ದಿನದ ಸುದ್ದಿ
ಸೆ. 16 ರಂದು ಕರುನಾಡ ಹಣತೆ ಕನ್ನಡ ಸಾಹಿತ್ಯ ಸಮ್ಮೇಳನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/09/Chitradurga-suddidina.jpg&description=ಸೆ. 16 ರಂದು ಕರುನಾಡ ಹಣತೆ ಕನ್ನಡ ಸಾಹಿತ್ಯ ಸಮ್ಮೇಳನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/09/Chitradurga-suddidina.jpg&description=ಸೆ. 16 ರಂದು ಕರುನಾಡ ಹಣತೆ ಕನ್ನಡ ಸಾಹಿತ್ಯ ಸಮ್ಮೇಳನ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ, ಚಿತ್ರದುರ್ಗ : ಕರುನಾಡ ಹಣತೆ ಕವಿ ಬಳಗದ ವತಿಯಿಂದ ಪ್ರಥಮ ಕರುನಾಡ ಹಣತೆ ಕನ್ನಡ ಸಾಹಿತ್ಯ ಸಮ್ಮೇಳನವು ಸೆ.16ರಂದು ನಡೆಯಲಿದೆ.
ಸಮ್ಮೇಳನದಲ್ಲಿ ಕರುನಾಡ ಕುವೆಂಪು ರತ್ನ, ತ.ರಾ.ಸು ರತ್ನ ಹಾಗೂ ಕರುನಾಡ ಯುವ ವಾಗ್ಮಿ ಈ ಮೂರು ಪ್ರಶಸ್ತಿಯನ್ನ ಕೊಡಲಿದ್ದು ಮತ್ತು ಕವಿಗೋಷ್ಠಿ ನಡೆಯಲಿದೆ. ಪದಾಧಿಕಾರಿಗಳ ಪದ ಗ್ರಹಣ ಸ್ವೀಕಾರವು ಜರುಗಲಿದೆ.
ಕವಿಗೋಷ್ಠಿಯಲ್ಲಿ ಕವನವಾಚಿಸಿದ ಕವಿಗಳಿಗೆ ಪ್ರಥಮ, ದ್ವೀತಿಯ, ತೃತೀಯ. ಈ ಮೂರು ಕವಿಗೋಷ್ಠಿಯಲ್ಲಿ ಅಯ್ಕೆಯಾದವರಿಗೆ. ಸಮ್ಮೇಳನಾಧ್ಯಕ್ಷರಿಂದ ಸನ್ಮಾನ ಮಾಡಲಾಗುತ್ತದೆ.
ಕಾರ್ಯಕ್ರಮ ನಡೆಯುವ ಸ್ಥಳ
ದಿನಾಂಕ:-16/9/2018
ಸ್ಥಳ:- ಚಿತ್ರದುರ್ಗದ ಕಲ್ಲಿನಕೋಟೆಯ ಮುಂಭಾಗ ಮಹಾರಾಣಿ ಕಾಲೇಜು ಆಡಿಟೋರಿಯಂ ನಲ್ಲಿ ಆಯೋಜಿಸಲಾಗಿದೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸಂಸ್ಥಾಪಕ ಅಧ್ಯಕ್ಷರು
ಕನಕ ಪ್ರೀತೀಶ್
ಕರುನಾಡ ಹಣತೆ ಕವಿ ಬಳಗ (ರಿ)
ಪೋನ್ ನಂ:-8105089330, 7204569522
ರಾಜ್ಯಾದ್ಯಕ್ಷರು
ರಾಜು ಸುಲೇನಹಳ್ಳಿ
ಕರುನಾಡ ಹಣತೆ ಕವಿ ಬಳಗ (ರಿ)
ಪೋನ್ ನಂ:-+919741566313
ರಾಜ್ಯ ಉಪಾಧ್ಯಕ್ಷರು
ವಾಯ್. ಜೆ.ಮಹಿಬೂಬ
ಕರುನಾಡ ಹಣತೆ ಕವಿ ಬಳಗ (ರಿ)
ಫೋನ್ ನಂ : 9535104785
ಕರುನಾಡ ಹಣತೆ ಕವಿ ಬಳಗದಿಂದ ಸಾಹಿತ್ಯ ಸೇವೆಗಾಗಿ ಕವಿಗಳ ಹೆಸರಿನಲ್ಲಿ ಕೊಡಲ್ಪಟ್ಟ ಪ್ರಶಸ್ತಿಗಳನ್ನು ಪಡೆದ ವಿಜೇತರು
1) ಈ ರವೀಶ – ತ, ರಾ, ಸು ರತ್ನ ರಾಜ್ಯ ಪ್ರಶಸ್ತಿ.
2) ಶಿವಕುಮಾರ ಹಿರೇಮಠ –
ತ, ರಾ, ಸು ರತ್ನ ರಾಜ್ಯ ಪ್ರಶಸ್ತಿ.
3) ಶಿವಪ್ರಕಾಶ ರು ಕುಂಬಾರ (ನಂರುಶಿ) – ತ, ರಾ, ಸು ರತ್ನ ರಾಜ್ಯ ಪ್ರಶಸ್ತಿ.
4) ಪುಷ್ಪ ಮಂಜುನಾಥ್ – ತ, ರಾ, ಸು ರತ್ನ ರಾಜ್ಯ ಪ್ರಶಸ್ತಿ.
5)ಗಣಪತಿ ಗೇ ಚಲವಾದಿ – ತ, ರಾ, ಸು ರತ್ನ ರಾಜ್ಯ ಪ್ರಶಸ್ತಿ.
6) ಪ್ರೇಮಾರ್ಜುನ ಐರಾಣಿ – ಕರುನಾಡ ಕುವಂಪು ರತ್ನ ರಾಜ್ಯ ಪ್ರಶಸ್ತಿ.
7) ನಿರಂಜನ ಎ. ಸಿ ಬೇಲೂರು –
ಕರುನಾಡಕುವಂಪು ರತ್ನ ರಾಜ್ಯ ಪ್ರಶಸ್ತಿ.
8) ಡಾ. ಮಹೇಶ್ ಎಸ್ ರುದ್ರಕರ್ -ಕರುನಾಡ ಕುವಂಪು ರತ್ನ ರಾಜ್ಯ ಪ್ರಶಸ್ತಿ.
9) ಅರವಿಂದ ಎನ್. ಪಿ (ಅನಪು) – ಕರುನಾಡ ಕುವಂಪು ರತ್ನ ರಾಜ್ಯ ಪ್ರಶಸ್ತಿ.
10) ಶಾಂತಾ ಶಕುಂತಲ – ಕರುನಾಡ ಕುವಂಪು ರತ್ನ ರಾಜ್ಯ ಪ್ರಶಸ್ತಿ.
11) ಆಂಜನೇಯ ದು ಕವಲೆತ್ತು – ಕರುನಾಡ ಯುವ ವಾಗ್ಮಿ ರಾಜ್ಯ ಪ್ರಶಸ್ತಿ.
12) ಅರ್ಜುನ್ ಶೆಣೈ – ಕರುನಾಡ ಯುವ ವಾಗ್ಮಿ ರಾಜ್ಯ ಪ್ರಶಸ್ತಿ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ16 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

