Connect with us

ದಿನದ ಸುದ್ದಿ

ನವಿಲೇಹಾಳಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ; ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ

Published

on

ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ,ಗ್ರಾಮ ಘಟಕ ನವಿಲೇಹಾಳಿನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ ಶನಿವಾರ ನಡೆಯಿತು.

ಕನ್ನಡ ದ್ವಜಾರೋಹಣವನ್ನು ಮಂಗಳೂರು ಘಟಕದ ಆರಕ್ಷಕ ಉಪ ನಿರೀಕ್ಷಕರಾದ ಶ್ರೀಯುತ ಪ್ರದೀಪ್ ರವರು ನಾಡಗೀತೆ ಯೊಂದಿಗೆ ನೆರವೇರಿಸಿದರು.

ಬೃಹತ್ ಗಾತ್ರದ ನಾಡ ಬಾವುಟದ ಮೆರವಣಿಗೆಗೆ ನವಿಲೇಹಾಳು ಪದ್ಮಶ್ರೀ ಪ್ರೌಢ ಶಾಲೆಗೆ ಭೂ ಧಾನ ಮಾಡಿದ ಶ್ರೀಯುತ ಎನ್.ವಿ. ಮಂಜುನಾಥರವರು ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದರಿ ಗ್ರಾಮದ
ಕ.ರ.ವೇ ಗೌರವಾಧ್ಯಕ್ಷರಾದ ಶ್ರೀ ಜಿ.ಮಹೇಶ್ವರಪ್ಪ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಉದಯ ಟಿವಿ ಹರಟೆ ಖ್ಯಾತಿಯ ಹಾಸ್ಯ ಭಾಷಣ
ಕಾರರಾದ ಕಲಬುರುಗಿಯ ಶ್ರೀಮತಿ ಇಂದುಮತಿ ಸಾಲಿಮಠ್ ರವರು ನೆರವೇರಿಸಿ, ತಮ್ಮ ಹಾಸ್ಯ ಭಾಷಣದಿಂದ ಮತ್ತು ಹಾಸ್ಯ ಹಾಡುಗಳಿಂದ ನೆರೆದಿದ್ದ ಗ್ರಾಮಸ್ಥರ ಜನಸ್ತೋಮವನ್ನು ನಗೆ ಕಡಲಿನಲ್ಲಿ ತೇಲಿಸಿದರು. ವರ ನಟ ಡಾ. ರಾಜಕುಮಾರ್ ರವರ ಸುಪುತ್ರ ಕರ್ನಾಟಕ ರತ್ನ,ಚಂದನ ವನದ ಧ್ರುವತಾರೆ ಪುನೀತ್ ರಾಜಕುಮಾರ್ ರವರ ಸಾಮಾಜಿಕ ಸೇವೆಯನ್ನು ತಾವೆಲ್ಲರೂ ಅನುಸರಿಸಬೇಕು, ಅಪ್ಪುತಮ್ಮ ಕಣ್ಣಿನ ಧಾನದಿಂದ ಇಂದು ನಾಲ್ಕು ಜನರ ಜೀವನಕ್ಕೆ ಬೆಳಕಾಗಿದೆ ಎಂದರು.

ಇಂದು ನೀವೆಲ್ಲರೂ ಈ ಕಾರ್ಯಕ್ರಮದಲ್ಲಿ ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಹಮ್ಮಿಕೊಂಡಿರುವುದು ಅತೀವ ಸಂತೋಷ ತಂದಿದೆ,ನಾನು ಕೂಡ ನನ್ನ ದೇಹವನ್ನು ಈಗಾಗಲೇ ತನ್ನ ಮರಣದ ನಂತರ ಧಾನ ಮಾಡಲಿಕ್ಕೆ ನೊಂದಣಿ ಮಾಡಿಕೊಂಡಿರುವ ಸತ್ಯ ಸಂಗತಿಯನ್ನು ತಿಳಿಸಿ,ಇಂದು ನವಿಲೇಹಾಳು ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಊರಿನ ಹಿರಿಯರು- ಕಿರಿಯರು,ಗ್ರಾಮಸ್ಥರು,ಶಾಲಾ ಮಕ್ಕಳು,ಕನ್ನಡ ಮನಗಳು,ಕ.ರ.ವೇ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ತಾಯಿ ಭುವನೇಶ್ವರಿ ಕೃಪೆಗೆ ಪಾತ್ರರಾಗಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಮದ್ಯಪಾನ ಒಳ್ಳೆಯ ಅಭ್ಯಾಸ ಅಲ್ಲ,ಯಾರು ಸಹ ಕುಡಿಯಬೇಡಿ ಎಂಬ ಉತ್ತಮ ಸಂದೇಶವನ್ನು ತಿಳಿಸಿದರು.ಎಲ್ಲರೂ ಸಹ ಕನ್ನಡ ಕಲಿಯಿರಿ,ಕಲಿಸಿರಿ,
ಕನ್ನಡವನ್ನು ಉಳಿಸಿರಿ, ಕನ್ನಡ ನಾಡು-ನುಡಿ ಸೇವೆಗೆ ತಮ್ಮ ಸಮಯ ಮೀಸಲಿಡಿ ಎಂಬುದಾಗಿ ತಿಳಿಸಿದರು.

ಕಾರ್ಯಕ್ರಮದ ಕೇಂದ್ರ ಬಿಂದುಗಳಾದ ನವಿಲೇಹಾಳಿನ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಒಂದಕ್ಕಿಂತ ಒಂದು ಆಕರ್ಷಣೆಯಾಗಿ,ಎಲ್ಲಾರ ಪ್ರಶಂಸೆಯೊಂದಿಗೆ ಮೆಚ್ಚುಗೆ ಗಳಿಸಿದವು.ಮುಖ್ಯ ಅಥಿತಿಗಳಾಗಿ ಆಗಮನಿಸಿದ್ದ ಚಾಮರಾಜನಗರದ ಸಾಹಿತಿಗಳಾದ ಶ್ರೀ ಕೆ.ಶ್ರೀಧರ್(ಕೆ. ಸಿರಿ)ನವಿಲೇಹಾಳುನ ಸಾಹಿತಿಗಳಾದ ಡಾ.ಶ್ರೀ ಷಕೀಬ್ ಕಣದ್ಮನೆ ರವರು ರಚಿಸಿರುವ ನಮ್ಮೂರು ನವಿಲೂರು ಎಂಬ ಕವನ ವಾಚನ ದೊಂದಿಗೆ ತಮ್ಮ ಮಾತನ್ನು ಪ್ರಾರಂಭಿಸಿ, ಇತಿಹಾಸದ ಪುಟಗಳ ಸಂಗ್ರಹದೊಂದಿಗೆ ನವಿಲೂರು ನವಿಲೇಹಾಳು ಆದ ಸಂಗತಿಯನ್ನು ಬಿಚ್ಚಿಟ್ಟರು.ಹಾಗೂ ನವಿಲೇಹಾಳು ಗ್ರಾಮದಲ್ಲಿನ ಹಿಂದೂ-ಮುಸ್ಲಿಂ ಜನತೆಯ ಬಾಂಧವ್ಯವನ್ನು ಕೊಂಡಾಡಿದರು.

ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಪ್ರದೀಪ್ ರವರು ಮಾತನಾಡಿ ತಮ್ಮ ವ್ಯಾಪ್ತಿಗೆ ಬಂದತಹ ಎರಡು ಸೂಕ್ಷ್ಮ ಅಪರಾಧ ತನಿಖೆಗಳನ್ನು ಕೆಲವೇ ದಿನಗಳಲ್ಲಿ ಗುರುತಿಸಿದ್ದಕ್ಕಾಗಿ ಕರ್ನಾಟಕ ಸರ್ಕಾರ ತಮ್ಮ ಸೇವೆ ಗುರುತಿಸಿ,ಮುಖ್ಯ ಮಂತ್ರಿ ಪದಕ ನೀಡಿದ ಸಂಗತಿಯನ್ನು ತಿಳಿಸಿದರು.

ನಮ್ಮೂರು ಎಲ್ಲಾ ಗ್ರಾಮಸ್ಥರ ಪ್ರೋತ್ಸಾಹದೊಂದಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ,ಸಾಮಾಜಿಕವಾಗಿ ಉನ್ನತ ಅಭಿವೃದ್ಧಿಯೊಂದಿಗೆ ಸ್ವಚ್ಛ ಗ್ರಾಮವಾಗಿ ಹೊರಹೊಮ್ಮಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಲಕ್ಕಿ ನುಡಿತೈತೆ ಕೃತಿ ಬಿಡುಗಡೆ

67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನವಿಲೇಹಾಳು ಪ್ರತಿಭೆ ಭದ್ರಾವತಿಯ ನವಚೇತನ ಕನ್ನಡ ಶಾಲೆಯ ಶಿಕ್ಷಕರಾದ ಸಿ.ಎಚ್.ನಾಗೇಂದ್ರಪ್ಪ ರವರ ಚೊಚ್ಚಲ ಕೃತಿಯಾದ ಹಾಲಕ್ಕಿ ನುಡಿತೈತೆ ಕವನ ಸಂಕಲನವನ್ನು
ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ಜಿ.ಮಹೇಶ್ವರಪ್ಪ ರವರು ಮರು ಬಿಡುಗಡೆ ಗೊಳಿಸಿದರು.

ಹಾಲಕ್ಕಿ ನುಡಿತೈತೆ ಕೃತಿ ಬಿಡುಗಡೆ

ಸನ್ಮಾನ ಕಾರ್ಯಕ್ರಮ

ನವಿಲೇಹಾಳಿನ ಪದ್ಮಶ್ರೀ ಪ್ರೌಢ ಶಾಲೆಗೆ ಭೂ ಧಾನ ಮಾಡಿದ ನಿವಾಸಿಗಳಾದ ಶ್ರೀಯುತ ಎನ್.ವಿ.ಮಂಜುನಾಥ್ ಮತ್ತು ಹಿರಿಯರಾದ ಶ್ರೀಯುತ ದೊಡ್ಡ ಹನುಮಪ್ಪ ರವರನ್ನು, ಮಂಗಳೂರು ವಿಭಾಗದ ಆರಕ್ಷಕ ಉಪ ನಿರೀಕ್ಷಕರಾದ ಶ್ರೀ ಪ್ರದೀಪ್ ರವರನ್ನು,ಶ್ರೀಮತಿ ಇಂದುಮತಿ ಸಾಲಿಮಠ ರವರನ್ನು,ಶ್ರೀ ಕೆ.ಶ್ರೀಧರ್ ರವರನ್ನು,ನೇತಾಜಿ ಪ್ರೌಢಶಾಲೆ,
ಬಲ್ಲಮಾವಟಿ ಗ್ರಾಮ,ಕೊಡುಗು ಜಿಲ್ಲೆಯ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನವಿಲೇಹಾಳು ಗ್ರಾಮದ ಶ್ರೀ ಎನ್.ಕೆ. ಮಹಬೂಬ್ ಸಾಬ್ ರವರನ್ನು, ಸ್ಥಳೀಯ ಪ್ರತಿಭೆಗಳಾದ ರಾಜ್ಯಮಟ್ಟದ ಬಸವ ಪ್ರಶಸ್ತಿ ಪುರಸ್ಕೃತರು,ಶಿಕ್ಷಕ,ಯುವ ಸಾಹಿತಿಗಳಾದ ಶ್ರೀ ಡಿ.ಸನಾವುಲ್ಲಾ ರವರನ್ನು,ಸುದ್ದಿದಿನ ಕನ್ನಡ ದಿನಪತ್ರಿಕೆಯ ಸಂಪಾದಕರು, ಸಾಹಿತಿಗಳಾದ ಶ್ರೀ ಗೋವರ್ಧನ್ ರವರನ್ನು,ರಾಜ್ಯಮಟ್ಟದ ಉದ್ಯೋನ್ಮುಖ ಕಾವ್ಯ ಚೇತನ ಪ್ರಶಸ್ತಿ ವಿಜೇತರಾದ ಯುವ ಕವಿ ಶ್ರೀ ವಿಜಯ್ ಕುಮಾರ್ ರವರನ್ನು,ಕರ್ನಾಟಕ ಶಿಲ್ಪಾಕಲಾ ಅಕಾಡಮಿ ಪ್ರಶಸ್ತಿ ವಿಜೇತರಾದ ಶ್ರೀ ಸದ್ದಾಂ ಹುಸೇನ್ ಸನ್ಮಾನಿಸಲಾಯಿತು.

ನವಿಲೇಹಾಳು ಕ.ರ.ವೇ ಘಟಕದ ಗೌರವಾಧ್ಯಕ್ಷರಾದ ಶ್ರೀ ಜಿ. ಮಹೇಶ್ವರರವನ್ನು,ಈ ದಿನದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಗೊಂಡ ಹಾಲಕ್ಕಿ ನುಡಿತೈತೆ ಕೃತಿಯ ಲೇಖಕರಾದ,ಸಾಹಿತಿ ಶಿಕ್ಷಕರಾದ ಶ್ರೀ ಸಿ.ಎಚ್.ನಾಗೇಂದ್ರಪ್ಪ ರವರನ್ನು,
ನವಿಲೇಹಾಳು ಘಟಕದ ಕ.ರ.ವೇ ಅಧ್ಯಕ್ಷರಾದ ಶ್ರೀ ಎಸ್.ಶೇಕ್ ಹುಸೇನ್ ರವರನ್ನು,ನವಿಲೇಹಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಬಿ.ಹೆಚ್.ಶಬ್ ನಮ್ ರವರನ್ನು,ಉಪಾಧ್ಯಕ್ಷರಾದ ಶ್ರೀ ಹನುಮಂತಪ್ಪ ರವರನ್ನು,ಸದಸ್ಯರಾದ ಶ್ರೀ ಎಸ್. ಎನ್.ದೇವಣ್ಣ ರವರನ್ನು,ಪದ್ಮಶ್ರೀ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಶಿವಪ್ಪ ರವರನ್ನು ಇದೇ ಸಂದರ್ಭದಲ್ಲಿ ಕ.ರ.ವೇ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಗೌರವಿಸಿ ಸನ್ಮಾನಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಕೃಷ್ಣಪ್ಪ, ಸ್ವಾಗತವನ್ನು ಶಿಕ್ಷಕರಾದ ಶ್ರೀ ಇಸ್ಮಾಯಿಲ್ ರವರು, ವಂದನಾರ್ಪಣೆಯನ್ನು ಶ್ರೀ ಎನ್. ಎಸ್.ಜಗದೀಶ್ ರವರು ನಡೆಸಿಕೊಟ್ಟರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending