ದಿನದ ಸುದ್ದಿ
ದಾವಣಗೆರೆಯಲ್ಲಿ ಇಂದು ‘ಕಸಾಪ ಉಳಿಸಿ ಆಂದೋಲನ’ ಸಭೆ : ಶಿವಕುಮಾರಸ್ವಾಮಿ ಕುರ್ಕಿ
ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು ತಂತಾನೆ ಹೆಚ್ಚಿಸಿಕೊಳ್ಳುವುದನ್ನು ವಿರೋಧಿಸಿದ್ದೆವು.
ಅಲ್ಲದೆ ನಾವು ಹೈಕೋರ್ಟ್ ಮೆಟ್ಟಿಲೇರಿ ಬಹುದೂರದ ದ.ಕ. ಜಿಲ್ಲೆಯ ಪುಟ್ಟಗ್ರಾಮ ಕೋಟದಲ್ಲಿ ನಡೆವ ಸಭೆಗೆ ತಡೆಯಾಜ್ಞೆ ತರಲು ಲಾಯರ್ ಬಳ್ಳಾರಿ ರೇವಣ್ಣನವರ ವಕಾಲತ್ತಿನ ಮೂಲಕ ಪ್ರಯತ್ನಿಸಿದ್ದೆವು. ಆಗ ಸಮಯದ ಅಭಾವದಿಂದ ಈ ಕೆಲಸ ಆಗಿರಲಿಲ್ಲ. ಆದರೆ “ಸಹಕಾರಿ ಸಂಘಸಂಸ್ಥೆಗಳ ಉಪ ನೋಂದಣಾಧಿಕಾರಿಗಳಿಗೆ ತಿದ್ದುಪಡಿಮಾಡದಿರಲು ಅರ್ಜಿ ಹಾಕಬಹುದು ” ಎಂಬ ಸಲಹೆಯನ್ನು ಹೈಕೋರ್ಟ್ ಸೂಚಿಸಿತ್ತು.
ಆದ ಕಾರಣ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯಿಂದ ಈ ಕುರಿತ ಅರ್ಜಿಯೊಂದಿಗೆ ನಾವು ಹೈಕೋರ್ಟ್ಗೆ ನೀಡಿದ ಎಲ್ಲಾ ದಾಖಲೆಗಳನ್ನೂ ಬೆಂಗಳೂರು ಮಲ್ಲೇಶ್ವರಂ ಸಹಕಾರ ಭವನದಲ್ಲಿರುವ ಈ ಸಂಘ ಸಂಸ್ಥೆಗಳ ಉಪನೋಂದಾವಣಾಧಿಕಾರಿಗಳ ಕಡೆ ನೀಡಿದ್ದೆವು.
ಜುಲೈ 9ರಂದು ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಡಾ.ಕೋ.ವೆಂ.ರಾಮಕೃಷ್ಣೇಗೌಡರು, ಧಾರವಾಡದ ಲೇಖಕಿ ಹೊರಾಟಗಾರ್ತಿ ಡಾ.ಹನುಮಾಕ್ಷಿ ಗೋಗಿ ಹಾಗೂ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯ ಪರವಾಗಿ ಸಂಚಾಲಕರಾದ ಆರ್. ಶಿವಕುಮಾರಸ್ವಾಮಿ ಕುರ್ಕಿ ಎಂಬ ನಾನು ಇಲ್ಲಿನ ಉಪನಿಬಂಧಕರ ನ್ಯಾಯಾಲಯಕ್ಕೆ ಹಾಜರಾಗಿದ್ದೆವು.
ಆ ವಿಚಾರಣೆಯಲ್ಲಿ ಕಸಾಪ ಅಧ್ಯಕ್ಷರಾದ ಡಾ.ಮನುಬಳಿಗಾರ್ ಹಾಗೂ ಗೌ.ಕಾರ್ಯದರ್ಶಿಗಳು ಉಪಸ್ಥಿತರಿದ್ದು ಮತ್ತೆ ತಮ್ಮ ಅದೇ ಹಳೇ ರಾಗದಲ್ಲಿ ” ಅಧ್ಯಕ್ಷರ ಅಧಿಕಾರ ಅವಧಿಯನ್ನು 3 ರ ಬದಲು 5 ವರ್ಷ ಮಾಡಿಕೊಳ್ಳಲು ಅವಕಾಶ ನೀಡಲು ಕೇಳಿಕೊಂಡರು. ಅಲ್ಲದೆ ಈ ನಿಬಂಧನೆಗಳನ್ನು ಇವತ್ತೇ ಈಗಲೇ ಅನುಮೋದಿಸುವಂತೆ , ತಮ್ಮ ಅಧಿಕಾರ ಅವಧಿಯಿಂದಲೇ ಜಾರಿಯಾಗುವಂತೆ ಕೋಟಾದಲ್ಲಿ ನಡೆಸಿದ ಸಭೆಯ ನಿಬಂಧನೆಗಳನ್ನು ಅನುಮೋದಿಸಬೇಕಾಗಿ ಹಟಕ್ಕೆ ಬಿದ್ದವರಂತೆ ಕೇಳಿಕೊಂಡರು.
ಆಗ ನಾವು ಮೂವರೂ ಸೂಕ್ತ ಕಾರಣಗಳನ್ನು ನೀಡಿ ಅದನ್ನು ಬಲವಾಗಿ ವಿರೋಧಿಸಿದೆವು. ಚುನಾವಣೆ ನಡೆದುದು 3 ವರ್ಷಗಳ ಕಾಲಾವಧಿಗಾಗಿಯೇ ವಿನಃ 5 ವರ್ಷಗಳಿಗಲ್ಲ. ಅಲ್ಲದೆ ನ್ಶಾ.ಶ್ಯಾಮಸಂದರ್ ಆಯೋಗ ಹಿಂದೊಮ್ಮೆ ಹಂ.ಪ.ನಾ. ಅವರು ತಮ್ಮ ಆಧಿಕಾರ ಅವಧಿ ವಿಸ್ತರೀಕರಣ ಮಾಡಿಕೊಳ್ಳಲು ಇವರಂತೆಯೇ ಮುಂದಾದಾಗ ಅದನ್ನು ತಿರಸ್ಕರಿಸಿತ್ತು. ಅಗ ಅವರು ತಿದ್ದಿಕೊಂಡಿದ್ದ 5 ರ ಬದಲು 3 ವರ್ಷವೇ ಇರುವಂತೆ ಸರಕಾರ ನೇಮಿಸಿದ ಆಯೋಗ ತಾಕೀತು ಮಾಡಿತ್ತು’ ಎಂಬ ವಿಷಯವನ್ನು ಕೋರ್ಟ್ ಗಮನಕ್ಕೆ ತಂದೆವು.
ಆಗ ಸ್ಪಂದಿಸಿದ ಉಪನಿಬಂಧಕರು ಅದನ್ನು ಆಸಕ್ತಿಯಿಂದ ಆಲಿಸಿದರು. ಅಲ್ಲದೆ ಬಳಿಗಾರರ ವಾದವನ್ನು ಒಪ್ಪದೆ ಈ ಕುರಿತು ಮಾಹಿತಿ ಸಾಕ್ಷಿಗಳನ್ನು ತೋರಿಸಲು ನಾವು ಮೂವರಿಗೆ ಅವಕಾಶ ಕೊಟ್ಟು ಜು.20 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿಸಿದರು.
ಕನ್ನಡ ವಿದ್ವಾಂಶರು ದಿಗ್ಗಜರು ಕವಿಪುಂಗವರು 100 ವರ್ಷಗಳ ಹಿಂದೆ ನಿಸ್ವಾರ್ಥತೆಯಿಂದ ಕಟ್ಟಿದ ಈ ಕನ್ನಡ ಸಾಹಿತ್ಯ ಹೃನ್ಮಂದಿರ ಇದೀಗ ಹಣ-ಅಧಿಕಾರ ಲಾಲಸೆ ಇರುವ ಮನುಬಳಿಗಾರ ಅವರಂತಹ ಸ್ವಾರ್ಥಪರ ಜನರಿಂದ ಪೂರ್ಣ ಕಲುಷಿತವಾಗಿದೆ.
ಇದರ ಶುದ್ಧೀಕರಣಕ್ಕಾಗಿ ಇಂದು (ಜುಲೈ12) ರ ಸಂಜೆ 6 ಗಂಟೆಗೆ ದಾವಣಗೆರೆಯ ಉದ್ಯಾನವನದ ಕಾವ್ಯ ಮಂಟಪದಲ್ಲಿ “ಕಸಾಪ ಉಳಿಸಿ” ಆಂದೋಲನ ನಡೆಸಲು ಪೂರ್ವಬಾವೀ ಸಮಾಲೋಚನಾ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಸ್ವಯಂಸ್ಫೂರ್ತಿಯಿಂದ ಪಾಲ್ಗೊಂಡು ಕಸಾಪ ಕ್ಕೆ ಬಂದಿರುವ ಈ ಕುತ್ತನ್ನು ದೂರಮಾಡಲು ಸಹಕರಿಸಲು ವಿನಂತಿ.
ಈಗಾಗಲೆ ಧಾರವಾಡ, ಬೆಂಗಳೂರು, ಮಂಗಳೂರು, ಬಳ್ಳಾರಿ, ಮೈಸೂರು, ಮಂಡ್ಯ, ಮುಂತಾದ ಕಡೆ ಆಂಧೋಲನ ನಡೆಸಲು ಹುರಿಗೊಳ್ಳುತ್ತಿದ್ದಾರೆ. ಆದ್ದರಿಂದ ಹಾಲಿ ಕಸಾಪ ಸಮಿತಿಯ ಯಾವುದೇ ಆಸೆ ಆಮಿಷ, ಹಿಂಜರಿಕೆಗೆ ಒಳಗಾಗದೆ ನಾಳೆ ಜು.12 ರ ಗುರುವಾರ ಸಂಜೆ 6.00 ಗಂಟೆಗೆ ಸರಿಯಾಗಿ ದಾವಣಗೆರೆ ವಿದ್ಯಾನಗರದ ಕಾವ್ಯಮಂಟಪ ಉದ್ಯಾನವನಕ್ಕೆ ಆಗಮಿಸಲು ಆಹ್ವಾನಿಸುತ್ತೇವೆ. ತಮ್ಮ ಆತ್ಮೀಯರೆಲ್ಲರಿಗೂ ಈ ಸಂದೇಶವನ್ನು ರವಾನಿಸಲು ವಿನಂತಿ.
ಆರ್.ಶಿವಕುಮಾರಸ್ವಾಮಿ ಕುರ್ಕಿ, ಸಂಚಾಲಕರು, ದಾವಣಗೆರೆ
ಮೊ: 8970948221

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

