ದಿನದ ಸುದ್ದಿ
ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?
ಸುದ್ದಿದಿನ ಡೆಸ್ಕ್ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ ಕಂಬ್ಯಾಕ್ ಮಾಡಿರೋ ಬಾಲಿವುಡ್ ಚೆಲುವೆ ಶಿಲ್ಪಾ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು.
ಕೊನೆಯ ದಿನ ಕಾವೇರಿ ನದಿ ತೀರದಲ್ಲಿ ಕೆಡಿ ಚಿತ್ರೀಕರಣ ನಡೆದಿದ್ದು,ಸತ್ಯವತಿ ಉರುಫ್ ಶಿಲ್ಪಾ ಶೆಟ್ಟಿ ಪೋರ್ಷನ್ ಶೂಟಿಂಗ್ ಕಂಪ್ಲೀಟ್ ಆಗಿದೆ. ತಮ್ಮ ಭಾಗದ ಚಿತ್ರೀಕರಣ ಮುಗಿದಿದ್ದೇ ತಡ ಪ್ಯಾಕಪ್ ಪ್ಯಾಕಪ್ ಅಂತ ಶಿಲ್ಪಾ ಕುಣಿದಾಡಿದ್ದಾರೆ. ಇದೇ ವೇಳೆ ತಮಾಷೆ ಮಾಡುತ್ತಾ ಶೋ ಮ್ಯಾನ್ ಪ್ರೇಮ್ ಕತ್ತು ಹಿಸುಕಿ ಇವರಿಗೆ ಹಸಿವೇ ಆಗಲ್ಲ ಅನ್ಸುತ್ತೆ. ವಿತೌಟ್ ಬ್ರೇಕ್ ಕೆಲಸ ಮಾಡ್ತಾರೆ ಅದಕ್ಕೆ ಪ್ರತಿಫಲವಾಗಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದಿದ್ದಾರೆ.
ಜೋಗಿ ಪ್ರೇಮ್ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದಿರೋ ಶಿಲ್ಪಾ ಶೆಟ್ಟಿ, ಪ್ರೇಮ್ ಕಲ್ಪನೆಯಲ್ಲಿ ಅರಳಿರೋ ಸತ್ಯವತಿ ಪಾತ್ರ ನಂಗೆ ಬಹಳ ಹಿಡಿಸಿದೆ, ಕೆಡಿ ಮೇಲೆ ನಿರೀಕ್ಷೆ ಹೆಚ್ಚಿದೆ ಎಂತಲೂ ತಿಳಿಸಿದ್ದಾರೆ. ಇಡೀ ಕೆಡಿ ಟೀಮ್ ಜೊತೆ ಸಂತೋಷವಾಗಿ ಕಾಲ ಕಳೆದು ಮುಂಬೈಗೆ ವಾಪಾಸ್ ಆಗಿದ್ದಾರೆ. ಅಂದ್ಹಾಗೇ, ಕೊನೆಯ ದಿನ ಶೂಟಿಂಗ್ ಸೆಟ್ನಲ್ಲಿ ನಡೆದ ತರ್ಲೆ ತಮಾಷೆಯನ್ನ ವಿಡಿಯೋ ಮೂಲಕ ನಟಿ ಶಿಲ್ಪಾ ಶೆಟ್ಟಿ ತಮ್ಮ ಸೋಷಿಯಲ್ ಸೈಟ್ನಲ್ಲಿ ಹಂಚಿಕೊಂಡಿದ್ದಾರೆ.
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ; ವಿಡಿಯೋ ನೋಡಿ
https://www.instagram.com/reel/C7l1UEfNIvA/?igsh=bDQ5NDVhMHpxYWc3
ಶಿಲ್ಪಾ ಶೆಟ್ಟಿ ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು.
ಇದೀಗ ಕೆಡಿ ಕೊನೆಯ ದಿನದ ಶೂಟಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ‘ಪ್ರೀತ್ಸೋದ್ ತಪ್ಪಾ’, ‘ಆಟೋ ಶಂಕರ್’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಮಂಗಳೂರು ಚೆಲುವೆ ಇದೀಗ ಕೆಡಿ ಮೂಲಕ ಮತ್ತೊಮ್ಮೆ ಸ್ಯಾಂಡಲ್ವುಡ್ಗೆ ರೀಎಂಟ್ರಿ ಕೊಟ್ಟಿದ್ದಾರೆ.
19 ವರ್ಷಗಳ ನಂತರ ಮತ್ತೊಮ್ಮೆ ಕರುನಾಡಲ್ಲಿ ದಿಬ್ಬಣ ಹೊರಡಲಿದ್ದಾರೆ. ಕೆಜಿಎಫ್ ನಂತರ ಅಧೀರ ಸಂಜಯ್ ದತ್ತ್ ಮತ್ತೆ ಕನ್ನಡಕ್ಕೆ ಮರಳಿದ್ದಾರೆ.ಕ್ರೇಜಿಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


