ಬಹಿರಂಗ

ಪಾಂಡವರಿಗೂ ಭಾವ, ಕೌರವರಿಗೂ ಭಾವ..!

Published

on

  • ಪಂಜು ಗಂಗೊಳ್ಳಿ, ವ್ಯಂಗ್ಯಚಿತ್ರಕಾರರು,ಮುಂಬೈ

ಮೇಲಿನದು ಕುಂದಾಪ್ರಕನ್ನಡದ ಒಂದು ನುಡಿಗಟ್ಟು.
ಯಾರಿಂದಲಾದರೂ ‘ಫ್ರೆಂಡ್ಸ್ ರಿಕ್ವೆಸ್ಟ್’ ಬಂದಾಗ ಅದನ್ನು ಒಪ್ಪಿಕೊಳ್ಳಲು ‘ಮ್ಯುಚುಅಲ್ ಫ್ರೆಂಡ್ಸ್’ ಪಟ್ಟಿ ನೋಡುವುದು ಮೊದಲ ಕ್ರಮ. ಈಗೀಗ ಅದೂ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಮೊನ್ನೆ ಒಬ್ಬರಿಂದ ‘ಫ್ರೆಂಡ್ಸ್ ರಿಕ್ವೆಸ್ಟ್’ ಬಂತು.

ನಾನು ಯಾವುಯಾವುದನ್ನು ಜೀವವಿರೋಧಿ, ಮನುಷ್ಯ ವಿರೋಧಿ, ಕ್ರೌರ್ಯ, ಹಿಂಸೆ ಎಂದು ಪರಿಗಣಿಸಿ ಪಾಲಿಸುವುದಿಲ್ಲವೋ ಅದೆಲ್ಲವನ್ನು ಅವರು ಶಿರಸಾವಹಿಸಿ ಪಾಲಿಸುವವರು. ಆ ‘ಫ್ರೆಂಡ್ಸ್ ರಿಕ್ವೆಸ್ಟ’ನ್ನು ‘ಅಸೆಪ್ಟ್’ ಮಾಡುವ ಪ್ರಶ್ನೆಯೇ ಇರಲಿಲ್ಲ.

ಆದರೂ ಕುತೂಹಲಕ್ಕೆ ‘ಮ್ಯುಚುಅಲ್ ಫ್ರೆಂಡ್ಸ್’ ಪಟ್ಟಿ ನೋಡಿದರೆ ಅಲ್ಲಿ ನೂರಾರು ಹೆಸರುಗಳಿದ್ದವು! ಹಾಗಾಗಿ, ಇತ್ತೀಚೆಗೆ ಇಂತಹ ‘ಫ್ರೆಂಡ್ಸ್ ರಿಕ್ವೆಸ್ಟ್’ ಗಳನ್ನು ಡಿಲೀಟ್ ಮಾಡುವ ಜೊತೆ ಇಂತಹ ‘ಫ್ರೆಂಡ್ಸ್’ ಗಳನ್ನು ‘ಅನ್ಫ್ರೆಂಡ್’ ಮಾಡುವುದೂ ಅನೀವಾರ್ಯವಾಗುತ್ತಿದೆ. ಈ ಕಾರಣಕ್ಕಾಗಿಯೇ ನನ್ನ ‘ಫ್ರೆಂಡ್ಸ್ ಲಿಸ್ಟ್’ ದಿನೇ ದಿನೇ ಚಿಕ್ಕದಾಗುತ್ತ ಹೋಗುತ್ತಿದೆ!

ಇದರಿಂದ ಅವರಿಗೇನೂ ನಷ್ಟವಿಲ್ಲ, ನಿಜ. ಆದರೆ, ನನಗೆ ಲಾಭವಿದೆ. ಹೇಗೆಂದರೆ, ಉದಾಹಣೆಗೆ, ಜಾತಿ ವಿಚಾರ ತೆಗೆದುಕೊಳ್ಳಿ. ನನಗಿದು ಜೀವವಿರೋಧಿ ಕ್ರಮ ಮಾತ್ರವಲ್ಲ, ಇದೊಂದು ಹೇಯ ಕ್ರೌರ್ಯವೂ ಹೌದು. ಇದನ್ನು ಯಾವುದೇ ಕಾರಣ ಕೊಟ್ಟು ಸಮರ್ಥಿಸುವವರ ಜೊತೆ ಸ್ನೇಹ ಸಾಧ್ಯವೇ ಇಲ್ಲ.

ಇದನ್ನೂ ಓದಿ | ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ

ಅವರೊಂದಿಗೆ ಕೇವಲ ಮನುಷ್ಯ ಸಂಬಂಧ ಇಟ್ಟುಕೂಳ್ಳಬಹುದೇ ವಿನಃ ಸ್ನೇಹ ಸಂಬಂಧ ಸಾಧ್ಯವೇ ಇಲ್ಲ. ನನ್ನ ಪ್ರಕಾರ ಈ ಫೇಸ್ ಬುಕ್ ಎಂಬುವುದು ಸ್ನೇಹ ಸಂಬಂಧಕ್ಕಿರುವ ಒಂದು ಸೋಶಿಯಲ್ ಪ್ಲಾಟ್ ಫಾರ್ಮ್.

ಇಲ್ಲಿ ‘ಫ್ರೆಂಡ್ಸ್’ ಅಲ್ಲದವರು ‘ಸ್ಟೇಟಸ್’ಗಳನ್ನು ನೋಡಲು, ಅವುಗಳಿಗೆ ‘ಕಮೆಂಟ್ಸ್’ ಮಾಡಲು ಅವಕಾಶವಿದೆ ನಿಜ. ಆದರೆ, ಹಾಗೆ ಮಾಡುವ ‘ಕಮೆಂಟ್ಸ್’ ಗಳು ಕನಿಷ್ಟ ನಾಗರಿಕ ಸೌಜನ್ಯದ ಮಿತಿಯೊಳಗಿದ್ದರೆ ಅದು ಅವರಿಗೇ ಶೋಭೆ. ಇಲ್ಲವಾದರೆ, ಅವರಿನ್ನೂ ಮನುಷ್ಯರಾಗಿಲ್ಲ ಎಂದು ಕನಿಕರ ಪಡುತ್ತೇನೆ, ಅಷ್ಟೇ.

ಅಂದಹಾಗೇ, ನನಗೆ ಅತೀ ಹೆಚ್ಚಿನ ಸಂಖ್ಯೆಯ ‘ಮ್ಯುಚುಅಲ್ ಫ್ರೆಂಡ್ಸ್’ ಗಳಿರುವುದು ಕ್ರಮವಾಗಿ, ಮತ್ತು ರಾಜಾರಾಮ್ ತಲ್ಲೂರು ಜೊತೆ ಎಂಬುವುದು ತುಂಬಾ ಖುಷಿ ಕೊಡುವ ಸಂಗತಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version