ದಿನದ ಸುದ್ದಿ
ನವಿಲೇಹಾಳಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ; ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ
ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ,ಗ್ರಾಮ ಘಟಕ ನವಿಲೇಹಾಳಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಕನ್ನಡ ದ್ವಜಾರೋಹಣವನ್ನು ಮಂಗಳೂರು ಘಟಕದ ಆರಕ್ಷಕ ಉಪ ನಿರೀಕ್ಷಕರಾದ ಶ್ರೀಯುತ ಪ್ರದೀಪ್ ರವರು ನಾಡಗೀತೆ ಯೊಂದಿಗೆ ನೆರವೇರಿಸಿದರು.
ಬೃಹತ್ ಗಾತ್ರದ ನಾಡ ಬಾವುಟದ ಮೆರವಣಿಗೆಗೆ ನವಿಲೇಹಾಳು ಪದ್ಮಶ್ರೀ ಪ್ರೌಢ ಶಾಲೆಗೆ ಭೂ ಧಾನ ಮಾಡಿದ ಶ್ರೀಯುತ ಎನ್.ವಿ. ಮಂಜುನಾಥರವರು ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದರಿ ಗ್ರಾಮದ
ಕ.ರ.ವೇ ಗೌರವಾಧ್ಯಕ್ಷರಾದ ಶ್ರೀ ಜಿ.ಮಹೇಶ್ವರಪ್ಪ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಉದಯ ಟಿವಿ ಹರಟೆ ಖ್ಯಾತಿಯ ಹಾಸ್ಯ ಭಾಷಣ
ಕಾರರಾದ ಕಲಬುರುಗಿಯ ಶ್ರೀಮತಿ ಇಂದುಮತಿ ಸಾಲಿಮಠ್ ರವರು ನೆರವೇರಿಸಿ, ತಮ್ಮ ಹಾಸ್ಯ ಭಾಷಣದಿಂದ ಮತ್ತು ಹಾಸ್ಯ ಹಾಡುಗಳಿಂದ ನೆರೆದಿದ್ದ ಗ್ರಾಮಸ್ಥರ ಜನಸ್ತೋಮವನ್ನು ನಗೆ ಕಡಲಿನಲ್ಲಿ ತೇಲಿಸಿದರು. ವರ ನಟ ಡಾ. ರಾಜಕುಮಾರ್ ರವರ ಸುಪುತ್ರ ಕರ್ನಾಟಕ ರತ್ನ,ಚಂದನ ವನದ ಧ್ರುವತಾರೆ ಪುನೀತ್ ರಾಜಕುಮಾರ್ ರವರ ಸಾಮಾಜಿಕ ಸೇವೆಯನ್ನು ತಾವೆಲ್ಲರೂ ಅನುಸರಿಸಬೇಕು, ಅಪ್ಪುತಮ್ಮ ಕಣ್ಣಿನ ಧಾನದಿಂದ ಇಂದು ನಾಲ್ಕು ಜನರ ಜೀವನಕ್ಕೆ ಬೆಳಕಾಗಿದೆ ಎಂದರು.
ಇಂದು ನೀವೆಲ್ಲರೂ ಈ ಕಾರ್ಯಕ್ರಮದಲ್ಲಿ ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಹಮ್ಮಿಕೊಂಡಿರುವುದು ಅತೀವ ಸಂತೋಷ ತಂದಿದೆ,ನಾನು ಕೂಡ ನನ್ನ ದೇಹವನ್ನು ಈಗಾಗಲೇ ತನ್ನ ಮರಣದ ನಂತರ ಧಾನ ಮಾಡಲಿಕ್ಕೆ ನೊಂದಣಿ ಮಾಡಿಕೊಂಡಿರುವ ಸತ್ಯ ಸಂಗತಿಯನ್ನು ತಿಳಿಸಿ,ಇಂದು ನವಿಲೇಹಾಳು ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಊರಿನ ಹಿರಿಯರು- ಕಿರಿಯರು,ಗ್ರಾಮಸ್ಥರು,ಶಾಲಾ ಮಕ್ಕಳು,ಕನ್ನಡ ಮನಗಳು,ಕ.ರ.ವೇ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ತಾಯಿ ಭುವನೇಶ್ವರಿ ಕೃಪೆಗೆ ಪಾತ್ರರಾಗಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಮದ್ಯಪಾನ ಒಳ್ಳೆಯ ಅಭ್ಯಾಸ ಅಲ್ಲ,ಯಾರು ಸಹ ಕುಡಿಯಬೇಡಿ ಎಂಬ ಉತ್ತಮ ಸಂದೇಶವನ್ನು ತಿಳಿಸಿದರು.ಎಲ್ಲರೂ ಸಹ ಕನ್ನಡ ಕಲಿಯಿರಿ,ಕಲಿಸಿರಿ,
ಕನ್ನಡವನ್ನು ಉಳಿಸಿರಿ, ಕನ್ನಡ ನಾಡು-ನುಡಿ ಸೇವೆಗೆ ತಮ್ಮ ಸಮಯ ಮೀಸಲಿಡಿ ಎಂಬುದಾಗಿ ತಿಳಿಸಿದರು.
ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ನವಿಲೇಹಾಳಿನ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದಕ್ಕಿಂತ ಒಂದು ಆಕರ್ಷಣೆಯಾಗಿ,ಎಲ್ಲಾರ ಪ್ರಶಂಸೆಯೊಂದಿಗೆ ಮೆಚ್ಚುಗೆ ಗಳಿಸಿದವು.ಮುಖ್ಯ ಅಥಿತಿಗಳಾಗಿ ಆಗಮನಿಸಿದ್ದ ಚಾಮರಾಜನಗರದ ಸಾಹಿತಿಗಳಾದ ಶ್ರೀ ಕೆ.ಶ್ರೀಧರ್(ಕೆ. ಸಿರಿ)ನವಿಲೇಹಾಳುನ ಸಾಹಿತಿಗಳಾದ ಡಾ.ಶ್ರೀ ಷಕೀಬ್ ಕಣದ್ಮನೆ ರವರು ರಚಿಸಿರುವ ನಮ್ಮೂರು ನವಿಲೂರು ಎಂಬ ಕವನ ವಾಚನ ದೊಂದಿಗೆ ತಮ್ಮ ಮಾತನ್ನು ಪ್ರಾರಂಭಿಸಿ, ಇತಿಹಾಸದ ಪುಟಗಳ ಸಂಗ್ರಹದೊಂದಿಗೆ ನವಿಲೂರು ನವಿಲೇಹಾಳು ಆದ ಸಂಗತಿಯನ್ನು ಬಿಚ್ಚಿಟ್ಟರು.ಹಾಗೂ ನವಿಲೇಹಾಳು ಗ್ರಾಮದಲ್ಲಿನ ಹಿಂದೂ-ಮುಸ್ಲಿಂ ಜನತೆಯ ಬಾಂಧವ್ಯವನ್ನು ಕೊಂಡಾಡಿದರು.
ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಪ್ರದೀಪ್ ರವರು ಮಾತನಾಡಿ ತಮ್ಮ ವ್ಯಾಪ್ತಿಗೆ ಬಂದತಹ ಎರಡು ಸೂಕ್ಷ್ಮ ಅಪರಾಧ ತನಿಖೆಗಳನ್ನು ಕೆಲವೇ ದಿನಗಳಲ್ಲಿ ಗುರುತಿಸಿದ್ದಕ್ಕಾಗಿ ಕರ್ನಾಟಕ ಸರ್ಕಾರ ತಮ್ಮ ಸೇವೆ ಗುರುತಿಸಿ,ಮುಖ್ಯ ಮಂತ್ರಿ ಪದಕ ನೀಡಿದ ಸಂಗತಿಯನ್ನು ತಿಳಿಸಿದರು.
ನಮ್ಮೂರು ಎಲ್ಲಾ ಗ್ರಾಮಸ್ಥರ ಪ್ರೋತ್ಸಾಹದೊಂದಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ,ಸಾಮಾಜಿಕವಾಗಿ ಉನ್ನತ ಅಭಿವೃದ್ಧಿಯೊಂದಿಗೆ ಸ್ವಚ್ಛ ಗ್ರಾಮವಾಗಿ ಹೊರಹೊಮ್ಮಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಹಾಲಕ್ಕಿ ನುಡಿತೈತೆ ಕೃತಿ ಬಿಡುಗಡೆ
67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನವಿಲೇಹಾಳು ಪ್ರತಿಭೆ ಭದ್ರಾವತಿಯ ನವಚೇತನ ಕನ್ನಡ ಶಾಲೆಯ ಶಿಕ್ಷಕರಾದ ಸಿ.ಎಚ್.ನಾಗೇಂದ್ರಪ್ಪ ರವರ ಚೊಚ್ಚಲ ಕೃತಿಯಾದ ಹಾಲಕ್ಕಿ ನುಡಿತೈತೆ ಕವನ ಸಂಕಲನವನ್ನು
ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಜಿ.ಮಹೇಶ್ವರಪ್ಪ ರವರು ಮರು ಬಿಡುಗಡೆ ಗೊಳಿಸಿದರು.
ಸನ್ಮಾನ ಕಾರ್ಯಕ್ರಮ
ನವಿಲೇಹಾಳಿನ ಪದ್ಮಶ್ರೀ ಪ್ರೌಢ ಶಾಲೆಗೆ ಭೂ ಧಾನ ಮಾಡಿದ ನಿವಾಸಿಗಳಾದ ಶ್ರೀಯುತ ಎನ್.ವಿ.ಮಂಜುನಾಥ್ ಮತ್ತು ಹಿರಿಯರಾದ ಶ್ರೀಯುತ ದೊಡ್ಡ ಹನುಮಪ್ಪ ರವರನ್ನು, ಮಂಗಳೂರು ವಿಭಾಗದ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಪ್ರದೀಪ್ ರವರನ್ನು,ಶ್ರೀಮತಿ ಇಂದುಮತಿ ಸಾಲಿಮಠ ರವರನ್ನು,ಶ್ರೀ ಕೆ.ಶ್ರೀಧರ್ ರವರನ್ನು,ನೇತಾಜಿ ಪ್ರೌಢಶಾಲೆ,
ಬಲ್ಲಮಾವಟಿ ಗ್ರಾಮ,ಕೊಡುಗು ಜಿಲ್ಲೆಯ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನವಿಲೇಹಾಳು ಗ್ರಾಮದ ಶ್ರೀ ಎನ್.ಕೆ. ಮಹಬೂಬ್ ಸಾಬ್ ರವರನ್ನು, ಸ್ಥಳೀಯ ಪ್ರತಿಭೆಗಳಾದ ರಾಜ್ಯಮಟ್ಟದ ಬಸವ ಪ್ರಶಸ್ತಿ ಪುರಸ್ಕೃತರು,ಶಿಕ್ಷಕ,ಯುವ ಸಾಹಿತಿಗಳಾದ ಶ್ರೀ ಡಿ.ಸನಾವುಲ್ಲಾ ರವರನ್ನು,ಸುದ್ದಿದಿನ ಕನ್ನಡ ದಿನಪತ್ರಿಕೆಯ ಸಂಪಾದಕರು, ಸಾಹಿತಿಗಳಾದ ಶ್ರೀ ಗೋವರ್ಧನ್ ರವರನ್ನು,ರಾಜ್ಯಮಟ್ಟದ ಉದ್ಯೋನ್ಮುಖ ಕಾವ್ಯ ಚೇತನ ಪ್ರಶಸ್ತಿ ವಿಜೇತರಾದ ಯುವ ಕವಿ ಶ್ರೀ ವಿಜಯ್ ಕುಮಾರ್ ರವರನ್ನು,ಕರ್ನಾಟಕ ಶಿಲ್ಪಾಕಲಾ ಅಕಾಡಮಿ ಪ್ರಶಸ್ತಿ ವಿಜೇತರಾದ ಶ್ರೀ ಸದ್ದಾಂ ಹುಸೇನ್ ಸನ್ಮಾನಿಸಲಾಯಿತು.
ನವಿಲೇಹಾಳು ಕ.ರ.ವೇ ಘಟಕದ ಗೌರವಾಧ್ಯಕ್ಷರಾದ ಶ್ರೀ ಜಿ. ಮಹೇಶ್ವರರವನ್ನು,ಈ ದಿನದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಗೊಂಡ ಹಾಲಕ್ಕಿ ನುಡಿತೈತೆ ಕೃತಿಯ ಲೇಖಕರಾದ,ಸಾಹಿತಿ ಶಿಕ್ಷಕರಾದ ಶ್ರೀ ಸಿ.ಎಚ್.ನಾಗೇಂದ್ರಪ್ಪ ರವರನ್ನು,
ನವಿಲೇಹಾಳು ಘಟಕದ ಕ.ರ.ವೇ ಅಧ್ಯಕ್ಷರಾದ ಶ್ರೀ ಎಸ್.ಶೇಕ್ ಹುಸೇನ್ ರವರನ್ನು,ನವಿಲೇಹಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಬಿ.ಹೆಚ್.ಶಬ್ ನಮ್ ರವರನ್ನು,ಉಪಾಧ್ಯಕ್ಷರಾದ ಶ್ರೀ ಹನುಮಂತಪ್ಪ ರವರನ್ನು,ಸದಸ್ಯರಾದ ಶ್ರೀ ಎಸ್. ಎನ್.ದೇವಣ್ಣ ರವರನ್ನು,ಪದ್ಮಶ್ರೀ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಶಿವಪ್ಪ ರವರನ್ನು ಇದೇ ಸಂದರ್ಭದಲ್ಲಿ ಕ.ರ.ವೇ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಗೌರವಿಸಿ ಸನ್ಮಾನಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಕೃಷ್ಣಪ್ಪ, ಸ್ವಾಗತವನ್ನು ಶಿಕ್ಷಕರಾದ ಶ್ರೀ ಇಸ್ಮಾಯಿಲ್ ರವರು, ವಂದನಾರ್ಪಣೆಯನ್ನು ಶ್ರೀ ಎನ್. ಎಸ್.ಜಗದೀಶ್ ರವರು ನಡೆಸಿಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ23 hours agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ23 hours agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ


