Connect with us

ರಾಜಕೀಯ

ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ ; ಜಾರಕಿಹೊಳಿ ಬ್ರದರ್ಸ್​ 6 ಬೇಡಿಕೆ ಸಿಎಂ ಅಸ್ತು : ಬಿಜೆಪಿ ಕನಸು ಭಗ್ನ

Published

on

ಸುದ್ದಿದಿನ ಡೆಸ್ಕ್ : ಜಾರಕಿಹೊಳಿ ಬ್ರದರ್ಸ್​ -ಸಿಎಂ ಹೆಚ್​ಡಿಕೆ ನಡುವೆ ನಡೆದ ಮಾತುಕತೆ ಏನು? ಜಾರಕಿಹೊಳಿ ಬ್ರದರ್ಸ್​ ಕೇಳಿದ್ದೇನು? ಸಿಎಂ ಹೆಚ್​ಡಿಕೆ ಹೇಳಿದ್ದೇನು? ಆ ಒಂದು ಗಂಟೆಯ ಮಾತುಕತೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು..? ಬಿಟಿವಿಯಲ್ಲಿ ಜಾರಕಿಹೊಳಿ ಬ್ರದರ್ಸ್​-ಸಿಎಂ ಭೇಟಿಯ ಎಕ್ಸ್​ಕ್ಲೂಸಿವ್​ ಡೀಟೇಲ್ಸ್​-

ಆ ಒಂದು ಗಂಟೆಯಲ್ಲಿ ಆಗಿದ್ದೇನು..?

ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ-
ಬಂಡಾಯ ಶಮನಕ್ಕೆ ಎಂಟ್ರಿಯಾದ ಸಿಎಂ ಹೆಚ್​ಡಿ ಕುಮಾರಸ್ವಾಮಿ ಜಾರಕಿಹೊಳಿ ಬ್ರದರ್ಸ್​ ಜತೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ತಾಜ್​​ವೆಸ್ಟೆಂಡ್​ನಲ್ಲಿ ಒಂದು ಗಂಟೆ ಕಾಲ ನಡೆದ ಮಾತುಕತೆ ಫಲಪ್ರದವಾಗಿದ್ದು, ಸಿಎಂ ಭೇಟಿ ವೇಳೆ ರಮೇಶ್​ ಜಾರಕಿಹೊಳಿ,ಸತೀಶ್ ಜಾರಕಿಹೊಳಿ, ನಾಗೇಂದ್ರ ಮತ್ತು ಹೆಚ್​ಡಿ ರೇವಣ್ಣ ಹಾಜರಿದ್ದರು. ನಾವು ರಾಹುಲ್​​ ಗಾಂಧಿ ಬಳಿಗೆ ಹೋಗಲ್ಲ ನೀವೇ ಬಗೆಹರಿಸಿ ಎಂದರು ಜಾರಕಿಹೊಳಿ. ಜಾರಕಿಹೊಳಿಯ 6 ಪ್ರಮುಖ ಬೇಡಿಕೆಗಳಿಗೂ ಒಪ್ಪಿಗೆ ನೀಡಿದ ಸಿಎಂ ಕುಮಾರಸ್ವಾಮಿ ಅವರು ಸತೀಶ್​ ಜಾರಕಿಹೊಳಿ ಹಾಗೂ ನಾಗೇಂದ್ರಗೆ ಸಚಿವ ಪಟ್ಟ ನೀಡಲು ಸಿಎಂ ಒಪ್ಪಿಗೆ ನೀಡಿದ್ದು, ರಮೇಶ್​ ಜಾರಕಿಹೊಳಿಯ ಖಾತೆ ಬದಲಾವಣೆಗೆ ಓಕೆ ಎಂದಿದ್ದಾರೆ. ಬೆಳಗಾವಿ ಜಿಲ್ಲೆ ಸದ್ಯಕ್ಕೆ ವಿಭಜನೆ ಇಲ್ಲ, ಬೆಳಗಾವಿ ರಾಜಕಾರಣದಲ್ಲಿ ಯಾರ ಹಸ್ತಕ್ಷೇಪವೂ ಇರಲ್ಲ ಎಂದು ಎಲ್ಲಾ ಬೇಡಿಕೆಗಳಿಗೂ ಸಮ್ಮತಿ ನೀಡಿದ್ದಾರೆ ಸಿಎಂ ಕುಮಾರಸ್ವಾಮಿ.

ಜಾರಕಿಹೊಳಿ ಬ್ರದರ್ಸ್​ 6 ಬೇಡಿಕೆ ಸಿಎಂ ಅಸ್ತು

ಬಿಜೆಪಿ ನಾಯಕರ ಆಪರೇಷನ್​​ ಕಮಲ ಠುಸ್​ ಆಗಿದೆ. ಸಿಎಂ ಜತೆ ಜಾರಕಿಹೊಳಿ ಬ್ರದರ್ಸ್​ ಮಾತುಕತೆ ಯಶಸ್ವಿಯದನಂತರ, ಜಾರಕಿಹೊಳಿ ಸಹೋದರರ ಎಲ್ಲಾ ಬೇಡಿಕೆಗಳಿಗೂ ಸಮ್ಮತಿಸಿದ್ದಾರೆ ಸಿಎಂ ಹೆಚ್​ಡಿಕೆ.
ಬಿಜೆಪಿ ನಾಯಕರ ಎಲ್ಲಾ ಪ್ಲಾನ್​​ಗಳನ್ನು ಉಲ್ಟಾ ಮಾಡಿದ ಸಿಎಂ ಕುಮಾರಸ್ವಾಮಿ.
ತಾಜ್​ವೆಸ್ಟೆಂಡ್​ನಲ್ಲಿ ರಮೇಶ್​ ಜಾರಕಿಹೊಳಿ ಭೇಟಿಗೆ ಸಜ್ಜಾಗಿದ್ದ ಬಿಜೆಪಿ ನಾಯಕರು
ಆಪರೇಷನ್​​ ಕಮಲಕ್ಕೆ ಅಂತಿಮ ತಯಾರಿ ಮಾಡಿಕೊಂಡಿದ್ದರು‌‌. ರಾಜನಾಥ್​ ಸಿಂಗ್​ ಬೆಂಗಳೂರಿಗೆ ಎಂಟ್ರಿ ಕೊಡ್ತಿದ್ದಂತೆ ಮಾತುಕತೆಗೆ ಸಿದ್ದವಾಗಿತ್ತು ವೇದಿಕೆ. ಅಷ್ಟರಲ್ಲೇ ತಾಜ್​​ ವೆಸ್ಟ್​ ಎಂಡ್​ಗೆ ಎಂಟ್ರಿ ಕೊಟ್ಟು ಬಿಜೆಪಿ ಕನಸು ಭಗ್ನ ಮಾಡಿದ ಸಿಎಂ. ಯಾವುದೇ ಕಾರಣಕ್ಕೂ ನಾವು ಬಿಜೆಪಿ ಜತೆ ಹೋಗಲ್ಲ ಎಂದರು ಜಾರಕಿಹೊಳಿ ಬ್ರದರ್ಸ್​.

ಬಿಜೆಪಿ ಪ್ಲಾನ್​ ಛಿದ್ರ ಮಾಡಿದ ಹೆಚ್​ಡಿಕೆ

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್​
ಮುಂದುವರೆಯುತ್ತಲೇ ಇದೆ ಜಾರಕಿಹೊಳಿ ಬ್ರದರ್ಸ್​-ಸಿಎಂ ಮಾತುಕತೆ. ತಾಜ್​​ ವೆಸ್ಟ್​ಎಂಡ್​ನಲ್ಲಿ ನಡೆಯುತ್ತಿರುವ ಸುದೀರ್ಘ ಮಾತುಕತೆ-
ಜಾರಕಿಹೊಳಿ ಬ್ರದರ್ಸ್​ ಗೆ ಕೊನೆಗುಯ ಸಮಾಧಾನ ಪಡಿಸಿದ್ಸಾರೆ ಸಿಎಂ ಹೆಚ್​ಡಿಕೆ.

ಇಂದು ಮಧ್ಯಾಹ್ನ ಜಾರಕಿಹೊಳಿ ಸೋದರರ ಭೇಟಿಯಾಗಲಿರುವ ಸಿದ್ದರಾಮಯ್ಯನವರು,
ಜಾರಕಿಹೊಳಿ ಭೇಟಿ ನಂತರ ಸಂಜೆ ದೆಹಲಿಗೆ ತೆರಳಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಭೇಟಿ ಮಾಡಲಿರುವ ಸಿದ್ದು. ಈಗಾಗಲೇ ದೆಹಲಿಯತ್ತ ಹೊರಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​​​. ಸಿಎಂ ಜತೆಗಿನ ಮಾತುಕತೆ ಫಲಪ್ರದ ಹಿನ್ನೆಲೆಯಲ್ಲಿ ಜಾರಕಿಹೊಳಿ ಬ್ರದರ್ಸ್​ ದೆಹಲಿ ಪ್ರಯಾಣ ರದ್ದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending