ದಿನದ ಸುದ್ದಿ
ಜ. 23 ರಂದು ಮಾಧ್ಯಮ ಅಕಾಡೆಮಿಯಿಂದ ಮೌಲಿಕ ಕೃತಿಗಳ ಲೋಕಾರ್ಪಣೆ

ನೂತನ ಹೆಜ್ಜೆಗೆ ಸಾಕ್ಷಿಯಾಗಲಿದೆ ಈ ಪ್ರಶಸ್ತಿ ಪ್ರದಾನ ಸಮಾರಂಭ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಇದೇ ತಿಂಗಳು 23ರಂದು ಆಯೋಜಿಸಿರುವ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ಹೊಸದೊಂದು ವೈಚಾರಿಕ ಹೆಜ್ಜೆಗೆ ಸಾಕ್ಷಿಯಾಗಲಿದೆ. ಕನ್ನಡದ ಸಮೂಹ ಮಾಧ್ಯಮಗಳ ಸಮಗ್ರ ವಿಶ್ಲೇಷಣೆಯನ್ನು ಒಳಗೊಂಡ ಹತ್ತು ಮೌಲಿಕ ಕೃತಿಗಳ ಬಿಡುಗಡೆಗೂ ಅದು ವೇದಿಕೆಯಾಗಲಿದೆ.
ಸಮೂಹ ಮಾಧ್ಯಮ ವಲಯ ವಿವಿಧ ಕಾಲಘಟ್ಟಗಳನ್ನು ಹಾದು ಬೆಳವಣಿಗೆಯ ಹಾದಿ ಕ್ರಮಿಸುತ್ತಿರುವಾಗ ಶೈಕ್ಷಣಿಕ ಪ್ರಾಯೋಗಿಕತೆ ಮತ್ತು ತಾತ್ವಿಕ ವಿಮರ್ಶಾತ್ಮಕ ದೃಷ್ಟಿಕೋನದ ಕೃತಿಗಳ ಕೊರತೆ ಇರುವುದನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಹೊಸ ಹೆಜ್ಜೆಯಿರಿಸಲು ತೀರ್ಮಾನಿಸಿತು. ಕನ್ನಡದ ಹತ್ತು ಲೇಖಕರನ್ನು ಆಯ್ದು ಅವರಿಂದ ವಿವಿಧ ಶೀರ್ಷಿಕೆಗಳಡಿ ಕೃತಿಗಳನ್ನು ಬರೆಸಿತು. ಆ ಕೃತಿಗಳು 2018ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಡುಗಡೆಗೊಳ್ಳಲಿವೆ.
ಪತ್ರಿಕೋದ್ಯಮ ಮತ್ತು ವಾಸ್ತವ (ಡಾ.ಎನ್.ಕೆ.ಪದ್ಮನಾಭ), ಪತ್ರಿಕೋದ್ಯಮ ಮತ್ತು ಸಾಹಿತ್ಯ (ಶಿ.ಜು.ಪಾಶ), ದೃಶ್ಯ ಮಾಧ್ಯಮಗಳ ಜವಾಬ್ದಾರಿ ಮತ್ತು ವಿಶ್ವಾಸಾರ್ಹತೆ (ಕೆ.ದೀಪಕ್), ಕನ್ನಡದಲ್ಲಿ ಟ್ಯಾಬ್ಲಾಯ್ಡ್ ಪತ್ರಿಕೋದ್ಯಮ (ರಮೇಶ್ ಅರೋಲಿ), ಪರಿಸರ ಪತ್ರಿಕೋದ್ಯಮ (ಸ.ಗಿರಿಜಾಶಂಕರ), ಮಾನನಷ್ಟ ಮೊಕದ್ದಮೆ (ಎಂ.ಟಿ.ಶಿವಕುಮಾರ್), ಪತ್ರಿಕಾ ಮಾಧ್ಯಮದ ವಾಣಿಜ್ಯಿಕ ಆಯಾಮ (ಡಾ.ಕೂಡ್ಲಿ ಗುರುರಾಜ), ಸುದ್ದಿ ಮಾಧ್ಯಮ ಮತ್ತು ಮಹಿಳೆ (ಜ್ಯೋತಿ ಇರ್ವತ್ತೂರು), ಕೃಷಿ ಪತ್ರಿಕೋದ್ಯಮ (ಚಿನ್ನಸ್ವಾಮಿ ವಡ್ಡಗೆರೆ), ಗ್ರಾಮೀಣ ವರದಿಗಾರಿಕೆ (ಮಂಜುನಾಥ ಬೊಮ್ಮನಕಟ್ಟೆ) ಬಿಡುಗಡೆಯಾಗಲಿರುವ ಕೃತಿಗಳು.
ವಿದ್ಯಾರ್ಥಿ ಸಮುದಾಯ ಮತ್ತು ಆಸಕ್ತರನ್ನು ದೃಷ್ಟಿಯಲ್ಲಿರಿಸಿಕೊಂಡು ಮಾಧ್ಯಮಗಳ ಕುರಿತಾದ ವಿಮರ್ಶಾತ್ಮಕ ದೃಷ್ಟಿಕೋನದ ಕೃತಿಗಳನ್ನು ಹೊರತರುವ ಯೋಜನೆಯನ್ನು ರೂಪಿಸಲಾಯಿತು. ಮಾಧ್ಯಮ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳೊಳಗೆ ತಾರ್ಕಿಕ ದೃಷ್ಟಿಕೋನ ನೆಲೆಗೊಳಿಸುವ ಉದ್ದೇಶ ಈ ಯೋಜನೆಯ ಹಿಂದಿತ್ತು. ಆ ಯೋಜನೆಯು ಇದೀಗ ಕೃತಿಗಳ ರೂಪದಲ್ಲಿ ಅನುಷ್ಠಾನಕ್ಕೆ ಬಂದಿದೆ. ಇದೇ ತಿಂಗಳು 23ರಂದು ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಂಜೆ 5.30ಕ್ಕೆ ಏರ್ಪಡಲಿರುವ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಈ ಕೃತಿಗಳು ಲೋಕಾರ್ಪಣೆಗೊಳ್ಳುತ್ತಿರುವುದು ಸಂತಸದ ಸಂಗತಿ ಎಂದು ಹೆಮ್ಮೆ ವ್ಯಕ್ತಪಡಿಸುತ್ತಾರೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಎಂ.ಸಿದ್ದರಾಜು ಅವರು.
ಪುಸ್ತಕ ಪ್ರಕಟಣೆಯ ಉಪಸಮಿತಿಯನ್ನು ಪ್ರತಿನಿಧಿಸಿದ ಅಕಾಡೆಮಿಯ ಸದಸ್ಯರೂ, ಹಿರಿಯ ಪತ್ರಕರ್ತರೂ ಆದ ರುದ್ರಣ್ಣ ಹರ್ತಿಕೋಟೆ, ಎನ್.ರವಿಕುಮಾರ್ ಶಿವಮೊಗ್ಗ ಅವರು ಹೊಸ ಪುಸ್ತಕಗಳನ್ನು ಹೊರತರುವಲ್ಲಿ ಬಹುವಾಗಿ ಶ್ರಮಿಸಿದ್ದಾರೆ ಎಂದು ಸಿದ್ಧರಾಜು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಲೇಖಕರು, ಕೃತಿಗಳ ಮುಖಪುಟ ವಿನ್ಯಾಸ ಮಾಡಿದ ಸುಧಾಕರ ದರ್ಬೆ, ಪುಸ್ತಕ ಪ್ರಕಟಣೆಯ ಉಪಸಮಿತಿ ಸದಸ್ಯರು, ಅಕಾಡೆಮಿಯ ಸದಸ್ಯರು, ಅಕಾಡೆಮಿಯ ಹಿಂದಿನ ಕಾರ್ಯದರ್ಶಿ ಎಸ್.ಶಂಕರಪ್ಪ, ಈಗಿನ ಕಾರ್ಯದರ್ಶಿ ಸಿ.ರೂಪಾ ಅವರ ಶ್ರಮದ ಕುರಿತೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ, ಮಾಜಿ ಸಚಿವರೂ, ಶಾಸಕರೂ ಆದ ಆರ್.ರೋಷನ್ ಬೇಗ್ ಸಮಕ್ಷಮದಲ್ಲಿ ಈ ಹತ್ತು ಕೃತಿಗಳು ಲೋಕಾರ್ಪಣೆಗೊಳ್ಳಲಿವೆ.
ಮಾಧ್ಯಮಗಳ ಕುರಿತು ಭಿನ್ನ ಆಲೋಚನೆಗಳನ್ನು ಒಳಗೊಂಡ ಕೃತಿಗಳನ್ನು ಹೊರತರುವ ಪರಿಕಲ್ಪನೆಯ ಕನಸು ಈ ಸಮಾರಂಭದ ಮೂಲಕ ಸಾಕಾರಗೊಳ್ಳುತ್ತಿರುವುದು ಖುಷಿಯ ಸಂಗತಿ. ಈ ಕೃತಿಗಳು ವಿದ್ಯಾರ್ಥಿಗಳು ಮತ್ತು ಆಸಕ್ತ ಓದುಗರ ಚಿಂತನೆಯನ್ನು ವಿಸ್ತರಿಸಬಲ್ಲವು ಎಂದು ಈ ಕೃತಿಗಳ ಯೋಜನೆಯ ಪ್ರಸ್ತಾವನೆಯನ್ನು ಮಂಡಿಸಿ ಪ್ರಕಟಣೆಯ ಜವಾಬ್ದಾರಿಗಳನ್ನು ನಿರ್ವಹಿಸಿದ ಅಕಾಡೆಮಿಯ ಸದಸ್ಯರೂ, ಹಿರಿಯ ಪತ್ರಕರ್ತರೂ ಆದ ಎನ್.ರವಿಕುಮಾರ್ ಶಿವಮೊಗ್ಗ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ2 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ