ದಿನದ ಸುದ್ದಿ
ಮೀನು ಮಾರಾಟದಿಂದ ಸುದ್ದಿಯಾದ ಹನನ್.ಗೆ ಕೇರಳ ಸಿಎಂ ಭದ್ರತೆ ಭರವಸೆ

ಸುದ್ದಿದಿನ ಡೆಸ್ಕ್
ಕೇರಳದಲ್ಲಿ ಮೀನು ಮಾರಾಟ ಮಾಡುತ್ತಿದ್ದ ಶಾಲಾ ಬಾಲಕಿಯ ವಿಡಿಯೋ ವೈರಲ್ ಆಗಿತ್ತು. ಇದರ ವಿರುದ್ಧ ಕೆಲವರು ಬಾಲಕಿಗೆ ಬೆದರಿಕೆ ಒಡ್ಡಿದ್ದವರಿಗೆ ಕೇರಳ ಮುಖ್ಯಮಂತ್ರಿ ಪಿಣಿರಾಯಿ ವಿಜಯನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಾಲಕಿ ಹಾನನ್ ಹಮಿದ್ ಮೇಲೆ ರೇಪ್ ಮಾಡುವುದಾಗಿ ಹೇಳಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಬಾಲಕಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಿಎಂ, ತನ್ನ ವಿದ್ಯಾಭ್ಯಾಸ ಮುಂದುವರಿಸಲು ಬಾಲಕಿ ಆದಾಯ ಮಾರ್ಗ ಕಂಡುಕೊಂಡಿದ್ದಾಳೆ. ನಿಜಕ್ಕೂ ಇದು ಶ್ಲಾಘನೀಯ ಕಾರ್ಯ. ಕಷ್ಟದ ಹಿನ್ನೆಲೆಯಿಂದ ಬಂದವರಿಗೆ ಮಾತ್ರ ಬಾಲಕಿಯ ಕಷ್ಟ ಅರ್ಥವಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಯಾರು ಬಾಲಕಿ ಗೌರವಕ್ಕೆ ಧಕ್ಕೆ ತರುತ್ತಿದ್ದಾರೋ ಅವರಿಗೆ ಬಾಲಕಿಯ ಸಾಧನೆ ಮನವರಿಕೆ ಆಗುತ್ತಿಲ್ಲ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಹನನ್ ಹಮಿದ್ ಕಾರ್ಯ ಇತರರಿಗೆ ಮಾದರಿಯಾಗಿದ್ದು, ಸರ್ಕಾರ ಬಾಲಕಿಗೆ ಭದ್ರತೆ ನೀಡುತ್ತದೆ. ಅಲ್ಲದೇ, ಸೋಷಿಯಲ್ ಮೀಡಿಯಾದಲ್ಲಿ ಹನನ್ ಮೇಲೆ ಟಾರ್ಗೆಟ್ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಆಡಳಿತ ಸುಧಾರಣಾ ಸಮಿತಿ ಅಧ್ಯಕ್ಷ ವಿಎಸ್ ಅಚ್ಯುತನಂದನ್ ಕೂಡ ಬಾಲಕಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಮಾಡಿದವರ ವಿರುಧ್ಧ ಕೇಸ್ ದಾಖಲಿಸಿಕೊಳ್ಳುವಂತೆ ಸೈಬರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಹನನ್ ಜೀವನದ ಕಷ್ಟಗಳನ್ನು ಹೆಚ್ಚಿನ ಆತ್ಮಸ್ಥೈರ್ಯದೊಂದಿಗೆ ಎದುರಿಸುತ್ತಿದ್ದಾಳೆ. ಬಾಲಕಿಯ ಕಾಂಫಿಡೆನ್ಸ್ ಮೆಚ್ಚಲೇ ಬೇಕಾದುದು. ಅವರ ಗೌರವಕ್ಕೆ ಧಕ್ಕೆ ತರುತ್ತಿರುವ ಕೆಲಸ ಖಂಡನೀಯ. ಶಾಲೆ ಮುಗಿದ ನಂತರ ಶಾಲಾ ಸಮವಸ್ತ್ರದಲ್ಲೇ ಮೀನು ಮಾರುತ್ತಿರುವ ಸುದ್ದಿ ಮಾಧ್ಯಮಗಳಿಂದ ಬಿತ್ತರವಾಗಿದೆ. ಬಾಲಕಿಯ ಕಾರ್ಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ. ಇದೇ ವೇಳೆ ಕೆಲವರು ಇದು ಸತ್ಯಕ್ಕೆ ದೂರವಾದುದು. ತಳಬುಡವಿಲ್ಲದ್ದು ಎಂದು ಅನೇಕ ನಿಂದನೆ, ಬೆದರಿಕೆ, ಟೀಕೆಗಳು ಬಂದಿವೆ. ಆದರೆ, ಶಾಲೆ ಬಾಲಕಿ ಬಡ ಕುಟುಂಬದಿಂದ ಬಂದಿದ್ದು ವಿದ್ಯಾಭ್ಯಾಸಕ್ಕೆ ಆದಾಯ ಗಳಿಸುತ್ತಿರುವ ಶ್ಲಾಘನೀಯ ಕೆಲಸವೆಂದು ಬಾಲಕಿ ಪರ ನಿಂತಿದೆ.
ದಿನದ ಸುದ್ದಿ
ಡಿಎಸ್ಟಿ/ಪಿಹೆಚ್ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಿದ್ದು, ಅರ್ಜಿಯನ್ನು ಆನ್ಲೈನ್ http://ksteps.karnataka.gov.in ಮುಖಾಂತರ ಫೆಬ್ರವರಿ 10, 2021 ರೊಳಗಾಗಿ ಸಲ್ಲಿಸಬೆಕೆಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತರು- ಕೇಂದ್ರ ಸರ್ಕಾರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

ಸುದ್ದಿದಿನ,ನವದೆಹಲಿ : ಇಂದು ನಡೆಯಬೇಕಾಗಿದ್ದ ರೈತ ಮುಖಂಡರು ಮತ್ತು ಕೇಂದ್ರದ ಮಂತ್ರಿಗಳ ನಡುವಿನ 10ನೇ ಸುತ್ತಿನ ಮಾತುಕತೆ ಜ. 20ರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತಡರಾತ್ರಿ ರೈತ ಮುಖಂಡರಿಗೆ ಬರೆದಿರುವ ಪತ್ರದಲ್ಲಿ, ತಳ್ಳಿ ಹಾಕಲಾದ ಕಾರಣಗಳಿಂದಾಗಿ ಇಂದು ಸಭೆ ನಡೆಸಲಾಗುತ್ತಿಲ್ಲ ಎಂದು,’ ಜ. 20ರಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ್ ಭವನದಲ್ಲಿ ಸಭೆ ನಡೆಸಲಾಗುವುದು” ಎಂದು ತಿಳಿಸಲಾಗಿದೆ.
ಮಧ್ಯಪ್ರದೇಶದ ತಮ್ಮ ಕ್ಷೇತ್ರದ ವೀಕ್ಷಣೆಗೆ ತೆರಳಿದ್ದ ಕೃಷಿ ಸಚಿವ ನರೇಂದ್ರ ಸಿಮಗ್ ತೋಮರ್ ಸೋಮವಾರ ತಡರಾತ್ರಿ ದೆಹಲಿಗೆ ಮರಳಿದರು. ಗ್ವಾಲಿಯರ್ನಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರೈತ ಸಂಘಟನೆಗಳು ಕಾಯ್ದೆಗಳಲ್ಲಿರುವ ನಿರ್ದಿಷ್ಟ ರಿಯಾಯಿತಿಗಳ ಕುರಿತು ಚರ್ಚಿಸುವುದಕ್ಕೆ ಮನಸ್ಸು ಮಾಡುತ್ತಿಲ್ಲ. ಪಟ್ಟು ಸಡಿಸಲು ಸಿದ್ಧರೇ ಇಲ್ಲ. ನಾಳೆ ಸಭೆ ಇದೆ. ಅಲ್ಲಿ ರೈತ ಸಂಘಟನೆಗಳು ಪರ್ಯಾಯ ಸಾಧ್ಯತೆಗಳ ಕುರಿತು ಚರ್ಚಿಸುವ ನಂಬಿಕೆ ಇದೆ. ಹಾಗಾದರೆ ನಾವು ಪರಿಹಾರ ಕಂಡುಕೊಳ್ಳಲು ಸಾಧ್ಯ” ಎಂದಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ7 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ6 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!