಏಕೆ ? ಮೌನರಾಗಿದ್ದಾರೆ ಅವರಿಗೆ ಶಾಸಕರ ಒತ್ತಡ ಇದೆಯೇ ?
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸಹಾಯಕ ‘ಲಕ್ಷ್ಮೀ ನಾರಾಯಣ ಶಾಸ್ತ್ರಿ’ ಸಹ ಈ ಕಬ್ಬಿಣ ಕಳ್ಳತನ ವ್ಯವಹಾರದಲ್ಲಿ ಭಾಗಿಯಾಗಿ ಶಶಿ ಎನ್ನುವ ಮುಖಂಡನಿಗೆ ಸಹಕಾರ ನೀಡುತ್ತಿದ್ದಾನೆ. ರಾತ್ರೋರಾತ್ರಿ ಕಬ್ಬಿಣವನ್ನು ಬಿಸಾಡಲು ಸಹ ಸಹಕಾರ ನೀಡಿದ್ದಾನೆ. ಇನ್ನು ಈ ವಿಚಾರವಾಗಿ ‘ಸುದ್ದಿದಿನ’ ವೆಬ್ ನಲ್ಲಿ ವಿಶೇಷ ವರದಿಗಾರರು ದೂರವಾಣಿ ಮೂಲಕ ಕರೆ ಮಾಡಿದ್ರೇ ಅವರು ಸ್ವೀಕರಿಸಲಿಲ್ಲ.

ಇನ್ನು ಗ್ಯಾಸ್ ವೆಲ್ಡರ್ ಬಶೀರ್ ನನ್ನು ನಾರಾ ಭರತ್ ರೆಡ್ಡಿ ಆಪ್ತ ಕಾಂಗ್ರೇಸ್ ಯುವ ಮುಖಂಡ ಕೊಳಗಲ್ಲು ಧರ್ಮರೆಡ್ಡಿ ಗ್ರಾಮೀಣ ಠಾಣೆಗೆ ಬಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ ಅವರನ್ನು ಬಿಟ್ಟು ಕಳಿಸಿ ಎನ್ನುವ ಮಾಹಿತಿಯ ಪೊಲೀಸ್ ಠಾಣೆಯ ಎಸ್.ಬಿ ( spacial Branch) ಅವರ ಮೂಲಕ ಹೋಗಿದ್ದಾರೆ. ಇನ್ನು ಪೋಲೀಸರು ಧರ್ಮರೆಡ್ಡಿ ಮತ್ತು ಬಶೀರ್ ಇಬ್ಬರು ನಿಲ್ಲಿಸಿ ಪೋಟೊ ತೆಗೆಸಿ ಪತ್ರ ಬರೆಸಿಕೊಂಡು,ಸಹಿ ಮಾಡಿಸಿ ಕಳಿಸಿದ್ದಾರೆ.

ಇನ್ನು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರ ಅವರು ತುಂಗಭದ್ರಾ ಬೋರ್ಡ್ ಅಧಿಕಾರಿ ಕೆಂಚಪ್ಪ ಹಾಗೂ ಸರ್ಕಾರಿ ಪಿಎ ಲಕ್ಷ್ಮೀ ನಾರಾಯಣಶಾಸ್ತ್ರಿ ವಿರುದ್ಧ ಯಾವ ? ರೀತಿಯ ಕ್ರಮ ತೆಗದುಕೊಳ್ಳುತ್ತಾರೋ ಕಾದು ನೋಡಬೇಕಿದೆ.

ಒಟ್ಟಾರೆಯಾಗಿ “ಸುದ್ದಿದಿನ” ವೆಬ್ ಪ್ರಕಟಿಸಿ ವರದಿಗೆ ಫಲಶೃತಿ ದೊರೆತಿದೆ. ಇನ್ನು ಈ ರಾಜಕೀಯ ವ್ಯಕ್ತಿಯ ಬೆಂಬಲಿಗರು ಯಾರು ? ಅವರ ವಿರುದ್ಧ ಕೇಸ್ ಮಾಡುತ್ತಾರೋ ಇಲ್ಲವೋ ಎನ್ನುವ ಅಂಶ ಪೊಲೀಸ್ ಇಲಾಖೆ ಉತ್ತರಿಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending