ಭಾವ ಭೈರಾಗಿ

ಕವಿತೆ | ರೇಖೆಗಳು

Published

on

ಕವಯಿತ್ರಿ : ಡಾ.ಸಿ. ಪುಷ್ಪಲತ ಭದ್ರಾವತಿ
  • ಡಾ.ಪುಷ್ಪಲತ ಸಿ ಭದ್ರಾವತಿ

ಗಡಿ ದೇಶಗಳೇನೊ ಹಂಚಿಕೊಂಡಿರಿ
ಆದರೆ,
ಸೂರ್ಯ ಚಂದ್ರರ ಗತಿಯೇನು
ಉಸಿರಾಡುವ ಗಾಳಿಯು ಒಂದಿರುವಾಗ
ಪ್ರಾಣವಾಯುವಿಗೆ ಬಂಧನದಲ್ಲಿರಿಸಲಾದಿತೆ

ಹರಿಯುವ ನದಿಗಳಿಗೆ ನಾಮಕರಣವೇನೋ ಮಾಡಿದಿರಿ
ಆದರೆ,
ಜರಿಗಳು, ಹಳ್ಳಕೊಳ್ಳಗಳು ಮಾಡಿದಾದರೂ ಏನು
ಪೂಜಾರಿ ಕೊಟ್ಟಿದ್ದು ತೀರ್ಥವೆ
ಆಬೆಜಂಜಂ, ಹಾಲಿ ವಾಟರ್ ಎಲ್ಲವೂ ಜಲ
ಫಾದರ್,ಪೂಜಾರಿ,ಮೌಲ್ವಿ
ಎಲ್ಲರೂ ಕುಡಿದದ್ದು ನೀರು
ಕೊನೆಗೂ ಅದರ ಮೂಲರೂಪ ಬದಲಾಗಲಿಲ್ಲ

ಮನುಷ್ಯ ,ಪ್ರಾಣಿ,ಮರಗಿಡಗಳ
ತಳಿಗಳನ್ನು ಬೇರ್ಪಡಿಸುವವನು ಮೂರ್ಖನೇ ಇರಬೇಕು .
ದೇಹದಲ್ಲಿರುವ ನರಮಂಡಲವನೊಮ್ಮೆ ಬೇರ್ಪಡಿಸಿ
ಬದುಕಲಾದಿತೆ
ಏನು?
ಕ್ರಿಸ್ತನೇನಾದರು ಬಂದು ಮತಾಂತರ ಮಾಡಿದನೇ
ಅಲ್ಲಾನೇನಾದರು ಬಂದು ರಾಮಮಂದಿರ ಕೆಡವಿದನೇ
ಶಿವನೇನಾದರು ಬಂದು ಮಸೀದಿಯನ್ನು ಹೊಡೆದುರುಳಿಸಿದನೇ..!?

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version