ದಿನದ ಸುದ್ದಿ
ದಾವಣಗೆರೆಯಲ್ಲಿ ಇಂದು ‘ಕಸಾಪ ಉಳಿಸಿ ಆಂದೋಲನ’ ಸಭೆ : ಶಿವಕುಮಾರಸ್ವಾಮಿ ಕುರ್ಕಿ

ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು ತಂತಾನೆ ಹೆಚ್ಚಿಸಿಕೊಳ್ಳುವುದನ್ನು ವಿರೋಧಿಸಿದ್ದೆವು.
ಅಲ್ಲದೆ ನಾವು ಹೈಕೋರ್ಟ್ ಮೆಟ್ಟಿಲೇರಿ ಬಹುದೂರದ ದ.ಕ. ಜಿಲ್ಲೆಯ ಪುಟ್ಟಗ್ರಾಮ ಕೋಟದಲ್ಲಿ ನಡೆವ ಸಭೆಗೆ ತಡೆಯಾಜ್ಞೆ ತರಲು ಲಾಯರ್ ಬಳ್ಳಾರಿ ರೇವಣ್ಣನವರ ವಕಾಲತ್ತಿನ ಮೂಲಕ ಪ್ರಯತ್ನಿಸಿದ್ದೆವು. ಆಗ ಸಮಯದ ಅಭಾವದಿಂದ ಈ ಕೆಲಸ ಆಗಿರಲಿಲ್ಲ. ಆದರೆ “ಸಹಕಾರಿ ಸಂಘಸಂಸ್ಥೆಗಳ ಉಪ ನೋಂದಣಾಧಿಕಾರಿಗಳಿಗೆ ತಿದ್ದುಪಡಿಮಾಡದಿರಲು ಅರ್ಜಿ ಹಾಕಬಹುದು ” ಎಂಬ ಸಲಹೆಯನ್ನು ಹೈಕೋರ್ಟ್ ಸೂಚಿಸಿತ್ತು.
ಆದ ಕಾರಣ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯಿಂದ ಈ ಕುರಿತ ಅರ್ಜಿಯೊಂದಿಗೆ ನಾವು ಹೈಕೋರ್ಟ್ಗೆ ನೀಡಿದ ಎಲ್ಲಾ ದಾಖಲೆಗಳನ್ನೂ ಬೆಂಗಳೂರು ಮಲ್ಲೇಶ್ವರಂ ಸಹಕಾರ ಭವನದಲ್ಲಿರುವ ಈ ಸಂಘ ಸಂಸ್ಥೆಗಳ ಉಪನೋಂದಾವಣಾಧಿಕಾರಿಗಳ ಕಡೆ ನೀಡಿದ್ದೆವು.
ಜುಲೈ 9ರಂದು ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಡಾ.ಕೋ.ವೆಂ.ರಾಮಕೃಷ್ಣೇಗೌಡರು, ಧಾರವಾಡದ ಲೇಖಕಿ ಹೊರಾಟಗಾರ್ತಿ ಡಾ.ಹನುಮಾಕ್ಷಿ ಗೋಗಿ ಹಾಗೂ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯ ಪರವಾಗಿ ಸಂಚಾಲಕರಾದ ಆರ್. ಶಿವಕುಮಾರಸ್ವಾಮಿ ಕುರ್ಕಿ ಎಂಬ ನಾನು ಇಲ್ಲಿನ ಉಪನಿಬಂಧಕರ ನ್ಯಾಯಾಲಯಕ್ಕೆ ಹಾಜರಾಗಿದ್ದೆವು.
ಆ ವಿಚಾರಣೆಯಲ್ಲಿ ಕಸಾಪ ಅಧ್ಯಕ್ಷರಾದ ಡಾ.ಮನುಬಳಿಗಾರ್ ಹಾಗೂ ಗೌ.ಕಾರ್ಯದರ್ಶಿಗಳು ಉಪಸ್ಥಿತರಿದ್ದು ಮತ್ತೆ ತಮ್ಮ ಅದೇ ಹಳೇ ರಾಗದಲ್ಲಿ ” ಅಧ್ಯಕ್ಷರ ಅಧಿಕಾರ ಅವಧಿಯನ್ನು 3 ರ ಬದಲು 5 ವರ್ಷ ಮಾಡಿಕೊಳ್ಳಲು ಅವಕಾಶ ನೀಡಲು ಕೇಳಿಕೊಂಡರು. ಅಲ್ಲದೆ ಈ ನಿಬಂಧನೆಗಳನ್ನು ಇವತ್ತೇ ಈಗಲೇ ಅನುಮೋದಿಸುವಂತೆ , ತಮ್ಮ ಅಧಿಕಾರ ಅವಧಿಯಿಂದಲೇ ಜಾರಿಯಾಗುವಂತೆ ಕೋಟಾದಲ್ಲಿ ನಡೆಸಿದ ಸಭೆಯ ನಿಬಂಧನೆಗಳನ್ನು ಅನುಮೋದಿಸಬೇಕಾಗಿ ಹಟಕ್ಕೆ ಬಿದ್ದವರಂತೆ ಕೇಳಿಕೊಂಡರು.
ಆಗ ನಾವು ಮೂವರೂ ಸೂಕ್ತ ಕಾರಣಗಳನ್ನು ನೀಡಿ ಅದನ್ನು ಬಲವಾಗಿ ವಿರೋಧಿಸಿದೆವು. ಚುನಾವಣೆ ನಡೆದುದು 3 ವರ್ಷಗಳ ಕಾಲಾವಧಿಗಾಗಿಯೇ ವಿನಃ 5 ವರ್ಷಗಳಿಗಲ್ಲ. ಅಲ್ಲದೆ ನ್ಶಾ.ಶ್ಯಾಮಸಂದರ್ ಆಯೋಗ ಹಿಂದೊಮ್ಮೆ ಹಂ.ಪ.ನಾ. ಅವರು ತಮ್ಮ ಆಧಿಕಾರ ಅವಧಿ ವಿಸ್ತರೀಕರಣ ಮಾಡಿಕೊಳ್ಳಲು ಇವರಂತೆಯೇ ಮುಂದಾದಾಗ ಅದನ್ನು ತಿರಸ್ಕರಿಸಿತ್ತು. ಅಗ ಅವರು ತಿದ್ದಿಕೊಂಡಿದ್ದ 5 ರ ಬದಲು 3 ವರ್ಷವೇ ಇರುವಂತೆ ಸರಕಾರ ನೇಮಿಸಿದ ಆಯೋಗ ತಾಕೀತು ಮಾಡಿತ್ತು’ ಎಂಬ ವಿಷಯವನ್ನು ಕೋರ್ಟ್ ಗಮನಕ್ಕೆ ತಂದೆವು.
ಆಗ ಸ್ಪಂದಿಸಿದ ಉಪನಿಬಂಧಕರು ಅದನ್ನು ಆಸಕ್ತಿಯಿಂದ ಆಲಿಸಿದರು. ಅಲ್ಲದೆ ಬಳಿಗಾರರ ವಾದವನ್ನು ಒಪ್ಪದೆ ಈ ಕುರಿತು ಮಾಹಿತಿ ಸಾಕ್ಷಿಗಳನ್ನು ತೋರಿಸಲು ನಾವು ಮೂವರಿಗೆ ಅವಕಾಶ ಕೊಟ್ಟು ಜು.20 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿಸಿದರು.
ಕನ್ನಡ ವಿದ್ವಾಂಶರು ದಿಗ್ಗಜರು ಕವಿಪುಂಗವರು 100 ವರ್ಷಗಳ ಹಿಂದೆ ನಿಸ್ವಾರ್ಥತೆಯಿಂದ ಕಟ್ಟಿದ ಈ ಕನ್ನಡ ಸಾಹಿತ್ಯ ಹೃನ್ಮಂದಿರ ಇದೀಗ ಹಣ-ಅಧಿಕಾರ ಲಾಲಸೆ ಇರುವ ಮನುಬಳಿಗಾರ ಅವರಂತಹ ಸ್ವಾರ್ಥಪರ ಜನರಿಂದ ಪೂರ್ಣ ಕಲುಷಿತವಾಗಿದೆ.
ಇದರ ಶುದ್ಧೀಕರಣಕ್ಕಾಗಿ ಇಂದು (ಜುಲೈ12) ರ ಸಂಜೆ 6 ಗಂಟೆಗೆ ದಾವಣಗೆರೆಯ ಉದ್ಯಾನವನದ ಕಾವ್ಯ ಮಂಟಪದಲ್ಲಿ “ಕಸಾಪ ಉಳಿಸಿ” ಆಂದೋಲನ ನಡೆಸಲು ಪೂರ್ವಬಾವೀ ಸಮಾಲೋಚನಾ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಸ್ವಯಂಸ್ಫೂರ್ತಿಯಿಂದ ಪಾಲ್ಗೊಂಡು ಕಸಾಪ ಕ್ಕೆ ಬಂದಿರುವ ಈ ಕುತ್ತನ್ನು ದೂರಮಾಡಲು ಸಹಕರಿಸಲು ವಿನಂತಿ.
ಈಗಾಗಲೆ ಧಾರವಾಡ, ಬೆಂಗಳೂರು, ಮಂಗಳೂರು, ಬಳ್ಳಾರಿ, ಮೈಸೂರು, ಮಂಡ್ಯ, ಮುಂತಾದ ಕಡೆ ಆಂಧೋಲನ ನಡೆಸಲು ಹುರಿಗೊಳ್ಳುತ್ತಿದ್ದಾರೆ. ಆದ್ದರಿಂದ ಹಾಲಿ ಕಸಾಪ ಸಮಿತಿಯ ಯಾವುದೇ ಆಸೆ ಆಮಿಷ, ಹಿಂಜರಿಕೆಗೆ ಒಳಗಾಗದೆ ನಾಳೆ ಜು.12 ರ ಗುರುವಾರ ಸಂಜೆ 6.00 ಗಂಟೆಗೆ ಸರಿಯಾಗಿ ದಾವಣಗೆರೆ ವಿದ್ಯಾನಗರದ ಕಾವ್ಯಮಂಟಪ ಉದ್ಯಾನವನಕ್ಕೆ ಆಗಮಿಸಲು ಆಹ್ವಾನಿಸುತ್ತೇವೆ. ತಮ್ಮ ಆತ್ಮೀಯರೆಲ್ಲರಿಗೂ ಈ ಸಂದೇಶವನ್ನು ರವಾನಿಸಲು ವಿನಂತಿ.
ಆರ್.ಶಿವಕುಮಾರಸ್ವಾಮಿ ಕುರ್ಕಿ, ಸಂಚಾಲಕರು, ದಾವಣಗೆರೆ
ಮೊ: 8970948221
ದಿನದ ಸುದ್ದಿ
ಅಪಘಾತ | ಗೋವಾಕ್ಕೆ ಹೊರಟಿದ್ದ ದಾವಣಗೆರೆ ಲೇಡಿಸ್ ಕ್ಲಬ್ ನ 13 ಮಂದಿ ದುರ್ಮರಣ

ಸುದ್ದಿದಿನ,ಧಾರವಾಡ: ದಾವಣಗೆರೆಯಿಂದ ಗೋವಾಕ್ಕೆ ಟೆಂಪೋ ಟ್ರಾವೆಲರ್ ನಲ್ಲಿ ಹೋಗುತ್ತಿದ್ದ ಸಂದರ್ಭ, ಟೆಂಪೋ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಒಟ್ಟು 13 ಜನ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಹೊರವಲಯದ ಇಟ್ಟಿಗಟ್ಟಿಯ ಬೈಪಾಸ್ ಹತ್ತಿರ ಬೆಳಗಿನ ಜಾವ ನಡೆದಿದೆ.
ಸಂಕ್ರಾಂತಿ ಹಬ್ಬದ ಪ್ರಯುಕ್ತ ದಾವಣಗೆರೆಯ ಲೇಡಿಸ್ ಕ್ಲಬ್ ನ ವತಿಯಿಂದ ಒಟ್ಟು 13 ಜನ ಮಹಿಳೆಯರು ಗೋವಾಕ್ಕೆ ಹೊರಟಿದ್ದು, ಧಾರವಾಡ ಜಿಲ್ಲೆಯ ಹೊರವಲಯದ ಇಟ್ಟಿಗಟ್ಟಿಯ ಬೈಪಾಸ್ ಹತ್ತಿರ ಬೆಳಗ್ಗೆ 3.30 ರ ಸುಮಾರು ಎದುರಿನಿಂದ ಬಂದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.
ಈ ಭೀಕರ ಅಪಘಾತದಲ್ಲಿ ರಾಜೇಶ್ವರಿ, ಡಾ .ವೀಣಾ ಪ್ರಕಾಶ್, ಮಂಜುಳಾ ಎಂಬುವರು ಹಾಗು ಟಿಪ್ಪರ್ ಚಾಲಕ ಸೇರಿದಂತೆ 10 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಟ್ಟು 13 ಜನ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬುಡಾ ನಿವೇಶನಗಳ ಹರಾಜು : 9.67ಕೋಟಿ ಆದಾಯ

ಸುದ್ದಿದಿನ,ಬಳ್ಳಾರಿ : ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದ ರಾಘವ ಕಲಾಮಂದಿರದಲ್ಲಿ ಪ್ರಾಧಿಕಾರದಲ್ಲಿ ಲಭ್ಯವಿರುವ 49 ವಾಸಯೋಗ್ಯ ಮತ್ತು ವಾಣಿಜ್ಯ ನಿವೇಶನಗಳ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ 3 ಖಾಲಿ ಜಾಗದ ಬಹಿರಂಗ ಹರಾಜು ಪ್ರಕ್ರಿಯೆಗೆ ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಸೋಮವಾರ ಚಾಲನೆ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಘವ ಕಲಾಮಂದಿರದಲ್ಲಿ ನಡೆದ ವಾಸಯೋಗ್ಯ ನಿವೇಶನ, ವಾಣಿಜ್ಯ ನಿವೇಶನ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ವಾಣಿಜ್ಯ ಸಂಕೀರ್ಣದಲ್ಲಿನ ಖಾಲಿ ಜಾಗಗಳ ಬಹಿರಂಗ ಹರಾಜಿನಲ್ಲಿ ಪ್ರಾಧಿಕಾರಕ್ಕೆ ಒಟ್ಟು 9.67 ಕೋಟಿ ರೂಪಾಯಿ ಆದಾಯ ಬಂದಿರುತ್ತದೆ.
ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತ ವೀರೇಂದ್ರ ಕುಂದಗೋಳ, ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಶಂಕರ್ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಇದ್ದರು. ನಗರದ ಹಲವಡೆಯಿಂದ ಬಂದಿದ್ದ ನೂರಕ್ಕೂ ಹೆಚ್ಚು ಜನರು ತಲಾ 25 ಸಾವಿರ ಮುಂಗಡ ಹಣ ಪಾವತಿಸಿ ಹರಾಜಿನಲ್ಲಿ ಭಾಗವಹಿಸಿದ್ದರು. ಕೋವಿಡ್ ನಿಯಮಗಳನ್ನು ಪಾಲಿಸಿ ಹರಾಜು ಪ್ರಕ್ರಿಯೆ ನೆರವೇರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?

- ರಘೋತ್ತಮ ಹೊ.ಬ
ಮೊನ್ನೆ ಒಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಿದ್ದೆ. ಶೋಷಿತ ಸಮುದಾಯದ ಒಬ್ಬ ಕಾದಂಬರಿ ಕಾರರ ಕಾದಂಬರಿ ಬಿಡುಗಡೆ ಸಮಾರಂಭ ಅದು. ಪ್ರೇಕ್ಷಕನಾಗಿ ಭಾಷಣ ಕೇಳುತ್ತ ಕುಳಿತಿದ್ದೆ. ಹಾಗೆ ಕುಳಿತು ಭಾಷಣ ಕೇಳಿ ಕಲಿಯುವುದು ಸಾಹಿತ್ಯಾಸಕ್ತನಾಗಿ ನನ್ನ ಹವ್ಯಾಸ. ಅಂದಹಾಗೆ ಅತಿಥಿಗಳೊಬ್ಬರು ಭಾಷಣ ಮಾಡುತ್ತ ದಲಿತರು ಪರ್ಯಾಯ ಸಂಸ್ಕೃತಿ ಕಟ್ಟಿಕೊಳ್ಳುವ ಅಗತ್ಯವಿದೆ ಅಂದರು.
ನನಗೆ ಆಶ್ಚರ್ಯ! ಯಾಕೆಂದರೆ ಆಗಷ್ಟೇ ನಾನು ಬೌದ್ಧ ವಿಹಾರ ಕ್ಕೆ ಹೋಗಿ ವಾರದ ಪ್ರಾರ್ಥನೆ ಮುಗಿಸಿ ಬಂದಿದ್ದೆ. ಈ ನಡುವೆ ಇವರ್ಯಾರು ಪರ್ಯಾಯ ಸಂಸ್ಕೃತಿ ಎಂದು ಹೇಳುತ್ತಿದ್ದಾರಲ್ಲ! ಅಂದಹಾಗೆ ಆ ಭಾಷಣಕಾರರು ತಾವು ಅದ್ಯಾವುದೋ (ಶತಮಾನ) ದಲ್ಲಿ ಮನುವಾದದಿಂದ ಅದೇನೋ ಬರೆದು ವಿಮೋಚನೆ ಗೊಂಡಿದ್ದೇವೆ ಎಂದರು.
ಪಾಪ, ಅವರು ಸನಾತನ ಎಂಬ ಈಚಿನ ಜಾಹೀರಾತೊಂದನ್ನು ನೋಡಿದ ಹಾಗೆ ಕಂಡಿರಲಿಲ್ಲ! ಆದರೂ ದಲಿತರಿಗೆ ಪರ್ಯಾಯ ಸಂಸ್ಕೃತಿ ಎಂದು ಹೇಳುತ್ತಿದ್ದಾರಲ್ಲ? ಹಾಗಿದ್ದರೆ ಲೌಕಿಕ ವಾಗಿ ಇವರು ಗಮನಿಸಿರುವುದಾಸರೂ ಏನು ಎಂದು ಪ್ರಶ್ನೆ ಹಿಡಿದು ಕುಳಿತೆ.
ಹೌದು, ನಾನು ಅಲ್ಲೇ ಹೇಳಿಬಿಡಬಹುದಿತ್ತು. ಆದರೆ ಕಾದಂಬರಿಕಾರರಿಗೆ ಮುಜುಗರ ಆಗಬಹುದು ಎಂದು ಸುಮ್ಮನಾದೆ. ಏಕೆಂದರೆ ದಲಿತರ ಪರ್ಯಾಯ ಸಂಸ್ಕೃತಿ ಅದು ಬೌದ್ಧ ಸಂಸ್ಕೃತಿ ಅಲ್ಲವೆ? ದಲಿತ ಕೇರಿಗಳು ಇಂದು ಬುದ್ಧರ ಹಬ್ಬಗಳು, ಬೌದ್ಧ ಧಾರ್ಮಿಕ ಆಚರಣೆಗಳ ಆಗರವಾಗುತ್ತಿರುವುದನ್ನು ಸದರಿ ಭಾಷಣಕಾರರು ಗಮನಿಸಿಲ್ಲವೆ ಎನಿಸಿತು.
ಸದರಿ ಭಾಷಣಕಾರರು 70 ರ ದಶಕದ ದಲಿತ ಚಳುವಳಿಯ ಸಂದರ್ಭಗಳನ್ನು, ಆ ಸಂದರ್ಭದಲ್ಲಿ ತಿಂದದ್ದು, ಕುಡಿದದ್ದು, ಇಸ್ಪೀಟು ಆಡಿದ್ದು ಎಲ್ಲವನ್ನೂ ಹೇಳಿದರು! ಅರೆ, ಅದು 50 ವರ್ಷಗಳ ಹಿಂದಿನ ಕತೆ. ಮನುಷ್ಯ ಬದಲಾಗಲೇ ಬೇಕಲ್ಲವೆ? ಆ ಬದಲಾದ ಸಂದರ್ಭದಲ್ಲಿ ಈಚಿನ ವರ್ಷಗಳಲ್ಲಿ ನಡೆದಿರುವ ಬೆಳವಣಿಗೆಗಳನ್ನು ಆ ಸಾಹಿತಿ ಅಥವಾ ಅವರಂತಹವರು ಯಾಕೆ ಹೇಳುತ್ತಿಲ್ಲ? ಅಥವಾ ಹೇಳಲಿಲ್ಲ?
ಉದಾಹರಣೆಗೆ ಮೊನ್ನೆ ಮೈಸೂರು ಮತ್ತು ಚಾಮರಾಜನಗರಗಳಲ್ಲಿ ನಮ್ಮ ಮಹಿಳೆಯರು ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಿದರು. ಆಗ ಆ ಸಮಾರಂಭಗಳಲ್ಲಿ ಮೈದುಂಬಿಕೊಂಡಿದ್ದು ಬುದ್ಧ ಸಂಸ್ಕೃತಿ. ಸಾವಿತ್ರಿಬಾಯಿ ಫುಲೆಯವರೇನು ದಲಿತರಲ್ಲ. ಕಾನ್ಷೀರಾಮ್ ರವರು ಹೆಕ್ಕಿ ತೆಗೆದ ಬಹುಜನ ಚಳುವಳಿಯಲ್ಲಿ ಬರುವ ಹಿಂದುಳಿದ ವರ್ಗದ ಸಾಧಕಿ ಮಹಿಳೆಯವರು.
ಈ ಕಾರ್ಯಕ್ರಮಗಳ ವರದಿ ಎಲ್ಲಾ ಪತ್ರಿಕೆಗಳಲ್ಲೂ, ಸಾಮಾಜಿಕ ಮಾಧ್ಯಮಗಳಲ್ಲು ರಾರಾಜಿಸಿದೆ. ಪ್ರಶ್ನೆ ಎಂದರೆ ಇದನ್ನೂ ಸದರಿ ಸಾಹಿತಿ ಕಂ ಭಾಷಣಕಾರರು ಗಮನಿಸಿಲ್ಲವೆಂದರೆ..? ದಲಿತರಿಗೆ ಪರ್ಯಾಯ ಸಂಸ್ಕೃತಿ ಹುಡುಕಿಕೊಳ್ಳುವ ಸಲಹೆ ನೀಡುತ್ತಾರೆಂದರೆ..?
ಒಂದು ಸಲಹೆಯೆಂದರೆ, ಯಾರೇ ಆಗಲಿ ಕಾಲದ ಸುತ್ತಾ ಅದಕ್ಕೆ ತಕ್ಕಂತೆ ಹೇಗೆ ಬದಲಾವಣೆ ಆಗುತ್ತಿದೆ, ಏನು ಬದಲಾವಣೆ ಆಗುತ್ತಿದೆ ಎಂಬುದನ್ನು ಗಮನಿಸಬೇಕು. ಹಾಗೆಯೇ ಆ ಬದಲಾವಣೆಗೆ ತಕ್ಕಂತೆ ಅದನ್ನು ಗಮನಿಸಿ ಮಾತನಾಡಬೇಕು, ಬರೆಯಬೇಕು. ಇದರ ಬದಲು ಹಳೆಯ 50 ವರ್ಷ, 60 ವರ್ಷ ಹಿಂದಿನ ಪರಿಸ್ಥಿತಿ ನೆನಪಿಸಿಕೊಂಡು ಮಾತನಾಡಿದರೆ ಅಂತಹವರು update ಆಗಿಲ್ಲ ಎಂದು ಕೊಳ್ಳಬೇಕಾಗುತ್ತದೆ. ದಲಿತರಂತು update ಆಗಿದ್ದಾರೆ, ಆಗುತ್ತಿದ್ದಾರೆ ಅದು ಬೌದ್ಧ ಸಂಸ್ಕೃತಿಗೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ3 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ಲೈಫ್ ಸ್ಟೈಲ್3 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ2 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ6 days ago
ಶಹಜಹಾನ್ ಪುರ ಗಡಿಯಲ್ಲಿ ಲಾಠಿ, ವಾಟರ್ ಕ್ಯಾನನ್ಗೆ ಜಗ್ಗದೆ ಕೂತ ರೈತ ಮಕ್ಕಳು
-
ದಿನದ ಸುದ್ದಿ3 days ago
ಮೂರೂ ಕೃಷಿ ಕಾಯ್ದೆಗಳ ಜಾರಿಯನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್..!
-
ದಿನದ ಸುದ್ದಿ2 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ದಿನದ ಸುದ್ದಿ4 days ago
ಹೊಸ ಚರಿತ್ರೆ ಬರೆಯಲಿರುವ ಜನವರಿ-26
-
ದಿನದ ಸುದ್ದಿ2 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!