ಸಿನಿ ಸುದ್ದಿ
ಕೆಜಿಎಫ್ ಒಂದು ಅನನ್ಯ ಅನುಭವ..!

ಕೆಜಿಎಫ್ ಬರಿಗಣ್ಣಿಗೆ ಮಾತ್ರ ಕಾಣುವ, ಕಿವಿಗಳಿಗೆ ಮಾತ್ರ ಕೇಳಿಸುವ ಸಿನಿಮಾ ಅಲ್ಲ. ಕೆಜಿಎಫ್ ಒಂದು ಅನನ್ಯ ಅನುಭವ. ಅದು ಬೇರೆ ಬೇರೆ ರೂಪಗಳಲ್ಲಿ ನಿಮ್ಮನ್ನು ಮುಟ್ಟುತ್ತಿರುತ್ತದೆ, ಒಳಗೊಳಗೆ ಪ್ರವಹಿಸುತ್ತಿರುತ್ತದೆ. ನಿಸ್ಸಂಶಯವಾಗಿ ಕೆಜಿಎಫ್ ಒಂದು ಮಹಾಕಾವ್ಯ. ಪ್ರಶಾಂತ್ ನೀಲ್ ಹೊಸದೇನನ್ನೋ ಮಾಡಿದ್ದಾರೆ, ಅದನ್ನು ನೀವು ನಿಮಗೆ ಸಮಾಧಾನವಾಗುವಂತೆ ವಿವರಿಸಲಾರಿರಿ. ಮೊದಲೇ ಹೇಳಿದಂತೆ ಇದೊಂದು ಅನುಭವ, ಅನುಭವಿಸಿಯೇ ತೀರಬೇಕು.
ಯಶ್ ಈ ಇಡಿ ಸಿನಿಮಾವನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿದ್ದಾರೆ. ಅವರು ಪ್ರತಿಫ್ರೇಮ್ ನಲ್ಲೂ ಕಣ್ಣಿಗೆ ಹಬ್ಬ. ಆಗಾಗ ನಿಮ್ಮ ಕೈಗಳ ಮೇಲಿನ ರೋಮಗಳು ಎದ್ದುನಿಂತರೆ ಅದಕ್ಕೆ ಯಶ್ ಕಾರಣ. ಈ ಸಿನಿಮಾದಲ್ಲಿ ಯಶ್ ಹೊರತಾಗಿ ಇನ್ನೊಬ್ಬರನ್ನು ಆ ಪಾತ್ರದಲ್ಲಿ ಕಲ್ಪಿಸಿಕೊಳ್ಳಲಾಗದು. ಯಶ್ ಈ ಸಿನಿಮಾಗಾಗಿಯೇ ಕಡೆದಿಟ್ಟ ವಿಗ್ರಹ. ಅವರು ಇಲ್ಲಿ ಬರಿಯ ಹೀರೋ ಮಾತ್ರವಲ್ಲ ಸೂಪರ್ ಹೀರೋ, ಥೇಟ್ ನಮ್ಮ ಸ್ಪೈಡರ್ ಮ್ಯಾನ್, ಸೂಪರ್ ಮ್ಯಾನ್ ಗಳ ಹಾಗೆ. ಸೂಪರ್ ಹೀರೋಗಳಿಗಾದರೂ ನಾಲ್ಕು ಏಟು ಬೀಳಬಹುದು, ಕೆಳಗೆ ಬೀಳಬಹುದು. ರಾಕಿ ಭಾಯ್ ನಮ್ಮ ಫ್ಯಾಂಟಸಿ ಜಗತ್ತಿನ ದೊರೆ, ಅವನಿಂದ ಅಸಾಧ್ಯವಾದದ್ದು ಏನೂ ಇಲ್ಲ, ಅವನನ್ನು ಯಾರಿಂದಲೂ ಮಣಿಸಲಾಗದು.
ಪ್ರಶಾಂತ್ ನೀಲ್ ಗೆ ಆಕ್ಷನ್ ಇಷ್ಟವಿರಬಹುದು. ಆದರೆ ತೆಲುಗು ಸಿನಿಮಾಗಳ ಹಾಗೆ ಭೀಬತ್ಸ ದೃಶ್ಯಗಳು ಇಲ್ಲಿಲ್ಲ. ಕ್ರೌರ್ಯ ಕಣ್ಣಿಗೆ ರಾಚಿಸಿದರೂ ಅದು ನಮ್ಮ ಎದೆಗೆ ಇಳಿಯುವುದನ್ನು ತಡೆದುಬಿಡುತ್ತಾರೆ ಪ್ರಶಾಂತ್. ಒಬ್ಬ ಸಣ್ಣ ಹುಡುಗನ ದಾರುಣ ಕೊಲೆಯೊಂದನ್ನು ಯಶ್ ಅವರ ಅದ್ಭುತ ರಿಯಾಕ್ಷನ್ ಮತ್ತು ಒಂದಿಡೀ ಸಮೂಹದ ದೊಡ್ಡ ನಿಟ್ಟುಸಿರಿನೊಂದಿಗೆಯೇ ತೋರಿಸಿಬಿಡುತ್ತಾರೆ ಅವರು. ನೋಡಿ ನಿಟ್ಟುಸಿರಾಗೋ ಸರದಿ ನಮ್ಮದಷ್ಟೆ. ನಿರ್ದೇಶಕರ ತಂಡ ಅಸಾಧ್ಯ ಕೆಲಸಗಳನ್ನು ಮಾಡಿದೆ. ಕಥೆಗೆ ಸಂಬಂಧಿಸಿದ ರಿಸರ್ಚ್ ಗಳಿಂದ ಹಿಡಿದು ಒಂದೇ ಒಂದು ದೃಶ್ಯವೂ ತರ್ಕಹೀನವಾಗದಂತೆ, ಬಾಲಿಷ ಎನಿಸದಂತೆ, ಕ್ಲೀಷೆಯಾಗದಂತೆ ಈ ತಂಡ ಪರಿಶ್ರಮ ವಹಿಸಿದೆ.
ಸಿನಿಮಾದ ಸ್ಕ್ರೀನ್ ಪ್ಲೇ ಈ ಹೊತ್ತಿನವರೆಗಿನ ಅದ್ಭುತ ಪ್ರಯೋಗಗಳಲ್ಲಿ ಒಂದು. ಪ್ರಶಾಂತ್ ನೀಲ್ ಕಸುಬುದಾರಿಕೆಗೆ ಜವಾಬೇ ಇಲ್ಲ. ಈ ಸ್ಕ್ರೀನ್ ಪ್ಲೇಗೆ ನಿಜವಾದ ಆತ್ಮವನ್ನು ತುಂಬಿರುವ ಸಂಕಲನಕಾರ ಶ್ರೀಕಾಂತ್ ತನ್ನ ಕತ್ತರಿಯನ್ನೂ ಒಂದು ಪಾತ್ರವಾಗಿಸಿದ್ದಾನೆ. ಎರಡನೇ ಚಾಪ್ಟರಿನ ಒಂದೆರಡು ಸೀನ್ ಗಳನ್ನು ಕ್ಲೈಮಾಕ್ಸ್ ಗೂ ಮುನ್ನ ಕಾಣಿಸುವ ಎದೆಗಾರಿಕೆ ಇಲ್ಲಿ ಪ್ರದರ್ಶನಗೊಂಡಿದೆ. ಒಂದೇ ಒಂದು ಕ್ಷಣ ನೀವು ಅತ್ತಿತ್ತ ತಿರುಗದಂತೆ ಮಾಡುವ ಕಲೆಗಾರಿಕೆ ಇಲ್ಲಿ ಸಿದ್ಧಿಸಿದೆ.
ಸಿನಿಮಾದ ಛಾಯಾಗ್ರಹಣ ಈ ದೇಶಕ್ಕೇ ಅಪರೂಪದ್ದು. ದೃಶ್ಯಗಳನ್ನು ನ ಭೂತೋ ಎನ್ನುವಂತೆ ಕಟ್ಟಿಕೊಡುವಲ್ಲಿ ಭುವನ್ ಗೌಡ ಅವರಿಗಿರುವ ರಾಕ್ಷಸ ಹಸಿವು ಎದ್ದುಕಾಣುತ್ತದೆ. ಪ್ರತಿಯೊಂದು ಫ್ರೇಮನ್ನೂ ಅವರು ತಾವೇ ಬರೆದ ಚಿತ್ರದಂತೆ ಸೆರೆಹಿಡಿದಿದ್ದಾರೆ. ಸೆಕೆಂಡ್ ಹಾಫ್ ನ ಪ್ರತಿಯೊಂದು ದೃಶ್ಯವೂ ದೃಶ್ಯಕಾವ್ಯಗಳೇ. ಪ್ರತಿ ಫ್ರೇಮ್ ನಿಮ್ಮ ಜತೆ ಮಾತಿಗೆ ಇಳಿಯುತ್ತದೆ.
ರವಿ ಬಸ್ರೂರು ಕೆಜಿಎಫ್ ನ ಮತ್ತೊಬ್ಬ ಹೀರೋ. ಅವರ ಹಿನ್ನೆಲೆ ಸಂಗೀತ ಸಿನಿಮಾದಿಂದ ಒಂದು ಮಿಲಿಮೀಟರ್ ಕೂಡ ಆಚೆ ಹೋಗಿ ನಿಲ್ಲುವುದಿಲ್ಲ. ಪ್ರತಿ ದೃಶ್ಯಗಳ ಜತೆ ಬ್ಲೆಂಡ್ ಆಗಿ ವಿಶೇಷ ಅನುಭೂತಿ ಉಕ್ಕಿಸುತ್ತದೆ. ಹಾಡುಗಳಿಗೂ ಇದೇ ಮಾತು ಹೇಳಬೇಕು.
ಶಿವು ಕುಮಾರ್ ಎಂಬ ಆರ್ಟ್ ಡೈರೆಕ್ಟರ್ ಬಗ್ಗೆ ಏನು ಹೇಳಿದರೂ ಕಡಿಮೆಯೇ. ಸೆಕೆಂಡ್ ಹಾಫ್ ನಲ್ಲಿ ಅವರು ಹಾಕಿರುವ ಸೆಟ್ ಗಳನ್ನು ನೋಡಿ ಬೇರೆ ಸಿನಿಮಾ ನಿರ್ಮಾಪಕದ ಎದೆ ನಡುಗಿ ಹೋಗಿರಬಹುದು. ಮಾರಿ ಪೂಜೆಯ ಸೆಟ್ ಅಂತೂ ಅಸಾಧಾರಣ. ಒಮ್ಮೆ ಎದ್ದು ನಿಂತು ಕ್ಲಾಪ್ ಮಾಡಬೇಕೆನಿಸುತ್ತದೆ. ಶಿವು ಮತ್ತು ಅವರ ಹುಡುಗರ ತಂಡ ಕೆಜಿಎಫ್ ಕನಸಿನ ಬಹುಮಖ್ಯ ಪಾತ್ರಧಾರಿಗಳು.
ಯಶ್ ಹೊರತಾಗಿ ಈ ಸಿನಿಮಾದಲ್ಲಿ ಸಾಕಷ್ಟು ಪಾತ್ರಗಳು ತೆರೆಯ ಮೇಲೆ ಅಪ್ಪಳಿಸುತ್ತವೆ. ಅವುಗಳಲ್ಲಿ ಕೆಲವು ಮುಂದಿನ ಚಾಪ್ಟರ್ ಗೆಂದೇ ಮೀಸಲಾಗಿಟ್ಟ ಟ್ರೇಲರ್ ಗಳು! ಎಲ್ಲರೂ ನಿರ್ದೇಶಕರ ನಟರುಗಳೇ! ನಿಮ್ಮ ಕಣ್ಣುಗಳಿಂದಲೇ ಹೆಚ್ಚು ಮಾತಾಡಿ ಎಂದು ಪ್ರಶಾಂತ್ ನೀಲ್ ಈ ಪಾತ್ರಗಳಿಗೆ ಹೇಳಿದಂತಿದೆ. ಆ ಪಾತ್ರಗಳು ಚಾಚೂ ತಪ್ಪದೆ ಹಾಗೇ ಮಾಡಿವೆ. ಹಿರಿಯ ನಟ ಅನಂತ್ ನಾಗ್ ಸಿನಿಮಾದ ಘನತೆಯನ್ನು ಹೆಚ್ಚಿಸಿದ್ದಾರೆ. ಪ್ರಶಾಂತ್ ಹೆಚ್ಚುಗಾರಿಕೆ ಏನೆಂದರೆ ಸಾವಿರಾರು ಜೂನಿಯರ್ ಆಕ್ಟರ್ ಗಳಿಂದಲೂ ಅವರು ಆಕ್ಟಿಂಗ್ ಮಾಡಿಸಿದ್ದಾರೆ. ಜೂನಿಯರ್ ಗಳೂ ಪಳಗಿದ ನಟರಂತೆಯೇ ನಟಿಸಿದ್ದಾರೆ.
ಅತ್ಯುತ್ತಮ ಸಿನಿಮಾ, ನಿರ್ದೇಶನ, ಹೀರೋ, ಸಂಗೀತ, ಕಲಾ ನಿರ್ದೇಶನ, ಸಂಕಲನ ಹೀಗೆ ಕನಿಷ್ಠ 6 ವಿಭಾಗಗಳಲ್ಲಾದರೂ ಕೆಜಿಎಫ್ ಗೆ ಆಸ್ಕರ್ ಪ್ರಶಸ್ತಿ ಬರಲೇಬೇಕು. ಯಾಕೆಂದರೆ ಈ ಸಿನಿಮಾ ಸ್ಪರ್ಧೆ ನೀಡುತ್ತಿರುವುದು ಭಾರತೀಯ ಸಿನಿಮಾಗಳ ಜತೆಯಲ್ಲ, ಹಾಲಿವುಡ್ ಸಿನಿಮಾಗಳ ಜತೆ. ಸಿನಿಮಾದ ಕ್ರಾಫ್ಟ್ ಹಾಗಿದೆ. ಇದು ಬಾಹುಬಲಿಯನ್ನು ಮೀರಿಸುವ ಸಿನಿಮಾವೇ ಎಂದು ಯಾರಾದರೂ ಕೇಳಿದರೆ ನನ್ನ ಉತ್ತರ ಹೌದು ಎಂಬುದೇ ಆಗಿರುತ್ತದೆ.
ಕೆಜಿಎಫ್ ಗಿಂತ ಅದ್ಭುತವಾದ ಕನ್ನಡ ಅಥವಾ ಭಾರತೀಯ ಸಿನಿಮಾ ಬಂದಿಲ್ಲವೆಂದಲ್ಲ, ಬಂದಿವೆ. ಆದರೆ ಕೆಜಿಎಫ್ ಸಿನಿಮಾದ ಕ್ರಾಫ್ಟ್ ಹಿಂದೆಂದೂ ಬಂದಿರಲು ಸಾಧ್ಯವಿಲ್ಲ. ಇಷ್ಟೊಂದು ಪರಿಶ್ರಮ ಮತ್ತು ಕನಸುಗಳನ್ನು ತೊಡಗಿಸಿ ಮಾಡಿದ ಸಿನಿಮಾ ಇನ್ನೊಂದಿರಲು ಸಾಧ್ಯವಿಲ್ಲ. ಇಡೀ ತಂಡ ಸಿನಿಮಾವನ್ನು ಜೀವಿಸಿಬಿಟ್ಟಿದೆ ಎಂದರೆ ಅದು ಅತಿಶಯೋಕ್ತಿ ಅಲ್ಲ. ಕನ್ನಡ ಚಿತ್ರರಂಗವನ್ನು ಹೊಸ ದಾರಿಗೆ ಎಳೆದೊಯ್ದಿದ್ದಾರೆ ಪ್ರಶಾಂತ್ ಮತ್ತು ಯಶ್ ಜೋಡಿ. ಅವರೇ ಹೇಳಿದಂತೆ ಇದು ಅವರ ಕನಸು ಮಾತ್ರವಲ್ಲ, ನಮ್ಮೆಲ್ಲರ ಕನಸು. ನಮ್ಮ ಕನಸನ್ನು ಅವರು ನಿಜವಾಗಿಸಿದ್ದಾರೆ.
ಚಿತ್ರನಿರ್ಮಾಪಕ ವಿಜಯ್ ಕಿರಗಂದೂರು ಎಂಬ ಮಹಾಸಾಹಸಿಗೆ ಕೋಟಿಗಳಂತೂ ಹರಿದುಬರಲಿವೆ. ಆದರೆ ನಮ್ಮ ಕೋಟಿ ಕೋಟಿ ಚಪ್ಪಾಳೆಗಳು ಸಲ್ಲಲೇಬೇಕು.
ಸಿನಿಮಾ ಕಥೆ, ಸಂಭಾಷಣೆ, ಹೂರಣದ ಬಗ್ಗೆ ಏನನ್ನೂ ಹೇಳಿಲ್ಲ. ಹೇಳಬಾರದು ಕೂಡ. ಯಾಕೆಂದರೆ ಇಂಥ ಸಿನಿಮಾಗಳನ್ನು ಯಾವ ರಿವ್ಯೂ ಕೂಡ ಕೇಳದೇ ಹೋಗಿನೋಡಬೇಕು.
– ದಿನೇಶ್ ಕುಮಾರ್ ಎಸ್.ಸಿ. (ದಿನೂ)

ಸಿನಿ ಸುದ್ದಿ
ಕನ್ನಡವನ್ನ ಕಿತ್ತುಕೊಳ್ಳೋ ಧೈರ್ಯ ಯಾರಿಗಿದೆ..? ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎನ್ನಿ : ಕನ್ನಡ ಪರ ಹೋರಾಟಗಾರರಿಗೆ ಕಿಚ್ಚನ ಸಲಹೆ

ಸುದ್ದಿದಿನ, ಬೆಂಗಳೂರು : ಸಂಘಟನೆಯವರ ಹಿಂದೆ ನೂರಾರು ಜನ ಬರ್ತೀರಾ, ಆದರೆ ನಮ್ಮಂಥ ಕಲಾವಿದರಿಗೆ ಅಭಿಮಾನಿಗಳಷ್ಟೇ. ಅವರು ರಾಜ್ಯದ ಮೂಲೆಗಳಲ್ಲಿ ಇರ್ತಾರೆ. ನೀವು ನಮ್ಮನ್ನೆನ್ನಾದ್ರೂ ಹೊಡೆಯೋಕೆ ಬಂದ್ರೆ ನಾವೊಬ್ಬರೇ ಸಿಕ್ತೀವಿ. ಹಾಗಾಗಿ ಕೆಲವರು ಏನಾದರೂ ಸ್ಟೆಪ್ಸ್ ತೆಗೆದುಕೊಂಡಾಗ ಸ್ವಲ್ಪ ಯೋಚಿಸಿ ಎಂದು ಕನ್ನಡಪರ ಹೋರಾಟಗಾರರಿಗೆ ಕಿಚ್ಚ ಸುದೀಪ್ ಸಲಹೆ ನೀಡುವ ಮೂಲಕ ಗಮನಸೆಳೆದಿದ್ದಾರೆ.
ರಾಮನಗರ ಜಿಲ್ಲೆ ಬಿಡದಿಯ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಮಾತನಾಡಿದರು. ಬುರ್ಜ್ ಕಲೀಫಾದಲ್ಲಿ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ಜತೆಗೆ ಕನ್ನಡದ ಬಾವುಟ ಪ್ರದರ್ಶನ ಕಂಡ ಹಿನ್ನೆಲೆ ಕಿಚ್ಚ ಸುದೀಪ್ ಅವರಿಗೆ ಕನ್ನಡಪರ ಹೋರಾಟಗಾರರು ಸನ್ಮಾನವನ್ನು ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಿದರು.
ಇದನ್ನೂ ಓದಿ | ಪಡಿತರ ಚೀಟಿದಾರರು ಕೂಡಲೇ ಇ-ಕೆವೈಸಿ ಆಧಾರ್ ಬಯೋ ದೃಢೀಕರಣ ಮಾಡಿಸಿಕೊಳ್ಳಿ
ನಮ್ಮಲ್ಲಿ ಕನ್ನಡದ ವಿಚಾರವಾಗಿ ಯಾವುದೇ ಗೊಂದಲವಿಲ್ಲ. ಆದರೆ ಕನ್ನಡ ಪರವಾಗಿ ಇರುವ ಕೆಲ ಕನ್ನಡಪರ ಸಂಘಟನೆಗಳಲ್ಲಿಯೇ ಗೊಂದಲವಿದ್ದು, ನೀವು ಮೊದಲು ನಿಮ್ಮ ಗೊಂದಲವನ್ನ ಸರಿಪಡಿಸಿಕೊಳ್ಳಿ. ಕನ್ನಡದ ಶಾಲು ಹಾಕಿ ನೀವು ಮನೆಗೆ ಬಂದರೆ ಖುಷಿ ಪಡೋದಾ, ಭಯ ಪಡೋದಾ ಗೊತ್ತಾಗಲ್ಲ ನನಗೆ. ಜೊತೆಗೆ ನನಗೆ ಉಗಿಯೋಕೆ ಬಂದಿದ್ದಾರೋ ಅಥವಾ ಹೊಗಳೋಕೆ ಬಂದಿದಿರೋ ಅಂತಾನೂ ಗೊತ್ತಾಗಲ್ಲ ಎಂದರು.
ಕನ್ನಡವನ್ನ ಉಳಿಸಿ ಎಂದು ಹೇಳ್ತೀರಾ ಅದು ತಪ್ಪು. ಯಾಕೆಂದರೆ ಕನ್ನಡವನ್ನ ಕಿತ್ತುಕೊಂಡವರು ಯಾರು..? ಯಾರಿಗಿದೆ ಆ ಧೈರ್ಯ..? ಎಂದು ಕಿಚ್ಚ ಗುಡುಗಿದರು. ಜೊತೆಗೆ ಕನ್ನಡಕ್ಕೆ ಇರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ. ಹಾಗಾಗಿ ಯಾವನಿಗಿದೆ ಕನ್ನಡವನ್ನ ಕಿತ್ತುಕೊಳ್ಳುವ ತಾಕತ್ತು, ಬರೋಕೆ ಹೇಳಿ.
ಆದರೆ ಇಲ್ಲಿ ಬೇರೆ ಭಾಷೆ ಜಾಸ್ತಿಯಾಗಿರೋದಕ್ಕೆ ಕಾರಣ ನೀವೇ ಯೋಚಿಸಿ, ಅರ್ಥ ಸಿಗಲಿದೆ. ಕನ್ನಡದ ಮೇಲೆ ಅಭಿಮಾನ ಇಲ್ಲಾಂದ್ರೆ ಬಿಟ್ಟಾಕಿ ಅವರನ್ನ. ಅಭಿಮಾನ ಇರೋರನ್ನ ಗುರುತಿಸಿ ಬೆಳೆಸಿ. ಕನ್ನಡ ಉಳಿಸಿ ಅನ್ನಬೇಡಿ, ಕನ್ನಡ ಬೆಳೆಸಿ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ

ಸುದ್ದಿದಿನ,ದಾವಣಗೆರೆ:ಇತ್ತೀಚಿನ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಕೊಟ್ಟ ಮಾತಿನಂತೆ ನಡೆದ ಚಿತ್ರ ನಟ ದರ್ಶನ್ ಅವರು ಮಂಗಳವಾರ ಮಾಜಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಕುದುರೆಯ ತಡಿ ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.
ಹುಬ್ಬಳ್ಳಿಯಲ್ಲಿ ರಾಬರ್ಟ್ ಸಿನಿಮಾದ ಪ್ರೀ ರಿಲೀಸಿಂಗ್ ಇವೆಂಟ್ ಮುಗಿಸಿದ ನಟ ದರ್ಶನ್ ದಾವಣಗೆರೆಗೆ ಭೇಟಿ ನೀಡಿ ಮಲ್ಲಿಕಾರ್ಜುನ ಅವರನ್ನು ಸೌಹಾರ್ದ ಮಾತುಕತೆ ನಡೆಸಿದರು.
ಕಾಂಗ್ರೆಸ್ ನಾಯಕ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಒಡೆತನದ ಬಾಪೂಜಿ ಅತಿಥಿ ಗೃಹಕ್ಕೆ ತೆರಳಿದ ವೇಳೆ ನಟರಾದ ಚಿಕ್ಕಣ್ಣ, ವಿನೋದ್ ಪ್ರಭಾಕರ್, ರವಿಶಂಕರ್ ಕೂಡ ಜೊತೆಗಿದ್ದರು.
ಮೊದಲಿನಿಂದಲೂ ಎಸ್.ಎಸ್.ಮಲ್ಲಿಕಾರ್ಜುನ್ಗೆ ನಟ ದರ್ಶನ್ ಆಪ್ತರಾಗಿದ್ದು, ಕಳೆದ ಬಾರಿ ದರ್ಶನ್ಗೆ ಮಲ್ಲಿಕಾರ್ಜುನ್ ಕುದುರೆಯೊಂದನ್ನ ಉಡುಗೊರೆಯಾಗಿ ನೀಡಿದ್ದರು.
ಅಮೇರಿಕಾದಿಂದ ತಂದ್ದಿದ ಕುದುರೆಯ ತಡಿ (ಜೀನ್ )ನನ್ನು ಉಡುಗೊರೆಯಾಗಿ ನೀಡಿದರು.ನಂತರ ಮಲ್ಲಿಕಾರ್ಜುನ್ ರವರ ಒಡೆತನದ ಮುದೋಳದ ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ 20 ಲಕ್ಷ ಟನ್ ಕಬ್ಬ ಅರೆದಿದ್ದು, ಮಲ್ಲಿಕಾರ್ಜುನ ಅವರನ್ನು ದರ್ಶನ್ ಅವರು ರೈತರ ಪರವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಜಿ.ಎಸ್.ಮಂಜುನಾಥ್ ಗಡಿಗುಡಾಳ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಬಿ.ಕೆ.ಪರಶುರಾಮ ಸೇರಿದಂತೆ ಮಲ್ಲಿಕಾರ್ಜುನ ಮತ್ತು ದರ್ಶನ್ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಸಿನಿ ಸುದ್ದಿ
ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!

ಸುದ್ದಿದಿನ ಡೆಸ್ಕ್ : ಕನ್ನಡದ ಬಹುನಿರೀಕ್ಷಿತ ಸಿನೆಮಾ ಡಿ ಬಾಸ್ ತೂಗುದೀಪ ದರ್ಶನ್ ಅಭಿನಯದ ರಾಬರ್ಟ್. ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ತೆಲುಗು ಅವತರಣಿಕೆಯ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಂದ್ರಪ್ರದೇಶದದಲ್ಲೂ ರಾಬರ್ಟ್ ತೆರೆಗೆ ಸಿದ್ಧಾವಾಗಿದ್ದಾನೆ.
ತರುಣ್ ಸುಧೀರ್ ಈ ಸಿನೆಮಾದ ನಿರ್ದೇಶನ ಮಾಡಿದ್ದು, ಉಮಾಪತಿ ಅವರು ಹಣ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಸಿನೆಮಾದ ಮೊದಲ ಹಾಡು ಇದೀಗ ಯ್ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಡಿ ಬಾಸ್ ಗೆ ನಾಯಕಿಯಾಗಿ ಆಶಾ ಭಟ್ ಜತೆಯಾಗಿದ್ದು, ಚಿಕ್ಕಣ್ಣ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ಧಾರೆ.
Here comes the 1st video track #BabyDanceFloorReady from our movie #Roberrt. Watch and share your thoughts 🙂https://t.co/mNX5RLUGa5@UmapathyFilms @TharunSudhir @StarAshaBhat @aanandaaudio pic.twitter.com/7LS2r0pePy
— Darshan Thoogudeepa (@dasadarshan) February 28, 2021
ನಮ್ಮ #Roberrt ಚಿತ್ರದ ಮೊದಲ ವಿಡಿಯೋ ಸಾಂಗ್ #BabyDanceFloorReady ಈಗ ನಿಮ್ಮ ಮುಂದೆ. ನೋಡಿ ನಿಮ್ಮ ಅನಿಸಿಕೆ ಹಂಚಿಕೊಳ್ಳಿhttps://t.co/8Zjsf8DN72@UmapathyFilms @TharunSudhir @StarAshaBhat @aanandaaudio pic.twitter.com/IaDVLdk4yh
— Darshan Thoogudeepa (@dasadarshan) February 28, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ6 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ಬಹಿರಂಗ3 days ago
ಗಾಳಿಪಟ ವೇಗದ ರಾಜಕುಮಾರ ‘ಬೀರ್ ಚಿಲಾರಾಯ್’..!
-
ನಿತ್ಯ ಭವಿಷ್ಯ5 days ago
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ
-
ನಿತ್ಯ ಭವಿಷ್ಯ5 days ago
ಜ್ಯೋತಿಷ್ಯಶಾಸ್ತ್ರ ಅಥವಾ ನಿಮ್ಮ ಜನ್ಮಕುಂಡಲಿ ಪ್ರಕಾರ ಎಂಥಾ ಗುಣವುಳ್ಳ ವ್ಯಕ್ತಿ ಜೊತೆ ಮದುವೆ ಕಾರ್ಯ ಆಗುವುದು?ಕಂಕಣಬಲ ಕೂಡಿ ಬರಲು ಏನು ಮಾಡಬೇಕು?
-
ದಿನದ ಸುದ್ದಿ5 days ago
ಕೊಟ್ಟ ಮಾತಿನಂತೆ ನಡೆದ ಡಿ ಬಾಸ್ ದರ್ಶನ್;ಕುದುರೆಯ ತಡಿ ನೀಡಿ, ಎಸ್.ಎಸ್.ಮಲ್ಲಿಕಾರ್ಜುನಗೆ ಕೃತಜ್ಞತೆ