Connect with us

ದಿನದ ಸುದ್ದಿ

ಕೋವಿಡ್ 19 : ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು

Published

on

  • ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ ಅನುಭವದಿಂದಾಗಿ, ಕೇರಳ ಸರ್ಕಾರ ಉಳಿದ ರಾಜ್ಯ ಸರ್ಕಾರಗಳಿಗಿಂತ ಕೊವಿದ್-19ರ ಸವಾಲು ಎದುರಿಸುವ ಪೂರ್ವತಯಾರಿಯಲ್ಲಿ ಸಾಪೇಕ್ಷವಾಗಿ ಮುಂದಿತ್ತು.

ಕೆ.ಕೆ.ಶೈಲಜ (ಕೇರಳ ಆರೋಗ್ಯ ಮಂತ್ರಿ)
ಅನು: ಎಂ.ಜಿ.ವೆಂಕಟೇಶ

ಪ್ರತಿವರ್ಷ ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದಾಗ ಪತ್ರಿಕೆಗಳು ಆರೋಗ್ಯ ಕ್ಷೇತ್ರಕ್ಕೆ ಮೀಸಲಾಗಿಡುವ ಅತ್ಯಲ್ಪ ಹಣದ ಕುರಿತು ಟೀಕೆ ಮಾಡುವ ಲೇಖನಗಳನ್ನು ಪ್ರಕಟ್ರಿಸುತ್ತವೆ. ಕೋವಿಡ್ – 19 ರ ಬೆದರಿಕೆ ವ್ಯಾಪಕವಾಗಿ ಆವರಿಸುತ್ತಿರುವಾಗ, ವೈದ್ಯರು, ಆರೋಗ್ಯ ಕ್ಷೇತ್ರದ ಕಾರ್ಯಕರ್ತರು, ರಾಜ್ಯ ಸರ್ಕಾರದ ಸಂಸ್ಥೆಗಳು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಿರ್ದೇಶನಗಳನ್ನು ಕೊಡಲಾರಂಭಿಸಿದ್ದರು. ಆದರೆ ನಾವು ಎಲ್ಲ ಕಡೆಗಳಲ್ಲೂ ಈ ಪಿಡುಗನ್ನು ಎದುರಿಸಲಾರಂಭಿಸಿದಾಗ ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿನ ನ್ಯೂನತೆಗಳು ಢಾಳಾಗಿ ಗೋಚರಿಸಲಾರಂಭಿಸಿದವು.

ಪಿ.ಸಾಯಿನಾಥ್ ತಮ್ಮ `ಎಲ್ಲರಿಗೂ ಬರ ಅಂದರೆ ಇಷ್ಟ’ ಪುಸ್ತಕದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ನಂಬಿರುವ ಬಡವರ ಸ್ಥಿತಿಯನ್ನು ಮನಮುಟ್ಟುವ ವಿವರಗಳೊಂದಿಗೆ ಹೇಳುತ್ತಾರೆ. ಅವರು 1994 ರಲ್ಲಿ ಕಾಣಿಸಿಕೊಂಡಿದ್ದ ಪ್ಲೇಗ್ ಪಿಡುಗಿಗೆ ಹಿಂದೆಂದು ಕಾಣದ ರೀತಿಯಲ್ಲಿ ಮಾಧ್ಯಮದ ಗಮನ ಸೆಳೆದಿದ್ದಕ್ಕೆ ಕಾರಣವನ್ನು ವಿವರಿಸುತ್ತಾರೆ. ಏಕೆಂದರೆ ಬೇರೆ ಕೆಲವು ರೋಗಗಳಂತೆ ಅದು ಗ್ರಾಮೀಣ ಪ್ರದೇಶ ಅಥವ ನಗರದ ಕೊಳಚೆ ಪ್ರದೇಶಕ್ಕೆ ಸೀಮಿತವಾಗಿರಲಿಲ್ಲ. ಪ್ಲೇಗಿನ ಬ್ಯಾಕ್ಟಿರೀಯಾ ನಗರದ ಪ್ರತಿಷ್ಠಿತರ ಜಾಗಗಳಿಗೂ ನುಗ್ಗುವ ಗಾಂಚಾಲಿತನ ತೋರಿತ್ತು. ಸಾಯಿನಾಥ್ರ ಮಾತುಗಳಲ್ಲಿ ಹೇಳುವುದಾದರೆ “ಅವು (ಬ್ಯಾಕ್ಟೀರಿಯಾ) ಕ್ಲಬ್ ಕ್ಲಾಸ್ನಲ್ಲಿ ಸಂಚರಿಸಿ ನ್ಯೂಯಾರ್ಕ್ ತಲುಪಬಹುದಿತ್ತು. ಆದ್ದರಿಂದ ಬಹಳಷ್ಟು ಸುಂದರ ವ್ಯಕ್ತಿಗಳು ಆತಂಕಕ್ಕೆ ಒಳಗಾಗಿದ್ದರು.” ಕೋವಿಡ್-19 ಪ್ಲೇಗ್ಗಿಂತ ಕಡಿಮೆ ಅಪಾಯಕಾರಿಯಾದರೂ, ಅದು ಭಾರತಕ್ಕೆ ಬಂದಿದ್ದು ಸೋಂಕು ಪೀಡಿತ ದೇಶಗಳಿಂದ ಆಗಮಿಸಿದ ಪ್ರಯಾಣಿಕರಿಂದಾಗಿತ್ತು.

ಈ ವಾದ ಒಡ್ಡುತ್ತಿರುವುದು ಈ ಎರಡೂ ಪಿಡುಗುಗಳನ್ನು ಹಗುರವಾಗಿ ತೆಗೆದುಕೊಳ್ಳುವ ಉದ್ದೇಶದಿಂದಲ್ಲ. ಬದಲಿಗೆ, ಆರೋಗ್ಯದ ವಿಷಯದಲ್ಲಿ ಭಾರತದ ಪ್ರತಿಸ್ಪಂದನೆ, ಅದರಿಂದ ಪೀಡಿತರಾದವರ ಸಾಮಾಜಿಕ ಮತ್ತು ವರ್ಗ ವಾಸಸ್ಥಾನಗಳ ಮೇಲೆ ಅವಲಂಬಿತವಾಗಿರುತ್ತದೆ ಎಂಬುದರ ಕುರಿತು ಬೆಳಕು ಚೆಲ್ಲುವುದು ಮಾತ್ರ ಇದರ ಉದ್ದೇಶ.

ಕೋವಿಡ್-19ರ ಆಗಮನದಿಂದ ಖಾಸಗಿ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದ್ದ ವರ್ಗಗಳು ಸರ್ಕಾರಿ ಆರೋಗ್ಯ ವ್ಯವಸ್ಥೆಗಳ ಮೇಲೆ ತಪಾಸಣೆ ಮತ್ತು ಪ್ರತ್ಯೇಕೀಕರಣಕ್ಕಾಗಿ (ಕ್ವಾರಂಟೈನ್ಗಾಗಿ) ಅವಲಂಬಿತರಾಗುತ್ತಿರುವ ವಿಚಿತ್ರ ಪರಿಸ್ಥಿತಿ ಉಂಟಾಗಿದೆ. ದಶಕಗಳಿಂದ ಭಾರತದ ಬಹುಸಂಖ್ಯಾತರು ಇಂತಹ ಸರಕಾರಿ ಆರೋಗ್ಯ ವ್ಯವಸ್ಥೆಯ ಮೇಲೆ ಅವಲಂಬಿಸಿದ್ದರು ಎಂದು ಕೆಲವು ಅನುಕೂಲಸ್ತರಿಗೆ ಗೋಚರವಾಗುವುದಕ್ಕೆ ಕೋವಿಡ್-19 ರಂತಹ ಪಿಡುಗೇ ಬರಬೇಕಾಯಿತು. ಆಗ್ರಾ ಮಹಿಳೆಯೊಬ್ಬರು ಕ್ವಾರಂಟೈನ್ನಿಂದ ತಪ್ಪಿಸಿಕೊಂಡ ವಿಷಯ ತಪ್ಪಾಗಿ ವರದಿಯಾಗಿದೆ.

ವಾಸ್ತವವಾಗಿ “ಅನಾರೋಗ್ಯಕರ ಶೌಚಾಲಯ ವ್ಯವಸ್ಥೆ ಆಕೆಗೆ ವಾಕರಿಕೆ” ತರುವಂತೆ ಇದ್ದಿದ್ದರಿಂದ ಆಕೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಕ್ವಾರಂಟೈನ್ ಗೆ ಪ್ರತಿರೋಧ ತೋರಿದ್ದಳು. ಇದು ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಮತ್ತು ಮೂಲ ಸೌಕರ್ಯಗಳಿಗಾಗಿ ಮೀಸಲಿಡುವ ಅತ್ಯಲ್ಪ ಅನುದಾನದ ಫಲ. ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯಕರ ಶೌಚಾಲಯಗಳನ್ನು ನಿರ್ವಹಿಸಲಾಗದ ಸಾರ್ವಜನಿಕ ಆರೋಗ್ಯ ಆಡಳಿತಕ್ಕೆ, ಕೋವಿಡ್-19 ನಿಜವಾಗಿಯೂ ಎದುರಿಸಲಾಗದ ಸವಾಲಾಗಿದೆ.

ಸಾಂಕ್ರಾಮಿಕ ಎದುರಿಸಲು ತಯಾರಿ

ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲಭೂತ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ ಅನುಭವದಿಂದಾಗಿ, ಕೇರಳ ಸರ್ಕಾರ ಉಳಿದ ರಾಜ್ಯ ಸರ್ಕಾರಗಳಿಗಿಂತ ಕೊವಿದ್-19ರ ಸವಾಲು ಎದುರಿಸುವ ಪೂರ್ವತಯಾರಿಯಲ್ಲಿ ಸಾಪೇಕ್ಷವಾಗಿ ಮುಂದಿತ್ತು. ಜನವರಿ ಮಧ್ಯ ಭಾಗದಿಂದಲೇ ಇದನ್ನು ಎದುರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಚರ್ಚೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿತ್ತು. ನಮ್ಮ ರಾಜ್ಯ ಕೊವಿದ್-19 ಪಿಡುಗು ಹರಡದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಪಟ್ಟಿ ತಯಾರಿಸಿದ ಮೊದಲ ರಾಜ್ಯವಾಗಿತ್ತು.

ಜನವರಿ 30 ರಂದು ಕೊವಿದ್-19 ಪಾಸಿಟಿವ್ ಆದ ಮೊದಲ ಪ್ರಕರಣ ಗಮನಕ್ಕೆ ಬಂದ ನಂತರ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿಸಿ ಪಾಲಿಸಲಾಯಿತು. ಆ ನಂತರ ಸರಕಾರ ಇನ್ನಷ್ಟು ನಿಗಾ ವಹಿಸಿ ಸೋಂಕು ಖಚಿತವಾದವರ ಜತೆ ಪ್ರಾಥಮಿಕ ಮತ್ತು ಸ್ವಲ್ಪ ದೂರದ ಸಂಪರ್ಕ ಇರುವ ಎಲ್ಲರನ್ನು ಗುರುತಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತು. ಇಟಲಿಯಿಂದ ಹಿಂತಿರುಗಿದ ಒಂದು ಕುಟುಂಬ ತಪಾಸಣೆಗೆ ಒಳಗಾದಾಗ ಪಾಸಿಟಿವ್ ಫಲಿತಾಂಶ ಬಂದಿದ್ದರಿಂದ ಗಂಭೀರ ಸ್ಥಿತಿ ನಿರ್ಮಾಣವಾಯಿತು. ತೀವ್ರವಾದ ಹುಡುಕುವಿಕೆಯ ನಂತರ ಈ ಕುಟುಂಬದ ಸಂಪರ್ಕಕ್ಕೆ 719 ಜನ ಒಳಗಾಗಿದ್ದರು ಎಂಬುದು ಪತ್ತೆಯಾಯಿತು.

ಆ ನಂತರ ವಿದೇಶಗಳಿಂದ ಹಿಂತಿರುಗುವ ಪ್ರಯಾಣಿಕರ ಬಗ್ಗೆ ಕ್ರಮಗಳನ್ನು ಸರ್ಕಾರ ತೀವ್ರಗೊಳಿಸಿತು. ಈ ಪ್ರಯಾಣಿಕರು ತಮ್ಮ ಪ್ರಯಾಣದ ಪೂರ್ಣ ವಿವರಗಳನ್ನು ನೀಡದಿದ್ದರೆ ತೀವ್ರ ಕ್ರಮಗಳಿಗೆ ಒಳಗಾಗಬೇಕಾಯಿತು. ಅವರ ಪ್ರಾಥಮಿಕ ಮತ್ತು ಸ್ವಲ್ಪ ದೂರದ ಸಂಪರ್ಕಕ್ಕೆ ಬಂದವರನ್ನು ಪ್ರತ್ಯೇಕಿಸಲಾಯಿತು ಅಥವಾ ಗೃಹದಲ್ಲಿ ಒಂಟಿಯಾಗಿ ಇರಿಸಲಾಯಿತು.

ಮುಂದಿನ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಯಿತು. ನಿಗಾ ವಹಿಸಲಾದವರ ಪಟ್ಟಿಯನ್ನು ಸರ್ಕಾರ ನೀಡಿತು. ಇತ್ತೀಚಿಗೆ ರಾಜ್ಯವನ್ನು ವಿವಿಧ ಕಡೆಯಿಂದ ವಿವಿಧ ರೀತಿಯಲ್ಲಿ ಪ್ರವೇಶಿಸುವ ಕಡೆಯಲ್ಲಿ ಜನರನ್ನು ತಪಾಸಣೆಗೆ ಒಳಪಡಿಸಲಾಯಿತು. ಆರೋಗ್ಯ ರಕ್ಷಣಾ ಕಾರ್ಯಕರ್ತರು ನಗರ ಪ್ರವೇಶದ ಚೆಕ್ ಪೋಸ್ಟ್ಗಳಲ್ಲಿ ನಿಂತು ತಪಾಸಣೆ ನಡೆಸಿದರು. ಹಾಗೆ ರೈಲ್ವೆ ನಿಲ್ದಾಣಗಳಲ್ಲಿ ಈ ಕ್ರಮ ಕೈಗೊಳ್ಳಲಾಯಿತು.

ಈ ಪರಿಸ್ಥಿತಿಯನ್ನು ಅತ್ಯಂತ ಸೂಕ್ತವಾಗಿ ನಿಭಾಯಿಸುವುದರ ಕುರಿತು ನಾವು ಚೀನಾ ಮತ್ತು ದಕ್ಷಿಣ ಕೊರಿಯಾದಿಂದ ಕಲಿಯಬೇಕಿರುವುದು ಎಂದರೆ, ವ್ಯಾಪಕವಾಗಿ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವುದು ಮತ್ತು ತಪಾಸಣೆ ಮಾಡುವುದು. ದ. ಕೋರಿಯಾದಲ್ಲಿ ವ್ಯಾಪಕ ತಪಾಸಣೆಯಿಂದಾಗಿ ಮಾತ್ರ ಲಾಕ್ಡೌನ್ ಮಾಡದೇ ಬಿಕ್ಕಟ್ಟನ್ನು ನಿಭಾಯಿಸುವುದು ಸಾಧ್ಯವಾಯಿತು. ಆದರೆ ಕೇರಳದಲ್ಲಿ ಆರೋಗ್ಯಸೇವೆಯ ಉತ್ತಮ ಸೌಲಭ್ಯಗಳಿದ್ದರೂ ಇಂತಹ ಉತ್ತಮ ಆದರ್ಶ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗದಿರುವುದಕ್ಕೆ ಕಾರಣ ಸೀಮಿತ ಸಂಪನ್ಮೂಲ ಮತ್ತು ತಪಾಸಣಾ ಪ್ರಯೋಗಶಾಲೆಗಳು.

ಆದ್ದರಿಂದ ಇಂತಹ ಪರಿಸ್ಥಿತಿಯಲ್ಲಿ ನಾವು ಬಹಳ ಜಾಣತನದಿಂದ ನಮ್ಮ ಸೌಲಭ್ಯವನ್ನು ಉಪಯೋಗಿಸಬೇಕಾಗಿದೆ ಮತ್ತು ಸ್ಥಳೀಯ ಪ್ಯಯತ್ನಗಳನ್ನು ಹೆಚ್ಚಿಸಬೇಕಾಗಿದೆ. ಇದನ್ನು ಸಾಧಿಸಬೇಕಾದರೆ ಬಲವಾದ ರಾಜಕೀಯ ಬದ್ಧತೆ, ಬಲವಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಜನರ ಬದ್ಧತೆ ಬೇಕಾಗಿರುತ್ತದೆ. ಸರ್ಕಾರ ಸೂಚಿಸುವ ಕ್ರಮಗಳನ್ನು ಪ್ರಜೆಗಳು ಅನುಸರಿಸುವುದು ಮುಖ್ಯ. ಇದರಲ್ಲಿ ಮುಖ್ಯವಾದ ವಿಷಯವೆಂದರೆ ಸಾರ್ವಜನಿಕರು ಕಾರಣವಿಲ್ಲದೇ ತಪಾಸಣಾ ಕೇಂದ್ರಗಳಿಗೆ ಹೊಗದಿರುವುದು, ಹೀಗೆ ಹೋಗುವುದರಿಂದ ಪ್ರಯೋಗಾಲಯಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ.

ಸ್ವಯಂ-ಪ್ರತ್ಯೇಕತೆ ಅನುಸರಿಸುವಾಗ ಕೈಗೊಳ್ಳುವ ಕ್ರಮಗಳ ಬಗ್ಗೆ, ರೋಗಲಕ್ಷಣಗಳನ್ನು ಗುರುತಿಸಲು ಮತ್ತು ವರದಿ ಮಾಡುವುದಕ್ಕೆ ಕೇರಳ ಸರ್ಕಾರ ‘ಜಿಓಕೆ ಡೈರೆಕ್ಟ್’ ಎಂಬ ಮೊಬೈಲ್ ಆ್ಯಪ್ ಸಿದ್ಧಪಡಿಸಿದೆ. `ದಿಶಾ’ ಹೆಲ್ಪಲೈನ್ ಜನಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಅದರ ಮುಖಾಂತರ ಕೊವಿದ್ 19 ಪಿಡುಗಿನ ಹರಡುವಿಕೆಯ `ಸರಣಿ ಕತ್ತರಿಸುವ’ (ಬ್ರೇಕ್ ದಿ ಚೈನ್) ಪ್ರಚಾರದಲ್ಲಿ ಶುಚಿ ಮತ್ತು ನೈರ್ಮಲ್ಯದ ಬಗ್ಗೆ ತಿಳಿಸಲಾಗುತ್ತಿದೆ. ಈ ಕ್ರಮಗಳಿಂದ ಸ್ವಭಾವದ ಬದಲಾವಣೆ ತರುತ್ತಿರುವುದು ರಾಜ್ಯದ ಮತ್ತು ರಾಷ್ಟ್ರದ ಮಾಧ್ಯಮದಲ್ಲೂ ಪ್ರಕಟವಾಗುತ್ತಿದೆ.

ಈ ರೀತಿಯ ಮುಂಜಾಗರೂಕತಾ ಕ್ರಮ ಮತ್ತು ಸಾಮಾಜಿಕ ಅಂತರ ಕಾಪಿಟ್ಟುಕೊಂಡರೆ ಸಾರ್ವಜನಿಕ ಮತ್ತು ಸರಕಾರದ ಸಂಪನ್ಮೂಲಗಳ ಮೇಲೆ ಉಂಟಾಗುವ ಒತ್ತಡವನ್ನು ಮುಂದೂಡಬಹುದು. ಹೀಗೆ ಗಳಿಸಿದ ಅವಧಿಯಲ್ಲಿ ಮುಂದೆ ಸೋಂಕು ಹರಡಿ ಅಗತ್ಯ ಬಿದ್ದರೆ ಹೆಚ್ಚು ಹೆಚ್ಚು ಜನರನ್ನು ತಲುಪಲು ಸಾಧ್ಯವಾಗುವಂತೆ ತಪಾಸಣಾ ಸೌಲಭ್ಯಗಳನ್ನು ನಿರ್ಮಿಸಬಹುದು. ಸರ್ಕಾರದ ವಿನಂತಿಯ ಮೇರೆಗೆ ಐ.ಸಿ.ಎಂ.ಆರ್ (ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರೀಸರ್ಚ್) ಕೇರಳಕ್ಕೆ 10 ಪರೀಕ್ಷಾ ಕೇಂದ್ರಗಳನ್ನು ಮಂಜೂರು ಮಾಡಿದೆ. ಸರ್ಕಾರಕ್ಕೆ ಖಾಸಗಿ ಭಾಗಿತ್ವದೊಡನೆ ಇನ್ನು ಹೆಚ್ಚಿನ ಪ್ರಯೋಗಾಲಯಗಳನ್ನು ಸ್ಥಾಪಿಸುವ ಯೋಜನೆಯಿದೆ.

ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು

ಕೇರಳದಲ್ಲಿ ಚಾರಿತ್ರಿಕವಾಗಿ ಸಶಕ್ತ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಸರ್ಕಾರ ನೀಡಿರುವ ಧೃಡವಾದ ಬೆಂಬಲದಿಂದಾಗಿ, ಕೊವಿಡ್ 19 ಹರಡುವ ಮೊದಲು ಕ್ರಮಗಳ ಬಗ್ಗೆ ನಿರ್ಣಯಿಸುವುದಕ್ಕೆ ಸಾಧ್ಯವಾಯಿತು. ಆಡಳಿತ ಒಳ್ಳೆಯ ಆರೋಗ್ಯ ವ್ಯವಸ್ಥೆ ಕಾಪಾಡಿ ಬೆಳೆಸಲು ವೇಗವರ್ಧಕವಾಗಿ ಕೆಲಸ ಮಾಡಿದೆ. ಇದು ಆರೋಗ್ಯ ಮೂಲ ಸೌಲಭ್ಯದ ವಿಸ್ತರಣೆಯಲ್ಲಿ ಕಂಡು ಬರುತ್ತದೆ. ಉದಾಹರಣೆಗೆ ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ವೈರೋಲಜಿ ಘಟಕವನ್ನು ಅಲೆಪ್ಟಿಯಲ್ಲಿ ನಿಫಾ ವೈರಸ್ ಕಂಡು ಬಂದ ನಂತರ ಸ್ಥಾಪಿಸಿರುವುದು.

ಇತ್ತೀಚಿನ ದಿನಗಳಲ್ಲಿ ಉಂಟಾಗಿರುವ ಸಾಂಕ್ರಾಮಿಕ ಮತ್ತು ಅಸಾಂಕ್ರಮಿಕ ರೋಗಗಳಿಂದ ಉಂಟಾದ ಒತ್ತಡವನ್ನು ನಿರ್ವಹಿಸಿರುವ ರೀತಿಯಿಂದ ರಾಜ್ಯದ ಸೋಂಕಿನ ಪರಿಸ್ಥಿತಿಯನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಿಗಾ ಇಡಲು ಸರಕಾರ ಸ್ಥಾಪಿಸಿರುವ ಉಸ್ತುವಾರಿ ವ್ಯವಸ್ಥೆ ಅತ್ಯಂತ ಯಶಸ್ವಿಯಾಗಿದೆ. ಇದರಿಂದ ಆರೋಗ್ಯ ಅಧಿಕಾರಿಗಳು ವೇಗವಾಗಿ ರೋಗ ಗುರುತಿಸುವುದಕ್ಕೂ ತಡೆಯುವುದಕ್ಕೂ ಸಾಧ್ಯವಾಗಿದೆ. ಸೇವೆಯನ್ನು ಕ್ಷಿಪ್ರವಾಗಿ ಮತ್ತು ವ್ಯಾಪಕವಾಗಿ ಹೆಚ್ಚಿನ ಜನರನ್ನು ತಲುಪುವ ಗುರಿ ಸಾಧಿಸಲು ಆರೋಗ್ಯಸೇವಾ ವ್ಯವಸ್ಥೆಯನ್ನು ವಿಕೇಂದ್ರಿಕರಿಸಲಾಗಿದೆ. ಇದರ ಫಲಿತವಾಗಿಯೇ ಕೋವಿಡ್-19 ರ ಸಂದರ್ಭದಲ್ಲಿ ವೈಯುಕ್ತಿಕ ಪ್ರಕರಣಗಳನ್ನು ಪತ್ತೆ ಹಚ್ಚಿ ಅದರ ಜಾಡು ಹಿಡಿಯುವುದರಲ್ಲಿ ಮತ್ತು ‘ಸರಣಿ ತುಂಡರಿಸುವ’ ಪ್ರಚಾರ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿವೆ.

ಆರೋಗ್ಯ ಸೇವೆಯ ಗುಣಮಟ್ಟ ಮತ್ತು ಮೂಲಭೂತ ಸೌಕರ್ಯ ಹೆಚ್ಚಿಸಲು ‘ಆರ್ದ್ರ ಮಿಶನ್’ ಮುಖಾಂತರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕುಟುಂಬ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸುವತ್ತ ಹೆಜ್ಜೆ ಹಾಕುತ್ತಿದ್ದೇವೆ. ಸರ್ಕಾರ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತೆ ಇನ್ನಷ್ಟು ಉತ್ತಮ ಹಾದಿಯಲ್ಲಿ ಒಯ್ಯಲು ಯಶಸ್ವಿಯಾಗಿದೆ.

  • ಮೂಲ ಲೇಖನ ಕೃಪೆ : ದಿ ಹಿಂದು ಪತ್ರಿಕೆ, ಮಾ.23, 2020

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending