ರಾಜಕೀಯ
ಕರ್ನಾಟಕದಲ್ಲಿ ಬಿಜೆಪಿಯಿಂದ ಜನತಂತ್ರ ಬುಡಮೇಲು ಕೃತ್ಯ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/07/Karnataka-political-suddidina-54.jpg&description=ಕರ್ನಾಟಕದಲ್ಲಿ ಬಿಜೆಪಿಯಿಂದ ಜನತಂತ್ರ ಬುಡಮೇಲು ಕೃತ್ಯ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/07/Karnataka-political-suddidina-54.jpg&description=ಕರ್ನಾಟಕದಲ್ಲಿ ಬಿಜೆಪಿಯಿಂದ ಜನತಂತ್ರ ಬುಡಮೇಲು ಕೃತ್ಯ', 'pinterestShare', 'width=750,height=350'); return false;" title="Pin This Post">
- ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
ಕಾಂಗ್ರೆಸ್, ಜನತಾ ದಳ (ಎಸ್)ದ 12ಮತ್ತು ಮೈತ್ರಿಕೂಟಕ್ಕೆ ಬೆಂಬಲ ನೀಡುತ್ತಿದ್ದ ಇಬ್ಬರು ಪಕ್ಷೇತರ ಶಾಸಕರು- ಹೀಗೆ ಒಟ್ಟು 14 ಶಾಸಕರು ರಾಜಿನಾಮೆ ನೀಡುವುದರೊಂದಿಗೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಚರಮ ಸ್ಥಿತಿಯನ್ನು ತಲುಪಿವೆ. ಕುಮಾರಸ್ವಾಮಿ ಸರಕಾರವನ್ನು ಉರುಳಿಸಲು ಕಳೆದ ಒಂದು ವರ್ಷದಿಂದ ಬಿಜೆಪಿ ಹಲವು ಬಾರಿ ನಡೆಸಿದ ಪ್ರಯತ್ನಗಳ ನಂತರ ಈ ಬೆಳವಣಿಗೆ ನಡೆದಿದೆ. ೨೦೧೮ರ ವಿಧಾನಸಭೆ ಚುನಾವಣೆಯಲ್ಲಿ ತಾನು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದಿಂದ ತನಗೆ ಸರಕಾರ ನಡೆಸಲಾಗದು ಎಂಬ ವಾಸ್ತವವನ್ನು ಜೀರ್ಣಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಆಳುವ ಮೈತ್ರಿಕೂಟದ ಶಾಸಕರಿಗೆ ಆಮಿಷ ಒಡ್ಡಲು ಹಾಗೂ ಲಂಚ ನೀಡಲು ಬಿಜೆಪಿ ಯಾವುದೇ ಹಿಂಜರಿಕೆ ತೋರಿಲ್ಲ. ಕೆಲವು ವರ್ಷಗಳ ಹಿಂದೆ ತಾನು ಚಾಲ್ತಿಗೆ ತಂದ ಆಪರೇಷನ್ ಕಮಲಕ್ಕೆ ಅದು ಮುಂದಾಗಿದೆ.
ಚುನಾಯಿತ ಪ್ರತಿನಿಧಿಗಳಿಗೆ ಲಂಚ ನೀಡಿ ಹಾಗೂ ಸ್ಥಾನಮಾನದ ಆಮಿಷಗಳನ್ನೊಡ್ಡುವುದು ಹಾಗೂ ಚುನಾಯಿತ ಸರಕಾರವನ್ನು ಬುಡಮೇಲು ಮಾಡಲು ಅಪಾರ ಪ್ರಮಾಣದ ಸಂಪನ್ಮೂಲವನ್ನು ಬಳಕೆ ಮಾಡುವುದು ಬಿಜೆಪಿಯ ಚಾಳಿಯಾಗಿ ಬಿಟ್ಟಿದೆ. ಇದಕ್ಕೂ ಮೊದಲು ಅರುಣಾಚಲ ಪ್ರದೇಶ ಮತ್ತು ಗೋವಾದಲ್ಲಿ ಸರಕಾರಗಳನ್ನು ರಚಿಸಲಿಕ್ಕಾಗಿ ಅದು ಪಕ್ಷಾಂತರಗಳನ್ನು ನಡೆಸಿತ್ತು. ಇಂಥ ಕೀಳು ಮಟ್ಟದ ತಂತ್ರಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮಲಿನಗೊಳಿಸಲು ಮೋದಿ-ಷಾ ಜೋಡಿ ನೇರವಾಗಿ ಹೊಣೆಗಾರನಾಗಿದೆ.
ರಚನೆಯಾದಂದಿನಿಂದ ಯಾವುದೇ ತಾಳಮೇಳವಿಲ್ಲದ ಅಥವಾ ದಿಕ್ಕುದೆಸೆಯಿಲ್ಲದಂತೆ ವರ್ತಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ರಚಿಸಿದ ಅಸ್ಥಿರ ಸರಕಾರದ ಸನ್ನಿವೇಶವನ್ನು ಬಳಸಿಕೊಂಡು ಇಂಥ ಪಕ್ಷಾಂತರಗಳನ್ನು ಸಂಘಟಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರ ಕಚ್ಚಾಟ ಮತ್ತು ಅದರ ಕೆಲವು ಅಧಿಕಾರದಾಹಿ ಶಾಸಕರ ಕುತಂತ್ರಗಳು ಕೂಡ ಪ್ರಸ್ತುತ ಸನ್ನಿವೇಶಕ್ಕೆ ಕೊಡುಗೆ ನೀಡಿವೆ.
ಕರ್ನಾಟಕದ ರಾಜಕೀಯದಲ್ಲಿನ ಈ ಅವನತಿಯು ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಕಾಡುತ್ತಿರುವ ಇನ್ನೂ ಆಳವಾದ ರೋಗದ ಸೂಚನೆಯಾಗಿದೆ. ದೊಡ್ಡ ಹಣಕಾಸು ಮತ್ತು ನವ ಉದಾರವಾದಿ ಬಂಡವಾಳದ ಆಕ್ರಮಣವು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪಕ್ಷ ವ್ಯವಸ್ಥೆಯ ಸಾರವನ್ನೇ ನಾಶಮಾಡಿದೆ. ಆಯ್ಕೆಯಾಗುತ್ತಿರುವ ಹೆಚ್ಚೆಚ್ಚು ಶಾಸಕರು ರಿಯಲ್ ಎಸ್ಟೇಟ್, ಸಾರಾಯಿ ದಂಧೆ, ಕಂಟ್ರಾಕ್ಟ್ ಇತ್ಯಾದಿ ವ್ಯಾಪಾರಿ ಹಿತಾಸಕ್ತಿ ಹೊಂದಿರುವವರಾಗಿದ್ದಾರೆ ಅಥವಾ ಗ್ರಾಮೀಣ ಸಮಾಜದ ಶ್ರೀಮಂತ ವರ್ಗಗಳಿಗೆ ಸೇರಿದವರಾಗಿದ್ದಾರೆ. ಈ ಶಕ್ತಿಗಳಿಗೆ ಬಂಡವಾಳಶಾಹಿ ಪಕ್ಷಗಳ ಟಿಕೆಟ್ ಸಿಗುತ್ತದೆ. ಈ ಜನರಲ್ಲಿ ಯಾವುದೇ ತತ್ವ ಸಿದ್ಧಾಂತದ ಲವಲೇಷವೂ ಇರುವುದಿಲ್ಲ.
ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದಂತೆ ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಶಾಸಕರು ಮತ್ತು ಸಂಸತ್ ಸದಸ್ಯರು ಬಿಜೆಪಿಗೆ ಸೇರಿದ್ದನ್ನು ನಾವು ನೋಡಿದ್ದೇವೆ. ಪಕ್ಷಾಂತರ ಮಾಡಿದ ತೆಲುಗುದೇಶಂನ ಎಲ್ಲಾ ನಾಲ್ವರು ರಾಜ್ಯಸಭೆ ಎಂಪಿಗಳು ವ್ಯಾಪಾರೋದ್ಯಮಿಗಳು ಎನ್ನುವುದು ಗಮನಾರ್ಹ.
ಬಿಜೆಪಿ ರಾಜಕೀಯದಲ್ಲಿ ವ್ಯಾಪಾರವನ್ನು ಬೆರೆಸುವ ಈ ವಿದ್ಯಮಾನದ ಉತ್ತುಂಗವನ್ನು ಪ್ರತಿನಿಧಿಸುತ್ತದೆ. ಈ ಪಕ್ಷ ಕಾರ್ಪೊರೇಟ್ಗಳಿಂದ ಹೆಚ್ಚು ಅನುಕೂಲ ಪಡೆದ ಪಕ್ಷವಾಗಿದ್ದು ತನ್ನ ರಾಜಕೀಯ ಕುತಂತ್ರದಾಟಗಳಿಗೆ ಈ ಹಣವನ್ನು ಬಳಸಿಕೊಳ್ಳುತ್ತಿದೆ. ಪಕ್ಷಾಂತರ ಮಾಡಿದ ಶಾಸಕರನ್ನು ಉದ್ಯಮಿ ಹಾಗೂ ಬಿಜೆಪಿ ನಾಯಕನಾಗಿರುವ ರಾಜ್ಯಸಭೆಯ ಸದಸ್ಯರೊಬ್ಬರ ಮಾಲಿಕತ್ವದ ಖಾಸಗಿ ಜೆಟ್ ಕಂಪೆನಿಯ ವಿಮಾನದಲ್ಲಿ ಮುಂಬಯಿಯ ಒಂದು ಪಂಚತಾರಾ ಹೊಟೇಲ್ಗೆ ಕರೆದುಕೊಂಡು ಹೋಗಿದ್ದು ಅಚ್ಚರಿಯ ಸಂಗತಿಯೇನೂ ಅಲ್ಲ.
ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
–ಪ್ರಕಾಶ್ ಕಾರಟ್
ಅನು: ವಿಶ್ವ
ಕೃಪೆ : ಜನಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

