Connect with us

ನೆಲದನಿ

ಕತ್ತಲಗೆರೆ ತಿಪ್ಪಣ್ಣನೆಂಬ ಗ್ರಾಮೀಣ ಪ್ರತಿಭೆಯ ಹೋರಾಟದ ಹಾದಿ

Published

on

ಭಾರತದ ದಲಿತಪರ ಹೋರಾಟದ ಹಾದಿಯಲ್ಲಿ ಅಂಬೇಡ್ಕರರನ್ನು ಮಾದರಿಯಾಗಿಟ್ಟುಕೊಂಡು, ಅವರ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಹಲವಾರು ವ್ಯಕ್ತಿಗಳು ತಮ್ಮ ಹೋರಾಟದ ಹಾದಿಯನ್ನು ನಡೆಸಿಕೊಂಡು ಬಂದಿದ್ದಾರೆ. ಅಂಬೇಡ್ಕರ್‍ವಾದದಿಂದ ಪ್ರಭಾವಿತರಾಗಿ, ಅವರ ತತ್ವಾದರ್ಶಗಳನ್ನು ತಮ್ಮಲ್ಲಿ ರೂಡಿಸಿಕೊಂಡು ಕರ್ನಾಟಕದಲ್ಲಿಯೂ ಬಹುತೇಕ ವಿಚಾರವಾದಿಗಳು ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.

ಅಂತಹ ಹೋರಾಟಗಾರರನ್ನು ಗುರುತಿಸಿ, ಅವರ ಹೋರಾಟದ ಹಾದಿಯ ಅನುಭವಗಳನ್ನು ಪರಿಚಯಿಸುವ ಉದ್ಧೇಶದಿಂದ ಪ್ರಸ್ತುತ ಲೇಖನವನ್ನು ರಚಿಸಲಾಗಿದೆ. ದಲಿತರ ಜಾಗೃತಿ, ವಿಮೋಚನೆ ಹಾಗೂ ಪ್ರಗತಿಗಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ದಲಿತ ಚಿಂತಕರನ್ನು ಶೋಧಿಸಲು ಮುಂದಾದಾಗ ಎಲೆಮರೆಯ ಕಾಯಿಯಂತಿರುವ ಬಹುತೇಕ ವಿಚಾರವಾದಿಗಳು ಕಂಡುಬಂದರು. ಇವರುಗಳಲ್ಲಿ ಬಹುತೇಕರು ದಲಿತರ ವಿಮೋಚನೆಗಾಗಿಯೇ ತಮ್ಮ ಬದುಕನ್ನು ಸಮರ್ಪಿಸಿಕೊಂಡವರಿದ್ದಾರೆ. ಅಂತಹ ಹೋರಾಟಗಾರರಲ್ಲಿ ಕತ್ತಲಗೆರೆ ತಿಪ್ಪಣ್ಣನವರು ಒಬ್ಬರಾಗಿದ್ದಾರೆ. ಇವರ ಹೋರಾಟದ ಕ್ರಮವು ಮುಂದಿನ ಯುವ ಹೋರಾಟಗಾರರಿಗೆ ಮಾದರಿಯಾಗಬಹುದೆಂದು ಭಾವಿಸಲಾಗಿದೆ. ಹೀಗಾಗಿ ತನ್ನ ವೈಯಕ್ತಿಕ ಬದುಕನ್ನು ಲೆಕ್ಕಿಸದೆ, ಸಮಾಜದ ಪ್ರಬಲ ವರ್ಗವನ್ನು ಎದುರುಹಾಕಿಕೊಂಡು, ದಲಿತರ ಉದ್ಧಾರಕ್ಕಾಗಿ ಶ್ರಮಿಸಿದ ಗ್ರಾಮೀಣ ಪ್ರತಿಭೆಯಾದ ಕತ್ತಲಗೆರೆ ತಿಪ್ಪಣ್ಣನೆಂಬ ದಲಿತ ಹೋರಾಟಗಾರನ ಹೋರಾಟದ ಹಾದಿಯನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಉದ್ಧೇಶವಾಗಿದೆ.

ಶ್ರೀಯುತ ಕತ್ತಲಗೆರೆ ತಿಪ್ಪಣ್ಣನವರು ದಾವಣಗೆರೆ ಜಿಲ್ಲೆಯ ಕತ್ತಲಗೆರೆ ಎಂಬ ಗ್ರಾಮದಲ್ಲಿ ದಿನಾಂಕ 16 ಜನವರಿ 1956ರಂದು ಶ್ರೀ ಉಳಿವಪ್ಪ ಶ್ರೀಮತಿ ನಾಗಮ್ಮ ಎಂಬ ದಂಪತಿಗಳ ಸುಪುತ್ರರಾಗಿ ದಲಿತ ಕುಟುಂಬದಲ್ಲಿ ಜನಿಸಿದರು. ಇವರು ಬಾಲ್ಯದಿಂದಲೂ ಬಡತನದ ಬವಣೆಯಲ್ಲಿಯೇ ತಮ್ಮ ಜೀವನವನ್ನು ಮುಂದುವರೆಸಿಕೊಂಡು ಬಂದವರಾಗಿದ್ದಾರೆ. ಇವರು ಎಂಟನೇ ತರಗತಿಯನ್ನು ಓದುವ ಸಮಯದಲ್ಲಿ ಇವರ ತಾಯಿ ಅನಾರೋಗ್ಯಕ್ಕೆ ತುತ್ತಾದರು. ಈ ಸಮಯದಲ್ಲಿ ಇವರ ತಾಯಿಗೆ ಚಿಕಿತ್ಸೆ ಕೊಡಿಸುವುದಕ್ಕೆ ಇವರ ತಂದೆಯ ಬಳಿ ಹಣವಿಲ್ಲದ ಕಾರಣ, ಬಾಲಕನಾಗಿದ್ದ ತಿಪ್ಪಣ್ಣನವರು ತನ್ನನ್ನು ಜೀತಕ್ಕೆ ನೇಮಿಸಿ ಹಣ ಪಡೆದು ತನ್ನ ತಾಯಿಗೆ ಚಿಕಿತ್ಸೆಯನ್ನು ಕೊಡಿಸುವಂತೆ ತಮ್ಮ ತಂದೆಗೆ ಸಲಹೆ ನೀಡಿದರು. ಅಸಹಾಯಕರಾದ ಇವರ ತಂದೆಯು ಮಗನ ಮಾತಿನಂತೆ ಇವರನ್ನು ಶಾಲೆಯಿಂದ ಬಿಡುಗಡೆಗೊಳಿಸಿ ವರ್ಷಕ್ಕೆ 25 ರೂಪಾಯಿಗೆ ಜೀತಕ್ಕೆ ಸೇರಿಸಿ, ಇವರ ತಾಯಿಗೆ ಚಿಕಿತ್ಸೆ ಕೊಡಿಸಿದರು. ಆದರೆ ಇವರ ತಾಯಿಯ ಕಾಯಿಲೆಯು ಮಾತ್ರ ಗುಣವಾಗದೆ ಕಲವೇ ದಿನಗಳಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡರು. ತಮ್ಮ ತಾಯಿಯ ಚಿಕಿತ್ಸೆಗೆಂದು ಪಡೆದ ಹಣವನ್ನು ತೀರಿಸಲು ಒಂದು ವರ್ಷಗಳ ಕಾಲ ಜೀತ ಮಾಡಿ ಹಣವನ್ನು ತೀರಿಸಬೇಕಾಯಿತು. ಈ ಕಾರಣದಿಂದಾಗಿ ತಿಪ್ಪಣ್ಣನವರ ಶಿಕ್ಷಣವು ಕುಂಟಿತವಾಯಿತು.

ತಿಪ್ಪಣ್ಣನವರು ತಮ್ಮ ತಾಯಿಯು ಮರಣ ಹೊಂದಿದ ತರುವಾಯದಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗಲಿಲ್ಲ. ಈ ಸಮಯದಲ್ಲಿ ಇವರ ತಂದೆಯು ಇವರ ತಮ್ಮನನ್ನು ಕರೆದುಕೊಂಡು ಬೇರೆಡೆಗೆ ಹೊರಟು ಹೋದರು. ಆಗ ಇವರು ದಾವಣಗೆರೆಯಲ್ಲಿ ತಮ್ಮ ಸಂಬಂಧಿಕರ ಮನೆಯೊಂದರಲ್ಲಿ ಆಶ್ರಯ ಪಡೆದರು. ನಂತರ ಇವರು ಬೆಳೆದು ದೊಡ್ಡವರಾದ ಮೇಲೆ ಮದುವೆ ಮಾಡಿಕೊಂಡು ತಮ್ಮ ಊರಾದ ಕತ್ತಲಗೆರೆಯಲ್ಲಿ ಬಂದು ನೆಲೆಸಿದರು. ತಮ್ಮ ಸ್ವಗ್ರಾಮಕ್ಕೆ ಮರಳಿದ ತರುವಾಯದಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ತಮ್ಮಲ್ಲಿ ಕರಗತವಾಗಿದ್ದ ಕೆಲವು ವಿಚಾರಗಳಿಂದ ದಲಿತರ ಹಕ್ಕು ಹಾಗೂ ಸವಲತ್ತುಗಳಿಗಾಗಿ ಹೋರಾಟ ನಡೆಸಲು ಮುಂದಾದರು. ದಲಿತರ ಮೇಲೆ ನಡೆಯುವ ಶೋಷಣೆ ಹಾಗೂ ಹಲ್ಲೆಗಳನ್ನು ಖಂಡಿಸುವತ್ತ ತನ್ನ ಹೋರಾಟವನ್ನು ಮುಂದುವರೆಸಿದರು. 1987ರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಜಯಶೀಲರಾದ ನಂತರದಲ್ಲಿ ಇಲ್ಲಿನ ಪಂಚಾಯಿತಿಯಲ್ಲಿ ಉನ್ನತ ವರ್ಗದವರು ತಮಗೆ ಬೇಕಾದಂತೆ ಸಿಬ್ಬಂದಿಗಳನ್ನು ನೇಮಿಸಿಕೊಂಡಿರುವುದನ್ನು ಖಂಡಿಸಿ ಸಂವಿಧಾನ ಬದ್ಧವಾಗಿ ಮೀಸಲಾತಿಯನ್ನು ಪಾಲಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಐದು ಜನ ಸಿಬ್ಬಂದಿಯನ್ನು ಇಲ್ಲಿ ನೌಕರರಾಗಿ ನೇಮಿಸಿದರು. ಆ ಐದು ಜನರಿಂದು ಸರ್ಕಾರದ ಖಾಯಂ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗೆ ದಲಿತರ ಪ್ರಗತಿಗಾಗಿ ಸಂವಿಧಾನದ ಆಶಯಗಳನ್ನು ಜಾರಿಗೆ ತರುವತ್ತ ತಮ್ಮ ಹೋರಾಟವನ್ನು ಮುಂದುವರೆಸಿದ ಇವರು ತಮ್ಮ ಗ್ರಾಮದ ಮಾಜಿ ಶಾಸಕರಾದ ಕುಂದೂರು ರುದ್ರಪ್ಪ ಹಾಗೂ ಅವರ ಮಗನನ್ನು ಎದುರು ಹಾಕಿಕೊಳ್ಳಬೇಕಾಯಿತು.

ರಾಜಕಿಯ ಪ್ರವೇಶಿಸಿದ ತರುವಾಯದಲ್ಲಿ ಮಾಜಿ ಶಾಸಕನ ಪುತ್ರನು ಗ್ರಾಮ ಪಂಚಾಯಿತಿಯ ಪ್ರಧಾನ (ಇಂದಿನ ಅಧ್ಯಕ್ಷ ಸ್ಥಾನ) ನಾಗಿದ್ದುಕೊಂಡು ನಡೆಸುತ್ತಾ ಬಂದಿರುವ ಅವ್ಯವಹಾರಗಳನ್ನು ಬಯಲಿಗೆಹಾಕುವತ್ತ ತಮ್ಮ ಹೋರಾಟವನ್ನು ಮುಂದುವರೆಸಿದರು. ತಿಪ್ಪಣ್ಣನವರು 1987ರಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರಾದ ಸಂದರ್ಭದಲ್ಲಿ ಈ ಪಂಚಾಯಿತಿಯ ಪ್ರಧಾನನು ಎಸ್.ಸಿ/ಎಸ್.ಟಿ ಕಾಲೋನಿಯಲ್ಲಿ ರಸ್ತೆ, ಬಾವಿ ದುರಸ್ತಿ ಮಾಡಿಸಿದ್ದೇನೆ ಎಂದು ಹೇಳಿ ಏನು ಕೆಲಸ ಮಾಡದೆ ಬಿಲ್ಲು ಮಾಡಿಸಿಕೊಂಡು ಹಣವನ್ನು ತಿಂದುಹಾಕಿದ್ದ. ಇದನ್ನು ತಿಳಿದ ತಿಪ್ಪಣ್ಣನವರು ಅಂದಿನ ಬಿ.ಡಿ.ಓ ಅಧಿಕಾರಿಗೆ (ಇಂದಿನ ಬಿ.ಓ) ದೂರು ಸಲ್ಲಿಸಿದ್ದರು. ಈ ತಾಲ್ಲೂಕು ಅಧಿಕಾರಿಯು ಪ್ರಧಾನರೊಂದಿಗೆ ಶಾಮೀಲಾಗಿ ವಿಚಾರಣೆಗೆ ಬಂದಾಗ, ಅವನ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದೆ ಅವರೊಂದಿಗೆ ಸಹಕರಿಸುವಂತೆ ಸಲಹೆ ನೀಡಿದನು. ಇದರಿಂದ ಕೋಪಗೊಂಡ ತಿಪ್ಪಣ್ಣನವರು ಅಂದಿನ ಶಿವಮೊಗ್ಗದ ಜಿಲ್ಲಾ ಪರಿಷತ್ತಿನ ಮುಖ್ಯ ಕಾರ್ಯದರ್ಶಿಯಾಗಿದ್ದ ಭರತ್‍ಲಾಲ್ ಮೀನಾ ಅವರಿಗೆ ದೂರು ನೀಡಿದರು. ಇವರು ಆರ್.ಆರ್ ಕೂಸಗೂರ ಎಂಬ ಉಪ ಕಾರ್ಯದರ್ಶಿಯನ್ನು ಇದರ ವಿಚಾರಣೆಗೆ ನೇಮಿಸಿದರು. ಇವರು ಸಹ ಪ್ರಧಾನರೊಂದಿಗೆ ಭಾಗಿಯಾಗಿ ಅವರಿಗೆ ಸಹಕರಿಸುವಂತೆ ಸಲಹೆ ನೀಡಿದರು. ಇಲ್ಲಿಯೂ ತನಗೆ ನ್ಯಾಯ ಸಿಗದ ಕಾರಣದಿಂದಾಗಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಿಂದ ಜಿಲ್ಲಾ ಪರಿಷತ್ತಿನ ಅಧಿಕಾರಿಗಳನ್ನು ಸೇರಿಸಿ ರಾಜ್ಯಪಾಲರಿಗೆ ದೂರು ನೀಡಿದರು. ರಾಜ್ಯಪಾಲರು ಈ ದೂರನ್ನು ಪರಿಶೀಲಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಮಂತ್ರಿಗಳಿಗೆ ಪತ್ರವನ್ನು ರವಾನಿಸಿದರು. ಆಗ ಗ್ರಾಮೀಣಾಭಿವೃದ್ಧಿ ಮಂತ್ರಿಯಾಗಿದ್ದ ಬಿ. ಬಸವಲಿಂಗಪ್ಪನವರನ್ನು ಇವರು ಭೇಟಿಯಾಗಿ ವಾಸ್ತವವನ್ನು ವಿವರಿಸಿದಾಗ ಇವರಿಗೆ ಮಂತ್ರಿಗಳು ಕೆಲವು ದಿನಗಳ ಕಾಲ ತಮ್ಮ ಮನೆಯಲ್ಲಿ ಆಶ್ರಯ ನೀಡಿ, ನಂತರದಲ್ಲಿ ಈ ಕೇಸನ್ನು ಪರಿಶೀಲಿಸಿ ಕ್ರಮವನ್ನು ಕೈಗೊಳ್ಳವಂತೆ ಎಸ್.ಎಲ್. ಗಂಗಾಧರಪ್ಪ ಎಂಬ ಡಿವಿಜನ್ ಕಮೀಷನರನ್ನು ನೇಮಿಸಿ, ಇವರಿಗೆ ರಕ್ಷಣೆ ನೀಡುವಂತೆ ತಿಳಿಸಿ ಕಳುಹಿಸಿದರು. ಕತ್ತಲಗೆರೆ ಗ್ರಾಮಕ್ಕೆ ಬಂದು ಎಲ್ಲ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿಯನ್ನು ಪರಿಶೀಲಿಸಿದ ಡಿವಿಜನ್ ಕಮೀಷನರು ಇಲ್ಲಿನ ಅವ್ಯವಹಾರಕ್ಕೆ ಸಹಕರಿಸಿದ ಇಂಜಿನಿಯರ್ ಹಾಗೂ ಕಾರ್ಯದರ್ಶಿಯನ್ನು ಅಮಾನತುಗೊಳಿಸಿದರು.

ಹೀಗೆ ತಮ್ಮ ಹೋರಾಟವನ್ನು ಮುಂದುವರೆಸಿದ ತಿಪ್ಪಣ್ಣನವರು ದಲಿತರಿಗೆ ಆಗುತ್ತಿರುವಂತಹ ಅನ್ಯಾಯಗಳನ್ನು ಶೋಧಿಸತೊಡಗಿದರು. ಈ ಗ್ರಾಮದ ಮಾಜಿ ಶಾಸಕರಾದ ಕುಂದೂರು ರುದ್ರಪ್ಪನವರು ದಲಿತ ವರ್ಗದ ಮಾದಿಗ ಜನಾಂಗಕ್ಕೆ ಸರ್ಕಾರವು ನೀಡಿದ 25 ಎಕರೆ ಉಂಬಳಿ ಭೂಮಿಯನ್ನು ಆಕ್ರಮಣ ಮಾಡಿಕೊಂಡು ತನ್ನ ಸ್ವಾಧೀನಕ್ಕೆ ವಶಪಡಿಸಿಕೊಂಡಿದ್ದ. ಇದನ್ನು ತಿಳಿದ ತಿಪ್ಪಣ್ಣನವರು ಈ ಭೂಮಿಯನ್ನು ಅನುಭವಿಸುತ್ತಿದ್ದ ಮಾಜಿ ಶಾಸಕನ ಮಗನ ವಿರುದ್ಧ ಮಾದಿಗ ಜನಾಂಗಕ್ಕೆ ಅರಿವು ಮೂಡಿಸಿ ಕೇಸು ದಾಖಲಿಸಿದರು. ಈ ಕೇಸನ್ನು ಅಂದಿನ ಜಿಲ್ಲಾಧಿಕಾರಿಯಾದ ನಾರಾಯಣ ಸ್ವಾಮಿ ಎಂಬುವವರು ತಮ್ಮ ನ್ಯಾಯಾಲಯದ ಸಮ್ಮುಖದಲ್ಲಿ ಬಗೆಹರಿಸುವುದಾಗಿ ಕೆಲವು ದಿನಗಳ ಕಾಲ ವ್ಯಾಜ್ಯೆಯನ್ನು ಮುಂದುವರೆಸಿ, ಈ ಕೇಸಿನ ವಿಚಾರದಲ್ಲಿ ಪಾರದರ್ಶಕತೆಯನ್ನು ಮೆರೆಯದೆ ಕಾನೂನಿನ ವಿರುದ್ಧವಾಗಿ ಮಾಜಿ ಶಾಸಕನ ಕಡೆಯವರಿಗೆ ಈ ಭೂಮಿ ಸೇರಿದ್ದು ಎಂದು ತೀರ್ಪು ನೀಡಿದರು. ಇಲ್ಲಿನ ಮತ್ತೊಂದು ದುರಂತವೆಂದರೆ ಅಂದು ಜಿಲ್ಲಾಧಿಕಾರಿಯಾಗಿದ್ದ ನಾರಾಯಣ ಸ್ವಾಮಿಯವರು ಮಾದಿಗ ಜನಾಂಗದವರೆ ಆಗಿದ್ದರು. ಆದರೆ ಇಲ್ಲಿ ದಲಿತರೆ ದಲಿತರ ಹಕ್ಕುಗಳನ್ನು ಕಿತ್ತುತಿನ್ನುವಂತಹ ಪರಿಸ್ಥಿತಿಯು ನಿರ್ಮಾಣವಾಗಿತ್ತು. ಇದರಿಂದಾಗಿ ತಿಪ್ಪಣ್ಣನವರ ಹೋರಾಟಕ್ಕೆ ಬಹು ದೊಡ್ಡದಾದ ಪೆಟ್ಟುಬಿದ್ದಿತು. ಹಣ, ಅಧಿಕಾರದ ಎದುರು ತಿಪ್ಪಣ್ಣನವರ ಹೋರಾಟಕ್ಕೆ ತಕ್ಕ ಪ್ರತಿಫಲ ದೊರೆಯದಾಯಿತು. ಈ ವೇಳೆಗಾಗಲೇ ತಿಪ್ಪಣ್ಣನವರು ಮಾಜಿ ಶಾಸಕನ ಕುಟುಂಬವು ನಡೆಸುತ್ತಿರುವ ಹಲವಾರು ಅಕ್ರಮಣಗಳನ್ನು ಬಯಲಿಗೆ ಹಾಕಿ, ಕೆಲವೊಮ್ಮೆ ಅವರಿಂದ ಹಲ್ಲೆಗೂ ಒಳಗಾಗಿದ್ದರು. ಆದರೆ ಈ ಜಮೀನಿನ ಕೇಸು ಅವರ ಪರವಾಗಿದ್ದರಿಂದಾಗಿ ಅವರಿಗೆ ಮತ್ತಷ್ಟು ಬಲಬಂದಂತಾಗಿ ಇವರ ಮನೆಯ ಮೇಲೆ ಬಹು ಸಂಖ್ಯೆಯಲ್ಲಿ ಜನರನ್ನು ಕೂಡಿಸಿ ಹಲ್ಲೆ ನಡೆಸಿದರು. ಈ ಹಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು ಇವರ ಮನೆಯ ಹಂಚುಗಳೆಲ್ಲ ಹೊಡೆಯುವ ಹಾಗೆ ಕಲ್ಲು ತೂರಾಟ ನಡೆಸಿ, ತಿಪ್ಪಣ್ಣನವರಿಗೆ ಹಿಂದಿನಿಂದ ತಲೆಗೆ ಹೊಡೆದು ಕೆಡವಿದರು. ಈ ಸಮಯದಲ್ಲಿ ತುಂಬು ಗರ್ಭಿಣ ಯಾದ ಇವರ ಹೆಂಡತಿಯನ್ನು ಕಿಡಿಗೇಡಿಗಳು ಸಮೀಪದಲ್ಲೆ ಇದ್ದ ಚರಂಡಿಗೆ ತಳ್ಳಿದ ಪರಿಣಾಮವಾಗಿ ಇವರ ಹೊಟ್ಟೆಗೆ ಬಲವಾದ ಪೆಟ್ಟುಬಿದ್ದು, ಹೊಟ್ಟೆಯಲ್ಲಿದ್ದ ಶಿಶುವು ಮರಣ ಹೊಂದಿ, ಮುಂದೆ ಮಕ್ಕಳಾಗುವ ಅವಕಾಶ ಕಳೆದುಕೊಂಡರು. ಈ ಹಲ್ಲೆಯಿಂದಾಗಿ ಇವರ ಬದುಕಿಗೆ ಬಲವಾದ ಪೆಟ್ಟುಬಿದ್ದಿತು. ಇದರ ತರುವಾಯ ತಮ್ಮ ಸ್ವಗ್ರಾಮವನ್ನು ಬಿಟ್ಟುಬಂದು ಪ್ರಾಣ ರಕ್ಷಣೆಗಾಗಿ ದಾವಣಗೆರೆಯಲ್ಲಿಯೇ ಇಂದಿಗೂ ತಮ್ಮ ಜೀವನವನ್ನು ಸಾಗಿಸುತ್ತಿದ್ದಾರೆ.

ಶ್ರೀಯುತ ತಿಪ್ಪಣ್ಣನವರು ಇಷ್ಟೆಲ್ಲ ಹಲ್ಲೆಗೆ ಗುರಿಯಾಗಿ ಶೋಷಣೆಗೆ ಒಳಗಾದರು ತಮ್ಮ ಹೋರಾಟವನ್ನು ನಿಲ್ಲಿಸಿಲ್ಲ. ಇವರು ದಾವಣಗೆರೆಯಲ್ಲಿ ವಾಸ್ತವ್ಯವನ್ನು ಹೊಡಿದ್ದರೂ 1987 ರಿಂದ ಪ್ರಸ್ತುತದವರೆಗೂ ಗ್ರಾಮ ಪಂಚಾಯಿತಿಯ ಸದಸ್ಯರಾಗಿ ನಿರಂತರವಾಗಿ ಆಯ್ಕೆಯಾಗುತ್ತಿದ್ದಾರೆ. ದಲಿತರ ಪರವಾದ ಇವರ ನಿಸ್ವಾರ್ಥ ಹೋರಾಟದ ಫಲವಾಗಿ ಇವರನ್ನು ಆ ಗ್ರಾಮದ ಜನತೆಯು ಪ್ರತಿ ಚುನಾವಣೆಯಲ್ಲಿ ಆಯ್ಕೆ ಮಾಡುತ್ತಿದ್ದಾರೆ. ತನ್ನ ಗ್ರಾಮದ ದಲಿತರು ಹಾಗೂ ಹಿಂದುಳಿದ ಜನತೆಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ತಲುಪಿಸುವುದರ ಜೊತೆಗೆ, ಅವರಲ್ಲಿ ಜಾಗೃತಿಯನ್ನು ಮೂಡಿಸುವತ್ತ ತಮ್ಮ ಹೋರಾಟವನ್ನು ಮುಂದುವರೆಸುತ್ತಿದ್ದಾರೆ. ಇವರು ಔಪಚಾರಿಕವಾಗಿ ಓದಿದ್ದು ಕೇವಲ ಎಂಟನೇ ತರಗತಿಯಾದರೂ ಇವರಲ್ಲಿನ ಜ್ಞಾನದ ದಾಹದಿಂದಾಗಿ ಸಾಕಷ್ಟು ವೈಚಾರಿಕ ಕೃತಿಗಳನ್ನು ಓದಿ ಹಾಗೂ ಹಲವಾರು ಚಿಂತಕರ ವಿಚಾರಧಾರೆಗಳಿಂದ ಪ್ರಭಾವಿತರಾಗಿ ಪ್ರಗತಿಯ ಹಾದಿಯಲ್ಲಿ ನಡೆದುಕೊಂಡು ಬಂದಿದ್ದಾರೆ. ಬಿ. ಆರ್. ಅಂಬೇಡ್ಕರರ ವಿಚಾರಗಳನ್ನು ಹಾಗೂ ಅವರು ನೀಡಿದ ಸಂವಿಧಾನದ ಆಶಯದಂತೆ ನಡೆದುಕೊಂಡು ದಲಿತರ ಪ್ರಗತಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರು ತಮ್ಮ ಸ್ವಗ್ರಾಮದಲ್ಲಿ ದಲಿತರಿಗಾಗಿ ‘ಅಂಬೇಡ್ಕರ್ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಸಮುದಾಯ ಭವನ’ವನ್ನು ನಿರ್ಮಿಸಿದ್ದಾರೆ. ಇಲ್ಲಿ ದಲಿತರಿಗೆ ಮಾತ್ರ ಉಚಿತವಾಗಿ ಅವಕಾಶವನ್ನು ಕಲ್ಪಿಸಲಾಗುತ್ತದೆ. ಉಳಿದಂತೆ ಇತರೆ ವರ್ಗದವರಿಂದ ಮಾತ್ರ ಹಣವನ್ನು ಪಡೆಯಲಾಗುತ್ತದೆ. ಈ ಹಣದಿಂದ ದಲಿತರ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಹಾಗೆಯೇ ಅಂಬೇಡ್ಕರ್ ಎಸ್.ಸಿ/ ಎಸ್.ಟಿ ಸಹಕಾರ ಸಂಘವನ್ನು ಹೋಬಳಿ ಮಟ್ಟದಲ್ಲಿ ಸ್ಥಾಪಿಸಿಕೊಂಡು ದಲಿತರ ಪ್ರಗತಿಗಾಗಿ ಶ್ರಮಿಸುತ್ತಿದ್ದಾರೆ.

ತಿಪ್ಪಣ್ಣನವರು ಹಲವಾರು ವಿಚಾರವಾದಿಗಳಿಂದ ಪ್ರೇರಣೆ ಮತ್ತು ಪ್ರಭಾವಕ್ಕೆ ಒಳಗಾಗಿ ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದವರಾಗಿದ್ದಾರೆ. ಇವರ ವಿಚಾರಗಳಿಗೆ ಪ್ರಮುಖವಾಗಿ ಪ್ರೇರಕ ಶಕ್ತಿಯಾಗಿದ್ದವರಲ್ಲಿ ದಲಿತ ಹೋರಾಟಗಾರ ಹಾಗೂ ಅಂಬೇಡ್ಕರ್ ಅನುಯಾಯಿಗಳಾದ ಬಿ. ಬಸವಲಿಂಗಪ್ಪ ಹಾಗೂ ಎಲ್.ಜಿ ಹಾವನೂರರು. ಬಿ. ಬಸವಲಿಂಗಪ್ಪ ಅವರೊಂದಿಗೆ ತುಂಬ ಹತ್ತಿರದ ಒಡನಾಟವನ್ನು ಹೊಂದಿದ್ದ ಇವರು, ಅವರಿಂದ ತುಂಬ ಮೆಚ್ಚುಗೆಯನ್ನು ಗಳಿಸಿದ್ದರು. ಬಸವಲಿಂಗಪ್ಪನವರ ತಾಯಿಯ ಊರು ಕತ್ತಲಗೆರೆಯಾದ ಕಾರಣ ಇವರ ಮಧ್ಯೆ ಉತ್ತಮವಾದ ಸಂಬಂಧವು ಬೆಳೆದಿತ್ತು. ಇದಕ್ಕೆ ಪ್ರಮುಖ ಕಾರಣವೆಂದರೆ ತಿಪ್ಪಣನವರ ಹೋರಾಟದ ನೆಲೆಗಳು ನಿಸ್ವಾರ್ಥದಿಂದ ಕೂಡಿದ್ದು, ದಲಿತರ ಪರವಾಗಿದ್ದವು. ಬಸವಲಿಂಗಪ್ಪನವರ ಆಶಯಗಳು ಇದೇ ನೆಲೆಯಲ್ಲಿದ್ದ ಕಾರಣದಿಂದಾಗಿ ಇವರನ್ನು ಮತ್ತಷ್ಟು ಹತ್ತಿರಕ್ಕೆ ಕರೆತಂದಿತ್ತು. ಬಸವಲಿಂಗಪ್ಪನವರ ಅಂಬೇಡ್ಕರ್‍ವಾದಿ ಚಿಂತನೆಗಳು ಸಹ ತಿಪ್ಪಣನವರಲ್ಲಿ ಸಾಕಷ್ಟು ಆಸಕ್ತಿಯನ್ನು ಕೆರಳಿಸಿದ್ದವು. ಈ ಕಾರಣದಿಂದಾಗಿ ಇವರಿಬ್ಬರ ನಡುವೆ ಉತ್ತಮ ಒಡನಾಟವಿತ್ತು. ಹಾಗೆಯೇ ಬಸವಲಿಂಗಪ್ಪನವರು ಸರಳವಾದ ವ್ಯಕ್ತಿತ್ವವನ್ನು ಹೊಂದಿದ್ದು, ದಲಿತರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದರು. ಇವರಿಬ್ಬರು ಏಕಾಂತದಲ್ಲಿದ್ದ ಸಮಯದಲ್ಲಿ ಬಸವಲಿಂಗಪ್ಪ ಕೆಲವು ಮಾತುಗಳನ್ನು ಹೇಳುತ್ತಿದ್ದರು. “ಮನುಷ್ಯ ಹುಟ್ಟಿದಾನೆ, ಒಂದಿನ ಸಾಯ್ತನ್ಲೆ. ಸಾಯೋದಂತು ಖಚಿತ. ಆದರೆ ಕೈಲಾದಷ್ಟು ನಾವು ಅಂಬೇಡ್ಕರರ ವಿಚಾರ ಇಟ್ಕೋಂಡು ಸಹಾಯ ಮಾಡಿ ಸಾಯ್ಬೇಕು.” ಹಾಗೆಯೇ “ದುಡ್ಡು ಮಾಡೋದೊಂದೆ ಅಲ್ಲ, ನಮ್ಮವರು ಕೆಳಮಟ್ಟದಲ್ಲಿದ್ದಾರೆ. ತಿಳುವಳಿಕೆ ಇಲ್ಲ, ಅವರಿಗೆ ಜಾಗೃತಿ ಮೂಡಿಸ್ಬೇಕು” ಎಂದು ಹೇಳುತ್ತಿದ್ದರು. ಬಸವಲಿಂಗಪ್ಪನವರ ಈ ಎಲ್ಲ ಮಾತುಗಳು ತಿಪ್ಪಣ್ಣನವರಲ್ಲಿ ಹೊಸ ಸಂಚಲನವೊಂದನ್ನು ಮೂಡಿಸುತ್ತಿದ್ದವು. ಇವರ ಹೊರಾಟದ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ರೂಡಿಸಿಕೊಂಡು ಮುನ್ನಡೆದರು.

ಹಾಗೆಯೇ ಇವರು ವಿಚಾರವಾದಿಗಳು ಹಾಗೂ ಕಾನೂನು ತಜ್ಞರಾದ ಎಲ್.ಜಿ ಹಾವನೂರರೊಂದಿಗೆ ಉತ್ತಮವಾದ ಒಡನಾಟವನ್ನು ಹೊಂದಿದ್ದರು. ಹಾವನೂರರು ತಮ್ಮ ಸ್ವಂತ ಊರಾದ ರಾಣೆಬೆನ್ನೂರಿಗೆ ದಾವಣಗೆರೆ ಮಾರ್ಗದಲ್ಲಿ ಹೋಗುವ ಸಮಯದಲ್ಲಿ ತಿಪ್ಪಣ್ಣನವರನ್ನು ಭೇಟಿಮಾಡಿ, ಇವರೊಂದಿಗೆ ಮಾತುಕತೆ ನಡೆಸಿ ಹೋಗುತ್ತಿದ್ದರು. ತಿಪ್ಪಣ್ಣನವರು ಓದಿದ್ದು ಕಡಿಮೆಯಾದರೂ ಇಂತಹ ಮಹಾನ್ ವಿಚಾರವಾದಿಗಳ ಸಂಘವನ್ನು ಬೆಳೆಸಿಕೊಳ್ಳುವ ಮೂಲಕವಾಗಿ ಸಾಕಷ್ಟು ವೈಚಾರಿಕ ಜ್ಞಾನವನ್ನು ಪಡೆದುಕೊಂಡಿದ್ದಾರೆ. ತಿಪ್ಪಣ್ಣನವರು ವಿಚಾರಗಳನ್ನು ತಿಳಿದುಕೊಳ್ಳುವ ಹಂಬಲದಿಂದಾಗಿ ಇಂತಹ ಹಲವಾರು ವಿಚಾರವಾದಿಗಳ ಸಂಘವನ್ನು ಬೆಳೆಸಿಕೊಂಡು ಬಂದಿದ್ದಾರೆ. ಸಮಕಾಲಿನ ಸಂದರ್ಭದಲ್ಲಿ ದಲಿತರ ಪ್ರಗತಿ ಹಾಗೂ ಅವರಲ್ಲಿ ಜಾಗೃತಿಯನ್ನು ಮೂಡಿಸುವ ಹಂಬಲದಿಂದ ದಲಿತ ಚಿಂತಕರು ಹಾಗೂ ಪ್ರಗತಿಪರ ವಿಚಾರವಾದಿಗಳಾದ ದೇವನೂರು ಮಹಾದೇವ, ಸಿದ್ಧಲಿಂಗಯ್ಯ, ಜಿ.ಟಿ.ಗೋವಿಂದಪ್ಪ, ಸಿ.ಕೆ.ಮಹೇಶ್ ಅವರಂತಹ ಚಿಂತಕರೊಂದಿಗೆ ಉತ್ತಮ ಒಡನಾಟವನ್ನು ಬೆಳೆಸಿಕೊಂಡು ದಲಿತರ ಪ್ರಗತಿಯತ್ತ ಮುನ್ನೆಡೆಯುತ್ತಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ವಿಚಾರಧಾರೆಗಳಿಂದ ಪ್ರಭಾವಿತರಾದ ತಿಪ್ಪಣ್ಣನವರು ದಿನಾಂಕ 14 ಅಕ್ಟೋಬರ್ 2003ರಂದು ‘ಬೌದ್ಧಧಮ್ಮ ದೀಕ್ಷಾ ಸಮಾರಂಭ ಸಿದ್ಧತಾ ಸಮಿತಿ ಧಮ್ಮ ದೀಕ್ಷಾ ಸಮಾರಂಭ’, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಬೌದ್ಧಧಮ್ಮಕ್ಕೆ ಮತಾಂತರಗೊಂಡಿದ್ದಾರೆ. ಬುದ್ಧನ ವಿಚಾರಗಳನ್ನು ತಮ್ಮ ಬದುಕಲ್ಲಿ ಅಳವಡಿಸಿಕೊಂಡಿರು ಇವರು ದಲಿತ ಸಮೂಹಕ್ಕೆ ಜಾಗೃತಿ ಮೂಡಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ದಲಿತರ ಜಾಗೃತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಇಂದು ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿಯ ಅಡಿಯಲ್ಲಿ ಹುಟ್ಟಿಕೊಂಡಿರುವ ಕೆಲವು ಬಣಗಳ ಮುಖಂಡರು ಅಂಬೇಡ್ಕರ್ ಹೆಸರಿನಲ್ಲಿ ನಡೆಸುತ್ತಿರುವ ರೋಲ್ಕಾಲ್ ನೀತಿಯಿಂದ ಬೇಸರಗೊಂಡಿರುವ ಇವರು, ಅಂಬೇಡ್ಕರ್ ತತ್ವ-ಚಿಂತನೆಗಳಿಗೆ ವಿರುದ್ಧವಾಗಿ ನಡೆಸುತ್ತಿರುವ ಬಾಬಾಸಾಹೇಬರ ಜನ್ಮ ದಿನಾಚರಣೆಯ ಈ ಕ್ರಮದಿಂದ ದಲಿತರ ಪ್ರಗತಿಗಾಗಲಿ ಹಾಗೂ ಅವರಲ್ಲಿ ಜಾಗೃತಗೊಳಿಸುವುದಕ್ಕಾಲಿ ಯಾವುದೇ ಪ್ರಯೋಜನವಿಲ್ಲ ಎಂಬುದನ್ನರಿತ ಇವರು ಇಂತಹ ಮೂಲಭೂತವಾದಿ ಆಚರಣೆಗಳಿಂದ ದೂರಸರಿದು, ಪ್ರತಿವರ್ಷ ಅಂಬೇಡ್ಕರ್ ಜಯಂತಿಗೆ ಬದಲಾಗಿ ಬೌದ್ಧ ಪೂಣ ್ಮೆಯನ್ನು ಸರಳವಾಗಿ ಆಚರಿಸುತ್ತ ಬಂದಿದ್ದಾರೆ. ಈ ಕಾರ್ಯಕ್ರಮಕ್ಕೆ ಯಾರಿಂದಲೂ ಹಣವನ್ನು ವಸೂಲಿ ಮಾಡದೆ ಇವರು ಒಂದು ಸಾವಿರ ರೂಪಾಯಿ ಹಾಗೂ ಇವರ ಅಪ್ತರು, ಪ್ರಗತಿಪರ ಚಿಂತಕರಾದ ಮಹದೇವಪ್ಪನವರು ಒಂದು ಸಾವಿರ ರೂಪಾಯಿಗಳನ್ನು ಹಾಕಿಕೊಂಡು ಕೇವಲ ಎರಡು ಸಾವಿರ ರೂಪಾಯಿಯಲ್ಲಿ ಸರಳವಾಗಿ ಬೌದ್ಧ ಪೂಣ ್ಮೆ ಸಮಾರಂಭವನ್ನು ಆಯೋಜಿಸುತ್ತ ಬಂದಿದ್ದು, ಸಾಧ್ಯವಾದಷ್ಟು ದಲಿತರಿಗೆ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುತ್ತ ಬಂದಿದ್ದಾರೆ. ಪ್ರಸ್ತುತದಲ್ಲಿ ಬೌದ್ಧಧರ್ಮಕ್ಕೆ ಮತಾಂತರಗೊಳಿಸುವಲ್ಲಿ ಎದುರಾಗುವ ಸಮಸ್ಯೆಗಳನ್ನರಿತ ಇವರು, ತಮ್ಮ ಜನತೆಯನ್ನು ಬೌದ್ಧಧರ್ಮಕ್ಕೆ ಮತಾಂತರಗೊಳಿಸುವುದು ಸುಲಭದ ಮಾತಲ್ಲ. ಆದರೆ ಬುದ್ಧನ ವೈಚಾರಿಕ ಚಿಂತನೆಗಳ ಬಗ್ಗೆ ಅರಿವು ಮೂಡಿಸಿದರೆ ದಲಿತರಲ್ಲಿ ಪ್ರಗತಿಯಾಗಬಹುದು ಎಂಬ ಆಶಯವೊತ್ತ ಇವರು ಬೌದ್ಧ ಪೂಣ ್ಮೆಯಂತಹ ಹಲವಾರು ಕಾರ್ಯಕ್ರಮಗಳ ಮೂಲಕ ದಲಿತರಲ್ಲಿ ಅರಿವು ಮೂಡಿಸಲು ಶ್ರಮಿಸುತ್ತಿದ್ದಾರೆ. ತಿಪ್ಪಣ್ಣನವರು ತಮ್ಮ ವೈಚಾರಿಕ ದೃಷ್ಟಿಕೋನದಿಂದ ಬುದ್ಧನನ್ನು ಅಪ್ಪಿಕೊಂಡಿದ್ದಾರೆ. ಇವರ ಈ ವಿಚಾರಗಳ ಹಿಂದೆ ಬಾಬಾಸಾಹೇಬರ ಪ್ರಭಾವವು ಎದ್ದು ಕಾಣುತ್ತದೆ.

ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡ ತಿಪ್ಪಣ್ಣನವರು ಅವರಂತೆಯೇ ದಲಿತರ ಪ್ರಗತಿಗಾಗಿ ತನ್ನ ಕೈಲಾದಷ್ಟು ಪ್ರಾಮಾಣ ಕವಾದ ಹೋರಾಟವನ್ನು ನಡೆಸುತ್ತಿದ್ದಾರೆ. ಇವರು ಸುಮಾರು ಇಪ್ಪತ್ತೈದು ವರ್ಷಗಳಿಂದಲೂ ರಾಜಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಮುನ್ನಡೆಯುತ್ತ ಬಂದರೂ ಇದರಿಂದ ತನ್ನ ವೈಯಕ್ತಿಕ ಬದುಕಿಗಾಗಿ ಯಾವುದೇ ಆಸ್ತಿಯನ್ನಾಗಲಿ, ಹಣವನ್ನಾಗಲೀ ಮಾಡಿಕೊಂಡಿಲ್ಲ. ಇಂದಿಗೂ ದಾವಣಗೆರೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಈ ದಂಪತಿಗಳು ಜೀವನ ಸಾಗಿಸುತ್ತಿದ್ದಾರೆ. ರಾಜಕೀಯ ಭ್ರಷ್ಟರ ಕೂಪ ಎಂಬುದಾಗಿ ಅರಿತಿದ್ದರೂ ಇದರಿಂದ ಸಾಧ್ಯವಾದಷ್ಟು ದಲಿರು ಹಾಗೂ ಹಿಂದುಳಿದವರ ಪ್ರಗತಿಗಾಗಿ ಕೈಲಾದಷ್ಟು ಸಹಾಯ ಮಾಡುವ ಉದ್ಧೇಶದಿಂದ ರಾಜಕೀಯದಲ್ಲಿ ಮುಂದುವರೆಯುವ ಮೂಲಕ ತನ್ನ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಉನ್ನತ ವರ್ಗದವರೇ ಹೆಚ್ಚಾಗಿರುವ ಮತ್ತು ಆರ್ಥಿಕವಾಗಿ ಪ್ರಬಲವಾಗಿರುವ ಇವರ ಗ್ರಾಮದಲ್ಲಿನ ಚುನಾವಣೆಯೊಂದರಲ್ಲಿ ಒಟ್ಟು ಪಂಚಾಯಿತಿಯ ಹದಿನೈದು ಸೀಟುಗಳಲ್ಲಿ ಇವರು ಹನ್ನೇರಡು ಸೀಟುಗಳನ್ನು ತಮ್ಮ ಪರವಾದವರನ್ನೇ ಜಯಶೀಲರಾಗಿ ಮಾಡಿಕೊಂಡಿರುತ್ತಾರೆ. ಈ ಸಾಧನೆಯು ಇವರ ಹೋರಾಟದಲ್ಲಿನ ಕ್ರಿಯಾಶೀಲತೆಯನ್ನು ಎತ್ತಿಹಿಡಿಯುತ್ತದೆ. ರಾಜಕೀಯದಲ್ಲಿ ಆಳವಾದ ಅನುಭವವುಳ್ಳ ಇವರು ಅಂಬೇಡ್ಕರ್ ಕಾಂಗ್ರೇಸ್ ಪಕ್ಷವನ್ನು ಕುರಿತು ಹೇಳುತ್ತಿದ್ದಂತಹ ‘ಕಾಂಗ್ರೇಸ್ ಉರಿಯುವ ಮನೆ’ ಎಂಬ ತತ್ವವನ್ನು ಸಂಪೂರ್ಣವಾಗಿ ಮನಗಂಡಿದ್ದಾರೆ. ಆದರೆ ಇಂದಿನ ಬಿಜೆಪಿಗೆ ಹೋಲಿಸಿದರೆ ಕಾಂಗ್ರೇಸ್ ಅದರಲ್ಲೆ ಉತ್ತಮವಾದುದು ಎಂಬ ಅನಿವಾರ್ಯತೆಯಿಂದ ಕಾಂಗ್ರೇಸ್ ಪಕ್ಷದಲ್ಲಿ ಮುನ್ನಡೆಯುತ್ತಿದ್ದಾರೆ. ಈ ದೇಶದ ದಲಿತರು ಹಾಗೂ ದಮನಿತರ ಪರವಾಗಿ ಜನ್ಮತಾಳಿದ ಸಮಾಜವಾದಿ ಪಕ್ಷದ ಮಹತ್ವವನ್ನರಿತ ಇವರು, ಮಾಯವತಿ ಮಾಡಿದ ತಪ್ಪಿನಿಂದ ಈ ಪಕ್ಷಕ್ಕಾದ ಅನ್ಯಾಯವನ್ನು ಸಂಪೂರ್ಣವಾಗಿ ಅರಿತ್ತಿದ್ದಾರೆ. ಮಾಯವತಿ ಮಾಡಿದ ತಪ್ಪಿನಿಂದಾಗಿ ದಲಿತರ ಬದುಕಿನ ಮೇಲಾದ ಪ್ರಭಾವವನ್ನು ಸಂಪೂರ್ಣವಾಗಿ ಅರಿತಿದ್ದಾರೆ.

ತಿಪ್ಪಣ್ಣನವರು ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾದವರಲ್ಲ. ಹಲವಾರು ಪ್ರಗತಿಪರವಾದ ವಿಚಾರಗಳನ್ನು ಮೈಗೂಡಿಸಿಕೊಂಡು ಅದರಂತೆ ಬಾಳಿ ಬದುಕುತ್ತಿದ್ದಾರೆ. ಇಲ್ಲಿನ ಪುರೋಹಿತಶಾಹಿ ವ್ಯವಸ್ಥೆಯಿಂದ ಇಲ್ಲಿನ ತಳಸಮುದಾಯದ ಜನತೆಯ ಮೇಲಾದ ಆಕ್ರಮಣ ಮತು ದಬ್ಬಾಳಿಕೆಗಳನ್ನು ಸಂಪೂರ್ಣವಾಗಿ ಮನಗಂಡಿರುವ ಇವರು ಜಾತಿಗೊಂದು ಮಠಗಳನ್ನು ನಿರ್ಮಿಸುತ್ತಿರುವ ಚಿತ್ರದುರ್ಗದ ಮುರುಘ ಶರಣರ ಈ ಕ್ರಮದ ವಿರುದ್ಧ ಹೋರಾಟ ನಡೆಸಿದ್ದಾರೆ. ಹಾಗೆಯೇ ಈ ನಾಡಿನ ಮೂಲ ನಿವಾಸಿಯಾಗಿರುವ ಬಲಿಚಕ್ರವರ್ತಿಯನ್ನು ಸಂಹಾರ ಮಾಡಿದ ಸವಿನೆನಪಿಗಾಗಿ ಪುರೋಹಿತಶಾಹಿಯು ಆಚರಿಸುತ್ತಾ ಬಂದಿರುವ ಬಲಿ ಪಾಡ್ಯಮಿಯನ್ನು ನಮ್ಮವರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವ ಬಗ್ಗೆ ತೀವ್ರ ವೇದನೆಯನ್ನು ವ್ಯಕ್ತಪಡಿಸುವ ಇವರು, ಅಂದು ಉಪವಾಸ ಇರುವ ಮೂಲಕ ಆ ದಿನವನ್ನು ‘ಕರಾಳದಿನ’ವನ್ನಾಗಿ ಆಚರಿಸುತ್ತಾ ಬಂದಿದ್ದಾರೆ. ಇದೇ ರೀತಿಯಾಗಿ ಪುರೋಹಿತಶಾಹಿಯು ತನ್ನ ಅಸ್ತಿತ್ವಕ್ಕಾಗಿ ದಲಿತರು ಹಾಗೂ ಈ ನಾಡಿನ ದಮನಿತರನ್ನು ಹತ್ತಿಕ್ಕುತ್ತಾ ಬಂದಿರುವ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ವಿರೋಧಿಸುವ ನೆಲೆಯಲ್ಲಿ ತಮ್ಮ ಹೋರಾಟವನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.
ಶ್ರೀಯುತರು ರಾಜ್ಯ ಮಟ್ಟದಲ್ಲಾಗಲಿ, ರಾಷ್ಟ್ರ ಮಟ್ಟದಲ್ಲಾಗಲಿ ಹೋರಾಟ ಮಾಡಿ ಗುರುತಿಸಿಕೊಂಡವರಲ್ಲ. ತಳಮಟ್ಟದ ಗ್ರಾಮೀಣ ಬದುಕಿನಲ್ಲಿಯೇ ಬೆಳೆದುಬಂದು, ತನ್ನ ತಿಳುವಳಿಕೆಯಿಂದಾಗಿ ತನ್ನ ಸಮುದಾಯದ ಜನತೆಯ ಮೇಲೆ ಶತಶತಮಾನಗಳಿಂದ ಆಗುತ್ತಿದ್ದಂತಹ ಅನ್ಯಾಯ ಅಕ್ರಮಗಳ ವಿರುದ್ಧ ಸಮರಸಾರಿ, ಅದರಿಂದ ತೀವ್ರವಾದ ಪಟ್ಟು ತಿಂದವರು. ಇವರ ಕುಟುಂಬದ ಮೇಲೆ ಉನ್ನತ ವರ್ಗದವರು ನಡೆಸಿದ ಹಲ್ಲೆಯಿಂದ ತಮ್ಮ ಹೆಂಡತಿಯ ಗರ್ಭಕ್ಕೆ ಪ್ರಬಲವಾದ ಪೆಟ್ಟುಬಿದ್ದು ತನ್ನ ಮುಂದಿನ ಬದುಕನ್ನು ಬೆಳಗಲು ಬೇಕಾದ ಸಂತಾನವನ್ನೆ ಕಳೆದುಕೊಂಡರು. ಇಷ್ಟಾದರೂ ಇವರು ಎದೆಗುಂದದೆ ತಮ್ಮ ಹೋರಾಟವನ್ನು ಮುನ್ನಡೆಸುತ್ತಾ ಬಂದಿದ್ದಾರೆ. ಇವರ ಹೋರಾಟಕ್ಕೆ ಯಾವುದೇ ಸಂಘಟನೆ ಹಾಗೂ ಚಳುವಳಿಗಳ ಬೆಂಬಲವಿಲ್ಲದೆ ಬಾಬಾಸಾಹೇಬರು ಈ ದೇಶಕ್ಕೆ ನೀಡಿರುವ ಸಂವಿಧಾನವನ್ನೆ ಪ್ರಬಲ ಅಸ್ತ್ರವಾಗಿಟ್ಟುಕೊಂಡು ಅಸಮಾನತೆ, ದೌರ್ಜನ್ಯ ಹಾಗೂ ಆಕ್ರಮಣಕಾರಿ ನೀತಿಯ ವಿರುದ್ದ ಹೋರಾಟ ನಡೆಸುತ್ತಾ ಬಂದಿದ್ದಾರೆ. ನಿಜವಾಗಿಯೂ ಈ ದೇಶದ ಪ್ರಗತಿಯಾಗಬೇಕಾಗಿರುವು ರಾಜಧಾನಿಗಳ ಮಟ್ಟದಲ್ಲಲ್ಲ. ಅದು ಗ್ರಾಮೀಣ ಮಟ್ಟದಲ್ಲಿ. ಈ ದೇಶದ ಪ್ರಗತಿಗಾಗಿ ಹೋರಾಟ ನಡೆಸಿದಂತಹ ಬುದ್ಧ, ಬಸವ, ಫುಲೆ, ವಿವೇಕಾನಂದ, ಅಂಬೇಡ್ಕರ್, ಭಗತ್‍ಸಿಂಗ್ ಅವರಂತಹ ಕ್ರಾಂತಿಕಾರಿ ಹೋರಾಟಗಾರರ ಹೋರಾಟ ಕ್ರಮವು ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿ ಗ್ರಾಮೀಣ ಮಟ್ಟದಲ್ಲಿ ದಲಿತರು ಹಾಗೂ ಹಿಂದುಳಿದವರ ಶ್ರೇಯೋಭಿವೃದ್ಧಿಗಾಗಿ ನಿಸ್ವಾಥ್ವಾಗಿ ಹೋರಾಟ ನಡೆಸುತ್ತಿರುವಂತಹ ಇಂತವರು ಅಷ್ಟೇ ಮುಖ್ಯವಾಗಿದ್ದಾರೆ. ಬಾಬಾಸಾಹೇಬರು ಬೆಂಗಳೂರಿಗೆ ಬಂದ ಸಮಯದಲ್ಲಿ ಅತ್ಯಂತ ನೋವಿನಿಂದ ತಮ್ಮ ಅಳಲನ್ನು ತೋಡಿಕೊಳ್ಳುತ್ತಾರೆ. ಅದೇನೆಂದರೆ, “ನಾನು ನನ್ನ ಹೋರಾಟದಲ್ಲಿ ವಿದ್ಯಾವಂತರಿಗಾಗಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದೇನೆ. ಆದರೆ ಅನಕ್ಷರಸ್ಥರಿಗಾಗಿ ಏನು ಮಾಡಲು ಆಗಲಿಲ್ಲ. ಈ ವಿದ್ಯಾವಂತರು ಅವಿದ್ಯಾವಂತರ ಪ್ರಗತಿಗೆ ಶ್ರಮಿಸುತ್ತಾರೆಂದು ನಾನು ಭಾವಿಸಿದ್ದೆ. ಅದು ನೆರವೇರಲಿಲ್ಲ” ಎಂಬುದಾಗಿ ಹೇಳುತ್ತಾರೆ. ಅಂಬೇಡ್ಕರರ ಈ ಕನಸು ನೆರವೇರಬೇಕಾದರೆ ಗ್ರಾಮೀಣ ಮಟ್ಟದಲ್ಲಿ ತಿಪ್ಪಣ್ಣನಂತಹ ನಿಸ್ವಾರ್ಥಿಗಳಿಂದ ಮಾತ್ರ ಸಾಧ್ಯವೇ ಹೊರತು, ಅಂಬೇಡ್ಕರ್ ಜಯಂತಿಯ ದಿನ ಮಾತ್ರ ಅವರ ಭಾವಚಿತ್ರದೆದುರು ಭಾಷಣ ಬಿಗಿದು, ಮರುದಿನ ದಲಿತರಿಗು ನನಗೂ ಯಾವುದೇ ಸಂಬಂಧವಿಲ್ಲ ಎಂಬ ಬಲಿತ ದಲಿತ ಮನಸ್ಥಿತಿಯವರಿಂದಾಗಲಿ, ಅಂಬೇಡ್ಕರ್ ಹೆಸರಿನಲ್ಲಿ ಹಣ ವಸೂಲಿ ಮಾಡಿ ಅವರ ಭಾವಚಿತ್ರವನ್ನು ಮೆರವಣ ಗೆ ಮಾಡುತ್ತಾ ಕುಡಿದು, ಕುಣ ದು ಕುಪ್ಪಳಿಸುವ ಮನಸ್ಥಿತಿಯವರಿಂದಲಾಗಲೀ ಸಾಧ್ಯವಿಲ್ಲ.

ನಿಜವಾಗಿಯೂ ಅಂಬೇಡ್ಕರ್ ಹೋರಾಟ ಸಾರ್ಥಕವಾಗುವು ತಳಸಮುದಾಯದ ನೆಲೆಯಲ್ಲಿ ನಿಂತು ಹೋರಾಟ ಮಾಡುವವರಿಂದ ಮಾತ್ರ. ಇನ್ನು ನಮ್ಮ ಗ್ರಾಮಗಳಲ್ಲಿ ದಲಿತರಲ್ಲಿ ಅಸಮಾನತೆ ನೆಲೆಯೂರಿರುವುದಕ್ಕೆ ಕಾರಣ ಇವರಲ್ಲಿನ ಜಾಗೃತಿಯ ಕೊರತೆಯಾಗಿದೆ. ಕತ್ತಲಗೆರೆ ತಿಪ್ಪಣ್ಣನಂತಹ ಗ್ರಾಮೀಣ ಪ್ರತಿಭೆಗಳು ನಮ್ಮ ರಾಷ್ಟ ಮಟ್ಟದ ಹಾಗೂ ರಾಜ್ಯ ಮಟ್ಟದ ಹೋರಾಟಗಾರರಿಗೆ ಆದರ್ಶನಿಯವಾಗಿದ್ದಾರೆ. ಇಂತವರ ಜೀವನ ಕ್ರಮ ಹಾಗೂ ಅವರ ಹೋರಾಟದ ಮಾದರಿಗಳನ್ನು ಅಳವಡಿಸಿಕೊಂಡು ಮುನ್ನಡೆದರೆ ಅಂಬೇಡ್ಕರ್ ಮತ್ತು ಬಿ. ಕೃಷ್ಣಪ್ಪನವರಂತಹÀ ಹೋರಾಟಗಾರರ ಶ್ರಮ ಸಾರ್ಥಕವಾಗುತ್ತದೆ. ಇದರಿಂದ ಅಂಬೇಡ್ಕರ್ ಎಳೆದುತಂದ ತೇರು ಮುನ್ನುಗ್ಗುತ್ತದೆ, ಕರ್ನಾಟಕದ ದಲಿತರ ಗುಡಿಸಲಿನಲ್ಲಿ ಬಿ. ಕೃಷ್ಣಪ್ಪನವರು ಹಚ್ಚಿದ ಹಣತೆ ಬೆಳಗುತ್ತದೆ ಮಾತ್ರವಲ್ಲ ಬೆಳಕು ನೀಡುತ್ತದೆ. ಇಲ್ಲದೇ ಹೋದರೆ ಅಂಬೇಡ್ಕರ್ ಎಳೆದು ತಂದ ತೇರು ನಿಂತಲೇ ನಿಂದು ಗೆದ್ದಲು ಹಿಡಿಯುತ್ತದೆ. ಬಿ. ಕೃಷ್ಣಪ್ಪನವರು ಹಚ್ಚಿದ ಹಣತೆ ಎಣ್ಣೆ ಇಲ್ಲದೆ ತನ್ನ ಬತ್ತಿಯನ್ನೆಲ್ಲ ತಿಂದು ನಂದಿ ಹೋಗುತ್ತದೆ.

(Author: ಕೆ.ಎ ಓಬಳೇಶ್, ಮೋ: 9538345639)

ಡಾ.ಕೆ.ಎ ಓಬಳೇಶ್ ಅವರು ಕುವೆಂಪು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕ ಹಾಗೂ ನಾಲ್ಕು ನಗದು ಬಹುಮಾನಗಳೊಂದಿಗೆ ಪಡೆದುಕೊಂಡು, ಚಿನ್ನದ ಹುಡುಗ ಎಂಬ ಕೀರ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದುಕೊಂಡಿರುತ್ತಾರೆ. ಮೂರು ವರ್ಷಗಳ ಕಾಲ ದಾವಣಗೆರೆಯ ವಿವಿಧ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದ ಇವರು, ಇದೇ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಸಂಶೋಧನೆ ಹಾಗೂ ಬರವಣಿಗೆಯಲ್ಲಿ ಆಸಕ್ತಿಯುಳ್ಳ ಇವರು ಸುಮಾರು ಮೂರು ವರ್ಷಗಳಿಂದ ವಿವಿಧ ಪತ್ರಕೆಗಳಲ್ಲಿ ತಮ್ಮ ಲೇಖನಗಳನ್ನು ಪ್ರಕಟಿಸುತ್ತ ಬಂದಿರುತ್ತಾರೆ. ಭೀಮವಾದ ಮಾಸ ಪತ್ರಿಕೆಯಲ್ಲಿ ದಲಿತ ಹೋರಾಟ ಕಥನ ಎಂಬ ಅಂಕಣವನ್ನು ಸತತವಾಗಿ ಮೂರು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿರುತ್ತಾರೆ. ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿಯುಳ್ಳ ಇವರು 'ಅಸ್ಮಿತೆ ಮತ್ತು ಆತ್ಮವಿಮರ್ಶೆ' ಎಂಬ ಕೃತಿಯನ್ನು ಹಾಗೂ 'ವಿವೇಕಯಾನ' ಎಂಬ ನಾಟಕವನ್ನು ರಚಿಸಿರುತ್ತಾರೆ. ವಿವೇಕಯಾನ ನಾಟಕ ಕೃತಿಯು ನಾಟಕ ಅಕಾಡೆಮಿಯ ಪ್ರಶಸ್ತಿಗೆ ಭಾಜನವಾಗಿರುತ್ತದೆ. ಕಾವ್ಯ ರಚನೆಯಲ್ಲಿಯು ಆಸಕ್ತಿಯನ್ನು ಹೊಂದಿರುವ ಇವರಿಗೆ ೨೦೧೪ರಲ್ಲಿ 'ಸಾಹಿತ್ಯ ಸಿರಿ' ರಾಜ್ಯ ಪ್ರಶಸ್ತಿಯು ಲಭಿಸಿರುತ್ತದೆ. ಇಮೇಲ್: eakantagiri@gmail.com. ಮೊ: 9538345639/ 9591420216 )

ದಿನದ ಸುದ್ದಿ

ಕತೆ | ಹದ್ದುಗಳ ರಾಜ್ಯ

Published

on

~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್‌, ಕನ್ನಡಕ್ಕೆ: ಡಾ.ಶಿವಕುಮಾರ್‌ ಕಂಪ್ಲಿ

ಮಟಮಟ ಮಧ್ಯಾನ್ಹದೊಳಗ ಬರ ಬರನ ಕಾಲು ಬೀಸಿಗೋಂತ ಪಟ್ನದ ಕಡಿಗೆ ಹೋಗಿ ಬರುತಿದ್ದ ವೀರಭದ್ರಿ. ಆತ ಎಲ್ಯಾನ ಸೊಲುಪೊತ್ತು ನಿರುಮ್ಮಳವಾಗಲು ನೆಳ್ಳು ಕಂಡರೆ ಕುಂತಗಾ ಬೇಕು ಎಂದುಕೊಳ್ಳುತಿದ್ದಾನೆ.

ಅಸಲಿಗೆ ನೆಳ್ಳು ಎಲ್ಲೈತಿ?
ನೆಳ್ಳನ್ನು ನೀಡುವ ಹಚ್ಚನೆ ಮರಗಳ ಹಸುರು ಎಲ್ಲೈತಿ?
ಬರಗಾಲದ ಹೊಡೆತಕ್ಕೆ ಭೂಮಿತಾಯಿಯು ಬಿರುಕು ಬಿಟ್ಟು ನೆಲ ಸೀಳಿಕೊಂಡು ವಿಲ ವಿಲನೆ ವದ್ದಾಡುತ್ತಾ.. ಕೆಂಡದಂತಹ ಉಗಿಯನ್ನು ಉಗುಳುತ್ತಾ ಕೊತ ಕೊತನೆ ಕುದಿಯುತಿದ್ದಾಳೆ.
ನಡೆಯುವ ಕಾಲುಗಳು ಸೋತುಹೋಗುತ್ತಿವೆ.
ಕೆಂಪಗೆ ಕಾದ ಬಿಸಿಲ ಶೂಲವು ತಿವಿಯುತ್ತಿದೆ.
ಹಸನಾದ ನೆಲಕೆ ಬೀಜಗಳ ಚೆಲ್ಲಿ ಮಳೆ ಮೋಡಗಳ ಕನಸು ಕಾಣುವ ಕಣ್ಣುಗಳಿಗೆ ಒಂದು ಮಳೆ ಹನಿಯೂ ಕೂಡಾ ನಿಲುಕುತಿಲ್ಲ.
ರೋಹಿಣಿಯ ಮಳೆಗೆ ಓಣೆಲ್ಲಾ ಕಾಳು ಅನ್ನಂಗ, ಕಲ್ಲನಕೇರಿ ಕೆರೆ ಕೋಡಿ ಯೊಡೆದು ಹರಿಯುತ್ತಿದ್ದ ನೀರಿಂದ ಬರುತಿದ್ದ ಬಳ್ಳ ಬಳ್ಳದ ಜೋಳದ ಒಕ್ಕಲು ಊರಿಗೆ ತಾಗಿದ ನೆಲೆದ ಹಗೇವುಗಳಿಗೆ ಈಗ ನೆನಪುಗಳದೇ ಬದುಕಾಗಿದೆ.
ತಟುಗು ಕುಂದ್ರಾಕ ಎಲ್ಯಾನ ನೆರಳುಬೇಕು…ನೆರಳು…ನೆರಳು.
ಮ್ಯಾಲ ನೋಡಿದರೆ ಎಲ್ಡು ಮೂರು ಹದ್ದುಗಳು ಹರ‍್ಯಾಡುತ್ತಿವೆ.
ಕೆಳಗ ತನ್ನ ನೆಳ್ಳನ್ನ ತಾನೇ ನೋಡಿದರೆ, ತನಗೇ ತುಚ್ಚನಿಸುತ್ತಿದೆ.
ಥೂ…ಇವನೌವನಾ…ನರ ಜಲುಮ ನಾಯಿ ಜಲುಮ!
ಗಂಟಲು ಸಣ್ಣಕ ಒಣಗುತೈತಿ…
ಎಲೈತಪ್ಪೋ…ನೀರು…ನೀರು…
ಎದಿ ಒಡೆಯೋ ಹಂಗ ಕುಂತು ಅಬ್ಬರಿಸಿದರೂ ಕಣ್ಣೀರು ಕೂಡಾ ಸೆಟಗೊಂಡು ಕುಂತಾವು!
ತಾನು ಬದುಕುತ್ತಿರುವುದು ಒಂದು ಬದುಕೇನಾ?
ನೆಳ್ಳಿಲ್ಲದಿದ್ದರೆ ಪರಾವಾಗಿಲ್ಲ.
ನೀರಿಲ್ಲದಿದ್ದರೂ ಪರವಾಗಿಲ್ಲ.
ನಾಳೆ ವಿರುಪಾಪುರದೊಳಗ ನಡಿಯೋ ಪಂಚಾಯ್ತಿ ಏನಾದ್ರೂ ಪರವಾಗಿಲ್ಲ.
ನನಗೆ ಮೊದಲೇ ಗೊತ್ತು… ಪಂಚಾಯ್ತಿಯೊಳಗ ನನಗೆ ಅನ್ಯಾಯವೇ ಆಗುತ್ತದ.
ನಡೀಲಿ…ನಡೀಲಿ…ಮತ್ತೆ ಮತ್ತೆ ನಡೀಲಿ..!, ಹೊಸಾದು ನಡೆಯೋದು ಏನೈತಿ?
ಆ ಫಕ್ಕೀರ ಗೌಡನಿಗೆ ನಾಳೆಯಿಂದ ಏನಾರ ಒಂದಾಗುತ್ತದೆ.
ಅಂಗಾ ಅವನ ಸವಾಸಗಾರರಿಗೂ ಕೂಡಾ!
ಲಮ್ಡಿ ನನ ಮಕ್ಕಳು ಹೊಕ್ಕಾರ…ಹೊಕ್ಕಾರ.
ಊರಿಗೆ ಹಿಡಿದ ಶನಿ ಹೊಕ್ಕಾತಿ. ಅನಿಷ್ಟ ಹೊಕ್ಕತಿ…ಎಲ್ಲಾ ಸುಡಗಾಡಿಗೆ ಹೊಕ್ಕತಿ.
ಒಣಗುತ್ತಿರುವ ಗಂಟಲನ್ನ ಎಂಜಲು ನುಂಗಿ ವೀರಭದ್ರಿ ತಣ್ಣಗ ಮಾಡಿಕೊಂಡ.
ಕೈಗೆ ತಗುಲಿಸಿಕೊಂಡ ಹೊಲೆದ ಚೀಲದೊಳಗ ಆತನ ಹೊಸಾ ಬ್ಯಾಟಿಯ ಕೊಡ್ಲಿ ಬೆಚ್ಚಗೆ ನಿದ್ದಿ ಮಾಡುತ್ತಿತ್ತು …
ವೀರಭದ್ರಿಯ ಹೆಜ್ಜೆಗಳು ಬಡ ಬಡನೇ ಹಳ್ಳಿಯ ಕಡೆಗೆ ಹೊಂಟಿವೆ.
***
ಸುಮಾರು ಇಪ್ಪತೈದು ರ‍್ಷಕ್ಕೂ ಮೊದಲು…
ಪ್ರಶಾಂತವಾದ ಊರೊಳಗೆ ರಾಜಕೀಯ ಪರ‍್ಟಿಗಳ ನಡುವೆ ಕಿಚ್ಚು ಹೊತ್ತಿಕೊಂಡಿತ್ತು. ಮಲ್ಲನ ಗೌಡ, ಕೆಂಚನ ಗೌಡ ಇಬ್ಬರೂ ಒಂದೇ ಮನೆಯ ಅಣ್ಣ ತಮ್ಮಂದಿರು. ಅಣ್ಣ ಮಲ್ಲನ ಗೌಡ ಒಂದು ಪರ‍್ಟಿ ಸೇರಿದ್ದು ನೋಡಿ ಪೈಪೋಟಿಗೆ ಬಿದ್ದ ಇನ್ನೊಂದು ಪರ‍್ಟಿಯವರು ಬಣ್ಣದ ಮಾತಗಳನ್ನ ಹೇಳಿ, ಅಧಿಕಾರದ ಆಸೆ ತೋರಿಸಿ ಆತನ ತಮ್ಮ ಕೆಂಚನ ಗೌಡನನ್ನು ಆತನಿಗೆ ಎದುರು ನಿಲ್ಲಿಸಿದರು. ಊರು ಅವರಿಬ್ಬರ ರಾಜಕೀಯಗಳಿಗೆ ಒಡೆದು ಎರಡು ಹೋಳಾಯಿತು. ತಣ್ಣಗೆ ಸುಖವಾಗಿದ್ದ ಕುಟುಂಬವೂ ಛಿದ್ರವಾಯಿತು!
ಅಲ್ಲಿಯ ತನಕ ಮನೆಯ ಹಿರಿಯ ಯಜಮಾನ ರಾಜೇ ಗೌಡ ಈ ಇಬ್ಬರು ಮಕ್ಕಳ ಮೇಲೆ ಪ್ರಾಣ ಇಟ್ಟುಕೊಂಡು ಬದುಕುತಿದ್ದ. ಆತನ ಕಣ್ಣಿನೆದುರೇ ತನ್ನ ಕೂಡು ಕುಟುಂಬ ಚೂರಾಗುತಿದ್ದರೆ ತಡಕೊಳ್ಳಲಾರದೇ ರೋಷಿಗೊಂಡು ಮಕ್ಕಳಿಬ್ಬರಿಗೂ ಭೂಮಿ, ಆಸ್ತಿ, ಆದಾಯಗಳನ್ನು ಎರಡು ಸರಪಾಲುಗಳಾಗಿ ಮಾಡಿ ಹರಿದು ಹಂಚಿದನು. ಪತ್ನಿ ಜಾನಕವ್ವನನ್ನು ಕರಕೊಂಡು ಏಳು ಕೆರೆ ದಾಟಿ ಮಲ್ಲನ ಕೇರಿಗೆ ಹೋಗಿಬಿಟ್ಟನು.
ಹಿರೇ ಗೌಡರು ಊರು ಬಿಟ್ಟ ನಂತರ ಆತನ ಇಬ್ಬರು ಮಕ್ಕಳು ಹೊಟ್ಟೆ ತುಂಬಾ ಉಂಡದ್ದಿಲ್ಲ. ಕಣ್ ತುಂಬಾ ನಿದ್ರಿಸಿದ್ದಿಲ್ಲ. ಇವರ ಪರ‍್ಟಿಗಳ ಹೊಡೆತಕ್ಕೆ ಊರೂ ಕೂಡಾ ಎರಡು ಹೋಳಾಯಿತು. ಜನರಲ್ಲಿಯೂ ರ‍್ಧ ಮಂದಿ ಒಬ್ಬರ ಕಡಿಗೆ ಸರಿದರೆ, ಉಳಿದ ರ‍್ಧ ಮಂದಿ ಮತ್ತೊಬ್ಬರ ಕಡಿಗೆ ಸರಕೊಂಡು ನಿಂತು ಬಿಟ್ಟರು. ನೋಡು ನೋಡುತಿದ್ದಂಗೇನೆ ಅಧಿಕಾರಗಳ ಯುದ್ಧ ಶುರುವಾಯಿತು. ಊರೊಳಗೆ ಜೀಪುಗಳು ಬಂದವು. ನಾಡ ತುಪಾಕಿಗಳು ನುಗ್ಗಿದವು. ನಾಡ ಬಾಂಬುಗಳು ತಯಾರಾದವು. ಎರಡೂ ರ‍್ಗಗಳು ಬಲಿಷ್ಟವಾಗಿ ದರ‍್ಭಲವಾದ ಜನರನ್ನು ಬಲಿಪಶುಗಳನ್ನಾಗಿ ಮಾಡಲು ಪ್ರಾರಂಭಿಸಿದವು. ಒಮ್ಮಿಂದ ಒಮ್ಮೆಲೇ ಊರೊಳಗೆ ಹೊಡೆದಾಟಗಳು ಭುಗಿಲೆದ್ದವು.
ಪಟ್ನದಿಂದ ನಡುರಾತ್ರಿಯಲ್ಲಿ ಕಣಿವಿಹಳ್ಳಿ ಮೇಲೆ ಬರುತ್ತಿದ್ದ ಮಲ್ಲನ ಗೌಡನ ಜೀಪಿನ ಮೇಲೆ ಕೆಂಚನ ಗೌಡನ ಕಡೆಯವರು ನಾಡ ಬಾಂಬುಗಳಿಂದ ದಾಳಿ ಮಾಡಿದರು. ಎಗರಿದ ಜೀಪು ತುಂಡು ತುಂಡಾಗಿ ಸಿಡಿದಿತು.ಜನರ ಸುಳಿವರಿತು ಒಮ್ಮೆಲೇ ಜಿಗಿದು ಹಾರಿಕೊಂಡ ಮಲ್ಲನ ಗೌಡ ಪೆಳಿಯೊಳಗೆ ಎಗರಿ ಬಿದ್ದಿದ್ದ. ಸಣ್ಣಪುಟ್ಟ ಗಾಯಗಳಲ್ಲಿ ಪೆಳಿಯ ಹಿಂದೆ ಎದ್ದವನೇ ಅಲಮರಸಿಕೇರಿ ಕಾಲು ದಾರಿ ಕಡೆಗೆ ಓಡಿ ತಲೆ ಉಳಿಸಿಕೊಂಡಿದ್ದ. ಬೆಳಗಾ ಮುಂಜಾನೆ ಬಂದು ನೋಡಿದರೆ ಆ ನೆಲದೊಳಗೆ ಆರು ಹೆಣಗಳು ಬಕ್ಕಬಾರಲೇ ಬಿದ್ದಿದ್ದವು. ನಾಲ್ಕು ಜನ ಕುಂಬಾರ ಹುಡುಗರು ಇಬ್ಬರು ಮಾದರ ಹುಡುಗರು ಆ ರಾತ್ರಿಯ ಜೀಪು ದಾಳಿಯೊಳಗ ಸತ್ತಿದ್ದರು. ಹಗೆಯು ಅಲ್ಲಿಗೇ ಮುಗಿಯಲಿಲ್ಲ.
ಮರುದಿನವೇ ಕರೇಕಲ್ಲು ಗುಡ್ಡದ ಕರೆ ದಾರಿಯಿಂದ ಹಳ್ಳಿಗೆ ಬರುತ್ತಿರುವಾಗ ಕೆಂಚನ ಗೌಡನ ಕಡೆಯ ಎಂಟು ಜನರು ಹಾಳು ಬಿದ್ದ ಅಗಸಿ ಬಾವಿಯೊಳಗ ಶವಗಳಾಗಿ ತೇಲಿದರು! ನಾಲ್ವರು ಹೊಲೆಯರು, ನಾಕು ಜನ ತಳವಾರರು.
ಊರು ಊರೆಲ್ಲಾ ಉರಿಯಲ್ಲಿ ಹೊತ್ತಿಕೊಂಡು ಬೆಂದು ಹೋಯಿತು. ನಾಲ್ಕಂತಸ್ಥಿನ ಮಹಡಿ ಮನಿಯೊಳಗ ಕೆಂಚನ ಗೌಡ ಅರಾಮಾಗಿದ್ದ.ಎಕರೆ ಎಕರೆ ಕಲ್ಲಿನ ವಾಡೆಯೊಳಗ ಮಲ್ಲನ ಗೌಡ ಮಲ್ಲಿಗೆ ಹೂವಿನಂಗ ಕಳ ಕಳ ತುಂಬಿಕೊಂಡಿದ್ದ. ಊರೊಳಗೆ ಮಾತ್ರ ಎರಡು ದಿನದೊಳಗೆ ಹನ್ನೆರಡು ಜನರು ಶವಗಳಾದರು!
ರಾಜಕೀಯಗಳ ರಕ್ತಪಾತಗಳಾದವು. ದೊಡ್ಡಸ್ಥಿಕೆಗಾಗಿ ಕುಣಿವ ನಾಯಕರು ತಮ್ಮನ್ನು ನೆಚ್ಚಿಕೊಂಡ ಜನರ ಕುರಿತು ಎಳ್ಳಷ್ಟೂ ಆಲೋಚಿಸಲಿಲ್ಲ. ಕೊನೆ ಕೊನೆಗೆ ಈ ರಾಜಕೀಯದ ಗೊಡವೆಗಳು ಜಾತಿ ಗೊಡವೆಗಳಾದವು. ಮಾದರ, ಹೊಲೆಯ, ಕುಂಬಾರ, ತಳವಾರರ ಮದ್ಯ ಹಸಿರು ಹುಲ್ಲು ಹಾಕಿದರೂ ಭಗ್ಗನೆದ್ದು ಹೊತ್ತಿ ಕೊಳ್ಳುವಷ್ಟು ಉರಿ ಎದ್ದವು!
ಯಾರಾದರೂ ರಾತ್ರಿ ಹೊತ್ತು ಒಂಟಿಯಾಗಿ ತಿರುಗ ಬೇಕೆಂದರೂ ಕೂಡಾ ಜನ ಭಯ ಪಡುತಿದ್ದಾರೆ. ಪಟ್ನಕ್ಕೆ ಹೋಗ ಬೇಕೆಂದರೂ ಹೊಲಕ್ಕ ಹೋಗ ಬೇಕೆಂದರೂ..ಒಬ್ಬರ ಜೊತೆ ಇಲ್ಲಂದ್ರ ಹೊರಾಕೂ ಕೂಡಾ ಯಾರೂ ಇಣುಕಿ ನೋಡರು. ಊರು ಹಿಂಗೆ ಸುಡುಗಾಡಾಗಿ ಬದಲಾಗುತ್ತಿರುವ ಸುದ್ಧಿ ತಿಳಿದ ಹಿರಿಯ ಯಜಮಾನ ರಾಜುಗೌಡರು ಕುಂತಲ್ಲೇ….ಕಣ್ಣೀರು ಹಾಕಿದರು.
ಮಧ್ಯಾನ್ಹದ ಬಸ್ಸಿಳಿದು ಕಾಳವ್ವನ ಹೋಟಲ ಕಡೆಯಿಂದ ಬರುತಿದ್ದ ಅಲ್ಲಾ ಭಕ್ಷಿಯ ಮಗ ಗೌಸ್‌ ಮೊಯಿನುದ್ದೀನನನ್ನು ಕೆಂಚನ ಗೌಡನ ಕಡೆಯ ಜನ ಬೇಟೆಗಾರರಂತೆ ಬೆನ್ನಟ್ಟಿ ಬೆನ್ನಟ್ಟಿ, ಮಂಡಿ ದುರುಗಮ್ಮನ ಗುಡಿ ಹತ್ರ ಕತ್ತಿ ಬೀಸಿ ಒಂದು ಕೈ ತೋಳನ್ನೇ ಕಡಿದು ಬಿಟ್ಟರು! ಜಗ್ಗದ ಗೌಸ್‌ ಮೊಯಿನುದ್ದೀನ್‌ ಅಲ್ಲೇ ಸವಾಕಾರರ ಜೀನಿನ ಕಡೆಯ ಮುಳ್ಳ ಬೇಲಿ ಹಾರಿ ಮಲ್ಲನ ಗೌಡನ ಮನೆ ಸೇರಿಕೊಂಡು ಜೀವ ಉಳಿಸಿಕೊಂಡ.
“ ಬ್ಯಾಡಲೋ ಬ್ಯಾಡಲೋ … ಅಂತ ನಾಲಿಗಿ ಗಂಟಲು ಹರಿಯಂಗ ಬಡಕೊಂಡೆನಲ್ಲಲೋ… ಆ ರಾಜಕೀ ಪರ‍್ಟಿಗಳ ಜೊತಿಗೆ ತಿರುಗ್ಯಾಡ ಬೇಡ ಅಂದಿನಿ… ಬಂಗಾರದಂತಹ ನಿನ್ನ ಕೈ ಇಲ್ಲದಂಗಾತಲ್ಲೋ.. ಏನು ಮಾಡಿ ನಾ ಸಾಯಲೋ …ಅಲ್ಲಾ …ಅಲ್ಲಾ” ಎಂದು ಗೌಸ್‌ ಮೊಯಿನುದ್ದೀನನ ತಾಯಿ ಬಿದ್ದು ಬಿದ್ದೂ ಅತ್ತಳು.
“ ನಮಗ್ಯಾಕಲೇ ಒಣ ರಾಜಕೀ ಪರ‍್ಟಿಗಳು.. ಆ ಜೀಪುಗಳು? ಅವರ ಹಿಂದ ಹೋಗಬ್ಯಾಡ.. ಹೋಗಬ್ಯಾಡ …ಅಂದೆ… ಇದು ಎಂದೋ ಒಂದು ದಿನ ತಿರುಗು ಬಾಣ ಆಗಿ ಬಡಿತೈತಿ ಅಂದಿದ್ದನಲ್ಲಲೇ.. ನನ್ನ ಮಾತು ಕೇಳಲಿಲ್ಲೋ..ಸುವ್ವರ್‌ ” ಎಂದು ತಂದಿ ಅಲ್ಲಾ ಭಕ್ಷಿ ಎದಿ ಎದಿ ಹೊಡಕೊಂಡು ಅತ್ತನು.
ಅಗಸಿ ಬಾವಿಯೊಳಗ ಶವಗಳಾಗಿ ತೇಲಿದ ಎಂಟು ಜನರ ಕಥಿ ಹಿಂದ ಗೌಸ್‌ ಮೊಯಿನುದ್ದೀನನ ಕೈವಾಡ ಇತ್ತೆಂದು ತಿಳಿದುಕೊಂಡ ಕೆಂಚನ ಗೌಡನ ಜನರು ಕಾವಲು ಕಾದು ಹಿಂಗ ಒಳ ಏಟು ಕೊಟ್ಟಿದ್ದರು. ಗೌಸ್‌ ಮೊಯಿನುದ್ದೀನ್‌ ಮೇಲೆ ನಡೆದ ದಾಳಿಯೊಳಗೆ ಜಮಾಲ್‌ ಸಾಬ್ ಕೆಂಚನ ಗೌಡನ ಕಡೆಯವರೊಳಗ ಇದ್ದದ್ದರಿಂದಾಗಿ ಊರೊಳಗಿನ ಸಾಬರೂ ಎರಡು ರ‍್ಗಗಳಾಗಿ ಹೋಳಾಗಿ ಬಿಟ್ಟರು. ಪ್ರತಿ ರ‍್ಷ ಜಾಂಡಾ ಕಟ್ಟಿಯ ಹತ್ತಿರ ನಡೆಯೋ ಪರ‍್ಲ ದೇವರ ಹಬ್ಬ ಕೂಡಾ ಈ ರ‍್ತಿ ಯಾರೂ ಮಾಡದಂಗಾದರು.
ಊರೀಗ ಊರಂತಿಲ್ಲ.
ಹಬ್ಬಗಳಿಲ್ಲ. ಆಚರಣೆಗಳಿಲ್ಲ..
ಒಬ್ಬರಿಗೊಬ್ಬರ ಸಹಕಾರವಿಲ್ಲ. ಅವರೆಂದರೆ ಇವರಿಗೆ ಕೋಪ,ಇವರೆಂದರೆ ಅವರಿಗೆ ಉರಿ. ಊರು ತನ್ನ ಅಸ್ತಿತ್ವವನ್ನೇ ಕಳೆದುಕೊಂಡಂತಿದೆ. ಎಲ್ಲರೂ ಕೂಡಿ ನಕ್ಕು ನಲಿದು ಇದ್ದ ಊರೊಳಗೆ ಕಲಹಗಳೇ ಕುಣಿದು ಕೊರಳ ಕಡಿಯುತ್ತಿವೆ. ಊರೀಗ ಹಾಳುಬಿದ್ದ ಸ್ಮಶಾನವಾಗಿದೆ.
ಊರೀಗ ಒಡೆದು ಸರಿಪಾಲಾಗಿದೆ. ದೊಡ್ಡ ಕೇರಿಗಳೆಲ್ಲಾ ಮಲ್ಲನ ಗೌಡನ ಪಾಲಿಗಾದರೆ ಕೆಳಗೇರಿಗಳೆಲ್ಲಾ ಕೆಂಚನ ಗೌಡನ ಸೊತ್ತಾಗಿವೆ. ಊರಿಗೆ ಎರಡು ದಾರಿಗಳಾಗಿವೆ. ಕಾಳವ್ವನ ಹೋಟಲ ತನಕಾ ಬಸ್ಸು ಬರುತ್ತದೆ. ಅಲ್ಲಿಂದ ಊರೊಳಕ್ಕೆ ಬರದು. ಊರಿಗೆ ಸಂಬಂಧಿಸಿದ ಪಂಚಾಯ್ತಿಗಳು ನಡದ್ರೆ ಮಾತ್ರ ಕಾಳವ್ವನ ಹೋಟಲ ಹತ್ರದ ಚಾವಡಿಯೊಳಗೇ ನಡಿತದೆ.
“ಊರಿಗೆ ಶಾಲೆಯೊಂದು ಮಂಜೂರಾಗಿದೆ” ಎಂಬ ಸುದ್ಧಿ ತಿಳಿದೊಡನೆಯೇ ಊರಿನ ಎರಡೂ ಗುಂಪುಗಳವರು ಪೈಪೋಟಿಗೆ ಬಿದ್ದರು. ದೊಡ್ಡ ಕೇರಿಯಲ್ಲಿಯೇ ಆಗಬೇಕೆಂದು ಮಲ್ಲನ ಗೌಡ. ಕೆಳಗೇರಿಯಲ್ಲೇ ಆಗಬೇಕೆಂದು ಕೆಂಚನ ಗೌಡ. ಇಬ್ಬರೂ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ಕಂಡು ಬಲು ಪ್ರಯತ್ನಗಳನ್ನು ನಡೆಸಿದರು. ಇದರ ಮೇಲಾಗಿ ಮಲ್ಲನ ಗೌಡ ಶಾಸಕರನ್ನು ಹಿಡಕೊಂಡು ರಾಜಕೀಯ ನಡೆಸಿದ. ಶಾಲೆ ಎಲ್ಲಿ ತೆಗೆಯಬೇಕೋ… ರ‍್ಥವಾಗದೇ ಶಿಕ್ಷಣ ಶಾಖೆಗೇ ತಿಕ್ಕಲೆದ್ದಿತು.
ಊರಿನೊಳಗೆ ಶಾಲೆ ತೆಗೆಯುವ ಸುದ್ಧಿಯನ್ನು ನಂತರ ಪರಿಶೀಲಿಸೋಣವೆಂದು ಹೇಳಿ ಪೆಂಡಿಗ್‌ ನಲ್ಲಿಟ್ಟು ಫೈಲ್‌ ಮುಚ್ಚಿಹಾಕಿ ಶಿಕ್ಷಣ ಶಾಖೆಯು ಕೈ ತೊಳೆದುಕೊಂಡಿತು.
ಶಾಲೆಯಿಲ್ಲದ ಊರಲ್ಲಿ ಮಕ್ಕಳಿಗೆ ಇನ್ನೇನು ಕೆಲಸವಿರುತ್ತದೆ? ಕೆಲವು ಜನ ಎತ್ತು,ಎಮ್ಮೆ,ಕುರಿ, ಅಡು ಮೇಯಿಸಲಿಕ್ಕೆ ಗುಡ್ಡದ ಕಡೆಗೆ ಹೊರಟರು. ಮತ್ತೆ ಕೆಲವರು ಪಟ್ನದ ಕಡೆಗೆ ಹೋಗಿ ಆಟೋ ರಿಕ್ಷಾಗಳನ್ನು ನಡೆಸಿ ಬದುಕ ತೊಡಗಿದರು. ಇನ್ನೂ ಕೆಲವರು ಮಲ್ಲನ ಗೌಡನ ಜೀಪಿಗೆ ಆತುಕೊಂಡು ಪರ‍್ಟಿಗಳ ಮಾಡತೊಡಗಿದರು. ಯಾವಕ್ಕೂ ಸೇರದವರು ಕೆಂಚನ ಗೌಡ ತಯಾರು ಮಾಡೋ ನಾಡ ಬಾಂಬಿನ ಕರ‍್ಖಾನೆಯೊಳಗೆ ಕೆಲಸಕ್ಕೆ ಹೋಗುತಿದ್ದಾರೆ.
ಕಥೆಯಲ್ಲಾ ಹೀಗೆ ನಡೀತಿರುವಾಗಲೇ ….
ಗ್ರಾಮ ಪಂಚಾಯ್ತಿ ಚುನಾವಣೆಗಳು ಬಂದು ಸತ್ತವು.
ಊರ ಪರಿಸ್ಥಿತಿಯು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಯಿತು.
ಇದಕ್ಕೆ ಜೊತೆಯಾಗಿ ಮೀಸಲಾತಿ ಸೀಟು ಬಂದು ಖಾಯಂ ಆಗಿದೆ. ಊರೊಳಗೆ ಎಲ್ಲಿ ನೋಡಿದರೂ ಇದೇ ಸುದ್ದಿಯೇ… ದೊಡ್ಡದಾಗಿದೆ. ಲಿಂಗಾಯ್ತರು,ಬಿ.ಸಿ. ರ‍್ಗಗಳು, ಮೈನಾರಿಟಿ ರ‍್ಗಗಳು, ಒಳಗೊಳಗೇ ಬೈದುಕೊಂಡರು, ಆದ್ರೆ ಹೊರಗೆ ಯಾರಿಗೆ ಕೊಟ್ಟರೂ ಒಳ್ಳೆಯದೇ ಅಂತ ಹೇಳುತಿದ್ದರು.
ಊರೊಳಗೆ ಎರಡು ಗುಂಪಿನ ಮಧ್ಯೆ ಈ ಚುನಾವಣೆಯು ಮತ್ತಷ್ಟು ಬೆಂಕಿಯನ್ನು ಬೆಳಸಿತು.
ಒಂದು ಪರ‍್ಟಿಯ ಕಡೆಗೆ ಮಲ್ಲನ ಗೌಡ ತನ್ನ ವ್ಯಕ್ತಿ ಮಾದಿಗರ ಅಂಕಪ್ಪನನ್ನ ಅಭ್ರ‍್ಥಿಯಾಗಿ ನಿಲ್ಲಿಸಿದರೆ, ಕೆಂಚನಗೌಡ ತನ್ನ ಮತ್ತೊಂದು ಪರ‍್ಟಿಯ ಅಭ್ರ‍್ಥಿಯಾಗಿ ಹೊಲ್ಯಾರ ಹುಚ್ಚಪ್ಪನನ್ನ ಪ್ರತಿಸ್ರ‍್ಧಿಯಾಗಿಸಿದ. ಎರಡೂ ಅರ‍್ಥಿಗಳು ರ‍್ಥಿಕವಾಗಿ ಏನೂ ಇಲ್ಲದವರೇ. ಇಬ್ಬರದೂ ಗುಡಿಸಲ ಬಾಳು, ಆದರೆ ನಂಬಿಗಸ್ಥರು. ಮಾದಿಗರ ಅಂಕಪ್ಪ ಹೊಡೆದಾಟ ಜಗಳವೆಂದರೆ ಮಾರು ದೂರ ಇರುವ ಮನುಷ್ಯ.ಪ್ರತಿ ಗುರುವಾರದ ದಿನ ಸಂತೆಗೋಗಿ ತರಕಾರಿ ವ್ಯಾಪಾರ ಮಾಡುತಿದ್ದ. ಹೆಬ್ಬಟ್ಟಿನವನು.
ಇನ್ನ ಹುಚ್ಚಪ್ಪ ಕೆಂಚನ ಗೌಡ ಹಾಕಿದ ಗೆರೆ ದಾಟಲಾರ. ಬಾಳಾ ಕಾಲದಿಂದಲೂ ಜೀಪು ಡ್ರೈವರಾಗಿ ಅಲ್ಲೇ ಇದ್ದವ.ಹುಚ್ಚಪ್ಪ ಕಾಗದ ಬರೆಯೋವಷ್ಟು ಓದನ್ನೂ ಕಲಿತಿದ್ದಾನೆ. ನಾಕು ಜನ ಹೆಣ್ಣ ಮಕ್ಕಳ ತಂದೆ ಎಂಬ ಸಣ್ಣ ಸಹಾನುಭೂತಿಯೂ ಈತನ ಮೇಲಿದೆ.
ಊರೊಳಗೆ…
ಕುವೈತ್‌ ನಿಂದ ಅಕ್ಬರ್‌ ಭಾಷಾ ಮಗಳು ಬಂದಿದ್ದಾಳೆ.
ಅವರಿರೋದು ಕೆಳಗೇರಿಯಲ್ಲೇ…
ಆ ಹುಡುಗಿಯ ಮೇಲೆ ಕೆಂಚನ ಗೌಡನ ಕಣ್ಣು ಬಿದ್ದಿತು.
“ ಅಕ್ಬರ್‌ ಮಾವಾ… ನಿನಿಗೆ ತಿಳಿಯದೇನೈತಿ? ನೋಡು ನನಿಗೆ ಮದುವಿ ಆಗೇತಿ ಅದ್ರ ಹೊಟ್ಯಾಗ ಮಕ್ಕಳಿಲ್ಲ. ನೀನು ಒಪ್ಪಿಕೊಂಡ್ರೆ ನಿನ್ನ ಮಗಳನ್ನ ಮಾಡಿಕ್ಯಾಬೇಕಂತ ಅದಾನಿ” ಅಂತ ನಾಟಿ ಕೋಳಿ ರೆಡಿ ಮಾಡಿಸಿ, ರಾತ್ರಿ ತನ್ನ ನಾಲ್ಕಂತಸ್ಥಿನ ಮಹಡಿ ಮನೆಯೊಳಗ ಕೂಡಿಸಿ ಹೇಳಿದನು ಕೆಂಚನ ಗೌಡ.
ಅಕ್ಬರ್‌ ಭಾಷಾ ಗೌಡನ ಮಾತಿಗೆ ಎದರು ಮಾತಾಡಿದರೆ ಊರೊಳಗೆ ಇರಲಾಗದೆಂದು ಒಪ್ಪಿಕೊಂಡನೋ..
ಕುಡಿದ ಅಮಲಿನೊಳಗೆ ತಲೆಯಾಡಿಸಿದನೋ ತಿಳಿಯದು.
ಆದರೆ ಅಂದಿನಿಂದ ಇಬ್ಬರ ಮನೆ ನಡುವೆ ಹೋಗೋದು ಬರೋದು ನಡಿಯತೊಡಗಿದವು.
ಮಗಳ ನಿಖಾದೊಂದಿಗೆ ಅಕ್ಕ ಪಕ್ಕದ ಸಾಬರೆಲ್ಲಾ ಕೆಂಚನ ಗೌಡನ ಕಡಿಗೇ ಕಲೆತು ಸೇರೋ ಹಂಗಾಯಿತು.
ಸ್ರ‍್ಧೆಗೆ ನಿಂತ ಮಾದಿಗರ ಅಂಕಪ್ಪನಿಗೆ ಕರೆಕಲ್ಲು ಗುಡ್ಡದ ಹತ್ರ ಹೊಲವಿತ್ತು. ರಾತ್ರಿ ಹೊಲಕ್ಕ ನೀರು ಕಟ್ಟಲೆಂದು ಹೊಲಕ್ಕೆ ಹೋಗಿದ್ದ ಆತನನ್ನ ಯಾರೋ…ಹೊಲದಲ್ಲಿರುವ ಬೇವಿನ ಮರಕ್ಕೆ ಉರುಲು ಹಾಕಿ ಹೋಗಿ ಬಿಟ್ಟರು. ಕುಟುಂಬಕ್ಕೇ ದೊಡ್ಡ ಆಧಾರವಾಗಿದ್ದ ತನ್ನ ಗಂಡನ ಸಾವನ್ನ ಕಂಡ ಅಂಕಪ್ಪನ ಹೆಂಡತಿ ನಾಕು ರ‍್ಷದ ಮಗನನ್ನ ಹಿಡಕೊಂಡು ಬರ‍್ಯಾಡಿ ಅತ್ತಳು.
“ ಸಿಗತಾರ…ಸಿಗತಾರ…
ಯಾರನ್ನೂ ಬಿಡಲಾರೆವು. ಸೊಲುಪ ಉಸಿರಾಡಲಿ….” ಎಂದು ಅಂದು ಹೆಣ ತಂದ ಮನಿ ಮುಂದೆ ನಾಕು ಸಮಾಧಾನದ ಮಾತುಗಳೇಳಿ ಹೋದನು ಮಲ್ಲನ ಗೌಡ.
ಚುನಾವಣೆಯ ದಿನಾಂಕವು ಘೋಷಣೆಯಾಯಿತು.
“ ನಾನು ಹೇಳೋದು ಕೇಳಮ್ಮಾ…
ಆ.. ನನ ಮಕ್ಕಳು ನಮ್ಮ ಅಂಕಪ್ಪನನ್ನ ಯಂಗ ಉರುಲು ಹಾಕಿದರೋ…? ಅದನ್ನ ಮರೆತು ಬಿಟ್ಟೆಯಾ?…
ಏನು? ನೀನು ನಮ್ಮ ಕಡೆ ಮನುಷಾಳು ಭಯ ಪಡಬೇಡ… ಎಲ್ಲಾ ನಾನು ಹತ್ತಿರವಿದ್ದು ನೋಡಿಕೊಳ್ಳುತ್ತೇನೆ. ಇಂತಾ ಹೊತ್ನಾಗ ಧರ‍್ಯ ತೋರಿಸಬೇಕು…. ನೀನು ನನ್ನ ಮಾತು ಕೇಳಿ ನಾಮಿನೇಷನ್‌ ಮಾಡು ಬಾ… ಎಂದು ಮಲ್ಲನ ಗೌಡ ಅಂಕಪ್ಪನ ಹೆಂಡತಿ ಆದಿ ಲಕ್ಷ್ಮಿಯನ್ನ ಸ್ರ‍್ಧೆಗೆ ಇಳಿಯಲು ಹೇಳಿದ.
“ ಸೋಮಿ … ನನಗ್ಯಾಕ ರಾಜಕೀಯದ ಉಸಾಬರಿ? ಇರೋ ಒಬ್ಬ ಮಗನ ಮೇಲೆಯೇ ನನ್ನ ಜೀವ ಸಾಮಿ. ಅವನ್ನ ಇಟ್ಟಕೊಂಡು ಬದುಕು ಸವಸತಾ ಅದೀನಿ. ನನಗೂ ಏನಾನ ಅದೂ ಇದೂ ಆದ್ರೆ ಮಗ ಅನಾಥ ಅಕ್ಕಾನ” ಎಂದು ಆಕಿ ಹಲುಬ್ಯಾಡಿದಳು.
ಆದರೂ….
ಅದ್ಯಾವುದನ್ನೂ ಲೆಕ್ಕಿಸದದಂತೆ ಮಲ್ಲನ ಗೌಡ ನಿಂತು ಆದಿಲಕ್ಷ್ಮಿಯನ್ನು ನಾಮಿನೇಷನ್‌ ಮಾಡಿಸಿದ.
ಪಾಪ… ಗಂಡನನ್ನು ಕಳೆದುಕೊಂಡ ಹೆಂಗಸು.
ದಿಕ್ಕೆಟ್ಟ ಬಡ ಕುಟುಂಬವೆಂದು ಜನರೊಳಗೆ ಸಹಾನುಭೂತಿ ಹುಟ್ಟಿತು.
ಸ್ರ‍್ಧೆಯೊಳಗೆ ಆದಿಲಕ್ಷ್ಮಿ ಗೆದ್ದಳು.
ಮಲ್ಲನ ಗೌಡ ಮೀಸೆ ತಿರುವಿದನು.
ಹೊಲದ ಹತ್ರ ಅಂಕಪ್ಪನನ್ನು ನಿಜವಾಗಿಯೂ ಕೆಂಚನ ಗೌಡನ ಕಡೆಯವರು ಸಾಯಿಸಿದರಾ…? ತನ್ನ ರಾಜಕೀಯ ಆದಿಪತ್ಯವನ್ನು ಉಳಿಸಿಕೊಳ್ಳಲಿಕ್ಕೆ ಚುನಾವಣೆಯಲ್ಲಿ ತನ್ನ ಅಭ್ರ‍್ಥಿಯನ್ನು ಗೆಲ್ಲಿಸಲಿಕ್ಕೇ ಮಲ್ಲನ ಗೌಡ ಈ ಕೆಲಸ ಮಾಡಿಸಿದನೋ? ಎಂಬ ಅನುಮಾನಗಳ ಹಕ್ಕಿಗಳೂ ರೆಕ್ಕೆ ಬಿಚ್ಚಿ ಹರ‍್ಯಾಡಿದ್ದು ಗುಸು ಗುಸು ಸುದ್ಧಿಯಾಗಿಯೇ ಉಳಿದು ಹೋಯಿತು.
***
ಕೆಂಚನ ಗೌಡ ಮದುವೆ ಆಗುತ್ತೇನೆಂದು ಹೇಳಿದನೇ ವಿನಾ ಅದೇನೂ ನಡಿಯಲೇ ಇಲ್ಲ. ರಾಜಾ ರೋಷವಾಗಿ ಅಕ್ಬರ್‌ ಭಾಷಾ ನ ಮಗಳನ್ನ ಇಟ್ಟುಕೊಂಡು ಆಕೆಗೊಂದು ಚಿಕ್ಕ ಮನೆ ಮಾಡಿದನು. ಕೆಲವು ಕಾಲ ಇಬ್ಬರ ಸಂಸಾರವೂ ಸಾಗಿತು. ಆಕೆ ತಾಯಿಯೂ ಆದಳು. ಕೆಂಚನ ಗೌಡನ ಆನಂದಕ್ಕೆ ಎಣೆಯಿಲ್ಲದಂಗಾಯಿತು. ಅದು ಅಷ್ಟಿಷ್ಟಲ್ಲ. ಕೆಂಚನ ಗೌಡ ತನ್ನ ಕಾಲು ನೆಲಕ್ಕಿಡದಂತೆ ಹಕ್ಕಿಯಾಗಿ ಮುಗಿಲೊಳಗೇ ತೇಲಾಡ ಹತ್ತಿದ. ದೇವರ ಪೂಜೆಗಳ ಮಾಡಿಸಿದ.ದಾನ ರ‍್ಮಗಳ ಮಾಡಿಸಿದ.
ಕೆಂಚನ ಗೌಡನಿಗೆ ಮಗ ಹುಟ್ಟಿದನು.
ಮಗ ಬಲಹೀನವಾಗಿರುವನೆಂದು ಡಾಕ್ಟರ್‌ ಗಳು ಹೇಳಿದ್ದರಿಂದ ದೊಡ್ಡ ದೊಡ್ಡ ಆಸ್ಪತ್ರೆಗಳನ್ನು ತಿರುಗ್ಯಾಡಿ ಬಂದನು. ಗ್ರಹ ಬಲದೊಳಗೆ ದೋಷ ವಿದೆಯೆಂದು ಫಕ್ಕೀರ ಗೌಡ ಎಂದು ಹೆಸರಿಡಬೇಕೆಂದು ಕೆಲವು ಜೋತಿಷಿಗಳು ಹೇಳಿದಂಗೆಯೇ ಮಾಡಿದನು. ಅತ್ತ ಮಸೀದಿಯೊಳಗೆ ಇತ್ತ ದೇವಾಲಯಗಳೊಳಗೆ ಎರಡೂ ಕಡಿಗೆ ಆತ ಪೂಜೆಗಳ ಮಾಡಿಸಿದ..
“ಬಲಹೀನವಾದ ಮಗು ಆರೋಗ್ಯವಾಗುತ್ತದೆ. ಆಯಿತವಾರ ಅಮಾಸೆ ದಿನ ರ‍್ಧರಾತ್ರಿ ಹೊತ್ತು ಹುಟ್ಟಿದ ಮಗ ದೊಡ್ಡ ರ‍್ವಜ್ಞನಾಗುತ್ತಾನೆ. ಇಲ್ಲಾಂದ್ರ ಪಾಪರು ಪಟ್ಟಿ ಪಟಿಂಗ ಕಳ್ಳನಾಗುತ್ತಾನೆ” ಎಂದು ಕೂಡಾ ಪೂಜಾರಿಗಳು ಹೇಳಿದರು.
ಈ ಮಾತುಗಳನ್ನ ಕೇಳಿ ಕೆಂಚನಗೌಡ ಬಿದ್ದೂ ಬಿದ್ದೂ ನಕ್ಕನು.
ಮಗನು ಬಂದ ಗಳಿಗೆ ಚಲೋದೈತೇನೋ, ಆದರೆ ಮಲ್ಲನ ಕೇರಿಯಿಂದ ಕೆಟ್ಟ ಸುದ್ಧಿಯೊಂದು ಆಗಲೇ ಬಂದು ಬಡಿಯಿತು. ತಂದೆ ರಾಜೇ ಗೌಡ ಸತ್ತನೆಂಬ ಸುದ್ಧಿ ತಿಳಿಯುತ್ತಲೇ ಕೆಂಚನ ಗೌಡನ ಎದೆಗೆ ಸಿಡಿಲು ಬಿಡಿದಂಗಾತು. ಪಟ್ಟನೇ ಮನೆಯಿಂದ ಹೊರ ಬಿದ್ದನು.
ಅಷ್ಟೊತ್ತಿಗೆ ಅಣ್ಣ ಮಲ್ಲನ ಗೌಡ ಕೂಡಾ ಬಂದು ಅಳುತಿದ್ದನು.
ಕೆಂಚನ ಗೌಡ ಕೂಡಾ ಬಂದು ಶವದ ಮೇಲೆ ಬಿದ್ದೂ ಬಿದ್ದು ಅತ್ತನು.
ಆ ನಂತರ ಮಷಾಣದ ಕರ‍್ಯಗಳೆಲ್ಲಾ… ಒಂದರ ನಂತರ ಒಂದು ಆಗಿ ಹೋದವು.
ಶವವನ್ನು ಗುದ್ದಿನೊಳಗೆ ಹೂತ ನಂತರ ಇಬ್ಬರೂ ಕೂಡಿ ಮೂರು ದಿನಗಳ ಹಿಂಡೇ ಕೂಳು ಎಡಿ ಮಾಡಿದರು.
ಮನೆಗೆ ತಂದ ಹೊಸ ಗಡಿಗೆಯೊಳಗೆ ಐದು ಪಾವುಗಳ ಅನ್ನ ಕುದಿಯುತ್ತಿರುವಾಗಲೇ ಮನೆಯೊಳಗೆ ಅಣ್ಣ ತಮ್ಮರಿಬ್ಬರೂ ದೇವರಿಗೆ ಪೂಜೆ ಮಾಡಿದರು. ದೀಪ ವಿಟ್ಟು ಹೊರಗೆ ಬಂದರು. ಒಳಗೆ ಏನು ಮಾತಾಡಿಕೊಂಡರೋ ತಿಳಿಯದು. ಆದರೆ ರಾಜ್ಯ ಮಟ್ಟದಲ್ಲಿ ರಾಜಕೀಯಗಳು ನಡೆದವು. ಎಂ.ಎಲ್.ಎ. ಯೊಂದಿಗೆ ಮಾತಾಡಿ ಬಂದಮೇಲೆ ರಾಜ್ಯ ಮಟ್ಟದಲ್ಲಿ ರಚಿಸಲಾದ ಕೃಷಿ ಮಾರುಕಟ್ಟೆ ಸಮತಿಯ ಕರ‍್ಯಕಾರಿ ಸದಸ್ಯನನ್ನಾಗಿ ಮಲ್ಲನ ಗೌಡನನ್ನು ಆಯ್ಕೆ ಮಾಡಲಾಯಿತು. ಇದಕ್ಕೆ ತೆರಿ ಹಿಂದೆ ಕೆಲಸ ಮಾಡಿದ್ದೇ ಕೆಂಚನಗೌಡನೆಂದು ಒಳಗಿನ ಗುಸು ಗುಸು….
ರ‍್ಕಾರದ ಬಂಗ್ಲೆ,ಕಾರು, ಆಫೀಸು ಪಡೆದು ಬೆಂಗಳೂರೊಳಗೆ ಕುಂತ ಮೇಲೆ ಊರೊಳಗಿನ ತನ್ನ ಕುಟುಂಬವನ್ನೆಲ್ಲಾ ಮಲ್ಲನ ಗೌಡ ಸಿಟಿಗೆ ಕರೆಸಿಕೊಂಡು ಬಿಟ್ಟ.
ಮಲ್ಲನ ಗೌಡನನ್ನು ಇಷ್ಟು ಕಾಲದಿಂದ ಊರೊಳಗೆ ನಂಬಿಕೊಂಡು ಬಂದವರ ಕಥೆಯೇನು? ಹೇಳಿಕೊಳ್ಳಲಾರದಂಗಾಯಿತು.
“ ನಾನು ಎಲ್ಲಿದ್ದರೂ ನಿಮಗೆ ಒಳ್ಳೆಯದೇ ಆಗುತ್ತದೆ. ರಾಜಧಾನಿಯೊಳಗೆ ಕುಳಿತರೆ ಎಂತಾ ಕೆಲಸಗಳಾದರೂ ಆಗುತ್ತವೆ. ನಿಮಗಾಗಿಯೇ ನಾನು ಹೋಗುತ್ತಿರುವುದು ” ಎಂದು ಹೇಳಿ ಮೊಸಳೆ ಕಣ್ಣೀರು ವರೆಸಿಕೊಂಡನು ಮಲ್ಲನ ಗೌಡ.
ಅಣ್ಣ ತಮ್ಮಂದಿರಿಬ್ಬರೂ ಕೂಡಿಕೊಂಡ ಮೇಲೆ ಊರು ಉದ್ದಾರ ವಾಗುತ್ತದೆಂದು ಎಲ್ಲರೂ ಅಂದುಕೊಂಡರು.
ಆದರೆ ಅದೇನೂ ಆಗಲಿಲ್ಲ.
ಊರೊಳಗೆ ಕೆಂಚನ ಗೌಡನದೇ ಆಡಳಿತವಾಯಿತು.
ಆತ ಹೇಳಿದ್ದೇ ಶಾಸನವಾಯಿತು.
ಅಲ್ಲಿ ತನಕ ಮಲ್ಲನ ಗೌಡನ ಬಳಿ ಕೆಲಸ ಮಾಡಿದವರನ್ನೆಲ್ಲಾ ಪೀಡಿಸುವುದು, ಕತ್ತರಿಸುವುದು, ಹೆಚ್ಚಾಯಿತು. ಕಷ್ಟ ಬಿದ್ದು ಎರಡು ಮೂರು ಸಲ ಬೆಂಗಳೂರಿಗೆ ಹೋಗಿ ಊರಿನ ಸಂಗತಿಗಳನ್ನೆಲ್ಲಾ ಮಲ್ಲನ ಗೌಡನಿಗೆ ಹೇಳಿದರೂ… ಏನೂ ಪ್ರಯೋಜನ ವಿಲ್ಲದಂಗಾಯಿತು.
“ಊರೊಳಗೆ ವಡೆದಾಟಗಳ್ಯಾಕೆ? ಯಾರೋ ಒಬ್ಬರು ಅನುಸರಿಸಿಕೊಂಡು ಹೋಗಬೇಕಪ್ಪಾ…ಏಷ್ಟು ಕಾಲ ಬಡಿದಾಡತೀರಿ ಅವು ಎಷ್ಟು ದಿನ ನಡೀತಾವೆ? ಸುಮ್ಮಕ ಸಿಕ್ಕಿದ್ದು ಗಳಿಸಿಕೊಂಡು ಸುಖ ಪಡಾದನ್ನ ನೋಡ್ರಿ. ಸಾಕಿನ್ನ… ಇಂಥಾ ರಾಡಿಗಳನ್ನ ಹೊತ್ತಗೊಂಡು ಇಲ್ಲಿತಂಕಾ ಬರಬ್ಯಾಡ್ರಿ. ಬೆಂಗಳೂರು ತಂಕ ತರಬ್ಯಾಡ್ರಿ ಬೇಸಿರಕಿಲ್ಲ ನಡ್ರೀ… ಇದಾ ಕಡೇ ಮಾತು ಎಚ್ಚರ” ಎಂದು ಕಡ್ಡಿ ಮುರಿದ ಮಲ್ಲನ ಗೌಡ.
ಅದಾ…ಕೊನಿ…
ಆ ಮ್ಯಾಲ ಅತನಿಂದ ಯಾರೂ ಒಳ್ಳೇದು ಬಯಸಲೂ ಇಲ್ಲ.
ನಮ್ಮ ರಾಡಿ ಪಂಚಾಯ್ತಿ ತೀರಿಸ ಬಾರಪ್ಪ ಎಂದು ಕೇಳಿಕೊಳ್ಳಲೂ ಇಲ್ಲ.
ಊರೊಳಗೆ ಕೆಂಚನ ಗೌಡಪ್ಪನದೇ ರ‍್ಭಾರಿಕಿ ನಡೆಯತೊಡಗಿತು. ಊರೊಳಗೆ ಆತನಿಗೆ ಯಾರ ಅಡೆತಡೆಯೇ… ಇಲ್ಲದಂಗಾಗಿ ಹೋಯಿತು.
ರೈತರು ಕಷ್ಟ ಪಟ್ಟು ಬೆವರು ಸುರಿಸಿ ಬೆಳೆದ ಬೆಳೆಯನ್ನ ತನಗೇ ಮಾರಬೇಕೆಂದು ಕೆಂಚನ ಗೌಡ ಠರಾವು ಹೊರಡಿಸಿದ. ರೈತರಿಗೆ ನ್ಯಾಯಯುತವಾದ ಬೆಲೆಯನ್ನು ಸಯಿತಾ ನೀಡಲಿಲ್ಲ.
ಊರೊಳಗೆ ರೈತರು ಕಷ್ಟ ಪಡುತ್ತಾರೆಯೇ ವಿನಾ, ಅವರು ಬೆಳೆದ ಬೆಳೆಗೆ ಬೆಲೆ ಕಟ್ಟುವುದು ಮಾತ್ರ ಕೆಂಚನ ಗೌಡನದೇ ಆಯಿತು. ʼಗೌಡನನ್ನು ಬಿಟ್ಟು ಮಾರಿದರೆ ಬೂದಿ ಪಾಲು ಗೌಡನಿಗೆ ತಂದು ಮಾರಿದರೆ ಕಾಡುಪಾಲುʼ ಅನ್ನಂಗಾತು. ಅವರ ಪಾಡು.
“ವ್ಯವಸಾಯವೆಂದರೆ ಜೂಜಾಟವಾ? ಕೊನೆಗಾಣದ ದುಃಖವಾ?”…
ಹೊಲಗಳ ಬಳಿಯೇ ಕೆಂಚನ ಗೌಡರ ನಾಲ್ಕು ಜನ ನಿಂತು, ಮುಖಕ್ಕೆ ಹೊಡೆದಂತೆ, ಟ್ರ‍್ಯಾಕ್ಟರ್‌ ಗಳೊಳಗೆ, ಲಾರಿಗಳೊಳಗೆ ರೈತರು ಬೆಳೆದ ಬೆಳೆಗಳನ್ನ ಹದ್ದುಗಳಂತೆ ಹಾರಿಸಿಕೊಂಡು ಹೋಗುತ್ತಿದ್ದಾರೆ…
ರೈತರು ತಿರುಗಿ ಬೀಳಲಾಗದೇ ಹೋದರು.
ಯಾರಿಗೆ ಹೇಳಿಕೊಳ್ಳುತ್ತಾರೆ?
ಇದಕ್ಕೆ ಜೊತೆಯಾಗಿ….
ಊರೊಳಗೆ ನಂಬರ್‌ ಗಳಾಟದ ಮಟ್ಕವೂ ಬಂದಿದೆ.
ಸುತ್ತು ಮುತ್ತಲ ಹಳ್ಳಿಗಳನ್ನೆಲ್ಲಾ ಸೆಳಕೊಂಡಿದೆ.
“ ರೂಪಾಯಿಗೆ ನೂರು ರೂಪಾಯಿಗಳು” ಎಂದು ಹೇಳಿದ್ದರಿಂದ ಆಸೆಪಟ್ಟ ಜನರು ತಮ್ಮ ಹತ್ತಿರ ಉಳಿಸಿದ ಹಣವನ್ನೆಲ್ಲಾ ತೆಗೆದು ತಮ್ಮ ಅದೃಷ್ಟವನ್ನ ಪರೀಕ್ಷಸಲು ನೋಡಿದರು. ಆ ಆಟ ಕೆಂಚನ ಗೌಡನ ಮನೆಗೆ ಹಣದ ಬೆಳೆಯಾಗಿ ಒದಗಿತು.
ರಾತ್ರೋ ರಾತ್ರಿಗೆ ಲಕ್ಷಾಧೀಶ್ವರರಾಗಬೇಕು,ಕೋಟ್ಯಾಧೀಶ್ವರರಾಗಬೇಕು ಎಂದು ಕನಸು ಕಾಣುವವರನ್ನು ಬೇಟೆಯಾಡುತ್ತಲೇ ಕೆಂಚನ ಗೌಡ ಬೆಳೆದುಬಿಟ್ಟನು. ಮಟ್ಕಾದ ಏಟಿಗೆ ಸುಖದ ಕುಟುಂಬಗಳು ಒಡೆದು ಛಿದ್ರ ಛಿದ್ರಗೊಂಡವು. ಹೆಣ್ಣು ಮಕ್ಕಳ ಕೊರಳೊಳಗಿನ ತಾಳಿ ಸರಗಳು ಕೂಡಾ ಮಟ್ಕಾದ ಮಹಾ ಮಾರಿಗೆ ಆಹುತಿ ಆದವು.
ನೋಡು ನೋಡುತ್ತಿದ್ದಂತೆಯೇ ಊರೊಳಗೆ ಮತ್ತೊಂದು ಅನಿಷ್ಟವು ಊರನ್ನು ಪ್ರವೇಶಿಸಿತು.
ರ‍್ಕರವು ಎರಡು ಬ್ರಾಂದಿ ಶಾಪುಗಳನ್ನು ತೆರೆಯಲು ಕೆಂಚನ ಗೌಡನಿಗೆ ರ‍್ಮಿಷನ್‌ ನೀಡಿತು.
ಇದರೊಂದಿಗೆ ಊರೆಲ್ಲಾ ಮತ್ತಾಗಿ ಮಲಗಿತು.
ಹೆಸರಿಗೆ ಅವು ಬ್ರಾಂದಿ ಶಾಪುಗಳಾದವೇ ವಿನಃ ಒಳಗೆಲ್ಲಾ ಅವು ಕಳ್ಳ ಬಟ್ಟಿ ಸರಾಯಿಯ ಸರಕೇ ಆಗಿದ್ದವು.
ಕಲ್ಲಪ್ಪನ ಗುಡಿ ಕೆಳಗಿನ ಕೆರೆ ಅಂಗಳದಲ್ಲಿ ಬಟ್ಟಿ ಸರಾಯಿ ತಯಾರು ಮಾಡುವುದು…
ಆ ಸರಕನ್ನು ಪ್ಲಾಸ್ಟಿಕ್‌ ಕ್ಯಾನ್‌ ಗಳೊಳಗೆ ಹಳ್ಳಿಗಳಿಗೆ ತರುವುದು…
ಆ ಸರಕಿನ ಯಾಪಾರವನ್ನು ಪುಲ್‌ ಬಾಟಲು.. ಆಫ್‌ ಬಾಟಲುಗಳಾಗಿ ಮರ‍್ಪಡಿಸುವ ವ್ಯಾಪಾರ ಸುರುವಾಯಿತು.
ಆ ನಂತರ ಕೆಂಚನ ಗೌಡ ಹಿಂದಕ್ಕೆ ತಿರುಗಿ ನೋಡಲೇ ಇಲ್ಲ…
ಮಲ್ಲನ ಗೌಡ ರಾಜಧಾನಿ ಲೆವೆಲ್‌ ನೊಳಗೆ ಸಂಪಾದಿಸಿಕೊಳ್ಳುತ್ತಾ ಊರಿನ ಕಡೆಗೆ ಬರಲೇ ಇಲ್ಲ.
ನೋಡಲೇ ಇಲ್ಲ.
***
ಕಾಲ ಕಳೆಯುತ್ತಲೇ ಇತ್ತು.
ಎಂ.ಎಲ್.ಎ ಈ ಸಲ ಚುನಾವಣೆಯೊಳಗೆ ತಾನು ನಿಲ್ಲಲಾರದೇ ತನ್ನ ಮಗ ವೀರನ ಗೌಡನನ್ನು ನಿಲ್ಲಿಸಿದನು. ಮಲ್ಲನ ಗೌಡನ ಪರ‍್ಟಿಯ ಗೆಲುವಿಗಾಗಿ ಕೆಂಚನ ಗೌಡ ಶ್ರಮಿಸಿದನು. ಎಂ.ಎಲ್.ಎ. ಮಗನನ್ನು ಗೆಲಿಸಿಕೊಳ್ಳಲಿಕ್ಕಾಗಿ ತಮಗೆ ಎದುರು ಬಿದ್ದ ಎರಡು ಮೂರು ಕಡೆಯ ಅಭ್ರ‍್ಥಿಗಳನ್ನು ಕಾವಲು ಕಾದು ಕಿಡ್ನಾಪ್‌ ಮಾಡಿಸಿದನು.
“ ಯಂಗಾದರೂ ಎಷ್ಟು ರ‍್ಚಾದರೂ ನನ್ನ ಮಗ ಗೆಲ್ಲಬೇಕು..” ಎಂದು ಎಂ.ಎಲ್.ಎ. ಶಪಥ ಮಾಡಿದ್ದ.
ಎರಡು ದಿನಗಳು ಹಳ್ಳಿ ಹಳ್ಳಿಗಳೊಳಗೆ ಬಿಳಿಯ ಸುಮೋ ಕಾರ್‌ ಗಳಲ್ಲಿ ಮಲ್ಲನ ಗೌಡ ತಿರುಗಾಡಿದ.
ಜನವ್ಯಾರೂ ಆತನನ್ನ ಗೌರವದಿಂದ ನೋಡಲಿಲ್ಲ.
ಅಭಿಮಾನಪಟ್ಟು ಆದರಿಸಲಿಲ್ಲ.
ಪ್ರಚಾರಗಳ ರ‍್ವವೂ ಮುಗಿಯಿತು.
ಓಟು ಹಾಕುವ ದಿನ ಬಂದೇ ಬಿಟ್ಟಿತು.
ಕಳ್ಳ ಬಟ್ಟಿ ಸರಾಯಿ ಹಳ್ಳಿಗಳನ್ನು ಹೊಕ್ಕು ಹಿಂಡಿ ಹಾಕಿತು. ನೋಟಿನ ಕಂತೆಗಳು ರೆಕ್ಕೆ ಬಿಚ್ಚಿಕೊಂಡು ಬಾಗಿಲುಗಳಿಗೆ ಮಾವಿನ ತೋರಣಗಳಾದವು. ಓಟಿಂಗ್‌ ಎಲ್ಲೂ ನಡೆಯಲಿಲ್ಲ. ಪೋಲಿಂಗ್‌ ಆಫೀಸರ್‌ ಗಳು ಮಾರಾಟವಾದರು. ಎಲ್ಲಾ ಓಟುಗಳನ್ನು ಕೆಂಚನ ಗೌಡನ ಕಡೆಯವರೇ ಗುದ್ದಿ ಬ್ಯಾಲೆಟ್‌ ಬಾಕ್ಸಗೆ ತುಂಬಿದರು. ಈ ಸಲದ ಚುನಾವಣೆಯ ನೇತೃತ್ವವನ್ನು ಕೆಂಚನ ಗೌಡನ ಮಗ ಫಕ್ಕೀರ ಗೌಡನೇ ವಹಿಸಿಕೊಂಡಿದ್ದ.
ಫಕೀರಗೌಡನ ಕಡೆಯವರು ಪೋಲಿಂಗ್‌ ದಿನ, ಕೋಡಿ ಹಳ್ಳಿಯ ವಿರೋಧ ಪಕ್ಷದ ಅಭ್ರ‍್ಥಿಯ ಏಜೆಂಟು ನಾಗಭೂಷಣನನ್ನು ತುಂಡು ತುಂಡಾಗಿ ಕತ್ತರಿಸಿದರು.
ಚುನಾವಣಾ ಅಧಿಕಾರಿಗಳು ಅಲ್ಲಿ ರೀಪೋಲಿಂಗ್‌ ʼಗೆ ಆದೇಶ ನೀಡಿದರು.
ಆ ನಂತರ ಅದನ್ನು ಕೂಡಾ ಮತ್ತೆ ಫಕ್ಕೀರಗೌಡ ರಾಜಕೀಯ ಮಾಡಿ ತಮ್ಮದನ್ನಾಗಿಸಿಕೊಂಡ.
ಎಂ.ಎಲ್.ಎ. ಮಗ ವೀರನ ಗೌಡ ಚುನಾವಣೆಯಲ್ಲಿ ಗೆದ್ದನು.
ಅವರಿಗಾದ ಸಂತೋಷ ಅಷ್ಟಿಷ್ಟಲ್ಲ.
“ಯುವಕರು ರಾಜಕೀಯದೊಳಗೆ ಕಾಲಿಡುವಂತಹ ಅಗತ್ಯವೇನೋ ಇದೆ. ಅದಕ್ಕೆ ಆತನಿಗೆ ಈ ಚುನಾವಣೆಯೇ ಶ್ರೀಕಾರವಾಯಿತು.” ಎಂದು ಶಾಸಕರು ಮೀಸೆ ತಿರುವಿಕೊಳ್ಳುತ್ತಾ ಹೇಳಿದರು.
ವೀರನ ಗೌಡ ತನ್ನ ಬೆಂಬಲಿಗರಾದ ಕೆಂಚನ ಗೌಡ, ಪಕ್ಕೀರ ಗೌಡರ ಜೊತೆಗೆ ಬಣ್ಣದಗಳಲ್ಲಿ ಮುಳುಗಿ ಕುಂಕುಮದ ತಿಲಕ ಇಟ್ಟುಕೊಂಡು ಸಂಭ್ರಮದಿಂದ ಪೇಪರ್‌ ಗಳಲ್ಲಿ ಕಾಣಿಸಿಕೊಂಡ.
ಫಕ್ಕೀರ ಗೌಡನೇ ಆ ಸಮಾರಂಭಕ್ಕೆ ರ‍್ಚು ಮಾಡಿದನೆಂದು ಸುದ್ಧಿಯಾಯಿತು..
ಈ ಚುನಾವಣೆಯೊಂದಿಗೆ ಕೆಂಚನ ಗೌಡನಿಗೆ ಒಂದು ನಂಬಿಕೆ ಕುದುರಿತು.
ಫಕ್ಕೀರ ಗೌಡ ತನ್ನಂತೆಯೇ ಬೆಳೆಯ ಬಲ್ಲ.
ಮಟ್ಕಾ ವ್ಯಾಪಾರಗಳು, ಭಟ್ಟಿ ಸರಾಯಿ, ರಸ್ತೆ ಕಾಮಗಾರಿಗಳ ಕಾಂಟ್ರಾಕ್ಟಗಳನ್ನೆಲ್ಲಾ ಆತನಿಗೇ ವಹಿಸಿದ.
ತಾನು ಎಲ್ಲಿಗೂ ಹೋಗಲಿಲ್ಲ.
ದಿನಗಳು ಹೀಗೇ ಕಳೆಯುತ್ತಲೇ ಇದ್ದವು…
ಇದ್ದಕ್ಕಿದ್ದ ಹಾಗೇ ಒಂದು ದಿನ ಎಂ.ಎಲ್.ಎ. ಮಲ್ಲನಗೌಡರು ಬಂದು ಹೊಸ ಸಂದೇಶವೊಂದನ್ನು ಬಿತ್ತರಿಸಿದರು.
“ ಅಮೇರಿಕಾಕ್ಕೆ ಹೋಗಿ ಎರಡು ರ‍್ಷ ಇದ್ದು ಬರೋಣಪ್ಪಾ ಬಾ” ಎಂದು ತಿಳಿಸಿದರು.
ಕೆಂಚನ ಗೌಡ ತುಟಿಗಳಲ್ಲಿ ನಗು ಅರಳಿಸುತ್ತಾ “ ಏನಣ್ಣಾ … ಆ ಕಡಿಕೆ ಗಾಳಿ ಬೀಸುಬುಟೈತೆ” ಎಂದ.
“ ಬುಡಾ ಇಷ್ಟು ರ‍್ಷಗಳೆಲ್ಲಾ ಮಾಡಿದವನ್ನೇ ಮಾಡಿ ಮಾಡಿ ಸಾಕಾತು. ಇನ್ನಾನ ಓಟು ಆ ದೂರದ ದೇಶಕ್ಕ ಹೋಗಿ ನಿರುಮ್ಮಳವಾಗಿ ಲೋಕ ಸುತ್ಯಗಂಡು ಬರೋನಾ ನಡಿ, ಇಲ್ಲಿ ಎಲ್ಲಾ ಸರಿ ಹೋಗೇತಿ ನಡಿ…” ಅಂತಾ ತೂಗ್ಯಾಡೋ ಕರ‍್ಚಿಯೊಳಗ ಕುಂತು ತೂಗುತ್ತಾ ಹೇಳಿದನು.
“ ಬಿಡು ನಡಿಯಣ್ಣಾ… ನನಗೂ ಅಂಗಾ ಅನಸಾಕತ್ತೇತಿ…. ನಮ್ಮ ಮ್ಯಾಲ ಯಾ ಜವಾಬ್ದಾರಿಗಳು ಗುಡಾ ಇಲ್ಲ. ಯಾಪಾರ..ಅಧಿಕಾರಗಳನ್ನೆಲ್ಲಾ ಮಕ್ಕಳೇ ನೋಡಿಕೊನಾಕತ್ಯಾವು. ಹ್ವಾದ ರ‍್ಷ ಅದೇನೋ ಪಾಸ್‌ ಪರ‍್ಟ ವಿಸಾ ಅದೆಲ್ಲಾ ಮಾಡಿಸಿದ್ದೆಲ್ಲಾ ಇದಕಾ ಏನು?, ಅಬಬಬೋ ಭಾರಿ ಬಿಡು ನೀನು. ಆತು ನಡಿಯಣ್ಣಾ ಹೋಗಾನ..ನಮಗೂ ಆ ಕಡಿ ಗಾಳಿ ಕುಡದಂಗಕ್ಕಾತಿ” ನಿರುಮ್ಮಳವಾಗಿ ಒಪ್ಪಿದನು ಕೆಂಚನ ಗೌಡ.
ಅಷ್ಟೇ….
ಬರೋ ವಾರಕ್ಕೇನೇ.. ಎಲ್ಲಾ ಹೊಂದಿಸಿಕೊಂಡರು.
ವಿಮಾನ ಗಾಳಿಯೊಳಗೆ ಹಾರಿತು.
***
ಕೆಂಚನ ಗೌಡ, ಮಲ್ಲನ ಗೌಡರು ಅತ್ತ ಅಮೇರಿಕಾಕ್ಕೆ ಹೋಗುತ್ತಲೇ…
ಇತ್ತ ಹೊಸ ಎಂ. ಎಲ್.ಎ. ವೀರನ ಗೌಡನ ಬೆಂಬಲಿಗರೊಂದಿಗೆ ಫಕ್ಕೀರ ಗೌಡ ಎದ್ದು ಕುಂತನು.
ಊರೊಳಗೆ ತನಗೆ ಎಡಗೈ ಬಲಗೈ ಆಗಿದ್ದ ಬಾರಕೀರ ಸಿದ್ಧಪ್ಪ, ತಳವಾರ ರೇವಣ ಸಿದ್ಧಪ್ಪನನ್ನ ಬೆನ್ನ ಹಿಂದೆ ಇಟ್ಟಕೊಂಡು ಹೊಲಗಳಿಗೆ ಕೆಲಸಕ್ಕೆಂದು ಬರುವ ಚಂದುಳ್ಳ ಹೆಣ್ಣುಮಕ್ಕಳನ್ನು ಬಿಡದೆ ಅನುಭವಿಸುವುದನ್ನು ಶುರುಮಾಡಿದನು.
ತನ್ನ ಹತ್ತಿರಕ್ಕೆ ನ್ಯಾಯ ಕೇಳಿಕೊಂಡು ಬರುವ ಬಡಜನರನ್ನು ಪೀಡಿಸಿ ಹಣ ವಸೂಲಿ ಮಾಡುವುದು…
ವಾರ ಬಡ್ಡಿಗೆ ರೊಕ್ಕ ಕೊಟ್ಟು ತನಗೆ ಬೇಕಾದಂಗೆ ಬಾಂಡು ಬರೆಸಿಕೊಂಡು… ಮನಿ ಮಠ ಎತ್ತಾಕಿಕೊಳ್ಳೋದು.
ಅಡ್ಡ ಬಂದವರನ್ನ…
ತಿರುಗಿ ಬಿದ್ದವರನ್ನ…
ಹಿಡಿ ಹಿಡಿದು ಊರ ಹೊರಗಿನ ತೋಟದ ಮನಿಗೆ ತಂದು ನಾದಿ ನಾದಿ.. ನರಗಳನ್ನ ಕತ್ತಿರಿಸೋದ ಮಾಡತೊಡಗಿದ.
ಫಕ್ಕೀರ ಗೌಡನ ಏಟಿಗೆ ಎದುರೇ ಇಲ್ಲದಂಗಾತು.
ಭೂಮಿ ಹುಚ್ಚು ಹಿಡಿಯಿತು.
ತನಗೆ ಹಿಡಿಸಿದ ಕಾಲುವೆ ಮ್ಯಾಗಳ ಭೂಮಿಗಳ ಮೇಲೆಲ್ಲಾ ಕಣ್ಣಾಕಿದ.
ರಾತ್ರೋ ರಾತ್ರಿ ನಂಬರ್‌ ಕಲ್ಲುಗಳನ್ನ ಬದಲಿಸಲು ಹೇಳಿದ…
ಹಳ್ಳಗಳನ್ನು ಮಾಯ ಮಾಡಿಸಿದ…
ಭೂಮಿಗಳನ್ನೆಲ್ಲಾ ಖಬ್ಜಾ ಮಾಡಿಕೊಳ್ಳ ತೊಡಗಿದ.
ಫಕ್ಕೀರ ಗೌಡನ ಕಡೆಯೋರಿಗೆಲ್ಲಾ ಇದೇ ಕಸಬಾಯಿತು.
ಅವರೆಲ್ಲಾ ಈ ಕಸಬಿನೊಳಗೇ ಮುಳುಗಿ ಹೋದರು.
ವೀರ ಭದ್ರಿಯ ಮನಸೆಲ್ಲಾ ಉರಿಯುತ್ತಿದೆ.
ರಕ್ತ ಕುದಿಯುತ್ತಿದೆ.
ಇದಕ್ಕೆ ನಾನು ಅಡ್ಡಲಾಗಬೇಕು.
ನನ್ನ ಭೂಮಿನ ನಾನು ಉಳಿಸಿಗ್ಯಾಬೇಕು.
***
ಅರಳೀ ಮರದ ರೆಂಬೆಗಳು ಗಾಳಿಗೆ ಸಣ್ಣಗೆ ತೂಗುತ್ತಿವೆ…
ಹೊತ್ತುಟ್ಟಿ ಎಳೆ ಬಿಸಿಲು ಬಿದ್ದು ಎಲೆಗಳೆಲ್ಲಾ ಥಳ ಥಳನೇ ಹೊಳೆಯುತ್ತಿವೆ…. ಪಕ್ಷಿಗಳ ಕೊರಳಿಂದ ನೂರಾ ಒಂದು ಸದ್ದು….
ಮರದ ರೆಂಬೆಗಳು ತೂಗುತ್ತಾ ತೂಗುತ್ತಾ ನೆಲದ ಬಳಿಗೆ ಹಾಯುತ್ತಿವೆ. ಅವು ಭೂಮಿ ತಾಯಿಯನ್ನ ಪ್ರೀತಿಯಿಂದ ಮುತ್ತಿಡಲು ಬಾಗಿದಂಗೆಯೇ ಕಾಣುತ್ತವೆ…
ಒಂದು ಕೈಯೊಳಗೆ ಖಡ್ಗವನ್ನು ಮತ್ತೊಂದು ಕೈಯೊಳಗೆ ಕುದುರೆಯ ಹಗ್ಗವನ್ನು ಹಿಡಕೊಂಡು ಹೋರಾಟ ಮಾಡುತ್ತಿರುವ ವೀರಗಲ್ಲೊಂದು ಆ ಮರದ ಪೊಟರೆಯೊಳಗೆ ಅತುಕೊಂಡು ನಿಂತಿದೆ.
ಅದೇ ಕಟ್ಟೆಯ ಮೇಲೆ ಊರ ಹಿರೀಕರು ಕುಳಿತಿದ್ದಾರೆ. ಉಳಿದವರೆಲ್ಲಾ ನೆಲದ ಮ್ಯಾಲೆಯೇ ಕುಳಿತಿದ್ದಾರೆ.
“ ಹಂಗಾದ್ರೆ… ಏನಂತಿಯಾ…ವೀರಭದ್ರೀ…? ಫಕ್ಕೀರ ಗೌಡ್ರು ನಿನ್ನ ಭೂಮಿನಾ ಒತ್ತಿಕ್ಯಂಡಾನ ಅಂತೀಯಾ? ಹಂಗದ್ರ ನೀನು ಆತನ್ನಾ… ಭೂಮಿ ಕಳ್ಳಾ ಅಂತೀಯಾ!?” ಅಂತಾ ಕೇಳಿದನು ರೇವಣಪ್ಪ.
ಅತ್ತ ಕಿವಿಗೊಡದೇ ಪಂಚಾಯ್ತಿ ಕಟ್ಟೆ ಕಡೆಗೆ ತಿರುಗಿದ ವೀರಭದ್ರಿ “ ಏನೇಳ್ತೀರಿ ಗೌಡ್ರೇ…ಎಕರಿಯಿಂದ ಈಗ ಎಲ್ಡೆಕ್ರೀ ಹಿಡದಾರ, ರಾತ್ರಿಗೆ ರಾತ್ರಿಯೇ ಮ್ಯಾರಿ ಕಲ್ಲು ಕಿತ್ತು ಈ ಕಡಿಗೆ ಹುಗುದಾರ. ಇದರ ಮ್ಯಾಲ ಪಂಚಾಯ್ತಿ ಇಟ್ಟರ ಅವರೇ ಹೇಳಿದ್ದ ಕೇಳಬೇಕು ಅಂತ ಅವತ್ತು ಕಳಿಸಿಬಿಟ್ಟಿರಿ. ಈಗ ಅವರೇ….ಸರಕಂತಾ ಸರಕಂತಾ.. ಹೊಲವೀಟೂ ಹಿಡದಾರ… ಈಗ ನಮಗ ಉಳಿದಿರೋದು ಹಳ್ಳದ ತುಂಡು ಹೊಲ ಒಂದಾ… ಅದು ಕೂಡಾ ಮೊನ್ನೆ ರಾತ್ರಿ ಫಕ್ಕೀರ ಗೌಡ್ರ ಭೂಮಿ ಒಳಗಾ ಬರತೈತಿ ಅನ್ನಂಗ ಮ್ಯಾರಿ ಕಲ್ಲು ಕಿತ್ತಕ್ಯಾರಪ್ಪೋ… ಇನ್ನ ನಾನೇನ್‌ ಮಾಡದು?” ಅಂತಾ ವೀರಭದ್ರ ದುಃಖಿಸಿದನು.
ಕಟ್ಟಿ ಮ್ಯಾಗ ಕುಂತ ದೊಡ್ಡ ಜನರೆಲ್ಲಾ ಆನಂದ ಪಡುತಿದ್ದರೆ ಕೆಳಗೆ ನೆಲದ ಮೇಲೆ ಕುಂತ ಹಳ್ಳಿ ಜನರು ಕಕ್ಕ ಬಿಕ್ಕಿಯಾಗಿ ನೋಡ್ತಾ ಇದ್ರು.
ಮರದ ಬುಡದಲ್ಲೇ ನಿಂತ ಫಕ್ಕೀರ ಗೌಡ ಮೀಸಿ ತಿರುವುತಿದ್ದಾನೆ.
ಮರದ ಕೊಂಬೆಗಳ ತೂಗಾಟವಿಲ್ಲ. ಶಬ್ದಗಳಿಲ್ಲ…. ಪಕ್ಷಿಗಳ ಕಲರವವಿಲ್ಲ…
ಕಣ್ಣಗಲಕ್ಕೂ….ವೀರಭದ್ರ ಅಳುತ್ತಿರುವ ನೋಟ.
“ ಅತ್ತು ಬಿಡಲೇ… ಗಂಡಸು ಅತ್ರೆ ಮುಂಡೆ ನೋಡಿದಂಗ ಅಕ್ಕಾತಿ…. ತಟಗನ್ನಾ ರೋಷವಿಲ್ಲದ ಕಳ್ಳ ಸೂಳೇ ಮಗನೇ…ನಮ್ಮ ಫಕ್ಕೀರ ಗೌಡ್ರನ್ನ ಪಂಚಾಯ್ತಿಗೆ ಕರಿತೀಯಾ ನೀನು!? ಅವ್ರ ಮೇಲೆನೇ… ಭೂಮಿ ಕಳುವು ಹೊರಸ್ತೀಯಾ?… ಅಂದ್ರ ಕಳ್ಳ ಅಂತೀಯೇನ್ಲೇ…
ಅಂತ ಪೊಗರು ಬಂದತೇನ್ಲೇ ನಿನಗೆ…” ಎಂದು ಎಗರಿ ಜಾಡಿಸಿ ಒದ್ದ ಬಾರಿಕೇರ ಸಿದ್ದಪ್ಪ.
ವೀರಭದ್ರಿ ಸಿಡಿದು ಅಷ್ಟು ದೂರ ಉರುಳಿದ.
ಏಳಲು ಹೋದವನಿಗೆ ಮತ್ತೊಂದು ಒದೆ ಬಿತ್ತು.
ಇದೇ ಅವಕಾಶ ನೋಡಿಕೊಂಡು ಫಕ್ಕೀರ ಗೌಡ ಕೂಡಾ ಒದೆಯಲು ಶುರುವಿಟ್ಟನು.
“ ಬೀಳ್ಲಿ ಸೊಕ್ಕು ಕರಗತಾವು. ಏಟು ತಿಮರು ಇರಬೇಕು ಈ ತಿರಬೋಕಿಗೆ ನಮ್ಮ ಗೌಡನ್ನ ಪಂಚಾಯ್ತಿಗೆ ಕರಸಾಕ. ಇನ್ನಾ ನಾಕು ಹಾಕ್ರಿ. ಬುದ್ಧಿ ರ‍್ತಾವು… ಲಮ್ಡಿ ನನ ಮಗನಿಗೆ” ….ಕುಂತು ಕಾರಿಕೊಂಡ ತಳವಾರ ರೇವಣಪ್ಪ.
ವೀರ ಭದ್ರನಿಗೆ ಎರಡೂ ಕಡೆಯಿಂದ ಏಟು ಬೀಳತೊಡಗಿದವು.
ಒಂದು ಕಡಿಗೆ ಸಿದ್ದಪ್ಪ, ಇನ್ನೊಂದು ಕಡಿಗೆ ಫಕ್ಕೀರ ಗೌಡ…. ಕೆಳಗೆ ಬೀಳಿಸಿಕೊಂಡು ರುಬ್ಬತೊಡಗಿದರು.
ಈ ರ‍್ತಿ ಫಕ್ಕೀರ ಗೌಡನು ಹಿಡಿದು ಎಳೆದು ಒದ್ದ ಏಟಿಗೆ ವೀರ ಭದ್ರ ಹಾರಿ ಮರದ ಪೊಟರಿ ಹತ್ರ ಬಿದ್ದ.
ಆತನ ಇನ್ನೊಂದು ಹೊಡ್ತ ಬೀಳೋ ಮುನ್ನವೇ ಬಗಲಾಗ ನೇತಾಡುತಿದ್ದ ಚೀಲದಿಂದ ಗಂಡು ಗೊಡಲಿ ತೆಗೆದು ಮಿಂಚಿನಂತೆ ಮೇಲಕ್ಕೆದ್ದ…
ಸುತ್ತು ಸೇರಿದ ಜನರು ಓಟ ಕಿತ್ತರು…
ವೀರಭದ್ರಿ ಬೀಸಿದ ಒಂದೇ ಒಂದು ಏಟಿಗೆ ಫಕ್ಕೀರ ಗೌಡನ ತಲೆ ಹಾರಿ ಕುಳ್ಳು ತುಂಬಿದ ಗೋಣೀ ಚೀಲದೊಳಕ್ಕೆ ಬಿತ್ತು!
ಇದನ್ನ ನೋಡಿ ಪ್ರಾಣವನ್ನ ಅಂಗೈಲೇ… ಹಿಡಕೊಂಡು ಓಡಲು ನೋಡಿದ ಬಾರಕೇರ ಸಿದ್ಧಪ್ಪ.
ಬೆನ್ನಟ್ಟಿ ಹಿಡಿಯಿತು ವೀರಭದ್ರನ ರುದ್ರಾವತಾರ!
ಹಾರಿ.. ಸಿದ್ಧಪ್ಪನು ಒದ್ದ ಬಲಗಾಲನ್ನು ಕಡಿದು ಬಿಟ್ಟ.
ಹಾ….ಎಂದು ಕುಸಿದ ಸಿದ್ಧಪ್ಪನ ಬಾಯನ್ನ ಹಂಗೇ ಗಂಡು ಗೊಡಲಿಯೊಳಗೆ ಕಡಿದು ಎರಡು ಹೋಳು ಮಾಡಿಬಿಟ್ಟ!
ತಲೆ ತುಂಬಾ ಮಾತಾಡಿದ ತಳವಾರ ರೇವಣಪ್ಪ ಓಡಲೆಂದು ನೋಡಿದನೇ ವಿನಃ. ಆತನ ಕೈ ಕಾಲೇ ಆಡುತಿಲ್ಲ. ನಿಂತಲ್ಲೇ ನಡುಗುತ್ತಾ… ರೇವಣಿ ಎದೆ ಒಡೆದು ಹಂಗೇ ಕುಸಿದು ಪ್ರಾಣ ಬಿಟ್ಟ!
ಅದರೂ…
ಬಿಡದ ವೀರಭದ್ರ ಎಳೆದು ಅವನ ರುಂಡವನ್ನ ಎಗರಿಸಿದ. ಅದು ಹಾರಿ ವೀರಗಲ್ಲಿನ ಪೊಟರೆಯ ಎದುರು ಕಾವಲು ಕಾಯುವಂತೆ ಕುಂತಿತು!
ಅವತ್ತೇ ಕೊನೆ….
ಊರೊಳಗೆ ಹದ್ದುಗಳು ಹಾರಿದ್ದು….
ಊರೊಳಗೆ ಪಾಪದ ಕೆಲಸ ನಿಂತವು.
ಊರ ಪಂಚಾಯ್ತಿಗಳು ನಿಂತವು.
ಊರೀಗ ಊರಿನಂತೆಯೇ ಇದೆ.
ಕಾಲ ಕಾಲಕ್ಕೆ ಮಳೆಯಾಗುತ್ತಿದೆ.
ಕಾಲುವೆಗಳು ತುಂಬಿ ಹರಿಯುತ್ತಿವೆ.
ಎಲ್ಲರ ಹೊಲಗಳೂ ಹಚ್ಚ ಹಸಿರಾಗಿವೆ.
ಎಲ್ಲರೂ ಸಮನಾಗಿ ಬಾಳುತಿದ್ದಾರೆ.
ಮರದ ಕೊಂಬೆಗಳು ಎಂದಿನ ಹಾಗೇ ನೆಲ ತಾಯಿಯ ಕೆನ್ನೆಗೆ ಬಾಗಿ ಮುದ್ದಿಡಲು ನೋಡುತ್ತಿವೆ.
ಸಣ್ಣಗೆ ಹನಿವ ಹನಿಗಳ ನಡುವೆ ಮೂಡಿದ ಕಾಮನ ಬಿಲ್ಲಿನ ಚಲುವಾದ ಬಣ್ಣಗಳು ಮುಗಿಲ ಸೆರಗನ್ನು ತುಂಬಿಕೊಂಡಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕತೆ | ಮಾಯಮ್ಮ

Published

on

~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್,ಕನ್ನಡಕ್ಕೆ: ಡಾ.ಶಿವಕುಮಾರ್ ಕಂಪ್ಲಿ

ʼಆಗಸದ ತುಂಬಾ ಕಪ್ಪನೆಯ ದಟ್ಟ ಮೋಡಗಳು ಕವಿದುಕೊಂಡಿವೆ. ಮೋಡ ಮೋಡಗಳು ಬಸೆದುಕೊಂಡು ಗುಡುಗು ರ‍್ಜಿಸುತ್ತಿದೆ. ಗುಡುಗು ಗುಡುಗುಗಳನ್ನು ಹೊತ್ತಿಕೊಂಡು ಮಿಂಚುಗಳು ಮಿನುಗುತ್ತಿವೆ. ಮಿಂಚು ಮಿಂಚುಗಳು ಹೊಸೆದುಕೊಂಡು ಬೆಂಕಿಸುರಿಸುತ್ತಿವೆ.ಆ ಸೆಕೆಗೆ ಕಪ್ಪುಮೋಡ ಕದಲಿಹೋಗುತ್ತಿದೆ. ಹೊಡೆದುಕೊಂಡು ಹೋಗುತ್ತಿದೆ. ಹೊಗೆಯನ್ನು ತಗಲಿಸಿಕೊಂಡು ಬೋಂಕನೆ ಸರಿಯುತ್ತಿದೆ. ನಕ್ಕನ್‌ ಕರೇಮೋಡ. ಈ ಗಡ್ಡೆಮ್ಯಾಕೆ ಸುರಿಬೇಕಂದರೆ ಈ ಮಾಡಗಳಿಗೆ ಏನು ಮಾಡಬೇಕೋ. ನಮ್ಮ ನೆತ್ತಿಯ ಮೇಲೆ ಬರವನ್ನು ಹಾಕಿ ಎಲ್ಲಿಗೋ ಮಳೆಗಳನ್ನ ಓಡಿಸಿಬಿಡುತ್ತವೆ. ಈ ಮಾಡಗಳಿಗೆ ಅದೇಟು ತೀಟಿ…” ವೀರಶಿವ ಬೈದುಕೊಳ್ಳುತಿದ್ದಾನೆ ಮಾಯಮ್ಮನ ಗುಡಿಯ ಪಡಸಾಲೆಯೊಳಗೆ ಉದ್ದಕೆ ಮಲಗಿಕೊಂಡು.
ಕಪ್ಪನೆಯ ಶರೀರ. ಮಾಸಿದ ಗಡ್ಡ. ಹರಿದುಹೋಗಿರುವ ಬಟ್ಟೆಗಳು. ಕೈಯೊಳಗೊಂದು ಬಿದುರು ಕೋಲು. ಹೆಗಲ ಮೇಲೊಂದು ಜೋಳಿಗೆ. ಧೂಳ ಕಾಲಿನ ಮೇಲೊಂದು ಕುರ ಅದಕ್ಕೆ ಮುತ್ತಿಕೊಳ್ಳುತ್ತಿರುವ ನೊಣದ ಹಿಂಡು, ಇವು ತಿಕ್ಕ ಶಿವನ ಆಕಾರ. ಯಾವಾಗಲೂ ಮಾಯವ್ವನ ಗುಡಿಯ ಹತ್ತಿರವೇ ಇರುತಾನೆ. ಹೊಟ್ಟೆ ಹಸಿದಾಗ ಮಾತ್ರವೇ ಎದ್ದು ಹಳ್ಳಿಗಳ ಒಳಗೆ ಬಂದು ಯಾರೋ ಒಬ್ಬರ ಮನಿಯೊಳಗೆ ಕುಂತು ಅಷ್ಟು ಜೋಳಿಗಿಯೊಳಗೆ ಹಾಕಿಸಿಕೊಂಡು ಹೋಗಿ ಆ ಗುಡಿಯ ಒಳಗೇ ಕುಂತು ತಿನ್ನುತ್ತಾನೆ. ಕಾಲುವೆಯೊಳಗೆ ಹರಿವ ನೀರನ್ನು ಬಾಯಿಗಚ್ಚಿಕೊಂಡೇ ಕುಡಿತಾನೆ. ಹಂಗೇ ಆತನ ಬದುಕೆಲ್ಲಾ ಕಳೆದು ಹೋಗುತ್ತಿದೆ.

ಆಕಾಶವೆಂದರೆ ಕೋಪ. ಮೋಡಗಳೆಂದರೆ ಕೋಪ. ಬೆಳೆಗಳೆಂದರೆ ಕೋಪ. ವ್ಯವಸಾಯವೆಂದರೆ ಕೋಪ. ನಂಬಿಕೊಂಡ ದೇವರೆಂದರೆ ಕೋಪ. ಅದುಕ್ಕೇ ಮಾಯವ್ವ ತಾಯಿಗೆ ಅರಿಷಿಣ ಕುಂಕುಮದ ಬದಲು ಮಸಿಬಳಿಯುತ್ತಾನೆ. ಆ ಗುಡಿ ಹತ್ರ ಆ ತಾಯಿಗೆ ಪೂಜೆಗಳಿಲ್ಲ ಪುನಸ್ಕಾರಗಳಿಲ್ಲ. ದೇವರ ವಿಗ್ರಹವೂ ಕೊಂಚ ಮುಕ್ಕಾಗಿದೆ. ಬಾವಲಿಗಳು ಸೇರಿಕೊಂಡಿವೆ. ಹೊಲಸು ನಾತ ಹೊಡೆಯುತ್ತದೆ. ಅಂತಹ ಗುಡಿಯಲ್ಲೇ ತಿಕ್ಕ ಶಿವಪ್ಪ. ಆ ತಾಯಿಗೆ ಬಾಯಿಗೆ ಬಂದಂಗೆ ಬೈಯುತ್ತಾ ಇರುತ್ತಾನೆ.
ತಿಕ್ಕ ಶಿವಪ್ಪನೆಂದರೆ ನಮ್ಮ ಹಳ್ಳಿಯೊಳಗೆ ಎಲ್ಲರಿಗೂ ಅಭಿಮಾನ. ದೊಡ್ಡ ದೊಡ್ಡವರೆಲ್ಲಾ ಕೈಯೆತ್ತಿ ಮುಗಿಯುತ್ತಾರೆ.

ಆತ್ಮೀಯತೆಯಿಂದ ಆದರಿಸುತ್ತಾರೆ. ಅತ ಬಂದು ಕೇಳಬೇಕೇ ವಿನಃ ಆಸ್ತಿಗಳನ್ನಾದರೂ ಕೊಟ್ಟುಬಿಡುತ್ತಾರೆ. ಆತನಿಗಿರುವ ಹೆಸರು ಅಂತಾದ್ದು. ತಿಕ್ಕ ಶಿವನೆನ್ನೋ ಹೆಸರು ಕೂಡಾ ಅಮಾಯಕವಾಗಿ ಮಕ್ಕಳು ಮಾತಾಡಿಕೊಳ್ಳೋದು. ʼವೀರ ಶಿವʼ ಅಂತಾ ಬಾಯತುಂಬಾ ಕರೆಯಬೇಕೆಂದರೆ ಎಲ್ಲರಿಗೂ ಪರಮಾನ್ನ ತಿನ್ನುವಷ್ಟು ಇಷ್ಟ. ಆಗ… ಆಗ್ಯಾವಾಗಲೋ.. ನಾನು ಸಣ್ಣವನಿದ್ದಾಗಿನ ದಿನದೊಳಗೆ ವೀರ ಶಿವನ ಸಾಹಸಗಳ ಕುರಿತು ಕತೆ ಕತೆಗಳಾಗಿ ಹೇಳುತಿದ್ದರು. ಆ ಕಥೆಗಳೆಲ್ಲವೂ ಜ್ಞಾಪಕಕ್ಕೆಬರುತ್ತಿವೆ…
***
ದಿನಾ ರಾತ್ರಿ ಹೊತ್ತಿಗೆ ದೊಡ್ಡ ಹುಲಿ ಬರುತಾತೆಂದು ಹಳ್ಳಿಯ ಜನ ಭಯಬೀಳುತಿದ್ದರೆ ಆ ವಿಷಯವು ಚಿಕ್ಕ ವೀರಶಿವನಿಗೆ ಒಂದು ದಿನ ತನ್ನ ಜೊತೆಗಾರರನ್ನು ಹಿಂದಾಕಿಕೊಂಡು ಬೆಟ್ಟದ ಮಲ್ಲಪ್ಪನ ಗುಡ್ಡದ ಬಯಲಿಗೆ ಹೊಂಟನು. ಕಣವಿಹಳ್ಳಿ ಅಡವಿಯೊಳಗಿಂದ ದಾಟಿಕೊಂಡು ಕುಮಾರನ ಹಳ್ಳಿ ದಿಕ್ಕಿಗೆ ತಿರುಗಿದನು.ಏಳು ಮೆಟ್ಟಿನ ಹುಲಿಬೇಟೆಗೆಂದು ತಿಳಿದರೆ ಯಾರೂ ಹಿಂದೆ ಬರಲಾರರೆಂದು ಮೊಲದ ಬೇಟಿಗೆ ಹೋಗಾನ ರ‍್ರಿ ಅಂತ ನಂಬಿಸಿದ್ದನು. ನಡು ರಾತ್ರಿತಂಕಾ ಮಲ್ಲಪ್ಪನ ಗುಡ್ಡಕ್ಕೆ ಸೇರಿಕೊಂಡು ಅಲ್ಲಿಂದ ಅಡ್ಡದಾರಿಗುಂಟಾ ಮಲ್ಲಪ್ಪನ ಗುಡ್ಡದ ಬಯಲ ಕಡೆಗೆ ಸೇರಿದರು.
ಕೈಯೊಳಗಿನ ನಾಡ ಬಂದೂಕು ಹಸಿದ ಕಣ್ಣು ಬಿಡುತ್ತಿದೆ. ಬಂಡೆಗಲ್ಲಿನ ಮೇಲೇರಿ ಕೆಳಗೆ ನೋಡುತಿದ್ದಾನೆ ವೀರಶಿವ. ಸಣ್ಣಗೆ ಪೊದೆಯೊಳಗಿನ ಎಲೆಗಳು ಅಲುಗಿದಂಗಾಯಿತು. ಜೊತೆಗಾರರು ಬೆದರಿ ಗುಡ್ಡದ ಮೇಲಕ್ಕೆ ಏರತೊಡಗಿದರು. ವೀರ ಶಿವ ತುಪಾಕಿಯನ್ನು ಸರಿಮಾಡಿಕೊಂಡನು. ಗುರಿ ಕುದುರಿತು. ನೋಟದೊಳಗೆ ಏನೋ ಅನುಮಾನ ಕಾಣಿಸಿತು. ತಡೆದನು. ಲಾಟೀನಿನ ಬುಡ್ಡಿ ದೀಪವನ್ನ ಸ್ವಲ್ಪ ಮೇಲೆತ್ತಿರೆಂದು ಹಿಡಿದುಕೊಳ್ಳಿರೆಂದು ಹೇಳಿದನು. ಪರೀಕ್ಷೆಯಿಂದ ಮರದ ಕಡೆಗೆ ನೋಡಿದನು. ಬಂಡೆ ಇಳಿಯಲು ಪ್ರಾರಂಭಿಸಿದನು. ಎಲ್ಲರೂ ಬ್ಯಾಡಾ ಅಂದರು. ಆದರೂ ಕೇಳದಂತೆ ಹೆಜ್ಜೆಯ ಸಪ್ಪಳ ಕೇಳದಂತೆ ಮರಗಳ ಕೆಳಗೆ ಹೋಗಿ ಸ್ವಲ್ಪ ಬಗ್ಗಿಕೊಂಡು ಎರಡು ಕೈಗಳಿಂದ ಅವಚಿಕೊಂಡನು. ದಾರಿ ಬಳಿ ಜಿಂಕೆ ಮರಿ ಕೊಸರಾಡುತ್ತಿದೆ. ಆಕಡಿಗೆ ಈ ಕಡಿಗೆ ಅದು ತಪ್ಪಿಸಿಕೊಳ್ಳಬೇಕೆಂದು ಕೊಸರಾಡುವುದನ್ನು ನೋಡಿ ಕೈಯೊಳಗಿದ್ದ ಹಗ್ಗದಿಂದ ಅದರ ಎರಡು ಕಾಲು ಕಟ್ಟಿ ಅಲ್ಲೇ ವಗೆದನು. ಅದು ಅರಚುತ್ತಲೇ ಇದೆ. ಅಲ್ಲಿಂದ ಚಕ ಚಕನೇ ಗುಡ್ಡದ ಬಂಡೆಯನ್ನೇರಿದನು. ನಾಡ ಬಂದೂಕನ್ನು ಕೈಯೊಳಗೆ ತೆಗೆದುಕೊಂಡನು. ಜಿಂಕೆ ಮರಿಯ ಕಡೆಗೆ ಗುರಿ ಇಟ್ಟುಕೊಂಡು ಹೊಂಚಿಕೊಂಡು ಕುಳಿತನು. ಆ ಜಿಂಕೆ ಮರಿ ಅಡವಿಯೆಲ್ಲಾ ಅದುರುವಂತೆ ಮೊರೆಯುತ್ತಲೇ ಇದೆ.

ಲಾಟೀನು ಬುಡ್ಡಿಯ ಬೆಳಕನ್ನು ಇಳಿಸಿದನು. ಜೊತೆಗೆ ಬಂದವರೆಲ್ಲಾ ಬೆದರಿ ಮುದುರಿಕೊಂಡು ಏನು ನಡೆಯುತ್ತಿದಿಯೋ ಏನೋ ಎಂದು ನೋಡುತಿದ್ದಾರೆ. ಬಂದೂಕು ಜಿಂಕೆ ಮರಿಯ ಕಡೆಗೇ ಇದೆ. ಜಿಂಕೆಯ ಕೂಗು ಹೆಚ್ಚಾಯಿತು. ಒಂದೇ ಸಾರಿಗೆ ಸಾವಿನ ಕೂಗು ಕೂಗಿತು. ವೀರಶಿವನ ಕೈಯೊಳಗಿನ ಬಂದೂಕು ರ‍್ಜಿಸಿತು. ತೋಟ ತೂರಿ ನುಗ್ಗಿಹೊರಟಿತು. ಹುಲಿ ಎಗರಿಬಿತ್ತು. ಹುಲಿ…ಹುಲಿ… ಜಿಂಕೆಗಾಗಿ ಬಂದಿತ್ತು. ವೀರಶಿವನ ಗುರಿ ಗೆದ್ದಿತು. ಆ ಕ್ಷಣದಲ್ಲೇ ಹಗ್ಗದ ಮೊಲಕು ಬಿಡಿಸಿಕೊಂಡ ಜಿಂಕೆ ಅಷ್ಟೇ ಹೆದರಿಕೆಯಲ್ಲಿ ಜಿಗಿದು ಹಾರಿ ಪೊದೆಯೊಳಗೆ ತೂರಿಹೋಯಿತು. ಗುಡ್ಡ ನಾಲ್ಕು ಹೆಜ್ಜೆ ಇಳಿದು ಮತ್ತೆ ಬಂದೂಕನ್ನು ಸರಿಪಡಿಸಿಕೊಂಡು ಕೆಳಗೆ ಬಿದ್ದು ವಿಲವಿಲನೇ ವದ್ದಾಡುತಿದ್ದ ಹುಲಿಯನ್ನು ಗುರಿಯಿಟ್ಟು ಮತ್ತೆ ಹೊಡೆದನು. ಅದು ರ‍್ಜಿಸುತ್ತಾ ವದ್ದಾಡಿ ಸತ್ತಿತು. ಇದನ್ನೆಲ್ಲಾ ಗದಗದನೇ ನಡುಗುತ್ತಾ ನೋಡುತಿದ್ದ ಜೊತೆಗಾರರೆಲ್ಲಾ ಅಂಗೇ ಕೇಕೆ ಹಾಕಿದರು. ಇದು ಪರಶಿವನ ಬೇಟೆಯ ಕಥೆ.
ಹುಲಿಯನ್ನು ಹೊಡೆದನೆಂದು ಊರೆಲ್ಲಾ ತಿಳಿದಮೇಲೆ ಎತ್ತನ ಬಂಡಿಯಮೇಲೆ ಸತ್ತ ಹುಲಿಯನ್ನೂ, ವೀರ ಶಿವನನ್ನೂ ಕೂರಿಸಿ ಮೆರವಣಿಗೆ ಮಾಡಿದರು ಊರಜನ. ಸುತ್ತು ಮುತ್ತಲ ಅರವತ್ತು ಹಳ್ಳಿಗಳವರೂ ಬಂದು ಹಬ್ಬ ಮಾಡಿದರು.ಆ ಹುಲಿ ರ‍್ಮ ತೆಗೆದು ರ‍್ಪದಿಂದ ಪರಶಿವನ ಮನೆಗೆ ನೇತು ಹಾಕಿದರು.ಹುಲಿಯುಗುರು ತೆಗೆದು ಬಂಗಾರದ ಸರಕ್ಕೆ ಹಾಕಿಕೊಂಡರು.
***
ಪರಶಿವನ ವಿವಾಹ ನಿಶ್ಚಯವಾಯಿತು. ಕರವಾಗಿ ಮಾವನಿಗೆ ಕೊಮಾರನ ಹಳ್ಳಿ ತಾಂಡಾದ ಬಳಿಯ ಬೆದ್ದಲು ಭೂಮಿಯನ್ನು ನೀಡಿದನು. ವಿವಾಹದ ದಿನ ವಧು ಪರ‍್ವತಿಗೆ ಏಳು ಗಜದ ರೇಷಿಮೆ ಸೀರಿ,ಝರಿ ರವಿಕೆ, ಬಂಗಾರದ ಬಳೆಗಳು,ಮೂಗು ನತ್ತು,ಬುಗುಡಿ,ಬೆಂಡೋಲಿ,ತೀಕಿ,ನಾಗರ,ಬೆಳ್ಳಿ ಡಾಬು, ಏಳುವರಹದ ವಡವೆಗಳು ಎಲ್ಲಾ ಪರಶಿವನೇ ಕನ್ನೆಗೆ ಇತ್ತನು.
“ ಬರಗಾಲವು ಕಿತ್ತು ತಿನ್ನುವಾಗ ಇದೇನಪೋ ಮದುವಿ” ಎಂದರು ಸರೀಕರು.
“ ನಮ್ಮೂರ ಗೌಡಪ್ಪನ ಮದುವಿ ನಾವು ಘನವಾಗೇ ಮಾಡಿಕೊಳ್ಳತೀವಿ” ಅಂದು ಆಕಾಸದಂಗ ಹಂದರ ಹಾಕಿ,ಊರೆಲ್ಲಾ ರಂಗೋಲಿ ಬಿಟ್ಟು,ದೊಡ್ಡ ಊರ ಹಬ್ಬದಂತೆ ಹನ್ನೆರಡು ದಿನಗಳ ಮದುವಿ ಮಾಡಿದರು. ಸುತ್ತು ಹಳ್ಳಿಗಳೂ ಸಂಭ್ರಮದಿಂದ ಕುಣಿದವು.
ಮದುವಿ ಹೆಣ್ಣು ಪರ‍್ವತಿ ಅದೆಷ್ಟು ಅದೃಷ್ಟವಂತಳೋ..!? ಎಂದು ಊರೆಲ್ಲಾ ಗಲಗಲನೇ ಅಂದುಕೊಂಡರು. ಅದೇನು ಗಾಚಾರನೋ…ಆಯಮ್ಮನು ಊರೊಳಗೆ ಕಾಲಿಟ್ಟೊಡನೆಯೇ ಬರವು ಬೆನ್ನುಬಿದ್ದಿತು. ಮನಿ ಮನಿಗೆ ಅರಿಷ್ಟವು ಬಡಿಯಿತು. ಬಾವಿಗಳೆಲ್ಲಾ ಒಣಗಿ ಹೋಗಿ, ಹಳ್ಳಗಳೆಲ್ಲಾ ಇಂಗಿ ಹೋಗಿ, ಊರು ನಂಬಿದ ಚಿನ್ನದ ಹಗರಿ ಎಂಬ ಕಿರು ನದಿಯು ಒಣಗಲು ಶುರುವಾಗಿದೆ. ಅವ್ವನ ಜಾತ್ರೆಯ ದಿನ ಮಾಯವ್ವನಿಗೆ ಬೋನಗಳ ಎಡೆ ಇಟ್ಟರು,ಅಂಗಳದಲ್ಲಿ ಕುರಿಕೋಣ,ಆಡು ಕೋಳಿಗಳೆಂಬೋ ನೂರಾರು ಜೀವಿಗಳ ರಕ್ತದ ಮುಖಗಳನ್ನ ಚಲ್ಲಿ, ಬಂಡಿಗಳ ಕಟ್ಟಿ, ಸಿಡಿಗೆ ತೋರಣಗಳನ್ನು ಕಟ್ಟಿಸಿದ್ದಾರೆ. ಗುಡಿಯಲ್ಲಿ ತಾಯಿಮರ‍್ತಿಗೆ ಬೆಳ್ಳಿಯ ಮುಖ,ಕಣ್ಣು,ಕೋರೆಗಳ ಮಾಡಿ ಇಟ್ಟಿದ್ದಾರೆ. ಜಾತ್ರಿಯ ಪೂಜಿ ಜೋರಾಗಿ ನಡೆಯುತ್ತಿದ್ದಾಗಲೇ ತಳವಾರ ಲಕ್ಷ್ಮಿಯ ಮೈಮ್ಯಾಲೆ ಆ ಮಾಯವ್ವ ತಾಯಿ ಮೈದುಂಬಿ ಬಂದಳು…
“ಅಲಲಲಲ ಮಕ್ಕಳೇ…ನಾನು ಯಾರು!?
ಈ ಭೂಮಿ ಆಕಾಶ ಹುಟ್ಟಿದಾಗಿಂದಲೂ…
ಮಹಾಶಕ್ತಿ; ಲೋಕ ಮಾತೆ
ಆದಿಶಕ್ತಿ ; ಲೋಕ ಮಾತೆ
ಕಾಲ ಮೀರಿದವಳು ಗುಡುಗು,ಸಿಡಿಲು,ಗಾಳಿ,ಮಳೆ,ಮುಗಿಲು..
ಈಗ ಒಂದು ಪಕ್ಷಿಯಾಗಿ ಹುಟ್ಟಿ…
ಕೂರಬೇಕೆಂಬ ತಾವು ಸಿಗದಾಗಿ…..
ಕಲ ಕಲನೆ ಗಾಳಿ ಗಾಳಿಯಾಗಿ ಅಂತರ ಅಂತರವಾಗಿ ಆಡುತ್ತಾ…
ಮಹಾ ಬಲಿದಾನವನ್ನ ಕೋರುತ್ತಿದೆ….” ಎಂದು ಹೇಳಿ ದೇವಾಲಯದ ಸುತ್ತಾ ಕಾರ ಮತ್ತು ಮಣ್ಣು ಚಲ್ಲುತ್ತಾ ತಿರುಗಿದಳು. ಜಾತರೆಯು ಪರ‍್ತಿಯಾಯಿತು. ಆದರೆ ಆ ತಾಯಿ ಶಾಂತಿಯಾಗಲಿಲ್ಲವೆಂದು ತಿಳಿದುಹೋಯಿತು.

ಹಸಿರು ಮರಗಿಡಗಳು ಒಣಗಿ ಹೋಗಿವೆ. ಎಲ್ಲಿಯೂ ಕೂಡಾ ಹನಿ ನೀರಿರದ ಪರಿಸ್ಥಿತಿ. ಬರಗಾಲ …ಬರಗಾಲಕ್ಕೆ ಕಾರಣ ಆಯಮ್ಮ ಪರ‍್ವತಿಯೇ…
“ಎಲ್ಲಿಂದಲೋ ಇಲ್ಲಿಗೆ ಸೊಸೆಯಾಗಿ ಬಂದಳು.ಇದೆಲ್ಲವೂ ಆಯಮ್ಮನ ಕಾಲ್ಗುಣವೇ ಎಂದು ಕೆಲವರು ಹೇಳಿದರೆ, ಅದೇನಿಲ್ಲ ಬರಕ್ಕೆ ಕಾರಣ ಆಯಮ್ಮನದೇಗಾಗುತ್ತದೆ ಎಂದು ಕೆಲವರು ಹೇಳಿದರು. ಅದೇನಲ್ಲ ಆಕೆ ಅರಿಷ್ಟ ಊರಿಗೆ ಶಾಪವಾಗಿದ್ದಾಳೆ ಎನ್ನಲು ಪ್ರಾರಂಭಿಸಿದರು. ಆಕೆಯ ಇಂತಹ ಮುಳ್ಳು ಮೊನೆಯ ಮಾತುಗಳನ್ನು ಭರಿಸದಾದಳು.ತನ್ನೊಳಗೆ ತಾನು ಕುಗ್ಗಿ ಕುಗ್ಗಿ ಅಳತೊಡಗಿದಳು. ತನ್ನ ಅರಿಷ್ಟದ ಕಾರಣದಿಂದಾಗಿಯೇ ಊರು ಬಂಜರು ನೆಲವಾಗುತ್ತಿದೆ ಎಂದು ಅಂದುಕೊಂಡಳು.
ಪರಶಿವನು ಸಮಾಧಾನಿಸಿದರೂ ಕೇಳಲಿಲ್ಲ.
ಗಂಡ ಹೊಲದ ಕಡೆಗೆ ಹೋದಾಗ ಆ ನಡು ಮದ್ಯಾನ್ಹದಲ್ಲಿ ಕಣಗಿಲೆಯ ಹೂಗಳನ್ನು ಬಟ್ಟಲತುಂಬಾ ಬಿಡಿಸಿಕೊಂಡು ಬಂದು ಅರೆದು ಮನಸಿನೊಳಗೆ ಆ ಮಾಯಮ್ಮ ತಾಯಿಗೆ ಅಡ್ಡ ಬಿದ್ದು ಹರಕೆ ಮಾಡಿಕೊಂಡಳು. “ ಊರು ಜನರ ಕಷ್ಟಗಳು ಕೊನಿಯಾಗಲಿ,ಕಣ್ಣೀರು ಬತ್ತಿ ಹೋಗಲಿ, ನೀರು ನೀರ ಸೆಲೆ ಹರಿದುಬರಲಿ…ಮಳೆ ಸುರಿದು ಸುರಿದೂ ನೆಲವೆಲ್ಲಾ ತೊಯ್ದು ಹಸಿರಾಗಲಿ. ಕರೆಗಳೆಲ್ಲಾ ತುಂಬಿಕೊಳ್ಳಲಿ…ಬೆಳೆ ಬೆಳೆದು ಸುಗ್ಗಿಯಾಗಲಿ… ಬರಗಾಲ ಹೋಗಲಿ… ಚಿನ್ನದ ಹಗರಿ ನದಿ ಮತ್ತೆ ಹರಿದಾಡಲಿ…. ತಾಯಿ ನನ್ನ ಆತ್ಮ ಬಲಿದಾನವನ್ನು ತೆಗೆದುಕೋ. ತಗೆದು ಕೋ ತಾಯಿ. ಎಂದು ಬಟ್ಟಲನ್ನು ಎತ್ತಿಕೊಂಡು ಗಟ ಗಟನೆ ಗಂಟಲಿಗೆ ಹಾಕಿಕೊಂಡಳು. ಕುಡಿದ ಕೆಲವೇ ಕ್ಷಣಗಳಲ್ಲಿ ಉಸಿರು ನಿಂತಿತು. ಕಾಲು ಕೈಗಳು ತಣ್ಣಗಾದವು.
ಚೆಂಜೆಗೆ ವೀರಶಿವನು ಬಂದು ನೋಡೋ ವೇಳೆಗೆ ಆಯಮ್ಮನ ಶರೀರವು ಕಪ್ಪಾಗಿ ಹೋಗಿತ್ತು.ಇನ್ನ ಯಾರೇನು ಮಾಡುತ್ತಾರೆ? ಪರಶಿವನ ದುಃಖವನ್ನು ಪದಗಳು ಹಿಡಿಯಲಾಗಲಿಲ್ಲ. ಬಿದ್ದು ಬಿದ್ದು ಅತ್ತನು. ಬಂಗಾರದಂತಹ ಹುಡುಗಿ ಮದುವಿ ಆಗಿ ಆರು ತಿಂಗಳು ಕಳೆಯಲಿಲ್ಲವಲ್ಲೋ…ಊರಿಗಾಗಿ ಪ್ರಾಣವನ್ನೇ ಕಳಕೊಂಡಳು ಎಂದು ಜನರೆಲ್ಲರೂ ಅಂದುಕೊಂಡರು. ಆಕೆಯನ್ನು ಚಿನ್ನದ ಹಗರಿ ನದಿ ದಡದಲ್ಲೇ ಹೂತರು. ಇನ್ನ ಆ ದಿನದಿಂದಲೇ ವೀರ ಶಿವನು ಆ ಮನೆಗೆ ಹೋಗದೆ ತೋಟದ ಬಳಿಯೇ ಇರತೊಡಗಿದನು. ಮನೆ ಬಳಿಗೆ ಹೋದರೆ ತನ್ನ ಪರ‍್ವತಿಯೇ ಗರ‍್ತಿಗೆ ಬರುತ್ತಾಳೆಂದು ಹೋಗುವುದನ್ನು ಬಿಟ್ಟು ಬಿಟ್ಟನು. ಮತ್ತೆ ಮದುವೆ ಮಾಡಿಕೊ ಎಂದು ಯಾರೇಳಿದರೂ ಕೇಳದಾದನು.
ನೀರಿನ ಪರಿಸ್ಥಿತಿ ಇನ್ನಾ ಅದ್ವಾನವಾಯಿತು. ಎಲ್ಲೆಲ್ಲಿಂದಲೋ ಗುಂಡೆಯೊಳಗಿನ ಗಬ್ಬು ನೀರನ್ನು ಕೂಡಾ ದೇವಿಕೊಂಡು ತರುತಿದ್ದಾರೆ.
***
ದಿನಗಳು ಕಳೆದು ಹೋಗುತ್ತಿದ್ದಂತೆ ಊರಿಗೆ ಪರ‍್ಲಬ್ಬವು ಬಂದಿತು.ಊರಿನೊಳಗೆ ಯಾವ ಸಂಭ್ರಮವೂ ಇಲ್ಲ. ಆಗ ಪರಶಿವನೇ ಮುಂದೆ ಬಂದು ಚಾವಡಿಯ ಬಳಿ ಸಮಾವೇಶ ನಡೆಸಿದನು. ನಾವಿರುವ ಊರೊಳಗೆ ಬರಗಾಲ ಹೋಗಬೇಕೆಂದರೆ ಅಲಾಯಿ ಹಬ್ಬವನ್ನು ಮಾಡಬೇಕು. ಬರಗಾಲ ಹೋಗಲು, ಮಳೆಹನಿ ಸುರಿಯಲು,ನಾವು ಊರಲ್ಲಿ ಪೀರ ದೇವರ ಅಲೆಗುಣಿ ತೋಡಬೇಕು.ಪೀರಲು ದೇವರನ್ನು ಕೂಡಿಸಿ, ಕತ್ತಲ ರಾತ್ರಿಯ ಅಲೆ ಕುಣಿಯ ಕೆಂಡದ ಕರ‍್ಯವು ಜರುಗಿಸಬೇಕು ಎಂದನು. ರ‍್ಮಕ್ಕಾಗಿ ಬಲಿದಾನವಾದ ಹಸನ ಹುಸೇನರಂತೆ ನಮ್ಮೂರಿನ ಒಳ್ಳೇದಕ್ಕಾಗಿಯೇ ಬಲಿದಾನವಾದ ಊರ ಪರ‍್ವತವ್ವನನ್ನು ನೆನೆದು ಯಾರಿಂದಲಾದರೂ ಊರಿಗೆ ಒಳ್ಳೆಯದಾದರೆ ಸಾಕು ಎಂದು ಊರಿನ ಹಿರಿಯರು ಹಾಗೇ ಆಗಲಿ ಎಂದು ಒಪ್ಪಿಕೊಂಡರು.

ಅಮಾಸಿ ಆದ ಮರುದಿನ ಅಲೆ ಕುಣಿ ತೋಡಿದರು. ಸುತ್ತಿಟ್ಟ ಪಂಜಾ ದೇವರುಗಳನ್ನು ಪೂಜೆಗಿಟ್ಟರು. ಹುಲಿಗಳು ಊರತುಂಬಾ ಕುಣಿಯತೊಡಗಿದವು. ಅಳ್ಳಳ್ಳಿ ಬುವ್ವಗಳು ಸೊಂಟಕ್ಕೆ ಗಂಟೆಯ ಪಟಗಾಣಿ ಕಟ್ಟಿಕೊಂಡು ಚಡ್ಡು ಹಿಡಿದು ಹೊರಟರು. ಮಸೂತಿಗೆ ಜನ ಬಂದು ಬಂದು ಸಕ್ಕರಿ ಓದಕಿ ಓದಿಸಿ ಸಿಹಿ ಪಡೆದು ಲಾಡಿ ಕಟ್ಟಿಕೊಂಡು ಹೊರಟರು.ಮಸೂತಿ ದೇವರುಗಳು ಊರೊಳಗೆ ಹೊರಟು ಎಲ್ಲಾ ದೇವರುಗಳನ್ನು ಬೇಟಿ ಮಾಡತೊಡಗಿದವು. ತಂಗಿ ಮಯಮ್ಮನ ಗುಡಿ ಹತ್ತಿರ ಬಂದು ಎರಡೂ ದೈವಗಳು ಅಪ್ಪಿಕೊಂಡು ಅತ್ತವು. ಬಿಡಿಸಿಕೊಂಡು ಬಿಡು ಊರಿಗೆ ಒಳಿತಾಗಲಿ ಎಂದು ಬಿಡಿಸಿಕೊಂಡು ಎರಡು ದಿಕ್ಕಿಗೆ ತಿರುಗಿದವು. ಕತ್ತಲ ರಾತ್ರಿಯ ದಿನ ಕಡಿದು ತಂದ ಮರದ ಬಡ್ಡೆಗಳು ಹೊತ್ತಿಕೊಂಡವು. ಕೆಂಪನೆಯ ಕೆಂಡದ ಕೆನ್ನಾಲಿಗೆಗಳು ಎದ್ದವು. ಜನ ಉಪ್ಪು ಹಿಡಿದು ಕಟ್ಟಿಗೆಗಳನ್ನು ಹೊತ್ತು ತಂದು ಕ್ವಾವ್‌ ಸೇನ್‌ ಬಾವ್‌ ಸೇನ್‌ ಎಂದು ಕುಣಿಗೆ ಹಾಕಿ ಉರಿ ಹೆಚ್ಚು ಮಾಡಿ ಸುತ್ತಿ ಸುತ್ತಿ ಹೊರಟರು.ಅಲೆ ಕುಣಿಯ ಕೆಂಡದ ಹಾಸಿಗೆಯೇನೋ ತಯಾರಾಯಿತು ಆದರೆ ಅದರಲ್ಲಿ ನಡೆಯುವವರು ಯಾರು? ಯಾವಾಗಲೂ ನಡೆಯೋ ಪೀರಣ್ಣ ಮಾವ ಮಂಚ ಹಿಡಿದಿದ್ದಾನೆ. ಮಗ ಜಮಾಲ ಕಮ್ಮಾರ ಹುಡುಗಿ ಕಾಂತಮ್ಮನನ್ನು ಎಬಿಸಿಗೊಂಡು ಊರು ಬಿಟ್ಟು ಓಡಿದ್ದಾನೆ.

ಕುಣಿ ಉರಿಯುತ್ತಲೇ ಇದೆ. ಆಗ ಪರಶಿವನೇ ಮುಂದಕ್ಕೆ ಬಂದನು. ಕೈಯೊಳಗೆ ದೊಡ್ಡ ಪೀರದೇವರ ಪಂಜಾವನ್ನು ಹಿಡಿದುಕೊಂಡು ಕುಣಿಯೊಳಗೆ ಹೆಜ್ಜೆ ಇಟ್ಟನು. ಹೆಜ್ಜೆ ಕದಲಲು ಕೆಂಡಗಳು ಹೂತು ಬಿಡುವಂತೆ ಎಗರಿ ಎಗರಿ ಬೀಳುತ್ತಿವೆ.ಅಲೆ ಕುಣಿಯ ತುಂಬಾ ಜನ…ತಾಗಿ ಕೊಳ್ಳುತ್ತಾ…ದಬ್ಬಿಕೊಳ್ಳುತ್ತಾ ನೋಡಲಿಕ್ಕೆ ಮೇಲೆ ಮೇಲೆ ಬೀಳುತಿದ್ದಾರೆ.
ಆ ಕಡೆಯಿಂದ ಈ ಕಡೆಗೆ , ಈ ಕಡೆಯಿಂದ ಆ ಕಡೆಗೆ ಮೂರು ಸಲ ಕೆಂಡದೊಳಗೆ ನಡೆದು ಪೀರದೇವರನ್ನು ಗದ್ದುಗೆ ಮೇಲಿಟ್ಟು ಕಣ್ಣು ತಿರುಗಿ ಕುಸಿದು ಬಿದ್ದನು ಪರಶಿವ.
“ ಅಭ್ಯಾಸವಿಲ್ಲದ ಕೆಲಸವನ್ನು ಯಾಕೆ ಮಾಡಬೇಕಪ್ಪಾ ಸ್ವಾಮಿ” ಎಂದನು ಪಕ್ಕದಲ್ಲಿದ್ದ ಹಿರಿಯ ಕತ್ಲಪ್ಪ.
“ ಈ ಬರಗಾಲ ನೋಡಲಾಗದೇ ಬಂದೆ ಕಣಜ್ಜೋ..” ಎಂದನು ವೀರ ಶಿವ ಬಿಗಿದ ಪಾದಗಳನ್ನು ನೋಡಿಕೊಳ್ಳುತ್ತಾ.
ಆದರೂ ಮಳೆರಾಯ ತಿರುಗಿ ನೋಡುತ್ತಿಲ್ಲ. ಹನಿ ಬೀಳುತ್ತಿಲ್ಲ. ಮಾಡಗಳೆಲ್ಲಾ ಮೊಂಡು ಬಿದ್ದುಬಿಟ್ಟಂಗದೆ.
ಅಲೆ ಕುಣಿಯ ಕೆಂಡ ಚೆಲ್ಲಾಡಿ ದೇವರು ಹೊರಟ ಬಳಿಕ ಆ ಬೂದಿಯನ್ನು ವಿಭೂತಿಯಾಗಿ ಬಳಸಲಿಕ್ಕೆ ,ಆಧಾರವಾಗಿ ಇಟ್ಟುಕೊಳ್ಳಲಿಕ್ಕೆ ಜನರು ಪೈಪೋಟಿಗೆ ಬಿದ್ದಿದ್ದಾರೆ. ಆ ಬೂದಿ ಇದ್ದರೆ ಮನೆಯೊಳಗೆ ದೆವ್ವಗಳ ಕಾಟ ಬರೋದಿಲ್ಲ. ಹತ್ತಿರ ಸುಳಿಯಲಾರವು ಎಂಬುದು ಅವರ ನಂಬಿಕೆ. ಉಳಿದ ಬೂದಿಯನ್ನ ಜನರು ಆಕಾಶಕ್ಕೆ ತೂರಿದರು. ಮಳೆರಾಯನಿಗೆ ಬಾರಪ್ಪೋ ಸ್ವಾಮಿ ಎಂದು ಕೈ ಮುಗಿದರು. ಆದರೂ ಆಕಾಶರಾಯ ಕರಗಲಿಲ್ಲ.
ಜನ ಗುಳೇ ಹೋಗಲು ಶುರು ಮಾಡಿದರು. ನೀರಿಲ್ಲದ ಊರಲ್ಲಿ ಬಿದ್ದು ಸಾಯುವುದಕ್ಕಿಂತಾ ಎಲ್ಯಾನ ಕಾಡಲ್ಲಾದರೂ ಗಡ್ಡೆ ಗೆಣಸು ತಿಂದು ಇರೋದೇ ಪಾಡೆಂದು ಊರ ಜನರು ಮನೆಗಳ ತೊರೆದು ಹೋಗುತಿದ್ದಾರೆ. ಇಷ್ಟು ಕಾಲ ನಂಬಿಕೊಂಡಿದ್ದ ನೆಲವನ್ನು ಬಿಟ್ಟು ಕೊಟ್ಟು ದೇಸಾಂತರ ಹೋಗುತ್ತಿರುವವರ ನೋಡಿದಾಗ ಪರಶಿವನಿಗೆ ನೋವಾಗುತ್ತಿದೆ.
ಆದರೂ ಪಾಪ ಆತನೇನು ಮಾಡುತ್ತಾನೆ. ಕರುಣ ರಸವನ್ನು ಹೊಮ್ಮಿಸುವ ಭಕ್ತ ಕುಮಾರವ್ಯಾಸನ ಕಥೆ ಹೇಳಿಸಿದರೆ ಆ ಮಾಡಗಳು ಕರಗಿ ಕರುಣಿಸುತ್ತವೆಂದು ಯಾರೋ ಹಿರಿಯ ಹೇಳಿದರೆ ಆಗಲಿ ಬಿಡೆಂದು ಶಿವಮೊಗ್ಗದ ಕಡೆಯಿಂದ ಕಲಾ ಕಾರರನ್ನು ಕರೆಕಳಿಸಿದನು. ರಾತ್ರಿಯೆಲ್ಲಾ ಮಾಯವ್ವ ತಾಯಿಗೆ ಕಾವ್ಯದ ರಸವನ್ನು ಉಣಿಸತೊಡಗಿದನು.
ಅಳಿದುಳಿದವರು ಕೂಡಿ ಮಳೆಯ ಹಾಡುಗಳ ಹಾಡುತಿದ್ದಾರೆ.
“ ಯಾತಕ್ಕೆ ಮಳೆ ಹೋದವೋ ಶಿವ ಶಿವಾ
ಲೋಕ ತಲ್ಲಣಿಸುತಾವೋ ಶಿವ ಶಿವಾ…
ಬೇಕಿಲ್ಲಾದಿದ್ದರೆ ಬೆಂಕಿಯ ಮಳೆ ಸುರಿದು
ಉರಿಸಿ ಕೊಲ್ಲಲು ಬಾರದೇ.
ಹೊಟ್ಟೆಗೆ ಅನ್ನ ಇಲ್ಲದಲೆ
ನಡೆದರೆ ಜೋಲಿ ಹೊಡೆಯುತಲೆ
ಪಟ್ಟದಾನೆಯಂತ ಸ್ತ್ರೀಯಾರು ಸೊರಗಿ
ಸೀರೆ ನಿಲ್ಲೋದಿಲ್ಲ ಸೊಂಟಾದ ಮೇಲೆ.
ಹಸುಗೂಸು ಹಸುವಿಗೆ ತಾಲದೆಲೆ
ಅಳುತಾವೆ ರೊಟ್ಟಿ ಕೇಳುತಲೇ
ಹಡೆದ ಬಾಣಂತಿಗೆ ಅನ್ನವು ಇಲ್ಲದಲೆ
ಏರುತಾವೆ ಮೊಳಕೈಗೆ ಬಳೆ.
ಒಕ್ಕಾಲು ಮಕ್ಕಳಂತೆ
ಅವರಿನ್ನು ಮಕ್ಕಳನು ಮಾರುಂಡರು
ಮಕ್ಕಳನು ಮಾರುಂಡು ರೊಕ್ಕವನು ಮಾಡುತಾರೆ
ಮುಕ್ಕಣ್ಣ ಮಳೆ ಕರುಣಿಸೋ..
ಸ್ತ್ರೀಯರು ಅಳುತ್ತಿದ್ದಾರೆ. ಹಳ್ಳಿ ಜನರು ಮುತ್ತಿಕೊಳ್ಳುತಿದ್ದಾರೆ. ಬಂಗಾರದಂತ ಮಕ್ಕಳನ್ನು ಮಾರುವುದೇಗೆ ಎಂದು , ಅಂತ ಘಳಿಗೆ ತಂದ ಮಳೆರಾಯನಿಗೆ ತಾಯಂದಿರು ಬರಕ್ಕೆ ಶಪಿಸುತಿದ್ದಾರೆ. ಇದನ್ನು ಕಂಡ ಪರಶಿವನಿಗೆ ಬಾಯಿ ಕಟ್ಟಿತು. ಕಾಲು, ಕೈಗಳು ಬಿಗಿಯಲಾರಂಭಿಸಿದವು. ನಾಟಿ ವೈದ್ಯರು ಬಂದು ಹಸಿರು ಸೊಪ್ಪಿನ ರಸ ಹಿಂಡಿ ಕೂಡಿಸಿದರು. ಹಾಡು ಕಾವ್ಯಗಳು ಮಧ್ಯದಲ್ಲೇ ನಿಂತು ಹೋದವು.
ಆ ದಿನ ಮೊದ ಮೊದಲು ಪರಶಿವನಿಗೆ ಸ್ವಲ್ಪ ಸ್ವಲ್ಪ ಮತಿ ತಪ್ಪುವುದು ಶುರುವಾಯಿತು. ಹುಚ್ಚು ಹುಚ್ಚಾಗಿ ಮಾತಾಡುವುದು…. ವಿಚಿತ್ರವಾಗಿ ನಗುವುದು..ಅಳುವುದು….ಆಕಾಶಕ್ಕೆ ತಿರುಗಿ ಉಗಿವುದು… ಈ ರ‍್ತನೆಯನ್ನು ನೋಡಿದವರಿಗೆ ಮನವೆಲ್ಲಾ ನೊಂದಿತು.
ಬಂಗಾರದಂತಹ ಮನೆಯ ನಡುಗಂಬ ಕುಸಿದು ಬಿದ್ದಾಗ, ಭೂಮಿಗಳೆಲ್ಲಾ ಪಾಳು ಬಿದ್ದಾಗ ವೀರಶಿವನನ್ನು ನೋಡಿಕೊಳ್ಳರ‍್ಯಾರೂ ಇಲ್ಲದಾದರು. ಕಾಲದೊಂದಿಗೆ ಆತನ ವಯಸ್ಸೂ ಕರಗಿ ಹೋಗುತ್ತಿದೆ. ಪ್ರಾಯ ಹಾರಿ ಹೋಗಿದೆ.
ಮನುಷ್ಯನೇನೂ ಕುಗ್ಗಲಿಲ್ಲ ಆದರೂ ಆಗಾಗ ಬಿದಿರುಕೋಲು ಹಿಡಕೊಂಡು ಊರೊಳಗೆ ಕಾಣಿಸುತಿರುತ್ತಲೇ ಇರುತ್ತಾನೆ. ಆದರೂ ಆ ಮನುಷ್ಯ ಸುಮ್ಮನಿರುತಾನಾ…
***
ಬೆಳಗಾದಗಿಂದಲೂ ಬೆಳ್ಳನೆಯ ಮೋಡಗಳನ್ನು ಬೈಯುತ್ತಲೇ ಇದ್ದವನು ಈಗ ಹೊರಟಿದ್ದಾನೆ.ವೀರಾಪುರದ ಬಳಿಯ ಕಾಕಿ ಚಣ್ಣದ ಎಲ್ಲಜ್ಜನನ್ನು ಕಲೆತು ಅಂಜನ ಹಾಕಿ ನೋಡು ಎಂದನು. ಚಿನ್ನದ ಹಗರಿ ನದಿ ಕತೆಯೇನೋ. ಆತ ನೋಡಿ ಹೇಳಿದನು.” ನೆಲದ ಕೆಳಗಿನಿಂದ ಆಕಾಶದ ಮೋಡದ ತನಕ ಅರಿಷ್ಟವು ಸುತ್ತಿಕೊಂಡಿದೆ. ದೊಡ್ಡ ಬಲಿದಾನ ನಡೆಯದ ಹೊರತು ಇದು ಹೋಗದು. “ ಹೌದೌದು. ಹುಣ್ಣಿಮೆ ದಿನವೂ ಮಾಯವ್ವ ತಾಯಿ ಮೈದುಂಬಿ ಇದೇ ಮಾತೇಳಿದಳು.” ಎನ್ನುತ್ತಾ ಜೋರು ಜೋರಾಗಿ ನಡೆದು ಮಾಯಮ್ಮ ದೇವಿ ಗುಡಿಯ ಬಳಿಗೆ ಬಂದನು. ವಿಗ್ರಹಕ್ಕೆ ಹತ್ತಿದ ಮಸಿಗುಡ್ಡೆಯನ್ನು ತೆಗೆದು ಹಾಕಿದನು. ಹರಿಷಿಣ ಕುಂಕುಮಗಳನ್ನು ಹಚ್ಚಿ ಹೂಗಳನ್ನು ಏರಿಸಿ ಪೂಜೆಗಳನ್ನು ಮಾಡಿದನು. ಗುಡಿಯೊಳಗೆ ಸೇರಿಕೊಂಡ ಬಾವಲಿಗಳನ್ನು ಓಡಿಸಿದನು. ಕಸಕಡ್ಡಿ ,ಮಲಿನಗಳನ್ನೆಲ್ಲಾ ತೆಗೆದು ದಿಬ್ಬದ ಮೇಲೆ ಒಗೆದನು. ಬಾಯಿಗೆ ಬಂದ ಮಂತ್ರಗಳೇನೋ ಆ ತಾಯಿಯ ಮುಂದೆ ಕೂತು ಹೇಳಿದನು. ಹಾಡಿದನು. ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿದನು. ಅತ್ತನು. ರಾತ್ರಿಯೆಲ್ಲಾ ಆ ತಾಯಿಯ ವಿಗ್ರಹದ ಬಳಿಯೇ ಕೂತು ಪ್ರರ‍್ಥಿಸಿದನು. ಬೆಳ್ಳಿ ಮೂಡುವ ವೇಳೆಗೆ ಯಾವುದೋ ರಹಸ್ಯವನ್ನು ಕಂಡು ಹಿಡಿದವನಂತೆ ಪರಶಿವನ ಸಂಭ್ರಮದಿಂದ ಊರಿನೊಳಗೆ ಬಂದನು.
“ ಇನ್ನ ಇರಲ್ಲ ಬಿಡು… ಈ ಬರಗಾಲವನ್ನ ಅವ್ನವೌನ್‌ ಅದರ ಹೆಣ ನೋಡ್ತಾನಿ” ಎಂದು ಊರೆಲ್ಲಾ ತಿರುಗುತ್ತಾ ಹೇಳಿದನು. ಜನರೆಲ್ಲಾ ಈ ಹುಚ್ಚು ಮಾತುಗಳನ್ನ ಆಶ್ರ‍್ಯದಿಂದ ಕೇಳಿದರು.
ಬಿದಿರು ಕೋಲನ್ನು ಪಕ್ಕಕ್ಕೆ ಬಿಸಾಕಿ ಮಾಯಮ್ಮ ತಾಯಿ ದೇವರ ಗುಡಿ ಮುಂದೆ ಆ ದೇವಿಗೆ ಧಿಡನಮಸ್ಕಾರ ಮಾಡಿದನು. ಅಂಗೇ ಹೊರ ಹೊಂಟನು… ಎಲ್ಲಿಗೆ ಸಿದ್ದಯ್ಯನ ಗುಡ್ಡದ ಮೇಲಕ್ಕೆ. ರ‍್ಮಾನುಷವಾಗಿ ಒಣಗಿ ಬೀಳು ಬಿದ್ದಿರುವ ಭೂಮಿಗಳು. ಕೆಂಪು ಧೂಳಿನಿಂದ ಸುತ್ತೂ ತಿರುಗಿ ಬರುತ್ತಲಿದೆ. ಏನು ಧೂಳಿನ ದೆವ್ವ ಗಾಳಿ. ಹಾಗೇ ಮುಂದಕ್ಕೆ ಸಾಗಿದನು. ಒಣಗಿದ ಕೆರೆಯ ಬಳಿ ನಿಂತು ಸುತ್ತೂ ಮಾಯಮ್ಮ ತಾಯಿಯನ್ನ ಬಿಡದಂತೆ ಕಂಡನು. ದುಃಖಿಸಿದನು. ದೂರದಲ್ಲಿ ಊರ ಜನರು ಓಡುತ್ತಾ ಇತ್ತ ಕಡೆಗೇ ಬರುತಿದ್ದಾರೆ.
ರಾತ್ರಿಯೆಲ್ಲಾ ಕುಳಿತು ಮಸೆದು ಇಟ್ಟ ರ‍್ಧಚಂದ್ರಾಕಾರದ ಗಂಡು ಗೊಡಲಿಗೆ ಮುತ್ತಿಟ್ಟನು. ನೆಲದ ಮಣ್ಣನ್ನು ತೆಗೆದುಕೊಂಡು ಕಣ್ಣಿಗೆ ತೀಡಿಕೊಂಡನು. “ ನಮಗೇಕೆ ತಾಯಿ ಈ ನರಕ. ಆ ಕಡಿಗೆ ಎಲ್ಲರನ್ನ ಸಾಯಿಸಾದರೂ ಸಾಯಿಸು. ಇಲ್ಲದಿದ್ದರೆ ಎಲ್ಲರಿಗನ್ನಾ ಹೊಟ್ಟೆತುಂಬಿಸು. ನಡುವಿನ ಈ ಬರಗಾಲವೇಕೆ” ಕೈಯೊಳಗೆ ಉಳಿದ ಮಣ್ಣನ್ನು ನೆಲಕ್ಕೆ ಹಾಕಿದನು.
“ ನನ್ನ ಪ್ರಾಣ ತಗಂಡನ್ನಾ ಶಾಂತವಾಗಿ ನಾಲ್ಕು ಚುಕ್ಕೆಗಳ ಕಣ್ಣೀರ ಹನಿಸು… ಎನ್ನುತ್ತಾ ಕೈಯೊಳಗಿನ ಗಂಡಗೊಡಲಿಯನ್ನ ಬಲವಾಗಿ ಗಿರ ಗಿರನೇ ತಿರುಗಿಸಿ ಮುಗಿಲ ಕಡೆಗೆ ಎಸೆದನು ಅದು ತಿರುಗುತ್ತಾ ತಿರುಗುತ್ತಾ ಕೆಳಕ್ಕೆ ಬರುತ್ತಿದೆ…ಬರುತ್ತಿದೆ..ಬರೋ ಕಡೆಗೇ ಶಿರ ಬಾಗಿಸಿದನು ವೀರ ಶಿವ. ತಲೆ ಬಾಗಿಸಿದವನನ್ನ ಪಕ್ಕಕ್ಕೆ ಎಳೆದುಕೊಂಡರು ಊರ ಜನರು.
“ ಬಿಡ್ರೋ… ಬಿಡ್ರೋ…” ಅಂತ ಬಿಡಿಸಿಕೊಂಡನು ವೀರಶಿವ.
ಮೇಲಿಂದ ಬೀಳುತಿದ್ದ ಗಂಡು ಗೊಡಲಿ ನೆಲದ ಮಣ್ಣಲ್ಲಿ ನಾಟಿಕೊಂಡಿತು.
“ ಏನು ಸ್ವಾಮಿ ಹಿಂಗ ಮಾಡಿದಿರಿ” ಜನರೊಳಗಿನ ಯಾರೋ ಕೇಳಿದರು.
“ ಸಾಯಲು ಬಿಡ್ರಿ ನನ್ನನ್ನು ಸಾಯಲು ಬಿಡ್ರಿ” ನಿಮಗೆ ಮಳೆ ರ‍್ತಾವು. ನೀವು ಸುಖವಾಗಿರುತ್ತೀರಿ..” ದುಃಖದಿಂದಲೇ ಹೇಳುತಿದ್ದಾನೆ.
“ ಸತ್ತರೇ ಮಳೆ ಬರುತಾದ ಅಂದ್ರ ದಿನಕ್ಕೊಬ್ಬರು ಸಾಯುತಿಲ್ಲವೇ ಸ್ವಾಮಿ. ಸಾವೇ ಸಮಾಧಾನವಾ…” ಎಂದು ಹೇಳಿದ ಜನರೊಳಗಿನ ಹಿರೀಕ.
“ ಮಾಯಮ್ಮ ತಾಯಿಗೆ ಕರುಣೆ ಹುಟ್ಟಿದರೆ ಈಗಲೇ ಮಳೆ ಬರುತ್ತದೆ. ನಾವ್ಯಾಕೆ ಪ್ರಾಣ ಕಳಕೋ ಬೇಕು. ಯಾರದೋ ಹೆಣ್ಣು ಧ್ವನಿ ಕೇಳುತ್ತಿದೆ.
ಓ… ತನೇನು ಮಾಡುತಿದ್ದೇನೆ. ಯಾಕೆ ಹೀಗೆ ರ‍್ತಿಸುತಿದ್ದೇನೆ. ಇಲ್ಲ. ನಾನು ಜನರಿಗಾಗಿ ವೀರಶಿವನಾಗಿಯೇ ಬದುಕಬೇಕು. ಜನರಿಗಾಗಿ ಬದುಕಬೇಕು. ಊರಿಗಾಗಿ ಬದುಕಬೇಕು. ಕಾಲ ಕೆಳಗೆ ತಣ್ಣನೆಯ ತಂಪು…ತಣ್ಣಗೆ ತಂಪಾದ ಸಣ್ಣನೆಯ ಅನುಭವ… ನೀರ ತೇವ…ಭೂಮಿ ಬಿರಿಯಿತು. ಭೂಮಿ ಉರಿಯಿತು. ಮುಗಿಲು ಬೆದರಿತು.
ಕವಿದುಕೊಂಡ ಕಪ್ಪು ಮೋಡಗಳು ಒಂದಕ್ಕೊಂದು ತಿವಿದುಕೊಂಡು ಅಪ್ಪಳಿಸಿದವು. ಮಿಂಚು ಮಿಂಚು ಹೆಣೆದುಕೊಂಡು ಬೆಂಕಿ ಬೆಳಗಿದವು. ಗುಡುಗು ಸಿಡಿಲು ಸಿಡಿದುಕೊಂಡು ಬೆಂಕಿ ಉಗಿದವು. ಆ ಬಿಸಿಗೆ ಕಪ್ಪು ಮೋಡಗಳು ಕದಲಿ ಕೆಳಗಿಳಿದವು. ಎಲ್ಲಿದ್ದವೋ ಅಲ್ಲೇ. ಎಲ್ಲಿ ನಿಂತ ಮೋಡ ಅಲ್ಲೇ ಹೃದಯವನ್ನು ತೆರೆದು ಕಣ್ಣೀರು ಸುರಿಸಿದಂತಹ ಹನಿಗಳು.
ಒಂದರ ನಂತರ ಒಂದು ನೆಲಕ್ಕೆ ಹಾರಿ ಹಾರಿ ಬರುತ್ತಲಿವೆ ಮಳೆ…ಮಳೆ..ಸುರಿಯುತ್ತಲೇ ಹೋಯಿತು. ಹಗಲೂ ಇರುಳು. ಹೊಳೆಗಳು ತುಂಬಿ ಹೊರಳತೊಡಗಿದವು.
ತಗ್ಗು ಹಳ್ಳ ದಿನ್ನೆಗಳೆಲ್ಲಾ ನೀರು…ನೀರು …ನೀರು.
ಎತ್ತ ನೋಡಿದರೂ ನೀರು… ಕರೆ ಕೋಡಿ ಬೀಳುತ್ತಿದೆ.
ತಾಯಿ ಮಹಾತಾಯಿ.ಮಾಯಮ್ಮ ತಾಯಿ ಹರಿಯುತ್ತಿದ್ದಾಳೆ.
ಚಿನ್ನದ ಹಗರಿಯಾಗಿ ಹರಿಯುತಿದ್ದಾಳೆ. ಪ್ರವಾಹವಾಗಿ ಉಕ್ಕುತಿದ್ದಾಳೆ.
ಹಸಿರಾಗಿ ನಗುತ್ತಾ ಹಾಡುತಿದ್ದಾಳೆ.
ಒಣಗಿದ ಬೇರುಗಳಿಗೆ ಉಸಿರು ಬಂದಿತು.
ಬಾಡಿದ ಎಲೆಗಳಿಗೆ ಪ್ರಾಣ ಬಂದಿದೆ… ಬಂದಿದೆ …ಬಂದಿದೆ.
ಊರಿಗೆ ಉಸಿರು ಬಂದಿದೆ. ಊರು ಹಸಿರ ಮರವಾಗಿದೆ.
ಪಕ್ಷಿಗಳ ಗೂಡಾಗಿದೆ…ಸುಗ್ಗಿಯ ನೆಲವಾಗಿದೆ… ಹಾಡುಗಳ ಕಣವಾಗಿದೆ…ಜಾತ್ರೆಯ ನದಿಯಾಗಿದೆ….ಮಾಯಮ್ಮ ತಾಯಿಯ ಬೆಳ್ಳಿ ಮುಖವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

Published

on

~ ರುದ್ರಪ್ಪ ಹನಗವಾಡಿ

ದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ ಹೋರಾಟಗಾರರಾಗಿದ್ದ ಅನೇಕರು ಮಾತಿಲ್ಲದೆ ಅವರವರೇ ಕೊರಗುತ್ತಿದ್ದರು.

ಶಿವಮೊಗ್ಗ ಭದ್ರಾವತಿಯಲ್ಲಿ ಕೃಷ್ಣಪ್ಪನವರಿಗೆ ಎಲ್ಲಾ ಜಾತಿಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಾಯಕರ ಬೆಂಬಲ, ಡಿಎಸ್‌ಎಸ್ ನ ಎಲ್ಲ ಹೋರಾಟಗಾರರಿಗೂ ಸಿಗುತ್ತಿತ್ತು. ಬೆಂಗಳೂರಿಗೆ ಬಂದ ನಂತರ ಆದ ಬೆಳವಣಿಗೆಗಳ ಬಗ್ಗೆ ಒಂದು ರೀತಿಯ ವಿಷಾದ ತುಂಬಿದ ಭಾವ ಕೃಷ್ಣಪ್ಪನವರಲ್ಲಿ ತುಂಬಿತ್ತು. ಆದರೂ ಅವರು ಮತ್ತೆ ಇದನ್ನು ಪುನಶ್ಚೇತನಗೊಳಿಸುವ ಕರ‍್ಯದಲ್ಲಿ ಹಗಲು ರಾತ್ರಿ ರಾಜ್ಯದ ವಿವಿಧೆಡೆಗೆ ಪ್ರಯಾಣ ಮಾಡುತ್ತ ವಿವಿಧ ಜಿಲ್ಲೆಗಳಿಗೆ ಹೋಗಿ ಡಿಎಸ್ ಎಸ್ ಸಂಘಟನೆಯ ಕರ‍್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಅವರು ಡಿಎಸ್‌ಎಸ್ ಸಂಘಟನೆಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾಡಿದ ನಿರಾಶಾ ಕಾಲದಲ್ಲಿಯೇ ಛಲಬಿಡದ ವಿಕ್ರಮನಂತೆ ದಲಿತರನ್ನೆಲ್ಲ ಪುನಃ ಸಂಘಟಿಸಿ ಪುನಶ್ಚೇತನ ಗೊಳಿಸುವ ಬಗ್ಗೆ ಅವರ ಸಹಪಾಠಿ ಆರ್. ನಾಗರಾಜ್, ಅರ್ಕೇಶ್ ಮತ್ತು ನಾನು ಅವರ ಮನೆಯಲ್ಲಿ ಸೇರಿದಾಗ ಚರ್ಚಿಸುತ್ತಿದ್ದರು. ಮೈಸೂರಿನ ಮಹಾದೇವ ಬೆಂಗಳೂರಿನ ಸಿದ್ಧಲಿಂಗಯ್ಯ ಇವರುಗಳ ಸಂಬಂಧ ಬಹಳ ದೂರ ಸರಿದಿತ್ತು. ಅದನ್ನು ಪುನಃ ಪುನಶ್ಚೇತನಗೊಳಿಸುವುದಕ್ಕೆ ಬೇಕಾದ ಶ್ರಮ ಹಾಕಲು ಮಹಾದೇವನಿಗಾಗಲೀ, ಸಿದ್ಧಲಿಂಗಯ್ಯನಿಗಾಗಲೀ ಇರಲಿಲ್ಲ. ಹಾಗಾಗಿ ಮತ್ತೆ ಏಕಾಂಗಿಯಾಗಿಯೇ ಎಲ್ಲಾಕಡೆ ಇವರೊಬ್ಬರೇ ತಿರುಗಾಡಿ ಸಂಘಟಿಸಲು ಶ್ರಮಿಸುತ್ತಿದ್ದರು.

ಈ ಯೋಜನೆಯ ಭಾಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ರ‍್ಯಾಲಿಯಲ್ಲಿ ಭಾಗವಹಿಸಲು, ಗದಗ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆಗೊಳಿಸಿದ ಸಭೆಗೆ ಹೋಗಿದ್ದರು. ನಾನು ಯಲಹಂಕ ಆಫೀಸಿನ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಅವರ ಮನೆಗೆ ಹೋದಾಗ ಮೇಷ್ಟರು ಗದಗ್‌ಗೆ ಹೋದ ಸುದ್ದಿ ತಿಳಿದಿತ್ತು. ಗದಗ್‌ನಲ್ಲಿ ಕೃಷ್ಣಪ್ಪನವರ ತಂಗಿಯ ಮಗಳು ಮೈತ್ರ‍್ರಾ ಕೂಡಾ ಇದ್ದುದು, ಮೈತ್ರಾಳ ಗಂಡ ಬ್ಯಾಂಕ್‌ವೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಘಟನೆಯ ಜೊತೆ ಅವರನ್ನೆಲ್ಲಾ ನೋಡಿಕೊಂಡು ಬರುವರೆಂದು ಮಾತಾಡಿಕೊಂಡು ನಾನು ಮಧ್ಯಾಹ್ನ ಊಟ ಮುಗಿಸಿಕೊಂಡು ಮತ್ತೆ ಆಫೀಸಿಗೆ ಹೋಗಿದ್ದೆ. ಆದರೆ ಸಂಜೆ 5ರ ವೇಳೆಗೆ ಕೃಷ್ಣಪ್ಪನವರು ಗದಗ್‌ನಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿರುವುದಾಗಿಯೂ ಗದಗ್‌ನಿಂದ ಫೋನ್ ಬಂದಿರುವುದಾಗಿಯೂ ನನ್ನ ಆಫೀಸಿಗೆ ಮಗಳು ಶಾಲಿನಿ ಫೋನ್ ಮಾಡಿದ್ದಳು. ಇಂದಿರಾ ಆಫೀಸ್ ಮುಗಿಸಿ ಮನೆಗೆ ಬರುವ ವೇಳೆಗೆ ನನ್ನ ಹೆಂಡತಿ ಗಾಯತ್ರಿಗೂ ಫೋನ್ ಮಾಡಿ ತಿಳಿಸಿದೆ. ಅರ್ಜೆಂಟಾಗಿ ನಾವು ಎಲ್ಲರೂ ಗದಗ್‌ಗೆ ಹೋಗಿ ಮೇಷ್ಟçರನ್ನ ಕರೆದುಕೊಂಡು ಬಂದು ಇಲ್ಲಿಯೇ ಶುಶ್ರೂಷೆ ಕೊಡಿಸುವ ಎಂದು ಮಾತಾಡಿಕೊಂಡು ರಾತ್ರಿಯೇ ಬೆಂಗಳೂರಿನಿಂದ ಹೊರಟು ಮಧ್ಯೆ ರಾತ್ರಿ ನಮ್ಮೂರ ಬಳಿ ನಿಂತು ನಮ್ಮ ಊರಿನವರಿಗೂ ವಿಷಯ ತಿಳಿಸಿ ಬೆಳಿಗ್ಗೆ 7 ಘಂಟೆಗೆ ಗದಗ ತಲುಪಿದೆವು.

ಬೆಂಗಳೂರು ಬಿಟ್ಟು ಹೊರಟಾಗ ಅವರ ಆರೋಗ್ಯದಲ್ಲಿನ ಸಮಸ್ಯೆ ಸ್ಪಷ್ಟವಾಗಿ ಏನೆಂದು ತಿಳಿಯದಿದ್ದರೂ-ಅವರ ಬಿಡುವಿಲ್ಲದ ತಿರುಗಾಟಕ್ಕೆ ತಡೆಹಾಕಿ ಆರೋಗ್ಯದ ಕಡೆ ಗಮನ ನೀಡಲು ಏನೆಲ್ಲ ಕ್ರಮ ಜರುಗಿಸಬೇಕೆಂದು ನನ್ನ ಹೆಂಡತಿ ಗಾಯತ್ರಿ ಇಂದಿರಾಗೆ ಸಲಹೆ ನೀಡುತ್ತಿದ್ದಳು. ಕೃಷ್ಣಪ್ಪನವರ ಆರೋಗ್ಯ ಕೆಡಿಸುವಂತಹ ಅಭ್ಯಾಸಗಳು ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಡಿಎಸ್‌ಎಸ್‌ನ ಸಮಾವೇಶಗಳಲ್ಲೂ ಕೂಡ ಎಲ್ಲರಿಗೂ ಸ್ವಚ್ಛತೆ, ವ್ಯಾಯಾಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರಭಾವಿಸುತ್ತಿದ್ದರು. ಕೊಳಕುತನ, ಸೋಮಾರಿತನ ಬಾಲ್ಯದಿಂದಲೂ ಕೃಷ್ಣಪ್ಪನವರ ಬಳಿ ಸುಳಿದಿರಲಿಲ್ಲ. ಊಟ ಉಪಚಾರಗಳಲ್ಲೂ ಶಿಸ್ತುಬದ್ದರಾಗಿದ್ದು ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿರಲಿಲ್ಲ. ಈ ಕಾರಣದಿಂದ ಏನಾದರೂ ಆಗಿರಲಿ ಬಂದ ನಂತರ ಅವರನ್ನು ಹೆಚ್ಚು ತಿರುಗಾಡಲು ಬಿಡಬಾರದೆಂಬ ತೀರ್ಮಾನ ಮಾಡಿಕೊಂಡು ನಾವೆಲ್ಲ ಗದಗ್ ಕಡೆ ಹೊರಟಿದ್ದೆವು.

ಹೋದಾಕ್ಷಣ ಅವರನ್ನು ಐಸಿಯುನಲ್ಲಿ ನಾವು ಮೂವರೂ ಹೋಗಿ ನೋಡಿದೆವು. ಕಣ್ಣು ಬಿಟ್ಟು ನೋಡಿದ್ದನ್ನು ಬಿಟ್ಟರೆ ಬೇರೇನೂ ಮಾತಾಡಲಿಲ್ಲ. ಇಂತಹ ಪರಿಸ್ಥಿತಿಯನ್ನು ನಾವ್ಯಾರು ನಿರೀಕ್ಷಿಸಿರಲಿಲ್ಲ. ದಾರಿಯುದ್ದಕ್ಕೂ ಯೋಚಿಸಿಕೊಂಡು ಬಂದದ್ದಕ್ಕೂ ಇಲ್ಲಿನ ಪರಿಸ್ಥಿತಿ ನೋಡಿ ನಾವೆಲ್ಲಾ ಗರಬಡಿದಂತಾಗಿ ಕೂತಿದ್ದೆವು. ಗಾಯತ್ರಿ, ಇಂದಿರಾ ಮಾತಾಡದೆ ಉಸಿರಾಡುತ್ತಿದ್ದರು. ಮತ್ತೆ 10-15 ನಿಮಿಷಗಳಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ವಾರ್ಡ್ ಬಾಯ್ ಹೇಳಿದಾಗ ನಾವೆಲ್ಲ ಒಳಗೆ ಹೋದೆವು. ಬಂದ ಡಾಕ್ಟರ್ ನಮ್ಮನ್ನೆಲ್ಲ ಮತ್ತೆ ಹೊರಹೋಗಲು ಹೇಳಿ ಶುಶ್ರೂಷೆ ಮಾಡುತ್ತಿದ್ದರು. ಏನಾಯಿತು, ಹೇಗಾಯಿತು ಎಂದು ನಾವುಗಳೆಲ್ಲ ಸಾವರಿಸಿಕೊಳ್ಳುತ್ತಿರುವಾಗಲೇ ಮೇಷ್ಟರು ಕೊನೆಯುಸಿರೆಳೆದಿದ್ದರು. ಅಂದು ದಿನಾಂಕ 30-4-1997 ಬೆಳಗಿನ 8.30 ಇರಬಹುದು. ನಾವು ಬಂದು ನೋಡಿ ನಂತರ ಫ್ರೆಶ್ ಆಗಿ ನಂತರ ಏನು ಮಾಡುವುದು ಎಂದು ಯೋಚಿಸುವ ಮುನ್ನ ಇದೆಲ್ಲ ಆಗಿ ಹೋಗಿತ್ತು.

ಈಚೆ ಬಂದ ನನಗೆ ಸಾವನ್ನ ಹೀಗೆ ನೇರವಾಗಿ ಎದುರಿಸಿದ ಸಂದರ್ಭಗಳು ಇರಲಿಲ್ಲ. ಮುಂದಿನ ವಿಚಾರವನ್ನು ಯೋಚನೆ ಮಾಡುತ್ತಲೇ ಹತ್ತಿರದಲ್ಲಿದ್ದ ಟೆಲಿಫೋನ್ ಬೂತ್‌ನಿಂದ ಮೈಸೂರಿನಲ್ಲಿದ್ದ ಮಗಳು ಸೀಮಾ ಮತ್ತು ಬೆಂಗಳೂರಿನಲ್ಲಿದ್ದ ಶಾಲುಗೆ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ಪಿಎಸ್ ಆಗಿದ್ದ ಬಸವಣ್ಯಪ್ಪನಿಗೆ ತಿಳಿಸಿ ಎಲ್ಲಾ ಡಿಎಸ್‌ಎಸ್ ಸ್ನೇಹಿತರಿಗೆ ತಿಳಿಸಲು ಹೇಳಿದೆ. ಹರಿಹರದಲ್ಲಿನ ಮೇಷ್ಟರ ತಮ್ಮಂದಿರಿಗೆ ಸುದ್ದಿ ತಿಳಿಸಿ ಬಂದೆ. ಸಿರಸಿಯಲ್ಲಿದ್ದ ಮೇಷ್ಟರ ಇನ್ನೊಬ್ಬ ತಮ್ಮ ಮಾರುತಿಗೆ ತಿಳಿಸಿ ಮೇಷ್ಟರ ಪಾರ್ಥಿವ ಶರೀರವನ್ನು ಹರಿಹರಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ವ್ಯವಸ್ಥೆ ಮಾಡಿದೆ. ಆಸ್ಪತ್ರೆಯ ರೀತಿನೀತಿಗಳನ್ನು ಮುಗಿಸಿ-ಸಮಾಧಿಯಾಗುವುದು ಇನ್ನೂ ಒಂದು ದಿನ ತಡವಾಗುವುದರಿಂದ ದೇಹಕ್ಕೆ ಬೇಕಾದ ರೀತಿಯಲ್ಲಿ ಇಂಜೆಕ್ಷನ್ ಕೊಡಿಸಿ ಸುಮಾರು 3-4 ಗಂಟೆಗೆ ಗದಗ ಬಿಟ್ಟು ಹರಿಹರ ಟೌನ್‌ನಲ್ಲಿದ್ದ ಮೇಷ್ಟರ ಮನೆಗೆ ಸಂಜೆ 7 ಗಂಟೆಯ ಸಮಯಕ್ಕೆ ತಲುಪಿದ್ದೆವು.

ರಾತ್ರಿ ಭಜನೆ ಮಾಡಲು ವ್ಯವಸ್ಥೆ ಮಾಡಿ ನಂತರ ಮೇಷ್ಟರ ಸಂಸ್ಕಾರ ಎಲ್ಲಿ ಏನು ಎಂದು ಅವರ ತಮ್ಮಂದಿರು ತಂಗಿಯರ ಜೊತೆ ಮಾತಾಡಿದಾಗ ಅದೆಲ್ಲ ತುಂಗಭದ್ರಾ ನದಿಯ ದಡದಲ್ಲಿ ಮಾಡುವುದು ಎಂದು ತಿಳಿಸಿದರು. ಈ ಬಗ್ಗೆ ದುಃಖದಲ್ಲಿ ಮುಳುಗಿದ್ದ ಇಂದಿರಾ ಜೊತೆ ಏನೂ ಮಾತಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ಚಿಂತೆಯಲ್ಲಿ ನಾನು ಮೂರು ಕಿ.ಮೀ. ದೂರದ ನಮ್ಮ ಊರಿಗೆ ಬಂದಿಳಿದೆ. ರಾತ್ರಿಯಲ್ಲಿ ನಿದ್ದೆ ಬಾರದೆ ಒದ್ದಾಡಿದೆ. ಹರಿಹರ ತುಂಗಾ ನದಿ ದಡದಲ್ಲಿ ಸಂಸ್ಕಾರ ಮಾಡುವ ಅವರ ನಿರ್ಧಾರವನ್ನು ತಿಳಿದು ಮನಸ್ಸಿಗೆ ಒಂದು ಚಿಂತೆಯಾಯಿತು. ಇಷ್ಟೊಂದು ಹೋರಾಟದ ಜೀವನ ನಡೆಸಿದ ಮನುಷ್ಯನ ನೆನಪು ನಾಳೆಗೆ ಭೌತಿಕವಾಗಿ ಕೊನೆಯಾಗುವ ಬಗ್ಗೆ ಚಿಂತೆಯಾಯಿತು. ನಾನು ನಮ್ಮ ಅಣ್ಣ ಅವ್ವ ಇವರ ಜೊತೆ ಚರ್ಚಿಸಿ-ನಮ್ಮ ತೋಟದ ಜಮೀನಿನಲ್ಲಿ ಸಮಾಧಿ ಮಾಡಿದರೆ ಹೇಗೆ ಎಂದು ಯೋಚಿಸಿ, ಬೆಳಿಗ್ಗೆ ಈ ನನ್ನ ಯೋಚನೆಯನ್ನು ಮೇಷ್ಟರ ತಮ್ಮ ಮಾರುತಿ ಬಳಿ ಚರ್ಚಿಸಿ ನಂತರ ಎಲ್ಲ ಅವರ ಸಂಬಂಧಿಗಳಿಗೂ ವಿಚಾರಿಸಿದೆ. ಅವರೆಲ್ಲರೂ ನನ್ನ ಸಲಹೆಗೆ ಒಪ್ಪಿದರು. ಅದರಂತೆ ಎಲ್ಲಾ ಡಿಎಸ್‌ಎಸ್‌ನ ಕರ‍್ಯಕರ್ತರಿಗೆ, ಅಧ್ಯಾಪಕರಿಗೆ, ರಾಜಕಾರಣಿಗಳಿಗೆ ತಿಳಿಸಿದೆವು. ಹರಿಹರದಿಂದ ನಮ್ಮೂರಿನಿಂದಲೇ ತರಿಸಿದ್ದ ಟ್ರಾಕ್ಟರ್‌ನಲ್ಲಿ ನಮ್ಮ ತೋಟದಲ್ಲಿ ಸುಮಾರು 4 ಗಂಟೆಯ ಸಮಯಕ್ಕೆ 1-5-1997ರಂದು ಕೃಷ್ಣಪ್ಪನವರ ಅಂತಿಮ ಕಾರ್ಯವನ್ನು ಮಾಡಿದೆವು. ಅಂತಿಮ ದರ್ಶನ ಪಡೆಯಲು ರಾಜ್ಯದಾದ್ಯಂತ ಪ್ರಗತಿಪರರು, ಡಿಎಸ್‌ಎಸ್ ಕರ‍್ಯಕರ್ತರು, ರಾಜಕಾರಣಿಗಳ ದಂಡೇ ಆಗಮಿಸಿತ್ತು. ಸಮಾಧಿಯಾದ ನಂತರ ಡಿಎಸ್‌ಎಸ್‌ನ ಎಲ್ಲಾ ಬಣಗಳ ಕರ‍್ಯಕರ್ತರೂ ಕೃಷ್ಣಪ್ಪನವರ ಹೋರಾಟದ ಆಶಯಗಳನ್ನು ಈಡೇರಿಸಲು ಅಂದು ಪ್ರಮಾಣ ಮಾಡುವ ಪ್ರತಿಜ್ಞೆ ಮಾಡಿ ನಿರ್ಗಮಿಸಿದ್ದರು.

1997ರಲ್ಲಿ ಕೃಷ್ಣಪ್ಪನವರ ನಿರ್ಗಮನದ ನಂತರ ಕರ್ನಾಟಕದ ದಲಿತ ಹೋರಾಟದ ಸಮಗ್ರ ಚಿತ್ರಣ ಹಲವು ಟಿಸಿಲುಗಳಾಗಿ ಹೊರಹೊಮ್ಮಿದ್ದವು. ನನ್ನ ಸರ್ಕಾರಿ ನೌಕರಿಯ ಜೊತೆ ಎಲ್ಲ ಬಣಗಳಲ್ಲಿ ನನಗೆ ಬಲ್ಲವರಿದ್ದರೂ ಯಾರೊಡನೆ ಒಡನಾಡುವುದು ಎಂಬ ಪ್ರಶ್ನೆ ಮೂಡುತ್ತಿತ್ತು. ಆದರೂ ಯಾರು ಏನೇ ಕರ‍್ಯಕ್ರಮ ಮಾಡುವಾಗ ಸಹಕಾರ ನೀಡಲು ಕೋರಿದರೆ ಮುಕ್ತ ಮನಸ್ಸಿನಿಂದ ಸಹಾಯ ಮಾಡುತ್ತಿದ್ದೆ.

ಕೃಷ್ಣಪ್ಪನವರ ನಿಧನಾನಂತರ ಬಿಎಸ್‌ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕಾನ್ಷಿರಾಮ್ ಅವರು ಯಲಹಂಕದಲ್ಲಿದ್ದ ಕೃಷ್ಣಪ್ಪನವರ ಮನಗೆ ಬಂದು ಇಂದಿರಾ ಮತ್ತು ಅವರ ಇಬ್ಬರು ಮಕ್ಕಳು ಶಾಲಿನಿ, ಸೀಮಾ ಅವರಿಗೆ ಸಾಂತ್ವನ ಹೇಳಿದರು. ತಕ್ಷಣದ ಅಗತ್ಯಗಳಿಗೆ ಎಂಬ ಕಾರಣದಿಂದಲೋ ಏನೋ ಎರಡು ಲಕ್ಷ ರೂಪಾಯಿಗಳನ್ನು ಇಂದಿರಾ ಅವರ ಕುಟುಂಬಕ್ಕೆ ನೀಡಿದ್ದರು. ಆದರೆ ಇಂದಿರಾ ಅವರು ನನಗೀಗ ಸರ್ಕಾರಿ ನೌಕರಿ ಇರುವ ಕಾರಣ ನೀಡಿ, ಅದನ್ನು ಕೃಷ್ಣಪ್ಪನವರ ಹೆಸರಿನಲ್ಲಿ ಮುಂದೆ ಸ್ಥಾಪಿಸಿದ ಟ್ರಸ್ಟ್ನ ಹೆಸರಿನಲ್ಲಿ ನಡೆಸುವ ಕರ‍್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿ ಆ ಹಣವನ್ನು ಒಪ್ಪಿಕೊಂಡಿದ್ದರು. ಅದರಂತೆ ಕಾನ್ಷಿರಾಮ್ ಅವರು ನೀಡಿದ ಹಣ, 1997ರಲ್ಲಿ ಸ್ಥಾಪಿಸಿದ ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನಲ್ಲಿ ಮೂಲಧನವಾಗಿ ಉಳಿದಿದೆ. ಕೃಷ್ಣಪ್ಪನವರ ಆಶಯದಂತೆ ಕರ‍್ಯಕ್ರಮಗಳನ್ನು ನಿರ್ವಹಿಸಿಕೊಂಡು ಕಳೆದ 24 ವರ್ಷಗಳಿಂದ ಬರುತ್ತಿದ್ದೇವೆ.

ಕೃಷ್ಣಪ್ಪನವರು ಕಾಲವಾದ ಎರಡು ತಿಂಗಳಲ್ಲಿ ಡಿಎಸ್‌ಎಸ್‌ನ ಅವರ ಅನುಯಾಯಿಗಳಲ್ಲಿ ನಾನು ಮತ್ತು ಇಂದಿರಾ ಮನವಿ ಮಾಡಿ ಕೃಷ್ಣಪ್ಪನವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವ ಬಗ್ಗೆ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆಯನ್ನು ಅರ್ಕೇಶ್ ಇದ್ದ ಸಿಆರ್‌ಪಿಎಫ್‌ನಲ್ಲಿನ ಒಂದು ಸಭಾಂಗಣದಲ್ಲಿ ಕರೆದಿದ್ದೆವು. ಆ ಸಭೆಗೆ ಸಾಕಷ್ಟು ಜನ ಬಾರದಿದ್ದರಿಂದ ಮತ್ತೊಂದು ಬಾರಿ ಎಲ್ಲರಿಗೂ ತಿಳಿಹೇಳಿ 9 ಅಥವಾ 11 ಜನರಿರುವ ಒಂದು ಟ್ರಸ್ಟ್ ಸ್ಥಾಪಿಸುವ ಬಗ್ಗೆ ಮತ್ತೆ ಸಭೆ ಕರೆದೆವು. ಎರಡನೇ ಸಭೆಯಲ್ಲಿ ಬಂದವರ ಅಭಿಪ್ರಾಯ ಪಡೆದು 11 ಜನರಲ್ಲಿ ದಲಿತ ಹೋರಾಟಗಾರರು, ಕೃಷ್ಣಪ್ಪನವರ ಕುಟುಂಬ ಮತ್ತು ಅವರ ಸಹಪಾಠಿಗಳನ್ನು ಸೇರಿದಂತೆ ಟ್ರಸ್ಟ್ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸಿದೆವು.

ನಾನು ಮತ್ತು ಇಂದಿರಾ ಮ್ಯಾನೇಜಿಂಗ್ ಟ್ರಸ್ಟಿಗಳು. ಕೃಷ್ಣಪ್ಪನವರ ಸಹಪಾಠಿಗಳಾಗಿದ್ದ ಆರ್. ನಾಗರಾಜ್ ಮತ್ತು ಕೃಷ್ಣಪ್ಪನವರ ಕಿರಿಯ ಸಹೋದರ ಬಿ. ಮಾರುತಿ, ನಮ್ಮ ಸಹೋದರ ಸಿ. ತಿಪ್ಪಣ್ಣ ಮತ್ತು ಉಳಿದಂತೆ ಡಿಎಸ್‌ಎಸ್‌ನಲ್ಲ್ಲಿದ್ದ ಕೃಷ್ಣಪ್ಪನವರ ಅನುಯಾಯಿಗಳಾದ ಚಿತ್ರದುರ್ಗದ ಜಯಣ್ಣ, ಶ್ರೀಧರ ಕಲಿವೀರ, ಮಾವಳ್ಳಿ ಶಂಕರ್, ಬಿಎಸ್‌ಪಿಯಲ್ಲಿದ್ದ ಮಾರಸಂದ್ರದ ಮುನಿಯಪ್ಪನವರ ಹೆಸರುಗಳನ್ನು ಅಂತಿಮಗೊಳಿಸಿದ್ದೆವು. ಎರಡು ಬಾರಿ ಎಲ್ಲರೂ ಸೇರಿ ನೋಂದಾಯಿಸಲು ಸಬ್ ರಿಜಿಸ್ಟಾçರ್ ಆಫೀಸಿಗೆ ಬರುವಂತೆ ದಿನಾಂಕ ನಿಗದಿ ಮಾಡಿದ್ದರೂ ಕೆಲವರು ಕೊನೆಯವರೆಗೂ ಬಾರದ ಕಾರಣ ಬಂದವರಲ್ಲಿ ಏಳು ಜನರಿರುವ ಟ್ರಸ್ಟ್ವೊಂದನ್ನು ದಿನಾಂಕ 28-11-97ರಲ್ಲಿ ಸ್ಥಾಪಿಸಿದೆವು. ಕೃಷ್ಣಪ್ಪನವರ ಆಶಯಗಳನ್ನು ಟ್ರಸ್ಟಿನ ಧ್ಯೇಯೋದ್ದೇಶಗಳಲ್ಲಿ ಉಲ್ಲೇಖಿಸಿ ನೊಂದಾಯಿಸಿದೆವು. ಅಂದಿನಿಂದ ಇಂದಿನವರೆಗೆ ಸುಮಾರು 24 ವರ್ಷಗಳಲ್ಲಿ ರಾಜ್ಯದಾದ್ಯಂತ ದಲಿತ ಹೋರಾಟಗಳಿಗೆ ಒತ್ತಾಸೆಯಾಗಿ, ಸಮಾನತೆ ಸಹೋದರತೆ ಸಾರುವ ಮಾನವೀಯ ಹೋರಾಟಗಳಲ್ಲಿ ಭಾಗವಹಿಸುತ್ತಾ, ಅಂತರ್ಜಾತಿ-ಅಂತರ್‌ಮತೀಯ ಮತ್ತು ಸರಳ ಮದುವೆಗಳನ್ನು ಮಾಡುತ್ತಾ ಜೊತೆಗೆ, ಕೃಷ್ಣಪ್ಪನವರು ಬರೆದಿದ್ದ ಹೋರಾಟದ ಕವನ ಮತ್ತು ವೈಚಾರಿಕ ಲೇಖನಗಳನ್ನು ಪ್ರಕಟಿಸಿ ಜನರಿಗೆ ತಲುಪಿಸುತ್ತಾ ಇಂದಿಗೂ ಜನಪರ ಚಳುವಳಿಗಳಲ್ಲಿ ಕೃಷ್ಣಪ್ಪ ಟ್ರಸ್ಟ್ ಸಕ್ರಿಯವಾಗಿದೆ. ಟ್ರಸ್ಟ್ನ ಕರ‍್ಯಕ್ರಮಗಳ ಭಾಗವಾದ ಕೃಷ್ಣಪ್ಪ ಸಮಾಧಿ ಸ್ಥಳ ಉದ್ಘಾಟನೆಗೆ ಬಿಎಸ್‌ಪಿಯ ಕಾನ್ಷಿರಾಮ್ ಅವರು ಹಿರಿಯ ನ್ಯಾಯವಾದಿ ಮತ್ತು ಮಾಜಿಮಂತ್ರಿಗಳಾಗಿದ್ದ ಎಲ್.ಜಿ. ಹಾವನೂರ ಅವರು, ಮಾಜಿಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪ ಅವರು 1997ರಲ್ಲಿ ಬಂದು ಉದ್ಘಾಟಿಸಿದ್ದರು. ಅಂದಿನಿಂದ ಇಂದಿನವರೆಗೆ ನೂರಾರು ಸಾಹಿತ್ಯ, ಸಂಸ್ಕೃತಿ, ನಾಟಕ, ಹೋರಾಟಗಳ ಸಭೆ ಸಮಾರಂಭಗಳನ್ನು ಕೃಷ್ಣಪ್ಪ ಸಮಾಧಿ ಸ್ಥಳದಲ್ಲಿ ಸಂಘಟಿಸುತ್ತಾ ಬಂದಿದೆ. ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರಾದಿಯಾಗಿ ಜೊತೆಗೆ ನೂರಾರು ದಲಿತ ಹೋರಾಟಗಾರರು, ರಾಜಕಾರಣಿಗಳು ಅನೇಕ ಪ್ರಗತಿಪರರು, ರೈತ ಹೋರಾಟಗಾರರು ಗ್ರಾಮೀಣ ಜನರು ಸಮಾಧಿ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ.

2017ರಲ್ಲಿ ಸಮಾಧಿ ಸ್ಥಳದಲ್ಲಿ ಸರ್ಕಾರದ ಸಹಾಯದಿಂದ ಕೃಷ್ಣಪ್ಪ ಸ್ಮಾರಕ ಭವನ ನಿರ್ಮಿಸಿದ್ದು, ಅಲ್ಲಿ ಲೈಬ್ರರಿ ಮತ್ತು ಸ್ಮರಣಲೋಕವನ್ನು ಕೃಷ್ಣಪ್ಪನವರ ಹೋರಾಟದ ವಿವರಗಳನ್ನು ಒಳಗೊಂಡಂತೆ ಕಲೆ ಹಾಕಿದೆ. ಅನೇಕ ಪ್ರಗತಿಪರ ಕರ‍್ಯಕ್ರಮಗಳು ಜನಪರ ಗ್ರಾಮೀಣ ಜನರು ಅದರ ಸದುಪಯೋಗ ಪಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ.

ಕೃಷ್ಣಪ್ಪನವರು ತೀರಿದ ಎರಡು ತಿಂಗಳಲ್ಲಿ ಯಲಹಂಕದಲ್ಲಿನ ಪ್ರಗತಿಪರರೊಡನೆ ಜೊತೆಗೂಡಿ ಕೃಷ್ಣಪ್ಪನವರ ಸ್ಮರಣ ಕರ‍್ಯಕ್ರಮ ಆಯೋಜಿಸಿದ್ದೆವು. ಆ ಸಭೆಗೆ ನಮ್ಮ ನಗರಸಭೆಯ ಸದಸ್ಯರು ಮತ್ತು ಅನೇಕ ಪ್ರಗತಿಪರರು ಕೈಜೋಡಿಸಿದ್ದರು. ಸಭೆಗೆ ಡಿಎಸ್‌ಎಸ್ ನಾಯಕರು ಮತ್ತು ಅಂದಿನ ವಿಧಾನಸಭಾ ಅಧ್ಯಕ್ಷರಾಗಿದ್ದ ಡಿ. ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೃಷ್ಣಪ್ಪನವರ ಹೋರಾಟ ಮತ್ತು ತ್ಯಾಗಗಳ ಬಗ್ಗೆ ನುಡಿನಮನ ಸಲ್ಲಿಸಿದ್ದರು.

ನಮ್ಮ ಊರಿನಿಂದ ಒಂದು ದೊಡ್ಡ ದಂಡೇ ಬ್ಯಾಂಡ್‌ಸೆಟ್ ಜೊತೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಬಸವಲಿಂಗಪ್ಪನವರ ಸಮಾಧಿ ಸ್ಥಳದಿಂದ ಯಲಹಂಕದಲ್ಲಿ ನಡೆಸುತ್ತಿದ್ದ ಕೃಷ್ಣಪ್ಪನವರ ಸ್ಮರಣ ಸಮಾರಂಭದವರೆಗೆ ಮೆರವಣಿಗೆ ಮಾಡಿಕೊಂಡು ಬಂದು ಕೃಷ್ಣಪ್ಪನವರ ಬದುಕು, ಹೋರಾಟ, ಡಿಎಸ್‌ಎಸ್ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ಮಾಡಿದ ವಿವಿಧ ವಿಷಯಗಳ ಬಗ್ಗೆ ಅಂದಿನ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಮಾತನಾಡಿ ಕೃಷ್ಣಪ್ಪನವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್...

ದಿನದ ಸುದ್ದಿ2 days ago

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ...

ದಿನದ ಸುದ್ದಿ2 days ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ3 days ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ6 days ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ6 days ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ1 week ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ1 week ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ1 week ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ1 week ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

Trending