ದಿನದ ಸುದ್ದಿ
ದಾವಣಗೆರೆಯಲ್ಲಿ ಇಂದು ‘ಕಸಾಪ ಉಳಿಸಿ ಆಂದೋಲನ’ ಸಭೆ : ಶಿವಕುಮಾರಸ್ವಾಮಿ ಕುರ್ಕಿ
ದಾವಣಗೆರೆಯ ಕಸಾಪ ಆಜೀವ ಸದಸ್ಯರ ಸಮಾನ ಮನಸ್ಕರ ವೇದಿಕೆಯು 11 ಮಾರ್ಚ್ 2018 ರಂದು ಇಲ್ಲಿನ ಕನ್ನಡ ಭವನದ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹಾಲಿ ಇರುವ ಬೈಲಾವನ್ನು ತಿದ್ದುಪಡಿ ಮಾಡಿಕೊಂಡ ಕಸಾಪ ಅಧ್ಯಕ್ಷರ ಅಧಿಕಾರಾವಧಿಯನ್ನು ತಂತಾನೆ ಹೆಚ್ಚಿಸಿಕೊಳ್ಳುವುದನ್ನು ವಿರೋಧಿಸಿದ್ದೆವು.
ಅಲ್ಲದೆ ನಾವು ಹೈಕೋರ್ಟ್ ಮೆಟ್ಟಿಲೇರಿ ಬಹುದೂರದ ದ.ಕ. ಜಿಲ್ಲೆಯ ಪುಟ್ಟಗ್ರಾಮ ಕೋಟದಲ್ಲಿ ನಡೆವ ಸಭೆಗೆ ತಡೆಯಾಜ್ಞೆ ತರಲು ಲಾಯರ್ ಬಳ್ಳಾರಿ ರೇವಣ್ಣನವರ ವಕಾಲತ್ತಿನ ಮೂಲಕ ಪ್ರಯತ್ನಿಸಿದ್ದೆವು. ಆಗ ಸಮಯದ ಅಭಾವದಿಂದ ಈ ಕೆಲಸ ಆಗಿರಲಿಲ್ಲ. ಆದರೆ “ಸಹಕಾರಿ ಸಂಘಸಂಸ್ಥೆಗಳ ಉಪ ನೋಂದಣಾಧಿಕಾರಿಗಳಿಗೆ ತಿದ್ದುಪಡಿಮಾಡದಿರಲು ಅರ್ಜಿ ಹಾಕಬಹುದು ” ಎಂಬ ಸಲಹೆಯನ್ನು ಹೈಕೋರ್ಟ್ ಸೂಚಿಸಿತ್ತು.
ಆದ ಕಾರಣ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯಿಂದ ಈ ಕುರಿತ ಅರ್ಜಿಯೊಂದಿಗೆ ನಾವು ಹೈಕೋರ್ಟ್ಗೆ ನೀಡಿದ ಎಲ್ಲಾ ದಾಖಲೆಗಳನ್ನೂ ಬೆಂಗಳೂರು ಮಲ್ಲೇಶ್ವರಂ ಸಹಕಾರ ಭವನದಲ್ಲಿರುವ ಈ ಸಂಘ ಸಂಸ್ಥೆಗಳ ಉಪನೋಂದಾವಣಾಧಿಕಾರಿಗಳ ಕಡೆ ನೀಡಿದ್ದೆವು.
ಜುಲೈ 9ರಂದು ಬೆಂಗಳೂರು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಡಾ.ಕೋ.ವೆಂ.ರಾಮಕೃಷ್ಣೇಗೌಡರು, ಧಾರವಾಡದ ಲೇಖಕಿ ಹೊರಾಟಗಾರ್ತಿ ಡಾ.ಹನುಮಾಕ್ಷಿ ಗೋಗಿ ಹಾಗೂ ದಾವಣಗೆರೆ ಕಸಾಪ ಸಮಾನ ಮನಸ್ಕರ ವೇದಿಕೆಯ ಪರವಾಗಿ ಸಂಚಾಲಕರಾದ ಆರ್. ಶಿವಕುಮಾರಸ್ವಾಮಿ ಕುರ್ಕಿ ಎಂಬ ನಾನು ಇಲ್ಲಿನ ಉಪನಿಬಂಧಕರ ನ್ಯಾಯಾಲಯಕ್ಕೆ ಹಾಜರಾಗಿದ್ದೆವು.
ಆ ವಿಚಾರಣೆಯಲ್ಲಿ ಕಸಾಪ ಅಧ್ಯಕ್ಷರಾದ ಡಾ.ಮನುಬಳಿಗಾರ್ ಹಾಗೂ ಗೌ.ಕಾರ್ಯದರ್ಶಿಗಳು ಉಪಸ್ಥಿತರಿದ್ದು ಮತ್ತೆ ತಮ್ಮ ಅದೇ ಹಳೇ ರಾಗದಲ್ಲಿ ” ಅಧ್ಯಕ್ಷರ ಅಧಿಕಾರ ಅವಧಿಯನ್ನು 3 ರ ಬದಲು 5 ವರ್ಷ ಮಾಡಿಕೊಳ್ಳಲು ಅವಕಾಶ ನೀಡಲು ಕೇಳಿಕೊಂಡರು. ಅಲ್ಲದೆ ಈ ನಿಬಂಧನೆಗಳನ್ನು ಇವತ್ತೇ ಈಗಲೇ ಅನುಮೋದಿಸುವಂತೆ , ತಮ್ಮ ಅಧಿಕಾರ ಅವಧಿಯಿಂದಲೇ ಜಾರಿಯಾಗುವಂತೆ ಕೋಟಾದಲ್ಲಿ ನಡೆಸಿದ ಸಭೆಯ ನಿಬಂಧನೆಗಳನ್ನು ಅನುಮೋದಿಸಬೇಕಾಗಿ ಹಟಕ್ಕೆ ಬಿದ್ದವರಂತೆ ಕೇಳಿಕೊಂಡರು.
ಆಗ ನಾವು ಮೂವರೂ ಸೂಕ್ತ ಕಾರಣಗಳನ್ನು ನೀಡಿ ಅದನ್ನು ಬಲವಾಗಿ ವಿರೋಧಿಸಿದೆವು. ಚುನಾವಣೆ ನಡೆದುದು 3 ವರ್ಷಗಳ ಕಾಲಾವಧಿಗಾಗಿಯೇ ವಿನಃ 5 ವರ್ಷಗಳಿಗಲ್ಲ. ಅಲ್ಲದೆ ನ್ಶಾ.ಶ್ಯಾಮಸಂದರ್ ಆಯೋಗ ಹಿಂದೊಮ್ಮೆ ಹಂ.ಪ.ನಾ. ಅವರು ತಮ್ಮ ಆಧಿಕಾರ ಅವಧಿ ವಿಸ್ತರೀಕರಣ ಮಾಡಿಕೊಳ್ಳಲು ಇವರಂತೆಯೇ ಮುಂದಾದಾಗ ಅದನ್ನು ತಿರಸ್ಕರಿಸಿತ್ತು. ಅಗ ಅವರು ತಿದ್ದಿಕೊಂಡಿದ್ದ 5 ರ ಬದಲು 3 ವರ್ಷವೇ ಇರುವಂತೆ ಸರಕಾರ ನೇಮಿಸಿದ ಆಯೋಗ ತಾಕೀತು ಮಾಡಿತ್ತು’ ಎಂಬ ವಿಷಯವನ್ನು ಕೋರ್ಟ್ ಗಮನಕ್ಕೆ ತಂದೆವು.
ಆಗ ಸ್ಪಂದಿಸಿದ ಉಪನಿಬಂಧಕರು ಅದನ್ನು ಆಸಕ್ತಿಯಿಂದ ಆಲಿಸಿದರು. ಅಲ್ಲದೆ ಬಳಿಗಾರರ ವಾದವನ್ನು ಒಪ್ಪದೆ ಈ ಕುರಿತು ಮಾಹಿತಿ ಸಾಕ್ಷಿಗಳನ್ನು ತೋರಿಸಲು ನಾವು ಮೂವರಿಗೆ ಅವಕಾಶ ಕೊಟ್ಟು ಜು.20 ರಂದು ವಿಚಾರಣೆ ಮಾಡಲಾಗುವುದೆಂದು ತಿಳಿಸಿದರು.
ಕನ್ನಡ ವಿದ್ವಾಂಶರು ದಿಗ್ಗಜರು ಕವಿಪುಂಗವರು 100 ವರ್ಷಗಳ ಹಿಂದೆ ನಿಸ್ವಾರ್ಥತೆಯಿಂದ ಕಟ್ಟಿದ ಈ ಕನ್ನಡ ಸಾಹಿತ್ಯ ಹೃನ್ಮಂದಿರ ಇದೀಗ ಹಣ-ಅಧಿಕಾರ ಲಾಲಸೆ ಇರುವ ಮನುಬಳಿಗಾರ ಅವರಂತಹ ಸ್ವಾರ್ಥಪರ ಜನರಿಂದ ಪೂರ್ಣ ಕಲುಷಿತವಾಗಿದೆ.
ಇದರ ಶುದ್ಧೀಕರಣಕ್ಕಾಗಿ ಇಂದು (ಜುಲೈ12) ರ ಸಂಜೆ 6 ಗಂಟೆಗೆ ದಾವಣಗೆರೆಯ ಉದ್ಯಾನವನದ ಕಾವ್ಯ ಮಂಟಪದಲ್ಲಿ “ಕಸಾಪ ಉಳಿಸಿ” ಆಂದೋಲನ ನಡೆಸಲು ಪೂರ್ವಬಾವೀ ಸಮಾಲೋಚನಾ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಕಸಾಪ ಆಜೀವ ಸದಸ್ಯರುಗಳು ಸ್ವಯಂಸ್ಫೂರ್ತಿಯಿಂದ ಪಾಲ್ಗೊಂಡು ಕಸಾಪ ಕ್ಕೆ ಬಂದಿರುವ ಈ ಕುತ್ತನ್ನು ದೂರಮಾಡಲು ಸಹಕರಿಸಲು ವಿನಂತಿ.
ಈಗಾಗಲೆ ಧಾರವಾಡ, ಬೆಂಗಳೂರು, ಮಂಗಳೂರು, ಬಳ್ಳಾರಿ, ಮೈಸೂರು, ಮಂಡ್ಯ, ಮುಂತಾದ ಕಡೆ ಆಂಧೋಲನ ನಡೆಸಲು ಹುರಿಗೊಳ್ಳುತ್ತಿದ್ದಾರೆ. ಆದ್ದರಿಂದ ಹಾಲಿ ಕಸಾಪ ಸಮಿತಿಯ ಯಾವುದೇ ಆಸೆ ಆಮಿಷ, ಹಿಂಜರಿಕೆಗೆ ಒಳಗಾಗದೆ ನಾಳೆ ಜು.12 ರ ಗುರುವಾರ ಸಂಜೆ 6.00 ಗಂಟೆಗೆ ಸರಿಯಾಗಿ ದಾವಣಗೆರೆ ವಿದ್ಯಾನಗರದ ಕಾವ್ಯಮಂಟಪ ಉದ್ಯಾನವನಕ್ಕೆ ಆಗಮಿಸಲು ಆಹ್ವಾನಿಸುತ್ತೇವೆ. ತಮ್ಮ ಆತ್ಮೀಯರೆಲ್ಲರಿಗೂ ಈ ಸಂದೇಶವನ್ನು ರವಾನಿಸಲು ವಿನಂತಿ.
ಆರ್.ಶಿವಕುಮಾರಸ್ವಾಮಿ ಕುರ್ಕಿ, ಸಂಚಾಲಕರು, ದಾವಣಗೆರೆ
ಮೊ: 8970948221

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

