ದಿನದ ಸುದ್ದಿ

ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ

Published

on

ಸುದ್ದಿದಿನ,ಬೆಂಗಳೂರು:ಫೆ 10 ರಂದು ಜನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸುವ ಬೃಹತ್ ಕಾರ್ಯ ಕ್ರಮವನ್ನು ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಉದ್ಘಾಟಿಸಿದರು.

ರಾಜ್ಯದ ನಾನಾ ಭಾಗಗಳಿಂದ ಸುಮಾರು 650 ಕ್ಕಿಂತ ಹೆಚ್ಚು ಕವಿಗಳು ಆಗಮಿಸಿ 21 ನಿಮಿಷಗಳಲ್ಲಿ ರೈತರ ಕುರಿತು ಕವನ ರಚಿಸಿದರು,ಇದೇ ಸಂಧರ್ಭದಲ್ಲಿ ಅನೇಕ ರೈತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ, ಮಾವಳ್ಳಿ ಶಂಕರ್,ಮಿಮಿಕ್ರಿ ಗೋಪಿ, ಜನಸಿರಿ ಫೌಂಡೇಶನ್ ಮುಖ್ಯಸ್ಥರಾದ ನಾಗಲೇಖ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version