ದಿನದ ಸುದ್ದಿ
ಪತ್ರಕರ್ತ ಸಂಘದ ಅಧ್ಯಕ್ಷರಾಗಿ ತಗಡೂರು ಆಯ್ಕೆ
ಸುದ್ದಿದಿನ, ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ
ತಗಡೂರು ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ತಮ್ಮ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಎನ್.ರಾಜು ಅವರು ನೈತಿಕ ಹೊಣೆವೊತ್ತು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂದಾಯ ಭವನದಲ್ಲಿರುವ ಪತ್ರಕರ್ತರ ಸಂಘದ ಕಚೇರಿಯಲ್ಲಿ ರಾಜ್ಯ ಕಾರ್ಯಕಾರಿ ಸಭೆ ಕರೆಯಲಾಗಿತ್ತು.
ಆರಂಭದಲ್ಲಿ ಎನ್.ರಾಜು ಅವರ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರನ್ನಾಗಿ ಶಿವಾನಂದ ತಗಡೂರು ಅವರನ್ನು ನೇಮಕ ಮಾಡಬೇಕೆಂದು ಕೆಲವರು ಸಲಹೆ ನೀಡಿದರು. ಆದರೆ, ಕಾನೂನಾತ್ಮಕ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಹಾಗೂ ಸಂಘ ಸುಗಮವಾಗಿ ತನ್ನ ಕಾರ್ಯಚಟುವಟಿಕೆ ಮುಂದುವರಿಸಲು ಖಾಯಂ ಅಧ್ಯಕ್ಷರನ್ನು ನೇಮಕ ಮಾಡುವುದು ಉತ್ತಮ ಎಂದು ಬಹುತೇಕ ಸದಸ್ಯರು ಒಕ್ಕೂರಲಿನಿಂದ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕುರಿತು ಗಂಭೀರ, ಸುಧೀರ್ಘ ಚರ್ಚೆ ನಂತರ ಖಾಯಂ ಅಧ್ಯಕ್ಷರನ್ನಾಗಿ ಶಿವಾನಂದ ತಗಡೂರು
ಅವರ ನೇಮಕಕ್ಕೆ ಕಾರ್ಯಕಾರಿಣಿ ಸಭೆ ಸರ್ವಾನುಮತದಿಂದ ಸಮ್ಮತಿಸಿತು. ಸಂಘದ ಘನತೆ-ಗೌರವ ಮತ್ತು ಸಂಘಟನಾತ್ಮಕ, ವೃತ್ತಿಪರ ಪತ್ರಕರ್ತರ ಹಿತ ಕಾಯುವ ನಿಟ್ಟಿನಲ್ಲಿ ಸಂಘವನ್ನು ಶಿವಾನಂದ ತಗಡೂರು ನೇತೃತ್ವದಲ್ಲಿ ಮುನ್ನೆಡೆಸಿಕೊಂಡು ಹೋಗಲು
ಸಭೆ ಒಮ್ಮತದಿಂದ ತೀರ್ಮಾನವನ್ನು ಕೈಗೊಂಡಿತು.
ಸಮಿತಿ ರಚನೆ
ಎನ್.ರಾಜು ವಿರುದ್ಧ ಕೇಳಿ ಬಂದಿರುವ ಹಣಕಾಸಿನ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ತಿಳಿಯಲು ಮತ್ತು ಕಾನೂನಾತ್ಮಕ ಹೋರಾಟಕ್ಕೆ ಮೊದಲು ಆಂತರಿಕ ಲೆಕ್ಕಪರಿಶೋಧನೆ ನಡೆಸಲು ಸಮಿತಿ ರಚಿಸುವಂತೆ ಸಭೆಯಲ್ಲಿ ಸಲಹೆ ಕೇಳಿಬಂದಿತು.
ಈ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ನೇತೃತ್ವದಲ್ಲಿ ಸಮಿತಿ ರಚಿಸಲು ಸಭೆ ಸಮ್ಮತಿ ನೀಡಿತು.
ಇದೀಗ ಕೇಳಿಬರುತ್ತಿರುವ ಆರೋಪಗಳ ಸಂಬಂಧ ಸಂಘದ ಆರ್ಥಿಕ ವ್ಯವಹಾರಗಳ ಕುರಿತು ಆಂತರಿಕ
ಪರಿಶೀಲನೆಗೆ ಹಿರಿಯ ಪತ್ರಕರ್ತರಾದ ಶ್ರೀಯುತ ಗುಡಿಹಳ್ಳಿ ನಾಗರಾಜ್ ಅವರ ನೇತೃತ್ವದಲ್ಲಿ ಐವ್ವರು ಹಿರಿಯ ಸದಸ್ಯರ ಸಮಿತಿಯೊಂದನ್ನು ರಚಿಸಲಾಯಿತು.
ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಕಾನೂನು ತೊಡಕುಗಳಿಗೆ ಅವಕಾಶವಾಗದಂತೆ ಸಂಘವನ್ನು
ನಿಯಮಾನುಸಾರ ನಡೆಸಿಕೊಂಡು ಹೋಗಲು ತೀರ್ಮಾನಿಸಿತು.
ಸಭೆಯಲ್ಲಿ ಉಪಾಧ್ಯಕ್ಷ ಮತ್ತಿಕೆರೆ ಜಯರಾಂ, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು
ವೆಂಕಟೇಶ್, ಮೈಸೂರು ಸಂಘದ ಜಿಲ್ಲಾಧ್ಯಕ್ಷ ಸಿ.ಕೆ.ಮಹೇಂದ್ರ, ಲೋಕೇಶ್ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಶ್ರೀನಿವಾಸ್, ವೆಂಕಟೇಶ್, ಚಂದ್ರಪ್ಪ, ದುರುಗೇಶ್, ಕುಟ್ಟಪ್ಪ, ಲೊಚೇನಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ ಸೇರಿದಂತೆ ರಾಜ್ಯ ಸಂಘದ ಪದಾಧಿಕಾರಿಗಳು, ವಿವಿಧ ಜಿಲ್ಲೆಯ
ಜಿಲ್ಲಾಧ್ಯಕ್ಷರು, ರಾಜ್ಯ ಸಮಿತಿ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಹಾಸನ ಜಿಲ್ಲೆಯಲ್ಲಿ ವಿಜಯಕರ್ನಾಟಕ ಸೇರಿದಂತೆ ವಿವಿಧ
ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ವಿಜಯವಾಣಿ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘದಲ್ಲಿ ಅನೇಕಹುದ್ದೆಗಳನ್ನು ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಎರಡು ಅವಧಿಗೆ ಉಪಾಧ್ಯಕ್ಷರಾಗಿದ್ದ ತಗಡೂರು ಅವರು, ಬರವಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ತಗಡೂರು
ಅವರು, ಸಜ್ಜನ, ಸರಳತೆ, ಉತ್ತಮ ಬರವಣಿಗೆ ಹಿನ್ನೆಲೆಯಲ್ಲಿ ಹೆಚ್ಚು ಜನರ ಪ್ರೀತಿ ಗಳಿಸಿದ್ದಾರೆ.

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ1 day ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ