Connect with us

ಸಿನಿ ಸುದ್ದಿ

ಕೆಜಿಎಫ್ ಒಂದು ಅನನ್ಯ ಅನುಭವ..!

Published

on

ಕೆಜಿಎಫ್ ಬರಿಗಣ್ಣಿಗೆ ಮಾತ್ರ ಕಾಣುವ, ಕಿವಿಗಳಿಗೆ ಮಾತ್ರ ಕೇಳಿಸುವ ಸಿನಿಮಾ ಅಲ್ಲ. ಕೆಜಿಎಫ್ ಒಂದು ಅನನ್ಯ ಅನುಭವ. ಅದು ಬೇರೆ ಬೇರೆ ರೂಪಗಳಲ್ಲಿ‌ ನಿಮ್ಮನ್ನು ಮುಟ್ಟುತ್ತಿರುತ್ತದೆ, ಒಳಗೊಳಗೆ ಪ್ರವಹಿಸುತ್ತಿರುತ್ತದೆ. ನಿಸ್ಸಂಶಯವಾಗಿ ಕೆಜಿಎಫ್ ಒಂದು ಮಹಾಕಾವ್ಯ. ಪ್ರಶಾಂತ್ ನೀಲ್ ಹೊಸದೇನನ್ನೋ ಮಾಡಿದ್ದಾರೆ, ಅದನ್ನು‌‌ ನೀವು ನಿಮಗೆ ಸಮಾಧಾನವಾಗುವಂತೆ ವಿವರಿಸಲಾರಿರಿ. ಮೊದಲೇ ಹೇಳಿದಂತೆ ಇದೊಂದು ಅನುಭವ, ಅನುಭವಿಸಿಯೇ ತೀರಬೇಕು.

ಯಶ್ ಈ ಇಡಿ ಸಿನಿಮಾವನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿದ್ದಾರೆ. ಅವರು ಪ್ರತಿಫ್ರೇಮ್ ನಲ್ಲೂ ಕಣ್ಣಿಗೆ ಹಬ್ಬ. ಆಗಾಗ ನಿಮ್ಮ ಕೈಗಳ ಮೇಲಿನ ರೋಮಗಳು ಎದ್ದುನಿಂತರೆ ಅದಕ್ಕೆ ಯಶ್ ಕಾರಣ. ಈ ಸಿನಿಮಾದಲ್ಲಿ ಯಶ್ ಹೊರತಾಗಿ ಇನ್ನೊಬ್ಬರನ್ನು ಆ ಪಾತ್ರದಲ್ಲಿ ಕಲ್ಪಿಸಿಕೊಳ್ಳಲಾಗದು. ಯಶ್ ಈ ಸಿನಿಮಾಗಾಗಿಯೇ ಕಡೆದಿಟ್ಟ ವಿಗ್ರಹ. ಅವರು ಇಲ್ಲಿ ಬರಿಯ ಹೀರೋ ಮಾತ್ರವಲ್ಲ ಸೂಪರ್ ಹೀರೋ, ಥೇಟ್ ನಮ್ಮ ಸ್ಪೈಡರ್ ಮ್ಯಾನ್, ಸೂಪರ್ ಮ್ಯಾನ್ ಗಳ ಹಾಗೆ. ಸೂಪರ್ ಹೀರೋಗಳಿಗಾದರೂ ನಾಲ್ಕು ಏಟು ಬೀಳಬಹುದು, ಕೆಳಗೆ ಬೀಳಬಹುದು. ರಾಕಿ ಭಾಯ್ ನಮ್ಮ ಫ್ಯಾಂಟಸಿ ಜಗತ್ತಿನ ದೊರೆ, ಅವನಿಂದ ಅಸಾಧ್ಯವಾದದ್ದು ಏನೂ ಇಲ್ಲ, ಅವನನ್ನು ಯಾರಿಂದಲೂ ಮಣಿಸಲಾಗದು.

ಪ್ರಶಾಂತ್ ನೀಲ್ ಗೆ ಆಕ್ಷನ್ ಇಷ್ಟವಿರಬಹುದು. ಆದರೆ ತೆಲುಗು‌ ಸಿನಿಮಾಗಳ ಹಾಗೆ ಭೀಬತ್ಸ ದೃಶ್ಯಗಳು ಇಲ್ಲಿಲ್ಲ. ಕ್ರೌರ್ಯ ಕಣ್ಣಿಗೆ ರಾಚಿಸಿದರೂ ಅದು ನಮ್ಮ ಎದೆಗೆ ಇಳಿಯುವುದನ್ನು ತಡೆದುಬಿಡುತ್ತಾರೆ‌ ಪ್ರಶಾಂತ್. ಒಬ್ಬ ಸಣ್ಣ ಹುಡುಗನ ದಾರುಣ ಕೊಲೆಯೊಂದನ್ನು ಯಶ್ ಅವರ ಅದ್ಭುತ ರಿಯಾಕ್ಷನ್ ಮತ್ತು ಒಂದಿಡೀ ಸಮೂಹದ ದೊಡ್ಡ ನಿಟ್ಟುಸಿರಿನೊಂದಿಗೆಯೇ ತೋರಿಸಿಬಿಡುತ್ತಾರೆ ಅವರು. ನೋಡಿ ನಿಟ್ಟುಸಿರಾಗೋ ಸರದಿ ನಮ್ಮದಷ್ಟೆ. ನಿರ್ದೇಶಕರ ತಂಡ ಅಸಾಧ್ಯ ಕೆಲಸಗಳನ್ನು ಮಾಡಿದೆ. ಕಥೆಗೆ ಸಂಬಂಧಿಸಿದ ರಿಸರ್ಚ್ ಗಳಿಂದ ಹಿಡಿದು ಒಂದೇ ಒಂದು ದೃಶ್ಯವೂ ತರ್ಕಹೀನವಾಗದಂತೆ, ಬಾಲಿಷ‌ ಎನಿಸದಂತೆ, ಕ್ಲೀಷೆಯಾಗದಂತೆ ಈ ತಂಡ ಪರಿಶ್ರಮ ವಹಿಸಿದೆ.

ಸಿನಿಮಾದ ಸ್ಕ್ರೀನ್ ಪ್ಲೇ ಈ ಹೊತ್ತಿನವರೆಗಿನ ಅದ್ಭುತ ಪ್ರಯೋಗಗಳಲ್ಲಿ ಒಂದು. ಪ್ರಶಾಂತ್ ನೀಲ್ ಕಸುಬುದಾರಿಕೆಗೆ ಜವಾಬೇ ಇಲ್ಲ. ಈ ಸ್ಕ್ರೀನ್ ಪ್ಲೇಗೆ ನಿಜವಾದ ಆತ್ಮವನ್ನು ತುಂಬಿರುವ ಸಂಕಲನಕಾರ ಶ್ರೀಕಾಂತ್ ತನ್ನ ಕತ್ತರಿಯನ್ನೂ ಒಂದು ಪಾತ್ರವಾಗಿಸಿದ್ದಾನೆ. ಎರಡನೇ ಚಾಪ್ಟರಿನ ಒಂದೆರಡು ಸೀನ್ ಗಳನ್ನು ಕ್ಲೈಮಾಕ್ಸ್ ಗೂ ಮುನ್ನ ಕಾಣಿಸುವ ಎದೆಗಾರಿಕೆ ಇಲ್ಲಿ ಪ್ರದರ್ಶನಗೊಂಡಿದೆ. ಒಂದೇ ಒಂದು ಕ್ಷಣ ನೀವು ಅತ್ತಿತ್ತ ತಿರುಗದಂತೆ ಮಾಡುವ ಕಲೆಗಾರಿಕೆ ಇಲ್ಲಿ ಸಿದ್ಧಿಸಿದೆ.‌

ಸಿನಿಮಾದ ಛಾಯಾಗ್ರಹಣ ಈ ದೇಶಕ್ಕೇ ಅಪರೂಪದ್ದು. ದೃಶ್ಯಗಳನ್ನು ನ ಭೂತೋ ಎನ್ನುವಂತೆ ಕಟ್ಟಿಕೊಡುವಲ್ಲಿ ಭುವನ್ ಗೌಡ ಅವರಿಗಿರುವ ರಾಕ್ಷಸ ಹಸಿವು ಎದ್ದುಕಾಣುತ್ತದೆ. ಪ್ರತಿಯೊಂದು ಫ್ರೇಮನ್ನೂ ಅವರು ತಾವೇ ಬರೆದ ಚಿತ್ರದಂತೆ ಸೆರೆಹಿಡಿದಿದ್ದಾರೆ. ಸೆಕೆಂಡ್ ಹಾಫ್ ನ ಪ್ರತಿಯೊಂದು ದೃಶ್ಯವೂ ದೃಶ್ಯಕಾವ್ಯಗಳೇ. ಪ್ರತಿ ಫ್ರೇಮ್ ನಿಮ್ಮ ಜತೆ ಮಾತಿಗೆ ಇಳಿಯುತ್ತದೆ.

ರವಿ ಬಸ್ರೂರು ಕೆಜಿಎಫ್ ನ ಮತ್ತೊಬ್ಬ ಹೀರೋ. ಅವರ ಹಿನ್ನೆಲೆ ಸಂಗೀತ ಸಿನಿಮಾದಿಂದ ಒಂದು ಮಿಲಿಮೀಟರ್ ಕೂಡ ಆಚೆ ಹೋಗಿ ನಿಲ್ಲುವುದಿಲ್ಲ. ಪ್ರತಿ ದೃಶ್ಯಗಳ ಜತೆ ಬ್ಲೆಂಡ್ ಆಗಿ ವಿಶೇಷ ಅನುಭೂತಿ ಉಕ್ಕಿಸುತ್ತದೆ. ಹಾಡುಗಳಿಗೂ ಇದೇ ಮಾತು ಹೇಳಬೇಕು.

ಶಿವು ಕುಮಾರ್ ಎಂಬ ಆರ್ಟ್ ಡೈರೆಕ್ಟರ್ ಬಗ್ಗೆ ಏನು ಹೇಳಿದರೂ ಕಡಿಮೆಯೇ. ಸೆಕೆಂಡ್ ಹಾಫ್ ನಲ್ಲಿ ಅವರು ಹಾಕಿರುವ ಸೆಟ್ ಗಳನ್ನು ನೋಡಿ ಬೇರೆ ಸಿನಿಮಾ ನಿರ್ಮಾಪಕದ ಎದೆ ನಡುಗಿ ಹೋಗಿರಬಹುದು. ಮಾರಿ ಪೂಜೆಯ ಸೆಟ್ ಅಂತೂ ಅಸಾಧಾರಣ. ಒಮ್ಮೆ ಎದ್ದು ನಿಂತು ಕ್ಲಾಪ್ ಮಾಡಬೇಕೆನಿಸುತ್ತದೆ‌. ಶಿವು ಮತ್ತು ಅವರ ಹುಡುಗರ ತಂಡ ಕೆಜಿಎಫ್ ಕನಸಿನ ಬಹುಮಖ್ಯ ಪಾತ್ರಧಾರಿಗಳು.

ಯಶ್ ಹೊರತಾಗಿ ಈ ಸಿನಿಮಾದಲ್ಲಿ ಸಾಕಷ್ಟು ಪಾತ್ರಗಳು ತೆರೆಯ ಮೇಲೆ ಅಪ್ಪಳಿಸುತ್ತವೆ. ಅವುಗಳಲ್ಲಿ‌ ಕೆಲವು ಮುಂದಿನ ಚಾಪ್ಟರ್ ಗೆಂದೇ ಮೀಸಲಾಗಿಟ್ಟ ಟ್ರೇಲರ್ ಗಳು! ಎಲ್ಲರೂ ನಿರ್ದೇಶಕರ ನಟರುಗಳೇ! ನಿಮ್ಮ ಕಣ್ಣುಗಳಿಂದಲೇ ಹೆಚ್ಚು ಮಾತಾಡಿ‌ ಎಂದು ಪ್ರಶಾಂತ್ ನೀಲ್ ಈ ಪಾತ್ರಗಳಿಗೆ ಹೇಳಿದಂತಿದೆ. ಆ ಪಾತ್ರಗಳು ಚಾಚೂ ತಪ್ಪದೆ ಹಾಗೇ ಮಾಡಿವೆ. ಹಿರಿಯ ನಟ ಅನಂತ್ ನಾಗ್ ಸಿನಿಮಾದ ಘನತೆಯನ್ನು ಹೆಚ್ಚಿಸಿದ್ದಾರೆ. ಪ್ರಶಾಂತ್ ಹೆಚ್ಚುಗಾರಿಕೆ ಏನೆಂದರೆ ಸಾವಿರಾರು ಜೂನಿಯರ್ ಆಕ್ಟರ್ ಗಳಿಂದಲೂ ಅವರು ಆಕ್ಟಿಂಗ್ ಮಾಡಿಸಿದ್ದಾರೆ. ಜೂನಿಯರ್ ಗಳೂ ಪಳಗಿದ ನಟರಂತೆಯೇ ನಟಿಸಿದ್ದಾರೆ.

ಅತ್ಯುತ್ತಮ ಸಿನಿಮಾ, ನಿರ್ದೇಶನ, ಹೀರೋ, ಸಂಗೀತ, ಕಲಾ ನಿರ್ದೇಶನ, ಸಂಕಲನ ಹೀಗೆ ಕನಿಷ್ಠ 6 ವಿಭಾಗಗಳಲ್ಲಾದರೂ ಕೆಜಿಎಫ್ ಗೆ ಆಸ್ಕರ್ ಪ್ರಶಸ್ತಿ ಬರಲೇಬೇಕು. ಯಾಕೆಂದರೆ ಈ‌ ಸಿನಿಮಾ ಸ್ಪರ್ಧೆ ನೀಡುತ್ತಿರುವುದು ಭಾರತೀಯ ಸಿನಿಮಾಗಳ ಜತೆಯಲ್ಲ, ಹಾಲಿವುಡ್ ಸಿನಿಮಾಗಳ ಜತೆ. ಸಿನಿಮಾದ ಕ್ರಾಫ್ಟ್ ಹಾಗಿದೆ. ಇದು ಬಾಹುಬಲಿಯನ್ನು ಮೀರಿಸುವ ಸಿನಿಮಾವೇ ಎಂದು ಯಾರಾದರೂ ಕೇಳಿದರೆ ನನ್ನ ಉತ್ತರ ಹೌದು ಎಂಬುದೇ ಆಗಿರುತ್ತದೆ.

ಕೆಜಿಎಫ್ ಗಿಂತ ಅದ್ಭುತವಾದ ಕನ್ನಡ ಅಥವಾ ಭಾರತೀಯ ಸಿನಿಮಾ ಬಂದಿಲ್ಲವೆಂದಲ್ಲ, ಬಂದಿವೆ. ಆದರೆ ಕೆಜಿಎಫ್ ಸಿನಿಮಾದ ಕ್ರಾಫ್ಟ್ ಹಿಂದೆಂದೂ ಬಂದಿರಲು ಸಾಧ್ಯವಿಲ್ಲ. ಇಷ್ಟೊಂದು ಪರಿಶ್ರಮ ಮತ್ತು ಕನಸುಗಳನ್ನು ತೊಡಗಿಸಿ ಮಾಡಿದ ಸಿನಿಮಾ ಇನ್ನೊಂದಿರಲು ಸಾಧ್ಯವಿಲ್ಲ. ಇಡೀ ತಂಡ ಸಿನಿಮಾವನ್ನು ಜೀವಿಸಿಬಿಟ್ಟಿದೆ ಎಂದರೆ ಅದು ಅತಿಶಯೋಕ್ತಿ ಅಲ್ಲ. ಕನ್ನಡ ಚಿತ್ರರಂಗವನ್ನು ಹೊಸ ದಾರಿಗೆ ಎಳೆದೊಯ್ದಿದ್ದಾರೆ ಪ್ರಶಾಂತ್ ಮತ್ತು ಯಶ್ ಜೋಡಿ. ಅವರೇ ಹೇಳಿದಂತೆ ಇದು ಅವರ ಕನಸು ಮಾತ್ರವಲ್ಲ, ನಮ್ಮೆಲ್ಲರ ಕನಸು. ನಮ್ಮ ಕನಸನ್ನು ಅವರು ನಿಜವಾಗಿಸಿದ್ದಾರೆ.

ಚಿತ್ರ‌ನಿರ್ಮಾಪಕ ವಿಜಯ್ ಕಿರಗಂದೂರು ಎಂಬ ಮಹಾಸಾಹಸಿಗೆ ಕೋಟಿಗಳಂತೂ ಹರಿದುಬರಲಿವೆ. ಆದರೆ ನಮ್ಮ ಕೋಟಿ ಕೋಟಿ ಚಪ್ಪಾಳೆಗಳು ಸಲ್ಲಲೇಬೇಕು.

ಸಿನಿಮಾ ಕಥೆ, ಸಂಭಾಷಣೆ, ಹೂರಣದ ಬಗ್ಗೆ ಏನನ್ನೂ ಹೇಳಿಲ್ಲ. ಹೇಳಬಾರದು ಕೂಡ. ಯಾಕೆಂದರೆ ಇಂಥ ಸಿನಿಮಾಗಳನ್ನು ಯಾವ ರಿವ್ಯೂ ಕೂಡ ಕೇಳದೇ ಹೋಗಿನೋಡಬೇಕು.

ದಿನೇಶ್ ಕುಮಾರ್ ಎಸ್.ಸಿ. (ದಿನೂ)

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 days ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

ದಿನದ ಸುದ್ದಿ3 days ago

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ...

ದಿನದ ಸುದ್ದಿ4 days ago

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್...

ದಿನದ ಸುದ್ದಿ7 days ago

ಪ್ರೊ.ಪೂರ್ಣಾನಂದ, ಎ.ನಾರಾಯಣ, ಸತೀಶ್ ಆಚಾರ್ಯ ಸೇರಿದಂತೆ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸುದ್ದಿದಿನಡೆಸ್ಕ್:ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ, ಬರಹಗಾರ ಎ ನಾರಾಯಣ್...

ದಿನದ ಸುದ್ದಿ7 days ago

ಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಮೊದಲ ಪದವಿ ಬ್ಯಾಚ್‌ನ ಯಶಸ್ವಿ ಶೈಕ್ಷಣಿಕ ಪಯಣವನ್ನು ಸಂಭ್ರಮದಿಂದ...

ದಿನದ ಸುದ್ದಿ7 days ago

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ...

ದಿನದ ಸುದ್ದಿ1 week ago

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು...

ದಿನದ ಸುದ್ದಿ1 week ago

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು...

ಅಂತರಂಗ1 week ago

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ...

Trending