ದಿನದ ಸುದ್ದಿ
ಮಾನ್ಯ ಮುಖ್ಯಮಂತ್ರಿಗಳೇ “ವಿಥೌಟ್ ಲಾಠಿ ಡ್ಯೂಟಿ” ಎಂಬ ಕಾನೂನು ಜಾರಿ ಮಾಡಿ
- ಕಾವ್ಯ ಪ್ರಿಯ ಶಿವು
ಜನಸೇವೆಯೇ ಜನಾರ್ದನ ಸೇವೆ ಸರಕಾರದ ಕೆಲಸ ದೇವರ ಕೆಲಸವೆಂದು ನಮ್ಮ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಪೂರ್ವದಿಕ್ಕಿನ ಪ್ರವೇಶದ್ವಾರದ ಗೋಡೆಯ ಮೇಲೆ ಬರೆದಿರುವ ಉಕ್ತಿ. ದೇಶ ಸಂವಿಧಾನ ಕಾನೂನು ಸುವ್ಯವಸ್ಥೆ ರಕ್ಷಣೆ ಆಡಳಿತ ಅಧಿಕಾರ ಯಾರಿಗಾಗಿ ಜನಸೇವೆಗಾಗಿ ದೇಶದ ಅಭಿವೃದ್ಧಿಗಾಗಿ ದೇಶದ ಒಕ್ಕೂಟ ವ್ಯವಸ್ಥೆಯನ್ನು ಆಡಳಿತದ ಅನುಕೂಲಕ್ಕಾಗಿ ಅಧಿಕಾರವನ್ನು ವಿಭಜಿಸಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಮ್ಮನ್ನು ಅಳುತ್ತಾವೆ.
ಆಳುವ ದೊರೆ ದೇಶದ ಮತ್ತು ರಾಜ್ಯದ ಪ್ರಜೆಗಳನ್ನು ತನ್ನ ಮನೆಯ ಸದಸ್ಯರಂತೆ ಸ್ವಂತ ಮಕ್ಕಳಂತೆ ಸೋದರ ಸೋದರಿಯರಂತೆ ಜಾತಿಭೇದವಿಲ್ಲದೆ ಲಿಂಗಬೇಧವಿಲ್ಲದೆ ವರ್ಗಭೇದವಿಲ್ಲದೆ ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ಐಕ್ಯತೆ ಮನೋಭಾವದಿಂದ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮೌಲ್ಯವನ್ನು ಎತ್ತಿ ಹಿಡಿದು ಮತ್ತು ಅವನ ತಪ್ಪುಗಳನ್ನು ತಿದ್ದುವ ಮೂಲಕ ವಿಚಾರ ವಿನಿಮಯಳಲ್ಲಿ ಆದ ತಪ್ಪುಗಳನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳಬೇಕು. ಕಾಪಾಡುವ ನೈತಿಕತೆ ಇಲ್ಲದವನಿಗೆ ಶಿಕ್ಷ ಕೊಡುವ ನೈತಿಕತೆಯು ಕೂಡ ಇರುವುದಿಲ್ಲ. ಇಡೀ ದೇಶ ಕರೋನ ಎಂಬ ಕಾಯಿಲೆಗೆ ತತ್ತರಿಸಿಹೋಗಿದೆ.
ಜನಸಾಮಾನ್ಯರು ಮೂಲಭೂತ ಅಗತ್ಯತೆಗಳನ್ನು ಹುಡುಕಿಕೊಂಡು ಅನಿವಾರ್ಯವಾಗಿ ರೋಡಿಗೆ ಬರುವಂತಾಗಿದೆ. ಬಂದ ನಾಗರಿಕರನ್ನು ಕರ್ತವ್ಯ ನಿರತ ಪೊಲೀಸರು ಆತ್ಮೀಯವಾಗಿ ಅವರ ಜೊತೆಗೆ ಚರ್ಚಿಸಿ ಸತ್ಯಾಸತ್ಯತೆಗಳ ಬಗ್ಗೆ ಅವಲೋಕನ ಮಾಡಿ ಸರಿಯಾದ ರೀತಿಯಲ್ಲಿ ಸರಕಾರ ಕೈಗೊಂಡಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು. ಹಾಗೂ ಒಂದು ವೇಳೆ ಒಬ್ಬ ಪ್ರಜೆ ತಪ್ಪು ಮಾಡಿದ್ದೆ ಆದರೆ ಅವನನ್ನು ಕೂಡಲೇ ಬಂಧಿಸಿ ಕಾನೂನಿನ ರೀತಿಯಲ್ಲಿ ಕ್ರಮಕೈಗೊಂಡು ತಪ್ಪಿಗೆ ಶಿಕ್ಷೆಯನ್ನು ವಿಧಿಸಲು ನ್ಯಾಯಾಂಗಕ್ಕೆ ಒಪ್ಪಿಸಬೇಕು. ತಪ್ಪು ಮಾಡಿದ ಅಪರಾಧಿಯ ಮೇಲೆ ಯಾವುದೇ ಕಾರಣಕ್ಕೂ ಕೈ ಮಾಡುವಂತಿಲ್ಲ.
ಬಂಧಿಸಿದ 24 ಗಂಟೆ ಒಳಗಡೆ ಅವನನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ಹೀಗಿರುವಾಗ ಒಬ್ಬ ಅಮಾಯಕನ ಮೇಲೆ ನಾಲ್ಕು ಐದು ಜನ ಪೊಲೀಸರು ಸೇರಿಕೊಂಡು ಜೀವ ಹೋಗುವರೆಗೆ ಹೊಡೆದು ಸಾಯಿಸುವುದು ಎಂದರೆ ಎಂಥ ಅಮಾನವೀಯ ಕೃತ್ಯ. ನಮ್ಮ ದೇಶ ಪ್ರಪಂಚದ ಇತರೆ ರಾಷ್ಟ್ರಗಳಿಗೆ ಮಾದರಿ ರಾಷ್ಟ್ರ. ಉತ್ತರ ಕೊರಿಯಾ ಜಪಾನ್ ಜರ್ಮನಿ ಫ್ರಾನ್ಸ್ ಇಟಲಿ ಇತರೆ ಸರ್ವಾಧಿಕಾರಿ ಧೋರಣೆ ರಾಷ್ಟ್ರಗಳಂತೆ ನಮ್ಮಲ್ಲಿ ಅರಸೊತ್ತಿಗೆ ಆಳ್ವಿಕೆ ಇಲ್ಲ. ಇಲ್ಲಿ ಪ್ರಜೆಗಳೇ ಪ್ರಭುಗಳು ಪ್ರಜೆಗಳಿಂದ ಪ್ರಭು. ಅಧಿಕಾರ ಎಂಬುದು ದೇಶದ ಪ್ರಜೆಗಳು ರೂಪಿಸಿದ ಶಕ್ತಿಯೆಂದು ಸಂವಿಧಾನದ ಪಿತಾಮ ವಿಶ್ವರತ್ನ ಮಹಾಜ್ಞಾನಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ವ್ಯಾಖ್ಯಾನಿಸುತ್ತಾರೆ.
ಪ್ರತಿಯೊಂದಕ್ಕೂ ಕಾನೂನು ಇದೆ ಆ ಕಾನೂನನ್ನು ಯಾರು ಕೂಡ ಕೈಗೆತ್ತಿಕೊಳ್ಳಬಾರದು. ಒಂದು ವೇಳೆ ಅಂತ ದುಸ್ಸಾಹಸಕ್ಕೆ ಕೈ ಹಾಕಿದರೆ ಆ ವ್ಯಕ್ತಿ ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನಿನ ಸೂಕ್ತ ಕ್ರಮಗಳನ್ನು ಜರುಗಿಸಿ ತಪ್ಪಿಗೆ ತಕ್ಕ ಶಿಕ್ಷೆಯನ್ನು ವಿಧಿಸಬೇಕು. ಪೊಲೀಸರಲ್ಲಿ ಮಾನಸಿಕ ಸಾಮರ್ಥ್ಯದ ಶಕ್ತಿ ಅತ್ಯಂತ ಕಡಿಮೆ ಪ್ರಮಾಣದಲ್ಲಿರುತ್ತದೆ. ಅವರಿಗೆ ಮಾನವೀಯತೆ ಮನುಷ್ಯತ್ವ ಭ್ರಾತೃತ್ವ ಜೀವನದ ಮೌಲ್ಯ ಎತ್ತಿಹಿಡಿಯುವ ನೈತಿಕ ಮೌಲ್ಯದ ಪಾಠ ಮಾಡಿಸಬೇಕು. ಬಾಯಿಬಿಟ್ಟರೆ ವೇದ ಉಪನಿಷತ್ತು ಭಗವದ್ಗೀತೆಯ ಸಂಸ್ಕೃತ ವಾಕ್ಯವನ್ನು ನಾಲಿಗೆ ಮೇಲೆ ಹರಿದಾಡುತ್ತವೆ.
ಇವರೇನು ತಾಯಿ ಗರ್ಭದಿಂದ ಜನಿಸಿ ಬಂದವರಲ್ಲವೇ. ಇವರಿಗೆ ಅಕ್ಕ-ತಂಗಿ ಅಣ್ಣ-ತಮ್ಮ ಹೆಂಡತಿ ಮಕ್ಕಳು ಬಂಧು ಭಗಿನಿಯರು ಇಲ್ಲದ ಅನಾಥರೇ. ಅವಾಚ್ಯ ಶಬ್ದಗಳನ್ನು ಬಳಸಿದರೆ ಅಂಥವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿ ರಿಟ್ ಅರ್ಜಿಯ ಮೂಲಕ ಪರಿಹಾರವನ್ನು ಪಡೆದುಕೊಳ್ಳುವ ಅವಕಾಶ ನಮ್ಮ ನ್ಯಾಯಾಂಗದಲ್ಲಿ ಇದೆ. ನಮ್ಮ ದೇಶ ಸುಸಂಸ್ಕೃತವಾದ ದೇಶ ಇಲ್ಲಿ ಯಹೂದಿಗಳು ತತ್ವಜ್ಞಾನಿಗಳು ಚಿಂತಕರು ಸಾಹಿತಿಗಳು ಧಾರ್ಮಿಕ ಸುಧಾರಕರು ಸಾಮಾಜಿಕ ಚಿಂತಕರು ವಚನಕಾರರು ಕೀರ್ತನಕಾರರು ದಾಸರು ಸಂತರು ಶರಣರು ಸೂಫಿಗಳು ಕಾಲಜ್ಞಾನಿಗಳು ಹುಟ್ಟಿ ತಮ್ಮ ಜ್ಞಾನದ ಬೆಳಕನ್ನು ನೀಡಿ ಹೋಗಿದ್ದಾರೆ.
ಶಾಂತಿ ಸುವ್ಯವಸ್ಥೆ ಸಹಬಾಳ್ವೆ ಸೌಹಾರ್ದತೆ ಬ್ರಾತುತ್ವ ಮನುಷ್ಯ ಪ್ರೇಮ ಸಾಮರಸ್ಯ ಐಕ್ಯತೆಯ ಮನೋಭಾವನ್ನು ಬಿತ್ತಿ ಹೋಗಿದ್ದಾರೆ. ಇಂಥ ಮಹನೀಯರ ಜೀವನದ ಆದರ್ಶಗಳು ವಾರದಲ್ಲಿ ಒಂದು ದಿನವಾದರೂ ಉತ್ತರಕುಮಾರನ ಪೌರುಷತ್ವದ ಪೊಲೀಸರಿಗೆ ಪಾಠ ಮಾಡಬೇಕಾಗಿದೆ. ಏಕೆಂದರೆ ಇವರ ದರ್ಪ ದೌರ್ಜನ್ಯ ದಬ್ಬಾಳಿಕೆ ಆಡಳಿತ ಅಧಿಕಾರ ಚಲಾಯಿಸುವುದು ಹೇನ್ನಿದ್ದರೂ ನಿರ್ಗತಿಕರ ಮೇಲೆ ಬಡವರ ಮೇಲೆ ಶೋಷಿತರ ಮೇಲೆ ಕೂಲಿಕಾರ್ಮಿಕರ ಮೇಲೆ ಅನಾಥರ ಮೇಲೆ ಬಡವನ ಸಿಟ್ಟು ದವಡೆಗೆ ಮೂಲ ಎಂಬ ಗಾದೆಯಂತೆ ಶಕ್ತಿ ಹೀನರೇ ಇಲ್ಲಿ ಬಲಿಪಶುವಾಗಿದ್ದಾರೆ.
ಒಬ್ಬ ರಾಜಕಾರಣಿಯ ಮಗ ಉದ್ಯಮಿಯ ಮಗ ಒಬ್ಬ ಎಸ್ಪಿ ಅಥವಾ ಜಿಲ್ಲಾಧಿಕಾರಿಯ ಮಗ ಸಿನಿಮಾ ನಟರ ಮಗ ಅನ್ಯಾಯ ಕೊಲೆ ಸುಲಿಗೆ ಶೋಷಣೆ ಅತ್ಯಾಚಾರ ಕೋಮು ಸಂಘರ್ಷ ಗದ್ದಲಗಳು ಉಂಟು ಮಾಡಿದರೂ ಕಂಡರೂ ಕಾಣದಂತೆ ಬಾಲ ಮುದುರಿಕೊಂಡು ಹುಲ್ಲು ಕಿತ್ತಿದ ಹಾವಿನಂತೆ ತಲೆಯಾಡಿಸುವ ನಪುಂಸಕ ಪೊಲೀಸರ ವರ್ತನೆ ಹೆಚ್ಚಾಗುತ್ತಿದೆ. ಹಾಗಂತ ಎಲ್ಲಾ ಪೊಲೀಸರು ಕೆಟ್ಟವರಲ್ಲ ಹಾಗೆಯೇ ಎಲ್ಲಾ ಪೊಲೀಸರು ಒಳ್ಳೆಯವರು ಅಲ್ಲ. ಅಲ್ಪಬುದ್ಧಿ ವಿನಾಶಕ್ಕೆ ಕಾರಣವಾಗುತ್ತದೆ ಎಂಬುದಕ್ಕೆ ಪೊಲೀಸರೇ ಜೀವಂತ ಉದಾಹರಣೆ. ಲಾಕ್ ಡೌನ್ ಎಂಬ ನೆಪದಲ್ಲಿ ಪೋಲಿಸ್ ಗೂಂಡಾ ವರ್ತನೆ ದೇಶದ್ಯಾಂತ ಕ್ರೂರ ಪ್ರವೃತ್ತಿಯ ನರ್ತನೆ ತಾಂಡವಾಡುತ್ತಿದೆ.
ಇಂಥ ಅವಹೇಳನಕಾರಿ ದುರ್ಘಟನೆಗಳು ಸಾಮಾಜಿಕ ಜಾಲತಾಣಗಳಲ್ಲಿ ರಾರಾಜಿಸುತ್ತಿವೆ ನಾಡಿನ ಮತ್ತು ದೇಶದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ದೃಶ್ಯಗಳು ಕಂಡರೂ ಕಾಣದಂತೆ ಆಡಳಿತವರ್ಗದ ಅಧಿಕಾರಿಗಳು ಮತ್ತು ರಾಜಕಾರಣಿಗಳು ಷಂಡರಂತೆ ಸಂಬಂಧವಿಲ್ಲದಂತೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಬೀದಿಗಳಲ್ಲಿ ಗಲ್ಲಿಗಳಲ್ಲಿ ಲಾಠಿಯೇಟು ತಿಂದವರು ಗಂಜಿಗೆ ಗತಿಯಿಲ್ಲದ ನಿರ್ಗತಿಕರು.
ದಿನನಿತ್ಯದ ಜೀವನಕ್ಕೆ ಅತ್ಯಗತ್ಯ ವಸ್ತುಗಳನ್ನು ಸಿಗದೇ ಇದ್ದ ಸಂದರ್ಭದಲ್ಲಿ ಅನಿವಾರ್ಯವಾಗಿ ಅವುಗಳನ್ನು ಹುಡುಕಿಕೊಂಡು ಬಂದ ಅಮಾಯಕರ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡುವುದು ಯಾವ ಪುರುಷಾರ್ಥ. ಇದನ್ನು ನೋಡಿಕೊಂಡು ಸುಮ್ಮನೆ ಕುಳಿತಿರುವ ಮಂತ್ರಿ ಮಹನೀಯರು ಪುರುಷ ಹೀನರು ಸಂಬಂಧಪಟ್ಟ ಮಂತ್ರಿಗಳು ಕೂಡಲೇ ಗೂಂಡಾ ಪ್ರವೃತ್ತಿಯ ಪೊಲೀಸ್ ವ್ಯಕ್ತಿಯ ಮೇಲೆ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಂಡು ಅವನನ್ನು ಶಿಕ್ಷೆಗೆ ಒಳಪಡಿಸಿ ಸೇವೆಯಿಂದ ಖಾಯಂ ಆಗಿ ವಜಾಗೊಳಿಸಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


