ದಿನದ ಸುದ್ದಿ
ದಾವಣಗೆರೆಯಲ್ಲಿ ಇಂದು ‘ಕಸಾಪ ಉಳಿಸಿ ಆಂದೋಲನ’ ಸಭೆ : ಶಿವಕುಮಾರಸ್ವಾಮಿ ಕುರ್ಕಿ
ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು ತಂತಾನೆ ಹೆಚ್ಚಿಸಿಕೊಳ್ಳುವುದನ್ನು ವಿರೋಧಿಸಿದ್ದೆವು.
ಅಲ್ಲದೆ ನಾವು ಹೈಕೋರ್ಟ್ ಮೆಟ್ಟಿಲೇರಿ ಬಹುದೂರದ ದ.ಕ. ಜಿಲ್ಲೆಯ ಪುಟ್ಟಗ್ರಾಮ ಕೋಟದಲ್ಲಿ ನಡೆವ ಸಭೆಗೆ ತಡೆಯಾಜ್ಞೆ ತರಲು ಲಾಯರ್ ಬಳ್ಳಾರಿ ರೇವಣ್ಣನವರ ವಕಾಲತ್ತಿನ ಮೂಲಕ ಪ್ರಯತ್ನಿಸಿದ್ದೆವು. ಆಗ ಸಮಯದ ಅಭಾವದಿಂದ ಈ ಕೆಲಸ ಆಗಿರಲಿಲ್ಲ. ಆದರೆ “ಸಹಕಾರಿ ಸಂಘಸಂಸ್ಥೆಗಳ ಉಪ ನೋಂದಣಾಧಿಕಾರಿಗಳಿಗೆ ತಿದ್ದುಪಡಿಮಾಡದಿರಲು ಅರ್ಜಿ ಹಾಕಬಹುದು ” ಎಂಬ ಸಲಹೆಯನ್ನು ಹೈಕೋರ್ಟ್ ಸೂಚಿಸಿತ್ತು.
ಆದ ಕಾರಣ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯಿಂದ ಈ ಕುರಿತ ಅರ್ಜಿಯೊಂದಿಗೆ ನಾವು ಹೈಕೋರ್ಟ್ಗೆ ನೀಡಿದ ಎಲ್ಲಾ ದಾಖಲೆಗಳನ್ನೂ ಬೆಂಗಳೂರು ಮಲ್ಲೇಶ್ವರಂ ಸಹಕಾರ ಭವನದಲ್ಲಿರುವ ಈ ಸಂಘ ಸಂಸ್ಥೆಗಳ ಉಪನೋಂದಾವಣಾಧಿಕಾರಿಗಳ ಕಡೆ ನೀಡಿದ್ದೆವು.
ಜುಲೈ 9ರಂದು ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಡಾ.ಕೋ.ವೆಂ.ರಾಮಕೃಷ್ಣೇಗೌಡರು, ಧಾರವಾಡದ ಲೇಖಕಿ ಹೊರಾಟಗಾರ್ತಿ ಡಾ.ಹನುಮಾಕ್ಷಿ ಗೋಗಿ ಹಾಗೂ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯ ಪರವಾಗಿ ಸಂಚಾಲಕರಾದ ಆರ್. ಶಿವಕುಮಾರಸ್ವಾಮಿ ಕುರ್ಕಿ ಎಂಬ ನಾನು ಇಲ್ಲಿನ ಉಪನಿಬಂಧಕರ ನ್ಯಾಯಾಲಯಕ್ಕೆ ಹಾಜರಾಗಿದ್ದೆವು.
ಆ ವಿಚಾರಣೆಯಲ್ಲಿ ಕಸಾಪ ಅಧ್ಯಕ್ಷರಾದ ಡಾ.ಮನುಬಳಿಗಾರ್ ಹಾಗೂ ಗೌ.ಕಾರ್ಯದರ್ಶಿಗಳು ಉಪಸ್ಥಿತರಿದ್ದು ಮತ್ತೆ ತಮ್ಮ ಅದೇ ಹಳೇ ರಾಗದಲ್ಲಿ ” ಅಧ್ಯಕ್ಷರ ಅಧಿಕಾರ ಅವಧಿಯನ್ನು 3 ರ ಬದಲು 5 ವರ್ಷ ಮಾಡಿಕೊಳ್ಳಲು ಅವಕಾಶ ನೀಡಲು ಕೇಳಿಕೊಂಡರು. ಅಲ್ಲದೆ ಈ ನಿಬಂಧನೆಗಳನ್ನು ಇವತ್ತೇ ಈಗಲೇ ಅನುಮೋದಿಸುವಂತೆ , ತಮ್ಮ ಅಧಿಕಾರ ಅವಧಿಯಿಂದಲೇ ಜಾರಿಯಾಗುವಂತೆ ಕೋಟಾದಲ್ಲಿ ನಡೆಸಿದ ಸಭೆಯ ನಿಬಂಧನೆಗಳನ್ನು ಅನುಮೋದಿಸಬೇಕಾಗಿ ಹಟಕ್ಕೆ ಬಿದ್ದವರಂತೆ ಕೇಳಿಕೊಂಡರು.
ಆಗ ನಾವು ಮೂವರೂ ಸೂಕ್ತ ಕಾರಣಗಳನ್ನು ನೀಡಿ ಅದನ್ನು ಬಲವಾಗಿ ವಿರೋಧಿಸಿದೆವು. ಚುನಾವಣೆ ನಡೆದುದು 3 ವರ್ಷಗಳ ಕಾಲಾವಧಿಗಾಗಿಯೇ ವಿನಃ 5 ವರ್ಷಗಳಿಗಲ್ಲ. ಅಲ್ಲದೆ ನ್ಶಾ.ಶ್ಯಾಮಸಂದರ್ ಆಯೋಗ ಹಿಂದೊಮ್ಮೆ ಹಂ.ಪ.ನಾ. ಅವರು ತಮ್ಮ ಆಧಿಕಾರ ಅವಧಿ ವಿಸ್ತರೀಕರಣ ಮಾಡಿಕೊಳ್ಳಲು ಇವರಂತೆಯೇ ಮುಂದಾದಾಗ ಅದನ್ನು ತಿರಸ್ಕರಿಸಿತ್ತು. ಅಗ ಅವರು ತಿದ್ದಿಕೊಂಡಿದ್ದ 5 ರ ಬದಲು 3 ವರ್ಷವೇ ಇರುವಂತೆ ಸರಕಾರ ನೇಮಿಸಿದ ಆಯೋಗ ತಾಕೀತು ಮಾಡಿತ್ತು’ ಎಂಬ ವಿಷಯವನ್ನು ಕೋರ್ಟ್ ಗಮನಕ್ಕೆ ತಂದೆವು.
ಆಗ ಸ್ಪಂದಿಸಿದ ಉಪನಿಬಂಧಕರು ಅದನ್ನು ಆಸಕ್ತಿಯಿಂದ ಆಲಿಸಿದರು. ಅಲ್ಲದೆ ಬಳಿಗಾರರ ವಾದವನ್ನು ಒಪ್ಪದೆ ಈ ಕುರಿತು ಮಾಹಿತಿ ಸಾಕ್ಷಿಗಳನ್ನು ತೋರಿಸಲು ನಾವು ಮೂವರಿಗೆ ಅವಕಾಶ ಕೊಟ್ಟು ಜು.20 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿಸಿದರು.
ಕನ್ನಡ ವಿದ್ವಾಂಶರು ದಿಗ್ಗಜರು ಕವಿಪುಂಗವರು 100 ವರ್ಷಗಳ ಹಿಂದೆ ನಿಸ್ವಾರ್ಥತೆಯಿಂದ ಕಟ್ಟಿದ ಈ ಕನ್ನಡ ಸಾಹಿತ್ಯ ಹೃನ್ಮಂದಿರ ಇದೀಗ ಹಣ-ಅಧಿಕಾರ ಲಾಲಸೆ ಇರುವ ಮನುಬಳಿಗಾರ ಅವರಂತಹ ಸ್ವಾರ್ಥಪರ ಜನರಿಂದ ಪೂರ್ಣ ಕಲುಷಿತವಾಗಿದೆ.
ಇದರ ಶುದ್ಧೀಕರಣಕ್ಕಾಗಿ ಇಂದು (ಜುಲೈ12) ರ ಸಂಜೆ 6 ಗಂಟೆಗೆ ದಾವಣಗೆರೆಯ ಉದ್ಯಾನವನದ ಕಾವ್ಯ ಮಂಟಪದಲ್ಲಿ “ಕಸಾಪ ಉಳಿಸಿ” ಆಂದೋಲನ ನಡೆಸಲು ಪೂರ್ವಬಾವೀ ಸಮಾಲೋಚನಾ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಸ್ವಯಂಸ್ಫೂರ್ತಿಯಿಂದ ಪಾಲ್ಗೊಂಡು ಕಸಾಪ ಕ್ಕೆ ಬಂದಿರುವ ಈ ಕುತ್ತನ್ನು ದೂರಮಾಡಲು ಸಹಕರಿಸಲು ವಿನಂತಿ.
ಈಗಾಗಲೆ ಧಾರವಾಡ, ಬೆಂಗಳೂರು, ಮಂಗಳೂರು, ಬಳ್ಳಾರಿ, ಮೈಸೂರು, ಮಂಡ್ಯ, ಮುಂತಾದ ಕಡೆ ಆಂಧೋಲನ ನಡೆಸಲು ಹುರಿಗೊಳ್ಳುತ್ತಿದ್ದಾರೆ. ಆದ್ದರಿಂದ ಹಾಲಿ ಕಸಾಪ ಸಮಿತಿಯ ಯಾವುದೇ ಆಸೆ ಆಮಿಷ, ಹಿಂಜರಿಕೆಗೆ ಒಳಗಾಗದೆ ನಾಳೆ ಜು.12 ರ ಗುರುವಾರ ಸಂಜೆ 6.00 ಗಂಟೆಗೆ ಸರಿಯಾಗಿ ದಾವಣಗೆರೆ ವಿದ್ಯಾನಗರದ ಕಾವ್ಯಮಂಟಪ ಉದ್ಯಾನವನಕ್ಕೆ ಆಗಮಿಸಲು ಆಹ್ವಾನಿಸುತ್ತೇವೆ. ತಮ್ಮ ಆತ್ಮೀಯರೆಲ್ಲರಿಗೂ ಈ ಸಂದೇಶವನ್ನು ರವಾನಿಸಲು ವಿನಂತಿ.
ಆರ್.ಶಿವಕುಮಾರಸ್ವಾಮಿ ಕುರ್ಕಿ, ಸಂಚಾಲಕರು, ದಾವಣಗೆರೆ
ಮೊ: 8970948221
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243