Connect with us

ದಿನದ ಸುದ್ದಿ

‘ಸರಕಾರ’ ಬಡವನ ಬುತ್ತಿಯಿಂದ ರೊಟ್ಟಿಕಸಿಯುವ ನಾಯಿಯಾಗಬಾರದು

Published

on

  • ಬಿ.ಪೀರ್ ಬಾಷ

ಮುಖ್ಯಮಂತ್ರಿ, ಸಾರಿಗೆ ಮಂತ್ರಿಗಳೇ;
ಹಣಗಳಿಸಲು ಸರಕಾರದಿಂದ ಬೇರೆ ವ್ಯಾಪಾರ ನಡೆಸಿ, ಬಡವರ ಒಡಲಿಗೆ ಬೆಂಕಿ ಇಡಬೇಡಿ.

ಕರೊನಾ ಎಂಬ ಸಿರಿವಂತರು ಹುಟ್ಡಿಸಿದ ಮಾರಿಬೇನೆಗೆ ಬಡವರು ಒಡಲು ಬೆಂದು ಹೋಗುತ್ತಿದೆ. ಹಾಗೆ ದುಡುತ್ತಿರುವ ಒಡಲಿಗೆ ಕೊಳ್ಳಿ ತಿವಿಯುವ ಕೆಲಸ ಬಹುಶಃ ಕಳ್ಳನೂ, ಕಟುಕನೂ, ಕಡುಪಾಪಿಯೂ ಮಾಡಲಾರ. ಆದರೆ ನಮ್ಮ ಸರಕಾರ ಏನು ಮಾಡುತ್ತಿದೆ?

ಎರಡು ಹೊತ್ತಿನ ತುತ್ತನ್ನು ಗಳಿಸಿಕೊಳ್ಳಲು ಬೆಂಗಳೂರಿಗೆ ಬಂದು, ಕಂಡಲ್ಲಿ ಜೋಪಡಿ ಕಟ್ಟಿಕೊಂಡು, ಕಲ್ಲು ಹೂಡಿ ಒಲೆಮಾಡಿ ಅನ್ನದಕಾಳು ಕುಚ್ಚಿಕೊಂಡು ಉಂಡು ಮಲಗುತ್ತಿದ್ದ ಕೂಲಿ ಸಾವಿರಾರು ಕಾರ್ಮಿಕರು ಲಾಕ್‌ಡೌನ್ ಆದ ಕ್ಷಣದಿಂದ ತತ್ತರಿಸಿಹೋಗಿದ್ದಾರೆ. ಅವರವರ ಹಳ್ಳಿಗಳಲ್ಲಿದ್ದಿದ್ದರೆ ಗಂಜಿ ಕುಡಿದು ಅಂಗಳದಲ್ಲಾದರೂ ಮಲಗುವ ಸಮಾಧಾನವಾದರೂ ಇರುತ್ತಿತ್ತು. ಇಲ್ಲಿ ಈ ಶಹರದಲ್ಲಿ, ಹಗಲು ಕೂಲಿಯಿಲ್ಲವೆಂದರೆ ರಾತ್ರಿ ಊಟವಿಲ್ಲ, ಇಂತಹ ಸ್ಥಿತಿಯಿರುವಾಗ ಕಳೆದ ಸು. ಒಂದೂವರೆ ತಿಂಗಳಿನಿಂದ ಅದು ಹೇಗೆ ಬದುಕಿರಬಹುದು? ಅವರ ಕಣ್ಣುಗಳಿಂದ ಅದೆಷ್ಟು ನೀರು ಹರಿದಿರಬಹುದು? ಹಸಿದು ಅಳುವ ಮಕ್ಕಳನ್ನು ಹೇಗೆ ಸುಮ್ಮನಿರಿಸಿರಬಹುದು?

ಹೇಗಾದರೂ ಮಾಡಿ ಊರು ಮುಟ್ಟಿದರೆ ಸಾಕೆಂದು, ಲೆಕ್ಕಹಾಕಿ ಸರಿಯಾಗಿ ಬಸ್ ಚಾರ್ಜ್ ಗೆ ಆಗುವಷ್ಟು ಹಣವನ್ನು ಸೀರೆ ಸೆರಗಿನಲ್ಲಿ, ಸೊಂಟದ ಮಡಿಕೆಯಲ್ಲಿ ಗಂಟು ಗಂಟಿಕೊಂಡು ಊರಿಗೆ ಹೋಗಬಹುದು ಎಂಬ ಸುದ್ದಿ ಕೇಳುತ್ತಲೇ ಬಸ್ಟ್ಯಾಂಡಿಗೆ ಬಂದರೆ ಇಲ್ಲಿ ದುಪ್ಪಟ್ಟು, ಮೂರುಪಟ್ಟು ಬಸ್ ಚಾರ್ಜ್ ಎಂದು ಹೇಳಿದರೆ ಅವರಿಗೆ ಎಷ್ಟು ಸಂಕಟವಾಗಿರಲಿಕ್ಕಿಲ್ಲ. ಬೆಳಗಾವಿಗೆ 800ಬಾಗಲಕೋಟೆಗೆ 700 ರೂ ಇದ್ದ ಬಸ್ ಚಾರ್ಜು, ಏಕಾಏಕಿ ಬೆಳಗಾವಿಗೆ1478 ಬಾಗಲಕೋಟೆಗೆ 1311ಎಂದರೆ ಇದು, ಹಸಿದ ಬಡವನ ಬುತ್ತಿಯಿಂದ ರೊಟ್ಟಿಕಸಿಯುವ ನಾಯಿಗಿಂತಲೂ ಕೀಳಾದ ಕೆಲಸವಲ್ಲವೇ?

ಆನಂದ್ ಸಿಂಗ್ ರಂತಹ ಧಣಿಗಳು ವಿಮಾನವನ್ನೇ ಬಾಡಿಗೆಗೆ ಪಡೆದು ವಿದೇಶದಲ್ಲಿದ್ದ ಮಕ್ಕಳನ್ನು ಕರೆದುಕೊಂಡು ಬಂದರು. ದೇಶದ ಸರಕಾರವೂ ಲಕ್ಷಾಂತರ ಸಂಬಳ ಪಡೆಯುವವರನ್ನು, ಕೋಟ್ಯಾಂತರ ತೆರಿಗೆ ಕಟ್ಟುವವರನ್ನು ವಿಶೇಷ ವಿಮಾನಗಳಿಂದ ಕರೆತರುವ ಪ್ರಯತ್ನವನ್ನೂ ಮಾಡೀತು? ಆದರೆ ಈ ಬಡಜೀವಿಗಳ ಇವರಿಗ್ಯಾವ ಲೆಕ್ಕ? ಸತ್ತರೆ ಮರ್ಯಾದೆ ಹೋದೀತೆಂಬ ಕಾರಣಕ್ಕೆ ಅಗ್ಗದ ರೇಷನನ್ನು ಕೊಡುವಂತೆ ಮಾಡಿ ಫೋಟೋ ತೆಗೆದಿಕೊಂಡರೆ ಸಾಕು ಜನೋಪಕಾರಿಯೆಂದು ಹೇಳಿಕೊಳ್ಳಲು. ಇನ್ನು ಬೆಂಗಳೂರೆಂಬ ಮಾಯಾನಗರದಲ್ಲಿ ಬದುಕೆಂಬ ಬದುಕೇ ಮೂರಾಬಟ್ಟೆಯಾಗಿ ಬಿಸಿಲಲ್ಲಿ ಬಾಡಿ ಗಾಳಿಪಾಲಾಗಿ ಕಸದಗುಂಟ ಹರಿದು ಹಂಚಿಹೋಗಿರುವ ಹೊತ್ತು ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳಿಗೆ ಇಂಥವರ ಬಗ್ಗೆ ಖಬರು ಇಲ್ಲವೆಂದರೆ ಏನು ಮಾಡಬೇಕು?

ಇಂಥ ಕೂಲಿ ಕಾರ್ಮಿಕರ ಸಂಖ್ಯೆ ಈಗ ದೇಶದಲ್ಲಿ ಹದಿನೈದಿಪ್ಪತ್ತು ಕೋಟಿಗೂ ಹೆಚ್ಚು. ಇವರು ಈಗ ಟಿ.ವಿ.ಚಾನೆಲುಗಳಿಗೆ ಸುದ್ದಿಯ ವಸ್ತುವಲ್ಲ. ಅವರಿಗಿರುವ ಉಮೇದಿಯೇ ಬೇರೆ. ಇನ್ನು ಸರಕಾರಗಳಿಗೆ ಕಾಪಾಡಬೇಕಿರುವುದು ಯಾರ ಹಿತಾಸಕ್ತಿಯನ್ನು? ಅದೂ ಆಗಿಯೇ ಹೋಯಿತು! ಸಾವಿರಾರು ಕೋಟಿ ಲೂಟಿಯೂ ಮಾಫ್ ಆಯಿತು!!

ಆದರೆ ಇಂಥ ವಿಶ್ವಜಗದ್ಗುರು ಮಹಾನುಭಾವರು ಅವರ ಪಟಾಲಂಗಳ ಸರಕಾರಗಳಿಗೆ ಕೂಲಿಕಾರ್ಮಿಕರನ್ನು ಉಚಿತವಾಗಿ ಅವರವರ ಮನೆಗಳಿಗೆ ಸರಕಾರಿ ಬಸ್ಸಿನಲ್ಲಿ ಮನೆ ಸೇರಿಸುವ ಯೋಗ್ಯತೆಯೂ ಇಲ್ಲದಾಯಿತೇ? ನಾಚಿಕೆಗೇಡು! ಅದು ಹೋಗಲಿ, ಇಂತಹ ಹೊತ್ತಿನಲ್ಲಿ ಬಸ್ ಚಾರ್ಜ್ ಪಡೆದು ಬಸ್ ಹತ್ತಿಸಿಕೊಂಡರೂ ನಾಚಿಕೆಗೇಡೇ ಆದರೂ ಇನ್ನು ಡಬಲ್ ತ್ರಿಪಲ್ ಚಾರ್ಜು ಪೀಕುತ್ತಾರೆ ಎಂದರೆ ಇದೊಂದು ಸರಕಾರವಾ ಅಥವಾ ? ಮನುಷ್ಯತ್ವ ಇರುವ ಯಾರಿಗಾದರೂ ಸಿಟ್ಟು ಬರದೇ ಇದ್ದೀತೇ?

ಹಸಿದು ಅಳುವ ಕೂಸಿಗೆ ನಾಲ್ಕು ರೂಪಾಯಿಯ ಬಿಸ್ಕೀಟು ಕೊಡಿಸಲು ಕಣ್ಣೀರು ತಂದುಕೊಳ್ಳುತ್ತಿರುವ ತಂದೆತಾಯಿಗಳು ಅಂತಹ ಆರೇಳು ವರ್ಷದ ಮಕ್ಕಳಿಗೂ ಸಾವಿರಾರು ರೂಪಾಯಿ ಬಸ್ ಚಾರ್ಜು ಕೊಡಬೇಕು ಎಂದರೆ…ಎದೆಯೊಡೆಯದಿದ್ದೀತೇ? ಹಣವೇ ಇಲ್ಲದವರು ಏನು ಮಾಡಬೇಕು? ಅವರವರ ಊರ ಮುಖ ನೋಡದೇ ಬೀದಿ ಹೆಣವಾಗಬೇಕೇ? ಏನಾಗಿದೆ ಈ ಸರ್ಕಾರಕ್ಕೆ? ಏನು ತುಂಬಿದೆ ಈ ಅಧಿಕಾರಿಗಳ ತಲೆಯಲ್ಲಿ? ಸಾವಿರಾರು ಕೋಟಿ ಆಗಬೇಕಾದಲ್ಲಿ ಆಗಿದೆ. ಆದರೆ ಈ ನಷ್ಟವನ್ನು ಬಡವರ ಬುತ್ತಿಗಂಟು ಕಸಿದು ಭರ್ತಿ ಮಾಡಿಕೊಳ್ಳಬೇಕೇ?

ಕೊಲ್ಲುವುದಷ್ಟೇ ಅಲ್ಲ, ಸಾವೇ ಸುಖ ಎಂಬಷ್ಟು ಕಷ್ಟ ಕೊಡುವುದು ಕೊಲೆಗಿಂತಲೂ ಕ್ರೂರ ನಡವಳಿಕೆ. ಇಂತಹ ಸ್ಥಾನದಲ್ಲಿ ಈಗ ಸರಕಾರಗಳೇ ಇವೆ ಎಂಬುದು ನಿಜಕ್ಕೂ ಮಾರಿಬೇನೆಗಿಂತಲೂ ಭೀಕರ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending