ರಾಜಕೀಯ
ಮಂಡ್ಯ | ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಟ್ಟರೆ ಬಂಡಾಯ: ಕೈ ನಾಯಕರು
ಸುದ್ದಿದಿನ ಡೆಸ್ಕ್ : ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಸ್ಪರ್ಧಿಸದೆ ಜೆಡಿಎಸ್ ಗೆ ಸ್ಥಾನ ಬಿಟ್ಟುಕೊಟ್ಟರೆ ಜಿಲ್ಲೆಯ ನಾಯಕರು ಬಂಡಾಯ ಏಳುವರು ಎಂದು ಕೈ ನಾಯಕರು ರಾಜ್ಯ ಹೈಕಮಾಂಡ್ ಗೆ ಎಚ್ಚರಿಸಿದ್ದಾರೆ. ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟರೆ ಅಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ. ಈಗಾಗಲೇ ಜೆಡಿಎಸ್ ತನ್ನ ಪ್ರಭಾವ ಹೆಚ್ಚಿಸಿದ್ದು, ಚುನಾವಣೆ ಗೆದ್ದು ಬಂದರೆ ಜಿಲ್ಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆಲ್ಲುವುದು ಸಾಧ್ಯವಿಲ್ಲ ಎಂದು ನಾಯಕರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401