ರಾಜಕೀಯ
ವಿಧಾನಪರಿಷತ್ ಚುನಾವಣೆ ; ಎಲ್ಲಾ ನಾಮಪತ್ರಗಳು ಅಂಗೀಕೃತ
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆಗಾಗಿ ಸ್ವೀಕೃತವಾಗಿರುವ ಎಲ್ಲಾ ಏಳು ನಾಮಪತ್ರಗಳು ಕ್ರಮಬದ್ಧವಾಗಿದ್ದು, ಅಂಗೀಕೃತವಾಗಿವೆ ಎಂದು ಚುನಾವಣಾಧಿಕಾರಿಯೂ ಆದ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ತಿಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಗಳಾದ ಲಕ್ಷ್ಮಣ ಎಸ್. ಸವದಿ, ಕೇಶವ ಪ್ರಸಾದ್, ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್ , ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ. ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬರ್ ಹಾಗೂ ಜೆಡಿಎಸ್ ಅಭ್ಯರ್ಥಿ ಟಿ.ಎ.ಶರವಣನ್ ನಿನ್ನೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243