ರಾಜಕೀಯ
ಕರ್ನಾಟಕದಲ್ಲಿ ಬಿಜೆಪಿಯಿಂದ ಜನತಂತ್ರ ಬುಡಮೇಲು ಕೃತ್ಯ

- ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
ಕಾಂಗ್ರೆಸ್, ಜನತಾ ದಳ (ಎಸ್)ದ 12ಮತ್ತು ಮೈತ್ರಿಕೂಟಕ್ಕೆ ಬೆಂಬಲ ನೀಡುತ್ತಿದ್ದ ಇಬ್ಬರು ಪಕ್ಷೇತರ ಶಾಸಕರು- ಹೀಗೆ ಒಟ್ಟು 14 ಶಾಸಕರು ರಾಜಿನಾಮೆ ನೀಡುವುದರೊಂದಿಗೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಚರಮ ಸ್ಥಿತಿಯನ್ನು ತಲುಪಿವೆ. ಕುಮಾರಸ್ವಾಮಿ ಸರಕಾರವನ್ನು ಉರುಳಿಸಲು ಕಳೆದ ಒಂದು ವರ್ಷದಿಂದ ಬಿಜೆಪಿ ಹಲವು ಬಾರಿ ನಡೆಸಿದ ಪ್ರಯತ್ನಗಳ ನಂತರ ಈ ಬೆಳವಣಿಗೆ ನಡೆದಿದೆ. ೨೦೧೮ರ ವಿಧಾನಸಭೆ ಚುನಾವಣೆಯಲ್ಲಿ ತಾನು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದಿಂದ ತನಗೆ ಸರಕಾರ ನಡೆಸಲಾಗದು ಎಂಬ ವಾಸ್ತವವನ್ನು ಜೀರ್ಣಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಆಳುವ ಮೈತ್ರಿಕೂಟದ ಶಾಸಕರಿಗೆ ಆಮಿಷ ಒಡ್ಡಲು ಹಾಗೂ ಲಂಚ ನೀಡಲು ಬಿಜೆಪಿ ಯಾವುದೇ ಹಿಂಜರಿಕೆ ತೋರಿಲ್ಲ. ಕೆಲವು ವರ್ಷಗಳ ಹಿಂದೆ ತಾನು ಚಾಲ್ತಿಗೆ ತಂದ ಆಪರೇಷನ್ ಕಮಲಕ್ಕೆ ಅದು ಮುಂದಾಗಿದೆ.
ಚುನಾಯಿತ ಪ್ರತಿನಿಧಿಗಳಿಗೆ ಲಂಚ ನೀಡಿ ಹಾಗೂ ಸ್ಥಾನಮಾನದ ಆಮಿಷಗಳನ್ನೊಡ್ಡುವುದು ಹಾಗೂ ಚುನಾಯಿತ ಸರಕಾರವನ್ನು ಬುಡಮೇಲು ಮಾಡಲು ಅಪಾರ ಪ್ರಮಾಣದ ಸಂಪನ್ಮೂಲವನ್ನು ಬಳಕೆ ಮಾಡುವುದು ಬಿಜೆಪಿಯ ಚಾಳಿಯಾಗಿ ಬಿಟ್ಟಿದೆ. ಇದಕ್ಕೂ ಮೊದಲು ಅರುಣಾಚಲ ಪ್ರದೇಶ ಮತ್ತು ಗೋವಾದಲ್ಲಿ ಸರಕಾರಗಳನ್ನು ರಚಿಸಲಿಕ್ಕಾಗಿ ಅದು ಪಕ್ಷಾಂತರಗಳನ್ನು ನಡೆಸಿತ್ತು. ಇಂಥ ಕೀಳು ಮಟ್ಟದ ತಂತ್ರಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮಲಿನಗೊಳಿಸಲು ಮೋದಿ-ಷಾ ಜೋಡಿ ನೇರವಾಗಿ ಹೊಣೆಗಾರನಾಗಿದೆ.
ರಚನೆಯಾದಂದಿನಿಂದ ಯಾವುದೇ ತಾಳಮೇಳವಿಲ್ಲದ ಅಥವಾ ದಿಕ್ಕುದೆಸೆಯಿಲ್ಲದಂತೆ ವರ್ತಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ರಚಿಸಿದ ಅಸ್ಥಿರ ಸರಕಾರದ ಸನ್ನಿವೇಶವನ್ನು ಬಳಸಿಕೊಂಡು ಇಂಥ ಪಕ್ಷಾಂತರಗಳನ್ನು ಸಂಘಟಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರ ಕಚ್ಚಾಟ ಮತ್ತು ಅದರ ಕೆಲವು ಅಧಿಕಾರದಾಹಿ ಶಾಸಕರ ಕುತಂತ್ರಗಳು ಕೂಡ ಪ್ರಸ್ತುತ ಸನ್ನಿವೇಶಕ್ಕೆ ಕೊಡುಗೆ ನೀಡಿವೆ.
ಕರ್ನಾಟಕದ ರಾಜಕೀಯದಲ್ಲಿನ ಈ ಅವನತಿಯು ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಕಾಡುತ್ತಿರುವ ಇನ್ನೂ ಆಳವಾದ ರೋಗದ ಸೂಚನೆಯಾಗಿದೆ. ದೊಡ್ಡ ಹಣಕಾಸು ಮತ್ತು ನವ ಉದಾರವಾದಿ ಬಂಡವಾಳದ ಆಕ್ರಮಣವು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪಕ್ಷ ವ್ಯವಸ್ಥೆಯ ಸಾರವನ್ನೇ ನಾಶಮಾಡಿದೆ. ಆಯ್ಕೆಯಾಗುತ್ತಿರುವ ಹೆಚ್ಚೆಚ್ಚು ಶಾಸಕರು ರಿಯಲ್ ಎಸ್ಟೇಟ್, ಸಾರಾಯಿ ದಂಧೆ, ಕಂಟ್ರಾಕ್ಟ್ ಇತ್ಯಾದಿ ವ್ಯಾಪಾರಿ ಹಿತಾಸಕ್ತಿ ಹೊಂದಿರುವವರಾಗಿದ್ದಾರೆ ಅಥವಾ ಗ್ರಾಮೀಣ ಸಮಾಜದ ಶ್ರೀಮಂತ ವರ್ಗಗಳಿಗೆ ಸೇರಿದವರಾಗಿದ್ದಾರೆ. ಈ ಶಕ್ತಿಗಳಿಗೆ ಬಂಡವಾಳಶಾಹಿ ಪಕ್ಷಗಳ ಟಿಕೆಟ್ ಸಿಗುತ್ತದೆ. ಈ ಜನರಲ್ಲಿ ಯಾವುದೇ ತತ್ವ ಸಿದ್ಧಾಂತದ ಲವಲೇಷವೂ ಇರುವುದಿಲ್ಲ.
ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದಂತೆ ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಶಾಸಕರು ಮತ್ತು ಸಂಸತ್ ಸದಸ್ಯರು ಬಿಜೆಪಿಗೆ ಸೇರಿದ್ದನ್ನು ನಾವು ನೋಡಿದ್ದೇವೆ. ಪಕ್ಷಾಂತರ ಮಾಡಿದ ತೆಲುಗುದೇಶಂನ ಎಲ್ಲಾ ನಾಲ್ವರು ರಾಜ್ಯಸಭೆ ಎಂಪಿಗಳು ವ್ಯಾಪಾರೋದ್ಯಮಿಗಳು ಎನ್ನುವುದು ಗಮನಾರ್ಹ.
ಬಿಜೆಪಿ ರಾಜಕೀಯದಲ್ಲಿ ವ್ಯಾಪಾರವನ್ನು ಬೆರೆಸುವ ಈ ವಿದ್ಯಮಾನದ ಉತ್ತುಂಗವನ್ನು ಪ್ರತಿನಿಧಿಸುತ್ತದೆ. ಈ ಪಕ್ಷ ಕಾರ್ಪೊರೇಟ್ಗಳಿಂದ ಹೆಚ್ಚು ಅನುಕೂಲ ಪಡೆದ ಪಕ್ಷವಾಗಿದ್ದು ತನ್ನ ರಾಜಕೀಯ ಕುತಂತ್ರದಾಟಗಳಿಗೆ ಈ ಹಣವನ್ನು ಬಳಸಿಕೊಳ್ಳುತ್ತಿದೆ. ಪಕ್ಷಾಂತರ ಮಾಡಿದ ಶಾಸಕರನ್ನು ಉದ್ಯಮಿ ಹಾಗೂ ಬಿಜೆಪಿ ನಾಯಕನಾಗಿರುವ ರಾಜ್ಯಸಭೆಯ ಸದಸ್ಯರೊಬ್ಬರ ಮಾಲಿಕತ್ವದ ಖಾಸಗಿ ಜೆಟ್ ಕಂಪೆನಿಯ ವಿಮಾನದಲ್ಲಿ ಮುಂಬಯಿಯ ಒಂದು ಪಂಚತಾರಾ ಹೊಟೇಲ್ಗೆ ಕರೆದುಕೊಂಡು ಹೋಗಿದ್ದು ಅಚ್ಚರಿಯ ಸಂಗತಿಯೇನೂ ಅಲ್ಲ.
ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
–ಪ್ರಕಾಶ್ ಕಾರಟ್
ಅನು: ವಿಶ್ವ
ಕೃಪೆ : ಜನಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days ago
‘ಪ್ರೀತಿಯಲ್ಲಿ ಗೆದ್ದವ ಚುನಾವಣೆಯಲ್ಲಿ ಗೆದ್ದು ಗದ್ದುಗೆಯೇರಿದ’..!
-
ಭಾವ ಭೈರಾಗಿ7 days ago
ಕರುಣಾಳು ಅವನು, ಅವನು ನನ್ನವನು..!
-
ದಿನದ ಸುದ್ದಿ6 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ಲೈಫ್ ಸ್ಟೈಲ್6 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ದಿನದ ಸುದ್ದಿ6 days ago
ಬಡವರನ್ನು ಸಬಲೀಕರಣಗೊಳಿಸಲು ಉಚಿತ ಅನಿಲ ಸಂಪರ್ಕ ನೀಡಿದ್ದೇವೆ : ಪ್ರಧಾನಿ ಮೋದಿ
-
ಕ್ರೀಡೆ6 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್6 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ಭಾವ ಭೈರಾಗಿ6 days ago
ಕವಿತೆ | ಅವಳು