ದಿನದ ಸುದ್ದಿ
ಕೋವಿಡ್ 19 : ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/03/Kerala_covid19_suddidina.jpg&description=ಕೋವಿಡ್ 19 : ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/03/Kerala_covid19_suddidina.jpg&description=ಕೋವಿಡ್ 19 : ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು', 'pinterestShare', 'width=750,height=350'); return false;" title="Pin This Post">
- ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ ಅನುಭವದಿಂದಾಗಿ, ಕೇರಳ ಸರ್ಕಾರ ಉಳಿದ ರಾಜ್ಯ ಸರ್ಕಾರಗಳಿಗಿಂತ ಕೊವಿದ್-19ರ ಸವಾಲು ಎದುರಿಸುವ ಪೂರ್ವತಯಾರಿಯಲ್ಲಿ ಸಾಪೇಕ್ಷವಾಗಿ ಮುಂದಿತ್ತು.
–ಕೆ.ಕೆ.ಶೈಲಜ (ಕೇರಳ ಆರೋಗ್ಯ ಮಂತ್ರಿ)
ಅನು: ಎಂ.ಜಿ.ವೆಂಕಟೇಶ
ಪ್ರತಿವರ್ಷ ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದಾಗ ಪತ್ರಿಕೆಗಳು ಆರೋಗ್ಯ ಕ್ಷೇತ್ರಕ್ಕೆ ಮೀಸಲಾಗಿಡುವ ಅತ್ಯಲ್ಪ ಹಣದ ಕುರಿತು ಟೀಕೆ ಮಾಡುವ ಲೇಖನಗಳನ್ನು ಪ್ರಕಟ್ರಿಸುತ್ತವೆ. ಕೋವಿಡ್ – 19 ರ ಬೆದರಿಕೆ ವ್ಯಾಪಕವಾಗಿ ಆವರಿಸುತ್ತಿರುವಾಗ, ವೈದ್ಯರು, ಆರೋಗ್ಯ ಕ್ಷೇತ್ರದ ಕಾರ್ಯಕರ್ತರು, ರಾಜ್ಯ ಸರ್ಕಾರದ ಸಂಸ್ಥೆಗಳು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಿರ್ದೇಶನಗಳನ್ನು ಕೊಡಲಾರಂಭಿಸಿದ್ದರು. ಆದರೆ ನಾವು ಎಲ್ಲ ಕಡೆಗಳಲ್ಲೂ ಈ ಪಿಡುಗನ್ನು ಎದುರಿಸಲಾರಂಭಿಸಿದಾಗ ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿನ ನ್ಯೂನತೆಗಳು ಢಾಳಾಗಿ ಗೋಚರಿಸಲಾರಂಭಿಸಿದವು.
ಪಿ.ಸಾಯಿನಾಥ್ ತಮ್ಮ `ಎಲ್ಲರಿಗೂ ಬರ ಅಂದರೆ ಇಷ್ಟ’ ಪುಸ್ತಕದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ನಂಬಿರುವ ಬಡವರ ಸ್ಥಿತಿಯನ್ನು ಮನಮುಟ್ಟುವ ವಿವರಗಳೊಂದಿಗೆ ಹೇಳುತ್ತಾರೆ. ಅವರು 1994 ರಲ್ಲಿ ಕಾಣಿಸಿಕೊಂಡಿದ್ದ ಪ್ಲೇಗ್ ಪಿಡುಗಿಗೆ ಹಿಂದೆಂದು ಕಾಣದ ರೀತಿಯಲ್ಲಿ ಮಾಧ್ಯಮದ ಗಮನ ಸೆಳೆದಿದ್ದಕ್ಕೆ ಕಾರಣವನ್ನು ವಿವರಿಸುತ್ತಾರೆ. ಏಕೆಂದರೆ ಬೇರೆ ಕೆಲವು ರೋಗಗಳಂತೆ ಅದು ಗ್ರಾಮೀಣ ಪ್ರದೇಶ ಅಥವ ನಗರದ ಕೊಳಚೆ ಪ್ರದೇಶಕ್ಕೆ ಸೀಮಿತವಾಗಿರಲಿಲ್ಲ. ಪ್ಲೇಗಿನ ಬ್ಯಾಕ್ಟಿರೀಯಾ ನಗರದ ಪ್ರತಿಷ್ಠಿತರ ಜಾಗಗಳಿಗೂ ನುಗ್ಗುವ ಗಾಂಚಾಲಿತನ ತೋರಿತ್ತು. ಸಾಯಿನಾಥ್ರ ಮಾತುಗಳಲ್ಲಿ ಹೇಳುವುದಾದರೆ “ಅವು (ಬ್ಯಾಕ್ಟೀರಿಯಾ) ಕ್ಲಬ್ ಕ್ಲಾಸ್ನಲ್ಲಿ ಸಂಚರಿಸಿ ನ್ಯೂಯಾರ್ಕ್ ತಲುಪಬಹುದಿತ್ತು. ಆದ್ದರಿಂದ ಬಹಳಷ್ಟು ಸುಂದರ ವ್ಯಕ್ತಿಗಳು ಆತಂಕಕ್ಕೆ ಒಳಗಾಗಿದ್ದರು.” ಕೋವಿಡ್-19 ಪ್ಲೇಗ್ಗಿಂತ ಕಡಿಮೆ ಅಪಾಯಕಾರಿಯಾದರೂ, ಅದು ಭಾರತಕ್ಕೆ ಬಂದಿದ್ದು ಸೋಂಕು ಪೀಡಿತ ದೇಶಗಳಿಂದ ಆಗಮಿಸಿದ ಪ್ರಯಾಣಿಕರಿಂದಾಗಿತ್ತು.
ಈ ವಾದ ಒಡ್ಡುತ್ತಿರುವುದು ಈ ಎರಡೂ ಪಿಡುಗುಗಳನ್ನು ಹಗುರವಾಗಿ ತೆಗೆದುಕೊಳ್ಳುವ ಉದ್ದೇಶದಿಂದಲ್ಲ. ಬದಲಿಗೆ, ಆರೋಗ್ಯದ ವಿಷಯದಲ್ಲಿ ಭಾರತದ ಪ್ರತಿಸ್ಪಂದನೆ, ಅದರಿಂದ ಪೀಡಿತರಾದವರ ಸಾಮಾಜಿಕ ಮತ್ತು ವರ್ಗ ವಾಸಸ್ಥಾನಗಳ ಮೇಲೆ ಅವಲಂಬಿತವಾಗಿರುತ್ತದೆ ಎಂಬುದರ ಕುರಿತು ಬೆಳಕು ಚೆಲ್ಲುವುದು ಮಾತ್ರ ಇದರ ಉದ್ದೇಶ.
ಕೋವಿಡ್-19ರ ಆಗಮನದಿಂದ ಖಾಸಗಿ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿದ್ದ ವರ್ಗಗಳು ಸರ್ಕಾರಿ ಆರೋಗ್ಯ ವ್ಯವಸ್ಥೆಗಳ ಮೇಲೆ ತಪಾಸಣೆ ಮತ್ತು ಪ್ರತ್ಯೇಕೀಕರಣಕ್ಕಾಗಿ (ಕ್ವಾರಂಟೈನ್ಗಾಗಿ) ಅವಲಂಬಿತರಾಗುತ್ತಿರುವ ವಿಚಿತ್ರ ಪರಿಸ್ಥಿತಿ ಉಂಟಾಗಿದೆ. ದಶಕಗಳಿಂದ ಭಾರತದ ಬಹುಸಂಖ್ಯಾತರು ಇಂತಹ ಸರಕಾರಿ ಆರೋಗ್ಯ ವ್ಯವಸ್ಥೆಯ ಮೇಲೆ ಅವಲಂಬಿಸಿದ್ದರು ಎಂದು ಕೆಲವು ಅನುಕೂಲಸ್ತರಿಗೆ ಗೋಚರವಾಗುವುದಕ್ಕೆ ಕೋವಿಡ್-19 ರಂತಹ ಪಿಡುಗೇ ಬರಬೇಕಾಯಿತು. ಆಗ್ರಾ ಮಹಿಳೆಯೊಬ್ಬರು ಕ್ವಾರಂಟೈನ್ನಿಂದ ತಪ್ಪಿಸಿಕೊಂಡ ವಿಷಯ ತಪ್ಪಾಗಿ ವರದಿಯಾಗಿದೆ.
ವಾಸ್ತವವಾಗಿ “ಅನಾರೋಗ್ಯಕರ ಶೌಚಾಲಯ ವ್ಯವಸ್ಥೆ ಆಕೆಗೆ ವಾಕರಿಕೆ” ತರುವಂತೆ ಇದ್ದಿದ್ದರಿಂದ ಆಕೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಕ್ವಾರಂಟೈನ್ ಗೆ ಪ್ರತಿರೋಧ ತೋರಿದ್ದಳು. ಇದು ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಮತ್ತು ಮೂಲ ಸೌಕರ್ಯಗಳಿಗಾಗಿ ಮೀಸಲಿಡುವ ಅತ್ಯಲ್ಪ ಅನುದಾನದ ಫಲ. ಸಾರ್ವಜನಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯಕರ ಶೌಚಾಲಯಗಳನ್ನು ನಿರ್ವಹಿಸಲಾಗದ ಸಾರ್ವಜನಿಕ ಆರೋಗ್ಯ ಆಡಳಿತಕ್ಕೆ, ಕೋವಿಡ್-19 ನಿಜವಾಗಿಯೂ ಎದುರಿಸಲಾಗದ ಸವಾಲಾಗಿದೆ.
ಸಾಂಕ್ರಾಮಿಕ ಎದುರಿಸಲು ತಯಾರಿ
ಭಾರತದ ಸಾರ್ವಜನಿಕ ಆರೋಗ್ಯದ ದಾಖಲೆಯ ಹಿನ್ನೆಲೆಯಲ್ಲಿ, ಕೊವಿದ್-19ರ ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಯ ಬಗ್ಗೆ ಕೇರಳವನ್ನು ಶ್ಲಾಘಿಸಲಾಗುತ್ತಿದೆ. ಇದಕ್ಕೆ ಬೇಕಾದ ಪೂರ್ವಭಾವಿ ಮೂಲಭೂತ ಸೌಕರ್ಯಗಳನ್ನು ಹಿಂದೆಯೇ ಒದಗಿಸಿದ್ದರಿಂದಾಗಿ ಮತ್ತು ನಿಫಾ ವೈರಸ್ನ ಸವಾಲನ್ನು ನಿಭಾಯಿಸಿದ ಅನುಭವದಿಂದಾಗಿ, ಕೇರಳ ಸರ್ಕಾರ ಉಳಿದ ರಾಜ್ಯ ಸರ್ಕಾರಗಳಿಗಿಂತ ಕೊವಿದ್-19ರ ಸವಾಲು ಎದುರಿಸುವ ಪೂರ್ವತಯಾರಿಯಲ್ಲಿ ಸಾಪೇಕ್ಷವಾಗಿ ಮುಂದಿತ್ತು. ಜನವರಿ ಮಧ್ಯ ಭಾಗದಿಂದಲೇ ಇದನ್ನು ಎದುರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಚರ್ಚೆಯನ್ನು ಕೇರಳ ಸರ್ಕಾರ ಪ್ರಾರಂಭಿಸಿತ್ತು. ನಮ್ಮ ರಾಜ್ಯ ಕೊವಿದ್-19 ಪಿಡುಗು ಹರಡದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಪಟ್ಟಿ ತಯಾರಿಸಿದ ಮೊದಲ ರಾಜ್ಯವಾಗಿತ್ತು.
ಜನವರಿ 30 ರಂದು ಕೊವಿದ್-19 ಪಾಸಿಟಿವ್ ಆದ ಮೊದಲ ಪ್ರಕರಣ ಗಮನಕ್ಕೆ ಬಂದ ನಂತರ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿಸಿ ಪಾಲಿಸಲಾಯಿತು. ಆ ನಂತರ ಸರಕಾರ ಇನ್ನಷ್ಟು ನಿಗಾ ವಹಿಸಿ ಸೋಂಕು ಖಚಿತವಾದವರ ಜತೆ ಪ್ರಾಥಮಿಕ ಮತ್ತು ಸ್ವಲ್ಪ ದೂರದ ಸಂಪರ್ಕ ಇರುವ ಎಲ್ಲರನ್ನು ಗುರುತಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತು. ಇಟಲಿಯಿಂದ ಹಿಂತಿರುಗಿದ ಒಂದು ಕುಟುಂಬ ತಪಾಸಣೆಗೆ ಒಳಗಾದಾಗ ಪಾಸಿಟಿವ್ ಫಲಿತಾಂಶ ಬಂದಿದ್ದರಿಂದ ಗಂಭೀರ ಸ್ಥಿತಿ ನಿರ್ಮಾಣವಾಯಿತು. ತೀವ್ರವಾದ ಹುಡುಕುವಿಕೆಯ ನಂತರ ಈ ಕುಟುಂಬದ ಸಂಪರ್ಕಕ್ಕೆ 719 ಜನ ಒಳಗಾಗಿದ್ದರು ಎಂಬುದು ಪತ್ತೆಯಾಯಿತು.
ಆ ನಂತರ ವಿದೇಶಗಳಿಂದ ಹಿಂತಿರುಗುವ ಪ್ರಯಾಣಿಕರ ಬಗ್ಗೆ ಕ್ರಮಗಳನ್ನು ಸರ್ಕಾರ ತೀವ್ರಗೊಳಿಸಿತು. ಈ ಪ್ರಯಾಣಿಕರು ತಮ್ಮ ಪ್ರಯಾಣದ ಪೂರ್ಣ ವಿವರಗಳನ್ನು ನೀಡದಿದ್ದರೆ ತೀವ್ರ ಕ್ರಮಗಳಿಗೆ ಒಳಗಾಗಬೇಕಾಯಿತು. ಅವರ ಪ್ರಾಥಮಿಕ ಮತ್ತು ಸ್ವಲ್ಪ ದೂರದ ಸಂಪರ್ಕಕ್ಕೆ ಬಂದವರನ್ನು ಪ್ರತ್ಯೇಕಿಸಲಾಯಿತು ಅಥವಾ ಗೃಹದಲ್ಲಿ ಒಂಟಿಯಾಗಿ ಇರಿಸಲಾಯಿತು.
ಮುಂದಿನ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಯಿತು. ನಿಗಾ ವಹಿಸಲಾದವರ ಪಟ್ಟಿಯನ್ನು ಸರ್ಕಾರ ನೀಡಿತು. ಇತ್ತೀಚಿಗೆ ರಾಜ್ಯವನ್ನು ವಿವಿಧ ಕಡೆಯಿಂದ ವಿವಿಧ ರೀತಿಯಲ್ಲಿ ಪ್ರವೇಶಿಸುವ ಕಡೆಯಲ್ಲಿ ಜನರನ್ನು ತಪಾಸಣೆಗೆ ಒಳಪಡಿಸಲಾಯಿತು. ಆರೋಗ್ಯ ರಕ್ಷಣಾ ಕಾರ್ಯಕರ್ತರು ನಗರ ಪ್ರವೇಶದ ಚೆಕ್ ಪೋಸ್ಟ್ಗಳಲ್ಲಿ ನಿಂತು ತಪಾಸಣೆ ನಡೆಸಿದರು. ಹಾಗೆ ರೈಲ್ವೆ ನಿಲ್ದಾಣಗಳಲ್ಲಿ ಈ ಕ್ರಮ ಕೈಗೊಳ್ಳಲಾಯಿತು.
ಈ ಪರಿಸ್ಥಿತಿಯನ್ನು ಅತ್ಯಂತ ಸೂಕ್ತವಾಗಿ ನಿಭಾಯಿಸುವುದರ ಕುರಿತು ನಾವು ಚೀನಾ ಮತ್ತು ದಕ್ಷಿಣ ಕೊರಿಯಾದಿಂದ ಕಲಿಯಬೇಕಿರುವುದು ಎಂದರೆ, ವ್ಯಾಪಕವಾಗಿ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವುದು ಮತ್ತು ತಪಾಸಣೆ ಮಾಡುವುದು. ದ. ಕೋರಿಯಾದಲ್ಲಿ ವ್ಯಾಪಕ ತಪಾಸಣೆಯಿಂದಾಗಿ ಮಾತ್ರ ಲಾಕ್ಡೌನ್ ಮಾಡದೇ ಬಿಕ್ಕಟ್ಟನ್ನು ನಿಭಾಯಿಸುವುದು ಸಾಧ್ಯವಾಯಿತು. ಆದರೆ ಕೇರಳದಲ್ಲಿ ಆರೋಗ್ಯಸೇವೆಯ ಉತ್ತಮ ಸೌಲಭ್ಯಗಳಿದ್ದರೂ ಇಂತಹ ಉತ್ತಮ ಆದರ್ಶ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗದಿರುವುದಕ್ಕೆ ಕಾರಣ ಸೀಮಿತ ಸಂಪನ್ಮೂಲ ಮತ್ತು ತಪಾಸಣಾ ಪ್ರಯೋಗಶಾಲೆಗಳು.
ಆದ್ದರಿಂದ ಇಂತಹ ಪರಿಸ್ಥಿತಿಯಲ್ಲಿ ನಾವು ಬಹಳ ಜಾಣತನದಿಂದ ನಮ್ಮ ಸೌಲಭ್ಯವನ್ನು ಉಪಯೋಗಿಸಬೇಕಾಗಿದೆ ಮತ್ತು ಸ್ಥಳೀಯ ಪ್ಯಯತ್ನಗಳನ್ನು ಹೆಚ್ಚಿಸಬೇಕಾಗಿದೆ. ಇದನ್ನು ಸಾಧಿಸಬೇಕಾದರೆ ಬಲವಾದ ರಾಜಕೀಯ ಬದ್ಧತೆ, ಬಲವಾದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಜನರ ಬದ್ಧತೆ ಬೇಕಾಗಿರುತ್ತದೆ. ಸರ್ಕಾರ ಸೂಚಿಸುವ ಕ್ರಮಗಳನ್ನು ಪ್ರಜೆಗಳು ಅನುಸರಿಸುವುದು ಮುಖ್ಯ. ಇದರಲ್ಲಿ ಮುಖ್ಯವಾದ ವಿಷಯವೆಂದರೆ ಸಾರ್ವಜನಿಕರು ಕಾರಣವಿಲ್ಲದೇ ತಪಾಸಣಾ ಕೇಂದ್ರಗಳಿಗೆ ಹೊಗದಿರುವುದು, ಹೀಗೆ ಹೋಗುವುದರಿಂದ ಪ್ರಯೋಗಾಲಯಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ.
ಸ್ವಯಂ-ಪ್ರತ್ಯೇಕತೆ ಅನುಸರಿಸುವಾಗ ಕೈಗೊಳ್ಳುವ ಕ್ರಮಗಳ ಬಗ್ಗೆ, ರೋಗಲಕ್ಷಣಗಳನ್ನು ಗುರುತಿಸಲು ಮತ್ತು ವರದಿ ಮಾಡುವುದಕ್ಕೆ ಕೇರಳ ಸರ್ಕಾರ ‘ಜಿಓಕೆ ಡೈರೆಕ್ಟ್’ ಎಂಬ ಮೊಬೈಲ್ ಆ್ಯಪ್ ಸಿದ್ಧಪಡಿಸಿದೆ. `ದಿಶಾ’ ಹೆಲ್ಪಲೈನ್ ಜನಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಅದರ ಮುಖಾಂತರ ಕೊವಿದ್ 19 ಪಿಡುಗಿನ ಹರಡುವಿಕೆಯ `ಸರಣಿ ಕತ್ತರಿಸುವ’ (ಬ್ರೇಕ್ ದಿ ಚೈನ್) ಪ್ರಚಾರದಲ್ಲಿ ಶುಚಿ ಮತ್ತು ನೈರ್ಮಲ್ಯದ ಬಗ್ಗೆ ತಿಳಿಸಲಾಗುತ್ತಿದೆ. ಈ ಕ್ರಮಗಳಿಂದ ಸ್ವಭಾವದ ಬದಲಾವಣೆ ತರುತ್ತಿರುವುದು ರಾಜ್ಯದ ಮತ್ತು ರಾಷ್ಟ್ರದ ಮಾಧ್ಯಮದಲ್ಲೂ ಪ್ರಕಟವಾಗುತ್ತಿದೆ.
ಈ ರೀತಿಯ ಮುಂಜಾಗರೂಕತಾ ಕ್ರಮ ಮತ್ತು ಸಾಮಾಜಿಕ ಅಂತರ ಕಾಪಿಟ್ಟುಕೊಂಡರೆ ಸಾರ್ವಜನಿಕ ಮತ್ತು ಸರಕಾರದ ಸಂಪನ್ಮೂಲಗಳ ಮೇಲೆ ಉಂಟಾಗುವ ಒತ್ತಡವನ್ನು ಮುಂದೂಡಬಹುದು. ಹೀಗೆ ಗಳಿಸಿದ ಅವಧಿಯಲ್ಲಿ ಮುಂದೆ ಸೋಂಕು ಹರಡಿ ಅಗತ್ಯ ಬಿದ್ದರೆ ಹೆಚ್ಚು ಹೆಚ್ಚು ಜನರನ್ನು ತಲುಪಲು ಸಾಧ್ಯವಾಗುವಂತೆ ತಪಾಸಣಾ ಸೌಲಭ್ಯಗಳನ್ನು ನಿರ್ಮಿಸಬಹುದು. ಸರ್ಕಾರದ ವಿನಂತಿಯ ಮೇರೆಗೆ ಐ.ಸಿ.ಎಂ.ಆರ್ (ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರೀಸರ್ಚ್) ಕೇರಳಕ್ಕೆ 10 ಪರೀಕ್ಷಾ ಕೇಂದ್ರಗಳನ್ನು ಮಂಜೂರು ಮಾಡಿದೆ. ಸರ್ಕಾರಕ್ಕೆ ಖಾಸಗಿ ಭಾಗಿತ್ವದೊಡನೆ ಇನ್ನು ಹೆಚ್ಚಿನ ಪ್ರಯೋಗಾಲಯಗಳನ್ನು ಸ್ಥಾಪಿಸುವ ಯೋಜನೆಯಿದೆ.
ಕೇರಳಕ್ಕೆ ಮತ್ತು ಕೇರಳದಿಂದ ಪಾಠಗಳು
ಕೇರಳದಲ್ಲಿ ಚಾರಿತ್ರಿಕವಾಗಿ ಸಶಕ್ತ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಸರ್ಕಾರ ನೀಡಿರುವ ಧೃಡವಾದ ಬೆಂಬಲದಿಂದಾಗಿ, ಕೊವಿಡ್ 19 ಹರಡುವ ಮೊದಲು ಕ್ರಮಗಳ ಬಗ್ಗೆ ನಿರ್ಣಯಿಸುವುದಕ್ಕೆ ಸಾಧ್ಯವಾಯಿತು. ಆಡಳಿತ ಒಳ್ಳೆಯ ಆರೋಗ್ಯ ವ್ಯವಸ್ಥೆ ಕಾಪಾಡಿ ಬೆಳೆಸಲು ವೇಗವರ್ಧಕವಾಗಿ ಕೆಲಸ ಮಾಡಿದೆ. ಇದು ಆರೋಗ್ಯ ಮೂಲ ಸೌಲಭ್ಯದ ವಿಸ್ತರಣೆಯಲ್ಲಿ ಕಂಡು ಬರುತ್ತದೆ. ಉದಾಹರಣೆಗೆ ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ವೈರೋಲಜಿ ಘಟಕವನ್ನು ಅಲೆಪ್ಟಿಯಲ್ಲಿ ನಿಫಾ ವೈರಸ್ ಕಂಡು ಬಂದ ನಂತರ ಸ್ಥಾಪಿಸಿರುವುದು.
ಇತ್ತೀಚಿನ ದಿನಗಳಲ್ಲಿ ಉಂಟಾಗಿರುವ ಸಾಂಕ್ರಾಮಿಕ ಮತ್ತು ಅಸಾಂಕ್ರಮಿಕ ರೋಗಗಳಿಂದ ಉಂಟಾದ ಒತ್ತಡವನ್ನು ನಿರ್ವಹಿಸಿರುವ ರೀತಿಯಿಂದ ರಾಜ್ಯದ ಸೋಂಕಿನ ಪರಿಸ್ಥಿತಿಯನ್ನು ಗುರುತಿಸಲಾಗುತ್ತಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೆ ನಿಗಾ ಇಡಲು ಸರಕಾರ ಸ್ಥಾಪಿಸಿರುವ ಉಸ್ತುವಾರಿ ವ್ಯವಸ್ಥೆ ಅತ್ಯಂತ ಯಶಸ್ವಿಯಾಗಿದೆ. ಇದರಿಂದ ಆರೋಗ್ಯ ಅಧಿಕಾರಿಗಳು ವೇಗವಾಗಿ ರೋಗ ಗುರುತಿಸುವುದಕ್ಕೂ ತಡೆಯುವುದಕ್ಕೂ ಸಾಧ್ಯವಾಗಿದೆ. ಸೇವೆಯನ್ನು ಕ್ಷಿಪ್ರವಾಗಿ ಮತ್ತು ವ್ಯಾಪಕವಾಗಿ ಹೆಚ್ಚಿನ ಜನರನ್ನು ತಲುಪುವ ಗುರಿ ಸಾಧಿಸಲು ಆರೋಗ್ಯಸೇವಾ ವ್ಯವಸ್ಥೆಯನ್ನು ವಿಕೇಂದ್ರಿಕರಿಸಲಾಗಿದೆ. ಇದರ ಫಲಿತವಾಗಿಯೇ ಕೋವಿಡ್-19 ರ ಸಂದರ್ಭದಲ್ಲಿ ವೈಯುಕ್ತಿಕ ಪ್ರಕರಣಗಳನ್ನು ಪತ್ತೆ ಹಚ್ಚಿ ಅದರ ಜಾಡು ಹಿಡಿಯುವುದರಲ್ಲಿ ಮತ್ತು ‘ಸರಣಿ ತುಂಡರಿಸುವ’ ಪ್ರಚಾರ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿವೆ.
ಆರೋಗ್ಯ ಸೇವೆಯ ಗುಣಮಟ್ಟ ಮತ್ತು ಮೂಲಭೂತ ಸೌಕರ್ಯ ಹೆಚ್ಚಿಸಲು ‘ಆರ್ದ್ರ ಮಿಶನ್’ ಮುಖಾಂತರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕುಟುಂಬ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸುವತ್ತ ಹೆಜ್ಜೆ ಹಾಕುತ್ತಿದ್ದೇವೆ. ಸರ್ಕಾರ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತೆ ಇನ್ನಷ್ಟು ಉತ್ತಮ ಹಾದಿಯಲ್ಲಿ ಒಯ್ಯಲು ಯಶಸ್ವಿಯಾಗಿದೆ.
- ಮೂಲ ಲೇಖನ ಕೃಪೆ : ದಿ ಹಿಂದು ಪತ್ರಿಕೆ, ಮಾ.23, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನಗರದ ಪ್ರತಿಷ್ಠಿತ ಶಾಲೆಗಲ್ಲಿ ಒಂದಾದ ಗುರುಕುಲ ಶಾಲೆ (Gurukul School) ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಮ್ಮೆ ತನ್ನ ವರ್ಚಸ್ಸನ್ನು ಸಾಬೀತುಪಡಿಸಿದೆ. ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿ ಮದಿಹಾ ಸಾಧನೆಯ ಶಿಖರದಲ್ಲಿ
ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ಮದಿಹಾ ಅವರು ಒಟ್ಟು ಶೇ. 98 ಅಂಕಗಳನ್ನು ಗಳಿಸುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಾಧನೆಗೈದಿದ್ದಾರೆ. ಈಕೆಯ ಸಾಧನೆಯು ಸಹಪಾಠಿಗಳಿಗೆ ಮತ್ತು ಕಿರಿಯ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಲ್ಲದೇ ಕುಶಾಲ್ ಶೇ. 97 ದ್ವಿತೀಯ ಹಾಗೂ ಸಮರ್ಥ್ 95.5 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ಗಮನ ಸೆಳೆದ ಫಲಿತಾಂಶ: ಈ ಬಾರಿಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಿದೆ.
ಡಿಸ್ಟಿಂಕ್ಷನ್ ಸಾಧಕರು: 15 ವಿದ್ಯಾರ್ಥಿಗಳು ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ.
ಪ್ರಥಮ ಶ್ರೇಣಿ: ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಉತ್ತಮ ಫಲಿತಾಂಶ: ಉಳಿದ ಎಲ್ಲಾ ವಿದ್ಯಾರ್ಥಿಗಳು ಸಹ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶದತ್ತ ದಾಪುಗಾಲು ಹಾಕಿದೆ.
ಯಶಸ್ಸಿನ ಹಿಂದಿನ ಶಕ್ತಿ:
ವಿದ್ಯಾರ್ಥಿಗಳ ಈ ಭವ್ಯ ಸಾಧನೆಗೆ ಶಾಲೆಯ ವ್ಯವಸ್ಥಿತ ಮಾರ್ಗದರ್ಶನವೇ ಕಾರಣ ಎಂದು ಆಡಳಿತ ಮಂಡಳಿ ತಿಳಿಸಿದೆ. ಶಾಲಾ ಕಾರ್ಯದರ್ಶಿ ಅಬ್ದುಲ್ ಸರ್ ಅವರ ನಿರಂತರ ಮಾರ್ಗದರ್ಶನ, ಆಡಳಿತ ಮಂಡಳಿಯ ಬೆಂಬಲ, ಮುಖ್ಯೋಪಾಧ್ಯಾಯರ ಸಮರ್ಥ ನಾಯಕತ್ವ ಹಾಗೂ ಶಿಕ್ಷಕ ವೃಂದದವರ ಅವಿರತ ಪರಿಶ್ರಮ ಈ ಯಶಸ್ಸಿಗೆ ಬುನಾದಿಯಾಗಿದೆ.
ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಕಾರ್ಯದರ್ಶಿ ಅಬ್ದುಲ್, “ವಿದ್ಯಾರ್ಥಿಗಳ ಏಕಾಗ್ರತೆ, ಪೋಷಕರ ಸಹಕಾರ ಮತ್ತು ಶಿಕ್ಷಕರ ಬೋಧನಾ ಶೈಲಿಯಿಂದ ಈ ಮೈಲಿಗಲ್ಲು ಸಾಧ್ಯವಾಗಿದೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಗುರಿಗಳನ್ನು ತಲುಪಲು ಪ್ರೇರಣೆಯಾಗಲಿ,” ಎಂದು ಹಾರೈಸಿದ್ದಾರೆ.
ಶಾಲೆಯ ಈ ಸಾಧನೆಗೆ ಪೋಷಕರು ಮತ್ತು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭಕೋರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.
ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ
-
ದಿನದ ಸುದ್ದಿ6 days agoಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ
-
ದಿನದ ಸುದ್ದಿ7 days agoಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್
-
ದಿನದ ಸುದ್ದಿ4 days agoಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
-
ದಿನದ ಸುದ್ದಿ3 days agoಎಸ್ಎಸ್ಎಲ್ಸಿ ಫಲಿತಾಂಶ| ಗುರುಕುಲ ಶಾಲೆಯ ವಿದ್ಯಾರ್ಥಿಗಳ ಭರ್ಜರಿ ಸಾಧನೆ; ಶೇ. 98 ಅಂಕಗಳೊಂದಿಗೆ ಮದಿಹಾ ಅಗ್ರಸ್ಥಾನ

