ನೆಲದನಿ
ಕತ್ತಲಗೆರೆ ತಿಪ್ಪಣ್ಣನೆಂಬ ಗ್ರಾಮೀಣ ಪ್ರತಿಭೆಯ ಹೋರಾಟದ ಹಾದಿ

ಭಾರತದ ದಲಿತಪರ ಹೋರಾಟದ ಹಾದಿಯಲ್ಲಿ ಅಂಬೇಡ್ಕರರನ್ನು ಮಾದರಿಯಾಗಿಟ್ಟುಕೊಂಡು, ಅವರ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಹಲವಾರು ವ್ಯಕ್ತಿಗಳು ತಮ್ಮ ಹೋರಾಟದ ಹಾದಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅಂಬೇಡ್ಕರ್ವಾದದಿಂದ ಪ್ರಭಾವಿತರಾಗಿ, ಅವರ ತತ್ವಾದರ್ಶಗಳನ್ನು ತಮ್ಮಲ್ಲಿ ರೂಡಿಸಿಕೊಂಡು ಕರ್ನಾಟಕದಲ್ಲಿಯೂ ಬಹುತೇಕ ವಿಚಾರವಾದಿಗಳು ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.
ಅಂತಹ ಹೋರಾಟಗಾರರನ್ನು ಗುರುತಿಸಿ, ಅವರ ಹೋರಾಟದ ಹಾದಿಯ ಅನುಭವಗಳನ್ನು ಪರಿಚಯಿಸುವ ಉದ್ಧೇಶದಿಂದ ಪ್ರಸ್ತುತ ಲೇಖನವನ್ನು ರಚಿಸಲಾಗಿದೆ. ದಲಿತರ ಜಾಗೃತಿ, ವಿಮೋಚನೆ ಹಾಗೂ ಪ್ರಗತಿಗಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ದಲಿತ ಚಿಂತಕರನ್ನು ಶೋಧಿಸಲು ಮುಂದಾದಾಗ ಎಲೆಮರೆಯ ಕಾಯಿಯಂತಿರುವ ಬಹುತೇಕ ವಿಚಾರವಾದಿಗಳು ಕಂಡುಬಂದರು. ಇವರುಗಳಲ್ಲಿ ಬಹುತೇಕರು ದಲಿತರ ವಿಮೋಚನೆಗಾಗಿಯೇ ತಮ್ಮ ಬದುಕನ್ನು ಸಮರ್ಪಿಸಿಕೊಂಡವರಿದ್ದಾರೆ. ಅಂತಹ ಹೋರಾಟಗಾರರಲ್ಲಿ ಕತ್ತಲಗೆರೆ ತಿಪ್ಪಣ್ಣನವರು ಒಬ್ಬರಾಗಿದ್ದಾರೆ. ಇವರ ಹೋರಾಟದ ಕ್ರಮವು ಮುಂದಿನ ಯುವ ಹೋರಾಟಗಾರರಿಗೆ ಮಾದರಿಯಾಗಬಹುದೆಂದು ಭಾವಿಸಲಾಗಿದೆ. ಹೀಗಾಗಿ ತನ್ನ ವೈಯಕ್ತಿಕ ಬದುಕನ್ನು ಲೆಕ್ಕಿಸದೆ, ಸಮಾಜದ ಪ್ರಬಲ ವರ್ಗವನ್ನು ಎದುರುಹಾಕಿಕೊಂಡು, ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ ಗ್ರಾಮೀಣ ಪ್ರತಿಭೆಯಾದ ಕತ್ತಲಗೆರೆ ತಿಪ್ಪಣ್ಣನೆಂಬ ದಲಿತ ಹೋರಾಟಗಾರನ ಹೋರಾಟದ ಹಾದಿಯನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಉದ್ಧೇಶವಾಗಿದೆ.
ಶ್ರೀಯುತ ಕತ್ತಲಗೆರೆ ತಿಪ್ಪಣ್ಣನವರು ದಾವಣಗೆರೆ ಜಿಲ್ಲೆಯ ಕತ್ತಲಗೆರೆ ಎಂಬ ಗ್ರಾಮದಲ್ಲಿ ದಿನಾಂಕ 16 ಜನವರಿ 1956ರಂದು ಶ್ರೀ ಉಳಿವಪ್ಪ ಶ್ರೀಮತಿ ನಾಗಮ್ಮ ಎಂಬ ದಂಪತಿಗಳ ಸುಪುತ್ರರಾಗಿ ದಲಿತ ಕುಟುಂಬದಲ್ಲಿ ಜನಿಸಿದರು. ಇವರು ಬಾಲ್ಯದಿಂದಲೂ ಬಡತನದ ಬವಣೆಯಲ್ಲಿಯೇ ತಮ್ಮ ಜೀವನವನ್ನು ಮುಂದುವರೆಸಿಕೊಂಡು ಬಂದವರಾಗಿದ್ದಾರೆ. ಇವರು ಎಂಟನೇ ತರಗತಿಯನ್ನು ಓದುವ ಸಮಯದಲ್ಲಿ ಇವರ ತಾಯಿ ಅನಾರೋಗ್ಯಕ್ಕೆ ತುತ್ತಾದರು. ಈ ಸಮಯದಲ್ಲಿ ಇವರ ತಾಯಿಗೆ ಚಿಕಿತ್ಸೆ ಕೊಡಿಸುವುದಕ್ಕೆ ಇವರ ತಂದೆಯ ಬಳಿ ಹಣವಿಲ್ಲದ ಕಾರಣ, ಬಾಲಕನಾಗಿದ್ದ ತಿಪ್ಪಣ್ಣನವರು ತನ್ನನ್ನು ಜೀತಕ್ಕೆ ನೇಮಿಸಿ ಹಣ ಪಡೆದು ತನ್ನ ತಾಯಿಗೆ ಚಿಕಿತ್ಸೆಯನ್ನು ಕೊಡಿಸುವಂತೆ ತಮ್ಮ ತಂದೆಗೆ ಸಲಹೆ ನೀಡಿದರು. ಅಸಹಾಯಕರಾದ ಇವರ ತಂದೆಯು ಮಗನ ಮಾತಿನಂತೆ ಇವರನ್ನು ಶಾಲೆಯಿಂದ ಬಿಡುಗಡೆಗೊಳಿಸಿ ವರ್ಷಕ್ಕೆ 25 ರೂಪಾಯಿಗೆ ಜೀತಕ್ಕೆ ಸೇರಿಸಿ, ಇವರ ತಾಯಿಗೆ ಚಿಕಿತ್ಸೆ ಕೊಡಿಸಿದರು. ಆದರೆ ಇವರ ತಾಯಿಯ ಕಾಯಿಲೆಯು ಮಾತ್ರ ಗುಣವಾಗದೆ ಕಲವೇ ದಿನಗಳಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡರು. ತಮ್ಮ ತಾಯಿಯ ಚಿಕಿತ್ಸೆಗೆಂದು ಪಡೆದ ಹಣವನ್ನು ತೀರಿಸಲು ಒಂದು ವರ್ಷಗಳ ಕಾಲ ಜೀತ ಮಾಡಿ ಹಣವನ್ನು ತೀರಿಸಬೇಕಾಯಿತು. ಈ ಕಾರಣದಿಂದಾಗಿ ತಿಪ್ಪಣ್ಣನವರ ಶಿಕ್ಷಣವು ಕುಂಟಿತವಾಯಿತು.
ತಿಪ್ಪಣ್ಣನವರು ತಮ್ಮ ತಾಯಿಯು ಮರಣ ಹೊಂದಿದ ತರುವಾಯದಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಈ ಸಮಯದಲ್ಲಿ ಇವರ ತಂದೆಯು ಇವರ ತಮ್ಮನನ್ನು ಕರೆದುಕೊಂಡು ಬೇರೆಡೆಗೆ ಹೊರಟು ಹೋದರು. ಆಗ ಇವರು ದಾವಣಗೆರೆಯಲ್ಲಿ ತಮ್ಮ ಸಂಬಂಧಿಕರ ಮನೆಯೊಂದರಲ್ಲಿ ಆಶ್ರಯ ಪಡೆದರು. ನಂತರ ಇವರು ಬೆಳೆದು ದೊಡ್ಡವರಾದ ಮೇಲೆ ಮದುವೆ ಮಾಡಿಕೊಂಡು ತಮ್ಮ ಊರಾದ ಕತ್ತಲಗೆರೆಯಲ್ಲಿ ಬಂದು ನೆಲೆಸಿದರು. ತಮ್ಮ ಸ್ವಗ್ರಾಮಕ್ಕೆ ಮರಳಿದ ತರುವಾಯದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ತಮ್ಮಲ್ಲಿ ಕರಗತವಾಗಿದ್ದ ಕೆಲವು ವಿಚಾರಗಳಿಂದ ದಲಿತರ ಹಕ್ಕು ಹಾಗೂ ಸವಲತ್ತುಗಳಿಗಾಗಿ ಹೋರಾಟ ನಡೆಸಲು ಮುಂದಾದರು. ದಲಿತರ ಮೇಲೆ ನಡೆಯುವ ಶೋಷಣೆ ಹಾಗೂ ಹಲ್ಲೆಗಳನ್ನು ಖಂಡಿಸುವತ್ತ ತನ್ನ ಹೋರಾಟವನ್ನು ಮುಂದುವರೆಸಿದರು. 1987ರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಜಯಶೀಲರಾದ ನಂತರದಲ್ಲಿ ಇಲ್ಲಿನ ಪಂಚಾಯಿತಿಯಲ್ಲಿ ಉನ್ನತ ವರ್ಗದವರು ತಮಗೆ ಬೇಕಾದಂತೆ ಸಿಬ್ಬಂದಿಗಳನ್ನು ನೇಮಿಸಿಕೊಂಡಿರುವುದನ್ನು ಖಂಡಿಸಿ ಸಂವಿಧಾನ ಬದ್ಧವಾಗಿ ಮೀಸಲಾತಿಯನ್ನು ಪಾಲಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐದು ಜನ ಸಿಬ್ಬಂದಿಯನ್ನು ಇಲ್ಲಿ ನೌಕರರಾಗಿ ನೇಮಿಸಿದರು. ಆ ಐದು ಜನರಿಂದು ಸರ್ಕಾರದ ಖಾಯಂ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗೆ ದಲಿತರ ಪ್ರಗತಿಗಾಗಿ ಸಂವಿಧಾನದ ಆಶಯಗಳನ್ನು ಜಾರಿಗೆ ತರುವತ್ತ ತಮ್ಮ ಹೋರಾಟವನ್ನು ಮುಂದುವರೆಸಿದ ಇವರು ತಮ್ಮ ಗ್ರಾಮದ ಮಾಜಿ ಶಾಸಕರಾದ ಕುಂದೂರು ರುದ್ರಪ್ಪ ಹಾಗೂ ಅವರ ಮಗನನ್ನು ಎದುರು ಹಾಕಿಕೊಳ್ಳಬೇಕಾಯಿತು.
ರಾಜಕಿಯ ಪ್ರವೇಶಿಸಿದ ತರುವಾಯದಲ್ಲಿ ಮಾಜಿ ಶಾಸಕನ ಪುತ್ರನು ಗ್ರಾಮ ಪಂಚಾಯಿತಿಯ ಪ್ರಧಾನ (ಇಂದಿನ ಅಧ್ಯಕ್ಷ ಸ್ಥಾನ) ನಾಗಿದ್ದುಕೊಂಡು ನಡೆಸುತ್ತಾ ಬಂದಿರುವ ಅವ್ಯವಹಾರಗಳನ್ನು ಬಯಲಿಗೆಹಾಕುವತ್ತ ತಮ್ಮ ಹೋರಾಟವನ್ನು ಮುಂದುವರೆಸಿದರು. ತಿಪ್ಪಣ್ಣನವರು 1987ರಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ಸಂದರ್ಭದಲ್ಲಿ ಈ ಪಂಚಾಯಿತಿಯ ಪ್ರಧಾನನು ಎಸ್.ಸಿ/ಎಸ್.ಟಿ ಕಾಲೋನಿಯಲ್ಲಿ ರಸ್ತೆ, ಬಾವಿ ದುರಸ್ತಿ ಮಾಡಿಸಿದ್ದೇನೆ ಎಂದು ಹೇಳಿ ಏನು ಕೆಲಸ ಮಾಡದೆ ಬಿಲ್ಲು ಮಾಡಿಸಿಕೊಂಡು ಹಣವನ್ನು ತಿಂದುಹಾಕಿದ್ದ. ಇದನ್ನು ತಿಳಿದ ತಿಪ್ಪಣ್ಣನವರು ಅಂದಿನ ಬಿ.ಡಿ.ಓ ಅಧಿಕಾರಿಗೆ (ಇಂದಿನ ಬಿ.ಓ) ದೂರು ಸಲ್ಲಿಸಿದ್ದರು. ಈ ತಾಲ್ಲೂಕು ಅಧಿಕಾರಿಯು ಪ್ರಧಾನರೊಂದಿಗೆ ಶಾಮೀಲಾಗಿ ವಿಚಾರಣೆಗೆ ಬಂದಾಗ, ಅವನ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದೆ ಅವರೊಂದಿಗೆ ಸಹಕರಿಸುವಂತೆ ಸಲಹೆ ನೀಡಿದನು. ಇದರಿಂದ ಕೋಪಗೊಂಡ ತಿಪ್ಪಣ್ಣನವರು ಅಂದಿನ ಶಿವಮೊಗ್ಗದ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯದರ್ಶಿಯಾಗಿದ್ದ ಭರತ್ಲಾಲ್ ಮೀನಾ ಅವರಿಗೆ ದೂರು ನೀಡಿದರು. ಇವರು ಆರ್.ಆರ್ ಕೂಸಗೂರ ಎಂಬ ಉಪ ಕಾರ್ಯದರ್ಶಿಯನ್ನು ಇದರ ವಿಚಾರಣೆಗೆ ನೇಮಿಸಿದರು. ಇವರು ಸಹ ಪ್ರಧಾನರೊಂದಿಗೆ ಭಾಗಿಯಾಗಿ ಅವರಿಗೆ ಸಹಕರಿಸುವಂತೆ ಸಲಹೆ ನೀಡಿದರು. ಇಲ್ಲಿಯೂ ತನಗೆ ನ್ಯಾಯ ಸಿಗದ ಕಾರಣದಿಂದಾಗಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಿಂದ ಜಿಲ್ಲಾ ಪರಿಷತ್ತಿನ ಅಧಿಕಾರಿಗಳನ್ನು ಸೇರಿಸಿ ರಾಜ್ಯಪಾಲರಿಗೆ ದೂರು ನೀಡಿದರು. ರಾಜ್ಯಪಾಲರು ಈ ದೂರನ್ನು ಪರಿಶೀಲಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಮಂತ್ರಿಗಳಿಗೆ ಪತ್ರವನ್ನು ರವಾನಿಸಿದರು. ಆಗ ಗ್ರಾಮೀಣಾಭಿವೃದ್ಧಿ ಮಂತ್ರಿಯಾಗಿದ್ದ ಬಿ. ಬಸವಲಿಂಗಪ್ಪನವರನ್ನು ಇವರು ಭೇಟಿಯಾಗಿ ವಾಸ್ತವವನ್ನು ವಿವರಿಸಿದಾಗ ಇವರಿಗೆ ಮಂತ್ರಿಗಳು ಕೆಲವು ದಿನಗಳ ಕಾಲ ತಮ್ಮ ಮನೆಯಲ್ಲಿ ಆಶ್ರಯ ನೀಡಿ, ನಂತರದಲ್ಲಿ ಈ ಕೇಸನ್ನು ಪರಿಶೀಲಿಸಿ ಕ್ರಮವನ್ನು ಕೈಗೊಳ್ಳವಂತೆ ಎಸ್.ಎಲ್. ಗಂಗಾಧರಪ್ಪ ಎಂಬ ಡಿವಿಜನ್ ಕಮೀಷನರನ್ನು ನೇಮಿಸಿ, ಇವರಿಗೆ ರಕ್ಷಣೆ ನೀಡುವಂತೆ ತಿಳಿಸಿ ಕಳುಹಿಸಿದರು. ಕತ್ತಲಗೆರೆ ಗ್ರಾಮಕ್ಕೆ ಬಂದು ಎಲ್ಲ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿಯನ್ನು ಪರಿಶೀಲಿಸಿದ ಡಿವಿಜನ್ ಕಮೀಷನರು ಇಲ್ಲಿನ ಅವ್ಯವಹಾರಕ್ಕೆ ಸಹಕರಿಸಿದ ಇಂಜಿನಿಯರ್ ಹಾಗೂ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದರು.
ಹೀಗೆ ತಮ್ಮ ಹೋರಾಟವನ್ನು ಮುಂದುವರೆಸಿದ ತಿಪ್ಪಣ್ಣನವರು ದಲಿತರಿಗೆ ಆಗುತ್ತಿರುವಂತಹ ಅನ್ಯಾಯಗಳನ್ನು ಶೋಧಿಸತೊಡಗಿದರು. ಈ ಗ್ರಾಮದ ಮಾಜಿ ಶಾಸಕರಾದ ಕುಂದೂರು ರುದ್ರಪ್ಪನವರು ದಲಿತ ವರ್ಗದ ಮಾದಿಗ ಜನಾಂಗಕ್ಕೆ ಸರ್ಕಾರವು ನೀಡಿದ 25 ಎಕರೆ ಉಂಬಳಿ ಭೂಮಿಯನ್ನು ಆಕ್ರಮಣ ಮಾಡಿಕೊಂಡು ತನ್ನ ಸ್ವಾಧೀನಕ್ಕೆ ವಶಪಡಿಸಿಕೊಂಡಿದ್ದ. ಇದನ್ನು ತಿಳಿದ ತಿಪ್ಪಣ್ಣನವರು ಈ ಭೂಮಿಯನ್ನು ಅನುಭವಿಸುತ್ತಿದ್ದ ಮಾಜಿ ಶಾಸಕನ ಮಗನ ವಿರುದ್ಧ ಮಾದಿಗ ಜನಾಂಗಕ್ಕೆ ಅರಿವು ಮೂಡಿಸಿ ಕೇಸು ದಾಖಲಿಸಿದರು. ಈ ಕೇಸನ್ನು ಅಂದಿನ ಜಿಲ್ಲಾಧಿಕಾರಿಯಾದ ನಾರಾಯಣ ಸ್ವಾಮಿ ಎಂಬುವವರು ತಮ್ಮ ನ್ಯಾಯಾಲಯದ ಸಮ್ಮುಖದಲ್ಲಿ ಬಗೆಹರಿಸುವುದಾಗಿ ಕೆಲವು ದಿನಗಳ ಕಾಲ ವ್ಯಾಜ್ಯೆಯನ್ನು ಮುಂದುವರೆಸಿ, ಈ ಕೇಸಿನ ವಿಚಾರದಲ್ಲಿ ಪಾರದರ್ಶಕತೆಯನ್ನು ಮೆರೆಯದೆ ಕಾನೂನಿನ ವಿರುದ್ಧವಾಗಿ ಮಾಜಿ ಶಾಸಕನ ಕಡೆಯವರಿಗೆ ಈ ಭೂಮಿ ಸೇರಿದ್ದು ಎಂದು ತೀರ್ಪು ನೀಡಿದರು. ಇಲ್ಲಿನ ಮತ್ತೊಂದು ದುರಂತವೆಂದರೆ ಅಂದು ಜಿಲ್ಲಾಧಿಕಾರಿಯಾಗಿದ್ದ ನಾರಾಯಣ ಸ್ವಾಮಿಯವರು ಮಾದಿಗ ಜನಾಂಗದವರೆ ಆಗಿದ್ದರು. ಆದರೆ ಇಲ್ಲಿ ದಲಿತರೆ ದಲಿತರ ಹಕ್ಕುಗಳನ್ನು ಕಿತ್ತುತಿನ್ನುವಂತಹ ಪರಿಸ್ಥಿತಿಯು ನಿರ್ಮಾಣವಾಗಿತ್ತು. ಇದರಿಂದಾಗಿ ತಿಪ್ಪಣ್ಣನವರ ಹೋರಾಟಕ್ಕೆ ಬಹು ದೊಡ್ಡದಾದ ಪೆಟ್ಟುಬಿದ್ದಿತು. ಹಣ, ಅಧಿಕಾರದ ಎದುರು ತಿಪ್ಪಣ್ಣನವರ ಹೋರಾಟಕ್ಕೆ ತಕ್ಕ ಪ್ರತಿಫಲ ದೊರೆಯದಾಯಿತು. ಈ ವೇಳೆಗಾಗಲೇ ತಿಪ್ಪಣ್ಣನವರು ಮಾಜಿ ಶಾಸಕನ ಕುಟುಂಬವು ನಡೆಸುತ್ತಿರುವ ಹಲವಾರು ಅಕ್ರಮಣಗಳನ್ನು ಬಯಲಿಗೆ ಹಾಕಿ, ಕೆಲವೊಮ್ಮೆ ಅವರಿಂದ ಹಲ್ಲೆಗೂ ಒಳಗಾಗಿದ್ದರು. ಆದರೆ ಈ ಜಮೀನಿನ ಕೇಸು ಅವರ ಪರವಾಗಿದ್ದರಿಂದಾಗಿ ಅವರಿಗೆ ಮತ್ತಷ್ಟು ಬಲಬಂದಂತಾಗಿ ಇವರ ಮನೆಯ ಮೇಲೆ ಬಹು ಸಂಖ್ಯೆಯಲ್ಲಿ ಜನರನ್ನು ಕೂಡಿಸಿ ಹಲ್ಲೆ ನಡೆಸಿದರು. ಈ ಹಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು ಇವರ ಮನೆಯ ಹಂಚುಗಳೆಲ್ಲ ಹೊಡೆಯುವ ಹಾಗೆ ಕಲ್ಲು ತೂರಾಟ ನಡೆಸಿ, ತಿಪ್ಪಣ್ಣನವರಿಗೆ ಹಿಂದಿನಿಂದ ತಲೆಗೆ ಹೊಡೆದು ಕೆಡವಿದರು. ಈ ಸಮಯದಲ್ಲಿ ತುಂಬು ಗರ್ಭಿಣ ಯಾದ ಇವರ ಹೆಂಡತಿಯನ್ನು ಕಿಡಿಗೇಡಿಗಳು ಸಮೀಪದಲ್ಲೆ ಇದ್ದ ಚರಂಡಿಗೆ ತಳ್ಳಿದ ಪರಿಣಾಮವಾಗಿ ಇವರ ಹೊಟ್ಟೆಗೆ ಬಲವಾದ ಪೆಟ್ಟುಬಿದ್ದು, ಹೊಟ್ಟೆಯಲ್ಲಿದ್ದ ಶಿಶುವು ಮರಣ ಹೊಂದಿ, ಮುಂದೆ ಮಕ್ಕಳಾಗುವ ಅವಕಾಶ ಕಳೆದುಕೊಂಡರು. ಈ ಹಲ್ಲೆಯಿಂದಾಗಿ ಇವರ ಬದುಕಿಗೆ ಬಲವಾದ ಪೆಟ್ಟುಬಿದ್ದಿತು. ಇದರ ತರುವಾಯ ತಮ್ಮ ಸ್ವಗ್ರಾಮವನ್ನು ಬಿಟ್ಟುಬಂದು ಪ್ರಾಣ ರಕ್ಷಣೆಗಾಗಿ ದಾವಣಗೆರೆಯಲ್ಲಿಯೇ ಇಂದಿಗೂ ತಮ್ಮ ಜೀವನವನ್ನು ಸಾಗಿಸುತ್ತಿದ್ದಾರೆ.
ಶ್ರೀಯುತ ತಿಪ್ಪಣ್ಣನವರು ಇಷ್ಟೆಲ್ಲ ಹಲ್ಲೆಗೆ ಗುರಿಯಾಗಿ ಶೋಷಣೆಗೆ ಒಳಗಾದರು ತಮ್ಮ ಹೋರಾಟವನ್ನು ನಿಲ್ಲಿಸಿಲ್ಲ. ಇವರು ದಾವಣಗೆರೆಯಲ್ಲಿ ವಾಸ್ತವ್ಯವನ್ನು ಹೊಡಿದ್ದರೂ 1987 ರಿಂದ ಪ್ರಸ್ತುತದವರೆಗೂ ಗ್ರಾಮ ಪಂಚಾಯಿತಿಯ ಸದಸ್ಯರಾಗಿ ನಿರಂತರವಾಗಿ ಆಯ್ಕೆಯಾಗುತ್ತಿದ್ದಾರೆ. ದಲಿತರ ಪರವಾದ ಇವರ ನಿಸ್ವಾರ್ಥ ಹೋರಾಟದ ಫಲವಾಗಿ ಇವರನ್ನು ಆ ಗ್ರಾಮದ ಜನತೆಯು ಪ್ರತಿ ಚುನಾವಣೆಯಲ್ಲಿ ಆಯ್ಕೆ ಮಾಡುತ್ತಿದ್ದಾರೆ. ತನ್ನ ಗ್ರಾಮದ ದಲಿತರು ಹಾಗೂ ಹಿಂದುಳಿದ ಜನತೆಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ತಲುಪಿಸುವುದರ ಜೊತೆಗೆ, ಅವರಲ್ಲಿ ಜಾಗೃತಿಯನ್ನು ಮೂಡಿಸುವತ್ತ ತಮ್ಮ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಇವರು ಔಪಚಾರಿಕವಾಗಿ ಓದಿದ್ದು ಕೇವಲ ಎಂಟನೇ ತರಗತಿಯಾದರೂ ಇವರಲ್ಲಿನ ಜ್ಞಾನದ ದಾಹದಿಂದಾಗಿ ಸಾಕಷ್ಟು ವೈಚಾರಿಕ ಕೃತಿಗಳನ್ನು ಓದಿ ಹಾಗೂ ಹಲವಾರು ಚಿಂತಕರ ವಿಚಾರಧಾರೆಗಳಿಂದ ಪ್ರಭಾವಿತರಾಗಿ ಪ್ರಗತಿಯ ಹಾದಿಯಲ್ಲಿ ನಡೆದುಕೊಂಡು ಬಂದಿದ್ದಾರೆ. ಬಿ. ಆರ್. ಅಂಬೇಡ್ಕರರ ವಿಚಾರಗಳನ್ನು ಹಾಗೂ ಅವರು ನೀಡಿದ ಸಂವಿಧಾನದ ಆಶಯದಂತೆ ನಡೆದುಕೊಂಡು ದಲಿತರ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರು ತಮ್ಮ ಸ್ವಗ್ರಾಮದಲ್ಲಿ ದಲಿತರಿಗಾಗಿ ‘ಅಂಬೇಡ್ಕರ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಸಮುದಾಯ ಭವನ’ವನ್ನು ನಿರ್ಮಿಸಿದ್ದಾರೆ. ಇಲ್ಲಿ ದಲಿತರಿಗೆ ಮಾತ್ರ ಉಚಿತವಾಗಿ ಅವಕಾಶವನ್ನು ಕಲ್ಪಿಸಲಾಗುತ್ತದೆ. ಉಳಿದಂತೆ ಇತರೆ ವರ್ಗದವರಿಂದ ಮಾತ್ರ ಹಣವನ್ನು ಪಡೆಯಲಾಗುತ್ತದೆ. ಈ ಹಣದಿಂದ ದಲಿತರ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಹಾಗೆಯೇ ಅಂಬೇಡ್ಕರ್ ಎಸ್.ಸಿ/ ಎಸ್.ಟಿ ಸಹಕಾರ ಸಂಘವನ್ನು ಹೋಬಳಿ ಮಟ್ಟದಲ್ಲಿ ಸ್ಥಾಪಿಸಿಕೊಂಡು ದಲಿತರ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ.
ತಿಪ್ಪಣ್ಣನವರು ಹಲವಾರು ವಿಚಾರವಾದಿಗಳಿಂದ ಪ್ರೇರಣೆ ಮತ್ತು ಪ್ರಭಾವಕ್ಕೆ ಒಳಗಾಗಿ ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದವರಾಗಿದ್ದಾರೆ. ಇವರ ವಿಚಾರಗಳಿಗೆ ಪ್ರಮುಖವಾಗಿ ಪ್ರೇರಕ ಶಕ್ತಿಯಾಗಿದ್ದವರಲ್ಲಿ ದಲಿತ ಹೋರಾಟಗಾರ ಹಾಗೂ ಅಂಬೇಡ್ಕರ್ ಅನುಯಾಯಿಗಳಾದ ಬಿ. ಬಸವಲಿಂಗಪ್ಪ ಹಾಗೂ ಎಲ್.ಜಿ ಹಾವನೂರರು. ಬಿ. ಬಸವಲಿಂಗಪ್ಪ ಅವರೊಂದಿಗೆ ತುಂಬ ಹತ್ತಿರದ ಒಡನಾಟವನ್ನು ಹೊಂದಿದ್ದ ಇವರು, ಅವರಿಂದ ತುಂಬ ಮೆಚ್ಚುಗೆಯನ್ನು ಗಳಿಸಿದ್ದರು. ಬಸವಲಿಂಗಪ್ಪನವರ ತಾಯಿಯ ಊರು ಕತ್ತಲಗೆರೆಯಾದ ಕಾರಣ ಇವರ ಮಧ್ಯೆ ಉತ್ತಮವಾದ ಸಂಬಂಧವು ಬೆಳೆದಿತ್ತು. ಇದಕ್ಕೆ ಪ್ರಮುಖ ಕಾರಣವೆಂದರೆ ತಿಪ್ಪಣನವರ ಹೋರಾಟದ ನೆಲೆಗಳು ನಿಸ್ವಾರ್ಥದಿಂದ ಕೂಡಿದ್ದು, ದಲಿತರ ಪರವಾಗಿದ್ದವು. ಬಸವಲಿಂಗಪ್ಪನವರ ಆಶಯಗಳು ಇದೇ ನೆಲೆಯಲ್ಲಿದ್ದ ಕಾರಣದಿಂದಾಗಿ ಇವರನ್ನು ಮತ್ತಷ್ಟು ಹತ್ತಿರಕ್ಕೆ ಕರೆತಂದಿತ್ತು. ಬಸವಲಿಂಗಪ್ಪನವರ ಅಂಬೇಡ್ಕರ್ವಾದಿ ಚಿಂತನೆಗಳು ಸಹ ತಿಪ್ಪಣನವರಲ್ಲಿ ಸಾಕಷ್ಟು ಆಸಕ್ತಿಯನ್ನು ಕೆರಳಿಸಿದ್ದವು. ಈ ಕಾರಣದಿಂದಾಗಿ ಇವರಿಬ್ಬರ ನಡುವೆ ಉತ್ತಮ ಒಡನಾಟವಿತ್ತು. ಹಾಗೆಯೇ ಬಸವಲಿಂಗಪ್ಪನವರು ಸರಳವಾದ ವ್ಯಕ್ತಿತ್ವವನ್ನು ಹೊಂದಿದ್ದು, ದಲಿತರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದರು. ಇವರಿಬ್ಬರು ಏಕಾಂತದಲ್ಲಿದ್ದ ಸಮಯದಲ್ಲಿ ಬಸವಲಿಂಗಪ್ಪ ಕೆಲವು ಮಾತುಗಳನ್ನು ಹೇಳುತ್ತಿದ್ದರು. “ಮನುಷ್ಯ ಹುಟ್ಟಿದಾನೆ, ಒಂದಿನ ಸಾಯ್ತನ್ಲೆ. ಸಾಯೋದಂತು ಖಚಿತ. ಆದರೆ ಕೈಲಾದಷ್ಟು ನಾವು ಅಂಬೇಡ್ಕರರ ವಿಚಾರ ಇಟ್ಕೋಂಡು ಸಹಾಯ ಮಾಡಿ ಸಾಯ್ಬೇಕು.” ಹಾಗೆಯೇ “ದುಡ್ಡು ಮಾಡೋದೊಂದೆ ಅಲ್ಲ, ನಮ್ಮವರು ಕೆಳಮಟ್ಟದಲ್ಲಿದ್ದಾರೆ. ತಿಳುವಳಿಕೆ ಇಲ್ಲ, ಅವರಿಗೆ ಜಾಗೃತಿ ಮೂಡಿಸ್ಬೇಕು” ಎಂದು ಹೇಳುತ್ತಿದ್ದರು. ಬಸವಲಿಂಗಪ್ಪನವರ ಈ ಎಲ್ಲ ಮಾತುಗಳು ತಿಪ್ಪಣ್ಣನವರಲ್ಲಿ ಹೊಸ ಸಂಚಲನವೊಂದನ್ನು ಮೂಡಿಸುತ್ತಿದ್ದವು. ಇವರ ಹೊರಾಟದ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ರೂಡಿಸಿಕೊಂಡು ಮುನ್ನಡೆದರು.
ಹಾಗೆಯೇ ಇವರು ವಿಚಾರವಾದಿಗಳು ಹಾಗೂ ಕಾನೂನು ತಜ್ಞರಾದ ಎಲ್.ಜಿ ಹಾವನೂರರೊಂದಿಗೆ ಉತ್ತಮವಾದ ಒಡನಾಟವನ್ನು ಹೊಂದಿದ್ದರು. ಹಾವನೂರರು ತಮ್ಮ ಸ್ವಂತ ಊರಾದ ರಾಣೆಬೆನ್ನೂರಿಗೆ ದಾವಣಗೆರೆ ಮಾರ್ಗದಲ್ಲಿ ಹೋಗುವ ಸಮಯದಲ್ಲಿ ತಿಪ್ಪಣ್ಣನವರನ್ನು ಭೇಟಿಮಾಡಿ, ಇವರೊಂದಿಗೆ ಮಾತುಕತೆ ನಡೆಸಿ ಹೋಗುತ್ತಿದ್ದರು. ತಿಪ್ಪಣ್ಣನವರು ಓದಿದ್ದು ಕಡಿಮೆಯಾದರೂ ಇಂತಹ ಮಹಾನ್ ವಿಚಾರವಾದಿಗಳ ಸಂಘವನ್ನು ಬೆಳೆಸಿಕೊಳ್ಳುವ ಮೂಲಕವಾಗಿ ಸಾಕಷ್ಟು ವೈಚಾರಿಕ ಜ್ಞಾನವನ್ನು ಪಡೆದುಕೊಂಡಿದ್ದಾರೆ. ತಿಪ್ಪಣ್ಣನವರು ವಿಚಾರಗಳನ್ನು ತಿಳಿದುಕೊಳ್ಳುವ ಹಂಬಲದಿಂದಾಗಿ ಇಂತಹ ಹಲವಾರು ವಿಚಾರವಾದಿಗಳ ಸಂಘವನ್ನು ಬೆಳೆಸಿಕೊಂಡು ಬಂದಿದ್ದಾರೆ. ಸಮಕಾಲಿನ ಸಂದರ್ಭದಲ್ಲಿ ದಲಿತರ ಪ್ರಗತಿ ಹಾಗೂ ಅವರಲ್ಲಿ ಜಾಗೃತಿಯನ್ನು ಮೂಡಿಸುವ ಹಂಬಲದಿಂದ ದಲಿತ ಚಿಂತಕರು ಹಾಗೂ ಪ್ರಗತಿಪರ ವಿಚಾರವಾದಿಗಳಾದ ದೇವನೂರು ಮಹಾದೇವ, ಸಿದ್ಧಲಿಂಗಯ್ಯ, ಜಿ.ಟಿ.ಗೋವಿಂದಪ್ಪ, ಸಿ.ಕೆ.ಮಹೇಶ್ ಅವರಂತಹ ಚಿಂತಕರೊಂದಿಗೆ ಉತ್ತಮ ಒಡನಾಟವನ್ನು ಬೆಳೆಸಿಕೊಂಡು ದಲಿತರ ಪ್ರಗತಿಯತ್ತ ಮುನ್ನೆಡೆಯುತ್ತಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ವಿಚಾರಧಾರೆಗಳಿಂದ ಪ್ರಭಾವಿತರಾದ ತಿಪ್ಪಣ್ಣನವರು ದಿನಾಂಕ 14 ಅಕ್ಟೋಬರ್ 2003ರಂದು ‘ಬೌದ್ಧಧಮ್ಮ ದೀಕ್ಷಾ ಸಮಾರಂಭ ಸಿದ್ಧತಾ ಸಮಿತಿ ಧಮ್ಮ ದೀಕ್ಷಾ ಸಮಾರಂಭ’, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬೌದ್ಧಧಮ್ಮಕ್ಕೆ ಮತಾಂತರಗೊಂಡಿದ್ದಾರೆ. ಬುದ್ಧನ ವಿಚಾರಗಳನ್ನು ತಮ್ಮ ಬದುಕಲ್ಲಿ ಅಳವಡಿಸಿಕೊಂಡಿರು ಇವರು ದಲಿತ ಸಮೂಹಕ್ಕೆ ಜಾಗೃತಿ ಮೂಡಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ದಲಿತರ ಜಾಗೃತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿಯ ಅಡಿಯಲ್ಲಿ ಹುಟ್ಟಿಕೊಂಡಿರುವ ಕೆಲವು ಬಣಗಳ ಮುಖಂಡರು ಅಂಬೇಡ್ಕರ್ ಹೆಸರಿನಲ್ಲಿ ನಡೆಸುತ್ತಿರುವ ರೋಲ್ಕಾಲ್ ನೀತಿಯಿಂದ ಬೇಸರಗೊಂಡಿರುವ ಇವರು, ಅಂಬೇಡ್ಕರ್ ತತ್ವ-ಚಿಂತನೆಗಳಿಗೆ ವಿರುದ್ಧವಾಗಿ ನಡೆಸುತ್ತಿರುವ ಬಾಬಾಸಾಹೇಬರ ಜನ್ಮ ದಿನಾಚರಣೆಯ ಈ ಕ್ರಮದಿಂದ ದಲಿತರ ಪ್ರಗತಿಗಾಗಲಿ ಹಾಗೂ ಅವರಲ್ಲಿ ಜಾಗೃತಗೊಳಿಸುವುದಕ್ಕಾಲಿ ಯಾವುದೇ ಪ್ರಯೋಜನವಿಲ್ಲ ಎಂಬುದನ್ನರಿತ ಇವರು ಇಂತಹ ಮೂಲಭೂತವಾದಿ ಆಚರಣೆಗಳಿಂದ ದೂರಸರಿದು, ಪ್ರತಿವರ್ಷ ಅಂಬೇಡ್ಕರ್ ಜಯಂತಿಗೆ ಬದಲಾಗಿ ಬೌದ್ಧ ಪೂಣ ್ಮೆಯನ್ನು ಸರಳವಾಗಿ ಆಚರಿಸುತ್ತ ಬಂದಿದ್ದಾರೆ. ಈ ಕಾರ್ಯಕ್ರಮಕ್ಕೆ ಯಾರಿಂದಲೂ ಹಣವನ್ನು ವಸೂಲಿ ಮಾಡದೆ ಇವರು ಒಂದು ಸಾವಿರ ರೂಪಾಯಿ ಹಾಗೂ ಇವರ ಅಪ್ತರು, ಪ್ರಗತಿಪರ ಚಿಂತಕರಾದ ಮಹದೇವಪ್ಪನವರು ಒಂದು ಸಾವಿರ ರೂಪಾಯಿಗಳನ್ನು ಹಾಕಿಕೊಂಡು ಕೇವಲ ಎರಡು ಸಾವಿರ ರೂಪಾಯಿಯಲ್ಲಿ ಸರಳವಾಗಿ ಬೌದ್ಧ ಪೂಣ ್ಮೆ ಸಮಾರಂಭವನ್ನು ಆಯೋಜಿಸುತ್ತ ಬಂದಿದ್ದು, ಸಾಧ್ಯವಾದಷ್ಟು ದಲಿತರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತ ಬಂದಿದ್ದಾರೆ. ಪ್ರಸ್ತುತದಲ್ಲಿ ಬೌದ್ಧಧರ್ಮಕ್ಕೆ ಮತಾಂತರಗೊಳಿಸುವಲ್ಲಿ ಎದುರಾಗುವ ಸಮಸ್ಯೆಗಳನ್ನರಿತ ಇವರು, ತಮ್ಮ ಜನತೆಯನ್ನು ಬೌದ್ಧಧರ್ಮಕ್ಕೆ ಮತಾಂತರಗೊಳಿಸುವುದು ಸುಲಭದ ಮಾತಲ್ಲ. ಆದರೆ ಬುದ್ಧನ ವೈಚಾರಿಕ ಚಿಂತನೆಗಳ ಬಗ್ಗೆ ಅರಿವು ಮೂಡಿಸಿದರೆ ದಲಿತರಲ್ಲಿ ಪ್ರಗತಿಯಾಗಬಹುದು ಎಂಬ ಆಶಯವೊತ್ತ ಇವರು ಬೌದ್ಧ ಪೂಣ ್ಮೆಯಂತಹ ಹಲವಾರು ಕಾರ್ಯಕ್ರಮಗಳ ಮೂಲಕ ದಲಿತರಲ್ಲಿ ಅರಿವು ಮೂಡಿಸಲು ಶ್ರಮಿಸುತ್ತಿದ್ದಾರೆ. ತಿಪ್ಪಣ್ಣನವರು ತಮ್ಮ ವೈಚಾರಿಕ ದೃಷ್ಟಿಕೋನದಿಂದ ಬುದ್ಧನನ್ನು ಅಪ್ಪಿಕೊಂಡಿದ್ದಾರೆ. ಇವರ ಈ ವಿಚಾರಗಳ ಹಿಂದೆ ಬಾಬಾಸಾಹೇಬರ ಪ್ರಭಾವವು ಎದ್ದು ಕಾಣುತ್ತದೆ.
ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡ ತಿಪ್ಪಣ್ಣನವರು ಅವರಂತೆಯೇ ದಲಿತರ ಪ್ರಗತಿಗಾಗಿ ತನ್ನ ಕೈಲಾದಷ್ಟು ಪ್ರಾಮಾಣ ಕವಾದ ಹೋರಾಟವನ್ನು ನಡೆಸುತ್ತಿದ್ದಾರೆ. ಇವರು ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ರಾಜಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಮುನ್ನಡೆಯುತ್ತ ಬಂದರೂ ಇದರಿಂದ ತನ್ನ ವೈಯಕ್ತಿಕ ಬದುಕಿಗಾಗಿ ಯಾವುದೇ ಆಸ್ತಿಯನ್ನಾಗಲಿ, ಹಣವನ್ನಾಗಲೀ ಮಾಡಿಕೊಂಡಿಲ್ಲ. ಇಂದಿಗೂ ದಾವಣಗೆರೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಈ ದಂಪತಿಗಳು ಜೀವನ ಸಾಗಿಸುತ್ತಿದ್ದಾರೆ. ರಾಜಕೀಯ ಭ್ರಷ್ಟರ ಕೂಪ ಎಂಬುದಾಗಿ ಅರಿತಿದ್ದರೂ ಇದರಿಂದ ಸಾಧ್ಯವಾದಷ್ಟು ದಲಿರು ಹಾಗೂ ಹಿಂದುಳಿದವರ ಪ್ರಗತಿಗಾಗಿ ಕೈಲಾದಷ್ಟು ಸಹಾಯ ಮಾಡುವ ಉದ್ಧೇಶದಿಂದ ರಾಜಕೀಯದಲ್ಲಿ ಮುಂದುವರೆಯುವ ಮೂಲಕ ತನ್ನ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಉನ್ನತ ವರ್ಗದವರೇ ಹೆಚ್ಚಾಗಿರುವ ಮತ್ತು ಆರ್ಥಿಕವಾಗಿ ಪ್ರಬಲವಾಗಿರುವ ಇವರ ಗ್ರಾಮದಲ್ಲಿನ ಚುನಾವಣೆಯೊಂದರಲ್ಲಿ ಒಟ್ಟು ಪಂಚಾಯಿತಿಯ ಹದಿನೈದು ಸೀಟುಗಳಲ್ಲಿ ಇವರು ಹನ್ನೇರಡು ಸೀಟುಗಳನ್ನು ತಮ್ಮ ಪರವಾದವರನ್ನೇ ಜಯಶೀಲರಾಗಿ ಮಾಡಿಕೊಂಡಿರುತ್ತಾರೆ. ಈ ಸಾಧನೆಯು ಇವರ ಹೋರಾಟದಲ್ಲಿನ ಕ್ರಿಯಾಶೀಲತೆಯನ್ನು ಎತ್ತಿಹಿಡಿಯುತ್ತದೆ. ರಾಜಕೀಯದಲ್ಲಿ ಆಳವಾದ ಅನುಭವವುಳ್ಳ ಇವರು ಅಂಬೇಡ್ಕರ್ ಕಾಂಗ್ರೇಸ್ ಪಕ್ಷವನ್ನು ಕುರಿತು ಹೇಳುತ್ತಿದ್ದಂತಹ ‘ಕಾಂಗ್ರೇಸ್ ಉರಿಯುವ ಮನೆ’ ಎಂಬ ತತ್ವವನ್ನು ಸಂಪೂರ್ಣವಾಗಿ ಮನಗಂಡಿದ್ದಾರೆ. ಆದರೆ ಇಂದಿನ ಬಿಜೆಪಿಗೆ ಹೋಲಿಸಿದರೆ ಕಾಂಗ್ರೇಸ್ ಅದರಲ್ಲೆ ಉತ್ತಮವಾದುದು ಎಂಬ ಅನಿವಾರ್ಯತೆಯಿಂದ ಕಾಂಗ್ರೇಸ್ ಪಕ್ಷದಲ್ಲಿ ಮುನ್ನಡೆಯುತ್ತಿದ್ದಾರೆ. ಈ ದೇಶದ ದಲಿತರು ಹಾಗೂ ದಮನಿತರ ಪರವಾಗಿ ಜನ್ಮತಾಳಿದ ಸಮಾಜವಾದಿ ಪಕ್ಷದ ಮಹತ್ವವನ್ನರಿತ ಇವರು, ಮಾಯವತಿ ಮಾಡಿದ ತಪ್ಪಿನಿಂದ ಈ ಪಕ್ಷಕ್ಕಾದ ಅನ್ಯಾಯವನ್ನು ಸಂಪೂರ್ಣವಾಗಿ ಅರಿತ್ತಿದ್ದಾರೆ. ಮಾಯವತಿ ಮಾಡಿದ ತಪ್ಪಿನಿಂದಾಗಿ ದಲಿತರ ಬದುಕಿನ ಮೇಲಾದ ಪ್ರಭಾವವನ್ನು ಸಂಪೂರ್ಣವಾಗಿ ಅರಿತಿದ್ದಾರೆ.
ತಿಪ್ಪಣ್ಣನವರು ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾದವರಲ್ಲ. ಹಲವಾರು ಪ್ರಗತಿಪರವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಅದರಂತೆ ಬಾಳಿ ಬದುಕುತ್ತಿದ್ದಾರೆ. ಇಲ್ಲಿನ ಪುರೋಹಿತಶಾಹಿ ವ್ಯವಸ್ಥೆಯಿಂದ ಇಲ್ಲಿನ ತಳಸಮುದಾಯದ ಜನತೆಯ ಮೇಲಾದ ಆಕ್ರಮಣ ಮತು ದಬ್ಬಾಳಿಕೆಗಳನ್ನು ಸಂಪೂರ್ಣವಾಗಿ ಮನಗಂಡಿರುವ ಇವರು ಜಾತಿಗೊಂದು ಮಠಗಳನ್ನು ನಿರ್ಮಿಸುತ್ತಿರುವ ಚಿತ್ರದುರ್ಗದ ಮುರುಘ ಶರಣರ ಈ ಕ್ರಮದ ವಿರುದ್ಧ ಹೋರಾಟ ನಡೆಸಿದ್ದಾರೆ. ಹಾಗೆಯೇ ಈ ನಾಡಿನ ಮೂಲ ನಿವಾಸಿಯಾಗಿರುವ ಬಲಿಚಕ್ರವರ್ತಿಯನ್ನು ಸಂಹಾರ ಮಾಡಿದ ಸವಿನೆನಪಿಗಾಗಿ ಪುರೋಹಿತಶಾಹಿಯು ಆಚರಿಸುತ್ತಾ ಬಂದಿರುವ ಬಲಿ ಪಾಡ್ಯಮಿಯನ್ನು ನಮ್ಮವರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವ ಬಗ್ಗೆ ತೀವ್ರ ವೇದನೆಯನ್ನು ವ್ಯಕ್ತಪಡಿಸುವ ಇವರು, ಅಂದು ಉಪವಾಸ ಇರುವ ಮೂಲಕ ಆ ದಿನವನ್ನು ‘ಕರಾಳದಿನ’ವನ್ನಾಗಿ ಆಚರಿಸುತ್ತಾ ಬಂದಿದ್ದಾರೆ. ಇದೇ ರೀತಿಯಾಗಿ ಪುರೋಹಿತಶಾಹಿಯು ತನ್ನ ಅಸ್ತಿತ್ವಕ್ಕಾಗಿ ದಲಿತರು ಹಾಗೂ ಈ ನಾಡಿನ ದಮನಿತರನ್ನು ಹತ್ತಿಕ್ಕುತ್ತಾ ಬಂದಿರುವ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ವಿರೋಧಿಸುವ ನೆಲೆಯಲ್ಲಿ ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.
ಶ್ರೀಯುತರು ರಾಜ್ಯ ಮಟ್ಟದಲ್ಲಾಗಲಿ, ರಾಷ್ಟ್ರ ಮಟ್ಟದಲ್ಲಾಗಲಿ ಹೋರಾಟ ಮಾಡಿ ಗುರುತಿಸಿಕೊಂಡವರಲ್ಲ. ತಳಮಟ್ಟದ ಗ್ರಾಮೀಣ ಬದುಕಿನಲ್ಲಿಯೇ ಬೆಳೆದುಬಂದು, ತನ್ನ ತಿಳುವಳಿಕೆಯಿಂದಾಗಿ ತನ್ನ ಸಮುದಾಯದ ಜನತೆಯ ಮೇಲೆ ಶತಶತಮಾನಗಳಿಂದ ಆಗುತ್ತಿದ್ದಂತಹ ಅನ್ಯಾಯ ಅಕ್ರಮಗಳ ವಿರುದ್ಧ ಸಮರಸಾರಿ, ಅದರಿಂದ ತೀವ್ರವಾದ ಪಟ್ಟು ತಿಂದವರು. ಇವರ ಕುಟುಂಬದ ಮೇಲೆ ಉನ್ನತ ವರ್ಗದವರು ನಡೆಸಿದ ಹಲ್ಲೆಯಿಂದ ತಮ್ಮ ಹೆಂಡತಿಯ ಗರ್ಭಕ್ಕೆ ಪ್ರಬಲವಾದ ಪೆಟ್ಟುಬಿದ್ದು ತನ್ನ ಮುಂದಿನ ಬದುಕನ್ನು ಬೆಳಗಲು ಬೇಕಾದ ಸಂತಾನವನ್ನೆ ಕಳೆದುಕೊಂಡರು. ಇಷ್ಟಾದರೂ ಇವರು ಎದೆಗುಂದದೆ ತಮ್ಮ ಹೋರಾಟವನ್ನು ಮುನ್ನಡೆಸುತ್ತಾ ಬಂದಿದ್ದಾರೆ. ಇವರ ಹೋರಾಟಕ್ಕೆ ಯಾವುದೇ ಸಂಘಟನೆ ಹಾಗೂ ಚಳುವಳಿಗಳ ಬೆಂಬಲವಿಲ್ಲದೆ ಬಾಬಾಸಾಹೇಬರು ಈ ದೇಶಕ್ಕೆ ನೀಡಿರುವ ಸಂವಿಧಾನವನ್ನೆ ಪ್ರಬಲ ಅಸ್ತ್ರವಾಗಿಟ್ಟುಕೊಂಡು ಅಸಮಾನತೆ, ದೌರ್ಜನ್ಯ ಹಾಗೂ ಆಕ್ರಮಣಕಾರಿ ನೀತಿಯ ವಿರುದ್ದ ಹೋರಾಟ ನಡೆಸುತ್ತಾ ಬಂದಿದ್ದಾರೆ. ನಿಜವಾಗಿಯೂ ಈ ದೇಶದ ಪ್ರಗತಿಯಾಗಬೇಕಾಗಿರುವು ರಾಜಧಾನಿಗಳ ಮಟ್ಟದಲ್ಲಲ್ಲ. ಅದು ಗ್ರಾಮೀಣ ಮಟ್ಟದಲ್ಲಿ. ಈ ದೇಶದ ಪ್ರಗತಿಗಾಗಿ ಹೋರಾಟ ನಡೆಸಿದಂತಹ ಬುದ್ಧ, ಬಸವ, ಫುಲೆ, ವಿವೇಕಾನಂದ, ಅಂಬೇಡ್ಕರ್, ಭಗತ್ಸಿಂಗ್ ಅವರಂತಹ ಕ್ರಾಂತಿಕಾರಿ ಹೋರಾಟಗಾರರ ಹೋರಾಟ ಕ್ರಮವು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿ ಗ್ರಾಮೀಣ ಮಟ್ಟದಲ್ಲಿ ದಲಿತರು ಹಾಗೂ ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ನಿಸ್ವಾಥ್ವಾಗಿ ಹೋರಾಟ ನಡೆಸುತ್ತಿರುವಂತಹ ಇಂತವರು ಅಷ್ಟೇ ಮುಖ್ಯವಾಗಿದ್ದಾರೆ. ಬಾಬಾಸಾಹೇಬರು ಬೆಂಗಳೂರಿಗೆ ಬಂದ ಸಮಯದಲ್ಲಿ ಅತ್ಯಂತ ನೋವಿನಿಂದ ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಅದೇನೆಂದರೆ, “ನಾನು ನನ್ನ ಹೋರಾಟದಲ್ಲಿ ವಿದ್ಯಾವಂತರಿಗಾಗಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದೇನೆ. ಆದರೆ ಅನಕ್ಷರಸ್ಥರಿಗಾಗಿ ಏನು ಮಾಡಲು ಆಗಲಿಲ್ಲ. ಈ ವಿದ್ಯಾವಂತರು ಅವಿದ್ಯಾವಂತರ ಪ್ರಗತಿಗೆ ಶ್ರಮಿಸುತ್ತಾರೆಂದು ನಾನು ಭಾವಿಸಿದ್ದೆ. ಅದು ನೆರವೇರಲಿಲ್ಲ” ಎಂಬುದಾಗಿ ಹೇಳುತ್ತಾರೆ. ಅಂಬೇಡ್ಕರರ ಈ ಕನಸು ನೆರವೇರಬೇಕಾದರೆ ಗ್ರಾಮೀಣ ಮಟ್ಟದಲ್ಲಿ ತಿಪ್ಪಣ್ಣನಂತಹ ನಿಸ್ವಾರ್ಥಿಗಳಿಂದ ಮಾತ್ರ ಸಾಧ್ಯವೇ ಹೊರತು, ಅಂಬೇಡ್ಕರ್ ಜಯಂತಿಯ ದಿನ ಮಾತ್ರ ಅವರ ಭಾವಚಿತ್ರದೆದುರು ಭಾಷಣ ಬಿಗಿದು, ಮರುದಿನ ದಲಿತರಿಗು ನನಗೂ ಯಾವುದೇ ಸಂಬಂಧವಿಲ್ಲ ಎಂಬ ಬಲಿತ ದಲಿತ ಮನಸ್ಥಿತಿಯವರಿಂದಾಗಲಿ, ಅಂಬೇಡ್ಕರ್ ಹೆಸರಿನಲ್ಲಿ ಹಣ ವಸೂಲಿ ಮಾಡಿ ಅವರ ಭಾವಚಿತ್ರವನ್ನು ಮೆರವಣ ಗೆ ಮಾಡುತ್ತಾ ಕುಡಿದು, ಕುಣ ದು ಕುಪ್ಪಳಿಸುವ ಮನಸ್ಥಿತಿಯವರಿಂದಲಾಗಲೀ ಸಾಧ್ಯವಿಲ್ಲ.
ನಿಜವಾಗಿಯೂ ಅಂಬೇಡ್ಕರ್ ಹೋರಾಟ ಸಾರ್ಥಕವಾಗುವು ತಳಸಮುದಾಯದ ನೆಲೆಯಲ್ಲಿ ನಿಂತು ಹೋರಾಟ ಮಾಡುವವರಿಂದ ಮಾತ್ರ. ಇನ್ನು ನಮ್ಮ ಗ್ರಾಮಗಳಲ್ಲಿ ದಲಿತರಲ್ಲಿ ಅಸಮಾನತೆ ನೆಲೆಯೂರಿರುವುದಕ್ಕೆ ಕಾರಣ ಇವರಲ್ಲಿನ ಜಾಗೃತಿಯ ಕೊರತೆಯಾಗಿದೆ. ಕತ್ತಲಗೆರೆ ತಿಪ್ಪಣ್ಣನಂತಹ ಗ್ರಾಮೀಣ ಪ್ರತಿಭೆಗಳು ನಮ್ಮ ರಾಷ್ಟ ಮಟ್ಟದ ಹಾಗೂ ರಾಜ್ಯ ಮಟ್ಟದ ಹೋರಾಟಗಾರರಿಗೆ ಆದರ್ಶನಿಯವಾಗಿದ್ದಾರೆ. ಇಂತವರ ಜೀವನ ಕ್ರಮ ಹಾಗೂ ಅವರ ಹೋರಾಟದ ಮಾದರಿಗಳನ್ನು ಅಳವಡಿಸಿಕೊಂಡು ಮುನ್ನಡೆದರೆ ಅಂಬೇಡ್ಕರ್ ಮತ್ತು ಬಿ. ಕೃಷ್ಣಪ್ಪನವರಂತಹÀ ಹೋರಾಟಗಾರರ ಶ್ರಮ ಸಾರ್ಥಕವಾಗುತ್ತದೆ. ಇದರಿಂದ ಅಂಬೇಡ್ಕರ್ ಎಳೆದುತಂದ ತೇರು ಮುನ್ನುಗ್ಗುತ್ತದೆ, ಕರ್ನಾಟಕದ ದಲಿತರ ಗುಡಿಸಲಿನಲ್ಲಿ ಬಿ. ಕೃಷ್ಣಪ್ಪನವರು ಹಚ್ಚಿದ ಹಣತೆ ಬೆಳಗುತ್ತದೆ ಮಾತ್ರವಲ್ಲ ಬೆಳಕು ನೀಡುತ್ತದೆ. ಇಲ್ಲದೇ ಹೋದರೆ ಅಂಬೇಡ್ಕರ್ ಎಳೆದು ತಂದ ತೇರು ನಿಂತಲೇ ನಿಂದು ಗೆದ್ದಲು ಹಿಡಿಯುತ್ತದೆ. ಬಿ. ಕೃಷ್ಣಪ್ಪನವರು ಹಚ್ಚಿದ ಹಣತೆ ಎಣ್ಣೆ ಇಲ್ಲದೆ ತನ್ನ ಬತ್ತಿಯನ್ನೆಲ್ಲ ತಿಂದು ನಂದಿ ಹೋಗುತ್ತದೆ.
(Author: ಕೆ.ಎ ಓಬಳೇಶ್, ಮೋ: 9538345639)

ದಿನದ ಸುದ್ದಿ
ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.
ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.
ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.
ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.
ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.
ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.
ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.
ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

- ಡಾ. ಸಿ ಬಿ ಅನ್ನಪೂರ್ಣ ಜೋಗೇಶ್, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.
ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.
ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.
ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.
ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.
ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.
ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.
ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.
ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.
ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.
ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

- ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ
ಕರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.
ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.
ಬಾಲ್ಯ ಮತ್ತು ಶಿಕ್ಷಣ
ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.
ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.
ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ
ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ
ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.
ರಂಗಭೂಮಿ ಮತ್ತುಈಶ್ವರಪ್ಪ
ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್ಆಫ್ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.
ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.
1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.
1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.
1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಸಾಹಿತ್ಯ ಸೇವೆ
ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.
ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಸಂದ ಪ್ರಶಸ್ತಿಗಳು
ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
- 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
- 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
- 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
- 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
- 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ
2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ
- 2014ಮಹಲಿಂಗರಂಗ ಪ್ರಶಸ್ತಿ
- 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ
ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.
ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.
[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ6 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ2 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ5 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ2 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ