Connect with us

ಸಿನಿ ಸುದ್ದಿ

ಕೆಜಿಎಫ್ ಒಂದು ಅನನ್ಯ ಅನುಭವ..!

Published

on

ಕೆಜಿಎಫ್ ಬರಿಗಣ್ಣಿಗೆ ಮಾತ್ರ ಕಾಣುವ, ಕಿವಿಗಳಿಗೆ ಮಾತ್ರ ಕೇಳಿಸುವ ಸಿನಿಮಾ ಅಲ್ಲ. ಕೆಜಿಎಫ್ ಒಂದು ಅನನ್ಯ ಅನುಭವ. ಅದು ಬೇರೆ ಬೇರೆ ರೂಪಗಳಲ್ಲಿ‌ ನಿಮ್ಮನ್ನು ಮುಟ್ಟುತ್ತಿರುತ್ತದೆ, ಒಳಗೊಳಗೆ ಪ್ರವಹಿಸುತ್ತಿರುತ್ತದೆ. ನಿಸ್ಸಂಶಯವಾಗಿ ಕೆಜಿಎಫ್ ಒಂದು ಮಹಾಕಾವ್ಯ. ಪ್ರಶಾಂತ್ ನೀಲ್ ಹೊಸದೇನನ್ನೋ ಮಾಡಿದ್ದಾರೆ, ಅದನ್ನು‌‌ ನೀವು ನಿಮಗೆ ಸಮಾಧಾನವಾಗುವಂತೆ ವಿವರಿಸಲಾರಿರಿ. ಮೊದಲೇ ಹೇಳಿದಂತೆ ಇದೊಂದು ಅನುಭವ, ಅನುಭವಿಸಿಯೇ ತೀರಬೇಕು.

ಯಶ್ ಈ ಇಡಿ ಸಿನಿಮಾವನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿದ್ದಾರೆ. ಅವರು ಪ್ರತಿಫ್ರೇಮ್ ನಲ್ಲೂ ಕಣ್ಣಿಗೆ ಹಬ್ಬ. ಆಗಾಗ ನಿಮ್ಮ ಕೈಗಳ ಮೇಲಿನ ರೋಮಗಳು ಎದ್ದುನಿಂತರೆ ಅದಕ್ಕೆ ಯಶ್ ಕಾರಣ. ಈ ಸಿನಿಮಾದಲ್ಲಿ ಯಶ್ ಹೊರತಾಗಿ ಇನ್ನೊಬ್ಬರನ್ನು ಆ ಪಾತ್ರದಲ್ಲಿ ಕಲ್ಪಿಸಿಕೊಳ್ಳಲಾಗದು. ಯಶ್ ಈ ಸಿನಿಮಾಗಾಗಿಯೇ ಕಡೆದಿಟ್ಟ ವಿಗ್ರಹ. ಅವರು ಇಲ್ಲಿ ಬರಿಯ ಹೀರೋ ಮಾತ್ರವಲ್ಲ ಸೂಪರ್ ಹೀರೋ, ಥೇಟ್ ನಮ್ಮ ಸ್ಪೈಡರ್ ಮ್ಯಾನ್, ಸೂಪರ್ ಮ್ಯಾನ್ ಗಳ ಹಾಗೆ. ಸೂಪರ್ ಹೀರೋಗಳಿಗಾದರೂ ನಾಲ್ಕು ಏಟು ಬೀಳಬಹುದು, ಕೆಳಗೆ ಬೀಳಬಹುದು. ರಾಕಿ ಭಾಯ್ ನಮ್ಮ ಫ್ಯಾಂಟಸಿ ಜಗತ್ತಿನ ದೊರೆ, ಅವನಿಂದ ಅಸಾಧ್ಯವಾದದ್ದು ಏನೂ ಇಲ್ಲ, ಅವನನ್ನು ಯಾರಿಂದಲೂ ಮಣಿಸಲಾಗದು.

ಪ್ರಶಾಂತ್ ನೀಲ್ ಗೆ ಆಕ್ಷನ್ ಇಷ್ಟವಿರಬಹುದು. ಆದರೆ ತೆಲುಗು‌ ಸಿನಿಮಾಗಳ ಹಾಗೆ ಭೀಬತ್ಸ ದೃಶ್ಯಗಳು ಇಲ್ಲಿಲ್ಲ. ಕ್ರೌರ್ಯ ಕಣ್ಣಿಗೆ ರಾಚಿಸಿದರೂ ಅದು ನಮ್ಮ ಎದೆಗೆ ಇಳಿಯುವುದನ್ನು ತಡೆದುಬಿಡುತ್ತಾರೆ‌ ಪ್ರಶಾಂತ್. ಒಬ್ಬ ಸಣ್ಣ ಹುಡುಗನ ದಾರುಣ ಕೊಲೆಯೊಂದನ್ನು ಯಶ್ ಅವರ ಅದ್ಭುತ ರಿಯಾಕ್ಷನ್ ಮತ್ತು ಒಂದಿಡೀ ಸಮೂಹದ ದೊಡ್ಡ ನಿಟ್ಟುಸಿರಿನೊಂದಿಗೆಯೇ ತೋರಿಸಿಬಿಡುತ್ತಾರೆ ಅವರು. ನೋಡಿ ನಿಟ್ಟುಸಿರಾಗೋ ಸರದಿ ನಮ್ಮದಷ್ಟೆ. ನಿರ್ದೇಶಕರ ತಂಡ ಅಸಾಧ್ಯ ಕೆಲಸಗಳನ್ನು ಮಾಡಿದೆ. ಕಥೆಗೆ ಸಂಬಂಧಿಸಿದ ರಿಸರ್ಚ್ ಗಳಿಂದ ಹಿಡಿದು ಒಂದೇ ಒಂದು ದೃಶ್ಯವೂ ತರ್ಕಹೀನವಾಗದಂತೆ, ಬಾಲಿಷ‌ ಎನಿಸದಂತೆ, ಕ್ಲೀಷೆಯಾಗದಂತೆ ಈ ತಂಡ ಪರಿಶ್ರಮ ವಹಿಸಿದೆ.

ಸಿನಿಮಾದ ಸ್ಕ್ರೀನ್ ಪ್ಲೇ ಈ ಹೊತ್ತಿನವರೆಗಿನ ಅದ್ಭುತ ಪ್ರಯೋಗಗಳಲ್ಲಿ ಒಂದು. ಪ್ರಶಾಂತ್ ನೀಲ್ ಕಸುಬುದಾರಿಕೆಗೆ ಜವಾಬೇ ಇಲ್ಲ. ಈ ಸ್ಕ್ರೀನ್ ಪ್ಲೇಗೆ ನಿಜವಾದ ಆತ್ಮವನ್ನು ತುಂಬಿರುವ ಸಂಕಲನಕಾರ ಶ್ರೀಕಾಂತ್ ತನ್ನ ಕತ್ತರಿಯನ್ನೂ ಒಂದು ಪಾತ್ರವಾಗಿಸಿದ್ದಾನೆ. ಎರಡನೇ ಚಾಪ್ಟರಿನ ಒಂದೆರಡು ಸೀನ್ ಗಳನ್ನು ಕ್ಲೈಮಾಕ್ಸ್ ಗೂ ಮುನ್ನ ಕಾಣಿಸುವ ಎದೆಗಾರಿಕೆ ಇಲ್ಲಿ ಪ್ರದರ್ಶನಗೊಂಡಿದೆ. ಒಂದೇ ಒಂದು ಕ್ಷಣ ನೀವು ಅತ್ತಿತ್ತ ತಿರುಗದಂತೆ ಮಾಡುವ ಕಲೆಗಾರಿಕೆ ಇಲ್ಲಿ ಸಿದ್ಧಿಸಿದೆ.‌

ಸಿನಿಮಾದ ಛಾಯಾಗ್ರಹಣ ಈ ದೇಶಕ್ಕೇ ಅಪರೂಪದ್ದು. ದೃಶ್ಯಗಳನ್ನು ನ ಭೂತೋ ಎನ್ನುವಂತೆ ಕಟ್ಟಿಕೊಡುವಲ್ಲಿ ಭುವನ್ ಗೌಡ ಅವರಿಗಿರುವ ರಾಕ್ಷಸ ಹಸಿವು ಎದ್ದುಕಾಣುತ್ತದೆ. ಪ್ರತಿಯೊಂದು ಫ್ರೇಮನ್ನೂ ಅವರು ತಾವೇ ಬರೆದ ಚಿತ್ರದಂತೆ ಸೆರೆಹಿಡಿದಿದ್ದಾರೆ. ಸೆಕೆಂಡ್ ಹಾಫ್ ನ ಪ್ರತಿಯೊಂದು ದೃಶ್ಯವೂ ದೃಶ್ಯಕಾವ್ಯಗಳೇ. ಪ್ರತಿ ಫ್ರೇಮ್ ನಿಮ್ಮ ಜತೆ ಮಾತಿಗೆ ಇಳಿಯುತ್ತದೆ.

ರವಿ ಬಸ್ರೂರು ಕೆಜಿಎಫ್ ನ ಮತ್ತೊಬ್ಬ ಹೀರೋ. ಅವರ ಹಿನ್ನೆಲೆ ಸಂಗೀತ ಸಿನಿಮಾದಿಂದ ಒಂದು ಮಿಲಿಮೀಟರ್ ಕೂಡ ಆಚೆ ಹೋಗಿ ನಿಲ್ಲುವುದಿಲ್ಲ. ಪ್ರತಿ ದೃಶ್ಯಗಳ ಜತೆ ಬ್ಲೆಂಡ್ ಆಗಿ ವಿಶೇಷ ಅನುಭೂತಿ ಉಕ್ಕಿಸುತ್ತದೆ. ಹಾಡುಗಳಿಗೂ ಇದೇ ಮಾತು ಹೇಳಬೇಕು.

ಶಿವು ಕುಮಾರ್ ಎಂಬ ಆರ್ಟ್ ಡೈರೆಕ್ಟರ್ ಬಗ್ಗೆ ಏನು ಹೇಳಿದರೂ ಕಡಿಮೆಯೇ. ಸೆಕೆಂಡ್ ಹಾಫ್ ನಲ್ಲಿ ಅವರು ಹಾಕಿರುವ ಸೆಟ್ ಗಳನ್ನು ನೋಡಿ ಬೇರೆ ಸಿನಿಮಾ ನಿರ್ಮಾಪಕದ ಎದೆ ನಡುಗಿ ಹೋಗಿರಬಹುದು. ಮಾರಿ ಪೂಜೆಯ ಸೆಟ್ ಅಂತೂ ಅಸಾಧಾರಣ. ಒಮ್ಮೆ ಎದ್ದು ನಿಂತು ಕ್ಲಾಪ್ ಮಾಡಬೇಕೆನಿಸುತ್ತದೆ‌. ಶಿವು ಮತ್ತು ಅವರ ಹುಡುಗರ ತಂಡ ಕೆಜಿಎಫ್ ಕನಸಿನ ಬಹುಮಖ್ಯ ಪಾತ್ರಧಾರಿಗಳು.

ಯಶ್ ಹೊರತಾಗಿ ಈ ಸಿನಿಮಾದಲ್ಲಿ ಸಾಕಷ್ಟು ಪಾತ್ರಗಳು ತೆರೆಯ ಮೇಲೆ ಅಪ್ಪಳಿಸುತ್ತವೆ. ಅವುಗಳಲ್ಲಿ‌ ಕೆಲವು ಮುಂದಿನ ಚಾಪ್ಟರ್ ಗೆಂದೇ ಮೀಸಲಾಗಿಟ್ಟ ಟ್ರೇಲರ್ ಗಳು! ಎಲ್ಲರೂ ನಿರ್ದೇಶಕರ ನಟರುಗಳೇ! ನಿಮ್ಮ ಕಣ್ಣುಗಳಿಂದಲೇ ಹೆಚ್ಚು ಮಾತಾಡಿ‌ ಎಂದು ಪ್ರಶಾಂತ್ ನೀಲ್ ಈ ಪಾತ್ರಗಳಿಗೆ ಹೇಳಿದಂತಿದೆ. ಆ ಪಾತ್ರಗಳು ಚಾಚೂ ತಪ್ಪದೆ ಹಾಗೇ ಮಾಡಿವೆ. ಹಿರಿಯ ನಟ ಅನಂತ್ ನಾಗ್ ಸಿನಿಮಾದ ಘನತೆಯನ್ನು ಹೆಚ್ಚಿಸಿದ್ದಾರೆ. ಪ್ರಶಾಂತ್ ಹೆಚ್ಚುಗಾರಿಕೆ ಏನೆಂದರೆ ಸಾವಿರಾರು ಜೂನಿಯರ್ ಆಕ್ಟರ್ ಗಳಿಂದಲೂ ಅವರು ಆಕ್ಟಿಂಗ್ ಮಾಡಿಸಿದ್ದಾರೆ. ಜೂನಿಯರ್ ಗಳೂ ಪಳಗಿದ ನಟರಂತೆಯೇ ನಟಿಸಿದ್ದಾರೆ.

ಅತ್ಯುತ್ತಮ ಸಿನಿಮಾ, ನಿರ್ದೇಶನ, ಹೀರೋ, ಸಂಗೀತ, ಕಲಾ ನಿರ್ದೇಶನ, ಸಂಕಲನ ಹೀಗೆ ಕನಿಷ್ಠ 6 ವಿಭಾಗಗಳಲ್ಲಾದರೂ ಕೆಜಿಎಫ್ ಗೆ ಆಸ್ಕರ್ ಪ್ರಶಸ್ತಿ ಬರಲೇಬೇಕು. ಯಾಕೆಂದರೆ ಈ‌ ಸಿನಿಮಾ ಸ್ಪರ್ಧೆ ನೀಡುತ್ತಿರುವುದು ಭಾರತೀಯ ಸಿನಿಮಾಗಳ ಜತೆಯಲ್ಲ, ಹಾಲಿವುಡ್ ಸಿನಿಮಾಗಳ ಜತೆ. ಸಿನಿಮಾದ ಕ್ರಾಫ್ಟ್ ಹಾಗಿದೆ. ಇದು ಬಾಹುಬಲಿಯನ್ನು ಮೀರಿಸುವ ಸಿನಿಮಾವೇ ಎಂದು ಯಾರಾದರೂ ಕೇಳಿದರೆ ನನ್ನ ಉತ್ತರ ಹೌದು ಎಂಬುದೇ ಆಗಿರುತ್ತದೆ.

ಕೆಜಿಎಫ್ ಗಿಂತ ಅದ್ಭುತವಾದ ಕನ್ನಡ ಅಥವಾ ಭಾರತೀಯ ಸಿನಿಮಾ ಬಂದಿಲ್ಲವೆಂದಲ್ಲ, ಬಂದಿವೆ. ಆದರೆ ಕೆಜಿಎಫ್ ಸಿನಿಮಾದ ಕ್ರಾಫ್ಟ್ ಹಿಂದೆಂದೂ ಬಂದಿರಲು ಸಾಧ್ಯವಿಲ್ಲ. ಇಷ್ಟೊಂದು ಪರಿಶ್ರಮ ಮತ್ತು ಕನಸುಗಳನ್ನು ತೊಡಗಿಸಿ ಮಾಡಿದ ಸಿನಿಮಾ ಇನ್ನೊಂದಿರಲು ಸಾಧ್ಯವಿಲ್ಲ. ಇಡೀ ತಂಡ ಸಿನಿಮಾವನ್ನು ಜೀವಿಸಿಬಿಟ್ಟಿದೆ ಎಂದರೆ ಅದು ಅತಿಶಯೋಕ್ತಿ ಅಲ್ಲ. ಕನ್ನಡ ಚಿತ್ರರಂಗವನ್ನು ಹೊಸ ದಾರಿಗೆ ಎಳೆದೊಯ್ದಿದ್ದಾರೆ ಪ್ರಶಾಂತ್ ಮತ್ತು ಯಶ್ ಜೋಡಿ. ಅವರೇ ಹೇಳಿದಂತೆ ಇದು ಅವರ ಕನಸು ಮಾತ್ರವಲ್ಲ, ನಮ್ಮೆಲ್ಲರ ಕನಸು. ನಮ್ಮ ಕನಸನ್ನು ಅವರು ನಿಜವಾಗಿಸಿದ್ದಾರೆ.

ಚಿತ್ರ‌ನಿರ್ಮಾಪಕ ವಿಜಯ್ ಕಿರಗಂದೂರು ಎಂಬ ಮಹಾಸಾಹಸಿಗೆ ಕೋಟಿಗಳಂತೂ ಹರಿದುಬರಲಿವೆ. ಆದರೆ ನಮ್ಮ ಕೋಟಿ ಕೋಟಿ ಚಪ್ಪಾಳೆಗಳು ಸಲ್ಲಲೇಬೇಕು.

ಸಿನಿಮಾ ಕಥೆ, ಸಂಭಾಷಣೆ, ಹೂರಣದ ಬಗ್ಗೆ ಏನನ್ನೂ ಹೇಳಿಲ್ಲ. ಹೇಳಬಾರದು ಕೂಡ. ಯಾಕೆಂದರೆ ಇಂಥ ಸಿನಿಮಾಗಳನ್ನು ಯಾವ ರಿವ್ಯೂ ಕೂಡ ಕೇಳದೇ ಹೋಗಿನೋಡಬೇಕು.

ದಿನೇಶ್ ಕುಮಾರ್ ಎಸ್.ಸಿ. (ದಿನೂ)

ದಿನದ ಸುದ್ದಿ

ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ

Published

on

ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.

ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ

Published

on

ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ

Published

on

ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.

ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.

ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್‌ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ...

ದಿನದ ಸುದ್ದಿ5 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ6 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ21 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ21 hours ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ21 hours ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

ದಿನದ ಸುದ್ದಿ1 day ago

ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20...

Trending