ರಾಜಕೀಯ
ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ ; ಜಾರಕಿಹೊಳಿ ಬ್ರದರ್ಸ್ 6 ಬೇಡಿಕೆ ಸಿಎಂ ಅಸ್ತು : ಬಿಜೆಪಿ ಕನಸು ಭಗ್ನ

ಸುದ್ದಿದಿನ ಡೆಸ್ಕ್ : ಜಾರಕಿಹೊಳಿ ಬ್ರದರ್ಸ್ -ಸಿಎಂ ಹೆಚ್ಡಿಕೆ ನಡುವೆ ನಡೆದ ಮಾತುಕತೆ ಏನು? ಜಾರಕಿಹೊಳಿ ಬ್ರದರ್ಸ್ ಕೇಳಿದ್ದೇನು? ಸಿಎಂ ಹೆಚ್ಡಿಕೆ ಹೇಳಿದ್ದೇನು? ಆ ಒಂದು ಗಂಟೆಯ ಮಾತುಕತೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು..? ಬಿಟಿವಿಯಲ್ಲಿ ಜಾರಕಿಹೊಳಿ ಬ್ರದರ್ಸ್-ಸಿಎಂ ಭೇಟಿಯ ಎಕ್ಸ್ಕ್ಲೂಸಿವ್ ಡೀಟೇಲ್ಸ್-
ಆ ಒಂದು ಗಂಟೆಯಲ್ಲಿ ಆಗಿದ್ದೇನು..?
ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ-
ಬಂಡಾಯ ಶಮನಕ್ಕೆ ಎಂಟ್ರಿಯಾದ ಸಿಎಂ ಹೆಚ್ಡಿ ಕುಮಾರಸ್ವಾಮಿ ಜಾರಕಿಹೊಳಿ ಬ್ರದರ್ಸ್ ಜತೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ತಾಜ್ವೆಸ್ಟೆಂಡ್ನಲ್ಲಿ ಒಂದು ಗಂಟೆ ಕಾಲ ನಡೆದ ಮಾತುಕತೆ ಫಲಪ್ರದವಾಗಿದ್ದು, ಸಿಎಂ ಭೇಟಿ ವೇಳೆ ರಮೇಶ್ ಜಾರಕಿಹೊಳಿ,ಸತೀಶ್ ಜಾರಕಿಹೊಳಿ, ನಾಗೇಂದ್ರ ಮತ್ತು ಹೆಚ್ಡಿ ರೇವಣ್ಣ ಹಾಜರಿದ್ದರು. ನಾವು ರಾಹುಲ್ ಗಾಂಧಿ ಬಳಿಗೆ ಹೋಗಲ್ಲ ನೀವೇ ಬಗೆಹರಿಸಿ ಎಂದರು ಜಾರಕಿಹೊಳಿ. ಜಾರಕಿಹೊಳಿಯ 6 ಪ್ರಮುಖ ಬೇಡಿಕೆಗಳಿಗೂ ಒಪ್ಪಿಗೆ ನೀಡಿದ ಸಿಎಂ ಕುಮಾರಸ್ವಾಮಿ ಅವರು ಸತೀಶ್ ಜಾರಕಿಹೊಳಿ ಹಾಗೂ ನಾಗೇಂದ್ರಗೆ ಸಚಿವ ಪಟ್ಟ ನೀಡಲು ಸಿಎಂ ಒಪ್ಪಿಗೆ ನೀಡಿದ್ದು, ರಮೇಶ್ ಜಾರಕಿಹೊಳಿಯ ಖಾತೆ ಬದಲಾವಣೆಗೆ ಓಕೆ ಎಂದಿದ್ದಾರೆ. ಬೆಳಗಾವಿ ಜಿಲ್ಲೆ ಸದ್ಯಕ್ಕೆ ವಿಭಜನೆ ಇಲ್ಲ, ಬೆಳಗಾವಿ ರಾಜಕಾರಣದಲ್ಲಿ ಯಾರ ಹಸ್ತಕ್ಷೇಪವೂ ಇರಲ್ಲ ಎಂದು ಎಲ್ಲಾ ಬೇಡಿಕೆಗಳಿಗೂ ಸಮ್ಮತಿ ನೀಡಿದ್ದಾರೆ ಸಿಎಂ ಕುಮಾರಸ್ವಾಮಿ.
ಜಾರಕಿಹೊಳಿ ಬ್ರದರ್ಸ್ 6 ಬೇಡಿಕೆ ಸಿಎಂ ಅಸ್ತು
ಬಿಜೆಪಿ ನಾಯಕರ ಆಪರೇಷನ್ ಕಮಲ ಠುಸ್ ಆಗಿದೆ. ಸಿಎಂ ಜತೆ ಜಾರಕಿಹೊಳಿ ಬ್ರದರ್ಸ್ ಮಾತುಕತೆ ಯಶಸ್ವಿಯದನಂತರ, ಜಾರಕಿಹೊಳಿ ಸಹೋದರರ ಎಲ್ಲಾ ಬೇಡಿಕೆಗಳಿಗೂ ಸಮ್ಮತಿಸಿದ್ದಾರೆ ಸಿಎಂ ಹೆಚ್ಡಿಕೆ.
ಬಿಜೆಪಿ ನಾಯಕರ ಎಲ್ಲಾ ಪ್ಲಾನ್ಗಳನ್ನು ಉಲ್ಟಾ ಮಾಡಿದ ಸಿಎಂ ಕುಮಾರಸ್ವಾಮಿ.
ತಾಜ್ವೆಸ್ಟೆಂಡ್ನಲ್ಲಿ ರಮೇಶ್ ಜಾರಕಿಹೊಳಿ ಭೇಟಿಗೆ ಸಜ್ಜಾಗಿದ್ದ ಬಿಜೆಪಿ ನಾಯಕರು
ಆಪರೇಷನ್ ಕಮಲಕ್ಕೆ ಅಂತಿಮ ತಯಾರಿ ಮಾಡಿಕೊಂಡಿದ್ದರು. ರಾಜನಾಥ್ ಸಿಂಗ್ ಬೆಂಗಳೂರಿಗೆ ಎಂಟ್ರಿ ಕೊಡ್ತಿದ್ದಂತೆ ಮಾತುಕತೆಗೆ ಸಿದ್ದವಾಗಿತ್ತು ವೇದಿಕೆ. ಅಷ್ಟರಲ್ಲೇ ತಾಜ್ ವೆಸ್ಟ್ ಎಂಡ್ಗೆ ಎಂಟ್ರಿ ಕೊಟ್ಟು ಬಿಜೆಪಿ ಕನಸು ಭಗ್ನ ಮಾಡಿದ ಸಿಎಂ. ಯಾವುದೇ ಕಾರಣಕ್ಕೂ ನಾವು ಬಿಜೆಪಿ ಜತೆ ಹೋಗಲ್ಲ ಎಂದರು ಜಾರಕಿಹೊಳಿ ಬ್ರದರ್ಸ್.
ಬಿಜೆಪಿ ಪ್ಲಾನ್ ಛಿದ್ರ ಮಾಡಿದ ಹೆಚ್ಡಿಕೆ
ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್
ಮುಂದುವರೆಯುತ್ತಲೇ ಇದೆ ಜಾರಕಿಹೊಳಿ ಬ್ರದರ್ಸ್-ಸಿಎಂ ಮಾತುಕತೆ. ತಾಜ್ ವೆಸ್ಟ್ಎಂಡ್ನಲ್ಲಿ ನಡೆಯುತ್ತಿರುವ ಸುದೀರ್ಘ ಮಾತುಕತೆ-
ಜಾರಕಿಹೊಳಿ ಬ್ರದರ್ಸ್ ಗೆ ಕೊನೆಗುಯ ಸಮಾಧಾನ ಪಡಿಸಿದ್ಸಾರೆ ಸಿಎಂ ಹೆಚ್ಡಿಕೆ.
ಇಂದು ಮಧ್ಯಾಹ್ನ ಜಾರಕಿಹೊಳಿ ಸೋದರರ ಭೇಟಿಯಾಗಲಿರುವ ಸಿದ್ದರಾಮಯ್ಯನವರು,
ಜಾರಕಿಹೊಳಿ ಭೇಟಿ ನಂತರ ಸಂಜೆ ದೆಹಲಿಗೆ ತೆರಳಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಲಿರುವ ಸಿದ್ದು. ಈಗಾಗಲೇ ದೆಹಲಿಯತ್ತ ಹೊರಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್. ಸಿಎಂ ಜತೆಗಿನ ಮಾತುಕತೆ ಫಲಪ್ರದ ಹಿನ್ನೆಲೆಯಲ್ಲಿ ಜಾರಕಿಹೊಳಿ ಬ್ರದರ್ಸ್ ದೆಹಲಿ ಪ್ರಯಾಣ ರದ್ದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.
ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.
ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು