ರಾಜಕೀಯ

ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ ; ಜಾರಕಿಹೊಳಿ ಬ್ರದರ್ಸ್​ 6 ಬೇಡಿಕೆ ಸಿಎಂ ಅಸ್ತು : ಬಿಜೆಪಿ ಕನಸು ಭಗ್ನ

Published

on

ಸುದ್ದಿದಿನ ಡೆಸ್ಕ್ : ಜಾರಕಿಹೊಳಿ ಬ್ರದರ್ಸ್​ -ಸಿಎಂ ಹೆಚ್​ಡಿಕೆ ನಡುವೆ ನಡೆದ ಮಾತುಕತೆ ಏನು? ಜಾರಕಿಹೊಳಿ ಬ್ರದರ್ಸ್​ ಕೇಳಿದ್ದೇನು? ಸಿಎಂ ಹೆಚ್​ಡಿಕೆ ಹೇಳಿದ್ದೇನು? ಆ ಒಂದು ಗಂಟೆಯ ಮಾತುಕತೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು..? ಬಿಟಿವಿಯಲ್ಲಿ ಜಾರಕಿಹೊಳಿ ಬ್ರದರ್ಸ್​-ಸಿಎಂ ಭೇಟಿಯ ಎಕ್ಸ್​ಕ್ಲೂಸಿವ್​ ಡೀಟೇಲ್ಸ್​-

ಆ ಒಂದು ಗಂಟೆಯಲ್ಲಿ ಆಗಿದ್ದೇನು..?

ಇದು ರಾಜ್ಯ ರಾಜಕಾರಣದ ಸ್ಫೋಟಕ ಸ್ಟೋರಿ-
ಬಂಡಾಯ ಶಮನಕ್ಕೆ ಎಂಟ್ರಿಯಾದ ಸಿಎಂ ಹೆಚ್​ಡಿ ಕುಮಾರಸ್ವಾಮಿ ಜಾರಕಿಹೊಳಿ ಬ್ರದರ್ಸ್​ ಜತೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ತಾಜ್​​ವೆಸ್ಟೆಂಡ್​ನಲ್ಲಿ ಒಂದು ಗಂಟೆ ಕಾಲ ನಡೆದ ಮಾತುಕತೆ ಫಲಪ್ರದವಾಗಿದ್ದು, ಸಿಎಂ ಭೇಟಿ ವೇಳೆ ರಮೇಶ್​ ಜಾರಕಿಹೊಳಿ,ಸತೀಶ್ ಜಾರಕಿಹೊಳಿ, ನಾಗೇಂದ್ರ ಮತ್ತು ಹೆಚ್​ಡಿ ರೇವಣ್ಣ ಹಾಜರಿದ್ದರು. ನಾವು ರಾಹುಲ್​​ ಗಾಂಧಿ ಬಳಿಗೆ ಹೋಗಲ್ಲ ನೀವೇ ಬಗೆಹರಿಸಿ ಎಂದರು ಜಾರಕಿಹೊಳಿ. ಜಾರಕಿಹೊಳಿಯ 6 ಪ್ರಮುಖ ಬೇಡಿಕೆಗಳಿಗೂ ಒಪ್ಪಿಗೆ ನೀಡಿದ ಸಿಎಂ ಕುಮಾರಸ್ವಾಮಿ ಅವರು ಸತೀಶ್​ ಜಾರಕಿಹೊಳಿ ಹಾಗೂ ನಾಗೇಂದ್ರಗೆ ಸಚಿವ ಪಟ್ಟ ನೀಡಲು ಸಿಎಂ ಒಪ್ಪಿಗೆ ನೀಡಿದ್ದು, ರಮೇಶ್​ ಜಾರಕಿಹೊಳಿಯ ಖಾತೆ ಬದಲಾವಣೆಗೆ ಓಕೆ ಎಂದಿದ್ದಾರೆ. ಬೆಳಗಾವಿ ಜಿಲ್ಲೆ ಸದ್ಯಕ್ಕೆ ವಿಭಜನೆ ಇಲ್ಲ, ಬೆಳಗಾವಿ ರಾಜಕಾರಣದಲ್ಲಿ ಯಾರ ಹಸ್ತಕ್ಷೇಪವೂ ಇರಲ್ಲ ಎಂದು ಎಲ್ಲಾ ಬೇಡಿಕೆಗಳಿಗೂ ಸಮ್ಮತಿ ನೀಡಿದ್ದಾರೆ ಸಿಎಂ ಕುಮಾರಸ್ವಾಮಿ.

ಜಾರಕಿಹೊಳಿ ಬ್ರದರ್ಸ್​ 6 ಬೇಡಿಕೆ ಸಿಎಂ ಅಸ್ತು

ಬಿಜೆಪಿ ನಾಯಕರ ಆಪರೇಷನ್​​ ಕಮಲ ಠುಸ್​ ಆಗಿದೆ. ಸಿಎಂ ಜತೆ ಜಾರಕಿಹೊಳಿ ಬ್ರದರ್ಸ್​ ಮಾತುಕತೆ ಯಶಸ್ವಿಯದನಂತರ, ಜಾರಕಿಹೊಳಿ ಸಹೋದರರ ಎಲ್ಲಾ ಬೇಡಿಕೆಗಳಿಗೂ ಸಮ್ಮತಿಸಿದ್ದಾರೆ ಸಿಎಂ ಹೆಚ್​ಡಿಕೆ.
ಬಿಜೆಪಿ ನಾಯಕರ ಎಲ್ಲಾ ಪ್ಲಾನ್​​ಗಳನ್ನು ಉಲ್ಟಾ ಮಾಡಿದ ಸಿಎಂ ಕುಮಾರಸ್ವಾಮಿ.
ತಾಜ್​ವೆಸ್ಟೆಂಡ್​ನಲ್ಲಿ ರಮೇಶ್​ ಜಾರಕಿಹೊಳಿ ಭೇಟಿಗೆ ಸಜ್ಜಾಗಿದ್ದ ಬಿಜೆಪಿ ನಾಯಕರು
ಆಪರೇಷನ್​​ ಕಮಲಕ್ಕೆ ಅಂತಿಮ ತಯಾರಿ ಮಾಡಿಕೊಂಡಿದ್ದರು‌‌. ರಾಜನಾಥ್​ ಸಿಂಗ್​ ಬೆಂಗಳೂರಿಗೆ ಎಂಟ್ರಿ ಕೊಡ್ತಿದ್ದಂತೆ ಮಾತುಕತೆಗೆ ಸಿದ್ದವಾಗಿತ್ತು ವೇದಿಕೆ. ಅಷ್ಟರಲ್ಲೇ ತಾಜ್​​ ವೆಸ್ಟ್​ ಎಂಡ್​ಗೆ ಎಂಟ್ರಿ ಕೊಟ್ಟು ಬಿಜೆಪಿ ಕನಸು ಭಗ್ನ ಮಾಡಿದ ಸಿಎಂ. ಯಾವುದೇ ಕಾರಣಕ್ಕೂ ನಾವು ಬಿಜೆಪಿ ಜತೆ ಹೋಗಲ್ಲ ಎಂದರು ಜಾರಕಿಹೊಳಿ ಬ್ರದರ್ಸ್​.

ಬಿಜೆಪಿ ಪ್ಲಾನ್​ ಛಿದ್ರ ಮಾಡಿದ ಹೆಚ್​ಡಿಕೆ

ರಾಜ್ಯ ರಾಜಕಾರಣದಲ್ಲಿ ಕ್ಷಣಕ್ಕೊಂದು ಟ್ವಿಸ್ಟ್​
ಮುಂದುವರೆಯುತ್ತಲೇ ಇದೆ ಜಾರಕಿಹೊಳಿ ಬ್ರದರ್ಸ್​-ಸಿಎಂ ಮಾತುಕತೆ. ತಾಜ್​​ ವೆಸ್ಟ್​ಎಂಡ್​ನಲ್ಲಿ ನಡೆಯುತ್ತಿರುವ ಸುದೀರ್ಘ ಮಾತುಕತೆ-
ಜಾರಕಿಹೊಳಿ ಬ್ರದರ್ಸ್​ ಗೆ ಕೊನೆಗುಯ ಸಮಾಧಾನ ಪಡಿಸಿದ್ಸಾರೆ ಸಿಎಂ ಹೆಚ್​ಡಿಕೆ.

ಇಂದು ಮಧ್ಯಾಹ್ನ ಜಾರಕಿಹೊಳಿ ಸೋದರರ ಭೇಟಿಯಾಗಲಿರುವ ಸಿದ್ದರಾಮಯ್ಯನವರು,
ಜಾರಕಿಹೊಳಿ ಭೇಟಿ ನಂತರ ಸಂಜೆ ದೆಹಲಿಗೆ ತೆರಳಲಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಭೇಟಿ ಮಾಡಲಿರುವ ಸಿದ್ದು. ಈಗಾಗಲೇ ದೆಹಲಿಯತ್ತ ಹೊರಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​​​. ಸಿಎಂ ಜತೆಗಿನ ಮಾತುಕತೆ ಫಲಪ್ರದ ಹಿನ್ನೆಲೆಯಲ್ಲಿ ಜಾರಕಿಹೊಳಿ ಬ್ರದರ್ಸ್​ ದೆಹಲಿ ಪ್ರಯಾಣ ರದ್ದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Leave a Reply

Your email address will not be published. Required fields are marked *

Trending

Exit mobile version