ಸಿನಿ ಸುದ್ದಿ
ಕಿಚ್ಚನಿಗೆ ನನ್ನ ಬೆಂಬಲ ಎಂದು ಅಜಯ್ ದೇವಗನ್ ಚಳಿ ಬಿಡಿಸಿದ ನಟಿ ಕಸ್ತೂರಿ..!
ಸುದ್ದಿದಿನ ಡೆಸ್ಕ್ : ನೆನ್ನೆ ಕಿಚ್ಚ ಸುದೀಪ ಮತ್ತು ಅಜಯ್ ದೇವಗನ್ ನಡುವೆ ನಡೆದ ಸರಣಿ ಟ್ವೀಟ್ ಭಾರೀ ಸದ್ದು ಮಾಡಿದೆ. ಹಿಂದಿ ರಾಷ್ಟ್ರ ಭಾಷೆ ಎಂದ ದೇವಗನ್ ಗೆ ಸ್ಯಾಂಡಲ್ ವುಡ್ ಸೇರಿದಂತೆ, ನಾಡಿನ ಗಣ್ಯರು ಕಿಚ್ಚನಿಗೆ ಸಾಥ್ ನೀಡಿದ್ದಾರೆ.
ಅದರಂತೆಯೇ ತಮಿಳು, ತೆಲುಗು,ಕನ್ನಡದ ನಟಿ ಕಸ್ತೂರಿ ಅಜಯ್ ದೇವಗನ್ ಮಾತಿಗೆ ಚಳಿ ಬಿಡಿಸಿದ್ದಾರೆ. ಅಂದಹಾಗೆ ಈ ನಟಿ ಕಸ್ತೂರಿ ಕ್ರೇಜಿಸ್ಟಾರ್ ಅಭಿನಯದ ‘ ಜಾಣ’ ಸಿನೆಮಾದಲ್ಲಿ ನಾಯಕಿ ನಟಿಯಾಗಿ ಅಭಿನಯಿಸಿದ್ದರು. ಈಗ ತಮಿಳು ಸಿನೆಮಾ-ದಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ.
ನಟಿ ಕಸ್ತೂರಿ ತಮ್ಮ ಫೇಸ್ಬುಕ್ ಮತ್ತು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಅಭಿಪ್ರಾಯ ಈ ಕೆಳಕಂಡಂತಿದೆ.
ಗೌರವಾನ್ವಿತ ಅಜಯ್ ದೇವಗನ್ ಜಿ, ಅನೇಕ ಹಾಲಿವುಡ್ ಚಲನಚಿತ್ರಗಳು ಹಿಂದಿಗೆ ಡಬ್ ಆಗಿವೆ. ಹಿಂದಿಯನ್ನು ಅಮೆರಿಕದ ಮಾತೃಭಾಷೆ ಮತ್ತು ರಾಷ್ಟ್ರೀಯ ಭಾಷೆ ಎಂದು ನೀವು ಭಾವಿಸುವುದಿಲ್ಲ ಎಂದು ನಾನು ಭಾವಿಸಿದ್ದೇನೆ.
ಹಿಂದಿ ಚಲನಚಿತ್ರಗಳನ್ನು ಚೀನಾ ಜಪಾನ್ ಗಲ್ಫ್ ದೇಶಗಳಲ್ಲಿ ಸ್ಥಳೀಯ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತದೆ, ಅದರ ಬಗ್ಗೆ ಏನು ಹೇಳುತ್ತೀರಿ? ವಾಸ್ತವವಾಗಿ, ಅನೇಕ ಹಿಂದಿ ಚಲನಚಿತ್ರಗಳು ಮತ್ತು ದೂರದರ್ಶನ ಧಾರಾವಾಹಿಗಳು ಯಾವಾಗಲೂ ಪ್ರಾದೇಶಿಕ ಭಾಷೆಗಳಲ್ಲಿ ಡಬ್ ಆಗಿವೆ – ಅದು ಏಕೆ ಎಂದು ನೀವು ಯೋಚಿಸಿದ್ದೀರಾ?
ಶತಮಾನಗಳ ಹಿಂದಿನ ದಂತಕಥೆಗಳ ಹಿಂದಿ ಸಾಹಿತ್ಯ ಕೃತಿಗಳು-ತುಳಸಿದಾಸ್, ಕಬೀರ್, ಮುಲ್ಕ್ರಾಜ್ ಆನಂದ್, ಖುಷ್ವಂತ್ ಸಿಂಗ್ ಇತ್ಯಾದಿ ಹಲವಾರು ಭಾರತೀಯ ಮತ್ತು ಅಂತರಾಷ್ಟ್ರೀಯ ಭಾಷೆಗಳಲ್ಲಿ ಅನುವಾದಿಸಲಾಗಿದೆ. ಅದು ಏಕೆ ಎಂದು ನೀವು ಯೋಚಿಸಿದ್ದೀರಾ?
ಒಬ್ಬ ನಟನಾಗಿ, ಕಲೆ ಎಲ್ಲಾ ಗಡಿಗಳನ್ನು ಮೀರಿದೆ ಎಂದು ನಿಮಗೆ ಖಚಿತವಾಗಿ ತಿಳಿದಿದೆ – ಕಲೆ ಮತ್ತು ಕಲಾವಿದರಿಗೆ ಭಾಷೆ ಎಂದಿಗೂ ಅಡ್ಡಿಯಾಗುವುದಿಲ್ಲ. ಪ್ಯಾನ್ ಇಂಡಿಯನ್ ತೆಲುಗು ಚಲನಚಿತ್ರ RRR ನಲ್ಲಿ ನೀವೇ ಬಹಳ ಗಮನಾರ್ಹವಾಗಿ ತೆಲುಗು ಹುತಾತ್ಮನ ಪಾತ್ರವನ್ನು ನಿರ್ವಹಿಸಿದ್ದೀರಿ. ನಿಮ್ಮ ವೆಬ್ಸರಣಿ ರುದ್ರ ಹಿಂದಿ ಸೇರಿದಂತೆ ಏಳು ಭಾರತೀಯ ಭಾಷೆಗಳಲ್ಲಿ ಲಭ್ಯವಿದೆ. ಇದು ಇಂಗ್ಲಿಷ್ನಲ್ಲಿ ಉಪ ಶೀರ್ಷಿಕೆಯನ್ನೂ ಹೊಂದಿದೆ. ಇದು ಹೇಗೆ ಎಂದು ನೀವು ನನಗೆ ಹೇಳುತ್ತೀರಾ?
ನಾನು ಕಿಚ್ಚಸುದೀಪ ಮತ್ತು 700 ಮಿಲಿಯನ್ ಭಾರತೀಯರೊಂದಿಗೆ ನಿಲ್ಲುತ್ತೇನೆ.
ಬಹುಪಾಲು ಹೆಮ್ಮೆಯ ಭಾರತೀಯರಿಗೆ, ಹಿಂದಿ ಹಮಾರಿ ಮಾತೃಭಾಷಾ ಕಭಿ ನಹೀ ಥಿ, ಔರ್ ರಾಷ್ಟ್ರಭಾಷಾ ಬನೇಗಿ ಭೀ ನಹೀ. ಎಂದಿದ್ದಾರೆ.
ನಟಿ ಕಸ್ತೂರಿ ಟ್ವೀಟ್
Link to my facebook post https://t.co/1zJ53ghbBp#AjayDevgn #KichchaSudeepa #hindi #kannada #KGF2 #yash #telugu #RRR #NTR #RamCharan pic.twitter.com/oXQeCSORRx
— Kasturi Shankar (@KasthuriShankar) April 27, 2022
Respected @ajaydevgn ji, Many hollywood movies are dubbed in Hindi. Hope you don't think Hindi is the Matrubhasha and Rashtriya Bhasha of America.
For 60crore proud Indians,Hindi hamari matrubhasha kabhi nahi thi, aur rashtrabhasha banegi bhi nahi.
I stand with @KicchaSudeep pic.twitter.com/MUOZhq0OBG— Kasturi Shankar (@KasthuriShankar) April 27, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243