ರಾಜಕೀಯ
ಸ್ಥಳೀಯ ಸಂಸ್ಥೆ ಚುನಾವಣೆ: ಮದ್ದೂರಿನಲ್ಲಿ ಪ್ರಾಬಲ್ಯ ಸಾಧಿಸಿದ ಜೆಡಿಎಸ್

ಸುದ್ದಿದಿನ ವಿಶೇಷ: ಮದ್ದೂರು ಇತಿಹಾಸದಲ್ಲಿ ಪುರಸಭಾ ಚುನಾವಣೆಯಲ್ಲಿ 50ಲಕ್ಷಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಓಟಿಂಗ್ ನಡೆದಿತ್ತು. ಮಾಜಿ ಪುರಸಭಾ ಅಧ್ಯಕ್ಷ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಮರ್ ಬಾಬು ಮತ್ತು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕೃಷ್ಣ ರವರು ತೀವ್ರ ಪೈಪೋಟಿ ನೀಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಕ್ಷೇತ್ರದ ಮತದಾರರು ಪಕ್ಷೇತರ ಅಭ್ಯರ್ಥಿಯ ಕೈ ಹಿಡಿದಿದ್ದಾರೆ.
ಅದೃಷ್ಟದ ಫಲಿತಾಂಶ
ಮದೂರುಪುರಸಭಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 8ನೇ ವಾರ್ಡ್ ನ ಪಕ್ಷೇತರ ಅಭ್ಯರ್ಥಿಯಾಗಿ ರತ್ನಾ ತಿಮ್ಮಯ್ಯ ರವರು ಜಯಶೀಲ ರಾಗಿದ್ದಾರೆ. Éಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಲತಾ ವೆಂಕಟೇಶ್ ರವರು 286ಮತಗಳನ್ನು ಪಡೆದಿದ್ದರು ಮತ್ತು ಪಕ್ಷೇತರ ಅಭ್ಯರ್ಥಿಯು ಸಹ 286ಮತಗಳನ್ನು ಪಡೆದಿದ್ದರು ಆದರೆ ಚುನಾವಣೆ ಅಧಿಕಾರಿಗಳು ಚುನಾವಣಾ ಆಯೋಗದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಅಭ್ಯರ್ಥಿಗಳ ಸಮ್ಮುಖದಲ್ಲಿ ಡಬ್ಬದಲ್ಲಿ ಚೀಟಿಯನ್ನು ಹಾಕಿ ಎತ್ತುವ ಮೂಲಕ ಪಕ್ಷೇತರ ಅಭ್ಯರ್ಥಿ ರತ್ನ ತಿಮ್ಮಯ್ಯ ರವರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.
2018 ನೇ ಮದ್ದೂರು ಪುರಸಭೆ ಚುನಾವಣೆ ವಿಜೇತರ ಪಟ್ಟಿ
1ನೇ ವಾರ್ಡ್ ವಿಜೇತರ ಹೆಸರು :/ಎಸ್ ಮಹೇಶ್ -ಪಡೆದ ಮತಗಳು560 -(ಪಕ್ಷ ಜೆಡಿಎಸ್ )
2 ನೇ ವಾರ್ಡ್ ವಿಜೇತರ ಹೆಸರು : ಶೋಭಾ ಮರಿ ಪಡೆದ ಮತಗಳು442 ಅಂತರ -(ಪಕ್ಷ ಪಕ್ಷೇತರ )
3 ನೇ ವಾರ್ಡ್ ವಿಜೇತರ ಹೆಸರು : ಬಸವರಾಜ -ಪಡೆದ ಮತಗಳು402 ಅಂತರ – (ಪಕ್ಷ ಜೆಡಿಎಸ್ )
4 ನೇ ವಾರ್ಡ್ ವಿಜೇತರ ಹೆಸರು : .ಪ್ರಿಯಾಂಕಾ ಅಪ್ಪುಗೌಡ -ಪಡೆದ ಮತಗಳು368 – (ಪಕ್ಷ ಪಕ್ಷೇತರ )
5 ನೇ ವಾರ್ಡ್ ವಿಜೇತರ ಹೆಸರು : ಕೋಕಿಲಾ ಅರುಣ್ -ಪಡೆದ ಮತಗಳು 613- ( ಪಕ್ಷ ಕಾಂಗ್ರೆಸ್ )
6 ನೇ ವಾರ್ಡ್ ವಿಜೇತರ ಹೆಸರು : ಕೆ. ಪ್ರಮಿಳಾ -ಪಡೆದ ಮತಗಳು356 – (ಪಕ್ಷ ಜೆಡಿಎಸ್ )
7 ನೇ ವಾರ್ಡ್ ವಿಜೇತರ ಹೆಸರು : ಸಚಿನ್ ಪಡೆದ ಮತಗಳು 210 -( ಪಕ್ಷ ಪಕ್ಷೇತರ )
8 ನೇ ವಾರ್ಡ್ ರಲ್ಲಿ ಸಮಬಲ ಸಾಧಿಸಿದ್ದು ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿಗಳು ಇಬ್ಬರ ಹೆಸರನ್ನು ಬರೆದು ಒಂದು ಪಟ್ಟಿಯಲ್ಲಿ ಹಾಕಿ ಕಣ್ಣಿಗೆ ಬಟ್ಟೆ ಕಟ್ಟಿ ಯತಿ ಸುವ ಮೂಲಕ ಪಕ್ಷೇತರ ಅಭ್ಯರ್ಥಿ ರತ್ನ ತಿಮ್ಮಯ್ಯ ಲಾಟರಿಯಲ್ಲಿ ಆಯ್ಕೆಯಾದರು.
9 ನೇ ವಾರ್ಡ್ ವಿಜೇತರ ಹೆಸರು : ಶೋಭಾರಾಣಿ ಚಂದ್ರು -ಪಡೆದ ಮತಗಳು 304 (ಪಕ್ಷ ಜೆಡಿಎಸ್ )
10ನೇ ವಾರ್ಡ್ ವಿಜೇತರ ಹೆಸರು : ಕೇಬಲ್ ಸುರೇಶ್ ಪಡೆದ ಮತಗಳು863 – ( ಪಕ್ಷ ಜೆಡಿಎಸ್ )
11 ನೇ ವಾರ್ಡ್ ವಿಜೇತರ ಹೆಸರು : ಕಮಲ್ನಾಥ್ -ಪಡೆದ ಮತಗಳು 284- ( ಪಕ್ಷ ಕಾಂಗ್ರೆಸ್ )
12 ನೇ ವಾರ್ಡ್ ವಿಜೇತರ ಹೆಸರು : ಎಚ್ ವಿ ಸುಮಿತ್ರಾ ಪಡೆದ ಮತ 269 -ಅಂತರ-( ಪಕ್ಷ ಜೆಡಿಎಸ್ )
13 ನೇ ವಾರ್ಡ್ ವಿಜೇತರ ಹೆಸರು : ಪಿ ಸಿದ್ದರಾಜು ಪಡೆದ ಮತ 250ಅಂತರ- ( ಪಕ್ಷ )
14 ನೇ ವಾರ್ಡ್ ವಿಜೇತರ ಹೆಸರು : ಆಯುಷಾ ಪಡೆದ ಮತಗಳ 639 -( ಪಕ್ಷ ಜೆಡಿಎಸ್ )
15 ನೇ ವಾರ್ಡ್ ವಿಜೇತರ ಹೆಸರು : ಸಬ್ರಿನ್ ತಾಜ್ ಪಡೆದ ಮತಗಳು 303–( ಪಕ್ಷ ಕಾಂಗ್ರೆಸ್ )
16ನೇ ವಾರ್ಡ್ ವಿಜೇತರ ಹೆಸರು : ಕ್ಕೆ ವನಿತಾ ಪಡೆದ ಮತಗಳು 314– -( ಪಕ್ಷ ಜೆಡಿಎಸ್ )
17ನೇ ವಾರ್ಡ್ ವಿಜೇತರ ಹೆಸರು : ಎಂಐ ಪ್ರವೀಣ್ ಪಡೆದ ಮತಗಳು 353 –( ಪಕ್ಷ ಜೆಡಿಎಸ್ )
18ನೇ ವಾರ್ಡ್ ವಿಜೇತರ ಹೆಸರು : ಎಂಕೆ ಮನೋಜ್ ಕುಮಾರ್ ಪಡೆದ ಮತ 303- –( ಪಕ್ಷ ಪಕ್ಷೇತರ )
19ನೇ ವಾರ್ಡ್ ವಿಜೇತರ ಹೆಸರು : ಆದಿಲ್ ಆಲಿಖಾನ್ ಪಡೆದ ಮತ 396 ಅಂತರ —(ಪಕ್ಷ ಜೆಡಿಎಸ್ )
20ನೇ ವಾರ್ಡ್ ವಿಜೇತರ ಹೆಸರು : ಟಿಆರ್ ಪ್ರಸನ್ನ ಕುಮಾರ್ ಅವಿರೋಧ ಆಯ್ಕೆ
21ನೇ ವಾರ್ಡ್ ವಿಜೇತರ ಹೆಸರು : ಸರ್ವಮಂಗಳ ಪಡೆದ ಮತಗಳು 673 ( ಪಕ್ಷ ಜೆಡಿಎಸ್ )
22ನೇ ವಾರ್ಡ್ ವಿಜೇತರ ಹೆಸರು : ಸಿ ನಂದೀಶ್ ಪಡೆದ ಮತಗಳು ಅಂತರ—-( ಪಕ್ಷ ಕಾಂಗ್ರೆಸ್ )
23ನೇ ವಾರ್ಡ್ ವಿಜೇತರ ಹೆಸರು ಲತಾ ಕೆ ಪಡೆದ ಮತಗಳು 560 ಅಂತರ—( ಪಕ್ಷ ಬಿಜೆಪಿ )
ಮದ್ದೂರು ಪುರಸಭಾ ವ್ಯಾಪ್ತಿಯಲ್ಲಿ ವಿಜೇತ ಪಕ್ಷಗಳ ವಿವರ
ಜೆಡಿಎಸ್ -12
ಕಾಂಗ್ರೆಸ್ -4
ಬಿಜೆಪಿ -1
ಪಕ್ಷೇತರ -6
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು