ದಿನದ ಸುದ್ದಿ
ಕವಿ ನೆನಪು: ನಾಡೋಜ ಡಾ.ಸಿದ್ಧಲಿಂಗಯ್ಯ- ಆನ್ಲೈನ್ ವೆಬಿನಾರ್ ಕಾರ್ಯಕ್ರಮ
ಸುದ್ದಿದಿನ ಡೆಸ್ಕ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹರಪನಹಳ್ಳಿ ಕನ್ನಡ ವಿಭಾಗ ಇದರ ಸಹಯೋಗದಲ್ಲಿ ‘ಕವಿ ನೆನಪು: ನಾಡೋಜ ಡಾ.ಸಿದ್ಧಲಿಂಗಯ್ಯ’ ಆನ್ಲೈನ್ ವೆಬಿನಾರ್ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು.
ಗಂಗಾವತಿಯ ಗಾಯಕಿ ಕು.ರಂಜನಿ ಆರತಿಯವರು ಡಾ.ಸಿದ್ಧಲಿಂಗಯ್ಯ ಅವರ ಕವಿತೆಯ ಗಾಯನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು, ಸಾಹಿತಿಗಳು, ಚಿಂತಕರು ಆದ ಡಾ.ಎಚ್.ಟಿ.ಪೋತೆಯವರು ಕವಿ ಡಾ.ಸಿದ್ಧಲಿಂಗಯ್ಯ ಅವರ ಬದುಕು, ಹೋರಾಟ ಹಾಗೂ ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಉಪನ್ಯಾಸಕರಾದ ಡಾ.ಕೆ.ಎ.ಓಬಳೇಶ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಎನ್.ಎಂ.ನಾಗರಾಜ್ ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಎಸ್.ಷಣ್ಮುಖನಗೌಡ ಅವರು ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕೆ.ಎಂ.ಹುಚ್ಚರಾಯಪ್ಪ ಅವರು ಸ್ವಾಗತಿಸಿದರು, ಉಪನ್ಯಾಸಕ ಮಂಜುನಾಥ್ ವಂದಿಸಿದರು. ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243